Actor Nagabhushana: ಅಪಘಾತದಿಂದಲೇ ಅಪ್ಪನನ್ನು ಕಳೆದುಕೊಂಡಿದ್ದೆ; ವೇದಿಕೆ ಮೇಲೆ ನಾಗಭೂಷಣ ಕಣ್ಣೀರು! - Vistara News

South Cinema

Actor Nagabhushana: ಅಪಘಾತದಿಂದಲೇ ಅಪ್ಪನನ್ನು ಕಳೆದುಕೊಂಡಿದ್ದೆ; ವೇದಿಕೆ ಮೇಲೆ ನಾಗಭೂಷಣ ಕಣ್ಣೀರು!

Actor Nagabhushana: ನಟ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಾತನಾಡಿದ್ದಾರೆ. ಘಟನೆಯ ಬಗ್ಗೆ ಕಣ್ಣೀರಿಟ್ಟು ಹಲವು ವಿಚಾರಗಳನ್ನು ಹಂಚಿಕೊಂಡರು.

VISTARANEWS.COM


on

Nagabhushana actor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಟ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನ ವಸಂತನಗರ ಮುಖ್ಯರಸ್ತೆ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುವಾಗ ನಾಗಭೂಷಣ ಕಾರು ಡಿಕ್ಕಿಯಾಗಿತ್ತು. ಇದಾದ ಬಳಿಕ ನಟ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಾತನಾಡಿದ್ದಾರೆ. ಘಟನೆಯ ಬಗ್ಗೆ ಕಣ್ಣೀರಿಟ್ಟು ಹಲವು ವಿಚಾರಗಳನ್ನು ಹಂಚಿಕೊಂಡರು.

ಈ ಮುಂಚೆಯೇ ಮಾತನಾಡಬೇಕಿತ್ತು

ನಾಗಭೂಷಣ್ ಮಾತನಾಡಿ ʻʻಅಪಘಾತ ವಿಚಾರವಾಗಿ ಈ ಮುಂಚೆಯೇ ನಾನು ಮಾತನಾಡಬೇಕಿತ್ತು. ಸ್ವಲ್ಪ ಸಮಯ ತಗೆದುಕೊಂಡೆ. ನನಗೆ ಈ ನೋವಿನಿಂದ ಹೊರಬರಲು ಆಗುತ್ತಿರಲಿಲ್ಲ. ಸಮಯ ಬೇಕಿತ್ತು. ಹಿಟ್ ಅಂಡ್ ರನ್ ಕೇಸ್ ಅಲ್ಲಾ ಇದು. ಆಕ್ಸಿಡೆಂಟ್ ಆಗಿದ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಕಾನೂನು ಪ್ರಕ್ರಿಯೆಗೆ ಸಹಕರಿಸಿದ್ದೇನೆʼʼಎಂದರು.

ʻʻಗೌರಿ ಹಬ್ಬದಲ್ಲಿ ನನ್ನ ತಂದೆ ಅಪಘಾತದಲ್ಲಿ ತೀರಿಕೊಂಡರು. ಆ ನೋವು ಏನು ಅಂತ ನನಗೂ ಅನುಭವ ಆಗಿದೆ. ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೆ’ ಎಂದರು.

ಆ ಕುಟಂಬದವರ ಜತೆ ನನ್ನವರು ಸಂಪರ್ಕದಲ್ಲಿದ್ದಾರೆ

ನಟ ಅಳುತ್ತಲೇ ಮಾತು ಮುಂದುವರಿಸಿ ʻʻಅಪಘಾತ ಒಳಗಾದ ಕುಟುಂಬದವರನ್ನು ಏನು ಅಂತ ಹೋಗಿ ಮಾತಾಡಿಸಲಿ. ನನ್ನಿಂದ ಏನಾದರೂ ಸಹಾಯ ಅವರಿಗೆ ಬೇಕಿದ್ದರೆ ಖಂಡಿತ ಮಾಡುತ್ತೇನೆ. ನಮ್ಮವರು ಆ ಕುಟುಂಬದವರ ಜತೆ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ: Actor Nagabhushana: ನಾಗಭೂಷಣ ಕಾರು ಅಪಘಾತ; ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ!

ಏನಿದು ಘಟನೆ?

ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಟ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಂಗಳೂರಿನ ವಸಂತನಗರ ಮುಖ್ಯರಸ್ತೆ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುವಾಗ ನಾಗಭೂಷಣ ಕಾರು ಡಿಕ್ಕಿಯಾಗಿತ್ತು.

