Hondisi Bareyiri | ಬೆಳಕಲಿ ಕಾಣದ ಇರುಳಿಗು ಮೆಲೋಡಿ ಸಾಂಗ್‌ ಔಟ್‌: ಅರ್ಥಪೂರ್ಣ ಸಾಹಿತ್ಯ ಎಂದರು ಸಿನಿಪ್ರಿಯರು - Vistara News

ಸಿನಿಮಾ

Hondisi Bareyiri | ಬೆಳಕಲಿ ಕಾಣದ ಇರುಳಿಗು ಮೆಲೋಡಿ ಸಾಂಗ್‌ ಔಟ್‌: ಅರ್ಥಪೂರ್ಣ ಸಾಹಿತ್ಯ ಎಂದರು ಸಿನಿಪ್ರಿಯರು

ಹೊಂದಿಸಿ ಬರೆಯಿರಿ (Hondisi Bareyiri) ಮೆಲೋಡಿ ಸಾಂಗ್‌ ರಿಲೀಸ್‌ ಆಗಿದ್ದು, ಜನ ಕಮೆಂಟ್‌ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʻಹೊಂದಿಸಿ ಬರೆಯಿರಿ’ (Hondisi Bareyiri ) ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ʻಬೆಳಕಲಿ ಕಾಣದ ಇರುಳಿಗುʼ ಹಾಡು ಬಿಡುಗಡೆಗೊಂಡಿದ್ದು, ಮೆಲೋಡಿ ಸಾಂಗ್‌ ಎಂದು ಕಮೆಂಟ್‌ ಮೂಲಕ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೋಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜತೆ ಹಾಡಿಗೆ ಧ್ವನಿಯಾಗಿದ್ದಾರೆ. ʻಗುಳ್ಟುʼ ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಕೆ.ಜಿ.ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ.

ಇದನ್ನೂ ಓದಿ | Love 360 | ಲವ್‌ 360 ಸಿನಿಮಾ ಟ್ರೈಲರ್‌ ರಿಲೀಸ್‌, ಹ್ಯಾಟ್ರಿಕ್‌ ಹೀರೋ ಮೆಚ್ಚುಗೆ

ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.

ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ “ಹೊಂದಿಸಿ ಬರೆಯಿರಿʼ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.

ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾ ರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿವೆ.

ಇದನ್ನೂ ಓದಿ | Liger | ಲೈಗರ್ ಸಿನಿಮಾದ ಥೀಮ್ ಸಾಂಗ್ ರಿಲೀಸ್‌: ಸಖತ್‌ ಮಾಸ್‌ ಸಾಂಗ್‌ ಎಂದ ಫ್ಯಾನ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

Ranbir Kapoor: ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪಾರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Ranbir Kapoor stunned as photographer abuses in front of him
Koo

ಬೆಂಗಳೂರು: ನಟ ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ರಣಬೀರ್‌ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ, ಫೋಟೋಗ್ರಾಫರ್‌ ಫೋಟೊ ತೆಗೆಸಿಕೊಳ್ಳಲು ಮುಂದಾಗಿದ್ದ. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೊಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಗೊತ್ತಾಗಿಲ್ಲ. ಅಶ್ಲೀಲ ಪದ ಬಳಕೆ ಮಾಡುತ್ತಿದ್ದಂತೆ ರಣಬೀರ್‌ ಕೂಡ ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ. ರಣಬೀರ್‌ ಕಾರ್ಯಕ್ರಮಕ್ಕೆ ರಣಬೀರ್ ಕಪ್ಪು ಕುರ್ತಾ-ಪೈಜಾಮಾ ಧರಿಸಿ ಬಂದಿದ್ದರು.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

Continue Reading

ಕಾಲಿವುಡ್

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Varalaxmi Sarathkumar: ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

