Indian 2 OTT Release: ಒಟಿಟಿಯಲ್ಲಿ ಇಂಡಿಯನ್ 2 ಬಿಡುಗಡೆ ವಿಳಂಬ ಆಗುತ್ತಿರುವುದು ಈ ಕಾರಣಕ್ಕೆ! - Vistara News

ಸಿನಿಮಾ

Indian 2 OTT Release: ಒಟಿಟಿಯಲ್ಲಿ ಇಂಡಿಯನ್ 2 ಬಿಡುಗಡೆ ವಿಳಂಬ ಆಗುತ್ತಿರುವುದು ಈ ಕಾರಣಕ್ಕೆ!

ಕಮಲ್ ಹಾಸನ್ ಅಭಿನಯದ ತಮಿಳು ಚಿತ್ರ ಇಂಡಿಯನ್ 2 ಒಟಿಟಿಯಲ್ಲಿ (Indian 2 OTT Release) ಪ್ರದರ್ಶನ ಕಾಣಲು ವಿಳಂಬವಾಗಿದೆ. ಜುಲೈ 12ರಂದು ಚಿತ್ರ ಮಂದಿರಗಳಿಗೆ ಬಂದಿದ್ದರೂ ಒಟಿಟಿಗೆ ಬರಲು ವಿಳಂಬವಾಗುತ್ತಿದೆ. ಈ ಚಿತ್ರ ಆಗಸ್ಟ್ 2ರಂದು ಒಟಿಟಿಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದರೂ ಬಂದಿಲ್ಲ. ಈ ಚಿತ್ರದ ಪ್ರದರ್ಶನಕ್ಕೆ ನೆಟ್‌ಫ್ಲಿಕ್ಸ್ 150 ಕೋಟಿ ರೂ. ನೀಡಿತ್ತು. ಚಲನಚಿತ್ರ ನಿರ್ಮಾಪಕರು 75 ಕೋಟಿ ರೂ. ಮುಂಗಡ ಪಾವತಿಯನ್ನು ಪಡೆದಿದ್ದರು. ಆದರೆ ನೆಟ್‌ಫ್ಲಿಕ್ಸ್‌ ಈಗ ಹಿಂಜರಿಯುತ್ತಿದೆ.

VISTARANEWS.COM


on

Indian 2 OTT Release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಇಂಡಿಯನ್ 2 (Indian 2 OTT Release) ಜುಲೈ 12 ಚಿತ್ರಮಂದಿರಗಳಲ್ಲಿ (movie theater) ಬಿಡುಗಡೆಯಾಗಿತ್ತು. ಕಮಲ್ ಹಾಸನ್ (kamal hasan), ಸಿದ್ಧಾರ್ಥ್, ಎಸ್.ಜೆ. ಸೂರ್ಯ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿರುವ ಈ ಚಿತ್ರವು ವಿಮರ್ಶಕರು, ಅಭಿಮಾನಿಗಳಿಂದ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಥಿಯೇಟರ್ ಗಳಿಗೆ ಬಂದ ಮೇಲೆ ಶೀಘ್ರದಲ್ಲೇ ಒಟಿಟಿಗೆ (OTT Release) ಬರಲು ನಿರ್ಧರಿಸಿರುವ ಚಿತ್ರ ತಂಡಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಹಿನ್ನಡೆಯಾಗುತ್ತಿದೆ.

ಗಲ್ಲಾ ಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಕಾಣದೇ ಇರುವುದರಿಂದ ಒಟಿಟಿ ಚಿತ್ರದ ಪ್ರದರ್ಶನವನ್ನು ಹಿಂದಕ್ಕೆ ತಳ್ಳುತ್ತಿದೆ. ಈ ಮೊದಲು ಆಗಸ್ಟ್ 2 ರಂದು ಬಿಡುಗಡೆಯಾಗುತ್ತೆ ಎಂದು ನಿರೀಕ್ಷಿಸಿದ್ದ ಚಿತ್ರ ಇದೀಗ ಆಗಸ್ಟ್ 9ಕ್ಕೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಒಟಿಟಿ ಪ್ರೇಕ್ಷಕರು ಈ ಸಿನಿಮಾ ನೋಡಲು ಕೊಂಚ ಸಮಯ ಬೇಕಾಗಬಹುದು.

