Holi 2023 : ಹೋಳಿ ಹಬ್ಬದ ಸಂಭ್ರಮಕ್ಕೆ ನೀವು ಕೇಳಲೇಬೇಕಾದ ಸಾಂಗ್ ಲಿಸ್ಟ್ ಇಲ್ಲಿದೆ… Vistara News

ಬಾಲಿವುಡ್

Holi 2023 : ಹೋಳಿ ಹಬ್ಬದ ಸಂಭ್ರಮಕ್ಕೆ ನೀವು ಕೇಳಲೇಬೇಕಾದ ಸಾಂಗ್ ಲಿಸ್ಟ್ ಇಲ್ಲಿದೆ…

ಹೋಳಿ ಹಬ್ಬದ (Holi 2023) ಸಂಭ್ರಮ ಎಲ್ಲೆಡೆ ಶುರುವಾಗಿದೆ. ಈ ಸಂಭ್ರಮವನ್ನು ಹೆಚ್ಚಿಸಲು ಸಂಗೀತವಿರಬೇಕು. ಈ ಸಂಭ್ರಮಕ್ಕೆ ಸರಿಹೊಂದುವಂತಹ ಬಾಲಿವುಡ್‌ ಪ್ಲೇ ಲಿಸ್ಟ್‌ ಅನ್ನು ನಾವಿಲ್ಲಿ ಸಿದ್ಧ ಮಾಡಿದ್ದೇವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವರ್ಷದ ಹೋಳಿ ಹಬ್ಬ (Holi 2023) ಬಂದೇ ಬಿಟ್ಟಿತು. ಬಣ್ಣಗಳನ್ನು ಎರಚಿಕೊಂಡು ಮೈ ಮರೆತು ಕುಣಿದು, ರುಚಿ ರುಚಿಯಾದ ತಿಂಡಿ ತಿನಿಸು ತಿನ್ನುವ ಈ ಹಬ್ಬದ ಸಂಭ್ರಮಕ್ಕೆ ಸಂಗೀತವೂ ಸೇರಿಬಿಟ್ಟರೆ ಅದರ ಮಜವೇ ಬೇರೆ. ಅದರಲ್ಲೂ ನಮ್ಮ ಬಾಲಿವುಡ್‌ನಲ್ಲಂತೂ ಈ ಹೋಳಿಗೆಂದೇ ಹಲವಾರು ವಿಶೇಷವಾದ ಹಾಡುಗಳಿವೆ. ಈ ಹೋಳಿಗೆಂದೇ ವಿಶೇಷ ಪ್ಲೇ ಲಿಸ್ಟ್‌ ಅನ್ನು ನಾವಿಲ್ಲಿ ರೆಡಿ ಮಾಡಿಕೊಟ್ಟಿದ್ದೇವೆ ನೋಡಿ.

ಇದನ್ನೂ ಓದಿ: ಹೋಳಿ ಹಬ್ಬದ ಹಿನ್ನೆಲೆ, ಮುನ್ನಾದಿನವೇ ಅಲಿಗಢ್​​ನ​ ಅಬ್ದುಲ್ ಕರೀಂ ಮಸೀದಿಗೆ ಟಾರ್ಪಾಲಿನ್ ಹೊದೆಸಿಟ್ಟ ಮುಸ್ಲಿಂ ಮುಖಂಡರು

ಹೋಲಿ ಕೇ ದಿನ್‌ (ಶೋಲೆ)

ಶೋಲೆ ಸಿನಿಮಾದ ಈ ಹೋಲಿ ಹಾಡಲ್ಲಿ ಹೇಮಾ ಮಾಲಿನಿ ಅವರ ನೃತ್ಯ ನೋಡುವುದೇ ಚಂದ. ಈ ಎವರ್‌ಗ್ರೀನ್‌ ಹಾಡು ನಿಮ್ಮ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸುವಲ್ಲಿ ಅನುಮಾನವಿಲ್ಲ.


ರಂಗ್‌ ಬರ್ಸೆ(ಸಿಲ್ಸಿಲಾ)

ಈ ಹಾಡು ಒಂದು ರೀತಿಯಲ್ಲಿ ಹೋಲಿ ಆಂಥೆಮ್‌ ಎಂದೇ ಹೇಳಬಹುದು. ಅಮಿತಾಭ್‌ ಅವರ ಅದ್ಭುತವಾದ ಈ ಹಾಡಿಗೆ ಕುಣಿದು ಕುಪ್ಪಳಿಸದವರಿಲ್ಲ.


