Ileana D'cruz: ಇಲಿಯಾನಾ ಬೇಬಿಮೂನ್: ಬೇಬಿ ಬಂಪ್‌ ಪ್ರದರ್ಶಿಸಿದ ಸುಂದರಿ - Vistara News

ಬಾಲಿವುಡ್

Ileana D’cruz: ಇಲಿಯಾನಾ ಬೇಬಿಮೂನ್: ಬೇಬಿ ಬಂಪ್‌ ಪ್ರದರ್ಶಿಸಿದ ಸುಂದರಿ

ತನ್ನ ಮೊದಲ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಇತ್ತೀಚೆಗಷ್ಟೇ ಇಲಿಯಾನಾ (Ileana D’cruz) ತಿಳಿಸಿದ್ದರು. ಇಲಿಯಾನಾ ತಾವು ಭೇಟಿ ನೀಡಿದ ಬೀಚ್‌ನಿಂದ ಫೋಟೋಗಳನ್ನು ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

VISTARANEWS.COM


on

iliana dcruz
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಟಿ ಇಲಿಯಾನಾ ಡಿಕ್ರೂಜ್ (Ileana D’cruz) ಅವರಿಗೆ ಈಗ ʼಬೇಬಿಮೂನ್’ ಸಮಯ. ಪ್ರಕಾಶಮಾನವಾದ ಹಳದಿ ಬಿಕಿನಿ ಧರಿಸಿ ಬೀಚ್‌ನಲ್ಲಿ ಸೂರ್ಯ ಕಿರಣಗಳಲ್ಲಿ ಮೀಯುತ್ತಾ ಬೇಬಿ ಬಂಪ್‌ (baby bump) ಪ್ರದರ್ಶಿಸುತ್ತಿರುವ ತಮ್ಮ ಚಿತ್ರಗಳನ್ನು ಇಲಿಯಾನ ಡಿಕ್ರೂಜ್‌ ಹಂಚಿಕೊಂಡಿದ್ದಾರೆ.

ತನ್ನ ಮೊದಲ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಇತ್ತೀಚೆಗಷ್ಟೇ ಇವರು ತಿಳಿಸಿದ್ದರು. ಇಲಿಯಾನಾ ತಾವು ಭೇಟಿ ನೀಡಿದ ಬೀಚ್‌ನಿಂದ ಫೋಟೋಗಳನ್ನು ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಆದರೆ ತಾವು ʼಬೇಬಿಮೂನ್‌ʼ ಮಾಡಿದ ಈ ಬೀಚ್‌ ಯಾವುದು ಅಂತ ಇಲಿಯಾನಾ ತಿಳಿಸಿಲ್ಲ.

ಇಲಿಯಾನಾ ವಿಹಾರದ ಫೋಟೋಗಳಲ್ಲಿ ಒಂದರಲ್ಲಿ ಅವಳ ಪಾದಗಳು ಮರಳಿನಿಂದ ಆವೃತವಾಗಿವೆ. ಇದರಲ್ಲಿ ಅವಳು ಚಿಪ್ಪಿನ ಕಾಲುಂಗುರ ಧರಿಸಿದ್ದಾಳೆ. “ಮರಳುಪೂರಿತ ಕಾಲ್ಬೆರಳುಗಳು, ಸಂತೋಷಪೂರಿತ ಹೃದಯ” ಎಂದು ಫೋಟೋಗೆ ಕ್ಯಾಪ್ಷನ್‌ ಕೊಟ್ಟಿದ್ದಾಳೆ.

ಇಲಿಯಾನಾ ತಾನು ಅಲೆಗಳ ನಡುವೆ ಇರುವ ಒಂದು ವೀಡಿಯೊ ಸಹ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ಆಕೆ ಹಳದಿ ಬಿಕಿನಿ ಮತ್ತು ಕಂದು ಬಣ್ಣದ ಸನ್‌ಗ್ಲಾಸ್‌ನಲ್ಲಿ ಕಾಣಿಸಿಕೊಂಡಿದ್ದು, ಆಕೆಯ ತುಂಬಿಕೊಂಡ ಹೊಟ್ಟೆ ತುಸು ಗೋಚರಿಸುತ್ತದೆ. “ತನ್ನ ಮಗು ಸೂರ್ಯನ ಬೆಳಕನ್ನು ಆನಂದಿಸುತ್ತದೆʼʼ ಎಂದು ಅವಳು ಕ್ಯಾಪ್ಷನ್ ಹಾಕಿಕೊಂಡಿದ್ದಾಳೆ. ಇತ್ತೀಚೆಗೆ, ಇಲಿಯಾನಾ ತನ್ನ ಕೆಲವು ಚಿತ್ರಗಳನ್ನು Instagramನಲ್ಲಿ ಹಂಚಿಕೊಂಡಿದ್ದಾಳೆ. ಅದರಲ್ಲಿ ಆಕೆ ಹೊಟ್ಟೆ ಉಬ್ಬನ್ನು ನಾನಾ ಕೋನಗಳಲ್ಲಿ ಪ್ರದರ್ಶಿಸಿದ್ದಾಳೆ.

