Taraka Ratna: ತಾರಕರತ್ನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡ ಜ್ಯೂ. ಎನ್‌ಟಿಆರ್‌, ಶಿವರಾಜ್‌ಕುಮಾರ್‌ Vistara News
Connect with us

ಟಾಲಿವುಡ್

Taraka Ratna: ತಾರಕರತ್ನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡ ಜ್ಯೂ. ಎನ್‌ಟಿಆರ್‌, ಶಿವರಾಜ್‌ಕುಮಾರ್‌

ಜನವರಿ 27ರ ಶುಕ್ರವಾರ ಹೃದಯಾಘಾತವಾಗಿದ್ದು, ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ.

VISTARANEWS.COM


on

JNTR Sivarajkumar shared information about Taraka Ratna health condition
Koo

ಬೆಂಗಳೂರು: ನಂದಮೂರಿ ತಾರಕ ರತ್ನ (Taraka Ratna) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಜ್ಯೂ ಎನ್‌ಟಿಆರ್‌, ಕಲ್ಯಾಣ್ ರಾಮ್, ಸಚಿವ ಸುಧಾಕರ್ ಹಾಗೂ ಹ್ಯಾಟ್ರಿಕ್‌ ಹೀರೊ ಶಿವರಾಜಕುಮಾರ್ ಆಸ್ಪತ್ರೆಗೆ ಧಾವಿಸಿ ತಾರಕ ರತ್ನ ಆರೋಗ್ಯದ ಬಗ್ಗೆ ವೈದ್ಯರ ಜತೆ ಚರ್ಚಿಸಿದರು.

ಆಸ್ಪತ್ರೆ ಹೊರಗಡೆ ಜ್ಯೂ.ಎನ್‌ಟಿಆರ್‌ ಹಾಗೂ ಬಾಲಯ್ಯ ಪರ ಅವರ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಮಾತನಾಡಿ ʻʻತಾರಕ್‌ ಅವರು ಸ್ವಲ್ಪ ಚೇತರಿಕೆ ಕಾಣುತ್ತಿದ್ದಾರೆ. ಕಣ್ಣುಗಳ ಚಲನೆ ಕಂಡು ಬರುತ್ತಿದೆ. ಸದ್ಯ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ವೈದ್ಯರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಚಿಕಿತ್ಸೆಗೆ ತಾರಕ್ ಸ್ಪಂದಿಸುತ್ತಿದ್ದಾರೆ. ಒಂದು ಕುಟುಂಬವಾಗಿ ನಾನು ಇಲ್ಲಿಗೆ ಬಂದಿದ್ದೆನೆʼʼಎಂದು ವೈದ್ಯರ ಭೇಟಿ ಬಳಿಕ ಹೇಳಿಕೆ ನೀಡಿದರು.

ಜೂನಿಯರ್ ಎನ್ ಟಿ ಆರ್ ಮಾತನಾಡಿ ʻʻಅಭಿಮಾನಿಗಳ ಆಶೀರ್ವಾದ ತಾರಕ ರತ್ನ ಮೇಲಿದೆ. ಬೇಗ ಗುಣಮುಖರಾಗಿ ಬರುತ್ತಾರೆ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಡಾ.ಸುಧಾಕರ್ ಅರವರಿಗೆ ಧನ್ಯವಾದಗಳು. ಅವರು ನಮ್ಮ ಕಷ್ಟ ಕಾಲದಲ್ಲಿ ಸಹಾಯ ಮಾಡುತ್ತಿದ್ದಾರೆʼʼ ಎಂದರು.

ಸಚಿವ ಸುಧಾಕರ್ ಮಾತನಾಡಿ ʻʻತಾರಕ ರತ್ನ ಅವರು ಸಂಪೂರ್ಣ ಅಪಾಯದಿಂದ ಹೊರ ಬಂದಿಲ್ಲ. ಆದರೆ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ. ಮೆದುಳಿಗೆ ಸಂಬಂಧಿಸಿದಂತೆ ನಿಮಾನ್ಸ್‌ನಿಂದ ವೈದ್ಯರ ತಂಡ ಬಂದಿದೆ. ವೈದ್ಯರ ತಂಡ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆʼʼ ಎಂದರು.

