Hostel Hudugaru Bekagiddare: ವಾರ್ಡನ್ ಕಾಟ, ಹಾಸ್ಟೆಲ್ ಹುಡುಗರ ಆಟ, ರಮ್ಯಾ ಪಾಠ, ಸಖತ್‌ ಆಗಿದೆ ಮೊದಲ ನೋಟ! Vistara News
Connect with us

South Cinema

Hostel Hudugaru Bekagiddare: ವಾರ್ಡನ್ ಕಾಟ, ಹಾಸ್ಟೆಲ್ ಹುಡುಗರ ಆಟ, ರಮ್ಯಾ ಪಾಠ, ಸಖತ್‌ ಆಗಿದೆ ಮೊದಲ ನೋಟ!

Hostel Hudugaru Bekagiddare: ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಟ್ರೈಲರ್‌ ಲಾಂಚ್ ಜುಲೈ 11ರಂದು ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಸ್ಯಾಂಡಲ್‌ವುಡ್ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದರು.

VISTARANEWS.COM


on

Hostel Hudugaru Bekagiddare Trailer Launch Poster
Koo

ಬೆಂಗಳೂರು: ಸೆಟ್ಟೇರಿದ ದಿನದಿಂದಲೂ ಭಾರೀ ಕುತೂಹಲ ಹೆಚ್ಚಿಸಿರುವ ʻಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ (Hostel Hudugaru Bekagiddare) ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಟ್ರೈಲರ್‌ ಲಾಂಚ್ ಜುಲೈ 11ರಂದು ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್‌ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಸ್ಯಾಂಡಲ್‌ವುಡ್ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದರು.

ರಿಷಬ್ ಶೆಟ್ಟಿ ಮಾತನಾಡಿ, ʻʻನನ್ನ ಶಿಷ್ಯದಿಂದರೇ ಮಾಡಿರುವ ಸಿನಿಮಾ. ಅರವಿಂದ್, ಪ್ರಜ್ವಲ್ ಇವರೆಲ್ಲರನ್ನೂ ಲೂಸಿಯಾ ಸಮಯದಿಂದಲೂ ನೋಡಿಕೊಂಡು ಬರುತ್ತಿದ್ದೇನೆ. ತುಂಬಾ ಅದ್ಭುತ ಟೆಕ್ನಿಷಿಯನ್ಸ್. ಒಂದು ಸಿನಿಮಾದ ಕಥೆ ಇದೆ ಗೆಸ್ಟ್ ಅಪಿಯರೆನ್ಸ್ ಮಾಡ್ತೀರಾ ಎಂದು ಕೇಳಿದರು. ಕಥೆ ಏನೂ ಕೇಳಿಲ್ಲ. ಒಂದು ರಾತ್ರಿಯಷ್ಟೇ ಪಾತ್ರವನ್ನು ಚಿತ್ರೀಕರಿಸಲಾಯಿತು. ಪವನ್ ಇದ್ದರು. ಶೈನ್ ಇದ್ದರು, ಬಹಳ ಅದ್ಭುತವಾಗಿ ಶೂಟಿಂಗ್ ಅನುಭವ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಒಂದು ಅದ್ಭುತ ತಂಡ. ಬೆಳೆಯುತ್ತಾ ಬೆಳೆಯುತ್ತಾ ಸಿನಿಮಾ ದೊಡ್ಡ ಸ್ಕೇಲ್ ಆಯ್ತು. 500 ಜನ ಕಲಾವಿದರನ್ನು ಕಂಪ್ಲೀಟ್ ನೈಟ್ ಸೀಕ್ವೆಲ್‌ನಲ್ಲಿ ಶೂಟ್ ಮಾಡುವುದು ತುಂಬಾ ಚಾಲೆಂಜಿಂಗ್ . ಇದೇ 21ಕ್ಕೆ ಸಿನಿಮಾ ಬರ್ತಿದೆ, ಥಿಯೇಟರ್‌ಗೆ ಬಂದು ಸಿನಿಮಾ ನೋಡಿ. ನೀವು ಖಂಡಿತ ಎಂಜಾಯ್ ಮಾಡ್ತೀರ. ಅದ್ಭುತ ಸಿನಿಮಾ ಮಾಡಿದ್ದಾರೆʼʼ ಎಂದರು.