ಇಲಿಯಾನಾ ಇತ್ತೀಚೆಗಷ್ಟೇ ಕಪ್ಪು ಬಣ್ಣದ ಸ್ಲಿಟ್ ಡ್ರೆಸ್ ಧರಿಸಿರುವ ಫೋಟೋಗಳನ್ನೂ ಅಪ್‌ಲೋಡ್ ಮಾಡಿದ್ದಾಳೆ. ತನ್ನ ಹೊಟ್ಟೆಯನ್ನು ಮುದ್ದಾಗಿ ನೋಡುತ್ತಿರುವ ಈ ಕ್ಯಾಮೆರಾ ಪೋಸ್‌ನಲ್ಲಿ, ʼಬಂಪ್ ಅಲರ್ಟ್ʼ ಎಂದು ಕರೆದುಕೊಂಡಿದ್ದಾಳೆ.

ಇಲಿಯಾನಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಅತ್ಯಂತ ಎಚ್ಚರಿಕೆಯಿಂದ ವಿವರ ಶೇರ್‌ ಮಾಡುತ್ತಾಳೆ. ಈಗಿನ ಆಕೆಯ ಬರಲಿರುವ ಮಗುವಿನ ತಂದೆ ಯಾರು ಎಂಬುದು ಗೊತ್ತಿಲ್ಲ. ತಾನು ಯಾರೊಂದಿಗೆ ಡೇಟಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಲ್ಲ. ಇತ್ತೀಚೆಗೆ ಒಮ್ಮೆ ಪುರುಷನ ಕೈಯೊಂದಿಗೆ ತನ್ನ ಕೈ ಸೇರಿಸಿದ ಸೆಲ್ಫಿಯನ್ನು ಪೋಸ್ಟ್ ಮಾಡಿದ್ದಳು.

ಕೆಲವು ವರದಿಗಳ ಪ್ರಕಾರ ಇಲಿಯಾನಾ, ಕತ್ರಿನಾ ಕೈಫ್ ಅವರ ಸಹೋದರ ಸೆಬಾಸ್ಟಿಯನ್ ಲಾರೆಂಟ್ ಮೈಕೆಲ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಇಲಿಯಾನಾ ಈ ಹಿಂದೆ ಛಾಯಾಗ್ರಾಹಕ ಆಂಡ್ರ್ಯೂ ನೀಬೋನ್ ಜೊತೆ ಬಹಳ ಕಾಲ ಡೇಟಿಂಗ್ ನಡೆಸಿದ್ದರು.

ಇಲಿಯಾನಾ ಇತ್ತೀಚೆಗೆ ಅಭಿಷೇಕ್ ಬಚ್ಚನ್ ಅವರ ʼದಿ ಬಿಗ್ ಬುಲ್ʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅಜಯ್ ದೇವಗನ್ ನಿರ್ಮಾಣದ ಈ ಚಿತ್ರವನ್ನು ಕೂಕಿ ಗುಲಾಟಿ ನಿರ್ದೇಶಿಸಿದ್ದಾರೆ. ಶೀಘ್ರದಲ್ಲೇ ರಣದೀಪ್ ಹೂಡಾ ಅವರ ʼಅನ್‌ಫೇರ್ ಅಂಡ್ ಲವ್ಲಿʼಯಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Bera movie: ಬೇರ: ಕೋಮು ದ್ವೇಷದ ಮೂಲ ಚಿತ್ರಿಸುವ ಕನ್ನಡ ಸಿನಿಮಾ ಜೂನ್‌ 16ರಂದು ರಿಲೀಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Randeep Hooda: ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್​ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡ ನಟ; ಬದ್ಧತೆಗೆ ಜೈ ಎಂದ ಫ್ಯಾನ್ಸ್‌

Randeep Hooda: ಬಾಲಿವುಡ್‌ ನಟ ರಣದೀಪ್ ಹೂಡಾ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಚಿತ್ರದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್​ ದಾಮೋದರ್​ ಸಾವರ್ಕರ್​ ಪಾತ್ರಕ್ಕಾಗಿ ಬರೋಬ್ಬರಿ 30 ಕೆಜಿ ತೂಕ ಕಳೆದುಕೊಂಡಿದ್ದಾರೆ.