ಇದನ್ನೂ ಓದಿ: Taraka Ratna: ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರ

ಇದೆ ವೇಳೆ ನಟ ಬಾಲಕೃಷ್ಣ ಮಾತನಾಡಿ ʻʻತಾರಕ ರತ್ನ ಕುಸಿದು ಬಿದ್ದು ಪ್ರಜ್ಞಾಹೀನರಾದರು. ವೈದ್ಯರ ಪರಿಶೀಲನೆ ವೇಳೆ ಹೃದಯ ಬಡಿತ ಸ್ತಬ್ದವಾಗಿತ್ತು. ಬಳಿಕ ಅಚ್ಚರಿಯೆಂಬಂತೆ ಹೃದಯ ಬಡಿತ ಮರಳಿತು. ವೈದ್ಯರ ಶಿಪಾರಸ್ಸಿನಂತೆ ನಾರಾಯಣ ಹೃದಯಾಲಯಕ್ಕೆ ಶಿಪ್ಟ್ ಮಾಡಲಾಗಿದೆ. ವೈದ್ಯರು ಬಹಳ ಉತ್ತಮವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ತಾರಕ್ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಕೆಲವೊಮ್ಮೆ ಕಣ್ಣು ಮಿಟಕಿಸುವುದು, ದೇಹ ಅಲುಗಾಡುವುದು ಕಂಡು ಬರುತ್ತಿದೆ. ಅಭಿಮಾನಿಗಳ ಶುಭ ಹಾರೈಕೆಗೆ ಚಿರ ಋಣಿ ಆಗಿದ್ದೇನೆ. ತಾರಕ್ ಆರೋಗ್ಯ ವಿಚಾರಿಸಲು ಶಿವರಾಜ್ ಕುಮಾರ್ ಆಗಮಿಸಿದ್ದಾರೆ. ರಾಜ್ ಕುಮಾರ್ ಮತ್ತು ನಮ್ಮ ಕುಟುಂಬದ ನಡುವೆ ಉತ್ತಮ ಬಾಂಧವ್ಯ ಇದೆʼʼ ಎಂದರು. ಇದೆ ವೇಳೆ ಸಹೋದರ ಪುನೀತ್ ಅಗಲಿಕೆ ಬಗ್ಗೆ ಬೇಸರ ಇದೆ ಎಂದು ಭಾವುಕರಾದರು ಬಾಲಕೃಷ್ಣ.

ಇದನ್ನೂ ಓದಿ: Taraka Ratna: ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರ

ಜನವರಿ 27ರ ಶುಕ್ರವಾರ ಹೃದಯಾಘಾತವಾಗಿದ್ದು, ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ. ಈಗಾಗಲೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಬೆಂಗಳೂರಿಗೆ ಬಂದು, ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದಾರೆ.

South Cinema

Actress Kajal Aggarwal : ನಂದಮುರಿ ಬಾಲಕೃಷ್ಣಗೆ ಜೋಡಿಯಾಗಲಿದ್ದಾರೆ ನಟಿ ಕಾಜಲ್‌ ಅಗರ್ವಾಲ್‌

ನಂದಮುರಿ ಬಾಲಕೃಷ್ಣ ಅವರ ಎನ್‌ಬಿಕೆ 108 ಸಿನಿಮಾದಲ್ಲಿ ನಟಿ ಕಾಜಲ್‌ ಅಗರ್ವಾಲ್‌ (Actress Kajal Aggarwal) ನಾಯಕ ನಟಿಯಾಗಿ ನಟಿಸಲಿದ್ದಾರೆ. ಈ ವಿಚಾರವನ್ನು ಸಿನಿ ತಂಡ ಅಧಿಕೃತಗೊಳಿಸಿದೆ.

