Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌ - Vistara News

ಸಿನಿಮಾ

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

Indian 2: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಕಾಲಿವುಡ್‌ನ ಇಂಡಿಯನ್ 2 ಕೂಡ ಒಂದು. ಉಳಗ ನಾಯಕನ್‌ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ.

VISTARANEWS.COM


on

Indian 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಉಳಗ ನಾಯಕನ್‌ ಕಮಲ್ ಹಾಸನ್ (Kamal Haasan) ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ (R.Shankar) ಜೋಡಿಯ ʼಇಂಡಿಯನ್ 2ʼ (Indian 2) ಪ್ಯಾನ್‌ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ʼಇಂಡಿಯನ್ 2ʼ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ʼಇಂಡಿಯನ್ 2ʼ ಸಿನಿಮಾದ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ. ಕುದುರೆ ಏರಿ ಬರುವ ಸೇನಾಪತಿಯ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ. ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,‌ ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.

1996ರಲ್ಲಿ ಬಿಡುಗಡೆಗೊಂಡಿದ್ದ ʼಇಂಡಿಯನ್ʼ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು. ʼಇಂಡಿಯನ್ 2ʼ ಆ ಹಿಟ್ ಚಿತ್ರದ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ. ಈ ಚಲನಚಿತ್ರವನ್ನು ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ನಿರ್ಮಿಸಿದೆ. ಈಗಾಗಲೇ ರಿಲೀಸ್‌ ಆಗಿರುವ ಪೋಸ್ಟರ್‌ ಕುತೂಹಲ ಮೂಡಿಸಿದ್ದು, ಇದೀಗ ಹಾಡು ಕೂಡ ಗಮನ ಸೆಳೆಯುತ್ತಿದೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಇದನ್ನೂ ಓದಿ: Indian 2 : ‘ಇಂಡಿಯನ್ 2ʼ ಸಿನಿಮಾದಲ್ಲಿ ಸಿದ್ಧಾರ್ಥ್: ಫಸ್ಟ್‌ ಲುಕ್‌ ಔಟ್‌!

ಇದೀಗ ‘ಇಂಡಿಯನ್‌ 2’ ಜತೆಗೆ ʼಇಂಡಿಯನ್ 3ʼ ಸಿನಿಮಾದ ಚಿತ್ರೀಕರಣವೂ ಮುಗಿದಿದೆ ಎಂದು ವರದಿಯೊಂದು ತಿಳಿಸಿದೆ. ‘ಇಂಡಿಯನ್ 2’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡ ಬಳಿಕ ‘ಇಂಡಿಯನ್ 3’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Kalki 2898 AD: ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

VISTARANEWS.COM


on

Kalki 2898 AD Final Trailer Released
Koo

ಬೆಂಗಳೂರು: ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ (Kalki 2898 AD) ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.

ಟ್ರೇಲರ್‌ನಲ್ಲಿ ಒಂದಕ್ಕಿಂತ ಒಂದು ಮೀರಿಸುವ ಪಾತ್ರಗಳೇ ಹೈಲೈಟ್.‌ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ‘ಅಶ್ವತ್ಥಾಮ’ ಆಗಿ ಧೈರ್ಯಶಾಲಿ ಸಾಹಸಗಳನ್ನು ಪ್ರದರ್ಶಿಸುತ್ತಾರೆ. ಉಳಗನಾಯಗನ್ ಕಮಲ್ ಹಾಸನ್ ಗುರುತಿಸಲಾಗದ ಇನ್ನೂ ಮಾರಣಾಂತಿಕ ಅವತಾರದಲ್ಲಿ ‘ಯಾಸ್ಕಿನ್’ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಭೈರವನಾಗಿ, ದೀಪಿಕಾ ಪಡುಕೋಣೆ ‘ಸುಮತಿ’ ಪಾತ್ರದಲ್ಲಿ ಎದುರಾಗಿದ್ದಾರೆ. ದಿಶಾ ಪಟಾನಿ ‘ರಾಕ್ಸಿ’ ಖಡಕ್‌ ಆಗಿಯೇ ಮಿಂಚು ಹರಿಸಿದ್ದಾರೆ.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

