Shah Rukh Khan: ಶಾರುಖ್‌ ಇದೀಗ ʻಅಮುಲ್‌ ಬೇಬಿʼ; ಪೋಸ್ಟ್‌ ವೈರಲ್‌! - Vistara News

ಬಾಲಿವುಡ್

Shah Rukh Khan: ಶಾರುಖ್‌ ಇದೀಗ ʻಅಮುಲ್‌ ಬೇಬಿʼ; ಪೋಸ್ಟ್‌ ವೈರಲ್‌!

Shah Rukh Khan: ಅಮುಲ್ ಇಂಡಿಯಾ ಡೆಲಿಷಿಯಸ್ ಪೋಸ್ಟ್‌ ಸಖತ್‌ ವೈರಲ್‌ ಆಗುತ್ತಿದ್ದು, ಅಮುಲ್ ಅಟ್ಲಿ ಬಟರ್ಲಿ ಡೆಲಿಷಿಯಸ್ (Atlee Butterly Delicious) ಎಂದು ಪೋಸ್ಟ್ ಮಾಡಿದೆ. ಇದರಲ್ಲಿ ಶಾರುಖ್​ ಅಮುಲ್​ ಬೇಬಿಯಾಗಿ ಮಿಂಚಿದ್ದಾರೆ.

VISTARANEWS.COM


on

Indian dairy brand Amul Shah Rukh Khan Jawan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಲೇ ಇದೆ. ಭಾರತದಲ್ಲೇ 600 ಕೋಟಿ ರೂ. ಗಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿತ್ರ ಬಿಡುಗಡೆಯಾದ ಮೂರನೇ ವಾರದಲ್ಲಿಯೇ 1000 ಕೋಟಿ ರೂ. ಗಡಿ ದಾಟಿದೆ. ಇದೀಗ ಭಾರತೀಯ ಡೈರಿ ಬ್ರ್ಯಾಂಡ್‌ ʻಅಮುಲ್ʼ (Dairy brand Amul ) ಸಿನಿಮಾದ ಯಶಸ್ಸಿಗೆ ಪೋಸ್ಟರ್‌ ಮೂಲಕ ಗೌರವ ಸಲ್ಲಿಸಿದೆ. ಅಮುಲ್ ಇಂಡಿಯಾ ಡೆಲಿಷಿಯಸ್ ಪೋಸ್ಟ್‌ ಸಖತ್‌ ವೈರಲ್‌ ಆಗುತ್ತಿದ್ದು, ಅಮುಲ್ ಅಟ್ಲಿ ಬಟರ್ಲಿ ಡೆಲಿಷಿಯಸ್ (Atlee Butterly Delicious) ಎಂದು ಪೋಸ್ಟ್ ಮಾಡಿದೆ. ಇದರಲ್ಲಿ ಶಾರುಖ್​ ಅಮುಲ್​ ಬೇಬಿಯಾಗಿ ಮಿಂಚಿದ್ದಾರೆ.

ಶಾರುಖ್ ಖಾನ್ ಚಿತ್ರದಲ್ಲಿ ಅಮುಲ್‌ ಬೇಬಿಯಾಗಿ ಅರ್ಧ-ಮಾಸ್ಕ್ ಲುಕ್ ಜತೆಗೆ ಬೆಣ್ಣೆಯೊಂದಿಗೆ ಬ್ರೆಡ್ ಸ್ಲೈಸ್ ಹಿಡಿದು ಪೋಸ್‌ ಕೊಟ್ಟಿದ್ದಾರೆ. ಶಾರುಖ್ ಖಾನ್ ಅವರ ಮ್ಯಾನೇಜರ್, ಪೂಜಾ ದದ್ಲಾನಿ, ಇನ್‌ಸ್ಟಾದಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ,. “ಅದ್ಭುತ” ಕಲಾಕೃತಿಗಾಗಿ ಅಮುಲ್ ಇಂಡಿಯಾಕ್ಕೆ ಧನ್ಯವಾದ ಸೂಚಿಸಿದ್ದಾರೆ. ಅಮುಲ್ ಸಿನಿಮೀಯ ಯಶಸ್ಸನ್ನು ಹಲವು ಬಾರಿ ಈ ರಿತಿ ಕ್ರಿಯೇಟಿವ್‌ಆಗಿ ಆಚರಿಸಿಕೊಂಡಿದೆ. ಈ ಹಿಂದೆ, ರಜನಿಕಾಂತ್ ಅವರ “ಜೈಲರ್” ಚಿತ್ರಕ್ಕಾಗಿ ವಿಶೇಷ ಪೋಸ್ಟರ್ ರಚಿಸಿದ್ದರು. ಪೋಸ್ಟರ್‌ನಲ್ಲಿ ರಜನಿಕಾಂತ್ ಮತ್ತು ತಮನ್ನಾ ಭಾಟಿಯಾ ಅವರ ಕಾರ್ಟೂನ್ ಆವೃತ್ತಿಗಳನ್ನು ರಚಿಸಲಾಗಿತ್ತು.

