Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ? - Vistara News

ಸಿನಿಮಾ

Jasmin Bhasin: ಲೆನ್ಸ್‌ ಧರಿಸಿ ಎಡವಟ್ಟು; ಕಣ್ಣು ಕಳೆದುಕೊಂಡ್ರಾ ಖ್ಯಾತ ನಟಿ?

Jasmin Bhasin: ಜುಲೈ 17 ರಂದು, ಲೆನ್ಸ್ ಧರಿಸಿದ ನಂತರ ನಟಿಗೆ ಕಣ್ಣುಗಳು ತುಂಬಾ ನೋಯಲಾರಂಭಿಸಿದ್ದವು. ಆದಾಗ್ಯೂ, ಅವರು ಕೆಲಸ ಮಾತ್ರ ಮುಂದುವರಿಸಿದ್ದರು. ತಕ್ಷಣ ವೈದ್ಯರನ್ನು ನೋಡಲು ಸಾಧ್ಯವಾಗಲಿಲ್ಲ. ಇದಲ್ಲದೆ, ದೆಹಲಿಯಲ್ಲಿ ನಡೆದ ಈವೆಂಟ್‌ನಲ್ಲಿ ನಟ ಸನ್‌ಗ್ಲಾಸ್ ಧರಿಸಿದ್ದರು.

VISTARANEWS.COM


on

Jasmine Bhasin says her corneas got damaged
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೆನ್ಸ್ ಧರಿಸಿದ್ದ ಬಹುಭಾಷಾ ನಟಿ ಜಾಸ್ಮಿನ್ ಭಾಸಿನ್‌ (Jasmin Bhasin) ಕಣ್ಣಿಗೆ ಸಮಸ್ಯೆ ಎದುರಾಗಿದೆ. ದೃಷ್ಟಿ ಕಳೆದುಕೊಳ್ಳುವ ಮಟ್ಟಕ್ಕೆ ಹೋಗಿದೆ. ಈ ಬಗ್ಗೆ ನಟಿ ವಿವರವಾಗಿ ಹಂಚಿಕೊಂಡಿದ್ದಾರೆ. ರಾಜಸ್ಥಾನ್ ಮೂಲದ ನಟಿ ಜಾಸ್ಮಿನ್ ಭಾಸಿನ್‌ಗೆ ಈ ಸಮಸ್ಯೆ ಎದುರಾಗಿದೆ. ಕನ್ನಡ ಚಿತ್ರದಲ್ಲಿ ಕೂಡ ನಟಿ ನಟಿಸಿದ್ದರು. ಇದೀಗ ನಟಿ ಲೆನ್ಸ್ ಧರಿಸಿ ಎದುರಾಗಿರುವ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಲೆನ್ಸ್ ಸರಿಯಾಗಿ ಧರಿಸದ ಕಾರಣ ಕಣ್ಣು ಕಾಣಿಸುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಲೆನ್ಸ್ ಸರಿಯಾಗಿ ಧರಿಸದ ಕಾರಣ ಜಾಸ್ಮಿನ್ ಭಾಸಿನ್ ಕಾರ್ನಿಯಲ್ ಹಾನಿಯಿಂದ ಬಳಲುತ್ತಿದ್ದಾರೆ.
ನಟಿಯ ಕಣ್ಣಿಗೆ ಬ್ಯಾಂಡೇಜ್‌ ಹಾಕಲಾಗಿದೆ. ಜುಲೈ 17 ರಂದು, ಲೆನ್ಸ್ ಧರಿಸಿದ ನಂತರ ನಟಿಗೆ ಕಣ್ಣುಗಳು ತುಂಬಾ ನೋಯಲಾರಂಭಿಸಿದ್ದವು. ಆದಾಗ್ಯೂ, ಅವರು ಕೆಲಸ ಮಾತ್ರ ಮುಂದುವರಿಸಿದ್ದರು. ತಕ್ಷಣ ವೈದ್ಯರನ್ನು ನೋಡಲು ಸಾಧ್ಯವಾಗಲಿಲ್ಲ. ಇದಲ್ಲದೆ, ದೆಹಲಿಯಲ್ಲಿ ನಡೆದ ಈವೆಂಟ್‌ನಲ್ಲಿ ನಟ ಸನ್‌ಗ್ಲಾಸ್ ಧರಿಸಿದ್ದರು. ಬಳಿಕ ನಟಿಗೆ ಕಣ್ಣು ನೋವಾಗಿ. ಕಾಣಿಸದಂತಾಗಿ ವೈದ್ಯರ ಮೊರೆ ಹೋಗಿದ್ದಾರೆ.