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿತ್ತು. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿ, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿತ್ತು ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Tharun Sudhir: ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

VISTARANEWS.COM


on

Tharun Sudhir sonal monteiro marriage update
Koo

ಬೆಂಗಳೂರು: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗುವುದು ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಮಾಲತಿ ಸುಧೀರ್, ತಮ್ಮ ಮಗ ತರುಣ್ ಮದುವೆಯಾಗುತ್ತಿರುವ ವಿಚಾರ ನಿಜ ಎಂದಿದ್ದಾರೆ. ಆದರೆ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ಈಗ ಆಷಾಢ ಬಂತು. ಮಾತಾಡಲು ಆಗಲ್ಲ. ಆಷಾಢ ಮುಗಿದ್ಮೇಲೆ ಮಾತುಕತೆ ಮಾಡಬೇಕು ಅಂದಿದ್ದಾರೆ.

ಈ ಬಗ್ಗೆ ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಮಾತನಾಡಿ ʻʻಮದುವೆಯಾಗತ್ತೆ. ಡೇಟ್‌ ಎಲ್ಲ ಫಿಕ್ಸ್‌ ಆಗಿಲ್ಲ. ಸೋನಲ್‌ ರಿಲೇಶನ್‌ ಎಲ್ಲ ದುಬೈನಲ್ಲಿ ಇದ್ದಾರೆ. ಅವರು ಎಲ್ಲ ಬರಬೇಕು. ಮಾತನಾಡಬೇಕು. ಎಲ್ಲ ಆದ ಮೇಲೆನೆ ಫೈನಲ್‌ ಆಗೋದು. ನಮ್ಮ ಮನೆಗೆ ಯಾರು ಬಂದರು ಸಂತೋಷ್.‌ ಮೊದಲಿಂದಲೂ ನನ್ನ ಮಗನಿಗೆ ಮದುವೆ ಆಗಬೇಕು ಎಂದಿತ್ತು. ಇನ್ನೂ ನಾನಿರುವಾಗಲೇ ಮಗನಿಗೆ ಮದುವೆ ಮಾಡಬೇಕು ಅನ್ನುವುದು ನನ್ನ ಆಸೆಯಾಗಿತ್ತು ಎಂದಿರುವ ಮಾಲತಿ ಸುಧೀರ್‌, ಆಗಸ್ಟ್‌ನಲ್ಲಿ ಮದುವೆ ಅನ್ನೋದು ಸುಳ್ಳು. ಡೇಟ್ ಇನ್ನೂ ಫಿಕ್ಸ್ ಆಗಿಲ್ಲ. ಇನ್ನೂ ಕನ್‌ಫರ್ಮ್ ಆಗಿಲ್ಲ ಎಂದು ಹೇಳಿದ್ದಾರೆ.

‘ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಹೆಣ್ಣುಮಕ್ಕಳ ಶಾಪ ತಟ್ಟಿದ್ರೆ ಏನಾಗತ್ತೆ ಅನ್ನೋದಕ್ಕೆ ದರ್ಶನ್‌ ಕೇಸ್‌ ಸಾಕ್ಷಿ ಎಂದ ವಿ ಮನೋಹರ್‌!

Actor Darshan: ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Darshan V Manohar About Darshan
Koo

ಬೆಂಗಳೂರು: ಕೊಲೆ ಕೇಸ್ ದರ್ಶನ್ ಅರೆಸ್ಟ್ (Actor Darshan) ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಕೇಸ್ ಬಗ್ಗೆ ಕೆಲವರು ಅಭಿಪ್ರಾಯ ಹಂಚಿಕೊಂಡರೆ ಇನ್ನೂ ಕೆಲವರು ಮೌನವಹಿಸಿದ್ದಾರೆ. ಸಂಗೀತ ಸಂಯೋಜಕ ವಿ. ಮನೋಹರ್ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ.  