VISTARANEWS.COM


on

Edited by

Koo

ಹೈದರಾಬಾದ್‌: ವೀರ ಸಿಂಹ ರೆಡ್ಡಿ ಸಿನಿಮಾ ಹಿಟ್‌ ಆದ ಸಂತಸದಲ್ಲಿ ನಟ ನಂದಮುರಿ ಬಾಲಕೃಷ್ಣ ಅವರಿದ್ದಾರೆ. ಅದರ ಬೆನ್ನಲ್ಲೇ ನಟ ಅನಿಲ್‌ ರವಿಪುಡಿ ಅವರ ಇನ್ನೂ ಹೆಸರಿಡದ ʼಎನ್‌ಬಿಕೆ 108ʼ ಸಿನಿಮಾ ನಟನೆಯಲ್ಲೂ ಬಿಜಿಯಾಗಿದ್ದಾರೆ. ಬಹುನಿರೀಕ್ಷಿತ ಸಿನಿಮಾವಾದ ಇದರಲ್ಲಿ ಬಾಲಯ್ಯ ಅವರಿಗೆ ಜತೆಯಾಗಿ ಯಾರು ನಟಿಸಲಿದ್ದಾರೆ ಎನ್ನುವ ಕುತೂಹಲ ಇಲ್ಲಿಯವರೆಗಿತ್ತು. ಆದರೆ ಇದೀಗ ಚಿತ್ರತಂಡ ಆ ಕುತೂಹಲಕ್ಕೆ ತೆರೆ ಎಳೆದಿದ್ದು, ನಟಿ ಕಾಜಲ್‌ ಅಗರ್ವಾಲ್‌ (Actress Kajal Aggarwal) ಅವರನ್ನು ಸಿನಿಮಾ ತಂಡಕ್ಕೆ ಕರೆತಂದಿರುವುದಾಗಿ ಘೋಷಿಸಿದೆ.

ಇದನ್ನೂ ಓದಿ: South Indian Cinema | ನಯನತಾರಾರಿಂದ ಕಾಜಲ್ ಅಗರ್ವಾಲ್‌ವರೆಗೆ: 2022ರಲ್ಲಿ ತಾಯಿಯಾದ ಸೆಲೆಬ್ರೆಟಿಗಳಿವರು!
ಈ ಬಗ್ಗೆ ತಮಿಳಿನ ಸಿನಿಮಾಗಳ ಪಿಆರ್‌ ಆಗಿರುವ ವಂಶಿ ಶೇಖರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಎನ್‌ಬಿಕೆ 108 ಸಿನಿ ತಂಡ ಪ್ರತಿಭಾನ್ವಿತ ನಟಿ ಕಾಜಲ್‌ ಅಗರ್ವಾಲ್‌ ಅವರನ್ನು ಚಿತ್ರಕ್ಕೆ ಬರಮಾಡಿಕೊಂಡಿದೆ. ಸಿನಿಮಾ ಬಗ್ಗೆ ಇನ್ನೂ ಹೆಚ್ಚಿನ ಸುದ್ದಿಗಳು ಸದ್ಯದಲ್ಲೇ ಹೊರಬೀಳಲಿವೆ” ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಬಾಲಕೃಷ್ಣ ಅವರು ಈಗಾಗಲೇ ಎನ್‌ಬಿಕೆ 108 ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯದಲ್ಲೇ ನಟಿ ಕಾಜಲ್‌ ಕೂಡ ಚಿತ್ರೀಕರಣಕ್ಕೆ ಹಾಜರಾಗಲಿದ್ದಾರೆ ಎಂದು ಮಾಹಿತಿಯಿದೆ.‌


ಎನ್‌ಬಿಕೆ 108 ಸಿನಿಮಾ ಕಳೆದ ಆಗಸ್ಟ್‌ನಲ್ಲೇ ಘೋಷಣೆಯಾಗಿತ್ತು. ಈ ಬಗ್ಗೆ ನಿರ್ದೇಶಕ ಅನಿಲ್‌ ಅವರೇ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಅದಲ್ಲದೆ ಸಿನಿಮಾಕ್ಕೆ ಎಸ್‌.ಥಾಮನ್‌ ಅವರ ಸಂಗೀತ ನಿರ್ದೇಶನವಿರಲಿದೆ ಎಂದೂ ಅವರು ತಿಳಿಸಿದ್ದರು.