ಧ್ರುವ ಸರ್ಜಾ ಮಾತನಾಡಿ, ʻʻಒಬ್ಬ ಪ್ರೇಕ್ಷಕನಾಗಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ನೋಡಿದ್ದೇನೆ. ಈ ಸಿನಿಮಾ ನೋಡಿದಾಗ ನಾನು ನನ್ನ ಅಣ್ಣನನ್ನು ಮಿಸ್ ಮಾಡಿಕೊಂಡೆ. ಏಳೆಂಟು ವರ್ಷ ನಾವು ಹಾಸ್ಟೆಲ್‌ನಲ್ಲಿ ಇದ್ದೆವು. ಅದನ್ನು ನೋಡಿದ ತಕ್ಷಣ ನಾವು ಹೀಗೆ ಇದ್ವಲ್ಲಾ ಅನಿಸಿತು. ನಿತಿನ್ ಅವರು ತುಂಬಾ ಚೆನ್ನಾಗಿ ಸಿನಿಮಾ ಶೂಟ್ ಮಾಡಿದ್ದಾರೆ. ನಾನು ನೋಡಿದಾಗ ರೀ ರೆಕಾರ್ಡಿಂಗ್ ಆಗಿರಲಿಲ್ಲ. ರೀ ರೆಕಾರ್ಡಿಂಗ್ ಆದ್ಮೇಲೆ ನೋಡಬೇಕೆಂಬ ಕುತೂಹಲವಿದೆ. ನಾನು ಪ್ರೀಮಿಯರ್ ಶೋ ನೋಡಲ್ಲ. ನಾನು ಫಸ್ಟ್ ಡೇ ಫಸ್ಟ್ ಶೋ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡುತ್ತೇನೆ. ಕಿರಿಕ್ ಪಾರ್ಟಿಯಂತೆ ಈ ಸಿನಿಮಾ ಕೂಡ ಸೂಪರ್ ಹಿಟ್ ಆಗಲಿʼʼ ಎಂದು ಶುಭ ಹಾರೈಸಿದರು.

ಸಿನಿಮಾದ ಟ್ರೈಲರ್‌!

ಇದನ್ನೂ ಓದಿ: Kannada New Movie: `ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ರಿಲೀಸ್‌ ಡೇಟ್‌ ರಿವೀಲ್‌

ರಕ್ಷಿತ್ ಶೆಟ್ಟಿ ಮಾತನಾಡಿ, ʻʻನಾನು ಈ ಪ್ರೋಗ್ರಾಂಗೆ ಗೆಸ್ಟ್ ಆಗಿ ಬಂದಿಲ್ಲ. ಯಾಕೆಂದರೆ ನಾನು ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದೇನೆ. ಅಪ್ಪು ಸರ್ ಏನೇ ಶುರು ಮಾಡಿದರೂ ಅದ್ಭುತ ರಿಸ್ಟಲ್ ಕೊಡುತ್ತದೆ ಎಂಬ ನಂಬಿಕೆ. ನಮ್ಮ ಪರಂವಃ ಸ್ಟುಡಿಯೋಸ್ ಆಫೀಸನ್ನು ಅವರೇ ಉದ್ಘಾಟಿಸಿದ್ದರು. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಫಸ್ಟ್ ಪೋಸ್ಟರ್ ಅವರೇ ಲಾಂಚ್ ಮಾಡಿದ್ದರು. ಈ ಸಿನಿಮಾವನ್ನು ನಾನು ಪ್ರೆಸೆಂಟ್ ಮಾಡಲು ತುಂಬಾ ಕಾರಣವಿದೆ. ನಾನು ಈ ಚಿತ್ರವನ್ನು ಎರಡು ಬಾರಿ ನೋಡಿದ್ದೇನೆ. 2 ಸಲ ನೋಡುವಾಗಲೂ ಅಷ್ಟೇ ಎಂಜಾಯ್ ಮಾಡಿದ್ದೇನೆ. ಸಿನಿಮಾವನ್ನು ಹಾಲಿವುಡ್ ರೇಂಜ್‌ಗೆ ಶೂಟ್ ಮಾಡಲಾಗಿದೆʼʼ ಎಂದರು.

ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ʻʻಅಪ್ಪು ಸರ್ ಪೋಸ್ಟರ್ ಲಾಂಚ್ ಮಾಡಿಕೊಟ್ಟಿದ್ದರು. ಅಲ್ಲಿಂದಲೇ ಜರ್ನಿ ಶುರುವಾಗಿದ್ದು, ಈ ವೇದಿಕೆ ಹತ್ತಿದ್ದೇನೆ. ಆದರೆ ಕೆಲಸ ಮಾಡಲು. ನಾನು ಟಿವಿ ಮಾಧ್ಯಮದಲ್ಲಿ ಕೆಲಸ ಮಾಡಿದವನು. ಈ ಚಿತ್ರ ಮಾಡಲು ಎರಡು ವರ್ಷ ಬೇಕಾಯ್ತು. ಮಳೆ, ಲಾಕ್ ಡೌನ್‌ನಿಂದ ಸ್ವಲ್ಪ ಲೇಟ್ ಆಯ್ತು. ಇಷ್ಟು ದಿನ ಪ್ರೋಮೋ ಬಿಟ್ಟಿದ್ದೇವೆ. ಈಗ ಟ್ರೇಲರ್ ಬಂದಿದೆ. ಈ ಮೂವೀಗೆ 1000 ಜನ ರಂಗಭೂಮಿ ಕಲಾವಿದರನ್ನು ಬಿಟ್ಟು ಸ್ಯಾಂಡಲ್ ವುಡ್ ಇಂಡಸ್ಟ್ರೀ ಸಾಥ್ ಕೊಟ್ಟಿದೆʼʼ ಎಂದು ಸಂತಸ ಹಂಚಿಕೊಂಡರು.

ಕಿರಿಕ್‌ ಮಾಡುವ ವಾರ್ಡನ್‌ ಕಾಟದಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್‌ ಹುಡುಗರು ಏನೆಲ್ಲಾ ಮಾಡುತ್ತಾರೆ. ಅದರಿಂದ ಮುಂದೆ ಏನು ಸಮಸ್ಯೆ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮೋಹಕತಾರೆ ರಮ್ಯಾ ಲೆಕ್ಚರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದಾರೆ. ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್ ಸಾಥ್ ಕೊಟ್ಟಿರುವ ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನವಿದೆ.

ಇದನ್ನೂ ಓದಿ: Kannada New Movie | ʻಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರದ ಪ್ರೊಟೆಸ್ಟ್‌ ಸಾಂಗ್‌ ರಿಲೀಸ್‌!

ಪ್ರಜ್ವಲ್ ಬಿಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕಶ್ಯಪ್ ಹಾಗೂ ಇನ್ನಿತರರು ಜತೆಗೆ ಸೇರಿ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದು, ಇದೇ 21ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Vijay Sethupathi: ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!

2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು.

VISTARANEWS.COM


on

Edited by

Vijay Sethupathi Krithi Shetty
Koo

ಬೆಂಗಳೂರು: ವಿಜಯ್ ಸೇತುಪತಿ (Vijay Sethupathi) ಸದ್ಯ ʻಜವಾನ್‌ʼ ಸಿನಿಮಾದ ಸಕ್ಸಸ್​​ ಮೂಡ್‌ನಲ್ಲಿ ಇದ್ದಾರೆ. ಬಹುಭಾಷಾ ನಟ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಅವರು ಬ್ಯುಸಿಯಾಗಿದ್ದಾರೆ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್‌ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ.

2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು. ಹೀಗಾಗಿ ಒಂದು ಸಿನಿಮಾದಲ್ಲಿ ಮಗಳಂತೆ ನೋಡಿದ ನಟಿಯ ಜತೆ ಮತ್ತೊಂದು ಸಿನಿಮಾದಲ್ಲಿ ರೊಮ್ಯಾನ್ಸ್ ಮಾಡುವುದಿಲ್ಲ ಎಂಬುದಾಗಿ ಸೇತುಪತಿ ಹೇಳಿದ್ದಾರೆ. ತಮ್ಮಿಬ್ಬರನ್ನು ನಾಯಕ-ನಾಯಕಿಯನ್ನಾಗಿಸಿ ತಮಿಳು ಸಿನಿಮಾವೊಂದನ್ನು ಮಾಡುವುದಕ್ಕೆ ಆಫರ್‌ ಬಂದರೂ ವಿಜಯ್‌ ನಿರಾಕರಿಸಿದ್ದಾರೆ.

