Hollywoodgate: ಅಫಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಮೇಲೆ ಬೆಳಕು ಚೆಲ್ಲುವ ʼಹಾಲಿವುಡ್‌ ಗೇಟ್‌ʼ - Vistara News

ವಿದೇಶ

Hollywoodgate: ಅಫಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಮೇಲೆ ಬೆಳಕು ಚೆಲ್ಲುವ ʼಹಾಲಿವುಡ್‌ ಗೇಟ್‌ʼ

Hollywoodgate: ಈಜಿಪ್ಟ್ ಚಲನಚಿತ್ರ ನಿರ್ದೇಶಕ ಇಬ್ರಾಹಿಂ ನಶಾತ್ ಅವರ ಹೊಸ ಸಾಕ್ಷ್ಯಚಿತ್ರ ʼಹಾಲಿವುಡ್‌ ಗೇಟ್‌ʼ ಅಮೆರಿಕನ್ ಪಡೆಗಳು ತ್ಯಜಿಸಿದ ಮಿಲಿಟರಿ ಮೂಲ ಸೌಕರ್ಯವನ್ನು ಬಳಸಿಕೊಂಡು ತಾಲಿಬಾನ್ ಹೇಗೆ ಅಫಘಾನಿಸ್ತಾನದಲ್ಲಿ ತನ್ನ ಅಧಿಕಾರದ ಮೇಲಿನ ಹಿಡಿತವನ್ನು ಬಿಗಿಗೊಳಿಸಿತು ಎನ್ನುವುದನ್ನು ವಿವರಿಸುತ್ತದೆ.

VISTARANEWS.COM


on

hollywoodgate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಬೂಲ್‌: ಈಜಿಪ್ಟ್ ಚಲನಚಿತ್ರ ನಿರ್ದೇಶಕ ಇಬ್ರಾಹಿಂ ನಶಾತ್ ಅವರ ಹೊಸ ಸಾಕ್ಷ್ಯಚಿತ್ರ ʼಹಾಲಿವುಡ್‌ ಗೇಟ್‌ʼ (Hollywoodgate) ಅಮೆರಿಕನ್ ಪಡೆಗಳು ಬಿಟ್ಟುಹೋದ ಮಿಲಿಟರಿ ಮೂಲ ಸೌಕರ್ಯವನ್ನು ಬಳಸಿಕೊಂಡು ತಾಲಿಬಾನ್ ಹೇಗೆ ಅಫಘಾನಿಸ್ತಾನದಲ್ಲಿ ತನ್ನ ಅಧಿಕಾರದ ಮೇಲಿನ ಹಿಡಿತವನ್ನು ಬಿಗಿಗೊಳಿಸಿತು ಎನ್ನುವುದನ್ನು ವಿವರಿಸುತ್ತದೆ. ʼಹಾಲಿವುಡ್‌ ಗೇಟ್‌ʼ ಸಾಕ್ಷ್ಯ ಚಿತ್ರದ ಬಗ್ಗೆ ಇಬ್ರಾಹಿಂ ನಶಾತ್ (Ibrahim Nash’a) ಕೆಲವು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ಸುದ್ದಿ ಬಂದಾಗ ಇಬ್ರಾಹಿಂ ನಶಾತ್ ಅವರು ಸಿರಿಯನ್ ಚಲನಚಿತ್ರ ನಿರ್ಮಾಪಕ ತಲಾಲ್ ಡೆರ್ಕಿ ಅವರ ಹೊಸ ಸಾಕ್ಷ್ಯಚಿತ್ರ ʼಅಂಡರ್ ದಿ ಸ್ಕೈ ಆಫ್ ಡಮಾಸ್ಕಸ್ʼ ಅನ್ನು ಪೂರ್ಣಗೊಳಿಸಲು ಎಡಿಟಿಂಗ್ ರೂಮ್‌ನಲ್ಲಿ ಕುಳಿತಿದ್ದರು. “ಈ ವಿಚಾರ ತಿಳಿದಾಗ ನಾವು ಕೆಲಸ ಮಾಡುವುದನ್ನು ನಿಲ್ಲಿಸಿ ದೂರದರ್ಶನದಲ್ಲಿ ಬರುವ ಸುದ್ದಿಗಳನ್ನು ನೋಡಲು ಪ್ರಾರಂಭಿಸಿದೆವು” ಎಂದು ಬರ್ಲಿನ್ ಮೂಲದ ಈಜಿಪ್ಟ್ ಸಾಕ್ಷ್ಯಚಿತ್ರ ನಿರ್ದೇಶಕ ನಶಾತ್ ನೆನಪಿಸಿಕೊಳ್ಳುತ್ತಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವೆನಿಸ್ ಚಲನಚಿತ್ರೋತ್ಸವದಲ್ಲಿ ʼಹಾಲಿವುಡ್‌ ಗೇಟ್‌ʼ ಪ್ರಥಮ ಪ್ರದರ್ಶನಗೊಂಡು ವ್ಯಾಪಕ ಮೆಚ್ಚುಗೆ ಗಳಿಸಿತ್ತು. ಡೆರ್ಕಿ, ಬೋರಿಸ್ ಮತ್ತು ಅಮೇರಿಕನ್ ನಟ-ನಿರ್ಮಾಪಕ ಒಡೆಸ್ಸಾ ರೇ ಈ ಡಾಕ್ಯಮೆಂಟರಿಯನ್ನು ನಿರ್ಮಿಸಿದ್ದಾರೆ. ತಾಲಿಬಾನ್ 2021ರಲ್ಲಿ ಕಾಬೂಲ್ ಅನ್ನು ವಶಪಡಿಸಿಕೊಂಡ ನಂತರದ ದಿನಗಳಲ್ಲಿ ನಶಾತ್ ಚಿತ್ರೀಕರಣ ನಡೆಸಿದ್ದರು. 91 ನಿಮಿಷಗಳ ಈ ಡಾಕ್ಯುಮೆಂಟರಿ ಇಂಗ್ಲಿಷ್‌, ಫಾರ್ಸಿ ಮತ್ತು ಪಾಸ್ತು ಭಾಷೆಗಳಲ್ಲಿ ತಯಾರಾಗಿದೆ.