ಇದನ್ನೂ ಓದಿ: Shah Rukh Khan: ಕೇವಲ ಸ್ಮಾರ್ಟ್‌ ಫೋನ್‌ ಬಳಸಿ ʻಜವಾನ್‌ʼ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್; ಶಾರುಖ್‌ ಫಿದಾ!

ಕೇವಲ 18 ದಿನಗಳಲ್ಲಿ 1,000 ಕೋಟಿ ಬಾಚಿದ ಜವಾನ್‌!

ಈ ವರ್ಷದ ಆರಂಭದಲ್ಲಿ, ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿದ ಪಠಾಣ್‌, ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿತ್ತು. ಪಠಾಣ್‌ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಿತ್ತು. ನಾಲ್ಕು ವಾರಗಳ ಬಳಿಕ ಅಂದರೆ ಫೆಬ್ರವರಿ 21 ರಂದು ವಿಶ್ವಾದ್ಯಂತ 1000 ಕೋಟಿ ರೂ. ಗಡಿ ದಾಟಿತು. ಈ ಸಿನಿಮಾಗೆ ಹೋಲಿಸಿದರೆ, ಜವಾನ್ ಕೇವಲ 18 ದಿನಗಳಲ್ಲಿ 1,000 ಕೋಟಿ ರೂ. ಗಡಿ ದಾಟಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಜವಾನ್‌ ಸೆಪ್ಟೆಂಬರ್ 7ರಂದು ಬಿಡುಗಡೆಯಾಗಿತ್ತು.

ಜವಾನ್ ತನ್ನ ಮೂರನೇ ವಾರಾಂತ್ಯದಲ್ಲಿ ಗಳಿಕೆಯಲ್ಲಿ ಮತ್ತಷ್ಟು ಏರಿಕೆ ಕಂಡಿದೆ. ಸೆ. 24ರಂದು ವಿಶ್ವಾದ್ಯಂತ ಒಟ್ಟು ಕಲೆಕ್ಷನ್ 979.08 ಕೋಟಿಯಾಗಿದೆ. ಸೆ. 25ರಂದು 25.84 ಕೋಟಿ ರೂ. ಗಳಿಸಿತ್ತು. ಇದೀಗ ಇಲ್ಲಿಯವರೆಗೆ 1,004 ಕೋಟಿ ರೂ,ಗಿಂತ ಹೆಚ್ಚು ವಿಶ್ವಾದ್ಯಂತ ಗಳಿಸಿದೆ. ವರದಿಯ ಪ್ರಕಾರ, ಜವಾನ್ ತನ್ನ ಮೂರನೇ ಭಾನುವಾರ ಭಾರತದಲ್ಲಿ 14.95 ಕೋಟಿ ರೂ. ಸಂಗ್ರಹಿಸಿದೆ. ಮೊದಲ ದಿನದಂದು ಎಲ್ಲಾ ಭಾಷೆಗಳಲ್ಲಿ ಭಾರತದಲ್ಲಿ 75 ಕೋಟಿ ರೂ. ಗಳಿಕೆ ಕಂಡಿತ್ತು.