ಇದೀಗ ನಟಿಯ ಕಣ್ಣಿನ ಕಾರ್ನಿಯಾಗಳು ಹಾನಿಗೊಳಗಾಗಿವೆ. ಮುಂಬೈಗೆ ಧಾವಿಸಿ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ʻʻನಾನು ತುಂಬಾ ನೋವು ಅನುಭವಿಸುತ್ತಿದ್ದೇನೆ. ನಾನು ಮುಂದಿನ ನಾಲ್ಕೈದು ದಿನಗಳಲ್ಲಿ ಚೇತರಿಸಿಕೊಳ್ಳಬಹುದುʼʼ ಎಂದು ನಟಿ ಹೇಳಿದ್ದಾರೆ.

ಇದನ್ನೂ ಓದಿ: Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

ಇದೀಗ ನಟಿಗೆ ಮಲಗಲು ಕೂಡ ಆಗುತ್ತಿಲ್ಲವಂತೆ. ಜಾಸ್ಮಿನ್ ಭಾಸಿನ್ ತಮಿಳಿನ ‘ವಾನಂ’ ಸಿನಿಮಾ ಮೂಲಕ ಜಾಸ್ಮಿನ್ ಬಣ್ಣದಲೋಕ್ಕೆ ಬಂದರು. ಬಳಿಕ ಕನ್ನಡ ‘ಕರೋಡ್‌ಪತಿ’ ಚಿತ್ರದಲ್ಲಿ ಕೋಮಲ್ ಜೋಡಿಯಾಗಿ ನಟಿಸಿದ್ದರು. ‘ ತೆಲುಗು, ತಮಿಳು, ಪಂಜಾಬಿ ಸಿನಿಮಾಗಳಲ್ಲಿ ನಟಿ ನಟಿಸಿದ್ದಾರೆ.

ಕಾಂಟ್ಯಾಕ್ಟ್ ಲೆನ್ಸ್‌ಗಳಿಂದಾಗಿ ಕಣ್ಣಿನ ಸೋಂಕುಗಳಿಗೆ ಹೆಚ್ಚಿನ ಅಪಾಯವಾಗಿದೆ. ಕಣ್ಣಿನ ಸೋಂಕುಗಳಿಂದ ಹಿಡಿದು ಕಣ್ಣಿಗೆ ಹುಣ್ಣುಗಳು ಆಗಬಹುದು. ಕಾಂಟ್ಯಾಕ್ಟ್ ಲೆನ್ಸ್‌ಗಳನ್ನು ನಿರ್ವಹಿಸುವಾಗ ನೈರ್ಮಲ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Tharun Sudhir: ಡೈರೆಕ್ಟರ್​ ತರುಣ್ ಸುಧೀರ್ ರಿಯಲ್ ಲೈಫ್ ಹೀರೋಯಿನ್ ರಿವೀಲ್‌ಗೆ ಡೇಟ್ ಫಿಕ್ಸ್..!