ಜೋಗಿ ಜೀ ಧೀರೇ ಧೀರೇ(ನದಿಯಾ ಕೆ ಪಾರ್)

ನದಿಯಾ ಕೆ ಪಾರ್‌ ಸಿನಿಮಾದ ಈ ಹಾಡನ್ನು ಜಸ್ಪಾಲ್‌ ಸಿಂಗ್‌, ಹೇಮಲತಾ, ಚಂದ್ರಾಣಿ ಮುಖರ್ಜಿ ಮತ್ತು ಸುಶೀಲ್‌ ಕುಮಾರ್‌ ಅವರು ಹಾಡಿದ್ದಾರೆ. ಸಚಿನ್‌ ಪಿಲ್ಗಾಂವ್ಕರ್‌ ಮತ್ತು ಸಾಧನಾ ಸಿಂಗ್‌ ನಟಿಸಿದ್ದಾರೆ.


ಹೋಲಿ ಖೇಲೆ ರಘುವೀರ್‌ (ಭಾಘ್‌ಬನ್)

ಅಮಿತಾಭ್‌ ಬಚ್ಚನ್‌ ಮತ್ತು ಹೇಮಾ ಮಾಲಿನಿ ಅವರ ಈ ಹಾಡಿನಲ್ಲಿ ಜೋಡಿಯ ನೃತ್ಯ ಸುಂದರವಾಗಿ ಮೂಡಿ ಬಂದಿದೆ. ಈ ಹಾಡು ನಿಮ್ಮ ಹೃದಯ ಗೆಲ್ಲುವಂತಹ ಹಾಡುಗಳಲ್ಲಿ ಒಂದು.


ಬಲಮ್‌ ಪಿಚ್ಕಾರಿ (ಯೇ ಜವಾನಿ ಹೆ ದಿವಾನಿ)

ಈಗಿನ ಜನರೇಷನ್‌ ಅವರಿಗೆ ಇದು ಹೋಳಿ ಆಂಥೆಮ್‌ ಎಂದರೆ ತಪ್ಪಾಗದು. ರಣಬೀರ್‌ ಕಪೂರ್‌ ಜತೆ ದೀಪಿಕಾ ಪಡುಕೋಣೆ ನಟನೆಯ ಈ ಹಾಡಿನ ನೃತ್ಯವೂ ಅಷ್ಟೇ ಅದ್ಭುತ.


ಬದ್ರಿ ಕಿ ದುಲ್ಹನಿಯಾ (ಬದ್ರಿನಾಥ್‌ ಕಿ ದುಲ್ಹನಿಯ)

ವರುಣ್‌ ಧವನ್‌ ಮತ್ತು ಅಲಿಯಾ ಭಟ್‌ ನಟನೆಯ ಈ ಹಾಡಿನಲ್ಲಿ ಅದ್ಭುತವಾದ ನೃತ್ಯ ಸಂಯೋಜನೆಯನ್ನು ಕಾಣಬಹುದು. ಹೋಲಿ ಸಂಭ್ರಮದ ಮೆರುಗು ಹೆಚ್ಚಿಸುವಂತಹ ಹಾಡಿದು.


ಜೈ ಜೈ ಶಿವಶಂಕರ್‌ (ವಾರ್‌)

ವಾರ್‌ ಸಿನಿಮಾದಲ್ಲಿ ಹೃತಿಕ್‌ ರೋಷನ್‌ ಮತ್ತು ಟೈಗರ್‌ ಶಾರ್ಫ್‌ ಜತೆಯಾಗಿ ಹೆಜ್ಜೆ ಹಾಕುವ ಹಾಡಿದು. ಬಾಲಿವುಡ್‌ನ ಸಕತ್‌ ಎನರ್ಜಿಟಿಕ್‌ ಹಾಡುಗಳಲ್ಲಿ ಇದೂ ಒಂದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

Junior Mehmood: ಚಲನಚಿತ್ರಗಳ ಹೊರತಾಗಿ, ಅವರು ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಸ್ಟೇಜ್ ಶೋಗಳ ಭಾಗವಾಗಿದ್ದರು. ನಟ ಐದು ದಶಕಗಳ ಕಾಲ ತನ್ನ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

VISTARANEWS.COM


on

Junior Mehmood
Koo

ಬೆಂಗಳೂರು; ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದ, ಜೂನಿಯರ್ ಮೆಹಮೂದ್ (Junior Mehmood) ಎಂದೇ ಜನಪ್ರಿಯರಾಗಿದ್ದ ಹಿರಿಯ ನಟ ಮತ್ತು ಚಲನಚಿತ್ರ ನಿರ್ದೇಶಕ ನಯೀಮ್ ಸಯ್ಯದ್ ನಿನ್ನೆ (ಡಿ.7) ರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ನಟ ಐದು ದಶಕಗಳ ಕಾಲ ತನ್ನ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಎರಡು ವಾರಗಳ ಹಿಂದೆ, 4ನೇ ಹಂತದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಯಾಗಿದೆ.