ವರದಿ ಪ್ರಕಾರ, ಇಂಡಿಯನ್ 2 ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದು ಎಲ್ಲಾ ಭಾಷೆಗಳಲ್ಲಿ ಚಿತ್ರದ ಪ್ರದರ್ಶನಕ್ಕೆ ನೆಟ್‌ಫ್ಲಿಕ್ಸ್ 150 ಕೋಟಿ ರೂ. ನೀಡಿತ್ತು. ಚಲನಚಿತ್ರ ನಿರ್ಮಾಪಕರು 75 ಕೋಟಿ ರೂ. ಮುಂಗಡ ಪಾವತಿಯನ್ನು ಪಡೆದಿದ್ದಾರೆ. ಆದರೆ ಚಿತ್ರವೀಕ್ಷಕರ ನಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ನೆಟ್‌ಫ್ಲಿಕ್ಸ್ ಕಾರ್ಯನಿರ್ವಾಹಕರು ಮುಂಗಡ ಮೊತ್ತದ ಮರು ಪಾವತಿಗೆ ವಿನಂತಿಸಿದ್ದಾರೆ.


ಹೀಗಾಗಿ ಒಟಿಟಿಯಲ್ಲಿ ಚಿತ್ರ ಪ್ರದರ್ಶನ ಕೊಂಚ ವಿಳಂಬವಾಗುತ್ತಿದೆ. ಆಗಸ್ಟ್ 2ರಂದು ಒಟಿಟಿಯಲ್ಲಿ ಬರಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇಂಡಿಯನ್ 2 ಚಿತ್ರವು ಒಟಿಟಿಯಲ್ಲಿ ಆಗಸ್ಟ್ 9ರಂದು ತೆರೆ ಕಾಣುವ ನಿರೀಕ್ಷೆ ಇದೆ ಎಂದು ʼ123 ತೆಲುಗುʼ ವರದಿ ಹೇಳಿದ್ದರೂ ಈ ಬಗ್ಗೆ ನಿಖರವಾದ ಮಾಹಿತಿ ಅಲ್ಲ.

ಇದನ್ನೂ ಓದಿ: Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

ಇಂಡಿಯನ್ 2 ಚಿತ್ರವೂ ಜುಲೈ ತಿಂಗಳಲ್ಲಿ ವಿಶ್ವದಾದ್ಯಂತ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಕಂಡಿತು. ಆದರೆ ಹೆಚ್ಚಾಗಿ ನಕಾರಾತ್ಮಕ ವಿಮರ್ಶೆಗಳೇ ಕೇಳಿ ಬಂದಿವೆ. ಬರವಣಿಗೆ, ಅತಿಯಾದ ಉದ್ದ, ಭವ್ಯತೆಗೆ ಹೆಚ್ಚಿನ ಒತ್ತು ಧ್ವನಿಮುದ್ರಿಕೆ ಕುರಿತು ಆಕ್ಷೇಪ ಕೇಳಿ ಬಂದಿದ್ದರೂ ಕಮಲ್ ಹಾಸನ್ ಅಭಿನಯಕ್ಕೆ ಮಾತ್ರ ಭಾರಿ ಮೆಚ್ಚುಗೆ ಗಳಿಸಿದೆ.

ಆರು ಗಂಟೆಗಳಿಗೂ ಹೆಚ್ಚು ಅವಧಿಯ ಚಲನಚಿತ್ರ ಇದಾಗಿದ್ದು, ಎರಡು ಭಾಗಗಳಾಗಿ ವಿಭಜಿಸಲಾಗಿದೆ. ಇಂಡಿಯನ್ 2ನ ಮುಂದುವರಿದ ಭಾಗ ಇಂಡಿಯನ್ 3 ಚಿತ್ರವನ್ನು 2025ರಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

VISTARANEWS.COM


on

ನರೇಂದ್ರ ಮೋದಿ

ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕಿಚ್ಚ.

