Janhvi Kapoor | ಮತ್ತೆ ಒಟ್ಟಿಗೆ ಕಾಣಿಸಿಕೊಂಡ ಜಾಹ್ನವಿ ಕಪೂರ್-ಶಿಖರ್: ವೈರಲ್‌ ಆಯ್ತು ಫೋಟೊ - Vistara News

ಬಾಲಿವುಡ್

Janhvi Kapoor | ಮತ್ತೆ ಒಟ್ಟಿಗೆ ಕಾಣಿಸಿಕೊಂಡ ಜಾಹ್ನವಿ ಕಪೂರ್-ಶಿಖರ್: ವೈರಲ್‌ ಆಯ್ತು ಫೋಟೊ

ದೆಹಲಿ-ಎನ್‌ಸಿಆರ್‌ನಲ್ಲಿ ಕುನಾಲ್ ರಾವಲ್ ಅವರ ಫ್ಯಾಷನ್ ಶೋನಲ್ಲಿ ಶಿಖರ್ ಅವರೊಂದಿಗೆ ನಟಿ ಜಾಹ್ನವಿ ಕಪೂರ್‌ ಕಾಣಿಸಿಕೊಂಡಿದ್ದಾರೆ. ಇದೀಗ ಶಿಖರ್ ಮತ್ತು ಜಾಹ್ನವಿ (Janhvi Kapoor)ಸಂಬಂಧದಲ್ಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Janhvi Kapoor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್ ನಟಿ ಜಾಹ್ನವಿ ಕಪೂರ್ (Janhvi Kapoor) ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗ ಶಿಖರ್ ಪಹಾರಿಯಾ ಜತೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ ಎಂಬ ಸುದ್ದಿ ಬಿಟೌನ್‌ನಲ್ಲಿ ಹರಿದಾಡಿತ್ತು. ಮಾಜಿ ಗಳೆಯನ ಜತೆ ನಟಿ ರಜೆ ಎಂಜಾಯ್ ಮಾಡುತ್ತಿದ್ದಾರೆ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದವು. ಇದರ ಬೆನ್ನಲ್ಲೇ ಶನಿವಾರ ಡಿಸೆಂಬರ್‌ 17 ರಾತ್ರಿ ದೆಹಲಿ-ಎನ್‌ಸಿಆರ್‌ನಲ್ಲಿ ಕುನಾಲ್ ರಾವಲ್ ಅವರ ಫ್ಯಾಷನ್ ಶೋನಲ್ಲಿ ಶಿಖರ್ ಅವರೊಂದಿಗೆ ನಟಿ ಜಾಹ್ನವಿ ಕಪೂರ್‌ ಕಾಣಿಸಿಕೊಂಡಿದ್ದಾರೆ. ಇದೀಗ ಶಿಖರ್ ಮತ್ತು ಜಾಹ್ನವಿ ಸಂಬಂಧದಲ್ಲಿದ್ದಾರೆ ಎಂದು ಗುಸುಗುಸು ಶುರುವಾಗಿದೆ.

ಇತ್ತೀಚೆಗೆ ನಟಿ ಜಾಹ್ನವಿ ಮಾಲ್ಡೀವ್ಸ್‌ನಲ್ಲಿ ಕಳೆದ ತಮ್ಮ ಬೋಲ್ಡ್ ಫೋಟೊಗಳನ್ನ ಶೇರ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದರು. ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗ ಶಿಖರ್ ಜತೆ ನಟಿ ಡೇಟ್ ಮಾಡುತ್ತಿದ್ದಾರೆ. ಇಬ್ಬರು ಮಾಲ್ಡೀವ್ಸ್‌ನ ಫೋಟೊ ಶೇರ್ ಮಾಡಿರುವುದ್ದಕ್ಕೆ ಈ ಅನುಮಾನ ಮೂಡಲು ಕಾರಣವಾಗಿದೆ ಎಂದು ವರದಿ ಆಗಿತ್ತು. ಇದೀಗ ಮತ್ತೆ ಜಾಹ್ನವಿ ಮತ್ತು ಶಿಖರ್ ಒಟ್ಟಿಗೆ ಇವೆಂಟ್‌ಗೆ ಹಾಜರಾಗಿರುವ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ.

