Actor Vishal | ವಿಶೇಷ ಚೇತನ ನಟಿ ಜತೆ ನಟ ವಿಶಾಲ್‌ ಡೇಟಿಂಗ್‌? - Vistara News

ಟಾಲಿವುಡ್

Actor Vishal | ವಿಶೇಷ ಚೇತನ ನಟಿ ಜತೆ ನಟ ವಿಶಾಲ್‌ ಡೇಟಿಂಗ್‌?

ನಟ ವಿಶಾಲ್‌ ಮತ್ತು ನಟಿ ಅಭಿನಯ (Actor Vishal) ಇಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಟಿ ಅಭಿನಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Actor Vishal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ನಲ್ಲಿ ನಟ ವಿಶಾಲ್‌ (Actor Vishal) ಹಾಗೂ ವಿಶೇಷ ಚೇತನ ನಟಿ ಅಭಿನಯ ಅವರ ಮಧ್ಯೆ ಪ್ರೇಮಾಂಕುರವಾಗಿದೆ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ʻಮಾರ್ಕ್‌ ಆಂಟನಿʼ ಚಿತ್ರದಲ್ಲಿ ವಿಶಾಲ್‌ ಮಡದಿ ಆಗಿ ಅಭಿನಯ ಬಣ್ಣ ಹಚ್ಚಿದ್ದರು. ಇದೀಗ ಇಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಟಿ ಅಭಿನಯ ಸ್ಪಷ್ಟನೆ ನೀಡಿದ್ದಾರೆ.

ʻಮಾರ್ಕ್‌ ಆಂಟನಿʼ ಸಿನಿಮಾ ಶೀರ್ಷಿಕೆಯಿಂದಲೇ ಟಾಲಿವುಡ್‌ನಲ್ಲಿ ಸಖತ್‌ ಸದ್ದು ಮಾಡಿತ್ತು. ಕೆಲದ ದಿನಗಳ ಹಿಂದೆ ಚಿತ್ರೀಕರಣ ವೇಳೆ ವಿಶಾಲ್‌ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಈ ಚಿತ್ರಕ್ಕೆ ರಿತು ವರ್ಮಾ ಕೂಡ ಮತ್ತೋರ್ವ ನಾಯಕಿ ಇದ್ದು, ನಿರ್ದೇಶಕ ಎಸ್‌ ಜೆ ಸೂರ್ಯ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ವಿಶಾಲ್‌ ಜತೆ ನಟಿ ವರಲಕ್ಷ್ಮೀ ಶರತ್‌ ಕುಮಾರ್‌ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ನಂತರ ಇಬ್ಬರೂ ದೂರವಾಗಿದ್ದಾರೆ ಎನ್ನಲಾಯಿತು. ಇದೀಗ ಅಭಿನಯ ಹೆಸರು ತಳುಕು ಹಾಕಿಕೊಂಡಿದ್ದು ಈ ಬಗ್ಗೆ ಮಾತನಾಡಿ ʻʻನನ್ನ ಮತ್ತು ವಿಶಾಲ್‌ ನಡುವೆ ಯಾವುದೇ ರಿಲೇಷನ್‌ಶಿಪ್‌ ಇಲ್ಲ. ಚಿತ್ರದಲ್ಲಿ ನಾವಿಬ್ಬರೂ ಗಂಡ ಹೆಂಡತಿ ಪಾತ್ರ ನಿರ್ವಹಿಸಿದ್ದಕ್ಕೆ ರಿಯಲ್‌ ಲೈಫ್‌ನಲ್ಲಿ ಗಂಡ ಹೆಂಡತಿ ಆಗಿ ಬಿಡುತ್ತೀವಾʼʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Mahesh Babu | ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬುಗೆ ಮಾತೃ ವಿಯೋಗ

ಅಭಿನಯ ಅವರು ವಿಶೇಷ ಚೇತನ ನಟಿಯಾಗಿದ್ದು, ತಮಿಳಿನ ʻʻನಾಡೋಡಿಗಳ್‌ʼ ಚಿತ್ರದಲ್ಲಿ ದೊಡ್ಡ ಬ್ರೇಕ್‌ ಸಿಕ್ಕಿತ್ತು. 3 ವರ್ಷಗಳ ಹಿಂದೆ ಹೈದರಾಬಾದ್ ಮೂಲದ ಅನಿಷಾ ಅಲ್ಲಾ ರೆಡ್ಡಿ ಜತೆಗೆ ನಟ ವಿಶಾಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ನಿಶ್ಚಿತಾರ್ಥ ಮುರಿದುಬಿತ್ತು ಎನ್ನಲಾಗಿದೆ.

