Junior Mehmood: 'ಮೇರಾ ನಾಮ್ ಜೋಕರ್' ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ - Vistara News

ಬಾಲಿವುಡ್

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

Junior Mehmood: ಚಲನಚಿತ್ರಗಳ ಹೊರತಾಗಿ, ಅವರು ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಸ್ಟೇಜ್ ಶೋಗಳ ಭಾಗವಾಗಿದ್ದರು. ನಟ ಐದು ದಶಕಗಳ ಕಾಲ ತನ್ನ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

VISTARANEWS.COM


on

Junior Mehmood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು; ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದ, ಜೂನಿಯರ್ ಮೆಹಮೂದ್ (Junior Mehmood) ಎಂದೇ ಜನಪ್ರಿಯರಾಗಿದ್ದ ಹಿರಿಯ ನಟ ಮತ್ತು ಚಲನಚಿತ್ರ ನಿರ್ದೇಶಕ ನಯೀಮ್ ಸಯ್ಯದ್ ನಿನ್ನೆ (ಡಿ.7) ರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ನಟ ಐದು ದಶಕಗಳ ಕಾಲ ತನ್ನ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಎರಡು ವಾರಗಳ ಹಿಂದೆ, 4ನೇ ಹಂತದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು ಎಂದು ವರದಿಯಾಗಿದೆ.

ಬ್ರಹ್ಮಚಾರಿ (1968), ಮೇರಾ ನಾಮ್ ಜೋಕರ್, ಪರ್ವಾರೀಶ್ ಮತ್ತು ದೋ ಔರ್ ದೋ ಪಾಂಚ್ ಸೇರಿದಂತೆ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದರು. ಸಂಜೀವ್ ಕುಮಾರ್, ಹಿರಿಯ ನಟ ಬಾಲರಾಜ್ ಸಾಹ್ನಿ ಮತ್ತು ಇಂದ್ರಾಣಿ ಮುಖರ್ಜಿ ನಟಿಸಿದ ‘ನೌನಿಹಾಲ್’ ಚಿತ್ರದ ಮೂಲಕ ಅವರು ಬಾಲ ನಟರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1967ರಲ್ಲಿ ಬಿಡುಗಡೆಯಾದ ‘ನೌನಿಹಾಲ್’ನಿಂದ ಇಲ್ಲಿಯವರೆಗೆ, ನಟ ಜೂನಿಯರ್ ಮೆಹಮೂದ್ ಎಂದೇ ಚಿರಪರಿಚಿತರು.

250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುವುದರ ಜತೆಗೆ, ನಟ ಹಲವಾರು ಮರಾಠಿ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಗುರುತು ಹಿಡಿಯದ ಸ್ಥಿತಿಯಲ್ಲಿರುವ ಜೂನಿಯರ್ ಮೆಹಮೂದ್ ಅವರನ್ನು ಹಾಸ್ಯನಟ ಜಾನಿ ಲಿವರ್ ಭೇಟಿ ಮಾಡಿದ್ದರು.

ಇದನ್ನೂ ಓದಿ: Death News: ರಾಮದುರ್ಗ ಗಂಗಮ್ಮ ನಿಧನ

ಹಿರಿಯ ನಟ ಜೀತೇಂದ್ರ ಮತ್ತು ಸಚಿನ್ ಪಿಲ್ಗಾಂವ್ಕರ್ ಅವರೊಂದಿಗೆ ಹಲವಾರು ಚಲನಚಿತ್ರಗಳಲ್ಲಿ ಜೂನಿಯರ್ ಮೆಹಮೂದ್ ಕೆಲಸ ಮಾಡಿದ್ದಾರೆ. ಸಚಿನ್ ಮತ್ತು ಜೂನಿಯರ್ ಮೆಹಮೂದ್ ‘ಬಚ್ಪನ್’, ‘ಗೀತ್ ಗಾತಾ ಚಲ್’ ಮತ್ತು ‘ಬ್ರಹ್ಮಚಾರಿ’ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಚಲನಚಿತ್ರಗಳ ಹೊರತಾಗಿ, ಅವರು ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಸ್ಟೇಜ್ ಶೋಗಳ ಭಾಗವಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Shah Rukh Khan: ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