ಇದನ್ನೂ ಓದಿ | Janhvi Kapoor | ಮಾಲ್ಡೀವ್ಸ್‌ಗೆ ಹಾರಿದ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್‌: ಚಳಿ ನಡುವೆ ಹಾಟ್‌ ಫೋಟೊ ವೈರಲ್‌!

ಸುಶೀಲ್‌ಕುಮಾರ್ ಶಿಂಧೆ ಅವರ ಮೊಮ್ಮಗ ಶಿಖರ್‌, ಈ ಮೊದಲು ಜಾಹ್ನವಿ ಜತೆ ಡೇಟಿಂಗ್ ಮಾಡುತ್ತಿದ್ದರು. ಬಳಿಕ ಬ್ರೇಕಪ್ ಮಾಡಿಕೊಂಡು ದೂರ ಆಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ ಎನ್ನಲಾಗುತ್ತಿದೆ. ಜಾಹ್ನವಿ ಕಪೂರ್‌ ಸದ್ಯ ʻಮಿಸ್ಟರ್ ಆ್ಯಂಡ್‌ ಮಿಸಸ್ ಮಹಿ”ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

Janhvi Kapoor

ಇದನ್ನೂ ಓದಿ | Jhanvi Kapoor | ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಜಾಹ್ನವಿ ಕಪೂರ್‌ ಸ್ಪಾರ್ಕ್ಲಿಂಗ್‌ ಫೋಟೊಗಳು – Sparkling photos of Janhvi Kapoor are going viral on social media

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

Maharaj: ಬಾಲಿವುಡ್‌ ನಟ ಆಮೀರ್‌ ಖಾನ್‌ ಪುತ್ರ ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ಮಹಾರಾಜ್‌ ಬಿಡುಗಡೆಗೆ ಗುಜರಾತ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Maharaj
Koo

ಗಾಂಧಿನಗರ: ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಪುತ್ರ ಜುನೈದ್‌ ಖಾನ್‌ (Junaid Khan) ನಟಿಸಿರುವ ಮೊದಲ ಸಿನಿಮಾಗೇ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂಬುದಾಗಿ ಹಿಂದು ಸಂಘಟನೆಗಳು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಗುಜರಾತ್‌ ಹೈಕೋರ್ಟ್‌, ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ (Maharaj)‌ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಆಮೀರ್‌ ಖಾನ್‌ ಹಾಗೂ ಜುನೈದ್‌ ಖಾನ್‌ಗೆ ತುಸು ಹಿನ್ನಡೆಯಾದಂತಾಗಿದೆ.

ಸಿದ್ಧಾರ್ಥ್‌ ಪಿ. ಮಲ್ಹೋತ್ರಾ ಅವರು ಮಹಾರಾಜ್‌ ಸಿನಿಮಾವನ್ನು ನಿರ್ದೇಶಿಸಿದ್ದರೆ, ಆದಿತ್ಯ ಚೋಪ್ರಾ ನಿರ್ಮಾಪಕರಾಗಿದ್ದಾರೆ. ಜೂನ್‌ 14ರಂದೇ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ, ಭಗವಾನ್‌ ಕೃಷ್ಣನ ಆರಾಧಕರು ಹಾಗೂ ವಲ್ಲಭಾಚಾರ್ಯ ಅವರ ಅನುಯಾಯಿಗಳು ನ್ಯಾಯಾಲಯದ ಮೊರೆ ಹೋದ ಕಾರಣ, ನ್ಯಾಯಾಲಯವು ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ. ಹಾಗೆಯೇ, ಸಾಮಾಜಿಕ ಜಾಲತಾಣದಲ್ಲಿ ಬಾಯ್ಕಾಟ್‌ ನೆಟ್‌ಫ್ಲಿಕ್‌ ಅಭಿಯಾನವೂ ಆರಂಭವಾಗಿದೆ.

ಸಿನಿಮಾದಲ್ಲಿ ಏನಿದೆ? ಯಾಕಿಷ್ಟು ವಿವಾದ?

