ವಯೊಲೆನ್ಸ್‌, ವಯೊಲೆನ್ಸ್, ವಯೊಲೆನ್ಸ್:‌ ಎಲ್ಲರ ಗಮನ ಸೆಳೀತಿದೆ ಈ ಹಾಲಿವುಡ್‌ ವಿಚಾರಣೆ ‌ - Vistara News

ಸಿನಿಮಾ

ವಯೊಲೆನ್ಸ್‌, ವಯೊಲೆನ್ಸ್, ವಯೊಲೆನ್ಸ್:‌ ಎಲ್ಲರ ಗಮನ ಸೆಳೀತಿದೆ ಈ ಹಾಲಿವುಡ್‌ ವಿಚಾರಣೆ ‌

ಪೈರೇಟ್ಸ್‌ ಆಫ್‌ ದಿ ಕೆರೀಬಿಯನ್‌ ಸಿನಿಮಾ ನಟ ಜಾನಿ ಡೆಪ್‌ ಮತ್ತು ನಟಿ ಆಂಬರ್‌ ಹರ್ಡ್‌ ನಡುವಿನ ಮಾನನಷ್ಟ ಮೊಕದ್ದಮೆ ವಿಚಾರಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಲೇ ಇದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸದ್ಯ ಹಾಲಿವುಡ್‌ನಲ್ಲಿ ಯಾವುದೇ ಫಿಲಂಗಳಿಗಿಂತ ಅತ್ಯಧಿಕ ಸದ್ದು ಮಾಡುತ್ತಾ ಓಡುತ್ತಿರುವುದು ಜಾನಿ ಡೆಪ್‌ ಮತ್ತು ಆಂಬರ್‌ ಹರ್ಡ್‌ ಎಂಬ ಇಬ್ಬರು ಹೈ ಪ್ರೊಫೈಲ್‌ ನಟರ ಮುರಿದ ದಾಂಪತ್ಯದ, ನಂತರದ ಮಾನನಷ್ಟ ಮೊಕದ್ದಮೆಯ ಕೋರ್ಟ್‌ ವಿಚಾರಣೆಯ ಪ್ರಕರಣ. ಯೂಟ್ಯೂಬ್‌ಗೆ ಹೋದರೆ ಖುದ್ದು ಕೋರ್ಟ್‌ ಟ್ರಯಲ್‌ನ ವಿಡಿಯೋಗಳನ್ನೂ ನೀವು ನೋಡಬಹುದು.

ಅದಿರಲಿ. ನೀವು ಈ ಕೇಸ್‌ನ ಆದ್ಯಂತ ತಿಳಿದುಕೊಳ್ಳಬೇಕಿದ್ದರೆ ಈ ಕತೆಯನ್ನು ಆರಂಭದಿಂದಲೇ ಶುರು ಮಾಡಬೇಕು.

ಜಾನಿ ಡೆಪ್‌, ಪೈರೇಟ್ಸ್‌ ಆಫ್‌ ದಿ ಕೆರಿಬಿಯನ್‌ ಸೀರೀಸ್‌ ಸಿನಿಮಾಗಳಿಂದಾಗಿ ಜಗದ್ವಿಖ್ಯಾತ. ಅವನ ಕಡಲುಗಳ್ಳ ಭೂತದ ಪಾತ್ರ ಮಕ್ಕಳಿಗೂ ಚಿರಪರಿಚಿತ. ಇನ್ನು ಆಂಬರ್‌ ಹರ್ಡ್‌, ಈಕೆ ʼಗೋನ್‌ ಗರ್ಲ್‌ʼ ಫಿಲಂನ ಲೀಡ್‌ ಕ್ಯಾರೆಕ್ಟರ್‌ ಆಗಿ ಹೆಸರು ಮಾಡಿದಳು. ಇಬ್ಬರ ಬುಟ್ಟಿಯಲ್ಲೂ ಹತ್ತಾರು ಫೀಲಂಗಳೂ ಕೆಲವಷ್ಟು ಡೇಟಿಂಗ್-‌ ಪ್ರೇಮ- ಮದುವೆ- ಪ್ರೇಮಭಂಗ- ಇತ್ಯಾದಿಗಳೂ ಇವೆ.

