NTR 30: ಎನ್‌ಟಿಆರ್‌ 30 ಮುಹೂರ್ತ; ರಾಜಮೌಳಿಗೆ ಜೂನಿಯರ್ ಎನ್‌ಟಿಆರ್ ಬೆಚ್ಚಗಿನ ಅಪ್ಪುಗೆ - Vistara News

South Cinema

NTR 30: ಎನ್‌ಟಿಆರ್‌ 30 ಮುಹೂರ್ತ; ರಾಜಮೌಳಿಗೆ ಜೂನಿಯರ್ ಎನ್‌ಟಿಆರ್ ಬೆಚ್ಚಗಿನ ಅಪ್ಪುಗೆ

ಆಸ್ಕರ್‌ ಪ್ರಶಸ್ತಿ ಗೆದ್ದ ನಂತರ ಜ್ಯೂನಿಯರ್‌ ಎನ್‌ಟಿಆರ್‌ NTR 30 (NTR 30)ಸಿನಿಮಾದ ಮುಹೂರ್ತದಲ್ಲಿ ಕ್ಯಾಶುಯಲ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ರಾಜಮೌಳಿ ಅವರನ್ನು ಕಂಡೊಡನೆ ಅವರನ್ನು ಅಪ್ಪಿಕೊಂಡಿದ್ದಾರೆ.

VISTARANEWS.COM


on

Jr NTR gives a warm hug to RRR director SS Rajamouli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜ್ಯೂನಿಯರ್‌ ಎನ್‌ಟಿಆರ್‌ ಶೀಘ್ರದಲ್ಲೇ ಎನ್‌ಟಿಆರ್‌ 30 (NTR 30) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೇ ಜಾನ್ವಿ ಕಪೂರ್ ಅವರ ತೆಲುಗು ಚೊಚ್ಚಲ ಚಿತ್ರವಾಗಿದೆ. ಇದೀಗ ಚಿತ್ರದ ಮುಹೂರ್ತ ನೆರವೇರಿದ್ದು, ಆರ್‌ಆರ್‌ಆರ್‌ ಸಿನಿಮಾದ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಮತ್ತು ಪ್ರಶಾಂತ್‌ ನೀಲ್‌ ಭಾಗಿಯಾಗಿದ್ದಾರೆ. ನಿರ್ದೇಶಕ ಎಸ್ಎಸ್ ರಾಜಮೌಳಿ ಅವರೊಂದಿಗೆ ಜ್ಯೂನಿಯರ್‌ ಎನ್‌ಟಿಆರ್‌ ಬೆಚ್ಚಗಿನ ಅಪ್ಪುಗೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇನ್ನೂ ಹೆಸರಿಡದ ಈ ಸಿನಿಮಾಗೆ ಕೊರಟಾಲ ಶಿವ ನಿರ್ದೇಶಿಸಿದ್ದಾರೆ.

ಆಸ್ಕರ್‌ ಪ್ರಶಸ್ತಿ ಗೆದ್ದ ನಂತರ ಜ್ಯೂನಿಯರ್‌ ಎನ್‌ಟಿಆರ್‌ NTR 30 ಸಿನಿಮಾದ ಮುಹೂರ್ತದಲ್ಲಿ ಕ್ಯಾಶುಯಲ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ರಾಜಮೌಳಿ ಅವರನ್ನು ಕಂಡೊಡನೆ ಅವರನ್ನು ಅಪ್ಪಿಕೊಂಡಿದ್ದಾರೆ. ಎನ್‌ಟಿಆರ್‌ 30 ಸಿನಿಮಾದ ಪೂಜೆ ಸಮಾರಂಭದಲ್ಲಿ ಎಸ್ಎಸ್ ರಾಜಮೌಳಿ ಅವರು ಮೊದಲ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು.

ಅನಿರುದ್ಧ ಸಂಗೀತ ನಿರ್ದೇಶಕರಾಗಿದ್ದು, ರತ್ನವೇಲು ಛಾಯಾಗ್ರಹಣ ಮಾಡಲಿದ್ದಾರೆ. ನಂದಮೂರಿ ಕಲ್ಯಾಣರಾಮ್ ಪ್ರಸ್ತುತಪಡಿಸಿದ್ದು, ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್‌ನಡಿಯಲ್ಲಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿ ಕೃಷ್ಣ ಕೆ ನಿರ್ಮಿಸಿದ್ದಾರೆ. 300 ಕೋಟಿ ಬಜೆಟ್‌ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ: NTR 30: ತಾರಕರತ್ನ ನಿಧನದಿಂದಾಗಿ ಎನ್‌ಟಿಆರ್ 30 ಸಿನಿಮಾದ ಈವೆಂಟ್‌ ಮುಂದೂಡಿಕೆ