ಸುದೀರ್ಘ ಅವಧಿಗೆ ಭಾರತದ ಚುನಾಯಿತ ಪ್ರಧಾನಮಂತ್ರಿಯಾಗಿ ಹೊಸ ಇತಿಹಾಸ ನಿರ್ಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುದೀಪ್, “12 ವರ್ಷಗಳು ಕಳೆದರೂ ಅದೇ ಉತ್ಸಾಹ, ಅದೇ ಕಾರ್ಯವೇಗ, ಕಿಂಚಿತ್ತೂ ದಣಿವೇ ಇಲ್ಲ” ಎಂದು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ದೇಶದ ಅಭಿವೃದ್ಧಿ ಮತ್ತು ಜನಸೇವೆಯತ್ತ ಪ್ರಧಾನಿ ಮೋದಿ ತೋರಿರುವ ನಿರಂತರ ಬದ್ಧತೆ ಹಾಗೂ ಸಮರ್ಪಣೆಯನ್ನು ಕೊಂಡಾಡಿರುವ ಸುದೀಪ್, ಈ ಸಾಧನೆ ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಮುಂದಿನ ದಿನಗಳಿಗೂ ಯಶಸ್ಸು, ಆರೋಗ್ಯ ಮತ್ತು ಇನ್ನಷ್ಟು ಸಾಧನೆಗಳು ತಮ್ಮದಾಗಲಿ ಎಂದು ಹಾರೈಸಿದ್ದಾರೆ.

ಭಾರತದ ಚುನಾವಣೋತ್ತರ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಸತತವಾಗಿ 4,399 ದಿನಗಳ(ಜೂನ್‌ 10ಕ್ಕೆ) ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.

ಕಿಚ್ಚ ಸುದೀಪ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ಅನೇಕರು ಪ್ರಧಾನಿ ಮೋದಿ ಅವರ ಐತಿಹಾಸಿಕ ಆಡಳಿತಾವಧಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಸಿನಿಮಾ

ಜಗತ್ತೇ ನಿನ್ನ ವಿರುದ್ಧ ನಿಂತರೂ ,ನಾನು ನಿನ್ನ ಜೊತೆ ಇರುವೆ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ, ವಿಜಯಲಕ್ಷ್ಮಿ ದಂಪತಿಗೆ ಇಂದು 23ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಹೀಗಿರುವಾಗ ಗಂಡನ ನೆನೆದು ಪತ್ನಿ ವಿಜಯಲಕ್ಷ್ಮಿ ಗಂಡನ ಕೈ ಹಿಡಿದಿರುವ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇನ್ನು ಪೋಸ್ಟ್‌ನಲ್ಲಿ ಪ್ರತಿ ಬಿರುಗಾಳಿ ಪ್ರತಿ ಮೌನದಲ್ಲಿಯೂ ನಾನು ನಿನ್ನ ಕೈಹಿಡಿಯುತ್ತೇನೆ. ಸಂದರ್ಭಗಳು ನಮ್ಮನ್ನು ದೂರ ಮಾಡಲು ಎಷ್ಟೇ ಪ್ರಯತ್ನಿಸಿದರೂ ನನ್ನ ಹೃದಯ ಯಾವಾಗಲೂ ನಿನ್ನನ್ನೇ ಆರಿಸುತ್ತದೆ. ನಿನ್ನ ವಿರುದ್ಧ ಜಗತ್ತೇ ನಿಂತರೂ ನಾನು ನಿನ್ನ ಜೊತೆಗೇ ಇರುತ್ತೇನೆ. ಏನೇ ಬರಲಿ ನಿನ್ನ ಕೈಬಿಡಲ್ಲ ಎಂದು ವಿಜಯಲಕ್ಷ್ಮಿ ಭಾವುಕವಾಗಿ ಬರೆದಿರುವುದು ಮನ ಮುಟ್ಟುವಂತಿದೆ.

ಇಂದು ಪತ್ನಿ ವಿಜಯಲಕ್ಷ್ಮಿ, ಮಗ ಸೇರಿ ಐವರಿಗೆ ಮಾತ್ರ ಜೈಲಿನಲ್ಲಿರುವ ದರ್ಶನ್‌ ಅವರನ್ನು ಭೇಟಿ ಮಾಡಲು 30 ನಿಮಿಷಗಳ ಕಾಲ ಅವಕಾಶ ನೀಡಲಾಗಿದೆ. ಜೊತೆಗೆ ಮನೆಯಿಂದ ತರುವ ಹಣ್ಣು, ತಿನಿಸುಗಳಿಗೆ ಅನುಮತಿ ನೀಡಲಾಗಿದೆ.