ಇವರಿಬ್ಬರ ರೊಮ್ಯಾನ್ಸ್‌ ಶುರುವಾದುದು 2009ರಲ್ಲಿ. ದಿ ರನ್‌ ಡೈರಿ ಫಿಲಂನಲ್ಲಿ ನಟಿಸುತ್ತಾ ಇದ್ದಾಗ ಇವರಿಬ್ಬರಿಗೂ ಗೆಳೆತನ. ಶವರ್‌ನಲ್ಲಿ ನಿಂತು ಕಿಸ್‌ ಮಾಡುವ ಸೀನ್‌ನಿಂದಲೇ ಅವರಿಬ್ಬರಿಗೂ ಓಹೋ ನಮ್ಮಿಬ್ಬರ ನಡುವೆ ಏನೋ ಇದೆ ಅನ್ನಿಸಲು ಶುರುವಾದದ್ದು. ಅದಕ್ಕೂ ಮುನ್ನ ಇಬ್ಬರೂ ಬೇರೆ ಮದುವೆಯಾಗಿದ್ದರು. 2012ರಲ್ಲಿ ತಮ್ಮ ಹಳೆಯ ಸಂಗಾತಿಗಳಿಂದ ಬೇರೆಯಾದರು. ʼʼಅವಳು ಕಾಳಜಿ ವಹಿಸುತ್ತಾಳೆ, ಪ್ರೀತಿಸುತ್ತಾಳೆ, ಅವಳು ಸ್ಮಾರ್ಟ್‌, ಫನ್ನಿ, ಅರ್ಥ ಮಾಡಿಕೊಳ್ಳುತ್ತಾಳೆ. ನಮ್ಮಿಬ್ಬರ ನಡುವೆ ತುಂಬಾ ಸಂಗತಿಗಳು ಕಾಮನ್‌ ಆಗಿವೆ..ʼʼ ಎಂದೆಲ್ಲ ಆಕೆಯ ಬಗೆಗೆ ಜಾನಿ ಹೇಳಿದ್ದು ಇತ್ತು.

ಎರಡು ವರ್ಷಗಳ ಡೇಟಿಂಗ್‌ ಬಳಿಕ ಅವರಿಬ್ಬರೂ 2014ರಲ್ಲಿ ಮದುವೆಯಾದರು. ಅದೂ ಕೂಡ ಜಾನಿ ಡೆಪ್‌ನ ಖಾಸಗಿ ದ್ವೀಪದಲ್ಲಿ.

ಆದರೆ ಆರಂಭದಿಂದಲೇ ಈ ದಾಂಪತ್ಯ ಮುರಿಯಲಿರುವ ಹಡಗು ಎಂಬುದು ಅರಿವಿಗೆ ಬಂತು. ಅದೂ ಮದುವೆಯಾದ ಮೊದಲ ದಿನದಿಂದಲೇ. ಮದುವೆಯಾದ ಕೆಲವೇ ಗಂಟೆಗಳ ಬಳಿಕ ʼʼನಾನೀಗ ಆಕೆಗೆ ಹೊಡೆಯಬಹುದುʼʼ ಎಂದು ತನ್ನ ಆಪ್ತನಿಗೆ ಡೆಪ್‌ ಹೇಳಿದ್ದು ದಾಖಲಾಗಿತ್ತು.