Tharun Sudhir: ಈಗಾಗಲೇ ಸೋನಲ್ ಜೊತೆ ತರುಣ್ ಹೆಸರು ಕೇಳಿಬಂದಿದೆ. ಆದರೆ ಪಕ್ಕಾ ಮಾಹಿತಿ ಇದುವೆರೆಗೂ ತಿಳಿದು ಬಂದಿಲ್ಲ. ಈ ಎಲ್ಲ ಕನ್ಫ್ಯೂಷನ್‌ಗಳಿಗೆ ತರುಣ್‌ ಫುಲ್‌ ಸ್ಟಾಪ್ ಇಡಲು ಮುಂದಾಗಿದ್ದಾರೆ. ಖುದ್ದಾಗಿ ತರುಣ್ ಅವರೇ ನಾಳೆ ತಮ್ಮ ಮದುವೆ ಬಗ್ಗೆ ಪೋಸ್ಟ್ ಮಾಡಲಿದ್ದಾರೆ.

VISTARANEWS.COM


on

Tharun Sudhir marriage updates reveal on 21st July
Koo

ಬೆಂಗಳೂರು: ಕೆಲವೇ ದಿನಗಳಲ್ಲಿ ತರುಣ್​ ಸುಧೀರ್ (Tharun Sudhir)​ ಅವರು ನಟಿ ಸೋನಲ್​ ಮಾಂಥೆರೋ ಜೊತೆ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಆ ಮದುವೆಗೆ ತಾವು ಕೂಡ ಬರುವುದಾಗಿ ದರ್ಶನ್​ ಭರವಸೆ ನೀಡಿದ್ದಾರೆ ಎಂದು ತರುಣ್​ ಈಗಾಗಲೇ ಹೇಳಿದ್ದಾಎಎ. ಇದೀಗ ಖುದ್ದಾಗಿ ತರುಣ್​ ಸುಧೀರ್ ನಾಳೆ ಬೆಳಗ್ಗೆ 11:08ಕ್ಕೆ ಕೈಹಿಡಿಯಲಿರೋ ಹುಡುಗಿ ಹೆಸರು ಬಹಿರಂಗ ಮಾಡಲಿದ್ದಾರೆ. ತರುಣ್ ಸುಧೀರ್ ರಿಯಲ್ ಲೈಫ್ ಹೀರೊಯಿನ್ ರಿವೀಲ್‌ಗೆ ಡೇಟ್ ಫಿಕ್ಸ್ ಮಾಡಿದ್ದಾರೆ.

ಈಗಾಗಲೇ ಸೋನಲ್ ಜೊತೆ ತರುಣ್ ಹೆಸರು ಕೇಳಿಬಂದಿದೆ. ಆದರೆ ಪಕ್ಕಾ ಮಾಹಿತಿ ಇದುವೆರೆಗೂ ತಿಳಿದು ಬಂದಿಲ್ಲ. ಈ ಎಲ್ಲ ಕನ್ಫ್ಯೂಷನ್‌ಗಳಿಗೆ ತರುಣ್‌ ಫುಲ್‌ ಸ್ಟಾಪ್ ಇಡಲು ಮುಂದಾಗಿದ್ದಾರೆ. ಖುದ್ದಾಗಿ ತರುಣ್ ಅವರೇ ನಾಳೆ ತಮ್ಮ ಮದುವೆ ಬಗ್ಗೆ ಪೋಸ್ಟ್ ಮಾಡಲಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನಟಿ ಹೆಸರು, ಮದುವೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಿಹಿ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಿರುವ ತರುಣ್.

 ಈ ವಿಷಯನ್ನ ತಿಳಿಸಲು ಒಂದು ಸುಂದರ ಪೋಸ್ಟರ್ ಕೂಡ ಮಾಡಿಸಿದ್ದಾರೆ. ಹೀರೋಯಿನ್‌ ಡೈರಕ್ಟರ್‌ ಎಂಬ ಚೇರ್‌ ಅಕ್ಕ ಪಕ್ಕ ಇರುವ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

ತರುಣ್‌ ಮದುವೆಗೆ ದರ್ಶನ್‌ ಬರ್ತಾರಾ?