ಕಾರಿನಿಂದ ಇಳಿದು ಅಪ್ಪಿಕೊಂಡ ಕ್ಷಣ

ಮುಹೂರ್ತದ ಕ್ಷಣಗಳು

ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ಜ್ಯೂನಿಯರ್‌ ಎನ್‌ಟಿಆರ್‌

ಜ್ಯೂನಿಯರ್‌ ಎನ್‌ಟಿಆರ್‌ ಕೊನೆಯಾದಾಗಿ ಆರ್‌ಆರ್‌ಆರ್‌ ಸಿನಿಮಾದಲ್ಲಿ ಕಾಣಿಸಿಕೊಂಡರು. ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆಯಿತು. ಇದೀಗ NTR 30ಯಲ್ಲಿ ನಟ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಪ್ರಶಾಂತ್‌ ನೀಲ್‌ ಜತೆ NTR 31 ಸಿನಿಮಾ ಕೂಡ ನಟ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading

ಸ್ಯಾಂಡಲ್ ವುಡ್

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇವರು ಧರಿಸಿರುವ ಅನಾರ್ಕಲಿ ಗೌನ್‌ ವಿಶೇಷತೆ ಏನು? ಇಲ್ಲಿದೆ ಒಂದಿಷ್ಟು ಟಿಪ್ಸ್.

VISTARANEWS.COM


on

Milana Nagaraj Anarkali border gown worn
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕ್ರಶ್ಡ್‌ ಅನಾರ್ಕಲಿ ಗೌನ್‌ನಲ್ಲಿ (Actress Fashion) ಆಕರ್ಷಕವಾಗಿ ಕಾಣಿಸಿಕೊಂಡಿರುವ ನಟಿ ಮಿಲನಾ ನಾಗರಾಜ್‌ ಟ್ರೆಡಿಷನಲ್‌ ಲುಕ್‌ನಲ್ಲಿ ಮಹಿಳೆಯರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಮಿಲನಾ ನಾಗರಾಜ್‌ ಈಗ ಗರ್ಭಿಣಿ.
ಈಗಷ್ಟೇ ವಿದೇಶದಲ್ಲಿ ಬೇಬಿ ಮೂನ್‌ ಮುಗಿಸಿ ಪತಿ ಡಾರ್ಲಿಂಗ್‌ ಕೃಷ್ಣ ಅವರೊಂದಿಗೆ ಮರಳಿರುವ ಮಿಲನಾ ಅವರು ನಾನಾ ಇವೆಂಟ್‌ನಲ್ಲಿ ಒಂದಲ್ಲ ಒಂದು ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಬೇಬಿ ಬಂಪ್‌ ಹೈಲೈಟಾಗದಂತೆ ಡ್ರೆಸ್‌ಗಳನ್ನು ಧರಿಸುತ್ತಾರೆ. ಡೀಸೆಂಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದು ಫ್ಯಾಷನ್‌ ವಿಮರ್ಶಕರ ಪ್ರಶಂಸೆಗೂ ಒಳಗಾಗುತ್ತಿರುತ್ತಾರೆ.

ಅನಾರ್ಕಲಿ ಗೌನ್‌ನಲ್ಲಿ ಮಿಲನಾ ಸ್ಟೈಲ್‌ & ಸ್ಮೈಲ್‌:

“ಪ್ರೆಗ್ನೆಂಟ್‌ ಆಗಿರುವ ಮಿಲನಾ ನಾಗರಾಜ್‌ ಅವರ ಬೇಬಿ ಬಂಪ್‌ ಎಲ್ಲಿಯೂ ಹೈಲೈಟ್‌ ಆಗುತ್ತಿಲ್ಲ ಎನ್ನುವುದಕ್ಕಿಂತ ಅವರು ಧರಿಸುತ್ತಿರುವ ಉಡುಪುಗಳ ಡಿಸೈನ್‌ ಅಷ್ಟೊಂದು ನೀಟಾಗಿದೆ. ಅವರು ಧರಿಸಿರುವ ಒಂದೊಂದು ಔಟ್‌ಫಿಟ್‌ ಕೂಡ ಡಿಸೆಂಟ್‌ ಲುಕ್‌ ನೀಡುವುದರೊಂದಿಗೆ ಅವರಿಗೆ ಕಂಫರ್ಟಬಲ್‌ ಫೀಲ್‌ ನೀಡಿದೆ” ಎನ್ನುತ್ತಾರೆ ಫ್ಯಾಷನಿಸ್ಟಾಗಳು.