VISTARANEWS.COM


on

hooda
Koo

ಮುಂಬೈ: ರಣದೀಪ್ ಹೂಡಾ (Randeep Hooda) ಬಾಲಿವುಡ್‌ನ ಪ್ರತಿಭಾವಂತ ನಟರಲ್ಲಿ ಒಬ್ಬರು. ಅವರು ತಮ್ಮ ಮುಂಬರುವ ‘ಸ್ವಾತಂತ್ರ್ಯ ವೀರ ಸಾವರ್ಕರ್​’ (Swatantrya Veer Savarkar) ಚಿತ್ರದಲ್ಲಿನ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್​ ದಾಮೋದರ್​ ಸಾವರ್ಕರ್​ (Vinayak Damodar Savarkar) ಪಾತ್ರಕ್ಕಾಗಿ ಬರೋಬ್ಬರಿ 30 ಕೆಜಿ ತೂಕ ಕಳೆದುಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ರಣದೀಪ್ ಹೂಡಾ ಈ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಅಚ್ಚರಿಗೊಳಗಾಗಿದ್ದಾರೆ. ತಮ್ಮ ನೆಚ್ಚಿನ ನಟನ ಬದ್ಧತೆ, ಬದಲಾವಣೆಯನ್ನು ಬೆರಗುಗಣ್ಣಿನಿಂದ ನೋಡಿದ್ದಾರೆ. ಸದ್ಯ ಈ ಫೋಟೊ ವೈರಲ್‌ ಆಗಿದೆ.

ಕಟ್ಟುಮಸ್ತಾದ ಶರೀರ ಹೊಂದಿದ್ದ ರಣದೀಪ್​ ಹೂಡಾ ಅವರು ಸಾವರ್ಕರ್​ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಫೋಸ್‌​ ನೀಡಿದ್ದಾರೆ. ಕನ್ನಡಿ ಮುಂದೆ ನಿಂತಿರುವ ಈ ಫೋಟೊವನ್ನು ಹಂಚಿಕೊಂಡಿರುವ ಅವರು ಇದಕ್ಕೆ ʼಕಾಲಾ ಪಾನಿʼ ಎಂಬ ಕ್ಯಾಪ್ಶನ್‌ ನೀಡಿದ್ದಾರೆ. ಇತ್ತೀಚೆಗಷ್ಟೇ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಈ ಚಿತ್ರದ ಬಗ್ಗೆ ಮಾಹಿತಿ ನೀಡಿ, ʼʼಅಂಡಮಾನ್‌ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಸಾವರ್ಕರ್ ಇದ್ದಂತೆ ಕಾಣಲು ರಣದೀಪ್ ಹೂಡಾ ಅವರು 30 ಕೆಜಿ ತೂಕವನ್ನು ಕಳೆದುಕೊಂಡಿದ್ದರುʼʼ ಎಂದು ಹೇಳಿದ್ದರು. ಜತೆಗೆ ಪಾತ್ರದ ಬಗ್ಗೆ ರಣದೀಪ್ ಅವರ ಬದ್ಧತೆಯನ್ನು ಶ್ಲಾಘಿಸಿದ್ದರು.

ಫೋಟೊ ನೋಡಿದ ಅಭಿಮಾನಿಗಳು ರಣದೀಪ್ ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ʼʼಈ ಫೋಟೊ ನೋಡಿ ರೋಮಾಂಚವಾಯಿತು. ಈ ಸಿನಿಮಾ ನೋಡಿವಾಗ ಖಚಿತವಾಗಿ ಪ್ರೇಕ್ಷಕ್ ಕಣ್ಣು ತುಂಬಿ ಬರಲಿದೆʼʼ ಎಂದು ಹಲವರು ಕಮೆಂಟ್‌ ಮಾಡಿದ್ದಾರೆ.

ನಟನೆಯ ಜತೆಗೆ ನಿರ್ದೇಶನ

ವಿಶೇಷ ಎಂದರೆ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಚಿತ್ರದಲ್ಲಿ ರಣದೀಪ್‌ ನಾಯಕನಾಗಿ ನಟಿಸುವ ಜತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಮಾರ್ಚ್‌ 22ರಂದು ಈ ಸಿನಿಮಾ ತೆರೆ ಕಾಣಲಿದೆ. ಹಿಂದಿ ಮಾತ್ರವಲ್ಲದೇ ಮರಾಠಿಯಲ್ಲಿಯೂ ಈ ಸಿನಿಮಾ ಬಿಡುಗಡೆಯಾಗಲಿದೆ. ಕಲಾವಿದರ ಅಂಕಿತಾ ಲೋಖಂಡೆ, ಅಮಿತ್‌ ಸಿಯಾಲ್‌, ರಾಕೇಶ್‌ ಚತುರ್ವೇದಿ, ಲೋಕೇಶ್‌ ಮಿತ್ತಲ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಮಹಾತ್ಮ ಗಾಂಧಿ, ಬಾಲ ಗಂಗಾಧರ್​ ತಿಲಕ್​, ಡಾ.ಬಿ.ಆರ್​. ಅಂಬೇಡ್ಕರ್​, ಸುಭಾಷ್​ ಚಂದ್ರ ಬೋಸ್​, ಜವಹರ್​ ಲಾಲ್​ ನೆಹರೂ, ಭಗತ್​ ಸಿಂಗ್​ ಸೇರಿದಂತೆ ಹಲವು ನೈಜ ಪಾತ್ರಗಳು ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾದಲ್ಲಿವೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿ ಗಮನ ಸೆಳೆದಿತ್ತು.