ದರ್ಶನ್ ಜೈಲು ಪಾಲಾದ ನಂತರ ಮೊದಲ ಬಾರಿಗೆ ತರುಣ್ ಸುಧೀರ್ ಭೇಟಿ ಮಾಡಿದ್ದರು ತರುಣ್ ಸುಧೀರ್ ಲವ್ ಸ್ಟೋರಿ ಟ್ರ್ಯಾಕ್‌ಗೆ ತಂದಿದ್ದೆ ದರ್ಶನ್. ತರುಣ್ ಹಾಗೂ ನಟಿ ಸೋನಲ್ ಮದುವೆಗೆ ದರ್ಶನ್ ಮುದ್ರೆ ಒತ್ತಿದ್ದರು. ದರ್ಶನ್ ಇಲ್ಲದೆ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಸಜ್ಜಾಗಿದ್ದರು ಎನ್ನಲಾಗಿತ್ತು. ಹಿರಿಯರ ಸಲಹೆ ನಂತರ ತರುಣ್‌ ಮುದುವೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ನಟ ಮಾಹಿತಿ ನೀಡಿದ್ದಾಗಿದೆ. ʻʻʻದರ್ಶನ್‌ ಅವರಿಗೆ ಸ್ವಲ್ಪ ಹುಷಾರಿಲ್ಲ. ರಿಕವರ್‌ ಆಗುತ್ತ ಇದ್ದಾರೆ. ನನ್ನ ನೋಡಿದಾಗ ಯಾವ ಸ್ಮೈಲ್‌ ಅಲ್ಲಿ ನೋಡುತ್ತಿದ್ದು ಅದೇ ನಗುವಿನಲ್ಲಿ ಇಂದು ನೋಡಿದರು. ಅವರಗಿಂತ ನಾವೇ ವೀಕ್‌ ಆಗಿದ್ದೇವೆ. ನನ್ನ ಮದುವೆ ಬಗ್ಗೆ ದರ್ಶನ್​ ಅವರಿಗೆ ಮೊದಲೇ ಗೊತ್ತಿತ್ತು. ಈ ವಿಚಾರದಲ್ಲಿ ನನಗೆ ಮೊದಲಿನಿಂದಲೂ ತೊಳಲಾಟ ಇತ್ತು. ಯಾವುದೇ ಕಾರಣಕ್ಕೂ ಮದುವೆ ದಿನಾಂಕ ಬದಲಾಯಿಸಬೇಡ ಅಂತ ಅವರು ಹೇಳಿದ್ದಾರೆ. ನಾನು ಬಂದೇ ಬರ್ತೀನಿ ಎನ್ನುವ ನಂಬಿಕೆ ಅವರಲ್ಲಿ ಇದೆ. ಅವರು ಏನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆʼʼಎಂದಿದ್ದರು.

ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗಿದೆ.

Continue Reading

ಟಾಲಿವುಡ್

Actor Naresh: ನನ್ನ ಬೇಬಿಯನ್ನು ದಯವಿಟ್ಟು ಹುಡುಕಿಕೊಡಿ ಎಂದು ಗಳಗಳನೇ ಅತ್ತ ನಟ ನರೇಶ್‌!

Actor Naresh: ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

VISTARANEWS.COM


on

Actor Naresh Shares Emotional Video About His Baby And Taged Director Nag Ashwin
Koo