ʼಕಲ್ಕಿ 2898 ADʼ ಚಿತ್ರದ ಟ್ರೇಲರ್‌ನಲ್ಲಿ ಬಗೆಬಗೆ ವಿಭಿನ್ನ ಪ್ರಪಂಚಗಳನ್ನು ಕಾಣಬಹುದು. ಒಂದು ಕಾಶಿ, ಅದರ ಉಳಿವಿಗಾಗಿ ಹೋರಾಡುತ್ತಿರುವ, ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ದೃಶ್ಯ ವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್.‌

ಅತ್ಯುತ್ತಮ ಹಿನ್ನೆಲೆ ಸ್ಕೋರ್, ಹೈ ಕ್ಲಾಸ್ VFX ಮತ್ತು ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ, ಈ ಸಿನಿಮಾ ಮೂಡಿಬಂದಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ನಿರ್ದೇಶಕ ನಾಗ್ ಅಶ್ವಿನ್ ಅವರ ದೂರದೃಷ್ಟಿಯ ವಿಧಾನವು ಭಾರತೀಯ ಸಿನಿಮಾವನ್ನು ಅದರ ನೆಲದ ದೃಶ್ಯಗಳು ಮತ್ತು ಕಥೆ ಹೇಳುವ ಮೂಲಕ ಮರುವ್ಯಾಖ್ಯಾನಿಸುವ ಭರವಸೆ ನೀಡುತ್ತದೆ. ‘ಕಲ್ಕಿ 2898 AD’ ನಿಜವಾದ ಪ್ಯಾನ್-ಇಂಡಿಯನ್ ಸಿನಿಮಾ ಎನಿಸಿಕೊಂಡಿದೆ.

ಇದನ್ನೂ ಓದಿ: Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ ಮತ್ತು ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಈ ಬಹುಭಾಷಾ, ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ, ಜೂನ್ 27ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ‌

