ಟಾಲಿವುಡ್
Jr NTR: ಆಸ್ಕರ್ನಿಂದ ಹಿಂತಿರುಗಿದ ಬಳಿಕ ಜ್ಯೂ. ಎನ್ಟಿಆರ್ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ
ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವಾಗ (Jr NTR) ಅಭಿಮಾನಿಗಳು ಮುತ್ತಿಗೆ ಹಾಕಿ ಸಂತಸ ಹೊರಹಾಕಿದ್ದಾರೆ. ಇದೀಗ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು: ತೆಲುಗು ಸೂಪರ್ಸ್ಟಾರ್ ಜ್ಯೂನಿಯರ್ ಎನ್ಟಿಆರ್ (Jr NTR) ಆಸ್ಕರ್ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಾರ್ಚ್ 14ರ ತಡರಾತ್ರಿ ಹೈದರಾಬಾದ್ಗೆ ಮರಳಿದ್ದಾರೆ. ಲಾಸ್ ಏಂಜಲೀಸ್ನಲ್ಲಿ ನಡೆದ 95 ನೇ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ RRR ಹಾಡು ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವಾಗ ಅವರ ಅಭಿಮಾನಿಗಳು ಮುತ್ತಿಗೆ ಹಾಕಿ ಸಂತಸ ಹೊರಹಾಕಿದ್ದಾರೆ. ಇದೀಗ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಜ್ಯೂನಿಯರ್ ಎನ್ಟಿಆರ್ ಕಾರಿನ ಹತ್ತಿರ ತೆರಳುತ್ತಿದ್ದಂತೆ ತಮ್ಮ ನೆಚ್ಚಿನ ನಟನ ದರ್ಶನ ಪಡೆಯಲು ಬಂದಿದ್ದ ಅವರ ಅಭಿಮಾನಿಗಳು ಸುತ್ತುವರಿದಿದ್ದರು. ನಟ ತನ್ನ ಕಾರಿನ ಮೇಲೆ ನಿಂತು, ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಮಾಧ್ಯಮದವರೊಂದಿಗೆ ನಟ ಮಾತನಾಡಿʻʻ ಆರ್ಆರ್ಆರ್ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಎಂಎಂ ಕೀರವಾಣಿ ಮತ್ತು ಚಂದ್ರಬೋಸ್ ಆಸ್ಕರ್ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನೋಡುವುದು ಅತ್ಯುತ್ತಮ ಕ್ಷಣವಾಗಿದೆ. ಆರ್ಆರ್ಆರ್ ಸಿನಿಮಾವನ್ನು ಪ್ರೋತ್ಸಾಹಿಸಿದ್ದಕ್ಕಾಗಿ, ನಾನು ಪ್ರತಿಯೊಬ್ಬ ಭಾರತೀಯನಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಾವು ಗೆದ್ದಿರುವ ಈ ಪ್ರಶಸ್ತಿ (ಆಸ್ಕರ್) ಪ್ರೇಕ್ಷಕರು ಮತ್ತು ಚಿತ್ರರಂಗದ ಪ್ರೀತಿಯಿಂದ ಮಾತ್ರ ಸಾಧ್ಯವಾಗಿದೆʼʼಎಂದರು.
ಇದನ್ನೂ ಓದಿ: Oscars 2023 : ನಾಟು ನಾಟು ಹಾಡಿಗೆ ಆಸ್ಕರ್ ಸಿಕ್ಕಿದ್ದಲ್ಲ, ಖರೀದಿಸಿದ್ದು; ನಟಿ ಜಾಕ್ವೆಲಿನ್ ಗೆಳೆಯನ ಕುಹಕ
ಜ್ಯೂನಿಯರ್ ಎನ್ಟಿಆರ್ ಪ್ರಶಸ್ತಿಯ ಬಗ್ಗೆ ಮಾತನಾಡಿ ʻʻಇದು ಕೇವಲ ಆರ್ಆರ್ಆರ್ಗೆ ಮಾತ್ರವಲ್ಲ, ಒಂದು ದೇಶವಾಗಿ ಭಾರತಕ್ಕೆ ಸಂದ ಗೆಲುವು. ಇದು ಕೇವಲ ಆರಂಭ ಎಂದು ನಾನು ನಂಬುತ್ತೇನೆ. ಭಾರತೀಯ ಚಿತ್ರರಂಗ ಎಷ್ಟು ದೂರ ಹೋಗಬಹುದು ಎಂಬುದನ್ನು ನಮಗೆ ತೋರಿಸುತ್ತಿದೆ. ಕೀರವಾಣಿ ಮತ್ತು ಚಂದ್ರಬೋಸ್ಗೆ ಅಭಿನಂದನೆಗಳು. ಖಂಡಿತವಾಗಿಯೂ ರಾಜಮೌಳಿ ಎಂಬ ಮಾಸ್ಟರ್ ಸ್ಟೋರಿ ಟೆಲ್ಲರ್ ಇಲ್ಲದೆ ಇದ್ಯಾವುದೂ ಸಾಧ್ಯವಾಗುತ್ತಿರಲಿಲ್ಲ. ಭಾರತಕ್ಕೆ ಮತ್ತೊಂದು ಆಸ್ಕರ್ ಪ್ರಶಸ್ತಿಯನ್ನು ತಂದುಕೊಟ್ಟಿರುವ ‘ದಿ ಎಲಿಫೆಂಟ್ ವಿಸ್ಪರರ್ಸ್’ ತಂಡವನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದರು.