ಶಾರುಖ್ ಖಾನ್, ನಯನತಾರಾ ಮತ್ತು ವಿಜಯ್ ಸೇತುಪತಿ ಅವರಲ್ಲದೆ, ಜವಾನ್ ಚಿತ್ರದಲ್ಲಿ ಪ್ರಿಯಾಮಣಿ, ಸನ್ಯಾ ಮಲ್ಹೋತ್ರಾ, ರಿಧಿ ಡೋಗ್ರಾ, ಲೆಹರ್ ಖಾನ್, ಗಿರಿಜಾ ಓಕ್ ಮತ್ತು ಸಂಜೀತಾ ಭಟ್ಟಾಚಾರ್ಯ ಕೂಡ ನಟಿಸಿದ್ದಾರೆ. ಸಂಜಯ್ ದತ್ ಮತ್ತು ದೀಪಿಕಾ ಪಡುಕೋಣೆ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Anant Ambani: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಪ್ಲ್ಯಾನಿಂಗ್‌ ಹೇಗಿದೆ? ಸಖತ್‌ ಕ್ಯೂರಿಯಸ್‌ ಆಗಿರಲಿದೆ ರಾಧಿಕಾ ಉಡುಪು!

Anant Ambani: ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

VISTARANEWS.COM


on

Anant Ambani things to know from celebrity guests to space theme bash
Koo

ಬೆಂಗಳೂರು: ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಇಟಲಿಯಲ್ಲಿ ಆಯೋಜಿಸಿದ್ದಾರೆ.  ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಅಂಬಾನಿ ಕುಟುಂಬದ ಇತರ ಗಣ್ಯ ವ್ಯಕ್ತಿಗಳು ಎರಡನೇ ವಿವಾಹ ಪೂರ್ವ ಸಂಭ್ರಮಾಚರಣೆಗೆ ತೆರಳುತ್ತಿದ್ದಾರೆ. 2024ರ ಮಾರ್ಚ್‌ನಲ್ಲಿ ಜಾಮ್‌ನಗರದಲ್ಲಿ ನಡೆದ ಪ್ರಿ ವೆಡ್ಡಿಂಗ್‌ ಆಚರಣೆಗಳಂತೆಯೇ ಇದು ಕೂಡ ಅದ್ಧೂರಿಯಾಗಿ ನಡೆಯುವ ನಿರೀಕ್ಷೆಯಿದೆ ಎನ್ನಲಾಗಿದೆ.

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ,ಮಗಳು ರಾಹಾ ಕಪೂರ್, ಹಾಗೆಯೇ ರಣವೀರ್ ಸಿಂಗ್, ಸಲ್ಮಾನ್ ಖಾನ್, ಮಾಜಿ ಭಾರತೀಯ ಕ್ರಿಕೆಟ್ ನಾಯಕ ಎಂಎಸ್ ಧೋನಿ – ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ ಈಗಾಗಲೇ ಇಟಲಿಗೆ ತೆರಳಿದ್ದಾರೆ. ಇವರೆಲ್ಲರೂ ಮುಂಬೈನ ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಆಚರಣೆ ಎಲ್ಲಿ ಪ್ರಾರಂಭವಾಗುತ್ತದೆ? ಹೇಗೆ ಇರಲಿದೆ?

ವರದಿಯ ಪ್ರಕಾರ, ಮೇ 28 ಮತ್ತು 30ರ ನಡುವೆ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು)  800 ಅತಿಥಿಗಳಿಗಾಗಿ  ಪಾರ್ಟಿ ಆಯೋಜಿಸಲಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. 

ಮೇ 30 ರಂದು, ಅತಿಥಿಗಳು ಬಂದಿಳಿಯುತ್ತಾರೆ. ನಂತರ ಔತಣಕೂಟ ಮತ್ತು ಪಾರ್ಟಿಯು 1 ಗಂಟೆಗೆ ಪ್ರಾರಂಭವಾಗುತ್ತದೆ. ಮೇ 31 ರಂದು ಬೆಳಗ್ಗೆ ಕ್ರೂಸ್‌ನಲ್ಲಿ ಅತಿಥಿಗಳು ಇಳಿಯುತ್ತಾರೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ರಣಬೀರ್ ಕಪೂರ್, ಆಲಿಯಾ ಭಟ್, ರಣವೀರ್ ಸಿಂಗ್ ಮುಂತಾದ ಗಣ್ಯ ಸೆಲೆಬ್ರಿಟಿಗಳು ಇರಲಿದ್ದಾರೆ. ಆಮೀರ್ ಖಾನ್ ಮತ್ತು ಶಾರುಖ್ ಖಾನ್ ಕುಟುಂಬದೊಂದಿಗೆ ಆಚರಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

ತಂತ್ರಜ್ಞಾನ ಬಳಸಿ ತಯಾರಿಸಲಾಗಿದೆ ರಾಧಿಕಾ ಮರ್ಚಂಟ್‌ ಡ್ರೆಸ್‌!