ಡೆಪ್‌ ಕೈಯಲ್ಲಿದ್ದ ಒಂದು ಟ್ಯಾಟೂ ಬಗ್ಗೆ ಹರ್ಡ್‌ ಕ್ಯಾಶುಯಲ್ಲಾಗಿ ಪ್ರಶ್ನಿಸಿದಾಗ ಡೆಪ್‌ ಮೊದಲ ಬಾರಿಗೆ ಆಕೆಯ ಕಪಾಲಕ್ಕೆ ಬಾರಿಸಿದ. ಆಕೆ ಶಾಕ್‌ಗೆ ಒಳಗಾದಳು. ಅಂದಿನಿಂದ ಆಕೆಯ ಬದುಕು ಬದಲಾಯಿತು. ನಂತರ ಎಂದೂ ದಾಂಪತ್ಯ ಹಳಿಗೆ ಮರಳಲೇ ಇಲ್ಲ.

ಮದುವೆಯಾಗಿ ಹದಿನೈದು ತಿಂಗಳಲ್ಲಿ ಹರ್ಡ್‌ ಡೈವೋರ್ಸ್‌ಗೆ ಅರ್ಜಿ ಹಾಕಿದಳು. ಇವರಿಬ್ಬರ ದಾಂಪತ್ಯದಲ್ಲಿ ನಡೆದ ಹೀನಾತಿಹೀನ ಜಗಳಗಳ ವಿವರಗಳು ಹೊರಬಿದ್ದವು. ಇಬ್ಬರೂ ಪರಸ್ಪರ ಹಿಂಸಾತ್ಮಕವಾಗಿ ಕಿತ್ತಾಡಿಕೊಳ್ಳುತ್ತಿದ್ದರು. ಹೊಡೆದುಕೊಳ್ಳುತ್ತಿದ್ದರು. ಡೆಪ್‌ ಬಿಯರ್‌ ಬಾಟಲ್‌ಗಳಿಂದ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ. ನಿನಗೆ ಇನ್ಯಾರ ಜೊತೆಗೋ ಸಂಬಂಧ ಇದೆ ಎಂದು ಸಂಶಯಿಸಿ ಆಕೆಯ ತಲೆಕೂದಲು ಹಿಡಿದು ಕೀಳುತ್ತಿದ್ದ. ಮುಖಮೈಥುನಕ್ಕೆ ಬಲಾತ್ಕರಿಸುತ್ತಿದ್ದ. ಕುಡಿದು ಚಿತ್‌ ಆದಾಗ, ಕೊಕೇನ್‌ ಸೇವಿಸಿ ಹೈ ಆದಾಗ, ಲಿಕ್ಕರ್ ಕ್ಯಾಬಿನೆಟ್‌ಗಳನ್ನು ಮುರಿದುಹಾಕುತ್ತಿದ್ದ.

ಹರ್ಡ್‌ ಹಿಂಸೆ ತಾಳಿಕೊಳ್ಳಲಾಗದೆ ಪ್ರತಿಹಿಂಸೆ ನಡೆಸುತ್ತಿದ್ದಳು. ಡೆಪ್‌ ಹೇಳುವ ಪ್ರಕಾರ ಅವಳು ಆತನ ಹಾಸಿಗೆಯಲ್ಲಿ ಮಲ ವಿಸರ್ಜನೆ ಮಾಡಿದ್ದು ಇತ್ತು. ಅಂತೂ ಇಬ್ಬರೂ ಡ್ರಗ್ಸ್‌ ಸೇವಿಸಿದಾಗ ಮನುಷ್ಯರಂತೆ ವರ್ತಿಸುತ್ತಲೇ ಇರಲಿಲ್ಲ ಎನ್ನಬಹುದು. ಮೃಗಗಳಂತೆ ಕಿತ್ತಾಡಿಕೊಳ್ಳುತ್ತಿದ್ದರು.

ಇವರಿಬ್ಬರ ವಿಚಾರಣೆಯ ಸಂದರ್ಭದಲ್ಲಿ ಹೊರಬರುತ್ತಿರುವ ಒಂದೊಂದು ಹಿಂಸೆ, ಕಿತ್ತಾಟದ ವಿವರಗಳೂ ಭೀಭತ್ಸವಾಗಿವೆ.