Continue Reading

South Cinema

Niharika Konidela: ಮೆಗಾಸ್ಟಾರ್ ಕುಟುಂಬದ ಕುಡಿ ನಿಹಾರಿಕಾ ದಾಂಪತ್ಯದಲ್ಲಿ ಬಿರುಕು

ಇತ್ತೀಚಿನ ವರದಿಗಳ ಪ್ರಕಾರ, ನಿಹಾರಿಕಾ ಕೊನಿಡೆಲಾ (Niharika Konidela) ಮತ್ತು ಅವರ ಪತಿ ಚೈತನ್ಯ ಇಬ್ಬರೂ ಬೇರೆಯಾಗಿದ್ದು, ಸದ್ಯದಲ್ಲಿಯೇ ಡಿವೋರ್ಸ್‌ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ವದಂತಿಗಳ ನಡುವೆ ಇನ್‌ಸ್ಟಾಗ್ರಾಮ್‌ನಲ್ಲಿ ಇಬ್ಬರೂ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಚೈತನ್ಯ ತಮ್ಮ ಪ್ರೊಫೈಲ್‌ನಿಂದ ಮದುವೆಯ ಚಿತ್ರಗಳನ್ನು ಡಿಲಿಟ್‌ ಸಹ ಮಾಡಿದ್ದಾರೆ.

VISTARANEWS.COM


on

Edited by

Niharika unfollows husband on Instagram
Koo

ಬೆಂಗಳೂರು: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಹೋದರನ ಮಗಳು ನಿಹಾರಿಕಾ (Niharika Konidela) ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನಲಾಗುತ್ತಿದೆ. 2020ರ ಡಿಸೆಂಬರ್‌ನಲ್ಲಿ ಉದಯಪುರದ ಉದಯವಿಲಾಸ್‌ನಲ್ಲಿ ಚೈತನ್ಯ ಜೊನ್ನಲಗಡ್ಡ ಅವರೊಂದಿಗೆ ನಿಹಾರಿಕಾ ಕೊನಿಡೇಲಾ ಅವರು ಅದ್ಧೂರಿಯಾಗಿ ಪ್ರೇಮ ವಿವಾಹವಾಗಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ನಿಹಾರಿಕಾ ಕೊನಿಡೆಲಾ ಮತ್ತು ಅವರ ಪತಿ ಚೈತನ್ಯ ಇಬ್ಬರೂ ಬೇರೆಯಾಗಿದ್ದು, ಸದ್ಯದಲ್ಲಿಯೇ ಡಿವೋರ್ಸ್‌ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ವದಂತಿಗಳ ನಡುವೆ ಇನ್‌ಸ್ಟಾಗ್ರಾಮ್‌ನಲ್ಲಿ ಇಬ್ಬರೂ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಚೈತನ್ಯ ತಮ್ಮ ಪ್ರೊಫೈಲ್‌ನಿಂದ ಮದುವೆಯ ಚಿತ್ರಗಳನ್ನು ಡಿಲಿಟ್‌ ಸಹ ಮಾಡಿದ್ದಾರೆ.

2020ರಲ್ಲಿ ನಡೆದ ಮದುವೆಯಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟರುಗಳಾದ ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್ ಮತ್ತು ಅಲ್ಲು ಅರ್ಜುನ್ ಸೇರಿದಂತೆ ಕೊನಿಡೇಲಾ ಕುಟುಂಬದ ಅನೇಕರು ಭಾಗವಹಿಸಿದ್ದರು. ಕೆಲವು ದಿನಗಳ ಹಿಂದೆ ನಿಹಾರಿಕಾ ತನ್ನ ಪತಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ತಮ್ಮ ಮದುವೆಯ ಚಿತ್ರಗಳನ್ನು ಫೋಟೊಗಳನ್ನೂ ಡಿಲಿಟ್‌ ಮಾಡಿದ್ದಾರೆ. ಇದೀಗ ಜೋಡಿ ಬೇರೆಯಾಗುತ್ತಿದೆ ಎಂಬ ವದಂತಿಗಳು ಹರಿದಾಡಿದ್ದರೂ ಜೋಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Yuzvendra Chahal | ನಮ್ಮ ದಾಂಪತ್ಯ ಜೀವನದಲ್ಲಿ ಒಡಕು ಮೂಡಿಲ್ಲ, ವದಂತಿ ಹಬ್ಬಿಸಬೇಡಿ ಎಂದ ಚಹಲ್‌