ಬೆಂಗಳೂರು: ನಟ ನರೇಶ್ (Actor Naresh) ಅವರು ಸಿನಿಮಾಗಳಲ್ಲದೆ ವೈಯಕ್ತಿಕ ಜೀವನ ವಿಚಾರವಾಗಿಯೂ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಪವಿತ್ರಾ ಲೋಕೇಶ್‌ ವಿಚಾರವಾಗಿಯೂ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದರು. ಇದೀಗ ನಟ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತನ್ನ ʻಬೇಬಿ ಎಲ್ಲೋ ಕಾಣೆಯಾಗಿದೆ. ದಯವಿಟ್ಟು ಹುಡುಕಿಕೊಡಿʼ ಎಂದು ಕಣ್ಣೀರಾಗಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನನ್ನ ಬೇಬಿ ಎಲ್ಲೋ ಕಾಣೆಯಾಗಿದೆ. ಆ ಬೇಬಿಯನ್ನು ಒಂದೇ ಒಂದು ದಿನ ನೋಡದಿದ್ದರೂ ನಾನು ಏನನ್ನೋ ಕಳೆದುಕೊಂಡ ಭಾವ ನನ್ನನ್ನು ಕಾಡುತ್ತದೆ. ದಯಮಾಡಿ ನನ್ನ ಬೇಬಿಯನ್ನು ಹುಡುಕಿಕೊಡಿ. ಕಲ್ಕಿ 2898 AD ಸಿನಿಮಾ ಬೇರೆ ಬಿಡುಗಡೆ ಆಗಿದೆ. ನಮಗೆ ಬುಜ್ಜಿ ಗೊತ್ತು ಈ ಬೇಬಿ ಗೊತ್ತಿಲ್ಲ ಎನ್ನುತ್ತಿದ್ದಾರೆ. ನಿಮ್ಮ ಬುಜ್ಜಿಯಂತೆಯೇ ನನ್ನ ಬೇಬಿ ಕೂಡ ,ನಾಗ್ ಅಶ್ವಿನ್‌ ಅವರೇ ಹೇಗಾದರೂ ಮಾಡಿ ನಮ್ಮ ಮಗುವನ್ನು ಹುಡುಕಿಕೊಡಿ. ಯಾರಾದರೂ ನನ್ನ ಬೇಬಿ ನಿಮ್ಮ ಕಣ್ಣಿಗೆ ಬಿದ್ದರೆ ಹುಡುಕಿಕೊಡಿ ಸಾಕು” ಎಂದು ನರೇಶ್‌ ತಮ್ಮ ಎಕ್ಸ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದು, ಸದ್ಯ ಎಲ್ಲೆಡೆ ಅದು ವೈರಲ್‌ ಆಗಿದೆ.

ಅಸಲಿಗೆ ಈ ವಿಡಿಯೊ ಮಾಡಿದ್ದು ಸಿನಿಮಾ ಪ್ರಚಾರ ವಿಚಾರವಾಗಿ. ವೀರಾಂಜನೆಯಲು ವಿಹಾರಯಾತ್ರ ಎಂಬ ಹೊಸ ಸಿನಿಮಾದಲ್ಲಿ ನಟ ನರೇಶ್‌ ನಟಿಸುತ್ತಿದ್ದಾರೆ. ಇವರ ಜತೆಗೆ ಹಾಸ್ಯ ನಟ ಬ್ರಹ್ಮಾನಂದಂ ಸಹ ಜತೆಯಾಗಿದ್ದಾರೆ. ಈ ಸಿನಿಮಾದ ಬಗ್ಗೆ ಇದೀಗ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡಿದ್ದಾರೆ ನರೇಶ್.

ಇದನ್ನೂ ಓದಿ: Pavithra Naresh: ಒಟಿಟಿಯಲ್ಲಿ ನಾಪತ್ತೆಯಾದ ‘ಮದುವೆ’; ಗನ್ ಲೈಸೆನ್ಸ್ ಕೇಳಿದ ನರೇಶ್‌!

ನರೇಶ್‌ ಈ ರೀತಿ ವಿಭಿನ್ನವಾಗಿ ಪ್ರಚಾರ ಮಾಡುತ್ತಿರುವುದು ಹೊಸತೇನಲ್ಲ. ಮಲ್ಲಿ ಪೆಳ್ಳಿ ಸಿನಿಮಾದ ವೇಳೆ ಪವಿತ್ರಾ ಲೋಕೇಶ್‌ ಅವರ ಜತೆಗೆ ಮದುವೆ ಆದ ಸಿನಿಮಾದಲ್ಲಿನ ವಿಡಿಯೋವೊಂದನ್ನು ಶೇರ್‌ ಮಾಡಿ ಎಲ್ಲರಿಗೂ ಶಾಕ್‌ ನೀಡಿದ್ದರು.

ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಚಿತ್ರಮಂದಿರಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ʻಮಳ್ಳಿಪೆಳ್ಳಿʼ ಎಂಬ ಟೈಟಲ್‌ನಡಿ ಮೇ 26ರಂದು ಬಿಡುಗಡೆಯಾಗಿತ್ತು. ತಮ್ಮ ಜೀವನದ ಕಥೆಯನ್ನೇ ಪತಿ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಿನಿಮಾ ಮಾಡಿದ್ದಾರೆ. 

Continue Reading

ಸಿನಿಮಾ

Kiccha Sudeep: ಕನ್ನಡಿಗರ ಸ್ವಾಭಿಮಾನವೇ ಮುಖ್ಯ; ಫೋನ್ ಪೇ ಬ್ರ್ಯಾಂಡ್‌ ಅಂಬಾಸಿಡರ್ ಸ್ಥಾನ ತ್ಯಜಿಸುತ್ತಾರಾ ಕಿಚ್ಚ ಸುದೀಪ್?

‌Kiccha Sudeep: ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ನೀಡಿರುವ ಹೇಳಿಕೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಕ್ಷಮೆ ಕೇಳಬೇಕು’ ಹಾಗೂ ಕನ್ನಡಿಗರಿಗೆ ಮೀಸಲಾತಿ ಪ್ರಕಾರ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kiccha Sudeep
Koo

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಭಾಗವಾಗಿ ʼಬಾಯ್ಕಾಟ್‌ ಫೋನ್‌ ಪೇ ʼ ಅಭಿಯಾನ ಕೂಡ ಶುರುವಾಗಿದ್ದು, ಈ ನಡುವೆ ಕನ್ನಡಿಗರ ಪರ, ಕನ್ನಡಿಗರ ಅಭಿಯಾನಕ್ಕೆ ನಟ ಕಿಚ್ಚ ಸುದೀಪ್‌ (Kiccha Sudeep) ಬೆಂಬಲ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ನಾಡು-ನುಡಿಯ ವಿಚಾರ ಬಂದಾಗ ಸದಾ ಮುಂದಿರುತ್ತಾರೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ʻʻಕಂಪನಿ, ಹಣಕ್ಕಿಂತ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯʼʼ ಎನ್ನುವುದು ಸುದೀಪ್ ಅವರ ನಿರ್ಧಾರವಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಒಂದು ದಿನದ ಒಳಗಾಗಿ ಕಿಚ್ಚ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ಕನ್ನಡಿಗರ ಮೀಸಲಾತಿಗೆ ಫೋನ್‌ ಪೇ ಕಂಪನಿ ಸಿಇಒ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸುದೀಪ್‌ ಅವರ ನಿರ್ಧಾರ ಏನಾಗುತ್ತದೆ ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಕಿಚ್ಚ ಸುದೀಪ್ ಅವರು 2023ರಿಂದ ಫೋನ್‌ ಪೇ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಹೀಗಾಗಿ ಫೋನ್ ಪೇ ಕಂಪನಿ ಇನ್ನು ಒಂದು ದಿನದ ಒಳಗಾಗಿ ಕನ್ನಡಿಗರ ಕ್ಷಮೆ ಕೋರಿ, ರಾಜ್ಯ ಸರ್ಕಾರದ ನಿಲುವಿಗೆ ಬದ್ಧವಾಗದಿದ್ದರೆ ತಾವು ಫೋನ್ ಪೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಕನ್ನಡಿಗರಿಗೆ ಉದ್ಯೋಗ ಮೀಸಲು ಕುರಿತು ನೀಡಿರುವ ಹೇಳಿಕೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರ ಕ್ಷಮೆ ಕೇಳಬೇಕು’ ಹಾಗೂ ಕನ್ನಡಿಗರಿಗೆ ಮೀಸಲಾತಿ ಪ್ರಕಾರ ಉದ್ಯೋಗ ನೀಡಬೇಕು ಎಂಬ ನಿಲುವಿಗೆ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಫೋನ್ ಪೇ ವಿರುದ್ಧ ಅಭಿಯಾನ ಜೋರಾಗಿದ್ದು. ಸಿಎಂ ಸಭೆ ಬಳಿಕ ನಿರ್ಧಾರ ಸುದೀಪ್‌ ಅವರು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸುದೀಪ್ ಆಪ್ತ ಬಳಗದಿಂದ ಮಾಹಿತಿ ಸಿಕ್ಕಿದೆ.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಬೆಂಗಳೂರು: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Jobs Reservation: ಕನ್ನಡಿಗರಿಗೆ ಮೀಸಲು ಕಡ್ಡಾಯ ಮಾಡಲು ಕಾನೂನು ಸಮಸ್ಯೆ: ಖರ್ಗೆ