ಬ್ರಹ್ಮಚಾರಿ (1968), ಮೇರಾ ನಾಮ್ ಜೋಕರ್, ಪರ್ವಾರೀಶ್ ಮತ್ತು ದೋ ಔರ್ ದೋ ಪಾಂಚ್ ಸೇರಿದಂತೆ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದರು. ಸಂಜೀವ್ ಕುಮಾರ್, ಹಿರಿಯ ನಟ ಬಾಲರಾಜ್ ಸಾಹ್ನಿ ಮತ್ತು ಇಂದ್ರಾಣಿ ಮುಖರ್ಜಿ ನಟಿಸಿದ ‘ನೌನಿಹಾಲ್’ ಚಿತ್ರದ ಮೂಲಕ ಅವರು ಬಾಲ ನಟರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1967ರಲ್ಲಿ ಬಿಡುಗಡೆಯಾದ ‘ನೌನಿಹಾಲ್’ನಿಂದ ಇಲ್ಲಿಯವರೆಗೆ, ನಟ ಜೂನಿಯರ್ ಮೆಹಮೂದ್ ಎಂದೇ ಚಿರಪರಿಚಿತರು.

250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುವುದರ ಜತೆಗೆ, ನಟ ಹಲವಾರು ಮರಾಠಿ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಗುರುತು ಹಿಡಿಯದ ಸ್ಥಿತಿಯಲ್ಲಿರುವ ಜೂನಿಯರ್ ಮೆಹಮೂದ್ ಅವರನ್ನು ಹಾಸ್ಯನಟ ಜಾನಿ ಲಿವರ್ ಭೇಟಿ ಮಾಡಿದ್ದರು.

ಇದನ್ನೂ ಓದಿ: Death News: ರಾಮದುರ್ಗ ಗಂಗಮ್ಮ ನಿಧನ

ಹಿರಿಯ ನಟ ಜೀತೇಂದ್ರ ಮತ್ತು ಸಚಿನ್ ಪಿಲ್ಗಾಂವ್ಕರ್ ಅವರೊಂದಿಗೆ ಹಲವಾರು ಚಲನಚಿತ್ರಗಳಲ್ಲಿ ಜೂನಿಯರ್ ಮೆಹಮೂದ್ ಕೆಲಸ ಮಾಡಿದ್ದಾರೆ. ಸಚಿನ್ ಮತ್ತು ಜೂನಿಯರ್ ಮೆಹಮೂದ್ ‘ಬಚ್ಪನ್’, ‘ಗೀತ್ ಗಾತಾ ಚಲ್’ ಮತ್ತು ‘ಬ್ರಹ್ಮಚಾರಿ’ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಚಲನಚಿತ್ರಗಳ ಹೊರತಾಗಿ, ಅವರು ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಸ್ಟೇಜ್ ಶೋಗಳ ಭಾಗವಾಗಿದ್ದರು.

Continue Reading

ಬಾಲಿವುಡ್

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

The Kapil Sharma Show ಅರ್ಚನಾ ಪುರಾನ್ ಸಿಂಗ್ ಅವರು ನೆಟ್‌ಫ್ಲಿಕ್ಸ್ ಆಯೋಜಿಸಿದ ಪಾರ್ಟಿಯ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ ಅಭಿಮಾನಿಗಳು ಇಬ್ಬರೂ ಒಟ್ಟಿಗೆ ಇರುವುದನ್ನು ಕಂಡು ಸಂತೋಷಪಟ್ಟಿದ್ದಾರೆ. “ಇದೊಂದು ಸುಂದರ ಪುನರ್ಮಿಲನʼʼಎಂದು ಫ್ಯಾನ್ಸ್‌ ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Kapil Sharma and Sunil Grover
Koo

ಬೆಂಗಳೂರು: ಹಾಸ್ಯ, ಮನರಂಜನೆಯ ರಸದೌತಣ ನೀಡುವ ದಿ ಕಪಿಲ್‌ ಶರ್ಮಾ ಶೋ (The Kapil Sharma Show) ಮೂಲಕ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ (Sunil Grover) ಮತ್ತೆ ಒಂದಾಗಿದ್ದಾರೆ. ಹೌದು, ಆರು ವರ್ಷದ ಮುನಿಸು, ವದಂತಿ, ಸ್ಪಷ್ಟನೆ ಬಳಿಕ ಇಬ್ಬರೂ ಒಂದಾಗಿದ್ದಾರೆ. ನೆಟ್‌ಫ್ಲಿಕ್ಸ್‌ ಕಾಮಿಡಿ ಶೋ (Netflix Show) ಪ್ರೋಮೊ ಬಿಡುಗಡೆ ಮಾಡಿರುವ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್‌ ಜತೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಆರು ವರ್ಷದ ಬಳಿಕ ಇಬ್ಬರು ಹಾಸ್ಯ ಕಲಾವಿದರು ಮುನಿಸು ಮರೆತು ಒಂದಾದಂತಾಗಿದೆ. ಕಪಿಲ್ ಮತ್ತು ಸುನೀಲ್ ಇತ್ತೀಚೆಗೆ ಪಾರ್ಟಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಅರ್ಚನಾ ಪುರಾನ್ ಸಿಂಗ್ ಅವರು ನೆಟ್‌ಫ್ಲಿಕ್ಸ್ ಆಯೋಜಿಸಿದ ಪಾರ್ಟಿಯ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ ಅಭಿಮಾನಿಗಳು ಇಬ್ಬರೂ ಒಟ್ಟಿಗೆ ಇರುವುದನ್ನು ಕಂಡು ಸಂತೋಷಪಟ್ಟಿದ್ದಾರೆ. “ಇದೊಂದು ಸುಂದರ ಪುನರ್ಮಿಲನʼʼಎಂದು ಫ್ಯಾನ್ಸ್‌ ಕಮೆಂಟ್‌ ಮಾಡಿದ್ದಾರೆ.