ರಾಧಿಕಾ ಮರ್ಚಂಟ್‌ ಅಂದವಾದ ಕಸ್ಟಮ್-ನಿರ್ಮಿತ ಗ್ರೇಸ್ ಲಿಂಗ್ ಕೌಚರ್ ( Grace Ling Couture piece) ಪೀಸ್ ಧರಿಸುತ್ತಾರೆ ಎನ್ನಲಾಗಿದೆ. ಈ ಉಡುಪು 3D ವಿನ್ಯಾಸದಲ್ಲಿ ಇರಲಿದೆಯಂತೆ. ಏರೋಸ್ಪೇಸ್ ಅಲ್ಯೂಮಿನಿಯಂ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎನ್ನಲಾಗಿದೆ.

ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು. ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಬಾಲಿವುಡ್

Anant Ambani Radhika: ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌: ಇಟಲಿಗೆ ಹೊರಟ ಆಲಿಯಾ ಭಟ್ ದಂಪತಿ!

Anant Ambani Radhika: ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಆಯೋಜಿಸಿದ್ದಾರೆ. ಹೀಗಾಗಿ ಆಲಿಯಾ ದಂಪತಿ ಇಟಲಿಗೆ ಹೊರಡಿದ್ದಾರೆ ಎಂದು ವರದಿಯಾಗಿದೆ. 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ.

VISTARANEWS.COM


on

Ranbir Kapoor and Alia Bhatt flew to Italy
Koo

ಬೆಂಗಳೂರು: ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಗಳು ರಾಹಾ ಕಪೂರ್ ಜತೆ ಭಾನುವಾರ ರಾತ್ರಿ (ಮೇ.26) ಮುಂಬೈನಿಂದ ಇಟಲಿಗೆ ಹಾರಿದ್ದಾರೆ. ಮುಂಬೈನ ಕಲಿನಾ ವಿಮಾನ ನಿಲ್ದಾಣದಿಂದ (Ranbir Kapoor and Alia Bhatt flew to Italy) ಕುಟುಂಬ ಹೊರಡುತ್ತಿರುವ ಹಲವು ಫೋಟೊ ಹಾಗೂ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ (Anant Ambani Radhika) ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಮೇ 28ರಿಂದ 30ರವರೆಗೆ ಆಯೋಜಿಸಿದ್ದಾರೆ. ಹೀಗಾಗಿ ಆಲಿಯಾ ದಂಪತಿ ಇಟಲಿಗೆ ಹೊರಡಿದ್ದಾರೆ ಎಂದು ವರದಿಯಾಗಿದೆ.

800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೊದಲ್ಲಿ ರಣಬೀರ್‌ ಮಗಳನ್ನು ಎತ್ತಿಕೊಂಡಿದ್ದಾರೆ. ಪ್ರಯಾಣಕ್ಕಾಗಿ, ಆಲಿಯಾ ಬೂದು ಬಣ್ಣದ ಹೂಡಿ ಮತ್ತು ಪ್ಯಾಂಟ್ ಧರಿಸಿದ್ದರು. ರಣಬೀರ್ ಬಿಳಿ ಟೀ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದರು. ರಾಹಾ ಕಪೂರ್ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಅಂಬಾನಿ ಕುಟುಂಬ ಆಯೋಜಿಸಿದ್ದು, ಈ ವಿವಾಹಪೂರ್ವ ಆಚರಣೆಯಲ್ಲಿ ಕುಟುಂಬ ಭಾಗಿಯಾಗಲಿದೆ.