VISTARANEWS.COM


on

Shah Rukh Khan Took ₹1 As Signing Amount For 'Nayak'
Koo

ಬೆಂಗಳೂರು: ಶಂಕರ್ ನಿರ್ದೇಶನದ 2001ರಲ್ಲಿ ಬಿಡುಗಡೆಯಾದ ʻನಾಯಕ್‌ʼ ಸಿನಿಮಾದಲ್ಲಿ (Shah Rukh Khan) ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗೆ (Shah Rukh Khan) ಮೊದಲು ಸಹಿ ಹಾಕಿದ್ದು ಶಾರುಖ್‌. ಜತೆಗೆ ಶಾರುಖ್ ಖಾನ್ ಅವರು ʻನಾಯಕ್ʼ ಚಿತ್ರಕ್ಕೆ ಸಹಿ ಹಾಕುವಾಗ ಮುಂಗಡ ಪಡೆದಿದ್ದು ಕೇವಲ ಒಂದು ರೂ. ಅಂತೆ. ಈ ಘಟನೆ ಬಗ್ಗೆ ಸಂದರ್ಶನವೊಂದರಲ್ಲಿ ಶಾರುಖ್‌ ಹೇಳಿಕೊಂಡಿದ್ದಾರೆ. ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

ಸಂದರ್ಶನದಲ್ಲಿ, ಶಾರುಖ್ ಖಾನ್ ಸಿನಿಮಾ ಬಗ್ಗೆ ಮಾತನಾಡಿ ʻʻಈ ಸಿನಿಮಾಗೆ ನಾನು ಒಪ್ಪಿಗೆ ನೀಡಿ ಸಹಿ ಹಾಕುವಾಗ ಮುಂಗಡ ಸಂಭಾವನೆ ಪಡೆದಿದ್ದು ಕೇವಲ ಒಂದು ರೂ. ಜತೆಗೆ ಡೇಟ್‌ ನೀಡಲು ಸದಾ ಸಿದ್ದ ಎಂದು ಭರವಸೆ ಕೊಟ್ಟೆ. ಆದರೆ ನನಗೆ ನಾಯಕ್‌ ಮೂಲ ಆವೃತ್ತಿ ಇಷ್ಟ ಆಗಿತ್ತು. ಹಿಂದಿ ರಿಮೇಕ್‌ ಮಾಡುವುದು ಸರಿಯೆನಿಸಲಿಲ್ಲʼʼ ಎಂದರು. ಶಾರುಖ್‌ ಮಾತು ಮುಂದುವರಿಸಿ ʻʻನಾನು ಸಹಿ ಮಾಡಿದ್ದು, ದಿನಾಂಕ ನೀಡಿರುವ ಸಾಕ್ಷಿ ಇನ್ನೂ ನನ್ನ ಬಳಿ ಇದೆ. ಶಂಕರ್‌ ಜತೆ ಇನ್ನೂ ಕೂಡ ನನಗೆ ಕೆಲಸ ಮಾಡುವ ಬಯಕೆ ಇದೆ. ಅವರು ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಂತೆ. ಅವರ ಜತೆ ಸಿನಿಮಾ ಮಾಡುವುದು ಅದೃಷ್ಟʼʼ ಎಂದರು.

ಇದನ್ನೂ ಓದಿ: Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

ಸಿನಿಮಾ ವಿಚಾರಕ್ಕೆ ಬಂದರೆ ಶಾರುಖ್ ಅವರ ಮಗಳು ಸುಹಾನಾ ಖಾನ್ ಅವರ ಜತೆ ʻದಿ ಕಿಂಗ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸುಜೋಯ್ ಘೋಷ್ ನಿರ್ದೇಶಿಸಲಿದ್ದಾರೆ. ವರದಿಗಳ ಪ್ರಕಾರ ಚಿತ್ರದ ಬಜೆಟ್ 200 ಕೋಟಿ ರೂ. ಮತ್ತೊಂದೆಡೆ, ಅನಿಲ್ ಕಪೂರ್ ಬಿಗ್ ಬಾಸ್ OTT ಸೀಸನ್ 3 ಅನ್ನು ಹೋಸ್ಟ್‌ ಮಾಡುತ್ತಿದ್ದಾರೆ.

2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ.ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading

ಬಾಲಿವುಡ್

Uorfi Javed: ನೈಟ್‌ ಪಾರ್ಟಿಯ ಕಿಲಾಡಿ ಓರಿ ಮತ್ತು ಉರ್ಫಿ ಮದುವೆ ಆಗ್ತಾರಾ?