ಈ ಹಿಂದೆ ಬಿಡುಗಡೆಯಾಗಿದ್ದ ಪ್ರೋಮೊದಲ್ಲಿ ಮೊದಲು ಕಪಿಲ್‌ ಶರ್ಮಾ ಕಾಣಿಸಿಕೊಂಡಿದ್ದರು. “ಹಾಯ್‌ ಗೆಳೆಯರೆ, ನಾನು ಕಪಿಲ್‌ ಶರ್ಮಾ. ಶೀಘ್ರದಲ್ಲೇ ಹೊಸ ಶೋ ಹೊತ್ತು ನಿಮ್ಮೆದುರು ಬರುತ್ತೇನೆ” ಎಂದು ಕಪಿಲ್‌ ಶರ್ಮಾ ಹೇಳುತ್ತಾರೆ. ಆಗ ಸುನಿಲ್‌ ಗ್ರೋವರ್‌, “ನಾನು ಕೂಡ ನೆಟ್‌ಫ್ಲಿಕ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ” ಎಂದಿದ್ದರು. ಆಗ ಕಪಿಲ್‌ ಶರ್ಮಾ, “ಸರಿ ಹಾಗಾದರೆ, ಇಬ್ಬರೂ ಬರೋಣ, 190ಕ್ಕೂ ಅಧಿಕ ದೇಶಗಳಿಗೆ ಬರೋಣ” ಎಂದಿದ್ದರು. ಹಾಗೆಯೇ ಇಬ್ಬರ ನಡುವಿನ ಸಂಭಾಷಣೆ ಮುಂದುವರಿಯುತ್ತದೆ.

ಇದನ್ನೂ ಓದಿ: Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

ಇದೇ ವೇಳೆ ವಿಡಿಯೊ ಫ್ರೇಮ್‌ನಲ್ಲಿ ಹಾಸ್ಯ ಕಲಾವಿದರಾದ ರಾಜೀವ್‌, ಕಿಕು, ಕೃಷ್ಣಾ ಹಾಗೂ ನಟಿ ಅರ್ಚನಾ ಪೂರನ್‌ ಸಿಂಗ್‌ ಅವರು ಕೂಡ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ, ಕಾಮಿಡಿ ನೈಟ್ಸ್‌ ವಿತ್‌ ಕಪಿಲ್‌, ದಿ ಕಪಿಲ್‌ ಶರ್ಮಾ ಶೋ ಮೂಲಕವೇ ದೇಶದ ಮನೆಮಾತಾಗಿರುವ ಕಲಾವಿದರು ನೆಟ್‌ಫ್ಲಿಕ್ಸ್‌ ಶೋನಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ, ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರು ಒಂದಾಗಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ದಿ ಕಪಿಲ್‌ ಶರ್ಮಾ ಶೋನಲ್ಲಿ ಸುನೀಲ್‌ ಗ್ರೋವರ್‌ ಅವರು ಮಾಡುತ್ತಿದ್ದ “ಡಾ ಮಶೂರ್‌ ಗುಲಾಟಿ” ಪಾತ್ರವು ಮನೆಮಾತಾಗಿತ್ತು.

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ನಂತರ ಸುನಿಲ್‌ ಗ್ರೋವರ್‌ ಅವರು ದಿ ಕಪಿಲ್‌ ಶರ್ಮಾ ಶೋ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

Continue Reading

ಬಾಲಿವುಡ್

Triptii Dimri: ತೃಪ್ತಿ ಡಿಮ್ರಿ ಬೆತ್ತಲೆ ಸೀನ್‌; 5 ನಿಮಿಷಕ್ಕೊಮ್ಮೆ ನಟಿಯ ಬಳಿ ರಣಬೀರ್ ಕೇಳಿದ್ದೇನು?