1862ರಲ್ಲಿ ಪುಷ್ಟಿಮಾರ್ಗ ವೈಷ್ಣವ ಪಂಥದ ಮಹಾರಾಜರ ಕುರಿತು ಕರ್ಸನ್‌ದಾಸ್‌ ಮುಲ್ಝಿ ಎಂಬ ಪತ್ರಕರ್ತ ಬರೆದ ಲೇಖನಗಳ ಪ್ರಕರಣವಾಗಿದೆ. ವೈಷ್ಣವ ಪಂಥದ ಮಹಾರಾಜರು ತಮ್ಮ ಅನುಯಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಸೇರಿ ಹಲವು ಲೇಖನಗಳನ್ನು ಗುಜರಾತಿ ವಾರಪತ್ರಿಕೆ ‘ಸತ್ಯಪ್ರಕಾಶ’ದಲ್ಲಿ ಬರೆದಿದ್ದರು.

ಮಹಾರಾಜರ ಅನುಯಾಯಿಗಳು ಸೇರಿ ಹಿಂದುಗಳು ಕರ್ಸನ್‌ದಾಸ್‌ ಮುಲ್ಝಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಬ್ರಿಟಿಷ್‌ ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿತ್ತು. 16ನೇ ಶತಮಾನದಲ್ಲಿ ವಲ್ಲಭಾಚಾರ್ಯ ಅವರು ಪುಷ್ಟಿಮಾರ್ಗವನ್ನು ಸಂಸ್ಥಾಪಿಸಿದ್ದು, ಕೃಷ್ಣನ ಆರಾಧಕರು ಈ ಮಾರ್ಗವನ್ನು ಅನುಸರಿಸುತ್ತಾರೆ. ವೈಷ್ಣವ ಪಂಥದ ಮಹಾರಾಜರ ಕುರಿತು ಅವಹೇಳನಕಾರಿಯಾಗಿ ಲೇಖನ ಬರೆದಿದ್ದ ಕರ್ಸನ್‌ದಾಸ್‌ ಮುಲ್ಝಿಯ ಪಾತ್ರವನ್ನೇ ಜುನೈದ್‌ ಖಾನ್‌ ನಿಭಾಯಿಸಿದ್ದಾರೆ.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Continue Reading

ಬಾಲಿವುಡ್

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Hamare Baarah: ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

VISTARANEWS.COM


on

Hamare Baarah Release Supreme Court has imposed a stay
Koo

ಬೆಂಗಳೂರು: ಹಮ್ ದೋ, ಹಮಾರೆ ಬಾರಾ’ (Hamare Baarah) ಚಲನಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಈ ಸಿನಿಮಾವನ್ನು ಕರ್ನಾಟಕದಲ್ಲಿ ನಿಷೇಧ ಮಾಡಿ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈಗ ಹಮಾರೆ ಬಾರಾ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಗುರುವಾರ, ಸುಪ್ರೀಂ ಕೋರ್ಟ್ ಚಿತ್ರದ ಟೀಸರ್ ಅನ್ನು “ಆಕ್ಷೇಪಾರ್ಹ” ಎಂದು ಕರೆದಿದೆ. ಮಾತ್ರವಲ್ಲ ಸಿನಿಮಾ ಬಿಡುಗಡೆಯನ್ನು ಸದ್ಯಕ್ಕೆ ನಿಲ್ಲಿಸಬೇಕು ಎಂದು ಆದೇಶ ನೀಡಿದೆ. ಚಿತ್ರ ಇದೇ ಜೂನ್ 14 ರಂದು ರಿಲೀಸ್‌ ಆಗಬೇಕಿತ್ತು.