VISTARANEWS.COM


on

Varalaxmi Sarathkumar negative comments on fiance
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಿಖೋಲಯ್ ಸಚ್‌ದೇವ್ (Nicholai Sachdev) ಜತೆ ನಿಶ್ಚಿತಾರ್ಥವಾದ ಬಳಿಕ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಟೀಕೆಗೆ ಗುರಿಯಾದರು. ಈ ಬಗ್ಗೆ ನಟಿ ಮಾತನಾಡಿ ʻʻನನ್ನ ತಂದೆ ಕೂಡ ಎರಡು ಬಾರಿ ಮದುವೆಯಾದರು. ಆದರೆ ಆಮೇಲೆ ಅವರು ಸಂತೋಷವಾಗಿಯೇ ಇದ್ದಾರೆ. ಎರಡು ಮದುವೆಯಾಗುವುದರಲ್ಲಿ ಏನೂ ತಪ್ಪಿಲ್ಲ. ಜನರು ನಿಖೋಲಯ್ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ನಿನಿಖೋಲಯ್ ನನ್ನ ದೃಷ್ಟಿಯಲ್ಲಿ ಸುಂದರವಾಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್‌ ಕಮೆಂಟ್ ಮಾಡುವ ಜನರ ಬಗ್ಗೆ ನಾನು ಹೆದರುವುದಿಲ್ಲ. ನಾನು ಅವರಿಗೆಲ್ಲ ಏಕೆ ಉತ್ತರಿಸಬೇಕು?. ನಿಖೋಲಯ್ ಅವರ ಪೋಷಕರು ಆರ್ಟ್ ಗ್ಯಾಲರಿಯನ್ನು ನಡೆಸುತ್ತಾರೆ. ನಿಖೋಲಯ್ ಮಾಜಿ ಪತ್ನಿಯೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ಅವರದ್ದು ಅದ್ಭುತ ವ್ಯಕ್ತಿತ್ವ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್!

ನಟಿ ಮಾತು ಮುಂದುವರಿಸಿ ʻʻನಿಖೋಲಯ್ ನನ್ನನ್ನು ಯಾವಾಗಲೂ ಖುಷಿಯಲ್ಲಿ ಇರಿಸುತ್ತಾರೆ. ನನ್ನ ವೃತ್ತಿಜೀವನವನ್ನು ಬೆಂಬಲಿಸುತ್ತಾರೆ. ನನ್ನನ್ನು ತುಂಬಾ ಪ್ರೀತಿಸುತ್ತಾರೆ, ಮುದ್ದು ಮಾಡುತ್ತಾರೆ ಮತ್ತು ನನ್ನನ್ನು ರಕ್ಷಿಸುತ್ತಾರೆ. 14 ವರ್ಷಗಳ ಹಿಂದೆ ಒಬ್ಬರೂ ಭೇಟಿಯಾದೆವು. ಆದರೆ ನಾವು ಆಗ ಡೇಟಿಂಗ್ ಮಾಡಿರಲಿಲ್ಲ. ನಾವು ಸ್ನೇಹಿತರಂತೆ ಇದ್ದೇವುʼʼಎಂದು ಹೇಳಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಸ್ಯಾಂಡಲ್ ವುಡ್

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

777 Charlie: ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. ಇದೀಗ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

777 Charlie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ (paramvah studios) ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯದ `777 ಚಾರ್ಲಿ’ (777 Charlie) ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿದೆ. ಇಂದೇ (ಜೂ.28) ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆ ಕಂಡಿದೆ.

ಜಪಾನ್ ಚಿತ್ರರಂಗದಲ್ಲಿ 1೦೦ ವರ್ಷಕ್ಕೂ ಹೆಚ್ಚು ಅನುಭವ ಹೊಂದಿರುವ “ಶೋಚಿಕೋ ಮೂವಿ” (Shochiku Movie) ಎಂಬ ಸಂಸ್ಥೆ ಈ ಜಪಾನಿನಲ್ಲಿ ವಿತರಣೆ ಮಾಡಿದೆ. ವಿಶೇಷವೆಂದರೆ, ಇದೇ ಸಂಸ್ಥೆಯು ಈ ಹಿಂದೆ “Hachi: A Dog’s Tale” ಎಂಬ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಿತ್ತು. ಕಳೆದ ವರ್ಷ ಥೈಲ್ಯಾಂಡ್‌ನಲ್ಲಿ ಡಬ್ ಆಗಿ ಬಿಡುಗಡೆಗೊಂಡ `777 ಚಾರ್ಲಿ’ ಚಿತ್ರ, ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.