ಹಿಂದೊಮ್ಮೆ 2016ರಲ್ಲಿ ಬಿಡುಗಡೆಯಾದ ʼಸರಬ್ಜಿತ್‌ʼ ಬಾಲಿವುಡ್‌ ಚಿತ್ರಕ್ಕಾಗಿ ರಣದೀಪ್‌ ಹೂಡಾ ಗುರುತೇ ಸಿಗದಂತೆ ಬದಲಾಗಿದ್ದರು. ಆಗಲೂ ಅವರ ಬಾಡಿ ಟ್ರಾನ್ಸ್​ಫಾರ್ಮೇಷನ್​ ಅಭಿಮಾನಿಗಳ ಗಮನ ಸೆಳೆದಿತ್ತು. ಈ ಚಿತ್ರದಲ್ಲಿನ ಪಾತ್ರಕ್ಕೆ ಅಪಾರ ಮೆಚ್ಚುಗೆಯೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Randeep Hooda: ಮಣಿಪುರದ ಮೈತಿ ಪದ್ಧತಿಯಂತೆ ವಿವಾಹವಾದ ಸ್ಟಾರ್‌ ನಟ; ಏನಿದರ ವಿಶೇಷ?

ಈ ಮಧ್ಯೆ ರಣದೀಪ್‌ ಹೂಡಾ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಬಿಜೆಪಿ ಅವರಿಗೆ ಟಿಕೆಟ್‌ ನೀಡಲಿದೆ. ಹರಿಯಾಣದ ರೋಹ್ಟಕ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ರಣದೀಪ್‌ ಹೂಡಾ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಾಲಿವುಡ್

Shah Rukh Khan: ವೇದಿಕೆ ಮೇಲೆ ಶಾರುಖ್‌-ಸಲ್ಮಾನ್‌ ಖಾನ್‌ ಫೈಟ್‌!

Shah Rukh Khan: ಅನಂತ್‌ ಅಂಬಾನಿ ಅವರ ವಿವಾಹ ಪೂರ್ವ ಸಂಭ್ರದಲ್ಲಿ ಶಾರುಖ್‌, ಆಮೀರ್‌, ಸಲ್ಮಾನ್‌ ʻಆರ್‌ಆರ್‌ ಆರ್‌ʼ ಸಿನಿಮಾದ ʻನಾಟು ನಾಟುʼ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು. ಇದಾದ ಬಳಿಕ ಶಾರುಖ್‌ ಅವರ ಹಳೆಯ ಸಂದರ್ಶನದ ವಿಡಿಯೊ ಭಾರಿ ಸದ್ದು ಮಾಡಿತ್ತು.

VISTARANEWS.COM


on

Shah Rukh Khan salman fight
Koo

ಬೆಂಗಳೂರು: ಗುಜರಾತಿನ ಜಾಮ್‌ನಗರದಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಸಮಾರಂಭದಲ್ಲಿ ಶಾರುಖ್ ಖಾನ್ (Shah Rukh Khan) ಮತ್ತು ಸಲ್ಮಾನ್ ಖಾನ್ ಅವರ ವಿಡಿಯೊಗಳು ಮತ್ತೆ ವೈರಲ್‌ ಆಗುತ್ತಿವೆ. ಶಾರುಖ್‌ ಹಾಗೂ ಸಲ್ಲು ತಮ್ಮ ಹಾಡುಗಳ ಬಗ್ಗೆ ವೇದಿಕೆಯಲ್ಲಿ ತಮಾಷೆಯಾಗಿ ಜಗಳವಾಡಿದ್ದಾರೆ. ಆಮೀರ್‌ ಕೂಡ ಈ ಮಾತುಕತೆಯಲ್ಲಿ ಭಾಗವಾಗಿದ್ದಾರೆ.