ಅರ್ಜಿದಾರರ ಪರ ವಕೀಲ ಫೌಜಿಯಾ ಶಕೀಲ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಅರ್ಜಿಯ ಕುರಿತು ತ್ವರಿತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಬಾಂ ಬೆ ಹೈಕೋರ್ಟ್‌ಗೆ ಸೂಚಿಸಿದೆ. ನ್ಯಾಯಮೂರ್ತಿ ಮೆಹ್ತಾ ಅವರು ಚಿತ್ರದ ಟ್ರೈಲರ್‌ ಬಗ್ಗೆಯೂ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. “ಇಂದು ಬೆಳಗ್ಗೆ ನಾವು ಟೀಸರ್‌ ನೋಡಿದ್ದೇವೆ. ಆಕ್ಷೇಪಾರ್ಹವಾಗಿದೆ. ಟೀಸರ್ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ” ಎಂದು ಸಂದೀಪ್ ಮೆಹ್ತಾ ಹೇಳಿದ್ದಾರೆ. ಬಾಂಬೆ ಹೈಕೋರ್ಟ್‌ನಿಂದ ಅರ್ಜಿ ಇತ್ಯರ್ಥವಾಗುವವರೆಗೆ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಪೀಠ ಸೂಚಿಸಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ಈ ಹಿಂದೆ ತಿಳಿಸಿತ್ತು. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿತ್ತು. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

Continue Reading

ಬಾಲಿವುಡ್

Sonakshi Sinha: ಸೋನಾಕ್ಷಿ ಸಿನ್ಹಾ – ಜಹೀರ್ ಇಕ್ಬಾಲ್ ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ಲೀಕ್‌!

Sonakshi Sinha: ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Sonakshi Sinha Zaheer Iqbal confirm their wedding in leaked audio
Koo

ಬೆಂಗೂರು: ಸೋನಾಕ್ಷಿ ಸಿನ್ಹಾ (Sonakshi Sinha) ಮತ್ತು ಜಹೀರ್ ಇಕ್ಬಾಲ್ ( Zaheer Iqbal) ಜೂನ್ 23 ರಂದು ವಿವಾಹವಾಗಲಿದ್ದಾರೆ. ಮದುವೆಯ ಆಮಂತ್ರಣದ ಆಡಿಯೊ ಕ್ಲಿಪ್‌ ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ. ಮದುವೆಯ ಆಮಂತ್ರಣದ ಆಡಿಯೊ QR ಕೋಡ್ ಸಹ ಒಳಗೊಂಡಿದೆ. ಇದರಲ್ಲಿ ಜೋಡಿ ತಮ್ಮ ಮದುವೆ ದಿನಾಂಕವನ್ನು ಖಚಿತಪಡಿಸಿದೆ. ಅಧಿಕೃತವಾಗಿ ಪತಿ-ಪತ್ನಿ ಯಾಗಲು ಸಮಯ ಬಂದಾಯ್ತು ಎಂದು ಜೋಡಿ ಹೇಳಿಕೊಂಡಿದೆ.

“ನಮ್ಮೆಲ್ಲ ಸ್ನೇಹಿತರಿಗೆ ಹಾಗೂ ಕುಟುಂಬಕ್ಕೆ, ಹಾಯ್‌. ಕಳೆದ ಏಳು ವರ್ಷಗಳಿಂದ ನಾವು ಒಟ್ಟಿಗೆ ಇದ್ದೇವೆ. ಸಂತೋಷ, ಪ್ರೀತಿ, ನಗು ಹೀಗೆ ಈ ಸುಂದರ ಕ್ಷಣಕ್ಕೆ ಕಾರಣವಾಗಿವೆ” ಎಂದು ಜಹೀರ್ ಹೇಳುತ್ತಿದ್ದಂತೆ, “ಒಬ್ಬರಿಗೊಬ್ಬರು ಗೆಳತಿ ಮತ್ತು ಗೆಳೆಯರಾಗುವ ಕ್ಷಣ” ಎಂದು ಸೋನಾಕ್ಷಿ ಹೇಳುತ್ತಾರೆ, ಅಧಿಕೃತವಾಗಿ ಪತಿ ಹಾಗೂ ಪತ್ನಿಯಾಗುವ ಸಮಯ ಬಂದಾಯ್ತು. ನೀವು ಇಲ್ಲದೆ ಈ ಆಚರಣೆ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಜೂನ್ 23 ರಂದು ನಮ್ಮೊಂದಿಗೆ ಪಾರ್ಟಿ ಮಾಡಿ. ಅಲ್ಲಿ ಸಿಗೋಣ” ಎಂದು ಜೋಡಿ ಮಾತನಾಡಿರುವ ಆಡಿಯೊ ಕ್ಲಿಪ್‌ ವೈರಲ್‌ ಆಗಿದೆ.