ಪೆಂಟಗನ್‌ ಪ್ರಕಾರ ಅಮೆರಿಕದ ಮಿಲಿಟರಿ 2021ರ ಮಧ್ಯದಲ್ಲಿ ಸುಮಾರು 7.12 ಬಿಲಿಯನ್‌ ಡಾಲರ್‌ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಅಫಘಾನಿಸ್ತಾನದಲ್ಲೇ ಬಿಟ್ಟು ತೆರಳಿತ್ತು. ಅಮೆರಿಕದ ಮಿಲಿಟರಿ ಬೇಸ್‌ನಲ್ಲಿದ್ದ ಈ ಆಯುಧಗಳ ಖಜಾನೆಯನ್ನು ಗಮನಿಸಿದ ತಾಲಿಬಾನ್‌ ಇದನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು.

ನಾಶಾತ್ ಸ್ವತಃ ಕ್ಯಾಮೆರಾವನ್ನು ಹಿಡಿದುಕೊಂಡು ಹಲವು ವಾರಗಳ ಕಾಲ ʼಹಾಲಿವುಡ್ ಗೇಟ್ʼ ಅನ್ನು ಚಿತ್ರೀಕರಿಸಿದ್ದರು. ಈ ಸಾಕ್ಷ್ಯಚಿತ್ರವು ತಾಲಿಬಾನ್ ವಾಯುಪಡೆಯ ಹೊಸ ಮುಖ್ಯಸ್ಥ ಮೌಲಾವಿ ಮನ್ಸೂರ್ ಮತ್ತು ಯುವ ಲೆಫ್ಟಿನೆಂಟ್ ಎಂ.ಜಾವಿದ್ ಮುಖ್ತಾರ್ ಅವರ ಚಲನವಲನಗಳನ್ನು ಸೆರೆಹಿಡಿದಿದೆ. “ಅಮೆರಿಕದ ಮಿಲಿಟರಿ ಬೇಸ್‌ ಆಗಿದ್ದ ಸ್ಥಳದಲ್ಲಿ ಹೆಚ್ಚಿನ ಭಾಗವನ್ನು ಚಿತ್ರೀಕರಿಸಿದ್ದೇವೆʼʼ ಎಂದು ನಾಶಾತ್ ಅಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅಫಘಾನಿಸ್ತಾನದ ಹೊಸ ಆಡಳಿತದ ಬಗ್ಗೆಯೂ ಅವರು ಅವಲೋಕನ ಮಾಡುತ್ತಾರೆ. ವಾಯುಪಡೆಯ ಹೊಸ ಮುಖ್ಯಸ್ಥ ಮನ್ಸೂರ್ ಅವರನ್ನು ಗುರಿಯಾಗಿಸಿಕೊಂಡು ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ 18 ಅಮಾಯಕರು ಬಲಿಯಾಗಿದ್ದನ್ನು ಸ್ಮರಿಸಿಕೊಳ್ಳುತ್ತಾರೆ.

ಇದನ್ನೂ ಓದಿ: Lakshmika Sajeevan : 24 ವರ್ಷದ ಮಲಯಾಳಂ ನಟಿ ಹೃದಯಾಘಾತದಿಂದ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

Sunita Williams: ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ತಂಡ ಆರಂಭದಲ್ಲಿ ಜೂನ್ 14 ಕ್ಕೆ ವಾಪಸಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಜೂನ್ 26ಕ್ಕೆ ಮುಂದೂಡಲಾಯಿತು. ಆದಾಗ್ಯೂ, ನಿಲ್ದಾಣವು ಎರಡು ಯೋಜಿತ ನಡಿಗೆಗಳನ್ನು ಜೂನ್ 24 ರಂದು ಮತ್ತು ಇನ್ನೊಂದು ಜುಲೈ 2 ರಂದು ನಡೆಯಬೇಕಾಗಿರುವುದರಿಂದ ಯೋಜನೆಯನ್ನು ಬದಲಾಯಿಸಲಾಗಿದೆ. ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಮ್ಮ ಸ್ಟ್ಯಾಂಡರ್ಡ್ ಮಿಷನ್ ಮ್ಯಾನೇಜ್ಮೆಂಟ್ ತಂಡದ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇವೆ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಮತ್ತು ಅವರ ತಂಡ ಬಾಹ್ಯಾಕಾಶದಲ್ಲೇ ಸಿಲುಕಿದ್ದಾರೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಿಂದ ಭೂಮಿಗೆ ಮರಳಬೇಕಿದ್ದ ಬೋಯಿಂಗ್ ಸ್ಟಾರ್‌ಲೈನರ್(Boeing Starliner) ಅನ್ನು ತಾಂತ್ರಿಕ ಸಮಸ್ಯೆ ಕಾರಣ ನಾಸಾ ಮತ್ತೆ ಮುಂದೂಡಿದೆ. ಹೀಗಾಗಿಯೇ ಸುನೀತಾ ಭೂಮಿಗೆ ಮರಳುವುದು ತಡವಾಗಿದೆ.

ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ತಂಡ ಆರಂಭದಲ್ಲಿ ಜೂನ್ 14 ಕ್ಕೆ ವಾಪಸಾಗುತ್ತದೆ ಎಂದು ಹೇಳಲಾಗಿತ್ತು. ನಂತರ ಜೂನ್ 26ಕ್ಕೆ ಮುಂದೂಡಲಾಯಿತು. ಆದಾಗ್ಯೂ, ನಿಲ್ದಾಣವು ಎರಡು ಯೋಜಿತ ನಡಿಗೆಗಳನ್ನು ಜೂನ್ 24 ರಂದು ಮತ್ತು ಇನ್ನೊಂದು ಜುಲೈ 2 ರಂದು ನಡೆಯಬೇಕಾಗಿರುವುದರಿಂದ ಯೋಜನೆಯನ್ನು ಬದಲಾಯಿಸಲಾಗಿದೆ. ನಾವು ನಮ್ಮ ಸಮಯವನ್ನು ತೆಗೆದುಕೊಳ್ಳುತ್ತಿದ್ದೇವೆ ಮತ್ತು ನಮ್ಮ ಸ್ಟ್ಯಾಂಡರ್ಡ್ ಮಿಷನ್ ಮ್ಯಾನೇಜ್ಮೆಂಟ್ ತಂಡದ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇವೆ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದ್ದಾರೆ.

ಇನ್ನು ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಕೇವಲ 27ದಿನಗಳ ಇಂಧನ ಹೊಂದಿದ್ದು, ಅಷ್ಟರೊಳಗೆ ತಾಂತ್ರಿಕ ಸಮಸ್ಯೆ ನಿವಾರಿಸಬೇಕಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಸಂಚರಿಸಿದ್ದ ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆ ಜೂನ್‌ 6 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಸುರಕ್ಷಿತವಾಗಿ ಇಳಿದಿತ್ತು. ಈ ವೇಳೆ ಸುನೀತಾ ವಿಲಿಯಮ್ಸ್‌ ಅವರು ಇತರ ಏಳು ಗಗನಯಾತ್ರಿಗಳನ್ನು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ. ಜತೆಗೆ ಡ್ಯಾನ್ಸ್‌ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ (Viral Video) ಆಗಿತ್ತು.

ಐಎಸ್ಎಸ್‌ನ ಸಂಪ್ರದಾಯದಂತೆ ಗಂಟೆ ಬಾರಿಸುವ ಮೂಲಕ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸ್ವಾಗತಿಸಲಾಯಿತು. ಡ್ಯಾನ್ಸ್‌ ಮಾಡುತ್ತಲೇ ಅವರು ಕಾಲಿಟ್ಟರು. ಸುನೀತಾ ವಿಲಿಯಮ್ಸ್ ʼಡ್ಯಾನ್ಸ್ ಪಾರ್ಟಿʼ ಬಗ್ಗೆ ಮಾತನಾಡುತ್ತಾ, ತಮ್ಮ ಸಿಬ್ಬಂದಿಯನ್ನು ʼಮತ್ತೊಂದು ಕುಟುಂಬʼ ಎಂದು ಕರೆದಿದ್ದಾರೆ. ಅಂತಹ ದೊಡ್ಡ ಸ್ವಾಗತಕ್ಕಾಗಿ ಧನ್ಯವಾದ ಅರ್ಪಿಸಿದರು.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಉಡಾವಣೆಯಾದ ಸುಮಾರು 26 ಗಂಟೆಗಳ ನಂತರ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಲ್ಲಿ ಇಳಿಯಿತು. ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಲ್ಲಿ ಒಂದು ವಾರ ಕಳೆಯಲಿದ್ದಾರೆ ಮತ್ತು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು.

ಇದನ್ನೂ ಓದಿ: Hajj Pilgrims: 98 ಭಾರತೀಯ ಹಜ್‌ ಯಾತ್ರಿಕರು ಸಾವು- ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ

Continue Reading

ವಿದೇಶ

Vijay Mallya: ದಿವಾಳಿಯೆಂದು ಪರಾರಿಯಾಗಿದ್ದ ವಿಜಯ್ ಮಲ್ಯಗೆ ಲಂಡನ್‌ನಲ್ಲಿದೆ 117 ಕೋಟಿಯ ಬಂಗಲೆ!