ಕೊನೆಗೂ ಎಂಟು ದಶಲಕ್ಷ ಡಾಲರ್‌ ಕೊಟ್ಟು ಡೆಪ್‌, ಹರ್ಡ್‌ಗೆ ಡೈವೋರ್ಸ್‌ ನೀಡಿ ಸೆಟಲ್‌ ಮಾಡಿಕೊಂಡ.

2018ರಲ್ಲಿ ಹರ್ಡ್‌ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಒಂದು ಲೇಖನ ಬರೆದಳು. ಅದರಲ್ಲಿ ʼʼನಾನು ಮನೆಯೊಳಗಿನ ಹಿಂಸೆಯ ಸಂತ್ರಸ್ತೆʼʼ ಎಂದು ಬರೆದುಕೊಂಡಳು. ಇದನ್ನು ನೋಡಿ ಡೆಪ್‌ಗೆ ರೇಗಿತು. ಆತ ಆಕೆಯ ಮೇಲೆ 50 ಲಕ್ಷ ಡಾಲರ್‌ನ ಮಾನನಷ್ಟ ಕೇಸ್‌ ಹಾಕಿದ. ಪ್ರತಿಯಾಗಿ ಹರ್ಡ್‌ ಕೂಡ ಡೆಪ್‌ ಮೇಲೆ ಡೊಮೆಸ್ಟಿಕ್‌ ವಯೊಲೆನ್ಸ್‌ನ ಕೇಸ್‌ ಹಾಕಿದಳು. ಅದೇ ಈಗ ವಿಚಾರಣೆಯಲ್ಲಿದೆ.

ಇದನ್ನೂ ಓದಿ: ಹಾಲಿವುಡ್‌ ನಟನ ಸಂಸಾರದಲ್ಲೂ ಮೂಗು ತೂರಿಸಿದರೇ ಎಲಾನ್‌ ಮಸ್ಕ್?‌

ಈ ನಡುವೆ ಹರ್ಡ್‌ ಒಬ್ಬಳು ಹೆಣ್ಣುಮಗಳನ್ನು ಸರೊಗಸಿಯ ಮೂಲಕ ಪಡೆದಳು. ಅದರ ತಾಯಿಯೂ ತಂದೆಯೂ ತಾನೇ ಎಂದು ಹೇಳಿಕೊಂಡಳು.

ಈ ನಡುವೆ ಇನ್ನೊಂದು ಅಸಹ್ಯಕರ ಸಂಗತಿ ಹೊರಬಿತ್ತು. ನಮ್ಮ ದಾಂಪತ್ಯ ನಡೆದಿದ್ದಾಗಲೇ ಆಂಬರ್‌ ಹರ್ಡ್‌ ಮತ್ತು ಕಾರಾ ಡೆವಿಯನೆ ಎಂಬ ಇನ್ನೊಬ್ಬ ನಟಿಯ ಜೊತೆಗೆ ಉದ್ಯಮಿ ಎಲಾನ್‌ ಮಸ್ಕ್‌ ತ್ರೀಸಮ್‌ ನಡೆಸಿದ್ದ ಎಂದು ಕೂಡ ಜಾನಿ ಡೆಪ್‌ ಆರೋಪಿಸಿದ್ದ. ಮಸ್ಕ್‌ ಇದನ್ನು ಅಲ್ಲಗಳೆದ. ಹರ್ಡ್-‌ ಡೆಪ್‌ ಡೈವೋರ್ಸ್‌ ಆದ ಬಳಿಕವೇ ನಾನು ಹರ್ಡ್‌ ಜೊತೆ ಸಾಂಗತ್ಯ ಬೆಳೆಸಿದ್ದು ಎಂದು ಹೇಳಿದ. ಕಾರಾ ನನಗೆ ಗೆಳತಿ ಮಾತ್ರ ಎಂದ.