ಲೀಕ್‌ ಆದ ಆಡಿಯೊ ಕ್ಲಿಪ್‌ ಫೋಟೊದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ನಲ್ಲಿ ಪಾರ್ಟಿ ನಡೆಯಲಿದೆ ಎಂದು ಉಲ್ಲೇಖವಾಗಿದೆ. ಕಾರ್ಡ್‌ನಲ್ಲಿ ವದಂತಿಗಳು ನಿಜ ಎಂದು ಬರೆಯಲಾಗಿದೆ. ಇದೀಗ ಈ ಆಡಿಯೊ ವೈರಲ್‌ ಆಗುತ್ತಿದ್ದಂತೆ ಸೋನಾಕ್ಷಿ ಅವರಿಗೆ ಅವರ ಫ್ಯಾನ್ಸ್‌ ಶುಭ ಹಾರೈಸುತ್ತಿದ್ದಾರೆ. ʻʻಆಡಿಯೊ ತುಂಬಾ ಮುದ್ದಾಗಿದೆ!! ಅಭಿನಂದನೆಗಳು!!” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi & Zaheer, wedding confirmed on June 23! 💍
byu/FleaBird_ inBollyBlindsNGossip

ಇತ್ತೀಚಿನ ವರದಿಯ ಪ್ರಕಾರ ಸೋನಾಕ್ಷಿ ಮತ್ತು ಜಹೀರ್ ರಿಜಿಸ್ಟರ್ ಮ್ಯಾರೇಜ್ ಆಗಲಿದ್ದಾರೆ ಎನ್ನಲಾಗಿದೆ. ಜೂನ್ 23 ರಂದು ಆರತಕ್ಷತೆ ಪಾರ್ಟಿ ನಡೆಯಲಿದೆ. ಲವ್ ಬರ್ಡ್ಸ್ ಆಯುಷ್ ಶರ್ಮಾ, ಹುಮಾ ಖುರೇಷಿ ಮತ್ತು ವರುಣ್ ಶರ್ಮಾ ಅವರಿಗೆ ಈಗಾಗಲೇ ಸೋನಾಕ್ಷಿ ಆಹ್ವಾನವನ್ನು ನೀಡಿದ್ದಾರೆ ಎನ್ನಲಾಗಿದೆ. ಫರ್ದೀನ್ ಖಾನ್, ತಾಹಾ ಶಾ ಬಾದುಶಾ, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಬಾಲಿವುಡ್‌ನ ಕೆಲವು ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Kangana Ranaut: ರಾಜಕೀಯಕ್ಕಿಂತ ಸಿನಿಮಾ ಬೆಸ್ಟ್​ ಎಂದ ಕಂಗನಾ! ಪೊಲಿಟಿಕಲ್​ ಜರ್ನಿ ವಿವರಿಸಿದ ನಟಿ

Kangana Ranaut: ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಸುದ್ದಿಯಲ್ಲಿ ಇದ್ದರು. ಇನ್ನು ಕಂಗನಾ ಅವರ ಎಮರ್ಜೆನ್ಸಿ ಸಿನಿಮಾ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಬೇಕಿದೆ. ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

Kangana Ranaut says work in the film industry is easier than politics
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಇದೀಗ ಕಂಗನಾ ಅವರು ಸಂದರ್ಶನವೊಂದರಲ್ಲಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆಯೂ ರಾಜಕೀಯಕ್ಕೆ ಸೇರಲು ಹಲವು ಆಫರ್‌ಗಳು ಬಂದಿದ್ದವು ಎಂದು ಹೇಳಿಕೊಂಡಿದ್ದಾರೆ.