Continue Reading

ಬಾಲಿವುಡ್

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

Sonakshi Sinha: ಸೋನಾಕ್ಷಿ ಸಿನ್ಹಾ ಅವರು ಮನೆಯವರ ಒಪ್ಪಿಗೆ ಪಡೆಯುವುದು ಬಿಡಿ, ಕನಿಷ್ಠ ಮಾಹಿತಿಯನ್ನೂ ನೀಡದೆ ಮದುವೆ ದಿನಾಂಕ ಫಿಕ್ಸ್‌ ಮಾಡಿರುವುದು ಆಕೆಯ ತಂದೆ ಶತ್ರುಘ್ನ ಸಿನ್ಹಾ ಮಾತ್ರವಲ್ಲ, ತಾಯಿ ಹಾಗೂ ಸಹೋದರನಿಗೂ ಬೇಸರ ತಂದಿತ್ತು. ಇದರಿಂದಾಗಿ ಶತ್ರುಘ್ನ ಸಿನ್ಹಾ ಮಾತ್ರವಲ್ಲದೆ ತಾಯಿ, ಸಹೋದರನೂ ಸೋನಾಕ್ಷಿ ಮದುವೆಗೆ ಹೋಗುವುದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಶತ್ರುಘ್ನ ಮುನಿಸು ಕೂಡ ಶಮನವಾಗಿದೆ. ಇದರ ಮಧ್ಯೆಯೇ, ಸೋನಾಕ್ಷಿ ಸಿನ್ಹಾಗೆ ಮೆಹಂದಿ ಹಾಕುವ ಶಾಸ್ತ್ರವು ಅದ್ಧೂರಿಯಾಗಿ ನೆರವೇರಿದೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್ ನಟಿ (Bollywood Actress) ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಮುಸ್ಲಿಂ ಯುವಕ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ಮದುವೆಯಾಗುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಮುಂಬೈನಲ್ಲಿ ಸೋನಾಕ್ಷಿ ಸಿನ್ಹಾ ಅವರು ಜೂನ್‌ 23ರಂದು ಮದುವೆಯಾಗಲಿದ್ದು, ಶುಕ್ರವಾರ (ಜೂನ್‌ 21) ಮೆಹಂದಿ ಶಾಸ್ತ್ರವೂ ಅದ್ಧೂರಿಯಾಗಿ ನೆರವೇರಿದೆ. ಮೆಹಂದಿ ಶಾಸ್ತ್ರದ ಮೊದಲ ಫೋಟೊ ಕೂಡ ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮುಂಬೈನಲ್ಲಿ ನಡೆದ ಮೆಹಂದಿ ಶಾಸ್ತ್ರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗವಹಿಸಿದ್ದಾರೆ. ಸೋನಾಕ್ಷಿ ಸಿನ್ಹಾ ಅವರು ಜಹೀರ್‌ ಇಕ್ಬಾಲ್‌ ಹಾಗೂ ಗೆಳೆಯರೊಂದಿಗೆ ನಿಂತಿರುವ ಫೋಟೊ ಲಭ್ಯವಾಗಿದೆ. ಜಹೀರ್‌ ಇಕ್ಬಾಲ್‌ ಅವರ ಸಹೋದರಿ ಸನಮ್‌ ರತಾನ್ಸಿ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡಿದ್ದಾರೆ. ಜಹೀರ್‌ ಇಕ್ಬಾಲ್‌ ಕೂಡ ಕುರ್ತಾ ಧರಿಸಿ ಭಾವಿ ಪತ್ನಿಯೊಂದಿಗೆ ಮಿಂಚಿದ್ದಾರೆ. ಸೋನಾಕ್ಷಿ ಸಿನ್ಹಾ ಅವರ ಫೋಟೊ ವೈರಲ್‌ ಆಗುತ್ತಲೇ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಹಾಜರ್‌ ಎಂದ ಶತ್ರುಘ್ನ ಸಿನ್ಹಾ

ಮುಸ್ಲಿಂ ಯುವಕನ ಜತೆ ಮದುವೆಯಾಗುತ್ತಿರುವುದಕ್ಕೆ, ಅದರಲ್ಲೂ ಮದುವೆ ದಿನಾಂಕವನ್ನೂ ಹೇಳದಿರುವುದಕ್ಕೆ ಮೊದಲು ನಟ, ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಇದಕ್ಕೂ ಮೊದಲು ಅಸಮಾಧಾನ ವ್ಯಕ್ತಪಡಿಸಿದ್ದರು. ಶತ್ರುಘ್ನ ಸಿನ್ಹಾ, ನಟಿಯ ತಾಯಿ ಹಾಗೂ ಸಹೋದರ ಕೂಡ ಭಾಗಿಯಾಗುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ವದಂತಿಗಳಿಗೆಲ್ಲ ಶತ್ರುಘ್ನ ಸಿನ್ಹಾ ಅವರು ತೆರೆ ಎಳೆದಿದ್ದಾರೆ. “ಮೊದಲು ಸಣ್ಣಪುಟ್ಟ ಗೊಂದಲಗಳು ಸೃಷ್ಟಿಯಾಗಿದ್ದವು. ಈಗ ಎಲ್ಲವೂ ಬಗೆಹರಿದಿದೆ. ಜೂನ್‌ 23ರಂದು ನಾವೆಲ್ಲ ಮದುವೆಗೆ ಹೋಗಲಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು. ನಂತರ ಎಲ್ಲವೂ ಸರಿಹೋಗಿದೆ.