ತೆಲುಗು ಚಿತ್ರಗಳಾದ ʻಒಕ ಮನಸುʼ ಮತ್ತು ʻಹ್ಯಾಪಿ ವೆಡ್ಡಿಂಗ್‌ʼನಲ್ಲಿ ಕೆಲಸ ಮಾಡಿದ ನಿಹಾರಿಕಾ ಕೊನಿಡೆಲಾ, ಆಗಸ್ಟ್ 2020ರಲ್ಲಿ ಚೈತನ್ಯ ಜೊನ್ನಲಗಡ್ಡಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು.

Continue Reading

South Cinema

Allu Arjun: ಅಲ್ಲು ಅರ್ಜುನ್ ಜನುಮದಿನದಂದೇ ಪುಷ್ಪ 2 ಸಿನಿಮಾದ ಟೀಸರ್‌ ರಿಲೀಸ್‌?

ಪುಷ್ಪ 2 (Allu Arjun ಕಳೆದ ನವೆಂಬರ್‌ನಲ್ಲಿ ಲುಕ್ ಟೆಸ್ಟ್‌ನೊಂದಿಗೆ ಸೆಟ್ಟೇರಿತು. ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಮೊದಲ ಹಂತದ ಶೂಟಿಂಗ್‌ ಮುಗಿಸಿದೆ. ಚಿತ್ರತಂಡ ಇಲ್ಲಿಯವರೆಗೆ ಚಿತ್ರೀಕರಿಸಿದ ಆಕ್ಷನ್ ಸೀಕ್ವೆನ್ಸ್‌ಗಳನ್ನು ಮೂರು ನಿಮಿಷಗಳ ಟೀಸರ್ ಅನ್ನು ತಯಾರಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Edited by

Pushpa The Rise to be released on Allu Arjuns birthday
Koo

ಬೆಂಗಳೂರು: ನಟ ಅಲ್ಲು ಅರ್ಜುನ್ (Allu Arjun) ಅವರ ಹುಟ್ಟುಹಬ್ಬ ದಿನವಾಗಿರುವ ಏಪ್ರಿಲ್ 8ರಂದು ಪುಷ್ಪ 2 ಚಿತ್ರದ ಟೀಸರ್‌ ಬಿಡುಗಡೆ ಮಾಡಲು ಚಿತ್ರ ತಂಡ ಸಿದ್ಧವಾಗಿದೆ. ಪುಷ್ಪ 2 ಕಳೆದ ನವೆಂಬರ್‌ನಲ್ಲಿ ಸೆಟ್ಟೇರಿತ್ತು. ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಮೊದಲ ಹಂತದ ಶೂಟಿಂಗ್‌ ಮುಗಿಸಿದೆ.

ತೆಲುಗು ಚಲನಚಿತ್ರಗಳ ಟ್ವೀಟ್ ಪ್ರಕಾರ, ಚಿತ್ರತಂಡ ಇಲ್ಲಿಯವರೆಗೆ ಚಿತ್ರೀಕರಿಸಿದ ಆಕ್ಷನ್ ಸೀಕ್ವೆನ್ಸ್‌ಗಳನ್ನು ಮೂರು ನಿಮಿಷಗಳ ಟೀಸರ್ ಅನ್ನು ತಯಾರಿಸಿದ್ದಾರೆ. ಅಲ್ಲು ಅರ್ಜುನ್ ಅವರ ಜನ್ಮದಿನದಂದು ಏಪ್ರಿಲ್ 8 ರಂದು ಬಿಡುಗಡೆ ಮಾಡಲು ಯೋಜಿಸಿದ್ದಾರೆ ಎಂದು ವರದಿ ಮಾಡಿದೆ. ಎರಡನೇ ಭಾಗವು ಅಲ್ಲು ಅರ್ಜುನ್ ಮತ್ತು ಫಹದ್ ಫಾಸಿಲ್ ನಡುವಿನ ಮುಖಾಮುಖಿಯ ಮೇಲೆ ಕೇಂದ್ರೀಕರಿಸುತ್ತದೆ. ಚಿತ್ರದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