ಸಂದರ್ಶನದ ವೇಳೆ ಕಂಗನಾ ಮಾತನಾಡಿ, “ರಾಜಕೀಯಕ್ಕೆ ಸೇರಲು ನನ್ನನ್ನು ಸಂಪರ್ಕಿಸಿದ್ದು ಇದೇನು ಮೊದಲಲ್ಲ. ನಾನು ಈ ಹಿಂದೆ ಹಲವಾರು ಇತರ ಆಫರ್‌ಗಳನ್ನು ಸ್ವೀಕರಿಸಿದ್ದೇನೆ. ʻಗ್ಯಾಂಗ್‌ಸ್ಟರ್ʼ ಸಿನಿಮಾ ಬಳಿಕವೇ ನನಗೆ ಆಫರ್‌ ಬಂದಿತ್ತು. ನನ್ನ ದೊಡ್ಡಪ್ಪ ಕೂಡ ಶಾಸಕರಾಗಿದ್ದರು. ಹಾಗಾಗಿ ರಾಜಕೀಯ ಹಿನ್ನೆಲೆಯ ಕುಟುಂಬ ನಮ್ಮದಾಗಿದ್ದರಿಂದ ಹಲವು ನಾಯಕರು ನಮ್ಮನ್ನು ಸಂಪರ್ಕಿಸುತ್ತಾರೆ. ಇದು ತುಂಬಾ ಸಾಮಾನ್ಯವಾಗಿದೆ. ವಾಸ್ತವವಾಗಿ, ನನ್ನ ತಂದೆಗೆ ಆಫರ್ ಬಂದಿತ್ತು. ನನ್ನ ತಂಗಿ ಆ್ಯಸಿಡ್ ದಾಳಿಯಿಂದ ಬದುಕುಳಿದ ನಂತರ ರಾಜಕೀಯ ಸೇರಲು ಆಫರ್ ಬಂದಿತ್ತುʼʼಎಂದು ಹೇಳಿಕೊಂಡಿದ್ದಾರೆ.

ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ ಎಂದು ಹೇಳಿಕೊಂಡಿದ್ದಾರೆ ಕಂಗನಾ. ʻʻನಾನು ಹೆಚ್ಚಾಗಿ ನನ್ನ ಆಸಕ್ತಿದಾಯಕ ಕ್ಷೇತ್ರಗಳಿಗೆ ಗಮನ ಕೊಡುವ ವ್ಯಕ್ತಿ. ನಟನೆ, ಬರಹ, ನಿರ್ದೇಶನ, ಸಿನಿಮಾ ಹೀಗೆ ಎಲ್ಲದರಲ್ಲಿಯೂ ನನಗೆ ಆಸಕ್ತಿ ತುಂಬ ಇದೆ. ಇನ್ನು ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಕೆಲಸ ಮಾಡುವುದು ತುಂಬಾ ಸುಲಭ. ರಾಜಕೀಯದಲ್ಲಿ ತೊಂದರೆಗೊಳಗಾದ ಜನರು ಮಾತ್ರ ನಿಮ್ಮನ್ನು ನೋಡಲು ಬರುತ್ತಾರೆ. ಆದರೆ ಸಿನಿಮಾದಲ್ಲಿ ಹಾಗಲ್ಲ. ಸಿನಿಮಾ ನೋಡಲು ಹೋದವರು ಮರಳಿ ಬರುವಾಗ ನಿರಾಳರಾಗಿ ಬರುತ್ತಾರೆʼʼಎಂದರು.

ಇದನ್ನೂ ಓದಿ: Kangana Ranaut Saree Fashion: ದೇಸಿ ಸೀರೆ ನೇಯ್ದ ನೇಕಾರರಿಗೆ ಥ್ಯಾಂಕ್ಸ್ ಹೇಳಿದ ಕಂಗನಾ ರಣಾವತ್!

ಇನ್ನು ಕಂಗನಾ ಅವರ ಎಮರ್ಜೆನ್ಸಿ ಸಿನಿಮಾ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಬೇಕಿದೆ. ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತೇಶ್ ಶಾ ಕಥೆಯನ್ನು ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ.

ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ

ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. 2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

Continue Reading
Advertisement
Jammu Kashmir
ದೇಶ1 hour ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ1 hour ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ2 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ3 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ4 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ4 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್4 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ5 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ5 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು5 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