ಇದನ್ನೂ ಓದಿ | Pavitra Lokesh | ಪವಿತ್ರಾ ಲೋಕೇಶ್‌-ನರೇಶ್‌ ನಡುವೆ ಬ್ರೇಕಪ್‌ ಆಗಿದೆ ಅಂತಿದೆ ಟಾಲಿವುಡ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ಟಾಲಿವುಡ್

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

Nandamuri Balakrishna: ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

VISTARANEWS.COM


on

Nandamuri Balakrishna BB4 new film announced
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು ಜನುಮದಿನದ ಸಂಭ್ರಮ. ಹೀಗಾಗಿ ಅನೇಕ ಸಿನಿ ಗಣ್ಯರು ಸೇರಿದಂತೆ ಅವರ ಫ್ಯಾನ್ಸ್‌ ವಿಶ್‌ ಮಾಡುತ್ತಿದ್ದಾರೆ. ಇದೀಗ ಬೊಯಾಪಾಟಿ ಶ್ರೀನು ಅವರ ನಾಲ್ಕನೇ ಚಿತ್ರಕ್ಕಾಗಿ ಮತ್ತೆ ನಂದಮೂರಿ ಬಾಲಕೃಷ್ಣ ಒಂದಾಗಿದ್ದಾರೆ. 64ನೇ ವಸಂತಕ್ಕೆ ಕಾಲಿಟ್ಟ ಬಾಲಯ್ಯ ಇದೀಗ ‘BB4’ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. BB4ಎಂದು ತಾತ್ಕಲಿಕವಾಗಿ ಶಿರ್ಷಿಕೆ ಇಡಲಾಗಿದೆ.

‘ಸಿಂಹ’, ‘ಲೆಜೆಂಡ್’ ಮತ್ತು ‘ಅಖಂಡ’ ನಂತರ ನಾಲ್ಕನೇ ಬಾರಿಗೆ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು ಕೈ ಜೋಡಿಸಿದ್ದಾರೆ. ʻʻ’ಗಾಡ್ ಆಫ್ ಮಾಸಸ್’ ನಂದಮೂರಿ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು BB4ಗಾಗಿ ಮತ್ತೆ ಒಂದಾಗುತ್ತಾರೆ. ಜನ್ಮದಿನದ ಶುಭಾಶಯಗಳು, ಬಾಲಯ್ಯ ಬಾಬುʼʼಎಂದು ಪೋಸ್ಟರ್‌ ಹಂಚಿಕೊಂಡಿದೆ. ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.

ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

ಇದನ್ನೂ ಓದಿ: Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದರು. ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ತಂದೆ ಎನ್‌ಟಿಆರ್ ಹಾದಿಯಲ್ಲೇ ನಟ ಬಾಲಯ್ಯ ಚಿತ್ರರಂಗಕ್ಕೆ ಬಂದರು. ತಂದೆ ರಾಜಕೀಯರಂಗ ಪ್ರವೇಶಿಸಿ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಈಗ ಬಾಲಯ್ಯ- ಚಂದ್ರಬಾಬು ಬೀಗರು ಸಹ ಆಗಿದ್ದಾರೆ. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Continue Reading

South Cinema

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

Kalki 2898 AD: ʼ ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು.

VISTARANEWS.COM


on

Kalki 2898 AD Deepika Padukone looks poster
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡ ದೀಪಿಕಾ ಪಡುಕೋಣೆ ಒಳಗೊಂಡಿರುವ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರದ ಟ್ರೈಲರ್‌ ನಾಳೆ (ಜೂನ್‌ 10) ಬಿಡುಗಡೆಯಾಗಲಿದೆ.

ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಾಳೆ ಟ್ರೈಲರ್‌ ರಿಲೀಸ್‌

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಈ ಮುಂಚೆ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿತ್ತು. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿತ್ತು. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading

ಸಿನಿಮಾ

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್‌ವರ್ಕ್‌ನ ಸಂಸ್ಥಾಪಕ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಭಾನುವಾರ ನಡೆದ ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ramoji Rao Funeral
Koo

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಮತ್ತು ಈಟಿವಿ ನೆಟ್‌ವರ್ಕ್‌ನ (ETV Network) ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಭಾನುವಾರ ಪಾಲ್ಗೊಂಡರು. ರಾಮೋಜಿ ರಾವ್‌ ಅವರ ಪಾರ್ಥಿವ ಶರೀರ ಹೊರಲು ಚಂದ್ರಬಾಬು ನಾಯ್ಡು ಅವರು ಹೆಗಲು ಕೊಟ್ಟಿದ್ದು ಗಮನ ಸೆಳೆಯಿತು.

ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನಾಯ್ಡು ಅವರು ರಾಮೋಜಿ ಅವರ ಪಾರ್ಥಿವ ಶರೀರವನ್ನು ಸಾಗಿಸಲು ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸೇರಿಕೊಂಡರು. ಅಂತ್ಯಕ್ರಿಯೆಯ ಸ್ಥಳದಲ್ಲಿ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದಾಗ ರಾಜಕೀಯ ನಾಯಕ ನಾಯ್ಡು ಅವರು ಮೆರವಣಿಗೆಯನ್ನು ಮುನ್ನಡೆಸಿದರು.


ರಾಮೋಜಿ ರಾವ್ ಅವರು ನಗರದ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಬೆಳಗಿನ ಜಾವ 3.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಅನಂತರ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಬಳಿಕ ಅವರು ನಿಧನರಾದರು. ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲಂ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಿಗೆ ಹಲವಾರು ಪ್ರಮುಖ ರಾಜಕೀಯ ನಾಯಕರು ಮತ್ತು ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸಿದರು.


ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಪ್ರಯತ್ನಗಳು, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಹೇಳಿದ್ದರು.


ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಅವರು ವರ್ಣಿಸಿದ್ದರು.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

ಮಹೇಶ್ ಬಾಬು ಸಂತಾಪ

ನಟ ಮಹೇಶ್ ಬಾಬು ಅವರು, ರಾಮೋಜಿ ರಾವ್ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಅವರ ಸಮಯಕ್ಕಿಂತ ಯಾವಾಗಲೂ ಮುಂದಿರುವ ದಾರ್ಶನಿಕ. ರಾಮೋಜಿ ಫಿಲ್ಮ್ ಸಿಟಿ ಅವರ ತೇಜಸ್ಸಿಗೆ ಮತ್ತು ಸಿನಿಮಾದ ಮೇಲಿನ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ರಿತೇಶ್ ದೇಶ್‌ಮುಖ್ ಸಂತಾಪ

ರಿತೇಶ್ ದೇಶ್‌ಮುಖ್ ಅವರು, ಐಕಾನ್, ಲೆಜೆಂಡ್ ಶ್ರೀ ರಾಮೋಜಿ ರಾವ್ ಅವರು ಇನ್ನಿಲ್ಲ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ಹೊಸಬರಿಗೆ ಅವಕಾಶಗಳನ್ನು ನೀಡುವ ಅವರ ನಂಬಿಕೆಗೆ ಧನ್ಯವಾದಗಳು. ಅವರು ಯಾರೂ ಮಾಡದ ಕೆಲಸವನ್ನು ಮಾಡಲು ಧೈರ್ಯ ಮಾಡಿದರು. ಅವರ ಪರಂಪರೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Continue Reading
Advertisement
Actor Darshan
ಪ್ರಮುಖ ಸುದ್ದಿ9 mins ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ19 mins ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ20 mins ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ28 mins ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ59 mins ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್1 hour ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ1 hour ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ1 hour ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್2 hours ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 20242 hours ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