ಅಲ್ಲು ಅರ್ಜುನ್‌ ಸಂಭಾವನೆ ಪ್ರಮಾಣ ಹೆಚ್ಚಳ

ಇತ್ತೀಚೆಗೆ ಅಲ್ಲು ಅರ್ಜುನ್‌ ಅವರ ನಟನೆಯ ಎಲ್ಲ ಸಿನಿಮಾಗಳು ಹಿಟ್‌ ಲಿಸ್ಟ್‌ ಸೇರುತ್ತಿರುವ ಹಿನ್ನೆಲೆ ನಟ ತನ್ನ ಸಂಭಾವನೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ. ಹಾಗೆಯೇ ಪುಷ್ಪಾ 2 ಸಿನಿಮಾದಲ್ಲಿ ನಟಿಸುವುದಕ್ಕೆ ಬರೋಬ್ಬರಿ 150 ಕೋಟಿ ರೂ. ಕೊಡಬೇಕು ಎಂದು ಚಿತ್ರತಂಡವನ್ನು ಕೇಳಿದ್ದಾರೆ. ಆದರೆ ಚಿತ್ರತಂಡ ಮತ್ತು ನಟ ಕುಳಿತು ಚರ್ಚೆ ನಡೆಸಿದ್ದು, 125 ಕೋಟಿ ರೂ. ಅನ್ನು ಕೊಡಲು ಒಪ್ಪಿಕೊಳ್ಳಲಾಗಿದೆ ಎಂದು ವರದಿಯಿದೆ.

ಪುಷ್ಪಾ 2 ಸಿನಿಮಾ ತಂಡವು ಎಲ್ಲ ಭಾಷೆಗಳಲ್ಲಿ ಸಿನಿಮಾ ತೆರೆಯ ಹಕ್ಕು ಕಾಯ್ದಿರಿಸಿಕೊಳ್ಳಲು ಒಟ್ಟು 1000 ಕೋಟಿ ರೂ. ಕೇಳಿತ್ತು ಎಂದು ಈ ಹಿಂದೆ ವರದಿಯಾಗಿತ್ತು. ಪುಷ್ಪಾ 2 ಸಿನಿಮಾ ಗೆದ್ದೇ ಗೆಲ್ಲುತ್ತದೆ ಎನ್ನುವ ನಂಬಿಕೆಯಲ್ಲಿ ಚಿತ್ರತಂಡ ಮತ್ತು ನಟ ಅಲ್ಲು ಅರ್ಜುನ್‌ ಇದ್ದಾರೆ. ಈ ಸಿನಿಮಾ ಬಾಹುಬಲಿ ಮತ್ತು ಕೆಜಿಎಫ್‌ 2 ಸಿನಿಮಾದ ದಾಖಲೆಗಳನ್ನೂ ಮುರಿಯಲಿದೆ ಎನ್ನುವ ವಿಶ್ವಾಸವನ್ನು ಅಲ್ಲು ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗಿದೆ. ತೆಲುಗಿನಲ್ಲಿ ಚಿತ್ರೀಕರಿಸಲಾದ ಪುಷ್ಪಾ ಮೊದಲ ಭಾಗವನ್ನು ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: Allu Arjun: ನಟಿ ಭಾನುಶ್ರೀ ಮೆಹ್ರಾರನ್ನು ಬ್ಲಾಕ್‌ ಮಾಡಿದ ಅಲ್ಲು ಅರ್ಜುನ್‌; ಸ್ಪಷ್ಟನೆ ನೀಡಿದ ನಟಿ