ಇದನ್ನೂ ಓದಿ: Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಕ್ರೀಡೆ

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Rohit Sharma: ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್​ ಸಾಧನೆ ಜತೆಗೆ ವಿಭಿನ್ನ ಮನೋಭಾವದ ಮೂಲಕ ಜನಪ್ರಿಯ. ಜನಪ್ರಿಯ ಕ್ರಿಕೆಟಿಗನಾಗಿರುವ ಅವರು ಹಲವಾರು ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಎಲ್ಲ ಕಂಪನಿಗಳ ಜಾಹೀರಾತುಗಳಿಗಾಗಿ ನಟಿಸುತ್ತಿದ್ದಾಎ. ಇದೀಗ ಅವರು ಬಾಲಿವುಡ್​ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ. ಅವರು ಕ್ರೀಡೆಯನ್ನು ಆಧಾರಿಸಿ ಮಾಡಿರು ಸಿನಿಮಾ “ಮಿಸ್ಟರ್ & ಮಿಸೆಸ್ ಮಹಿ” ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚಿತವಾಗಿ ಚಲನಚಿತ್ರವನ್ನು ಪ್ರಚಾರ ಮಾಡುವ ಸಲುವಾಗಿ ಈ ಚಿತ್ರವು ಕ್ರೀಡೆಯ ಅತ್ಯಂತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರನ್ನು ಒಳಗೊಂಡ ಮೂಲಕ ವಿಶಿಷ್ಟ ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲಿ ರೋಹಿತ್ ಹೆಸರು ಕಾಣಿಸುತ್ತಿದೆ.

ಬಾಲಿವುಡ್ ಮತ್ತು ಕ್ರಿಕೆಟ್ ಭಾರತದಲ್ಲಿ ಮನರಂಜನೆಯ ಪ್ರಮುಖ ಮೂಲಗಳು. ಎರಡೂ ಕಡೆ ಭರ್ಜರಿ ಮನರಂಜನೆ ಸಿಗುತತದೆ. ಕಾಲ್ಪನಿಕ ಹಾಗೂ ನೈಜ ಪ್ರಪಂಚಲದಲ್ಲಿ ಇದು ಹೆಚ್ಚು ಹತ್ತಿರ ಹಾಗೂ ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಪಡುವಂಥ ಸಂಗತಿ. ಹೀಗಾಗಿ ಕ್ರಿಕೆಟ್​ ಕುರಿತು ಹಲವಾರು ಸಿನಿಮಾಗಳು ಬಂದಿವೆ. ಅದೇ ರೀತಿ ಇದೀಗ ಹೊಸ ಸಿನಿಮಾವೊಂದು ಸೆಟ್ಟೇರಿದ್ದು ಅದರಲ್ಲಿ ಕೆಲವು ಕ್ರಿಕೆಟಿಗರ ಉಪಸ್ಥಿತಿಯನ್ನು ನಿರೀಕ್ಷೆ ಮಾಡಲಾಗಿದೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಸಿನಿಮಾ ಬಾಲಿವುಡ್ ಮತ್ತೊಂದು ಕ್ರಿಕೆಟ್ ಆಧಾರಿತ ಡ್ರಾಮಾ ಸಿನಿಮಾಗಿದೆ. ಇದು ಈ ವಾರದ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು ಭಾರಿ ನಿರೀಕ್ಷೆ ಮುಟ್ಟಿಸಿದೆ. ಪ್ರತಿಭಾವಂತ ನಟ ರಾಜ್ ಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಲ್ಪನಿಕ ಚಿತ್ರವು ಕ್ರಿಕೆಟ್ ಬಗ್ಗೆ ಉತ್ಸಾಹ ಹೊಂದಿರುವ ದಂಪತಿ ಜೀವನದ ಕುರಿತಾಗಿದೆ.