Continue Reading

ಸ್ಯಾಂಡಲ್ ವುಡ್

Dhruva Sarja: ದರ್ಶನ್‌ ಪ್ರಕರಣದ ಕುರಿತು ಕೊನೆಗೂ ಪ್ರತಿಕ್ರಿಯೆ ನೀಡಿದ  ಧ್ರುವ ಸರ್ಜಾ!

Dhruva Sarja: ದರ್ಶನ್ ಅರೆಸ್ಟ್ ಆದ ಬೆನ್ನಲ್ಲಿಯೇ ಮಾಧ್ಯಮದವರು, ಧ್ರುವ ಅವರಲ್ಲಿ ಈ ಪ್ರಕರಣದ ಕುರಿತು ಮಾತನಾಡುವಂತೆ ಮನವಿಯನ್ನ ಮಾಡಿಕೊಂಡಿದ್ದರು. ಧ್ರುವಾ ಸರ್ಜಾ ಪ್ರಶ್ನೆ ಕೇಳಿಯೂ ಕೇಳಿಸದಂತೆ ಹೋದರು.  ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Dhruva Sarja reaction about darshan isue
Koo

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌ (Actor Darshan) ಹಾಗೂ ತಮ್ಮ ನಡುವಿನ ಎದ್ದು ತೋರಿದ ಮನಸ್ತಾಪದ ವಿಚಾರವನ್ನು ಧ್ರುವ ಸರ್ಜಾ (Dhruva Sarja) ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದರು. ದರ್ಶನ್ ಅವರ ಬಳಿ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದು ಹೇಳಿಕೆ ನೀಡಿದ್ದರು. ಧ್ರುವ ಅವರಿಗೆ ಈ ಹಿಂದೆ ದರ್ಶನ್‌ ಪ್ರಕರಣದ ಬಗ್ಗೆ ಕೇಳಿದಾಗ ಉತ್ತರಿಸಿರಲಿಲ್ಲ. ಇದೀಗ ಮಾಧ್ಯಮವೊಂದಕ್ಕೆ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಧ್ರುವ ಸರ್ಜಾ ಮಾತನಾಡಿ ʻʻಯಾರೋ ಲೋ ಆಗಿದ್ದಾರೆ, ಕುಗ್ಗಿದ್ದಾರೆ ಎಂದು ಏನೇನೋ ಮಾತನಾಡಬಾರದು. ನೋವಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ನಮ್ಮದೂ ಒಂದು ಕಲ್ಲಿರಲಿ ಎಂದು ಬೀಸಲು ಹೋಗುವುದಿಲ್ಲ. ದರ್ಶನ್ ಸರ್ ಅವರಿಗೂ ಒಬ್ಬ ಮಗ ಇದ್ದಾನೆ, ರೇಣುಕಾ ಸ್ವಾಮಿಗೂ ಮಗು ಆಗಲಿದೆ. ಅವರ ಕುಟುಂಬಗಳನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಏನೇ ಆಗಲಿ ಅಗಲಿರುವ ರೇಣುಕಾ ಸ್ವಾಮಿಗೆ ನ್ಯಾಯ ಸಿಗಬೇಕು. ಕಾನೂನು ಎಲ್ಲಕ್ಕಿಂತ ದೊಡ್ಡದು. ಸುಮ್ಮನೇ ನಾವು ಏನೇನೋ ಮಾತನಾಡಬಾರದು.’ ಎಂದಿದ್ದಾರೆ.