ಇತ್ತೀಚೆಗೆ ಕನ್ನಡ ಸಿನಿಮಾಗಳು ಬೇರೆ ದೇಶದ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗುವುದು ಹೆಚ್ಚಾಗಿದೆ. ‘KGF’ ಹಾಗೂ ‘ಕಾಂತಾರ’ ಚಿತ್ರಗಳು ಇದೇ ರೀತಿ ಸದ್ದು ಮಾಡಿತ್ತು. 2೦22ರ ಜೂನ್ 10 ರಂದು ‘777 ಚಾರ್ಲಿ’ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಎಲ್ಲಾ ವರ್ಗದ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡ ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಕೂಡ ಲಭಿಸಿತ್ತು.

ಇದನ್ನೂ ಓದಿ: Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

ಕಥೆ ಏನು?

ಪೋಷಕರನ್ನು ಕಳೆದುಕೊಂಡು ಗೊತ್ತು ಗುರಿಯಿಲ್ಲದೇ ತನ್ನದೇ ಪ್ರಪಂಚದಲ್ಲಿ ಯಾಂತ್ರಿಕ ಬದುಕು ನಡೆಸುತ್ತಿರುವ ಧರ್ಮ. ಅಚಾನಕ್ ಆಗಿ ಆತನ ಬದುಕಿಗೆ ನಾಯಿಯೊಂದು ಎಂಟ್ರಿ ಕೊಡುತ್ತದೆ. ಕಳೆಗುಂದಿದ ಆತನ ಬದುಕಿಗೆ ಆ ನಾಯಿ ಬಣ್ಣ ತುಂಬುತ್ತದೆ. ಅದಕ್ಕೆ ‘777 ಚಾರ್ಲಿ’ ಎಂದು ನಾಮಕರಣ ಮಾಡುತ್ತಾನೆ. ಇಂಟರ್‌ವಲ್ ವೇಳೆಗೆ ಕಥೆಗೆ ತಿರುವು ಸಿಗುತ್ತದೆ.

ಅತ್ಯುತ್ತಮ ಸಿನಿಮಾ

69ನೇ ರಾಷ್ಟ್ರೀಯ ಚಲನಚಿತ್ರ (National Film Awards 2023) ಪ್ರಶಸ್ತಿ ಪ್ರಾದೇಶಿಕ ಸಿನಿಮಾ ವಿಭಾಗದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. 777 ಚಾರ್ಲಿ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವುದಕ್ಕೂ ಮೊದಲೇ ಚಿತ್ರತಂಡ ಹಲವು ಕಡೆಗಳಲ್ಲಿ ಪ್ರೀಮಿಯರ್‌ ಶೋ ಏರ್ಪಡಿಸಿತ್ತು. ಇಲ್ಲಿಯೂ ಸಹ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರದ ಪ್ರಸಾರದ ಹಕ್ಕು ಕೂಡ ಒಳ್ಳೆಯ ಮೊತ್ತಕ್ಕೆ ಮಾರಾಟವಾಗಿತ್ತು.

ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ನಟಿಸಿದ್ದರು. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರಾಗಿದ್ದು, ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ನಿರ್ದೇಶಿಸಿದ್ದರು. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನೀಡಿದ್ದು, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ ಮಾಡಿದ್ದರು. ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ ಈ ಚಿತ್ರಕ್ಕಿದೆ. ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ನೀಡಿದ್ದು, ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ನೀಡಿದ್ದರು.

Continue Reading
Advertisement
TCS World 10K
ಕ್ರೀಡೆ15 seconds ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ17 mins ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 202426 mins ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi in Sirsi
Lok Sabha Election 202444 mins ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ವೈರಲ್ ನ್ಯೂಸ್1 hour ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ1 hour ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 20242 hours ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್2 hours ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 20242 hours ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ2 hours ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 202444 mins ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ6 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