Triptii Dimri: ಸಿನಿಮಾ ಸಕ್ಸಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

Triptii on intimate scene in animal
Koo

ಬೆಂಗಳೂರು: ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ (Triptii Dimri) ʼಅನಿಮಲ್‌ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇನ್ನೆರಡು ವಾರಗಳಲ್ಲಿ 900 ಕೋಟಿ ರೂ. ಗಳಿಸುವ ಹಂತಕ್ಕೆ ತಲುಪಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೆಚ್ಚಾಗಿ ಸಿನಿಮಾದಲ್ಲಿ ಸೌಂಡ್‌ ಮಾಡಿದ್ದು ನಟಿ ತೃಪ್ತಿ ಡಿಮ್ರಿ ಅವರ ಬೆತ್ತಲೆ ಸೀನ್‌. ಸಿನಿಮಾ ಸಕ್ಸೆಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ಜತೆ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಚಿತ್ರದಲ್ಲಿ ತೃಪ್ತಿ ಡಿಮ್ರಿ ಅವರು ʻಜೋಯಾʼ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರದ ತೃಪ್ತಿ ಡಿಮ್ರಿ ಅಭಿನಯವನ್ನು ವಿಮರ್ಶಕರು ಮತ್ತು ಪ್ರೇಕ್ಷಕರು ಶ್ಲಾಘಿಸಿದ್ದಾರೆ. ಇತ್ತೀಚಿನ ಮಾಧ್ಯಮದ ಸಂದರ್ಶನವೊಂದರಲ್ಲಿ “ಜೋಯಾʼ ತಮ್ಮ ಬೋಲ್ಡ್‌ ಸೀನ್‌ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು. ಮಾತ್ರವಲ್ಲ ಬೋಲ್ಡ್‌ ಸೀನ್‌ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ರಣಬೀರ್‌ ಕಪೂರ್‌ ಅವರು ಹೇಗೆ ತಮಗೆ ಸಪೋರ್ಟಿವ್‌ ಆಗಿದ್ದರು ಎಂಬದನ್ನು ಬಹಿರಂಗಪಡಿಸಿದರು.

ಇಂಟಿಮೇಟ್ ದೃಶ್ಯದ ಕುರಿತು ತೃಪ್ತಿ ಡಿಮ್ರಿ ಮಾತನಾಡಿ ʻʻಪ್ರಾಜೆಕ್ಟ್‌ಗೆ ಸಹಿ ಮಾಡುವಾಗ ಈ ರೀತಿ ಒಂದು ಬೋಲ್ಡ್‌ ದೃಶ್ಯವಿದೆ ಎಂದಿದ್ದರು ನಿರ್ದೇಶಕರು. ಶೂಟ್‌ ಮಾಡುವ ಮುಂಚೆ ಕೂಡ ಪಾತ್ರದ ಬಗ್ಗೆ ಅದೆಷ್ಟೋ ಬಾರಿ ನನಗೆ ನಿರ್ದೇಶಕರು ವಿವರಿಸಿದ್ದರು. ಇಂತಹ ದೃಶ್ಯಗಳನ್ನು ಶೂಟ್‌ ಮಾಡುವಾಗ ಸುತ್ತಮುತ್ತಲಿನ ಪರಿಸರವೂ ಬಹಳ ಮುಖ್ಯ. ನಿಮ್ಮ ಸುತ್ತಲಿನ ಜನರು ಮೊದಲು ನಿಮಗೆ ಕಮ್‌ಫರ್ಟ್‌ ಆಗಿರಬೇಕು. ಆಗ ಮಾತ್ರ ಇಂತಹ ದೃಶ್ಯಗಳನ್ನು ಶೂಟ್‌ ಮಾಡಲು ಸಾದ್ಯʼʼ ಎಂದರು.

ಇದನ್ನೂ ಓದಿ: Animal Cast Fees: ‘ಅನಿಮಲ್’ ಚಿತ್ರಕ್ಕೆ ರಣಬೀರ್ ಕಪೂರ್ ಪಡೆದ ಸಂಭಾವನೆ ಎಷ್ಟು?