ಈ ಬಗ್ಗೆ ವಿಜಯ್​ ಸೇತುಪತಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ʻಒಮ್ಮೆ ಮಗಳೆಂದು ಕಲ್ಪಿಸಿಕೊಂಡ ನಟಿಯ ಜತೆಗೆ ನಾನು ಹೇಗೆ ರೊಮ್ಯಾನ್ಸ್ ಮಾಡಲಿ? ಉಪ್ಪೆನ ಸಿನಿಮಾದ ಕ್ಲೈಮ್ಯಾಕ್ಸ್‌ ಶೂಟಿಂಗ್ ಮಾಡುವಾಗ, ನನ್ನನ್ನು ನಿನ್ನ ತಂದೆ ಎಂದು ಕಲ್ಪಿಸಿಕೋ ಎಂದು ಕೃತಿಗೆ ಹೇಳಿದ್ದೆ. ಆ ಸಿನಿಮಾ ಮಾಡುವಾಗ ನನ್ನ ಮಗನಷ್ಟೇ ಕೃತಿಗೂ ವಯಸ್ಸು. ನಾನು ಕೂಡ ಕೃತಿಯನ್ನು ಮಗಳಂತೆ ಭಾವಿಸಿದ್ದೇನೆ. ಹೀಗಿರುವಾಗ ಕೃತಿ ಜತೆಗೆ ರೊಮ್ಯಾನ್ಸ್ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vijay Sethupathi: ‘ಮಹಾರಾಜʼಫಸ್ಟ್‌ ಲುಕ್‌ ಔಟ್‌; 50ನೇ ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಮಿಂಚಿದ ವಿಜಯ್‌ ಸೇತುಪತಿ!

50ನೇ ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಮಿಂಚಿದ ವಿಜಯ್‌ ಸೇತುಪತಿ

ಸದ್ಯ ವಿಜಯ್‌ ಸೇತುಪತಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್‌ ಸೇತುಪತಿ ಅವರ ‘ಮಹಾರಾಜ’ ಸಿನಿಮಾದ (Maharaja first Look Out) ಫಸ್ಟ್-ಲುಕ್ ಪೋಸ್ಟರ್ ಅನಾವರಣಗೊಂಡಿದೆ. ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ.

ಮಹಾರಾಜ’ ಸಿನಿಮಾದ ಫಸ್ಟ್-ಲುಕ್‌ನಲ್ಲಿ ವಿಜಯ್‌ ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ. ಚೇರ್‌ನಲ್ಲಿ ಚಾಕು ಹಿಡಿದು ರಕ್ತಸಿಕ್ತರಾಗಿ ಗಂಭೀರದಿಂದ ಕೂತಿದ್ದಾರೆ ವಿಜಯ್‌. ಸುತ್ತಲೂ ಪೊಲೀಸ್ ಅಧಿಕಾರಿಗಳು ನಿಂತಿದ್ದಾರೆ. ನಟ ವಿಜಯ್ ಅವರ ಎಡ ಭಾಗದ ಕಿವಿಗೆ ಬ್ಯಾಂಡೆಜ್ ಹಾಕಲಾಗಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ.


Continue Reading

South Cinema

Silk Smitha: ಸಿಲ್ಕ್​ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!

Silk Smitha:  ಸಿಲ್ಕ್​ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎಂಬ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹೇಳಿಕೆ ಮತ್ತೆ ವೈರಲ್‌ ಆಗುತ್ತಿದೆ.

VISTARANEWS.COM


on

Edited by

Silk Smitha
Koo

ಬೆಂಗಳೂರು: ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ ಸಿಲ್ಕ್‌ ಸ್ಮಿತಾ (Silk Smitha) ಮೂಲ ಹೆಸರು ವಿಜಯಲಕ್ಷ್ಮಿ. 1960ರ ಡಿಸೆಂಬರ್ 2ರಂದು ಜನಿಸಿದರು. ಆ ನಂತರದ ದಿನಗಳಲ್ಲಿ ಸಿಲ್ಕ್ ಸ್ಮಿತಾ ಎಂದೇ ಫೇಮಸ್ ಆದರು.  ಸೆಪ್ಟೆಂಬರ್​ 23 ನಟಿ ಸಿಲ್ಕ್​ ಸ್ಮಿತಾ ಅವರ 27ನೇ ಪುಣ್ಯತಿಥಿ. ಇದೀಗ ಕಾಲಿವುಡ್​ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹಳೆಯ ಹೇಳಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಲ್ಕ್​ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಅವರ ಹೇಳಿಕೆ ಮತ್ತೆ ವೈರಲ್‌ ಆಗುತ್ತಿದೆ.