ಇದನ್ನೂ ಓದಿ: Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

ಈ ಚಲನಚಿತ್ರವು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಹಲವಾರು ಏರಿಳಿತಗಳನ್ನು ಬಿಂಬಿಸುತ್ತದೆ. ಮಹಿಳಾ ಕ್ರೀಡಾಪಟುಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಖ್ಯಾತಿಯನ್ನು ಇದು ಬೊಟ್ಟು ಮಾಡಿದೆ. ಇದಲ್ಲದೆ, ಕ್ರಿಕೆಟ್ ಕಥಾಹಂದರದ ಅವಿಭಾಜ್ಯ ಅಂಗವಾಗಿರುವುದರಿಂದ, ಚಿತ್ರದ ಆಕರ್ಷಣೆ ಮತ್ತು ವಾಸ್ತವಿಕತೆಯನ್ನು ಹೆಚ್ಚಿಸಲು ರೋಹಿತ್ ಶರ್ಮಾ ಅವರಂತಹ ಕ್ರಿಕೆಟ್ ಸೂಪಸ್ಟಾರ್​ಗಳನ್ನು ಚಿತ್ರ ತಂಡ ಸೇರಿಸಿಕೊಂಡಿದ್ದಾರೆ. ಅವರಲ್ಲಿ ರೋಹಿತ್ ಕೂಡ ಒಬ್ಬರು.

ಚಿತ್ರ ಬಿಡುಗಡೆಗೆ ಕೆಲವು ದಿನಗಳ ಮೊದಲು, ‘ಅಗರ್ ತುಮ್ ಹೋ’ ಎಂಬ ಹಾಡನ್ನು ಯೂಟ್ಯೂಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೂಡ ಇದ್ದರು. ರಾಜ್​ಕುಮಾರ್​ ಮತ್ತು ಜಾನ್ವಿ ರೋಹಿತ್ ಅವರ ಶತಕವನ್ನು ಊಟದ ಮೇಜಿನ ಬಳಿ ಸಂಭ್ರಮಿಸುತ್ತಿರುವುದು ಹಾಡಿನಲ್ಲಿ ಕಂಡುಬಂದಿದೆ. ಕ್ರಿಕೆಟ್ ಪ್ರೇಮಿಗಳಾಗಿ ತಮ್ಮ ಉತ್ಸಾಹ ತೋರುವುದು ಕಾಣಿಸುತ್ತಿದೆ.

ಈ ಹಾಡಿನಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಉಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳನ್ನು ಚಲನಚಿತ್ರದ ಕಡೆಗೆ ಸೆಳೆಯುವ ಸಾಧ್ಯತೆಯಿದೆ. ಮೇ 31 ರ ಬಿಡುಗಡೆಗೆ ಮುಂಚಿತವಾಗಿ ಅದರ ನಿರೀಕ್ಷೆಯನ್ನು ಹೆಚ್ಚಿಸುತ್ತದೆ. ವಿಶೇಷವೆಂದರೆ, ಚಿತ್ರದ ಪ್ರಮುಖ ನಟಿ ಜಾನ್ವಿ ಕಪೂರ್ ಕೂಡ ಈ ತಿಂಗಳ ಆರಂಭದಲ್ಲಿ ಚಿತ್ರದ ಪ್ರಚಾರಕ್ಕಾಗಿ ಐಪಿಎಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Continue Reading

ಬಾಲಿವುಡ್

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner: ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

VISTARANEWS.COM


on

Kendall Jenner American model flaunted
Koo

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್7 mins ago

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Mitchell Starc
ಕ್ರೀಡೆ9 mins ago

Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

Love Propose
ಬಾಗಲಕೋಟೆ31 mins ago

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Dhruva Sarja Trainer Prashanth Was Attacked First Reaction
ಸ್ಯಾಂಡಲ್ ವುಡ್35 mins ago

Dhruva Sarja: ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ನೀಡಿದ ಸ್ಪಷ್ಟನೆ ಏನು?

Asaduddin Owaisi Party Leader
ದೇಶ48 mins ago

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

BS Yediyurappa
ಪ್ರಮುಖ ಸುದ್ದಿ50 mins ago

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Fire accident
ದೇಶ52 mins ago

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Sunil Narine
ಪ್ರಮುಖ ಸುದ್ದಿ59 mins ago

Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

deep fake
ಬೆಂಗಳೂರು1 hour ago

Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

Dhruva Sarja Gym trainer prashanth attacked
ಸ್ಯಾಂಡಲ್ ವುಡ್1 hour ago

Dhruva Sarja:  ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು21 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