ಇಂಟಿಮೇಟ್ ದೃಶ್ಯ ಮಾಡುವಾಗೆಲ್ಲ ರಣಬೀರ್ ಪ್ರತಿ 5 ನಿಮಿಷಗಳಿಗೊಮ್ಮೆ ಬಂದು ʻʻare you Okay” ಎಂದು ಎಷ್ಟೋ ಬಾರಿ ಬಂದು ಕೇಳಿದ್ದೂ ಇದೆ. ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕರು, ಡಿಒಪಿ (ಛಾಯಾಗ್ರಹಕರು) ಮತ್ತು ನಟರು ಸೇರಿದಂತೆ 5ಕ್ಕಿಂತ ಹೆಚ್ಚು ಜನರಿರಲಿಲ್ಲ. ಸೆಟ್‌ನಲ್ಲಿ ಬೇರೆಯವರಿಗೆ ಅವಕಾಶ ಕೂಡ ನೀಡಲಿಲ್ಲ, ಎಲ್ಲಾ ಮಾನಿಟರ್‌ಗಳನ್ನು ಮುಚ್ಚಲಾಗಿತ್ತು. ಯಾವುದೇ ಹಂತದಲ್ಲಿ ನೀವು ಅಹಿತಕರವೆಂದು ಭಾವಿಸಿದರೆ, ನಮಗೆ ತಿಳಿಸಿ ಎಂದು ನಿರ್ದೇಶಕರು ನನಗೆ ಕೇರ್‌ ಮಾಡಿ ಈ ದೃಶ್ಯವನ್ನು ತೆಗೆದರುʼʼ ಎಂದರು. ರಣಬೀರ್ ಆಗಾಗ ನನ್ನನ್ನು ವಿಚಾರಿಸುತ್ತಾ, ‘ನೀವು ಆರಾಮದಾಯಕವಾಗಿದ್ದೀರಾ?’ ಎಂದು ಕೇಳುತ್ತಿದ್ದರು, ಈ ವಿಷಯಗಳು ನಿಜವಾಗಿಯೂ ಮುಖ್ಯವೆಂದು ನಾನು ಭಾವಿಸುತ್ತೇನೆʼʼ ಎಂದರು.

ಇದನ್ನೂ ಓದಿ: Sam Bahadur Box Office: ʻಅನಿಮಲ್‌ʼ ಭರ್ಜರಿ ಓಪನಿಂಗ್‌; ವಿಕ್ಕಿ ಕೌಶಲ್ ಸಿನಿಮಾದ ವೇಗಕ್ಕೆ ಬ್ರೇಕ್‌

ʻʻಈ ರೀತಿ ಶೂಟ್‌ಗಳನ್ನು ಪ್ರೇಕ್ಷಕರು ನೋಡದ ಕಾರಣ ಹಲವು ಬಾರಿ ನನಗೆ ನೆಗೆಟಿವ್‌ ಆಗಿ ಪ್ರಶ್ನಿಸಿದ್ದಾರೆ. ಆದರೆ ಅಂತಹ ಬೋಲ್ಡ್‌ ದೃಶ್ಯಗಳನ್ನು ಮಾಡುವಾಗ ಸೆಟ್‌ಗಳಲ್ಲಿ ಅತ್ಯಂತ ಸೂಕ್ಷ್ಮವಾಗಿರುತ್ತಾರೆ. ನನಗೆ ತುಂಬಾ ಆರಾಮದಾಯಕವಾಗುವಂತೆ ಈ ಸೀನ್‌ ಮಾಡಲಾಯಿತು. ಸ್ವಲ್ಪವೂ ನನಗೆ ಸಮಸ್ಯೆಯಾಗಲಿಲ್ಲʼʼ ಎಂದಿದ್ದಾರೆ.

“ನಾನು ಸಂದೀಪ್ ಸರ್ ಅವರೊಂದಿಗೆ ಪಾತ್ರಕ್ಕಾಗಿ ಚರ್ಚೆ ನಡೆಸಿದಾಗ, ಇದು ನೆಗೆಟಿವ್‌ ಪಾತ್ರ ಎಂದು ಅವರು ಹೇಳಿದರು. ನಾನು ಸಂಪೂರ್ಣವಾಗಿ ನೆಗೆಟಿವ್‌ ಆಗಿ ತೋರಿಸುವುದಿಲ್ಲ. ಬದಲಿಗೆ, ಜನರು ಜೋಯಾ ಪಾತ್ರದ ಮುಗ್ಧತೆಯನ್ನು ನೋಡಬೇಕು ಎಂದಿದ್ದರುʼʼ ಎಂದು ಹೇಳಿದರು.

ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

Continue Reading

ದೇಶ

ಐಶ್ವರ್ಯಾ-ಅಭಿಷೇಕ್ ಡಿವೋರ್ಸ್ ವದಂತಿ; ಒಟ್ಟಾಗಿ ಕಾಣಿಸಿಕೊಂಡ ದಂಪತಿ

VISTARANEWS.COM


on

Aishwarya rai and Abhishek Bachchan getting divorce rumours circulated
Koo

ಮುಂಬೈ: ಭಾರತದ ಸುಪ್ರಸಿದ್ಧ ತಾರಾ ಜೋಡಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ (Aishwarya rai) ಮತ್ತು ಅಭಿಷೇಕ್ ಬಚ್ಚನ್ (Abhishek bachchan) ಡಿವೋರ್ಸ್ ಪಡೆದುಕೊಳ್ಳಲಿದ್ದಾರೆಂಬ ವದಂತಿ ಜೋರಾಗಿದೆ(divorce rumours). ಈ ಜೋಡಿಯು ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲ ಅವರ ಅಭಿಮಾನಿಗಳು ಅವರ ಅನ್ಯೋನ್ಯತೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಜತೆಗೆ, ಬಿಗ್ ಬಿ ಅಮಿತಾಭ್ (Amitabh Bachhan) ಅವರು ತಮ್ಮ ಸೊಸೆ ಐಶ್ವರ್ಯ ಅವರ ಇನ್‌ಸ್ಟಾ ಖಾತೆಯನ್ನು ಅನ್‌ಫಾಲೋ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಡಿವೋರ್ಸ್ ವದಂತಿ ಮತ್ತಷ್ಟು ಜೋರಾಗಿದೆ.

ಈ ಎಲ್ಲ ವದಂತಿಗಳ ಮಧ್ಯೆಯೇ ಐಶ್ವರ್ಯಾ ಮತ್ತು ಅಭಿಷೇಕ್ ಅವರು ತಮ್ಮ ಪುತ್ರಿಯೊಂದಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಡಿವೋರ್ಸ್ ವದಂತಿಗಳಿಗೆ ಫುಲ್ ಸ್ಟಾಪ್ ಇಡುವ ಪ್ರಯತ್ನ ಮಾಡಿದ್ದಾರೆ. ಹಾಗಿದ್ದೂ, ಅವರ ನಡುವೆ ಎಲ್ಲವೂ ಸರಿ ಇಲ್ಲ ಎಂಬಂತೆ ನೇಟಿಜೆನ್ಸ್ ಬಿಂಬಿಸುತ್ತಿದ್ದಾರೆ.

ಅಮಿತಾಭ್ ಬಚ್ಚನ್ ಅವರ ಪುತ್ರಿ ಶ್ವೇತಾ ನಂದಾ ಅವರ ಪುತ್ರ ಅಗಸ್ತ್ಯ ನಂದಾ ಅಭಿನಯಿಸಿರುವ ಮೊದಲ ಚಿತ್ರ ದಿ ಆರ್ಚೀಸ್ ಪ್ರೀಮಿಯರ್ ಶೋಗೆ ಇಡೀ ಬಚ್ಚನ್ ಕುಟುಂಬವು ಆಗಮಿಸಿತ್ತು. ಅಮಿತಾಭ್ ಬಚ್ಚನ್ ಕುಟುಂಬ, ನಂದಾ ಕುಟುಂಬಗಳು ಒಟ್ಟಾಗಿ ಈ ಪ್ರೀಮಿಯರ್ ಶೋ ವೀಕ್ಷಿಸಿವೆ. ಇದರಲ್ಲಿ ಅಭಿಷೇಕ್ ಮತ್ತು ಐಶ್ವರ್ಯಾ ಅವರು ತಮ್ಮ ಪುತ್ರಿಯೊಂದಿಗೆ ಮಾಧ್ಯಮಗಳಿಗೆ ಪೋಸು ನೀಡಿದ್ದು ವಿಶೇಷವಾಗಿತ್ತು.

ದಿ ಆರ್ಚೀಸ್‌ ಚಿತ್ರದಲ್ಲಿ ಶಾರುಖ್ ಖಾನ್ ಪುತ್ರಿ ಸುಹಾನಾ ಮತ್ತು ಬಚ್ಚನ್ ಅವರ ಮೊಮ್ಮಗ ಅಗಸ್ತ್ಯರಲ್ಲದೆ, ಬೋನಿ ಕಪೂರ್ ಅವರ ಕಿರಿಯ ಮಗಳು ಖುಷಿ ಕಪೂರ್, ಮಿಹಿರ್ ಅಹುಜಾ, ಡಾಟ್, ಯುವರಾಜ್ ಮೆಂಡಾ ಮತ್ತು ವೇದಂಗ್ ರೈನಾ ಕೂಡ ನಟಿಸಿದ್ದಾರೆ. ಈಗಾಗಲೇ ಟ್ರೈಲರ್‌ ನೋಡುಗರ​ ಗಮನ ಸೆಳೆದಿದೆ.

ಇವರೇ ನೋಡಿ ಅಮಿತಾಭ್ ಅವರ ಸಹೋದರ

ಅಮಿತಾಭ್ ಬಚ್ಚನ್ ಅವರ ಕಿರಿಯ ಸಹೋದರ ಅಜಿತಾಭ್‌ ಅಪರೂಪವಾಗಿ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ‘ದಿ ಆರ್ಚೀಸ್​’ (The Archies Film) ಚಿತ್ರ ಡಿಸೆಂಬರ್​ 7ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​, ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್‌ ಶೋನಲ್ಲಿ ಹಲವು ವಿಶೇಷತೆಗಳು ಕಂಡು ಬಂದವು. ಶ್ರೀದೇವಿ ಪುತ್ರಿ ಖುಷಿ ಕಪೂರ್ ಅವರು ಶ್ರೀದೇವಿಯವರ ಹಳೇಯ ಗೌನ್‌ ಧರಿಸಿ ತಾಯಿಯನ್ನು ಸ್ಮರಿಸಿಕೊಂಡಿದ್ದಾರೆ.