ಸಿಲ್ಕ್ ಸ್ಮಿತಾ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ ಮತ್ತು ಅದಕ್ಕಾಗಿಯೇ ಸಿಲ್ಕ್ ಬಾಲ್ಯದಲ್ಲಿ ತಮ್ಮ ಓದನ್ನು ಬಿಡಬೇಕಾಯಿತು. ವರದಿಗಳ ಪ್ರಕಾರ, ಸಿಲ್ಕ್ ಸ್ಮಿತಾ ಅವರು ಕೇವಲ 14 ವರ್ಷದವರಾಗಿದ್ದಾಗ ಮದುವೆಯಾಗಿದ್ದರು ಮತ್ತು ಅವರು ಸಾಕಷ್ಟು ಕೌಟುಂಬಿಕ ಹಿಂಸೆಯನ್ನು ಎದುರಿಸಿದರು. ಸಿಲ್ಕ್ ಸ್ಮಿತಾ ತಮ್ಮ ಗಂಡನ ಮನೆಯಿಂದ ಓಡಿಹೋದ ನಂತರ ಮೇಕಪ್ ಕಲಾವಿದನಾಗಿದ್ದ ತಮ್ಮ ಸ್ನೇಹಿತನ ಮನೆ ಸೇರಿಕೊಂಡಿದ್ದರು. ಮೇಕಪ್ ಕಲಾವಿದರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ನಂತರ ತಮಿಳು ನಿರ್ದೇಶಕ ವಿನು ಚಕ್ರವರ್ತಿ ಅವರು ಸಿಲ್ಕ್ ಸ್ಮಿತಾಗೆ ದೊಡ್ಡ ಬ್ರೇಕ್ ನೀಡಿದರು. 1979ರಲ್ಲಿ ತಮಿಳು ಚಲನಚಿತ್ರ ‘ವಂದಿಚಕ್ಕರಂ’ನಲ್ಲಿನ ಅವರ ಅದ್ಭುತ ಅಭಿನಯಕ್ಕಾಗಿ ಮೊದಲ ಬಾರಿಗೆ ಗಮನ ಸೆಳೆದರು. ಸಿಲ್ಕ್ ಸ್ಮಿತಾ ಅವರು 17 ವರ್ಷಗಳ ಕಾಲ ನಟಿಯಾಗಿ, ನೃತ್ಯಗಾತಿಯಾಗಿ ಮಿಂಚಿದರು. 450ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು. ಸೆಪ್ಟೆಂಬರ್ 23, 1996ರಂದು ತಮ್ಮ 35ನೇ ವಯಸ್ಸಿನಲ್ಲಿ ನಿಗೂಢವಾಗಿ ಮೃತಪಟ್ಟರು. ಪೊಲೀಸರಿಗೆ ಸೂಸೈಡ್ ನೋಟ್ ಸಿಕ್ಕಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Silk Smitha: ಜ್ಯೂನಿಯರ್‌ ಸಿಲ್ಕ್‌ ಸ್ಮಿತಾ ಕಂಡು ಸಿನಿ ಪ್ರೇಮಿಗಳು ಥ್ರಿಲ್‌; ʻಹಳ್ಳಿ ಮೇಷ್ಟ್ರೇʼ ಬೇಗ ಬನ್ನಿ ಅಂದ್ರು ನೆಟ್ಟಿಗರು!

Bayilvan Ranganathan

ನಟಿ ಕಾಮಪ್ರಚೋದಕ ದೃಶ್ಯಗಳಲ್ಲಿ ನಟಿಸಿ ಫೇಮಸ್ಸಾದ ಕಾರಣ ಅಭಿಮಾನಿಗಳ ಸಂಖ್ಯೆ ಹೆಚ್ಚಿನ ರೀತಿಯಲ್ಲಿ ಇತ್ತು. ಒಮ್ಮೆಯಾದರೂ ಈ ನಟಿಯನ್ನು ನೇರವಾಗಿ ನೋಡಿ ಕಣ್ತುಂಬಿಸಿಕೊಳ್ಳಬೇಕು ಎಂದುಕೊಂಡವರೇ ಹೆಚ್ಚು. ಇದ್ದಕ್ಕಿದ್ದಂತೆ ನಟಿ ಬಾರದ ಲೋಕಕ್ಕೆ ಹೋಗುತ್ತಾರೆ. ʻʻಶವದೊಂದಿಗೆ ಅತ್ಯಾಚಾರ ಮಾಡಲಾಗಿತ್ತು. ಶವಾಗಾರದಲ್ಲಿ ನಟಿಯ ನೌಕರರು ಕುಡಿದ ಅಮಲಿನಲ್ಲಿ ಇರುತ್ತಾರೆ. ಅಲ್ಲಿನ ಹೆಚ್ಚು ನೌಕರರು ಬೆಳಗ್ಗೆ ಕೆಲಸ ಆರಂಭಿಸಿದಾಗಿನಿಂದ ಕುಡಿದಿರುತ್ತಾರೆ. ಇದೇ ಅಮಲಿನಲ್ಲಿ ಕುಡಿದು ಪ್ರಜ್ಞಾಹೀನರಾಗಿರುವ ನೌಕರರು ಹಲವು ಬಾರಿ ಸಿಲ್ಕ್ ಸ್ಮಿತಾ ಅವರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆʼʼ ಎಂದಿದ್ದಾರೆ ಬೈಲ್ವಾನ್ ರಂಗನಾಥನ್. ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದಾಗ ಶವ ಪರೀಕ್ಷೆ ನಡೆದ ಸ್ಥಳಕ್ಕೆ ಹೋಗಿ ಖುದ್ದು ನೋಡಿದ್ದೆ ಎನ್ನುವ ಅವರ ಮಾತು ಇದೀಗ ಮತ್ತೆ ವೈರಲ್‌ ಆಗಿದೆ.