ಹೀಗೆ ಕೋರ್ಟಡ್‌ ವಿಚಾರಣೆ ಹೊಸ ಹೊಸ ಸತ್ಯಗಳನ್ನು ಹೊರಗೆಡಹುತ್ತಲೇ ನಡೆದಿದೆ. ಸೆಲೆಬ್ರಿಟಿ ದಾಂಪತ್ಯಗಳ ಬಗ್ಗೆ ಕಣ್ಣು ತೆರೆಸುವುದು, ಅವುಗಳ ಕತ್ತಲೆ ಕೋಣೆಗಳ ಅಸಹ್ಯ ಮಗ್ಗುಲುಗಳ ಮೇಲೆ ಬೆಳಕು ಚೆಲ್ಲುವುದಂತೂ ಇದರಿಂದ ಆಗಿದೆ. ಎಲ್ಲಿ ಹೋಗಿ ನಿಲ್ಲುತ್ತದೋ ತಿಳಿಯದು.

ಇದನ್ನೂ ಓದಿ: ನಿಮ್ಮ ಮಕ್ಕಳಿಗೆ ಬೇಸಿಗೆಯಲ್ಲಿ ಹೇಗೆ ಸಹಾಯ ಮಾಡಬೇಕು?: ಇಲ್ಲಿವೆ ಪ್ರಮುಖ ಟಿಪ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Kiran Raj : ‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

VISTARANEWS.COM


on

Kiran Raj Met Jon Abraham
Koo

ಬೆಂಗಳೂರು: ‘777 ಚಾರ್ಲಿ’ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು ನಿರ್ದೇಶಕ ಕಿರಣ್ ರಾಜ್. ಇದೀಗ ಕಿರಣ್‌ ರಾಜ್‌ ಅವರ ಮುಂಬರುವ ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಕಾದಿದ್ದಾರೆ. ಏಕಾಏಕಿ ಕಿರಣ್‌ ರಾಜ್‌ ಅವರು ಖ್ಯಾತ ನಟ ಜಾನ್ ಅಬ್ರಾಹಂ (Jon Abraham) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಿರಣ್‌ ರಾಜ್‌ “ಎಂತಹ ಅದ್ಭುತ ದಿನ” ಎಂದು ಬರೆದುಕೊಂಡಿದ್ದಾರೆ. ಫೋಟೊ ನೋಡಿ ಸಿನಿರಸಿಕರು ಥ್ರಿಲ್‌ ಆಗಿದ್ದಾರೆ.

‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

ಕಿರಣ್‌ ರಾಜ್‌ ಸದ್ಯ ಜಾನ್‌ ಅಬ್ರಾಹಂ ಜತೆ ಫೋಟೊ ಶೇರ್‌ ಮಾಡಿ ʻʻ”ಎಂತಹ ಅದ್ಭುತ ದಿನ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777ಚಾರ್ಲಿ ಬಿಡುಗಡೆಯ ಸಮಯದಲ್ಲಿ ನಾವು ಮೊದಲು ಫೋನ್‌ ಮೂಲಕ ಮಾತನಾಡಿದ್ದೇವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ, ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು! ಜಾನ್ ಅಬ್ರಾಹಂ ತೋರಿದ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ಈ ದಿನಕ್ಕೆ ಕೃತಜ್ಞʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Raj: ನಟ ಕಿರಣ್ ರಾಜ್‌ ಮತ್ತೊಂದು ಸಾಹಸ; ಅತಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿ Ronny ದಾಖಲೆ!

777 ಚಾರ್ಲಿ ಬಳಿಕ ಕಿರಣ್‌ ರಾಜ್‌ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್‌ ಮಾಡಿರಲಿಲ್ಲ. ಈಗ ದಿಢೀರನೇ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿದ ಖುಷಿಯ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಹಾಂ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು.

Continue Reading

ರಾಜಕೀಯ

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

Lok Sabha Election 2024: ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ.