ಅಗಸ್ತ್ಯ ನಂದ ಅವರ ಚೊಚ್ಚಲ ಈ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಇಡೀ ಬಚ್ಚನ್ ಕುಟುಂಬವು ಹಾಜರಿತ್ತು. ಐಶ್ವರ್ಯಾ ರೈ ಬಚ್ಚನ್, ಅಭಿಷೇಕ್ ಬಚ್ಚನ್, ಮಗಳು ಆರಾಧ್ಯ, ಶ್ವೇತಾ ಬಚ್ಚನ್ ಜತೆಗೆ ಅವರ ಮಗಳು ನವ್ಯಾ, ಜಯಾ ಮತ್ತು ಅಮಿತಾಭ್‌ ಎಲ್ಲರೂ ಭಾಗಿಯಾಗಿದ್ದರು. ʻದಿ ಆರ್ಚೀಸ್​’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿಲ್ಲ. ಬದಲಿಗೆ, ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ.

ಸಿನಿಮಾದ ಪ್ರೀಮಿಯರ್​ ಶೋನಲ್ಲಿ ಬಚ್ಚನ್‌ ಅವರ ಕುಟುಂಬ ಕಪ್ಪು ಬಣ್ಣದ ಬಟ್ಟೆಯಲ್ಲಿ ಮಿಂಚಿದ್ದರು. ಇನ್ನೂ ವಿಶೇಷ ಅಂದರೆ ಅಮಿತಾಭ್ ಬಚ್ಚನ್ ಅವರ ಕಿರಿಯ ಸಹೋದರ ಅಜಿತಾಭ್‌ ಅಪರೂಪವಾಗಿ ಕ್ಯಾಮೆರಾ ಮುಂದೆ ಕಂಡರು. ಕಾಲೇಜು ಪದವಿಯ ನಂತರ, ಅಜಿತಾಭ್ ಉದ್ಯಮಿಯಾದರು. ಭಾರತದಲ್ಲಿ ಕೆಲವು ವರ್ಷಗಳ ಕಾಲ ಕೆಲಸ ಮಾಡಿದ ನಂತರ, ಅವರು ನಂತರ ಲಂಡನ್‌ಗೆ ತೆರಳಿದರು. ಅಲ್ಲೇ ಉದ್ಯಮಿಯಾಗಿ ಮುಂದುವರಿದರು. ರಾಮೋಲಾರನ್ನು ವರಸಿದ ಅಜಿತಾಭ್‌ ಅವರಿಗೆ ಮೂರು ಮಕ್ಕಳಿದ್ದಾರೆ. ಅಜಿತಾಭ್ ಮತ್ತು ಅಮಿತಾಭ್ ಅವರಿಗೆ 5 ವರ್ಷಗಳ ವಯಸ್ಸಿನ ಅಂತರವಿದೆ. ಏಕಾಏಕಿ ಅಜಿತಾಭ್ ಮತ್ತು ಅಮಿತಾಭ್ ಒಟ್ಟಿಗೆ ಕಂಡ ಫ್ಯಾನ್ಸ್‌ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Aishwarya Rai: ನಾವು ತುಂಬ ಮಿಸ್‌ ಮಾಡಿಕೊಳ್ಳುತ್ತೇವೆ ಅಪ್ಪ; ಐಶ್ವರ್ಯಾ ರೈ ಭಾವುಕ ಪೋಸ್ಟ್‌!

Continue Reading
Advertisement
plants
ಲೈಫ್‌ಸ್ಟೈಲ್7 mins ago

Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಮನೆಯೊಳಗೆ ಇಡಲೇಬಾರದು!

Junior Mehmood
ಬಾಲಿವುಡ್11 mins ago

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

cm k chandrashekar rao
ದೇಶ15 mins ago

K Chandrasekhar Rao: ರೇವಂತ್‌ ರೆಡ್ಡಿ ಸಿಎಂ ಆದ ದಿನವೇ ಜಾರಿ ಬಿದ್ದು ಸೊಂಟ ಮುರಿದುಕೊಂಡ ಕೆಸಿಆರ್‌

Jasprit bumarh
ಕ್ರಿಕೆಟ್20 mins ago

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

Karthik threw the sandal to vinay Ugly Fight
ಬಿಗ್ ಬಾಸ್36 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ1 hour ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ1 hour ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ2 hours ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ2 hours ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ15 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ16 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