Continue Reading

South Cinema

Kamal Haasan: ಕಮಲ್ ಹಾಸನ್ ಜನುಮದಿನಕ್ಕೆ ಮತ್ತೊಂದು ಸೂಪರ್‌ ಹಿಟ್‌ ಸಿನಿಮಾ ಮರು ಬಿಡುಗಡೆ!

Kamal Haasan: ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ .’ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.

VISTARANEWS.COM


on

Edited by

Kamal Haasan Nayakan
Koo

ಬೆಂಗಳೂರು: ಮಣಿರತ್ನಂ ನಿರ್ದೇಶನದ ಕಮಲ್ ಹಾಸನ್ (Kamal Haasan starrer Nayakan) ಅಭಿನಯದ `ನಾಯಕನ್’ ನವೆಂಬರ್ 3ರಂದು ಚಿತ್ರಮಂದಿರಗಳಲ್ಲಿ ಮರು-ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಜನುಮದಿನದ ಪ್ರಯುಕ್ತ ಈ ಸಿನಿಮಾ ರಿ ರಿಲೀಸ್‌ ಆಗುತ್ತಿದೆ. ಈ ಸಿನಿಮಾದಲ್ಲಿ ಶರಣ್ಯ ಮತ್ತು ಕಾರ್ತಿಕಾ ಕೂಡ ಕಾಣಿಸಿಕೊಂಡಿದ್ದರು. ಜನಗರಾಜ್, ವಿಜಯನ್, ಎಂ.ವಿ. ವಾಸುದೇವ ರಾವ್, ದೆಹಲಿ ಗಣೇಶ್, ನಿಜಲ್ಗಲ್ ರವಿ, ನಾಸರ್ ಮತ್ತು ತಾರಾ ಪೋಷಕ ಪಾತ್ರಗಳಲ್ಲಿದ್ದಾರೆ. ʻನಾಯಕನ್ʼ ಸಿನಿಮಾವು ಹಾಲಿವುಡ್ ಕ್ಲಾಸಿಕ್ ‘ದಿ ಗಾಡ್‌ಫಾದರ್’ ನಿಂದ ಪ್ರೇರಿತವಾಗಿದ್ದು, ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ. ‘ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.

ಚಲನಚಿತ್ರ ಮಂದಿರಗಳಲ್ಲಿ ಇತ್ತೀಚೆಗೆ ಹೀರೊಗಳ ಹಳೆಯ ಸೂಪರ್‌ ಹಿಟ್‌ ಸಿನಿಮಾಗಳನ್ನು ಮರು-ಬಿಡುಗಡೆ ಮಾಡುವುದು ಕಾಮನ್‌ ಆಗಿದೆ. ಹೊಸ ಚಲನಚಿತ್ರಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗುತ್ತಿರುವ ಕಾರಣ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳಿಗೆ ಕರೆತರಲು ಹಿಂದಿನ ಜನಪ್ರಿಯ ತಾರೆಯರ ಜನ್ಮ ವಾರ್ಷಿಕೋತ್ಸವದಂದು ವಿಶೇಷ ಪ್ರದರ್ಶನಗಳನ್ನು ನಡೆಸುತ್ತಿವೆ.

‘ನಾಯಕನ್’ ಸಿನಿಮಾ ವಿತರಕರು ಇತ್ತೀಚೆಗೆ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾವನ್ನು ತಮಿಳುನಾಡು, ಕರ್ನಾಟಕ ಮತ್ತು ಕೇರಳದಾದ್ಯಂತ ಎಲ್ಲ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಸೂಪರ್ ಹಿಟ್ ಚಿತ್ರ ‘ನಾಯಕನ್’ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 1988ರಲ್ಲಿ ಆಸ್ಕರ್ ಪ್ರಶಸ್ತಿಗಳಿಗಾಗಿ ನಾಮೀನೇಟ್ ಆಗಿತ್ತು.