ಇದನ್ನೂ ಓದಿ: Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

Continue Reading

Latest

Actress Milana Nagaraj: ಪತಿಯ ಹುಟ್ಟುಹಬ್ಬದಂದೇ ಮಿಲನಾ ನಾಗರಾಜ್ ʼಬೇಬಿ ಶವರ್ʼ; ವಿಡಿಯೊ ನೋಡಿ

Actress Milana Nagaraj: ಹೊಟ್ಟೆಯೊಳಗೆ ಹೊಸ ಜೀವವೊಂದು ಮಿಸುಕಾಡುತ್ತಿದ್ದರೆ ಅದರ ಖುಷಿ ಹೇಳತೀರದು. ನಟಿ ಮಿಲನಾ ನಾಗರಾಜ್ ಅವರು ಈಗ ಈ ಖುಷಿಯ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪುಟಾಣಿ ಜೀವವೊಂದು ಅವರ ಮಡಿಲು ಸೇರಲಿದೆ. ಈಗಂತೂ ಎಲ್ಲರೂ ಬೇಬಿ ಶವರ್ ಅನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ನಟಿ ಮಿಲನಾ ನಾಗರಾಜ್ ಕೂಡ ತಮ್ಮ ಬೇಬಿ ಶವರ್ ಅನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.ಪತಿ ಡಾರ್ಲಿಂಗ್ ಕೃಷ್ಣ ಅವರ ಜನುಮದಿನದಂದೇ ತಮ್ಮ ಬೇಬಿ ಶವರ್ ಅನ್ನು ಸೆಲೆಬ್ರೆಟ್ ಮಾಡಿಕೊಳ್ಳುವ ಮೂಲಕ ಹುಟ್ಟುಹಬ್ಬವನ್ನು ವಿಶೇಷಗೊಳಿಸಿದ್ದಾರೆ.

VISTARANEWS.COM


on

Actress Milana Nagaraj
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್‌ಗಳಲ್ಲಿ ನಟಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಜೋಡಿ ಕೂಡ ಒಂದು. ಪ್ರೀತಿಸಿ ಮದುವೆಯಾದ ಈ ದಂಪತಿ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇದೀಗ ತಾಯಿಯಾಗುತ್ತಿರುವ ಮಿಲನಾ ನಾಗರಾಜ್ (Actress Milana Nagaraj) ಅವರು ತಮ್ಮ ಬೇಬಿ ಶವರ್‌ನಲ್ಲಿ ತುಂಬಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್ ನಟ ಡಾರ್ಲಿಂಗ್ ಕೃಷ್ಣ ಅವರ ಜನುಮ ದಿನ ಜೂನ್ 12ರಂದು. ಈ ಬಾರಿ ಮಿಲನಾ ನಾಗರಾಜ್ ಅವರ ಬೇಬಿ ಶವರ್ ಕೂಡ ಅದೇ ದಿನ ಮಾಡಲಾಗಿದೆ. ಮಿಲನಾ ನಾಗರಾಜ್ ಅವರು ಪತಿಯ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ತಮ್ಮ ಬೇಬಿ ಶವರ್‌ ಅನ್ನು ಒಟ್ಟಿಗೇ ಸೆಲೆಬ್ರೆಟ್ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಪೋಟೊಗಳನ್ನು ಮಿಲನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಈ ದಿನವನ್ನು ತಮ್ಮ ಪತಿಗಾಗಿ ವಿಶೇಷಗೊಳಿಸಲು ಅವರು ಈ ರೀತಿ ಯೋಜನೆ ಮಾಡಿದ್ದರು ಎಂಬುದಾಗಿ ತಿಳಿಸಿದ್ದಾರೆ.

ಹಾಗೆಯೇ ಮಿಲನಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹುಟ್ಟುಹಬ್ಬದ ಪಾರ್ಟಿಯ ಸಣ್ಣ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ವಿಶೇಷವಾದುದೆಂದರೆ, ಪಿಂಟ್ ರೆಸ್ಟ್ ಶೈಲಿಯ ಹೊರಾಂಗಣ ಸೆಟಪ್ ನಲ್ಲಿರುವ ಬೋರ್ಡ್. ಇದರಲ್ಲಿ “ತಂದೆಯಾಗಲಿರುವವರಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂದು ಬರೆಯಲಾಗಿದೆ.