ಸಾಲ ಮಾಡಿ ವಂಚಿಸಿ ಭಾರತದಿಂದ ಓಡಿ ಹೋಗಿರುವ ಉದ್ಯಮಿ ವಿಜಯ ಮಲ್ಯ (Vijay Mallya) ಅವರು ಯುಕೆಯಲ್ಲಿ 14 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 117 ಕೋಟಿ ಬೆಲೆ ಬಾಳುವ ಎಸ್ಟೇಟ್ ಅನ್ನು ಭಾರತದಿಂದ ಓಡಿ ಹೋಗುವ ಕೆಲವು ತಿಂಗಳ ಮೊದಲು ಖರೀದಿ ಮಾಡಿದ್ದು, ಇದು ಹೇಗಿದೆ ಗೊತ್ತೇ? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Vijay Mallya
Koo

ಸಾಲ ಮಾಡಿ ಭಾರತದಿಂದ (india) ಓಡಿ ಹೋಗಿರುವ ಉದ್ಯಮಿ (businessman) ವಿಜಯ ಮಲ್ಯ (Vijay Mallya) ಅವರ ಪುತ್ರ ಸಿದ್ದಾರ್ಥ್ ಮಲ್ಯ (Siddharth Mallya ) ಮತ್ತು ಜಾಸ್ಮಿನ್ (Jasmine) ವಿವಾಹ ಕ್ರಿಶ್ಚಿಯನ್ ಸಂಪ್ರದಾಯದಂತೆ ಇತ್ತೀಚೆಗೆ ಲಂಡನ್ ನಲ್ಲಿರುವ (london) ವಿಜಯ ಮಲ್ಯ ಅವರ 14 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 117 ಕೋಟಿ ಬೆಲೆ ಬಾಳುವ ಭವನದಲ್ಲಿ ಅದ್ಧೂರಿಯಾಗಿ ನೆರವೇರಿದೆ. ವಿವಾಹಕ್ಕಿಂತ ಹೆಚ್ಚಾಗಿ ಮಲ್ಯ ಅವರ ಎಸ್ಟೇಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಪ್ರಾರಂಭವಾಗಿದೆ.

ಹರ್ಟ್‌ಫೋರ್ಡ್‌ಶೈರ್‌ನ (Hertfordshire) ಟೆವಿನ್‌ನ ಸ್ಲೀಪಿ ಹಳ್ಳಿಯ ಲೇಡಿವಾಕ್ ಸಿದ್ಧಾರ್ಥ ಮಲ್ಯ ಮತ್ತು ಜಾಸ್ಮಿನ್‌ ಅವರ ವಿವಾಹಕ್ಕೆ ಸಾಕ್ಷಿಯಾಯಿತು. ವಿಸ್ತಾರವಾದ ಲೇಡಿವಾಕ್ ಎಸ್ಟೇಟ್ ಅನ್ನು ವಿಜಯ್ ಮಲ್ಯ ಅವರು ಭಾರತದಿಂದ ಯುಕೆಗೆ ಪಲಾಯನ ಮಾಡುವ ಕೆಲವೇ ತಿಂಗಳುಗಳ ಮೊದಲು 2015ರಲ್ಲಿ ಖರೀದಿಸಿದ್ದರು.

68 ವರ್ಷದ ಮಲ್ಟಿ ಮಿಲಿಯನೇರ್ ವಿಜಯ್‌ ಮಲ್ಯ ಪ್ರಸ್ತುತ ಯುಕೆಯಲ್ಲಿದ್ದಾರೆ. 900 ಕೋಟಿಗೂ ಹೆಚ್ಚು ಸಾಲ ವಂಚನೆ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದಾರೆ. ಇಡಿ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಈ ಬಗ್ಗೆ ತನಿಖೆ ನಡೆಸುತ್ತಿದೆ.


ವಿಜಯ್ ಮಲ್ಯ ಅವರು ಎಫ್1 ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ ಅವರ ತಂದೆ ಆಂಥೋನಿ ಹ್ಯಾಮಿಲ್ಟನ್ ಅವರಿಂದ ಹರ್ಟ್‌ಫೋರ್ಡ್‌ಶೈರ್‌ನಲ್ಲಿರುವ ಲೇಡಿವಾಕ್ ಎಸ್ಟೇಟ್ ಅನ್ನು ಖರೀದಿಸಿದ್ದರು. 2021ರ ರೆಡಿಫ್ ವರದಿಯ ಪ್ರಕಾರ ಸ್ವ-ಘೋಷಿತ ‘ಕಿಂಗ್ ಆಫ್ ಗುಡ್ ಟೈಮ್ಸ್’ ಒಡೆತನದ ಎಲ್ಲಾ ಲಕ್ಷಣಗಳನ್ನು ಈ ಆಸ್ತಿ ಹೊಂದಿದೆ.

ಇಲ್ಲಿರುವ ದೊಡ್ಡ ನಿವಾಸವು 30 ಎಕರೆ ಭೂಮಿಯಲ್ಲಿದೆ. ಮೂರು-ಮನೆಗಳ ಎಸ್ಟೇಟ್ ಅನೇಕ ಔಟ್‌ಹೌಸ್‌ಗಳು, ಈಜುಕೊಳಗಳು, ಕಾರಂಜಿಗಳು ಮತ್ತು ಟೆನ್ನಿಸ್ ಕೋರ್ಟ್‌ಗಳನ್ನು ಹೊಂದಿದೆ. ಜೊತೆಗೆ ಮಲ್ಯ ಅವರ ದುಬಾರಿ ಕಾರುಗಳ ದೊಡ್ಡ ಫ್ಲೀಟ್ ಅನ್ನು ನಿರ್ವಹಿಸಲು ಸಮರ್ಥವಾಗಿರುವ ಗ್ಯಾರೇಜ್ ಅನ್ನು ಒಳಗೊಂಡಿದೆ.