ಇದನ್ನೂ ಓದಿ: Milana Nagaraj: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಲವ್‌ ಮಾಕ್ಟೆಲ್‌ʼ ಜೋಡಿ!

ಗೋಲ್ಡನ್‌ ಅನಾರ್ಕಲಿ ಡಿಟೇಲ್ಸ್‌

ಎಥ್ನಿಕ್‌ವೇರ್‌ ಡಿಸೈನ್‌ಗಳಿಗೆ ಖ್ಯಾತಿ ಗಳಿಸಿರುವ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿಯವರ ಡಿಸೈನರ್‌ವೇರ್‌ ಇದು. ಕ್ರಶ್ಡ್‌ ಟಿಶ್ಯೂ ಮೆಟೀರಿಯಲ್‌ನ ಈ ಫ್ಯಾಬ್ರಿಕ್‌ ಅನಾರ್ಕಲಿ ವಿನ್ಯಾಸವನ್ನು ಒಳಗೊಂಡಿದೆ. ಮಿಲನಾಗೆ ಎಲಿಗೆಂಟ್‌ ಲುಕ್‌ ನೀಡಿರುವ ಈ ಅನಾರ್ಕಲಿ ಗೌನ್‌ಗೆ ಸ್ಲೀವ್‌ ಹಾಗೂ ಡಿಸೈನರ್‌ವೇರ್‌ ಕೆಳಗೆ ಇರುವ ಬಿಗ್‌ ಬಾರ್ಡರ್‌ ಕಂಪ್ಲೀಟ್‌ ಟ್ರೆಡಿಷನಲ್‌ ಲುಕ್‌ ನೀಡಿದೆ. ಇದರೊಂದಿಗೆ ಕಾಂಟ್ರಸ್ಟ್‌ ಶೇಡ್‌ನ ಬನಾರಸಿ ಬಾರ್ಡರ್‌ ಬಗೆಯ ಸೊಂಟದ ಪಟ್ಟಿ ಅಂದರೆ ಟೈಯಿಂಗ್‌ ಹ್ಯಾಂಡ್‌ ವರ್ಕ್‌ ಎಂಬ್ರಾಯ್ಡರಿ ಮಾಡಿರುವ ವೇಸ್ಟ್‌ ಬೆಲ್ಟ್‌ ಅಥವಾ ಕಮರ್‌ಬಾಂದ್‌ ಗೌನನ್ನು ಇನ್ನಷ್ಟು ಆಕರ್ಷಕವಾಗಿಸಿದೆ. ಇದರೊಂದಿಗೆ ಮ್ಯಾಚ್‌ ಮಾಡಿರುವ ರೆಡ್‌ ಪ್ಯೂರ್‌ ಅರ್ಗಾನ್ಜಾ ದುಪಟ್ಟಾ ಕೂಡ ಸಖತ್‌ ಲುಕ್‌ ನೀಡಿದೆ ಎಂದು ವಿವರಿಸುತ್ತಾರೆ ಸೆಲೆಬ್ರೆಟಿ ಡಿಸೈನರ್‌ ಸಿಂಧೂ ರೆಡ್ಡಿ. ಅವರ ಪ್ರಕಾರ, ಅನಾರ್ಕಲಿ ಡಿಸೈನ್‌ನಲ್ಲೂ ಟ್ರೆಡಿಷನಲ್‌ ಲುಕ್‌ ನೀಡಬಹುದು ಎನ್ನುವುದಕ್ಕೆ ಈ ಡಿಸೈನರ್‌ವೇರ್‌ ಸಾಕ್ಷಿ ಎನ್ನುತ್ತಾರೆ.