ಈ ವರ್ಷದ ಮಾರ್ಚ್‌ನಲ್ಲಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಪೋಟೊವೊಂದನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಮೊದಲ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಘೋಷಿಸಿದರು. ಹಾಗೂ “ನಮ್ಮನ್ನು ಆಶೀರ್ವದಿಸಿ” ಎಂದು ಶೀರ್ಷಿಕೆ ನೀಡಿದ್ದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದಂಪತಿ ಬಹಿರಂಗಪಡಿಸಿದ್ದಾರೆ. ಈ ಪೋಸ್ಟ್ ಗೆ ಕನ್ನಡ ಚಿತ್ರರಂಗದವರು ಅಭಿನಂದನೆ ಸಲ್ಲಿಸಿದ್ದರು.

ಇದನ್ನೂ ಓದಿ: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

ಪ್ರೀತಂ ಗುಬ್ಬಿ ನಿರ್ದೇಶನದ ‘ನಮ್ ದುನಿಯಾ ನಮ್ ಸ್ಟೈಲ್’ ಚಿತ್ರದ ಚಿತ್ರೀಕರಣದ ವೇಳೆ ಭೇಟಿಯಾದ ಈ ಜೋಡಿ 2015ರಿಂದ ಡೇಟಿಂಗ್ ಪ್ರಾರಂಭಿಸಿದರು. ನಂತರ 2021ರಲ್ಲಿ ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದರು. ಇದೀಗ ಮೊದಲ ಮಗುವಿನ ಬರುವಿಕೆಗಾಗಿ ಕಾಯುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Pavithra Gowda: ಜೈಲಿಗೆ ಪವಿತ್ರಾ ಪೋಷಕರು ಭೇಟಿ; ಕ್ಯಾಮೆರಾ ಕಂಡು ವೈಲೆಂಟ್ ಆದ ಪವಿತ್ರಾ ಗೌಡ ತಮ್ಮ!

Pavithra Gowda:ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ.  ಮಧ್ಯಾಹ್ನ ಚಪಾತಿ, ಅನ್ನ ಸಾಂಬಾರ್ ಮಜ್ಜಿಗೆ ಸವಿದಿದ್ದಾರೆ ಪವಿತ್ರಾ ಗೌಡ. ಮಾಹಿತಿ ಪ್ರಕಾರ ಜೈಲಿನಲ್ಲಿ ಪವಿತ್ರಾ ಹೆಚ್ಚು ಯಾರ ಜತೆಗೂ ಮಾತನಾಡದೇ ಮೌನಕ್ಕೆ ಶರಣರಾಗಿದ್ದಾರೆ.