ಸಿದ್ಧಾರ್ಥ ಮಲ್ಯ ಮತ್ತು ಜಾಸ್ಮಿನ್ ಅವರ ವಿವಾಹದಲ್ಲಿ ಅತಿಥಿಯೊಬ್ಬರು ಪೋಸ್ಟ್ ಮಾಡಿದ ದೃಶ್ಯಗಳು ಮದುವೆಗೆ ಅತಿಥಿಗಳಿಂದ ತುಂಬಿರುವ ಹರ್ಟ್‌ಫೋರ್ಡ್‌ಶೈರ್ ಭವನವನ್ನು ತೋರಿಸುತ್ತವೆ. ಇದರಲ್ಲಿ ಅಂದಗೊಳಿಸಲಾದ ಹುಲ್ಲುಹಾಸು ಮತ್ತು ಸಸ್ಯಾಲಂಕಾರವನ್ನು ಈ ಬೃಹತ್ ನಿವಾಸವು ಒಳಗೊಂಡಿದೆ.


ಹರ್ಟ್‌ಫೋರ್ಡ್‌ಶೈರ್‌ನಲ್ಲಿ ಲೇಡಿವಾಕ್

ವಿಜಯ್ ಮಲ್ಯ ಲೇಡಿವಾಕ್ ಎಸ್ಟೇಟ್ ಅನ್ನು 11.5 ಮಿಲಿಯನ್ ಪೌಂಡ್ ಗೆ ಖರೀದಿಸಿದ್ದಾರೆ. ಎರಡು ವರ್ಷಗಳಲ್ಲಿ ಭಾರೀ ಭದ್ರತೆಯ ಲೇಡಿವಾಕ್ ಎಸ್ಟೇಟ್‌ನಲ್ಲಿ ವ್ಯಾಪಕವಾದ ನವೀಕರಣಗಳನ್ನು ಕೈಗೊಳ್ಳಲಾಯಿತು.

ಇದನ್ನೂ ಓದಿ: T20 world Cup 2024 : ವೆಸ್ಟ್​ ಇಂಡೀಸ್​​ನಲ್ಲೂ ಮನೆಯೂಟ ಮಾಡುತ್ತಿರುವ ಸೂರ್ಯಕುಮಾರ್​, ಹಾರ್ದಿಕ್ ಪಾಂಡ್ಯ!

ಮಲ್ಯ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡ ಅನಂತರ ಬಿಲ್ಡರ್‌ಗಳು, ವಾಸ್ತುಶಿಲ್ಪಿಗಳು, ಡೆಕೋರೇಟರ್‌ಗಳು ಮತ್ತು ಲ್ಯಾಂಡ್‌ಸ್ಕೇಪ್ ಕಲಾವಿದರ ನಿರಂತರ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಇವರ ಈ ಎಸ್ಟೇಟ್ ಹಲವು ಸಿಸಿಟಿವಿ ಕೆಮರಾಗಳು, ಕಬ್ಬಿಣದ ಗೇಟ್‌ ಮತ್ತು ಬಹು ಭದ್ರತಾ ಸಿಬ್ಬಂದಿಗಳೊಂದಿಗೆ ಹೆಚ್ಚು ಕಾವಲುಗಾರರನ್ನು ನೇಮಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ. ಮಲ್ಯ ಕುಟುಂಬ ಇಲ್ಲಿಗೆ ಬರುವಾಗ ತಮ್ಮೊಂದಿಗೆ ಹೆಚ್ಚಿನ ಸಂಖ್ಯೆಯ ಕಾರುಗಳು ಮತ್ತು ಸಿಬ್ಬಂದಿಯನ್ನು ಕರೆತಂದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

Continue Reading

Latest

Viral Video: ಕ್ಯಾಸಿನೋದಲ್ಲಿ 33 ಕೋಟಿ ರೂ. ಜಾಕ್‌ಪಾಟ್‌; ಖುಷಿ ಹೆಚ್ಚಾಗಿ ಹಾರ್ಟ್‌ ಅಟ್ಯಾಕ್‌!

Viral Video: ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4ಮಿಲಿಯನ್ ಡಾಲರ್ ಜಾಕ್‌ಪಾಟ್‌ ಗೆದ್ದ ಶ್ರೀಮಂತ ವ್ಯಕ್ತಿಯೊಬ್ಬ ಗೆಲುವಿನ ಖುಷಿ ತಡೆದುಕೊಳ್ಳಲಾಗದೆ ಹೃದಯ ಸ್ತಂಭನದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಣ ಗೆದ್ದ ಖುಷಿಯಲ್ಲಿದ್ದ ಅವರು ಆ ಖುಷಿಯನ್ನು ಅನುಭವಿಸಲು ಮಾತ್ರ ಆಗಲಿಲ್ಲ. ಗೆದ್ದ ಉತ್ಸಾಹದಲ್ಲಿದ್ದ ಅವರು ಕಾರ್ಡಿಯಾಕ್ ಅರೆಸ್ಟ್ ಆಗಿ ಅಲ್ಲೆ ಕುಸಿದು ಬಿದ್ದರು. ಜಾಕ್‌ಪಾಟ್ ಹೊಡೆದ ಖುಷಿಯನ್ನು ತಡೆದುಕೊಳ್ಳಲಾಗದೆ ಭಾವಪರವಶರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