South Cinema
Ponniyin Selvan: ‘ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಚೆನ್ನೈನಲ್ಲಿ (Ponniyin Selvan) ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.
ಬೆಂಗಳೂರು: ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯನ್ ಸೆಲ್ವನ್-2 (Ponniyin Selvan) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು. ಟ್ರೈಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯನ್ ಸೆಲ್ವನ್ ಕಾದಂಬರಿ ಆಧಾರಿಸಿ ನಿರ್ದೇಶಕ ಮಣಿರತ್ನಂ ಎರಡು ಭಾಗದಲ್ಲಿ ಚಿತ್ರ ತಯಾರಿಸಿದ್ದರು. ಕಳೆದ ವರ್ಷ ರಿಲೀಸ್ ಆಗಿದ್ದ ಮೊದಲ ಭಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಪೊನ್ನಿಯನ್ ಸೆಲ್ವನ್ 500 ಕೋಟಿ ರೂ. ಬಾಚಿ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಲೈಕಾ ಪ್ರೊಡಕ್ಷನ್ ಜತೆಗೂಡಿ ಮಣಿರತ್ನಂ ನಿರ್ಮಿಸಿ ನಿರ್ದೇಶಿಸಿರುವ ಪೊನ್ನಿಯಯನ್ ಸೆಲ್ವನ್-2 ಸೀಕ್ವೆಲ್ ಟ್ರೈಲರ್ ರಿಲೀಸ್ ಆಗಿದ್ದು, ನಿರೀಕ್ಷೆ ನೂರ್ಮಡಿಗೊಳಿಸಿದೆ.
ಚೋಳ ಸಾಮ್ರಾಜ್ಯದ ಗದ್ದುಗೆಗಾಗಿ ನಡೆಯುವ ಹೋರಾಟ, ಪಾಂಡ್ಯ ರಾಜರ ಕುತಂತ್ರ, ಚೋಳ ಸಾಮ್ರಾಜ್ಯ ನಾಶಪಡಿಸಲು ನಂದಿನಿ ಮಾಡುವ ಶಪಥ, ಕರಿಕಾಲನ್ ವೀರಾವೇಶದ ಹೋರಾಟ, ನಂದಿನಿ ಕರಿಕಾಲನ್ ಮುಖಾಮುಖಿಯಾಗುವ ಸನ್ನಿವೇಶ..ಅದ್ಧೂರಿ ಮೇಕಿಂಗ್, ಬೃಹತ್ ಸೆಟ್ಗಳು ಟ್ರೈಲರ್ನಲ್ಲಿ ಝಗಮಗಿಸಿವೆ. ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಪೊನ್ನಿಯನ್ ಸೆಲ್ವನ್-2 ಮೊದಲ ನೋಟ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಡೆದುಕೊಂಡಿದೆ. ಆಸ್ಕರ್ ವಿಜೇತ ಎ ಆರ್ ರೆಹಮಾನ್ ಸಂಗೀತ ಸಿನಿಮಾಕ್ಕಿದೆ.
ಇದನ್ನೂ ಓದಿ: Kamal Haasan: ನಿರ್ದೇಶಕ ಮಣಿರತ್ನಂ ಬಗ್ಗೆ ಅನೇಕರಿಗೆ ಅಸೂಯೆ! ನಟ ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?
`ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಟ್ರೈಲರ್ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಮಣಿರತ್ನಂ ತಂಡ ಕಟ್ಟಿಕೊಂಡು ಹೊರರಾಜ್ಯಗಳಲ್ಲಿಯೂ ಪ್ರಮೋಷನ್ ಶುರು ಮಾಡಲು ಸಜ್ಜಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಪೊನ್ನಿಯನ್ ಸೆಲ್ವನ್-2 ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರುತ್ತಿದೆ. ಐಶ್ವರ್ಯಾ ರೈ, ತ್ರಿಷಾ, ಕಾರ್ತಿ, ವಿಕ್ರಂ, ಪ್ರಕಾಶ್ ರೈ, ಶರತ್ ಕುಮಾರ್, ಜಯಂರವಿ, ಐಶ್ವರ್ಯ ಲಕ್ಷ್ಮೀ, ಶೋಭಿತಾ ಧುಲಿಪಾಲ, ಪ್ರಭು ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.
South Cinema
Kajal Aggarwal: ಹೊಸ ಫೋಟೊಶೂಟ್ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್
ನಟಿ ಕಾಜಲ್ ಅಗರ್ವಾಲ್ (Kajal Aggarwal) ಹೊಸ ಫೋಟೊಶೂಟ್ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ನಟಿ ಕಾಜಲ್ ಅಗರ್ವಾಲ್ ಹೊಸ ಫೋಟೊಶೂಟ್ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ಕಾಜಲ್ನ ಬ್ರೇಲೆಟ್ ಮತ್ತು ಪ್ಯಾಂಟ್ಗಳು ಸೊಗಸಾದ ಕಪ್ಪು ಮತ್ತು ಬಿಳಿ ಪ್ರಿಂಟೆಡ್ ಒಳಗೊಂಡಿದೆ.
ಈ ಸರಳವಾದ ಉಡುಗೆಗೆ ಸೊಗಸಾದ ಕೇಶವಿನ್ಯಾಸ, ಮೇಕ್ಅಪ್ ಸಿಂಪಲ್ ಆಗಿ ಕಾಣುತ್ತಿದ್ದು, ಅವರ ಅಭಿಮಾನಿಗಳು ಕಮೆಂಟ್ ಮೂಲಕ ಸಂತಸ ಹೊರಹಾಕಿದ್ದಾರೆ.
ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ನಟಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.
ಕಾಜಲ್ ಅಗರ್ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ.
South Cinema
Mrunal Thakur: ಆರಂಭದಲ್ಲಿ ನಟನೆಗೆ ನನ್ನ ಕುಟುಂಬ ಬೆಂಬಲಿಸಲಿಲ್ಲ: ಮೃಣಾಲ್ ಠಾಕೂರ್
ಮೃಣಾಲ್ ಠಾಕೂರ್ (Mrunal Thakur) ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿದ್ದಾರೆ. ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಸೀತಾ ರಾಮಂ ಸಿನಿಮಾ ಖ್ಯಾತಿಯ ಮೃಣಾಲ್ ಠಾಕೂರ್ (Mrunal Thakur) ಮಾರ್ಚ್ 30ರಂದು ನವದೆಹಲಿಯಲ್ಲಿ ರೈಸಿಂಗ್ ಇಂಡಿಯಾ ಶೋದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ತಾನು ನಟಿಯಾಗುವ ಆರಂಭದಲ್ಲಿ ಕುಟುಂಬವು ಬೆಂಬಲ ನೀಡಲಿಲ್ಲ ಎಂದು ನಟಿ ಬಹಿರಂಗಪಡಿಸಿದರು.
ಮೃಣಾಲ್ ಠಾಕೂರ್ ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿ ʻʻನಾನು ನನ್ನ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ಆರಂಭದಲ್ಲಿ ನನಗೆ ಅವರ ಬೆಂಬಲವಿರಲಿಲ್ಲ, ಏಕೆಂದರೆ ಅವರು ಮುಂದೆ ಏನಾಗಬಹುದು ಎಂದು ಹೆದರುತ್ತಿದ್ದರು, ಅವರಿಗೆ ಮನರಂಜನಾ ಉದ್ಯಮದ ಬಗ್ಗೆ ಸ್ವಲ್ಪ ಭಯ ಇತ್ತು. ನನಗೆ ಒಳ್ಳೆಯ ಪಾತ್ರಗಳು ಸಿಗುತ್ತವೆಯೋ ಇಲ್ಲವೋ ಎಂಬುದರ ಬಗ್ಗೆ ಕೂಡ. ಮೊದಲಿಗೆ, ನಾನು ದೂರದರ್ಶನದಲ್ಲಿ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ತದನಂತರ ನಾನು ಮರಾಠಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ.