ಜಾಮ್‌ನಗರದ ವೇದಿಕೆಯಲ್ಲಿ ಶಾರುಖ್‌ ಮತ್ತು ಸಲ್ಮಾನ್ ಖಾನ್ ತಮಾಷೆಯ ವಾಗ್ವಾದದಲ್ಲಿ ತೊಡಗಿದ್ದರು. ವೈರಲ್ ಆಗುತ್ತಿರುವ ವಿಡಿಯೊದಲ್ಲಿ, ಮೂರು ಖಾನ್‌ಗಳು ವೇದಿಕೆಯಲ್ಲಿ ಪ್ರದರ್ಶನ ನೀಡಬೇಕೆಂದು ಮುಕೇಶ್‌ ಅಂಬಾನಿ ಬಯಸಿದ್ದರು ಎಂದು ಶಾರುಖ್‌ ಹೇಳಿದ್ದಾರೆ. ಇದಾದ ಬಳಿಕ ಮೂವರಲ್ಲಿ ಯಾರ ಸಿನಿಮಾ ಹಾಡು ಪ್ಲೇ ಮಾಡಬೇಕು ಎಂದು ಅವರಲ್ಲಿಯೇ ತಮಾಷೆಯ ಜಗಳ ಆಗಿದೆ. ಇದನ್ನು ಕಂಡ ಪ್ರೇಕ್ಷಕರು ನಗೆಗಡಲಲ್ಲಿ ಮುಳುಗಿದ್ದರು. ಆ ಬಳಿಕ ಮೂವರು ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಸ್ಟೆಪ್ಸ್‌ ಹಾಕಿದ್ದಾರೆ. ಜತೆಗೆ ʻಚೈಯ್ಯಾ ಚೈಯ್ಯಾʼ, ‘ಜೀನೆ ಕೆ ಹೈ ಚಾರ್ ದಿನ್’ ‘ರಂಗ್ ದೇ ಬಸಂತಿ’ಯ ‘ಮಸ್ತಿ ಕಿ ಪಾಠಶಾಲಾ’ ಹೀಗೆ ಹಲವು ಹಾಡುಗಳಿಗೆ ಸ್ಪೆಪ್ಸ್‌ ಹಾಕಿದ್ದಾರೆ.

ಇದನ್ನೂ ಓದಿ: Shah Rukh Khan: ಏನಿದು ಶಾರುಖ್‌ ಖಾನ್‌ನ ಪೋನಿ ಟೇಲ್‌ ಹೇರ್‌ ಸ್ಟೈಲ್‌?

ಚಡ್ಡಿ, ಬನಿಯನ್​ ಮಾರಿದ್ರೂ ಇದು ಸಾಧ್ಯವಿಲ್ಲ!

ಅನಂತ್‌ ಅಂಬಾನಿ ಅವರ ವಿವಾಹ ಪೂರ್ವ ಸಂಭ್ರದಲ್ಲಿ ಶಾರುಖ್‌, ಆಮೀರ್‌, ಸಲ್ಮಾನ್‌ ʻಆರ್‌ಆರ್‌ ಆರ್‌ʼ ಸಿನಿಮಾದ ʻನಾಟು ನಾಟುʼ ಹಾಡಿಗೆ ಸಖತ್‌ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು. ಇದಾದ ಬಳಿಕ ಶಾರುಖ್‌ ಅವರ ಹಳೆಯ ಸಂದರ್ಶನದ ವಿಡಿಯೊ ಭಾರಿ ಸದ್ದು ಮಾಡಿತ್ತು.

ಶಾರುಖ್‌ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ʻʼನಾವು ಮೂವರು ಖಾನ್​ರನ್ನು ಒಟ್ಟಿಗೆ ಒಂದೇ ಕಡೆ ಸೇರಿಸುವಷ್ಟು ಸಂಪತ್ತು ಯಾರ ಬಳಿಯೂ ಇಲ್ಲ. ಚಡ್ಡಿ, ಬನಿಯನ್​ ಮಾರಿದ್ರೂ ಇದು ಸಾಧ್ಯವಿಲ್ಲʼʼ ಎಂದು ಹೇಳಿಕೆ ನೀಡಿದ್ದರು. ಆದರೀಗ ಮುಕೇಶ್‌ ಅಂಬಾನಿ ಮಾಡಿ ತೋರಿಸಿದ್ದಾರೆ ಎಂಬ ಟ್ರೋಲ್‌ಗಳು ಹರಿದಾಡಿದವು. ಇಷ್ಟಾದರೂ ಈ ಮೂವರು ಪಡೆದ ಸಂಭಾವನೆ ಎಷ್ಟು ಎಂಬುದೇ ಜನರಿಗೆ ಇದ್ದ ಕುತೂಹಲ.