VISTARANEWS.COM


on

Pavithra Gowda met by parents brother in angry mood
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ (Pavithra Gowda) ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿದೆ.  ಪವಿತ್ರಾ ಗೌಡ ಭೇಟಿಗೆ ಅವರ ಪೋಷಕರು ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಕ್ಯಾಮೆರಾ ಕಂಡು ಪವಿತ್ರಾ ಗೌಡ ತಮ್ಮ ಗರಂ ಆದರು. ಕೊಲೆ ಕೇಸಲ್ಲಿ ಜೈಲು ಸೇರಿರುವ ಅಕ್ಕ ಸೈಲೆಂಟ್ ಆದರೆ ತಮ್ಮ ಫುಲ್ ವೈಲೆಂಟ್ ಆಗಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ.  ಮಧ್ಯಾಹ್ನ ಚಪಾತಿ, ಅನ್ನ ಸಾಂಬಾರ್ ಮಜ್ಜಿಗೆ ಸವಿದಿದ್ದಾರೆ ಪವಿತ್ರಾ ಗೌಡ. ಮಾಹಿತಿ ಪ್ರಕಾರ ಜೈಲಿನಲ್ಲಿ ಪವಿತ್ರಾ ಹೆಚ್ಚು ಯಾರ ಜತೆಗೂ ಮಾತನಾಡದೇ ಮೌನಕ್ಕೆ ಶರಣರಾಗಿದ್ದಾರೆ. ಜೈಲಿನ ಸಿಬ್ಬಂದಿ ಬಳಿಯು ಅಷ್ಟಕ್ಕಷ್ಟೆ ಮಾತಾಡುತ್ತಿದ್ದಾರೆ. ಕೊಟ್ಟ ಊಟವನ್ನು ಕಾಟಾಚಾರಕ್ಕೆ ಸೇವಿಸುತ್ತಿರುವುದಾಗಿ ತಿಳಿದು ಬಂದಿದೆ. ಅರ್ಧಂಬರ್ಧ ಊಟವನ್ನು ಸೇವಿಸಿ ತಟ್ಟೆಯಲ್ಲಿ ಊಟವನ್ನ ಪವಿತ್ರಾ ಹಾಗೆ ಬಿಡುತ್ತಿದ್ದಾರೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಇನ್ನು ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಭೇಟಿಗೆ ಪೋಷಕರು ಆಗಮಿಸಿದ್ದರು. ಪವಿತ್ರಾ ಗೌಡ ತಂದೆ, ತಾಯಿ, ತಮ್ಮ ಮತ್ತು ಚಿಕ್ಕಮ್ಮ ಬಂದಿದ್ದರು. ಈ ವೇಳೆ ಮಾಧ್ಯಮಗಳ ಕ್ಯಾಮೆರಾ ಕಂಡು ಪವಿತ್ರಾ ಗೌಡ ತಮ್ಮ ಗರಂ ಆಗಿದ್ದರು. ʻʻನಿಮ್ಗೆ ಮಾಡೋದಿಕ್ಕೆ ಕೆಲ್ಸ ಇಲ್ವಾʼʼ ಎಂದು ಪವಿತ್ರಾ ಗೌಡ ತಮ್ಮ ಧಿಮಾಕು ಬೇರೆ ಹಾಕಿದ್ದಾರೆ. ಕೊಲೆ ಕೇಸ್ ನಲ್ಲಿ ಅಕ್ಕ ಜೈಲು ಸೇರಿದ್ರು ತಮ್ಮನ ಧಿಮಾಕು ಮಾತ್ರ ಇಳಿಯಲಿಲ್ಲ . ಅಕ್ಕನ ಭೇಟಿಗೆ ಹೋಗುವಾಗ ಮಾಧ್ಯಮದವರ ಮೇಲೆ ತಮ್ಮನ ಪೌರುಷ ಪ್ರದರ್ಶನ ಕಂಡು ಬಂತು.

ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ.

Continue Reading
Advertisement
Kalki 2898 AD Final Trailer Released
ಕರ್ನಾಟಕ2 hours ago

Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

Sonakshi Sinha
ಬಾಲಿವುಡ್2 hours ago

Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

Suryakumar Yadav
ಪ್ರಮುಖ ಸುದ್ದಿ3 hours ago

Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

Central Government monitoring wheat price stability: Union Minister Pralhad Joshi
ಕರ್ನಾಟಕ3 hours ago

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

regional Laboratory sanctioned to Kims Hubballi
ಕರ್ನಾಟಕ3 hours ago

Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

Hinduja Family
ವಿದೇಶ3 hours ago

Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

Gautam Gambhir
ಪ್ರಮುಖ ಸುದ್ದಿ3 hours ago

Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

Rishabh Pant
ಪ್ರಮುಖ ಸುದ್ದಿ4 hours ago

Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

Parking Complex
ಬೆಂಗಳೂರು4 hours ago

Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ13 hours ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 day ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ7 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