VISTARANEWS.COM


on

Lok Sabha Election 2024 sandalwood celebs where do cast their votes
Koo

ಬೆಂಗಳೂರು: ಕರ್ನಾಟಕ ಸೇರಿದಂತೆ (Lok Sabha Election 2024) ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ಕಲಾ ದಂಪತಿಗಳದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಬೆಂಗಳೂರು ಉತ್ತರ, ಯಶವಂತಪುರ ಕ್ಷೇತ್ರದಲ್ಲಿ ವೋಟ್‌ ಹಾಕಿದರು. ಚಂದನ್ ಶೆಟ್ಟಿ ನಾಗರಾಬಾವಿಯಲ್ಲಿ ಮತದಾನ ಮಾಡಿದ್ದಾರೆ.

ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ವೋಟ್ ಮಾಡಲಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮತ ಚಲಾಯಿಸಲು ಕತ್ರಿಗುಪ್ಪೆ BTL ವಿದ್ಯಾವಾಹಿನಿ ಶಾಲೆಯ ಮತಗಟ್ಟೆಗೆ ತೆರಳಲಿದ್ದಾರೆ.

ಇದನ್ನೂ ಓದಿ: Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

ಗಣೇಶ್, ದಿಗಂತ್, ಪ್ರೇಮ್ ದಂಪತಿ ಆರ್‌ ಆರ್ ನಗರ, ಕುಂದಾಪುರದ ಕೆರಾಡಿ ಶಾಲೆಯಲ್ಲಿ ರಿಷಬ್ ಶೆಟ್ಟಿ, ಉಡುಪಿಯಲ್ಲಿ ರಕ್ಷಿತ್ ಶೆಟ್ಟಿ, ಅರಸೀಕೆರೆಯಲ್ಲಿ ಧನಂಜಯ್ ಮತ ಚಲಾಯಿಸಲಿದ್ದಾರೆ.
ಮಾಳವಿಕಾ ಅವಿನಾಶ್,ವಸಿಷ್ಠ ಸಿಂಹ, ಹರಿಪ್ರಿಯಾ, ಅಮೂಲ್ಯ, ಅವಿನಾಶ್‌ ಆರ್‌ ಆರ್‌​ನಗರದಲ್ಲಿ,
ಸೃಜನ್ ಲೋಕೇಶ್, ಪೂಜಾ ಗಾಂಧಿ, ದುನಿಯಾ ವಿಜಯ್ ಕತ್ರಿಗುಪ್ಪೆ.

ಅನಂತ್ ನಾಗ್: ಮಲ್ಲೇಶ್ವರಂ, ​ಧ್ರುವ ಸರ್ಜಾ: ತ್ಯಾಗರಾಜನಗರ (ಕೆಆರ್​.ರೋಡ್​, ಶಾಸ್ತ್ರಿ ನಗರ) ಶ್ರೀಮುರುಳಿ: ವಸಂತ ನಗರ ಪ್ರಶಾಂತ್​ನೀಲ್​: ವಸಂತ ನಗರ, ಮಾಲಾಶ್ರೀ: ಶಿವಾಜಿನಗರ ರಾಜ್ ಬಿ.ಶೆಟ್ಟಿ: ಉಡುಪಿ ನಿಖಿಲ್ ಕುಮಾರಸ್ವಾಮಿ: ಕೇತಮಾರನಹಳ್ಳಿ (ಬಿಡದಿ) ಆಶಿಕಾ ರಂಗನಾಥ್: ತುಮಕೂರು ಚಿಕ್ಕಣ್ಣ: ಮೈಸೂರು ವಿನೋದ್ ರಾಜ್: ಸೋಲದೇವನ ಹಳ್ಳಿ ದೊಡ್ಡಣ್ಣ: ಬಿದರುಕಲ್ಲು ಮತ ಚಲಾಯಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Salman Khan : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಎಂಬಿಬ್ಬರು ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Salman Khan
Koo

ಮುಂಬಯಿ: ಬಾಲಿವುಡ್​ ನಟ ಸಲ್ಮಾನ್​ ಖಾನ್ (Salman Khan) ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ (Firing at Salman Khan house) ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಪಂಜಾಬ್​ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಗುಂಡಿನ ದಾಳಿ ನಡೆಸಿದವರಿಗೆ ಗನ್​ಗಳನ್ನು ನೀಡಿದ್ದರು.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ನಡೆದಿತ್ತು. ಆ ಆರೋಪಿಗಳಿಗೆ ಮಾರ್ಚ್ 15 ರಂದು ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಎಂಬಿಬ್ಬರು ಪಿಸ್ತೂಲ್ ಮತ್ತು ಕಾಟ್ರಿಜ್​ಗಳನ್ನು ನೀಡಿದ್ದರು. ಈ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದಾರೆ.