ಬುಡಕಟ್ಟು ಜನಾಂಗದ ಹುಡುಗಿಯಾಗಿ ಸಾಯಿ ಪಲ್ಲವಿ

ಮೂಲಗಳ ಪ್ರಕಾರ ಸಾಯಿ ಪಲ್ಲವಿ ಈಗಾಗಲೇ 10 ದಿನಗಳ ಕಾಲ ಶೂಟಿಂಗ್‌ಗಾಗಿ ಮೀಸಲಟ್ಟಿದ್ದು, ಚಿತ್ರದಲ್ಲಿ ಬುಡಕಟ್ಟು ಜನಾಂಗದ ಹುಡುಗಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ.

ಮೊದಲ ಪಾರ್ಟ್‌ನಲ್ಲಿ ಮಲಯಾಳಂ ಚಿತ್ರರಂಗದ ಫಹಾದ್‌ ಫಾಸಿಲ್‌ ಮತ್ತು ಕನ್ನಡ ಚಿತ್ರರಂಗದ ಡಾಲಿ ಧನಂಜಯ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪುಷ್ಪಾ: ದಿ ರೈಸ್‌ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಇಲ್ಲಿಯವರೆಗೆ ಪ್ರೇಕ್ಷಕರು ನೋಡಿರುವುದು ಅರ್ಧ ಕಥೆ ಮಾತ್ರ. ಕಥಾ ನಾಯಕನ ಬದುಕಿನಲ್ಲಿ ಮುಂದೇನಾಯಿತು ಎಂಬುದನ್ನು ತಿಳಿಯುವ ಕುತೂಹಲ ಪ್ರೇಕ್ಷಕರಿಗೆ ಇದೆ.

Continue Reading

South Cinema

Actor Jr. NTR : ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ ಎಂದು RRR ಸಿನಿಮಾ ನಟ ಜೂ. ಎನ್‌ಟಿಆರ್‌ ಹೇಳಿದ್ದೇಕೆ?

ಆರ್‌ಆರ್‌ಆರ್‌ ಸಿನಿಮಾದ ನಟ ಜೂ.ಎನ್‌ಟಿಆರ್‌ (Actor Jr. NTR) ಅವರು ಅಭಿಮಾನಿಗಳು ಪದೇಪದೆ ಪ್ರಶ್ನೆ ಕೇಳುತ್ತಿದ್ದರೆ ಸಿನಿಮಾ ಮಾಡುವುದನ್ನೇ ನಿಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ನಂತರ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

VISTARANEWS.COM


on

Edited by

Koo

ಹೈದರಾಬಾದ್‌: ತೆಲುಗು ನಟ ಜೂನಿಯರ್‌ ಎನ್‌ಟಿಆರ್‌ (Actor Jr. NTR) ಮತ್ತು ರಾಮ್‌ ಚರಣ್‌ ನಟನೆಯ ಆರ್‌ಆರ್‌ಆರ್‌ ಸಿನಿಮಾ ಆಸ್ಕರ್‌ ಪ್ರಶಸ್ತಿಯನ್ನೂ ಗೆದ್ದುಕೊಳ್ಳುವ ಮೂಲಕ ದಾಖಲೆ ಬರೆದಿದೆ. ಅದೇ ಕಾರಣದಿಂದಾಗಿ ಈ ಇಬ್ಬರೂ ನಟರು ಇದೀಗ ಎಲ್ಲೆಡೆ ಭಾರೀ ಸುದ್ದಿಯಲ್ಲಿದ್ದಾರೆ. ಹೀಗಿರುವಾಗಲೇ ನಟ ಜೂನಿಯರ್‌ ಎನ್‌ಟಿಆರ್‌ ಆಘಾತಕಾರಿ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. “ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸಿಬಿಡುತ್ತೇನೆ” ಎಂದು ನಟ ಹೇಳಿದ್ದು, ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದೆ.