VISTARANEWS.COM


on

Viral Video
Koo

ತುಂಬಾ ಖುಷಿಯಾದಾಗ ಕೆಲವರಿಗೆ ತಮ್ಮ ಖುಷಿಯನ್ನು ಹೇಗೆ ವ್ಯಕ್ತಪಡಿಸುವುದು ಎಂದು ಗೊತ್ತಾಗುವುದಿಲ್ಲ. ಇನ್ನು ಕೆಲವರಿಗೆ ಯಾವುದಾದರೂ ಶಾಕಿಂಗ್‌ ನ್ಯೂಸ್‌ ಸುದ್ದಿ ಹೇಳಿದರೂ ಯಾವುದೇ ತರಹದ ಪ್ರತಿಕ್ರಿಯೆ ವ್ಯಕ್ತಪಡಿಸುವುದಿಲ್ಲ. ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ಇಲ್ಲೊಬ್ಬರು ಖುಷಿಯನ್ನು ತಡೆದುಕೊಳ್ಳಲಾಗದೇ ಮೃತಪಟ್ಟ ಘಟನೆ ನಡೆದಿದೆ. ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊನದಲ್ಲಿ ಕೋಟಿ ಕೋಟಿ ಹಣ ಗೆದ್ದ ವ್ಯಕ್ತಿಯೊಬ್ಬರು ಖುಷಿಯನ್ನು ತಡೆದುಕೊಳ್ಳಲಾಗದೇ ಮೃತಪಟ್ಟಿರುವ ವಿಡಿಯೊವೊಂದು ವೈರಲ್‌ (Viral Video) ಆಗಿದೆ.

ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಕ್ಯಾಸಿನೊದಲ್ಲಿ 4 ಮಿಲಿಯನ್ ಡಾಲರ್ (ಸುಮಾರು 33 ಕೋಟಿ ರೂ. ) ಜಾಕ್‌ಪಾಟ್‌ ಗೆದ್ದ ಶ್ರೀಮಂತ ವ್ಯಕ್ತಿಯೊಬ್ಬ ಗೆಲುವಿನ ಖುಷಿ ತಡೆದುಕೊಳ್ಳಲಾಗದೆ ಹೃದಯ ಸ್ತಂಭನದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಕ್ಯಾಸಿನೊಗೆ ನಿಯಮಿತವಾಗಿ ಭೇಟಿ ನೀಡುತ್ತಿದ್ದ ವ್ಯಕ್ತಿ ಪ್ರತಿ ಸಲ ಬರಿಗೈಯಲ್ಲಿ ವಾಪಾಸ್‌ ಆಗುತ್ತಿದ್ದರಂತೆ. ಆದರೆ ಈ ಬಾರಿ ಮಾತ್ರ ಇವರಿಗೆ ಜಾಕ್‌ಪಾಟ್‌ ಹೊಡೆದಿದೆ.

ಅವರು ನಿರೀಕ್ಷಿಸದಂತಹ ಖುಷಿ ಅಂದು ಅವರ ಪಾಲಿಗೆ ಒಲಿದು ಬಂದಿತ್ತು. ಹಣ ಗೆದ್ದ ಖುಷಿಯಲ್ಲಿದ್ದ ಅವರು ಆ ಖುಷಿಯನ್ನು ಅನುಭವಿಸಲು ಮಾತ್ರ ಆಗಲಿಲ್ಲ. ಗೆದ್ದ ಉತ್ಸಾಹದಲ್ಲಿದ್ದ ಅವರು ಕಾರ್ಡಿಯಾಕ್ ಅರೆಸ್ಟ್‌ ಆಗಿ ಅಲ್ಲೆ ಕುಸಿದು ಬಿದ್ದರು. ಜಾಕ್‌ಪಾಟ್‌ ಹೊಡೆದ ಖುಷಿಯನ್ನು ತಡೆದುಕೊಳ್ಳಲಾಗದೆ ಭಾವಪರವಶರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕುಸಿದುಬಿದ್ದ ವ್ಯಕ್ತಿಗೆ ಕ್ಯಾಸಿನೊ ಸಿಬ್ಬಂದಿ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ಒದಗಿಸಿದರೂ ವ್ಯಕ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅತಿಯಾದ ಸಂತೋಷವೇ ವ್ಯಕ್ತಿಯ ಕಾರ್ಡಿಯಾಕ್‌ ಅರೆಸ್ಟ್‌ಗೆ ಕಾರಣ ಎಂದು ವೈದ್ಯರು ಘೋಷಿಸಿದರು.

ಇದನ್ನೂ ಓದಿ: Dating Trend: ʼ3 ತಿಂಗಳ ಡೇಟಿಂಗ್‌ʼ! ಯುವ ಜನತೆಯ ಹೊಸ ಟ್ರೆಂಡ್‌!