“ನಾವು ಈ ಹಿಂದೆ ಹಳೆಯ ಹಿಟ್ ಚಿತ್ರಗಳ ಪ್ರದರ್ಶನವನ್ನು ಆಯೋಜಿಸಿದ್ದೇವೆ. ಆದರೆ ಅದು ಸೀಮಿತ ಪ್ರಮಾಣದಲ್ಲಿ ಇತ್ತು. ಆದ್ದರಿಂದ ಕಾರ್ಯಸಾಧ್ಯವಾಗಿರಲಿಲ್ಲ. ಅಮಿತಾಭ್‌ ಬಚ್ಚನ್ ಅವರ ಸಿನಿಮಾಗಳೂ ಮತ್ತೆ ಮರು ಬಿಡುಗಡೆಯಾದಾಗ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದ್ದರಿಂದ ನಾವು ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆವುʼʼ ಎಂದು INOX ಲೀಸರ್‌ನ ಮುಖ್ಯ ಪ್ರೋಗ್ರಾಮಿಂಗ್ ಅಧಿಕಾರಿ ರಾಜೇಂದ್ರ ಸಿಂಗ್ ಜ್ಯಾಲಾ ಹಿಂದಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

ಕಮಲ್‌ ಕೈಯಲ್ಲಿ ಸಾಲು ಸಾಲು ಸಿನಿಮಾಗಳು

ಸದ್ಯ ಕಮಲ್‌ ಅವರ ಕೈಯಲ್ಲಿ ನಾಲ್ಕು ಪ್ರಾಜೆಕ್ಟ್‌ಗಳಿವೆ. ಅವುಗಳಲ್ಲಿ ಯಾವುದೂ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ನಾಗ್ ಅಶ್ವಿನ್ ಅವರ ಮುಂದಿನ ಚಿತ್ರ ಕಲ್ಕಿಯಲ್ಲಿ (Kalki cinema) ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅಮಿತಾಭ್ ಬಚ್ಚನ್, ಪ್ರಭಾಸ್, ದೀಪಿಕಾ ಪಡುಕೋಣೆ ಇತರ ಪ್ರಮುಖ ತಾರೆಗಳು ಇದ್ದಾರೆ. ಎಸ್ ಶಂಕರ್ ಅವರ 1996ರ ಚಲನಚಿತ್ರದ ಮುಂದುವರಿದ ಭಾಗವಾದ ಇಂಡಿಯನ್-2 ಸಿನಿಮಾದಲ್ಲಿಯೂ ಕಮಲ್‌ ಇದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಸಹ ನಡೆಯುತ್ತಿದೆ. ಇವುಗಳ ಹೊರತಾಗಿ H. ವಿನೋದ್ ಅವರೊಂದಿಗೆ ಒಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ, ಇದು ತಾತ್ಕಾಲಿಕವಾಗಿ ʻKH233- ರೈಸ್ ಟು ರೂಲ್ʼ ಎಂದು ಹೆಸರಿಸಲಾಗಿದೆ. ಕಮಲ್ ಹಾಸನ್ ಅವರು KH234ಗಾಗಿ 37 ವರ್ಷಗಳ ನಂತರ ಮಣಿರತ್ನಂ ಅವರೊಂದಿಗೆ ಮತ್ತೆ ಒಂದಾಗುತ್ತಿದ್ದಾರೆ. ಇದರಲ್ಲಿ ದುಲ್ಕರ್ ಸಲ್ಮಾನ್, ತ್ರಿಷಾ ಮತ್ತು ಜಯಂ ರವಿ ಕೂಡ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.

Continue Reading

South Cinema

Parineeti Chopra: ಮದುವೆಯಲ್ಲಿ ಫೋನ್‌, ಕ್ಯಾಮೆರಾಗಳಿಗೆ ಟೇಪ್‌, 100 ಭದ್ರತಾ ಸಿಬ್ಬಂದಿ!