ಇದನ್ನೂ ಓದಿ: Jr NTR: ಖಡಕ್‌ ವಾರ್ನಿಂಗ್‌ ಬೆನ್ನಲ್ಲೇ ಫೋಟೊಗಾಗಿ ಜ್ಯೂನಿಯರ್‌ ಎನ್‌ಟಿಆರ್‌ ಮೇಲೆ ಅಟ್ಯಾಕ್‌ ಮಾಡಿದ ಅಭಿಮಾನಿ

ಹೌದು. ಜೂ.ಎನ್‌ಟಿಆರ್‌ ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ವಿಶ್ವಕ್‌ ಸೇನ್‌ ಅವರ ಕ ಧಮ್ಕಿ ಸಿನಿಮಾದ ಪ್ರಿ ರಿಲೀಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ತಮ್ಮ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಆ ವೇಳೆ ಅಭಿಮಾನಿಗಳು “ನಿಮ್ಮ ಮುಂದಿನ ಸಿನಿಮಾ ಯಾವುದು? ಯಾವಾಗ ಬಿಡುಗಡೆಯಾಗುತ್ತದೆ?” ಎಂದು ನಟನನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ನಟ, “ನೀವು ಇದೇ ರೀತಿ ಪದೇಪದೆ ನನ್ನ ಮುಂದಿನ ಸಿನಿಮಾ ಬಗ್ಗೆ ಕೇಳುತ್ತಿದ್ದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸಿಬಿಡುತ್ತೇನೆ” ಎಂದು ಹೇಳಿದ್ದಾರೆ.

ಇದಾದ ಕೆಲವೇ ಸೆಕೆಂಡುಗಳಲ್ಲಿ ನಟ “ಇಲ್ಲ, ನನಗೆ ಸಿನಿಮಾ ಮಾಡುವುದನ್ನು ನಿಲ್ಲಿಸುವ ಯಾವುದೇ ಆಲೋಚನೆ ಇಲ್ಲ” ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ. ಪ್ರಭಾಸ್‌ ಅವರ ಮುಂದಿನ ಸಿನಿಮಾ ʼಕೊರಟಲ ಶಿವʼ ಈ ಸಿನಿಮಾದಲ್ಲಿ ನಟಿ ಜಾನ್ಹ್ವಿ ಕಪೂರ್‌ ಅವರು ನಟಿಸಲಿದ್ದಾರೆ.

ಇದನ್ನೂ ಓದಿ: Actor Jr NTR: ಆಸ್ಕರ್‌ ಕಾರ್ಯಕ್ರಮಕ್ಕೆ ದುಬಾರಿ ವಾಚ್ ತೊಟ್ಟಿದ್ದ ಜೂ. ಎನ್‌ಟಿಆರ್‌! ಆ ವಾಚ್ ಬೆಲೆ ಎಷ್ಟು?

ಇದೇ ಕಾರ್ಯಕ್ರಮದಲ್ಲಿ ಆರ್‌ಆರ್‌ಆರ್‌ 2 ಬಗ್ಗೆಯೂ ಜೂ.ಎನ್‌ಟಿಆರ್‌ ಮಾತನಾಡಿದ್ದಾರೆ. “ಆ ಸಿನಿಮಾಕ್ಕಾಗಿ ನಾನೂ ಕೂಡ ಕಾತುರದಿಂದ ಕಾಯುತ್ತಿದ್ದೇನೆ. ಸಿನಿಮಾ ಚಿತ್ರೀಕರಣದ ಬಗ್ಗೆ ರಾಜಮೌಳಿ ಅವರು ಇನ್ನೂ ಯಾವುದೇ ಮಾಹಿತಿಯನ್ನು ನಮಗೆ ಕೊಟ್ಟಿಲ್ಲ. ಆದರೆ ಆ ಸಿನಿಮಾ ವೇಳೆಗೆ ನಾವು ನಮ್ಮೆಲ್ಲ ಕೆಲಸಗಳನ್ನು ಮುಗಿಸಿಕೊಂಡಿರಬೇಕಾಗುತ್ತದೆ. ಅದಕ್ಕೆ ಸಂಪೂರ್ಣ ಸಮಯವನ್ನು ಕೊಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

Continue Reading
Advertisement
vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ4 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ12 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್26 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ34 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ39 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ41 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್43 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ47 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್49 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ51 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!