ದರ್ಶನ್ ಅರೆಸ್ಟ್ ಆದ ಬೆನ್ನಲ್ಲಿಯೇ ಮಾಧ್ಯಮದವರು, ಧ್ರುವ ಅವರಲ್ಲಿ ಈ ಪ್ರಕರಣದ ಕುರಿತು ಮಾತನಾಡುವಂತೆ ಮನವಿಯನ್ನ ಮಾಡಿಕೊಂಡಿದ್ದರು. ಧ್ರುವಾ ಸರ್ಜಾ ಪ್ರಶ್ನೆ ಕೇಳಿಯೂ ಕೇಳಿಸದಂತೆ ಹೋದರು.  ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗಲಿದೆ ಎಂದು ಘೋಷಣೆ ಆಗಿತ್ತು. ಆದರೆ ದರ್ಶನ್‌ ಜೈಲಿನಲ್ಲಿ ಇರುವುದರಿಂದ ಡೆವಿಲ್ ಈ ವರ್ಷ ಬರಲು ಸಾಧ್ಯವೇ ಇಲ್ಲ.

ಇದನ್ನೂ ಓದಿ: Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

ಧ್ರುವ ಮತ್ತು ದರ್ಶನ್ ನಡುವೆ ಇರುವ ಮನಸ್ತಾಪ ಏನು?

ಕಾವೇರಿಗಾಗಿ ಇಡೀ ಕನ್ನಡ ಚಿತ್ರರಂಗ ಒಂದೇ ವೇದಿಕೆಯನ್ನೇರಿದ್ದ ಸಮಯದಲ್ಲಿ ದರ್ಶನ್ ಮುಖವನ್ನ ಧ್ರುವ ಒಮ್ಮೆಯೂ ನೋಡಿರಲಿಲ್ಲ. ದರ್ಶನ್ ಬಂದಾಗ ಎಲ್ಲರೂ ಎದ್ದು ನಿಂತರೂ ಧ್ರುವ ಮಾತ್ರ ಕುರ್ಚಿಯಿಂದ ಕದಲಿರಲಿಲ್ಲ.

ಈ ಬಗ್ಗೆ ಧ್ರುವ ಮಾತನಾಡಿ ʻʻದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಗೆ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು. ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲʼʼಎಂದಿದ್ದರು. ಸದ್ಯಕ್ಕೆ ಡಿಸೆಂಬರ್ ನಲ್ಲಿ ʻಡೆವಿಲ್ʼ ತೆರೆಗೆ ಬರಲು ಸಾಧ್ಯ ಇಲ್ಲ. ಹೀಗಾಗಿ ಗಲ್ಲಾಪೆಟ್ಟಿಗೆಯ ಅಖಾಡಕ್ಕೆ ಧ್ರುವ ಒಬ್ಬರೇ ಧುಮುಕಲಿದ್ದಾರೆ.

Continue Reading
Advertisement
Vande Mataram
ದೇಶ5 mins ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

karnataka Weather Forecast
ಮಳೆ32 mins ago

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Rain
ಕರ್ನಾಟಕ57 mins ago

Karnataka Rain: ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

Women's Asia Cup
ಪ್ರಮುಖ ಸುದ್ದಿ58 mins ago

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

karnataka rain
ಮಳೆ58 mins ago

Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

Guru Purnima 2024
ಅಂಕಣ1 hour ago

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Fatty liver disease
ಆರೋಗ್ಯ1 hour ago

Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

Lakshmi Hebbalkar
ಉಡುಪಿ1 hour ago

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Kanwar Yatra
ದೇಶ2 hours ago

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

HD Kumaraswamy
ಕರ್ನಾಟಕ2 hours ago

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