ಮರೀನಾ ಕೊಲ್ಲಿಯಲ್ಲಿರುವ ಈ ಕ್ಯಾಸಿನೊ ಅದರ ನಾಲ್ಕು ಹಂತದ ಗೇಮಿಂಗ್ ಫ್ಲೋರ್ರ ಸ್ಪೇಸ್ ಮತ್ತು 2300ಕ್ಕೂ ಹೆಚ್ಚಿನ ಸ್ಲಾಟ್ ಯಂತ್ರಗಳೊಂದಿಗೆ ಹೊಸ ಮತ್ತು ಜನಪ್ರಿಯ ಎಲೆಕ್ಟ್ರಾನಿಕ್ ಗೇಮಿಂಗ್ ಆಯ್ಕೆಯನ್ನೂ ಗ್ರಾಹಕರಿಗೆ ಒದಗಿಸುತ್ತದೆ. 250ಕ್ಕೂ ಹೆಚ್ಚಿನ ಆಟಗಳೊಂದಿಗೆ ಭೇಟಿನೀಡುವ ಪ್ರತಿಯೊಬ್ಬರಿಗೂ ಭರಪೂರ ಮನರಂಜನೆ ಒದಗಿಸುತ್ತದೆ. ಇಲ್ಲಿ ಮೂವತ್ತಕ್ಕೂ ಹೆಚ್ಚಿನ ಖಾಸಗಿ ಗೇಮಿಂಗ್ ಕೊಠಡಿಗಳಿವೆ. 500ಕ್ಕೂ ಹೆಚ್ಚಿನ ಗೇಮಿಂಗ್ ಟೇಬಲ್‌ಗಳಿವೆ. 

Continue Reading

ಪ್ರಮುಖ ಸುದ್ದಿ

Pakistan: ಪಾಕ್‌ನಲ್ಲಿ ಹಿಂದುಗಳು ಸೇರಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ; ಅಲ್ಲಿನ ಸಚಿವನೇ ಒಪ್ಪಿಕೊಂಡ ಸತ್ಯ ಇದು!

Pakistan: ಅಲ್ಪಸಂಖ್ಯಾತರು ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಹತ್ಯೆ ಮಾಡಲಾಗುತ್ತಿದೆ. ಅವರ ಮೇಲೆ ಧರ್ಮನಿಂದನೆಯ ಅಸ್ತ್ರ ಪ್ರಯೋಗಿಸಲಾಗುತ್ತಿದೆ. ನಾವು ಪಾಕಿಸ್ತಾನದ ಅಲ್ಪಸಂಖ್ಯಾತ ಸಹೋದರ ಹಾಗೂ ಸಹೋದರಿಯರನ್ನು ರಕ್ಷಣೆ ಮಾಡಬೇಕಿದೆ ಎಂಬುದಾಗಿ ಆ ದೇಶದ ರಕ್ಷಣಾ ಸಚಿವ ಖವಾಜ ಆಸಿಫ್‌ ಅವರು ಸಂಸತ್ತಿನಲ್ಲಿಯೇ ಹೇಳಿದ್ದಾರೆ. ಆ ಮೂಲಕ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಪರಿಸ್ಥಿತಿ ಹೇಗಿದೆ ಎಂಬುದನ್ನು ಜಗಜ್ಜಾಹೀರು ಮಾಡಿದ್ದಾರೆ.

VISTARANEWS.COM


on

Pakistan
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಇಸ್ಲಾಮಿಕ್‌ ಮೂಲಭೂತವಾದಿಗಳ ಅಟ್ಟಹಾಸ, ಬಲವಂತದ ಮತಾಂತರದಿಂದಾಗಿ ಪಾಕಿಸ್ತಾನದಲ್ಲಿ (Pakistan) ಅಲ್ಪಸಂಖ್ಯಾತರಾಗಿರುವ ಹಿಂದುಗಳು ಸೇರಿ ಹಲವು ಧಾರ್ಮಿಕ ಅಲ್ಪಸಂಖ್ಯಾತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ದಿನ ಬೆಳಗಾದರೆ, ಹಿಂದುಗಳನ್ನು ಮತಾಂತರ ಮಾಡುವುದು, ದೇವಾಲಯಗಳ ಮೇಲೆ ದಾಳಿ ಮಾಡುವುದು ಸೇರಿ ಹಲವು ಪ್ರಕರಣಗಳು ಸುದ್ದಿಯಾಗುತ್ತವೆ. ಇದರ ಬೆನ್ನಲ್ಲೇ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ ಎಂಬುದನ್ನು ಆ ದೇಶದ ರಕ್ಷಣಾ ಸಚಿವ ಖವಾಜ ಆಸಿಫ್‌ (Khawaja Asif) ಅವರೇ ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಗುಂಪು ಹತ್ಯೆ, ಧರ್ಮನಿಂದನೆ ಸೇರಿ ಹಲವು ಪ್ರಕರಣಗಳು ಕೇಳಿಬಂದಿದ್ದು, ಇದನ್ನು ಖಂಡಿಸಿ ಶೆಹಬಾಜ್‌ ಷರೀಫ್‌ ನೇತೃತ್ವದ ಸರ್ಕಾರವು ನಿರ್ಣಯ ಮಂಡಿಸಿತು. ಇದೇ ವೇಳೆ ಖವಾಜ ಆಸಿಫ್‌ ಮಾತನಾಡಿದರು. “ಪಾಕಿಸ್ತಾನದಲ್ಲಿ ಪ್ರತಿದಿನ ಅಲ್ಪಸಂಖ್ಯಾತರ ಕೊಲೆಗಳು ನಡೆಯುತ್ತಿವೆ. ಪಾಕಿಸ್ತಾನದಲ್ಲಿ ಯಾವುದೇ ಧಾರ್ಮಿಕ ಅಲ್ಪಸಂಖ್ಯಾತರೂ ಸುರಕ್ಷಿತವಲ್ಲ. ಇಸ್ಲಾಂನಲ್ಲೇ ಸಣ್ಣ ಸಮುದಾಯಗಳಿಗೂ ಕೂಡ ರಕ್ಷಣೆ ಇಲ್ಲದಂತಾಗಿದೆ” ಎಂದು ಹೇಳುವ ಮೂಲಕ ಇಸ್ಲಾಮಿಕ್‌ ಮೂಲಭೂತವಾದದ ಅಟ್ಟಹಾಸವನ್ನು ಜಗಜ್ಜಾಹೀರು ಮಾಡಿದ್ದಾರೆ.