ಸಲ್ಮಾನ್ ಖಾನ್‌ನನ್ನು ಕೊಂದೇ ತೀರುತ್ತೇನೆ, ನನ್ನ ಜೀವನದ ಗುರಿ: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಅವರಿಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿʼʼ ಎಂದು ಉಲ್ಲೇಖಿಸಿದ್ದಾರೆ. ʻʻಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂಬುದಾಗಿ ಹೇಳಿದ್ದಾರೆ.

“ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಸಲ್ಮಾನ್ ಖಾನ್ ಅವರ ಭದ್ರತೆಯನ್ನು ತೆಗೆದುಹಾಕಿದರೆ ನಾನು ಅವರನ್ನು ಕೊಲ್ಲುತ್ತೇನೆʼʼ ಎಂದು ಬಿಷ್ಣೋಯ್ ಹೇಳಿದ್ದಾರೆ.

ಇದನ್ನೂ ಓದಿ: Gyanvapi Mosque: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶ ನೀಡಿದ್ದ ಜಡ್ಜ್‌ಗೆ ವಿದೇಶದಿಂದ ಜೀವ ಬೆದರಿಕೆ

ʻʻಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ” ಹೇಳಿದ್ದಾರೆ. ಇದಾದ ಕೆಲವೇ ದಿನಗಳಲ್ಲಿ, ಕೃಷ್ಣಮೃಗವನ್ನು ಕೊಂದ ಆರೋಪದ ಮೂಲಕ ಸಲ್ಮಾನ್ ತನ್ನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಲಾರೆನ್ಸ್‌ ಬಿಷ್ಣೋಯ್‌ ಹೇಳಿದ್ದಾರೆ.

ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲ. ಇದರ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು. ನಾನು ಬೇರೆಯವರನ್ನು ಅವಲಂಬಿಸುವುದಿಲ್ಲ,’’ ಎಂದು ಎಬಿಪಿ ಸುದ್ದಿವಾಹಿನಿಗೆ ತಿಳಿಸಿದರು.

2018 ರಲ್ಲಿ, ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಇದನ್ನು ಜಾಂಬಾಜಿ ಎಂದೂ ಕರೆಯುತ್ತಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Kannada Serials TRP: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

VISTARANEWS.COM


on

Kannada Serials TRP Lakshmi Nivasa In Top Amruthadhaare in Top 5
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ. ಇತ್ತೀಚೆಗೆ ಆರಂಭ ಆಗಿರುವ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ‘ಅಮೃತಧಾರೆ’ ಧಾರಾವಾಹಿ ಇದೆ. ಎರಡೂ ಧಾರಾವಾಹಿಗಳಿಗೆ ಈ ಬಾರಿ ಐದನೇ ಸ್ಥಾನ ಸಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading
Advertisement
IPL 2024
ಐಪಿಎಲ್ 20243 mins ago

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

ರಾಜಕೀಯ4 mins ago

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Kiran Raj Met Jon Abraham
ಸ್ಯಾಂಡಲ್ ವುಡ್27 mins ago

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Tech Mahindra
ದೇಶ27 mins ago

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Pune Police 60 Hours Operation; Drugs worth more than Rs 1300 crore seized
ಕ್ರೈಂ56 mins ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ58 mins ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ1 hour ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ2 hours ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ2 hours ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

lok sabha election 2024 sudha murthy voting
Live News2 hours ago

Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ17 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ17 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ21 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202422 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