ಆದರೆ ಮೂಲಗಳ ಪ್ರಕಾರ ಈ ಮೂವರು ಖಾನ್‌ಗಳು ವಿವಾಹ ಪೂರ್ವ ಆಚರಣೆಗಳಲ್ಲಿ ಪ್ರದರ್ಶನ ನೀಡಲು ಒಂದು ಪೈಸೆಯನ್ನೂ ಪಡೆದುಕೊಂಡಿಲ್ಲ ಎಂದು ವರದಿಯಾಗಿದೆ. ಈ ಮೂವರನ್ನು ಒಟ್ಟಿಗೆ ವೇದಿಕೆ ಮೇಲೆ ತರಲು ಯಾವುದೇ ಪ್ರೀ ಪ್ಲ್ಯಾನಿಂಗ್‌ ಇಲ್ಲವಾಗಿತ್ತು ಎನ್ನಲಾಗಿದೆ. ಈ ಮೂವರು ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬದೊಂದಿಗೆ ವೈಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನು ಹೊಂದಿದ್ದಾರೆ. ಆದ್ದರಿಂದ ಈ ಮೂವರು ಪ್ರೀತಿಯಿಂದ ಪ್ರದರ್ಶನ ನೀಡಿದ್ದರು ಎಂದು ವರದಿಯಾಗಿದೆ.

Continue Reading

ಬಾಲಿವುಡ್

Orry With Radhika Merchant: ರಾಧಿಕಾ ಮರ್ಚಂಟ್‌ ಜತೆ ಪೋಸ್‌ ಕೊಟ್ಟ ಓರಿ!

Orry With Radhika Merchant: ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ಓರಿ ಭಾಗಿಯಾಗಿದ್ದರು. ಮಾರ್ಚ್ 3ರ ರಾಧಿಕಾ ಮರ್ಚಂಟ್‌ ಜತೆ ಪೋಸ್‌ ಕೊಟ್ಟ ಓರಿ ಫೋಟೊ ವೈರಲ್‌ ಆಗಿದೆ..

VISTARANEWS.COM


on

Orry poses with stunning bride Radhika Merchant
Koo

ಬೆಂಗಳೂರು: ಬಾಲಿವುಡ್ ನಟಿಯರ ಜತೆ (Orry Reveals Getting Paid) ಓರಿ ಎನ್ನುವ ಯುವಕ ಆಗಾಗ ಕಾಣಿಸಿಕೊಳ್ಳುತ್ತಾರೆ. ಪಾರ್ಟಿಗಳಂತೂ ಓರಿ ಇಲ್ಲದೆ ಅಪೂರ್ಣ ಎಂದೇ ಹೇಳಬೇಕು. ಜಾನ್ವಿ ಕಪೂರ್, ನೀಸಾ ದೇವಗನ್, ಸಾರಾ ಅಲಿ ಖಾನ್ ಮತ್ತು ಅನನ್ಯಾ ಪಾಂಡೆ (bollywood celebrities) ಅವರೊಂದಿಗೆ ಉತ್ತಮ ಸ್ನೇಹಿತರಾಗಿದ್ದಾರೆ ಈ ಓರಿ. ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ಓರಿ ಭಾಗಿಯಾಗಿದ್ದರು. ಮಾರ್ಚ್ 3ರ ರಾಧಿಕಾ ಮರ್ಚಂಟ್‌ ಜತೆ ಪೋಸ್‌ ಕೊಟ್ಟ ಓರಿ ಫೋಟೊ ವೈರಲ್‌ ಆಗಿದೆ.

ಓರಿ ಬಿಳಿ, ಗುಲಾಬಿ ಮಿಶ್ರಿತ ಉಡುಪನ್ನು ಧರಿಸಿದ್ದರು. ಇವೆಂಟ್‌ನಲ್ಲಿ ಮಹಾ ಆರತಿ ಕೂಡ ನಡೆದಿತ್ತು. ಮೇಣದಬತ್ತಿಗಳು ಮತ್ತು ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟ ಸ್ಥಳದ ಮಧ್ಯೆ ರಾಧಿಕಾ ಕುಳಿತ್ತಿದ್ದಾರೆ. ಅವರ ಜತೆ ಓರಿ ಕೂಡ ಕೂತು ಪೋಸ್‌ ಕೊಟ್ಟಿದ್ದಾರೆ. ಫೋಟೊಗಳನ್ನು ಹಂಚಿಕೊಂಡ, ಓರಿ ತನ್ನ ಹೂವಿನ ಇಮೋಜಿ ಕ್ಯಾಪ್ಷನ್‌ ಕೊಟ್ಟಿದ್ದಾರೆ. ಜಾಮ್‌ನಗರದಲ್ಲಿ ನಡೆದ ಈ ಸಮಾರಂಭದಲ್ಲಿ ತರುಣ್ ತಹಿಲಿಯಾನಿ ವಿನ್ಯಾಸಗೊಳಿಸಿದ ಕಸ್ಟಮ್ ಲೆಹೆಂಗಾವನ್ನು ರಾಧಿಕಾ ಧರಿಸಿದ್ದರು. ವಜ್ರದ ನೆಕ್ಲೇಸ್ ಕೂಡ ಧರಿಸಿದ್ದರು.