“ಅಲ್ಪಸಂಖ್ಯಾತರು ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಹತ್ಯೆ ಮಾಡಲಾಗುತ್ತಿದೆ. ಅವರ ಮೇಲೆ ಧರ್ಮನಿಂದನೆಯ ಅಸ್ತ್ರ ಪ್ರಯೋಗಿಸಲಾಗುತ್ತಿದೆ. ನಾವು ಪಾಕಿಸ್ತಾನದ ಅಲ್ಪಸಂಖ್ಯಾತ ಸಹೋದರ ಹಾಗೂ ಸಹೋದರಿಯರನ್ನು ರಕ್ಷಣೆ ಮಾಡಬೇಕಿದೆ. ಅವರು ಕೂಡ ಬಹುಸಂಖ್ಯಾತರು ಹೊಂದಿರುವಷ್ಟೇ ಹಕ್ಕುಗಳನ್ನು ಹೊಂದಿದ್ದಾರೆ. ಪಾಕಿಸ್ತಾನವು ಎಲ್ಲ ನಾಗರಿಕರಿಗೂ ಸೇರಿದೆ. ಮುಸ್ಲಿಮರು ಇರಲಿ, ಕ್ರೈಸ್ತರು ಇರಲಿ, ಸಿಖ್ಖರು ಸೇರಿ ಯಾವುದೇ ಧರ್ಮೀಯರು ಇರಲಿ, ನಮ್ಮ ಸಂವಿಧಾನವು ಅವರಿಗೆ ಸಮಾನ ಹಕ್ಕುಗಳನ್ನು ನೀಡಿದೆ. ಅವರ ರಕ್ಷಣೆಗೆ ಸಂವಿಧಾನ ಇದೆ” ಎಂಬುದಾಗಿ ಹೇಳಿದರು.

ಪಾಕಿಸ್ತಾನದಲ್ಲಿ ಧರ್ಮನಿಂದನೆ, ಅಲ್ಪಸಂಖ್ಯಾತರ ಹತ್ಯೆಯನ್ನು ಖಂಡಿಸಿ ಸರ್ಕಾರವೇ ನಿರ್ಣಯ ಮಂಡಿಸಿದರೂ, ಅದರ ಅಂಗೀಕಾರಕ್ಕೆ ಇಮ್ರಾನ್‌ ಖಾನ್‌ ನೇತೃತ್ವದ ಪಿಟಿಐ ಪಕ್ಷವು ಬಿಡಲಿಲ್ಲ. ಪಾಕಿಸ್ತಾನದಲ್ಲಿ ನಿತ್ಯ ದೇವಾಲಯಗಳ ಮೇಲೆ ದಾಳಿ, ಮೂರ್ತಿಗಳ ಭಂಜನೆ, ಹಿಂದುಗಳ ಮತಾಂತರ, ಅಲ್ಪಸಂಖ್ಯಾತ ಯುವತಿಯರ ಮೇಲೆ ಅತ್ಯಾಚಾರ, ಗುಂಪು ಹತ್ಯೆಗಳು ನಡೆಯುತ್ತಲೇ ಇವೆ. ಇದಕ್ಕಾಗಿ ನಿರ್ಣಯ ಮಂಡಿಸಿದರೂ ಪಿಟಿಐ ಪಕ್ಷವು ಮೂಲಭೂತವಾದಿ ಮನಸ್ಥಿತಿಯನ್ನೇ ಪ್ರದರ್ಶಿಸಿ, ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Continue Reading
Advertisement
Pavithra Gowda Cried After In Jail darshan case
ಕ್ರೈಂ1 min ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sunita Williams
ವಿದೇಶ11 mins ago

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

IND vs ENG
ಕ್ರೀಡೆ15 mins ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Foxconn's Hiring
ಉದ್ಯೋಗ24 mins ago

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

Indian 2 trailer Kamal Haasan as master of disguise
South Cinema28 mins ago

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

sural falls assault case
ಕ್ರೈಂ37 mins ago

Assault Case: ಕರ್ನಾಟಕದ ಪ್ರವಾಸಿಗರಿಗೆ ಬಾಸುಂಡೆ ಬರುವಂತೆ ಥಳಿಸಿದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ; ಹಣ ಸುಲಿಗೆ

Members of Parliament
Latest54 mins ago

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

Actor Darshan Judicial Custody Jailer Gave UTP Number
ಕ್ರೈಂ2 hours ago

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Health Tips Kannada
ಆರೋಗ್ಯ2 hours ago

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

NEET Paper Leak
ಶಿಕ್ಷಣ2 hours ago

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