Parineeti Chopra: ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

VISTARANEWS.COM


on

Edited by

Parineeti Chopra Wedding
Koo

ಬೆಂಗಳೂರು: ಸೆಪ್ಟೆಂಬರ್ 24ರಂದು ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ (Parineeti Chopra) ಹಾಗೂ ಆಮ್‌ ಆದ್ಮಿ ಪಕ್ಷದ ಸಂಸದ ರಾಘವ್‌ ಚಡ್ಡಾ (Raghav Chadha) ಅವರ ವಿವಾಹ ಉದಯಪುರದಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಈಗಾಗಲೇ ಜೋಡಿ ಉದಯಪುರಕ್ಕೆ (Parineeti Chopra wedding) ತಲುಪಿದೆ. ಸದ್ಯ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ವಿವಾಹದಲ್ಲಿ 100 ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲ, ಮದುವೆಯಲ್ಲೂ ಕಟ್ಟುನಿಟ್ಟಿನ ಭದ್ರತಾ ನಿಯಮಗಳಿವೆ. ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

ಹೋಟೆಲ್ ಮೂಲಗಳ ಪ್ರಕಾರ, ಮದುವೆಯ ಸಿದ್ಧತೆಗಳ ಜತೆಗೆ ಕಾರ್ಯಕ್ರಮದ ಫೋಟೊಗಳು ಮತ್ತು ವಿಡಿಯೊಗಳು ಲೀಕ್‌ ಆಗದ್ದಂತೆ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ. ಹೋಟೆಲ್‌ಗೆ ಪ್ರವೇಶಿಸುವವರ ಮೊಬೈಲ್ ಕ್ಯಾಮೆರಾಗಳಿಗೆ ನೀಲಿ ಬಣ್ಣದ ಟೇಪ್ ಅನ್ನು ಅಂಟಿಸಲಾಗುತ್ತದೆ. ಇದರಿಂದ ಅವರು ಮದುವೆ ಸಮಾರಂಭದಲ್ಲಿ ಯಾವುದೇ ವೀಡಿಯೊ-ಫೋಟೋಗ್ರಾಫ್ ತೆಗೆದುಕೊಳ್ಳುವಂತಿಲ್ಲ. ಈ ನೀಲಿ ಟೇಪ್‌ನ ವಿಶೇಷತೆ ಏನೆಂದರೆ, ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಅಳವಡಿಸಿದ ನಂತರ ಯಾರಾದರೂ ಅದನ್ನು ತೆಗೆದರೆ, ಟೇಪ್‌ನಲ್ಲಿ ಬಾಣದ ಚಿಹ್ನೆ ಗೋಚರಿಸುತ್ತದೆ. ಸೆಕ್ಯೂರಿಟಿ ಅವರು ಪರಿಶೀಲಿಸಿದಾಗ ಕ್ಯಾಮೆರಾ ಬಳಸಲು ಟೇಪ್ ತೆಗೆದಿರುವುದು ಗೊತ್ತಾಗಿ ಬಿಡುತ್ತದೆ. ಈ ನಿರ್ಬಂಧವು ವಿಶೇಷವಾಗಿ ಹೋಟೆಲ್ ಸಿಬ್ಬಂದಿಗೆ, ಬಾಣಸಿಗರಿಗೆ ಅನ್ವಯಿಸುತ್ತದೆ. ಕರಣ್ ಜೋಹರ್, ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಡಿಸೈನರ್ ಮನೀಶ್ ಮಲ್ಹೋತ್ರಾ ಅವರಂತಹ ಸೆಲೆಬ್ರಿಟಿಗಳು ಇಂದೇ (ಸೆ. 23) ಉದಯಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Parineeti Chopra; ನಾಳೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಅದ್ಧೂರಿ ಮದುವೆ; ಭರ್ಜರಿ ಸಿದ್ಧತೆ!

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷ ಮೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆಗೆ 20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.

ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ಚಮ್ಕೀಲಾ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್‌ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.

Continue Reading
Advertisement
Raja Marga world heart day
ಅಂಕಣ8 mins ago

Raja Marga Column : ಮೊದಲು ನಿಮ್ಮ ಹೃದಯವನ್ನು ನೀವು ಪ್ರೀತಿಸಿ, ಬೇರೆಯವರ ಹೃದಯ ಆಮೇಲೆ ನೋಡ್ಕೊಳೋಣ!

Sudha Murty
ಕರ್ನಾಟಕ36 mins ago

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

Cauvery water Dispute
ಕರ್ನಾಟಕ49 mins ago

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Bus Accident In Raichur
ಕರ್ನಾಟಕ1 hour ago

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

DUSU Election Result
ದೇಶ2 hours ago

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

fruits and cold cough
ಆರೋಗ್ಯ2 hours ago

Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

new kannada book yabli
ಕಲೆ/ಸಾಹಿತ್ಯ2 hours ago

Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

cryptocurrency fraud
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಅಳಿವಿನ ಅಂಚಿನಲ್ಲಿ ಝಣ ಝಣ ಕಾಂಚಾಣ!

pak human right
ಕ್ರಿಕೆಟ್3 hours ago

ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್‌ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

ಟ್ರೆಂಡಿಂಗ್‌