ಓರಿಯನ್ನು ಬಾಲಿವುಡ್ ʻಬೆಸ್​​ಫ್ರೆಂಡ್ ಫಾರೆವರ್ʼ ಎಂದೇ ಹೇಳುತ್ತಾರೆ. ಓರಿ ತನ್ನ ಫ್ಯಾಷನ್​ನಿಂದಾಗಿಯೂ ಸುದ್ದಿಯಾಗುತ್ತಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ ಚೇರ್​ ಪರ್ಸನ್ ಆಫೀಸ್​ನಲ್ಲಿ ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದಾರೆ.

ಇದನ್ನೂ ಓದಿ: Orry Reveals Getting Paid: ಸೆಲೆಬ್ರಿಟಿಗಳ ಸಮಾರಂಭದಲ್ಲಿ ಓರಿ ಪಡೆಯುವ ಸಂಭಾವನೆ ಇಷ್ಟೊಂದು!

ಸೆಲೆಬ್ರಿಟಿಗಳ ಸಮಾರಂಭದಲ್ಲಿ ಓರಿ ಪಡೆಯುವ ಸಂಭಾವನೆ ಇಷ್ಟೊಂದು!

ಮಾಧ್ಯಮವೊಂದರ ಸಂದರ್ಶನದಲ್ಲಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಪಡೆಯುವ ಸಂಭಾವನೆ ಕುರಿತು ಮಾತನಾಡಿದ್ದರು ಓರಿ. ʻʻಕಾರ್ಯಕ್ರಮಗಳಿಗೆ ಹಾಜರಾಗಲು ಮುಖ್ಯ ಕಾರಣ ಎಲ್ಲಿರಿಗೂ ಸಂತೋಷ ನೀಡಬೇಕು ಎಂದು. ಸೆಲೆಬ್ರಿಟಿಗಳು ನನ್ನನ್ನು ಮದುವೆಗೆ ಕರೆಯುತ್ತಾರೆ. 15ರಿಂದ 30 ಲಕ್ಷದವರೆಗೆ ಸಂಭಾವನೆ ನೀಡಿ ಸಂತೋಷಪಡುತ್ತಾರೆ. ನಾನು ಅತಿಥಿಯಾಗಿ ಅಲ್ಲಿ ಭಾಗಿಯಾಗಲ್ಲ. ಒಳ್ಳೆಯ ಸ್ನೇಹಿತನಾಗಿ ಹೋಗುತ್ತೇನೆʼʼಎಂದಿದ್ದರು. ಓರಿ ಶಾರುಖ್ ಖಾನ್ ಮಗಳು ಸುಹಾನಾ ಖಾನ್​ಗೂ ಬೆಸ್ಟ್ ಫ್ರೆಂಡ್. ಸುಹಾನಾ ಖಾನ್ ಜತೆ ಓರಿ ಹಲವಾರು ಸಲ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಬಾಲಿವುಡ್

Priyanka Chopra: ಪ್ರಿಯಾಂಕಾ ಚೋಪ್ರಾ ಬಂದ 2 ದಿನಗಳ ಬಳಿಕ ಭಾರತಕ್ಕೆ ಬಂದಿಳಿದ ನಿಕ್‌!

Priyanka Chopra: ಗಾಯಕ ನಿಕ್ ಜೋನಾಸ್ ಇಂದು (ಮಾ.18) ಮುಂಬೈಗೆ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇರುವ ನಿಕ್ ಜೋನಾಸ್ ಅವರ ಹಲವಾರು ವಿಡಿಯೊಗಳು ಮತ್ತು ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Nick Jonas arrives in India
Koo