ಮಾತು ಮುಂದುವರಿಸಿ “ನಾನು ಮಹಾರಾಷ್ಟ್ರದವಳಾಗಿರುವುದರಿಂದ ನನ್ನ ಕುಟುಂಬವು, ಸಿಬ್ಬಂದಿ ಮತ್ತು ತಂಡವನ್ನು ಭೇಟಿಯಾದಾಗ, ಸಿನಿಮಾ ಬಗ್ಗೆ ತಿಳಿದಾಗ, ತುಂಬಾ ಹೆಮ್ಮೆಪಟ್ಟರು. ತದನಂತರ ಲವ್ ಸೋನಿಯಾ ಸಿನಿಮಾಗೆ ಎಂಟ್ರಿ ಕೊಟ್ಟೆ. ಚಿತ್ರ ಬಿಡುಗಡೆಗೂ ಮುನ್ನ ‘ಮೃಣಾಲ್, ಮುಂದಿನ ಸ್ಮಿತಾ ಪಾಟೀಲ್ ನೀವೇ ಎಂಬ ಸುದ್ದಿ ಹರಿದಾಡಿತು. ನನಗೆ ಸ್ಮಿತಾ ಪಾಟೀಲ್ ದೇವತೆ. ನಾನು ಅವರನ್ನು ಆರಾಧಿಸುತ್ತೇನೆ, ನಾನು ಅವರ ಎಲ್ಲಾ ಸಿನಿಮಾಗಳ ಅಧ್ಯಯನ ಮಾಡಿದ್ದೇನೆ. ಹಾಗಾಗಿ ಮರಾಠಿ ಹುಡುಗಿಗೆ ಇದು ತುಂಬಾ ದೊಡ್ಡ ಮೆಚ್ಚುಗೆಯಾಗಿದೆ. ಈಗ ನನ್ನ ಮನೆಯವರು ಹೇಳುತ್ತಾರೆ, ‘ಮೃಣಾಲ್, ನಾವು ನಿನ್ನ ಬಗ್ಗೆ ಹೆಮ್ಮೆಪಡುತ್ತೇವೆ. ನೀನು ಯಾವುದೇ ಸಿನಿಮಾದ ಭಾಗವಾಗಲು ಆರಿಸಿಕೊಂಡರೂ, ಪ್ರೇಕ್ಷಕರು ಅದರಿಂದ ಏನನ್ನಾದರೂ ಕಲಿಯುತ್ತಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದಿದ್ದರು. ಒಬ್ಬ ನಟಿಯಾಗಿ ಈ ಸಮಾಜವನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಇದು ನನ್ನ ಸಣ್ಣ ಪ್ರಯತ್ನʼʼಎಂದರು.
ಇದನ್ನೂ ಓದಿ: Actress Mrunal Thakur : ಮದುವೆಗೆ ಸಿದ್ಧವೆಂದ ಅಭಿಮಾನಿಗೆ ಕ್ಯೂಟ್ ಆಗಿ ಉತ್ತರಿಸಿದ ಮೃಣಾಲ್
ಕೆಲಸದ ಮುಂಭಾಗದಲ್ಲಿ, ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಆದಿತ್ಯ ರಾಯ್ ಕಪೂರ್, ರೋನಿತ್ ರಾಯ್, ವೇದಿಕಾ ಪಿಂಟೋ, ದೀಪಕ್ ಕಲ್ರಾ ಮತ್ತು ಮೋಹಿತ್ ಆನಂದ್ ರಾಜಿ ಬಹು ತಾರಾಗಣ ಹೊಂದಿದೆ.
South Cinema
Actor Nani: ʻದಸರಾʼ ಸಿನಿಮಾದಲ್ಲಿ ನಾನಿ ನಟನೆಗೆ ಭೇಷ್ ಎಂದ ಪ್ರೇಕ್ಷಕರು: ಟ್ವೀಟ್ನಲ್ಲಿ ಸಂತಸ ಹೊರ ಹಾಕಿದ ಸಿನಿಪ್ರಿಯರು!