Continue Reading

Latest

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

VISTARANEWS.COM


on


ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ದರ್ಶನ್‌ ಕಾರಾಗೃಹ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ತನ್ನ ಪತ್ನಿ ವಿಜಯಲಕ್ಷ್ಮಿ ಮತ್ತು ಮಗನನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು, ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಲು ಅವಕಾಶ ಕೋರಿ ಕೇಂದ್ರ ಕಾರಾಗೃಹ ಎಸ್‌ಪಿ ಅಂಶುಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೈದಿಗಳನ್ನು ಭೇಟಿ ಮಾಡುವ ಸಂದರ್ಶನ ಕೊಠಡಿ ಬದಲು ಪ್ರತ್ಯೇಕವಾಗಿ ಸೆಲ್‌ ಒಳಗೆ ಭೇಟಿ ಅವಕಾಶ ಬೇಕೆಂದು ಕೋರಿದ್ದಾರೆ.
ಡಿಜಿಪಿ ಅಲೋಕ್‌ ಕುಮಾರ್‌ ಭೇಟಿ ಮಾಡಿದ ವಿಜಯಲಕ್ಷ್ಮಿ
ದರ್ಶನ್‌ ಜೈಲಧಿಕಾರಗಳಿಗೆ ಪತ್ರ ಬರೆದಿದ್ದರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಮೇ.16ರಂದು ಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ದರ್ಶನ್‌ ಅವರನ್ನು ಜೈಲಿನ ಕೊಠಡಿಯ ಒಳಗೆ ಭೇಟಿ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆಂದು ಮಾಹಿತಿ ತಿಳಿದುಬಂದಿದೆ.

ನಾಳೆ ಮೇ 19 ದರ್ಶನ್‌, ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ದರ್ಶನ್‌ ಭೇಟಿಗೆ ಅವರ ಪತ್ನಿ, ಮಗನಿಗೆ ಅವಕಾಶ ಸಿಗಲಿ ಅಂತ ಅಭಿಮಾನಿಗಳು ಬಯಸುತ್ತಿದ್ದಾರೆ.

Continue Reading

Latest

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

VISTARANEWS.COM


on

ನಟ ದರ್ಶನ್‌ ಅವರಿಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್‌ಟಾ ಪೇಜ್‌ನಲ್ಲಿ ಹಾರ್ಟ್‌ ಬ್ರೇಕ್‌ ಇಮೋಜಿ ಮತ್ತು ದರ್ಶನ್‌ ಭಾವಚಿತ್ರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ದರ್ಶನ್‌ಗೆ ವಿಜಯಲಕ್ಷ್ಮಿ ಅವರು ಆಗಾಗ ಧೈರ್ಯ ತುಂಬುತ್ತಿದ್ದರು. ಕುಟುಂಬದ ಬೆಂಬಲವೇ ಅವರಿಗೆ ದೊಡ್ಡ ಶಕ್ತಿಯಾಗಿತ್ತು ಎನ್ನಲಾಗುತ್ತಿದೆ.

ಆದರೆ ಇತ್ತೀಚಿನ ಬೆಳವಣಿಗೆಗಳ ನಂತರ ದರ್ಶನ್‌ ಮೌನವಾಗಿದ್ದು, ಜೈಲಿನಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಇದೇ ವೇಳೆ ವಿಜಯಲಕ್ಷ್ಮಿಯವರು ಸಹ ಮೌನಕ್ಕೆ ಜಾರಿದ್ದು, ಇದೀಗ ಈ ಪೋಸ್ಟ್‌ ಮೂಲಕ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.

Continue Reading
Advertisement
ಬಿಡದಿ ಟೌನ್‌ಶಿಪ್‌
Latest2 hours ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest2 hours ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest1 day ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest1 day ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest2 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest2 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ3 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest3 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest3 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest3 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