ಸಂಗೀತ ನಿರ್ದೇಶಕ ವಿ ಮನೋಹರ್ ಮಾತನಾಡಿ ʻʻಇದೊಂದು ಆಕಸ್ಮಿಕ.ಇದು ಬೇಕು ಅಂತ ಯಾರು ಮಾಡಿರಲ್ಲ. ಎಷ್ಟೋ ಸಾವಿರಾರು ಹೆಣ್ಣುಮಕ್ಕಳ ಶಾಪ ತಟ್ಟಿದಾಗ ಏನಾಗತ್ತೆ ಅನ್ನೋದನ್ನ ಈ ಘಟನೆಯಿಂದ ತಿಳ್ಕೊಬೇಕು. ಹೆಣ್ಣು ಮಕ್ಕಳು ಅಂದರೆ ಅಷ್ಟು ಕೇವಲವೇ? ಒಂದೊಂದು ಮೆಸೇಜಸ್ ನೋಡಿದ್ರೆ ತುಂಬಾ ಕೆಟ್ಟ ಮೆಸೇಜಸ್. ರೇಣುಕಾಸ್ವಾಮಿ ತರ ಇನ್ನೂ ಒಂದಷ್ಟು ಜನ ಇದ್ದಾರೆ. ನಾನು ಸೈಬರ್ ಕ್ರೈಂ ಪೊಲೀಸರಲ್ಲಿ ಮನವಿ ಮಾಡ್ತೇನೆ. ಇಂತವರನ್ನು ಹುಡುಕಿ ಶಿಕ್ಷೆ ಕೊಡಿ ತರಹದ ಘಟನೆಗಳು ತಪ್ಪತ್ತೆ. ಈ ಘಟನೆಯಲ್ಲಿ ಕೊಲೆಯಾಗಿರುವ ರೇಣುಕಾಸ್ವಾಮಿ ವಿರುದ್ಧ ಮೂರು ತಿಂಗಳ ಹಿಂದೆಯೇ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ರು ಕೂಡ. ಪೊಲೀಸರು ಯಾಕೆ ಆಕ್ಷನ್ ತೆಗೆದುಕೊಂಡಿಲ್ಲ ಅನ್ನೋದು ವಿಚಿತ್ರ. ಮೊದ್ಲೇ ಆಕ್ಷನ್ ತಗೊಂಡಿದ್ರೆ ಒಳ್ಳೆಯದಿರುತ್ತಿತ್ತು. ಅವನ ಪಾಪದ ಕೊಡ ತುಂಬಿತು ಅವ್ನು ಸರಿಯಾಗಿ ಅನುಭವಿಸಿದ. ದರ್ಶನ್ ಅವರ ಜೀವನದಲ್ಲಿ ಇದು ಆಗಬಾರದಿತ್ತು. ಸ್ನೇಹಿತರಾಗಿ ನಾನು ದರ್ಶನ್ ಅವ್ರಿಗೆ ಈ ಕಳಂಕದಿಂದ ಹೊರಗೆ ಬರ್ಲಿ ಅಂತ ಹಾರೈಸುತ್ತೇನೆ. ಮತ್ತೆ ಮೊದಲಿನಂತೆ ಇನ್ನೊಂದು ಅಷ್ಟು ಸಿನಿಮಾಗಳು ಮಾಡಲಿ. ದರ್ಶನ್ ಸಿನಿಮಾ ಅಂದರೆ ನೂರಾರು ಜನ ಕೆಲ್ಸ ಮಾಡ್ತಾರೆ. ನೂರಾರು ಜನಕ್ಕೆ ಅನ್ನ ಸಿಗತ್ತೆʼʼಎಂದರು.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ರೇಣುಕಾಸ್ವಾಮಿ ಮುಗ್ಧನಲ್ಲ, ಆತ ವಿಕೃತಕಾಮಿ. ದರರ್ಶನ್ ಅವರ ಬಗ್ಗೆ ನಾನು ಯಾವುದೇ ನೆಗೆಟಿವ್ ಹೇಳಿಕೆ ನೀಡಲ್ಲ. ಮುಂದಿನ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಾಮಿಸ್ ಮಾಡಿದ್ದರು. ಇದಾದ ಕೆಲವೇ ದಿನಕ್ಕೆ ಅವರು ಬಂಧನಕ್ಕೆ ಒಳಗಾದರು ಎಂದರು.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

Continue Reading

ಟಾಲಿವುಡ್

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

Kalki 2898 AD: ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

VISTARANEWS.COM


on

Kalki 2898 AD Box Office Collection Day Deepika Padukone's Film
Koo

ಬೆಂಗಳೂರು: :  ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 625 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಆರನೇ ದಿನದ ಗಳಿಕೆಯ ಲೆಕ್ಕಾಚಾರ ಸಿಕ್ಕಿದೆ.

ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿತ್ತು. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿತ್ತು.

ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿತ್ತು. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

Continue Reading

Latest

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

Tamanna Bhatia: ನಟಿ ತಮನ್ನಾ ಭಾಟಿಯಾ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಈ ಸರಣಿಯಲ್ಲಿನ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟಕ್ಕೆ ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Tamanna Bhatia
Koo


ಮುಂಬೈ: ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಪಡೆದಿರುವ ನಟಿ ತಮನ್ನಾ ಭಾಟಿಯಾ (Tamanna Bhatia )ಅವರು ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ತೆರೆಯ ಮೇಲೆ ಕಿಸ್ ಮಾಡುವುದಿಲ್ಲ ಎಂದಿದ್ದ ನಟಿ ‘ಲಸ್ಟ್ ಸ್ಟೋರೀಸ್ 2’ ವೆಬ್ ಸರಣಿಯಲ್ಲಿ ಬಿಂದಾಸ್‌ ಕಿಸ್ ಮಾಡಿ ನಿಯಮವನ್ನು ಮುರಿದು ಜನರ ಟೀಕೆಗೆ ಗುರಿಯಾಗಿದ್ದರು. ಇದೀಗ ನಟಿ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಹಿಂದೆಂದೂ ಕಾಣದಷ್ಟು ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Tamanna Bhatia

ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಆದರೆ ನಂತರ, ಸರಣಿಯಲ್ಲಿ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟವನ್ನು ಅನೇಕರು ಹೊಗಳಿದರೂ ಕೂಡ , ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಜನ್ ನಟಿಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ವೆಬ್ ಸರಣಿಯಲ್ಲಿ ನಟಿಯ ಬೋಲ್ಡ್ ಪೋಟೋಗಳನ್ನು ಹಂಚಿಕೊಂಡು ಅವರನ್ನು ದೂಷಿಸಿದ್ದಾರೆ. ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಲಿಲ್ಲವೆಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ಜೀ ಕರ್ದಾದಲ್ಲಿ ಇಬ್ಬರು ಬಾಲ್ಯದ ಸ್ನೇಹಿತರಾದ ಲಾವಣ್ಯ (ತಮನ್ನಾ ಭಾಟಿಯಾ) ಮತ್ತು ರಿಷಬ್ (ಸುಹೇಲ್ ನಯ್ಯರ್) ಅವರ ಕಥೆಗಳನ್ನು ತೋರಿಸುತ್ತದೆ. ಆದರೆ ಕೆಲವೊಂದು ವಿಚಾರಗಳು ತಮ್ಮ ಸಂಬಂಧವನ್ನು ಹಾಳುಮಾಡಲು ಪ್ರಾರಂಭಿಸಿದಾಗ ಅವರು ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

ಈ ಸರಣಿಯಲ್ಲಿ ಹುಸೇನ್ ದಲಾಲ್, ಸಯಾನ್ ಬ್ಯಾನರ್ಜಿ ಮತ್ತು ಸಂವೇದನಾ ಸುವಾಲ್ಕಾ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ತಮನ್ನಾ ಭಾಟಿಯಾ ಕೊನೆಯ ಬಾರಿಗೆ ಭಯಾನಕ-ಹಾಸ್ಯ ಚಿತ್ರ ‘ಅರಮನೆ 4’ ನಲ್ಲಿ ರಾಶಿ ಖನ್ನಾ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು 2024 ರ ಕಾಲಿವುಡ್‌ನ ಮೊದಲ ಹಿಟ್ ಚಿತ್ರ ಆಯಿತು. ಈಗ ಅವರು ವೆಬ್ ಸರಣಿಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

Continue Reading
Advertisement
Stray Dogs Attack
ಕರ್ನಾಟಕ12 mins ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ18 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

lovers death self harming
ಕ್ರೈಂ33 mins ago

Lovers Death: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿ ಕೆರೆಯಲ್ಲಿ ಪತ್ತೆ

Anant-Radhika Wedding
ದೇಶ43 mins ago

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Prajwal Devaraj cancel birthday darshan main reason
ಸಿನಿಮಾ45 mins ago

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

IND vs ZIM
ಕ್ರೀಡೆ55 mins ago

IND vs ZIM: ಜಿಂಬಾಬ್ವೆ ತಲುಪಿದ ಯಂಗ್‌ ಟೀಮ್‌ ಇಂಡಿಯಾ; ಶನಿವಾರದಿಂದ ಸರಣಿ ಆರಂಭ

Medal Biteing
ಕ್ರೀಡೆ1 hour ago

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Tharun Sudhir sonal monteiro marriage update
ಸ್ಯಾಂಡಲ್ ವುಡ್1 hour ago

Tharun Sudhir: ಸೋನಾಲ್-ತರುಣ್ ಮದುವೆ ಯಾವಾಗ? ಭಾವಿ ಸೊಸೆ ಬಗ್ಗೆ ಡೈರೆಕ್ಟರ್ ಅಮ್ಮ ಏನಂದ್ರು?

Stock Market
ವಾಣಿಜ್ಯ2 hours ago

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

bangalore murder case
ಕ್ರೈಂ2 hours ago

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