ಮುಂಬೈ: ಪ್ರಿಯಾಂಕಾ ಚೋಪ್ರಾ (Priyanka Chopra) ಮತ್ತು ಅವರ ಮಗಳು ಮಾಲತಿ ಮೇರಿ ಚೋಪ್ರಾ ಜೋನಾಸ್ ಈಗಾಗಲೇ ಭಾರತಕ್ಕೆ ಬಂದಿರುವುದು ಗೊತ್ತೇ ಇದೆ. ಇದೀಗ ಪಿಗ್ಗಿ ಪತಿ ಗಾಯಕ ನಿಕ್ ಜೋನಾಸ್ ಇಂದು (ಮಾ.18) ಮುಂಬೈಗೆ ತಲುಪಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇರುವ ನಿಕ್ ಜೋನಾಸ್ ಅವರ ಹಲವಾರು ವಿಡಿಯೊಗಳು ಮತ್ತು ಫೋಟೊಗಳು ವೈರಲ್‌ ಆಗಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅಭಿಮಾನಿಗಳ ಖಾತೆಯಿಂದ ಹಂಚಿಕೊಂಡ ಕ್ಲಿಪ್‌ನಲ್ಲಿ, ನಿಕ್ ಮುಂಬೈ ವಿಮಾನ ನಿಲ್ದಾಣದಿಂದ ಬಿಳಿ ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಧರಿಸಿ ನಿರ್ಗಮಿಸುತ್ತಿರುವುದು ಕಂಡುಬಂದಿದೆ. ಗಾಯಕ ಮುಗುಳ್ನಕ್ಕು ಪಾಪರಾಜಿಗಳತ್ತ ಕೈ ಬೀಸಿದರು. ನಿಕ್‌ ಕಂಡೊಡನೆ ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿದರು. ಇದು ಈ ವರ್ಷ ಭಾರತಕ್ಕೆ ನಿಕ್‌ ಅವರ ಎರಡನೇ ಭೇಟಿಯಾಗಿದೆ. ಇದೀಗ ಫ್ಯಾನ್ಸ್‌ ʻಜೋಡಿ ಭಾರತದಲ್ಲಿ ಹೋಳಿ ಆಚರಿಸಿಲು ಬಂದಿಳಿದಿದೆʼ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ʻಇದು ಮಾಲತಿಯ ಮೊದಲ ಹೋಳಿʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಪ್ರಿಯಾಂಕಾ ಮತ್ತು ಮಾಲತಿ ಮೇರಿ ಚೋಪ್ರಾ ಜೋನಾಸ್ ಕಳೆದ ವಾರ ಮುಂಬೈಗೆ ಆಗಮಿಸಿದ್ದರು. ಕೆಲವು ದಿನಗಳ ನಂತರ, ನಟಿ ಅಂಬಾನಿ ನಿವಾಸದಲ್ಲಿ ಇಶಾ ಅಂಬಾನಿ ಮತ್ತು ಬಲ್ಗೇರಿಯ ಸಿಇಒ ಜೀನ್ ಕ್ರಿಸ್ಟೋಫ್ ಬಾಬಿನ್ ಆಯೋಜಿಸಿದ್ದ ರೋಮನ್ ಹೋಳಿ ಪಾರ್ಟಿಯಲ್ಲಿ ಭಾಗವಹಿಸಿದರು. ಪ್ರಿಯಾಂಕಾ ಅವರು ಗುಲಾಬಿ ಬಣ್ಣದ ಸ್ಟೈಲಿಶ್ ಸ್ಲಿಟ್ ಸ್ಕರ್ಟ್ ಶೈಲಿಯ ಶೀರ್ ಪ್ರಿ-ಡ್ರೇಪ್ಡ್ ಸೀರೆಯನ್ನು ಧರಿಸಿದ್ದರು.

ಇದನ್ನೂ ಓದಿ: Priyanka Chopra: ‘ಆಸ್ಕರ್ʼ ನಾಮಿನೇಟ್‌ ಆದ ಭಾರತೀಯ ಡಾಕ್ಯುಮೆಂಟರಿಗೆ ಪ್ರಿಯಾಂಕಾ ಚೋಪ್ರಾ ಸಾಥ್‌!

ಸಿನಿಮಾ ವಿಚಾರಕ್ಕೆ ಬಂದರೆ ಪ್ರಿಯಾಂಕಾ ಫ್ರಾಂಕ್ ಇ ಫ್ಲವರ್ಸ್ ನಿರ್ದೇಶಿಸಲಿರುವ ʻದಿ ಬ್ಲಫ್ʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಕಾರ್ಲ್ ಅರ್ಬನ್ ಕೂಡ ನಟಿಸಲಿದ್ದಾರೆ.

Continue Reading
Advertisement
Benefits of Kasoori Methi
ಆರೋಗ್ಯ5 mins ago

Benefits of Kasoori Methi: ಕಸೂರಿ ಮೇಥಿ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸೂಕ್ತ

varanasi nandi
ಅಂಕಣ26 mins ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Raja Marga human robots
ಸ್ಫೂರ್ತಿ ಕತೆ40 mins ago

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Supreme Court
ದೇಶ48 mins ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Fruits and Vegetables Spilling from Paper Bag
ಆರೋಗ್ಯ1 hour ago

Health Tips: ಈ ಹಣ್ಣು ಮತ್ತು ತರಕಾರಿಗಳನ್ನು ಎಂದಿಗೂ ಜೊತೆಯಾಗಿ ಇಡಲೇಬಾರದು!

Rain alert issued for Ramanagara and Kalaburagi Rising temperature in coastal areas
ಮಳೆ2 hours ago

Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Ukrainian minister
ದೇಶ7 hours ago

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Techie couple assaulted over parking issue in Bengaluru
ಕರ್ನಾಟಕ8 hours ago

Assault Case: ಬೆಂಗಳೂರಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ

Banaglore incident
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು14 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ4 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