ಮಿಲನಾ ನಾಗರಾಜ್‌ ಆಕರ್ಷಕ ಲುಕ್‌

ನಟಿ ಮಿಲನಾ ನಾಗರಾಜ್‌ ಖಾಸಗಿ ಕಾರ್ಯಕ್ರಮಕ್ಕೆಂದು ಧರಿಸಿದ ಈ ಅನಾರ್ಕಲಿ ಗೌನ್‌ನ ಸ್ಟೈಲಿಂಗ್‌ ಸ್ಟೈಲಿಸ್ಟ್‌ಗಳಾದ ತೇಜು ಹಾಗೂ ಖುಷಿ ಮಾಡಿದ್ದಾರೆ. ಇನ್ನು, ವರಹಾ ಸಿಲ್ವರ್‌ ಜ್ಯುವೆಲರಿ ಧರಿಸಿರುವ ಮಿಲನಾ ಲೈಟ್‌ ಮೇಕಪ್‌ನಲ್ಲಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಮಿಲನಾಗೆ ಈ ಡಿಸೈನರ್‌ವೇರ್‌ ಸಖತ್‌ ಇಷ್ಟವಾಗಿದೆಯಂತೆ. ಅದರಲ್ಲೂ ಟ್ರೆಡಿಷನಲ್‌ ಲುಕ್‌ ನೀಡುವ ಈ ಔಟ್‌ಫಿಟ್‌ ಲೈಟ್‌ವೈಟ್‌ ಆಗಿರುವುದು ಮತ್ತಷ್ಟು ಕಂಫರ್ಟಬಲ್‌ ಆಗಿಸಿದೆಯಂತೆ. ಯಾವುದೇ ಉಡುಪನ್ನು ನಾನು ಇಷ್ಟಪಟ್ಟು ಧರಿಸುತ್ತೇನೆ ಎನ್ನುತ್ತಾರೆ ಅವರು.

ಮಿಲನಾ ಎಲಿಗೆಂಟ್‌ ಫ್ಯಾಷನ್‌ ಮಂತ್ರ

ಈ ಹಿಂದೆ ವಿಸ್ತಾರ ನ್ಯೂಸ್‌ನ ಫ್ಯಾಷನ್‌ ಕುರಿತ ಸಂದರ್ಶನದಲ್ಲಿ ಮಿಲನಾ ಅವರೇ ಹೇಳಿದಂತೆ, ಯಾವುದೇ ಔಟ್‌ಫಿಟ್‌ ಹಾಗೂ ಡಿಸೈನರ್‌ವೇರ್‌ ಕಂಫರ್ಟಬಲ್‌ ಫೀಲ್‌ ನೀಡಿದಾಗ ತಂತಾನೇ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ. ನಮ್ಮ ಪರ್ಸನಾಲಿಟಿಗೆ ತಕ್ಕಂತೆ ಧರಿಸಿದಾಗ ಇನ್ನಷ್ಟು ಸುಂದರವಾಗಿ ಕಾಣುತ್ತದೆ ಎಂಬುದು ಸತ್ಯಕ್ಕೆ ಹತ್ತಿರ ಎಂಬುದು ತಿಳಿದು ಬರುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading

ಟಾಲಿವುಡ್

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Kajal Aggarwal: ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

VISTARANEWS.COM


on

Kajal Aggarwal Kannappa Movie Entry
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ʻಕಣ್ಣಪ್ಪʼ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೊಬ್ಬರು ಸ್ಟಾರ್‌ ನಟಿ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್! ವಿಷ್ಣು ಮಂಚು ಮತ್ತು ಕಾಜಲ್‌ ಅಗರ್‌ವಾಲ್‌ (Kajal Aggarwal) ಈ ಹಿಂದೆ ತೆಲುಗಿನ ʻಮೊಸಗಲ್ಲುʼ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ʻಕಣ್ಣಪ್ಪʼ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಇದನ್ನೂ ಓದಿ: Kajal Aggarwal: ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಸೊಂಟ ಮುಟ್ಟಿದ ವ್ಯಕ್ತಿ: ವಿಡಿಯೊ ವೈರಲ್‌!


ಕಣ್ಣಪ್ಪ’ ಸಿನಿಮಾ ವ್ಯಕ್ತಿಯ ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುವ ಸಿನಿಮಾ ಆಗಿದೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರವು ಶಿವನ ಭಕ್ತನಾಗಿದ್ದ ಭಕ್ತ ಕಣ್ಣಪ್ಪನ ಜೀವನವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

Continue Reading

South Cinema

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Pavithra Jayaram: ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

VISTARANEWS.COM


on

Pavithra Jayaram Last Instagram post to chandrakanth
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ, ಚಂದ್ರಕಾಂತ್‌ ಅವರು ಪವಿತ್ರ ಜಯರಾಮ್ ಜತೆ ರೀಲ್ಸ್‌ ಮಾಡಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ.

ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ನಟ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಇದೀ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Continue Reading
Advertisement
Vijay Sethupathi Starrer Tamil Movie Teaser Released
ಕಾಲಿವುಡ್7 mins ago

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Arvind Kejriwal
ದೇಶ18 mins ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ28 mins ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ41 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ1 hour ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20241 hour ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ1 hour ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ1 hour ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ2 hours ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ2 hours ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