ಪರದೆಯ ಮೇಲೆ ʻದಸರಾʼ ವೀಕ್ಷಿಸಿದ ನಂತರ ಉತ್ಸಾಹವನ್ನು ತಡೆಯಲು ಸಾಧ್ಯವಾಗದ (Actor Nani) ಕೆಲವು ಅಭಿಮಾನಿಗಳು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ದಸರಾ ಕುರಿತು ಕೆಲವು ಮಾಹಿತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಅಭಿನಯದ ʻದಸರಾʼ ಪ್ಯಾನ್ ಇಂಡಿಯಾ ಸಿನಿಮಾ ವಿಶ್ವಾದ್ಯಂತ ಮಾರ್ಚ್ 30ರಂದು ತೆರೆ ಕಂಡಿದೆ. ಶ್ರೀಕಾಂತ್ ಒಡೆಲಾ ನಿರ್ದೇಶನದ ಸಿನಿಮಾ ಬಗ್ಗೆ ಅಭಿಮಾನಿಗಳು ಹೊಗಳುತ್ತಿದ್ದಾರೆ. ಪರದೆಯ ಮೇಲೆ ʻದಸರಾʼ ವೀಕ್ಷಿಸಿದ ನಂತರ ಉತ್ಸಾಹವನ್ನು ತಡೆಯಲು ಸಾಧ್ಯವಾಗದ ಕೆಲವು ಅಭಿಮಾನಿಗಳು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ದಸರಾ ಕುರಿತು ಕೆಲವು ಮಾಹಿತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
ʻʻಟ್ವಿಟರ್ನಲ್ಲಿ ಪ್ರಸ್ತುತ ಟ್ರೆಂಡ್ಗಳನ್ನು ನೋಡುವಾಗ ದಸರಾ ಚರ್ಚೆ ಸಕಾರಾತ್ಮಕವಾಗಿದೆ. ಮೊದಲಾರ್ಧ ಸಿನಿಮಾ ಅತ್ಯುತ್ತಮ, ದ್ವಿತೀಯಾರ್ಧ ಸ್ವಲ್ಪ ಲ್ಯಾಗ್ ಅನಿಸಿತುʼʼ ಎಂದು ಪ್ರೇಕ್ಷಕರೊಬ್ಬರು ಬರೆದುಕೊಂಡಿದ್ದಾರೆ.
ʻʻಸಿನಿಮಾಟೋಗ್ರಫಿ ಇಷ್ಟವಾಯಿತು. ಒಳ್ಳೆಯ ಟ್ವಿಸ್ಟ್. ಬಿಜಿಎಂ (ಹಿನ್ನೆಲೆ ಸಂಗೀತ) ಚೆನ್ನಾಗಿದೆ. ನಾನಿ ಅಭಿನಯ ಅದ್ಭುತ. ಯಾವುದೇ ಭಯಂಕರ ದೃಶ್ಯಗಳನ್ನು ಹೊಂದಿಲ್ಲ. ಖಂಡಿತವಾಗಿಯೂ ದಸರಾ ವೀಕ್ಷಿಸಬಹುದಾಗಿದೆʼʼಎಂದು ಒಬ್ಬರು ಬರೆದುಕೊಂಡಿದ್ದಾರೆ.
ʻʻದಸರಾ ಸುಂದರವಾಗಿ ಹಳ್ಳಿಗಾಡಿನ ಚಿತ್ರವನ್ನು ನಿರೂಪಿಸಿದೆ. ನಾನಿ ಅವರ ವೃತ್ತಿಜೀವನದಲ್ಲಿಯೇ ಅತ್ಯುತ್ತಮ ಪ್ರದರ್ಶನ. ಕ್ಲೈಮ್ಯಾಕ್ಸ್ ಅದ್ಭುತʼʼ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Actor Nani: ನಾನಿ ಅಭಿನಯದ ʻದಸರಾʼ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ 36 ಕಟ್ ಸೂಚನೆ
ಶ್ರೀಕಾಂತ್ ಒಡೆಲಾ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ ನಾನಿ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ.
ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣದಲ್ಲಿ ‘ದಸರಾ’ ಸಿನಿಮಾ ಮೂಡಿ ಬಂದಿದೆ.
-
ಕರ್ನಾಟಕ15 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್16 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್13 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!