Uorfi Javed: ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಯನ್ನು ಕನಿಷ್ಠ 20 ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

VISTARANEWS.COM


on

Uorfi Javed and Orry were spotted outside a restaurant in Mumbai
Koo

ಬೆಂಗಳೂರು: ಬಿಗ್ ಬಾಸ್ (Big Boss) ಮನೆ ಸೇರಿದ್ದ ಓರ್ಹಾನ್ ಅವತ್ರಮಣಿ ಅಲಿಯಾಸ್ ಓರಿ, ಸೆಲಿಬ್ರೆಟಿ ಪಾರ್ಟಿಗಳಿಗೆ ಹೋಗಿ (Uorfi Javed) ಅಲ್ಲಿನ ನಟ, ನಟಿಯರ ಎದೆಯ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಳ್ಳುವುದರಲ್ಲೇ ಫೇಮಸ್‌. ಇದೀಗ ಉರ್ಫಿ ಹಾಗೂ ಓರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜತೆಗೆ ಉರ್ಫಿ ಅವರು ಓರಿ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ.  ಇದೀಗ ಓರಿ ಹಾಗೂ ಉರ್ಫಿ ಫೋಟೊಗಳು ವೈರಲ್‌ ಆಗಿವೆ.

ಡಿನ್ನರ್‌ಗೆ ಉರ್ಫಿ ಹಸಿರು ಉಡುಗೆಯಲ್ಲಿ ಕಂಡು ಬಂದರೆ, ಓರಿ ಮರೂನ್ ಟಿ-ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಮತ್ತು ಸ್ನೀಕರ್ಸ್‌ನಲ್ಲಿ ಕಾಣಿಸಿಕೊಂಡರು. ಪಾಪರಾಜಿಗಳಿಗೆ ಉರ್ಫಿ ಮತ್ತು ಓರಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ. ಮಾಧ್ಯಮದವರೂ ಓರಿಗೆ ಉರ್ಫಿಯನ್ನು ಮದುವೆಯಾಗುತ್ತೀರಾ ಎಂದು ಕೇಳಿದ್ದಾರೆ. ಉರ್ಫಿ ಮದುವೆಯಾಗೋಕೆ ಓಕೆ ಅಂದ್ರೆ ನನಗೂ ಓಕೆ ಎಂದು ಓರಿ ಹೇಳಿದ್ದಾರೆ.  ಇದಕ್ಕೂ ಮುನ್ನ ಉರ್ಫಿಗೂ ಈ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಉರ್ಫಿ ತಮಾಷೆಯಾಗಿಯೇ ಉತ್ತರ ನೀಡಿ, ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ನೀವೆಲ್ಲ ನನ್ನ ಮದುವೆ ಬಗ್ಗೆ ಆತುರದಲ್ಲಿದ್ದೀರಿ ಹೇಳಿದ್ದಾರೆ.

ಈ ಹಿಂದೆ, ಪೋಸ್ಟ್ ಆಗಿದ್ದ ಮತ್ತೊಂದು ವಿಡಿಯೊದಲ್ಲಿ, ಉರ್ಫಿ ಅವರು ಓರಿಯನ್ನು ಮದುವೆಯಾಗಲು ಬಯಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಓರಿ ಯಾರು?

ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಗೆ ಕನಿಷ್ಠ 20ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

ಓರಿಯನ್ನು ಬಾಲಿವುಡ್ ʻಬೆಸ್ಟ್‌ ​​ಫ್ರೆಂಡ್ ಫಾರೆವರ್ʼ ಎಂದೇ ಹೇಳುತ್ತಾರೆ. ಓರಿ ತನ್ನ ಫ್ಯಾಷನ್​ನಿಂದಾಗಿಯೂ ಸುದ್ದಿಯಾಗುತ್ತಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ ಚೇರ್​ ಪರ್ಸನ್ ಆಫೀಸ್​ನಲ್ಲಿ ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದಾರೆ.ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ (anant ambani pre wedding) ರಿಹಾನ್ನಾ ಅವರೊಂದಿಗೆ ಕಾಣಿಸಿಕೊಂಡು ಓರಿ ಸಖತ್‌ ಸುದ್ದಿಯಾಗಿದ್ದರು. ಈ ರೀತಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಓರಿ ಪಡೆಯುವ ಸಂಭಾವನೆ ಕೇಳಿದರೆ ಶಾಕ್‌ ಆಗೋದು ಗ್ಯಾರಂಟಿ.

ಮಾಧ್ಯಮವೊಂದರ ಸಂದರ್ಶನದಲ್ಲಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಪಡೆಯುವ ಸಂಭಾವನೆ ಕುರಿತು ಮಾತನಾಡಿದ್ದರು. ʻʻಕಾರ್ಯಕ್ರಮಗಳಿಗೆ ಹಾಜರಾಗಲು ಮುಖ್ಯ ಕಾರಣ ಎಲ್ಲಿರಿಗೂ ಸಂತೋಷ ನೀಡಬೇಕು ಎಂದು. ಸೆಲೆಬ್ರಿಟಿಗಳು ನನ್ನನ್ನು ಮದುವೆಗೆ ಕರೆಯುತ್ತಾರೆ. 15ರಿಂದ 30 ಲಕ್ಷದವರೆಗೆ ಸಂಭಾವನೆ ನೀಡಿ ಸಂತೋಷಪಡುತ್ತಾರೆ. ನಾನು ಅತಿಥಿಯಾಗಿ ಅಲ್ಲಿ ಭಾಗಿಯಾಗಲ್ಲ. ಒಳ್ಳೆಯ ಸ್ನೇಹಿತನಾಗಿ ಹೋಗುತ್ತೇನೆʼʼ ಎಂದಿದ್ದರು. ಓರಿ ಶಾರುಖ್ ಖಾನ್ ಮಗಳು ಸುಹಾನಾ ಖಾನ್​ಗೂ ಬೆಸ್ಟ್ ಫ್ರೆಂಡ್. ಸುಹಾನಾ ಖಾನ್ ಜತೆ ಓರಿ ಹಲವಾರು ಸಲ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಬಾಲಿವುಡ್

Raveena Tandon: ರವೀನಾ ಟಂಡನ್ ವಿಡಿಯೊ ವೈರಲ್​ ಮಾಡಿದ ವ್ಯಕ್ತಿ ಮೇಲೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

Raveena Tandon: ರವೀನಾ ಟಂಡನ್ ಸುಳ್ಳು ಆರೋಪ ಮಾಡಿದ ವ್ಯಕ್ತಿಯ ಮೇಲೆ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದಾರೆ. ಕುಡಿದು ಬಂದು ಹಲ್ಲೆ ನಡೆಸಿದರು ಎಂಬ ಸುಳ್ಳು ಆರೋಪಕ್ಕಾಗಿ ರವೀನಾ ಟಂಡನ್ ಅವರು ಮೊಹ್ಸಿನ್ ಶೇಖ್ ಎಂಬ ವ್ಯಕ್ತಿಗೆ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

VISTARANEWS.COM


on

Raveena Tandon sues man for Rs 100 crore for defamatory
Koo

ಬೆಂಗಳೂರು: ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿತ್ತು. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿರುವುದಾಗಿ (Raveena Tandon) ವರದಿಯಾಗಿತ್ತು. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಬಳಿಕ ಇದು ಸುಳ್ಳು ಎಂದು ತಿಳಿದು ಬಂದಿತ್ತು. ಇದೀಗ ರವೀನಾ ಟಂಡನ್ ಸುಳ್ಳು ಆರೋಪ ಮಾಡಿದ ವ್ಯಕ್ತಿಯ ಮೇಲೆ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದಾರೆ. ಕುಡಿದು ಬಂದು ಹಲ್ಲೆ ನಡೆಸಿದರು ಎಂಬ ಸುಳ್ಳು ಆರೋಪಕ್ಕಾಗಿ ರವೀನಾ ಟಂಡನ್ ಅವರು ಮೊಹ್ಸಿನ್ ಶೇಖ್ ಎಂಬ ವ್ಯಕ್ತಿಗೆ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ರವೀನಾ ಟಂಡನ್​ ಮೇಲೆ ಕೇಳಿಬಂದ ಈ ಆರೋಪಗಳೆಲ್ಲ ಸುಳ್ಳು ಎಂದು ನಂತರದಲ್ಲಿ ಪೊಲೀಸರು ಹೇಳಿಕೆ ನೀಡಿದರು. ಆ ಬಳಿಕ ವೈರಲ್​ ವಿಡಿಯೋವನ್ನು ಡಿಲೀಟ್​ ಮಾಡುವಂತೆ ಆ ವ್ಯಕ್ತಿಗೆ ಮನವಿ ಮಾಡಿಕೊಳ್ಳಲಾಯಿತು. ಆದರೆ ವಿಡಿಯೋ ಡಿಲೀಟ್​ ಮಾಡಲು ಆತ ಒಪ್ಪಿಲ್ಲ. ಆದ್ದರಿಂದ ಕಾನೂನಿನ ಮೂಲಕ ಬುದ್ಧಿ ಕಲಿಸಲು ರವೀನಾ ಟಂಡನ್​ ಮುಂದಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಈ ಬಗ್ಗೆ ಮಾತನಾಡಿದ ನಟಿಯ ವಕೀಲ ಸನಾ ರಯೀಸ್ ಖಾನ್, “ನಟಿಯವಿರುದ್ಧ ಯಾವುದೇ ದೂರು ದಾಖಲಾಗಿಲ್ಲ. ಆದರೆ, ಇತ್ತೀಚೆಗೆ, ಒಬ್ಬ ವ್ಯಕ್ತಿ ಎಕ್ಸ್‌ ಖಾತೆ ಮೂಲಕ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ್ದರು. ಉದ್ದೇಶಪೂರ್ವಕವಾಗಿ ರವೀನಾ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ತೋರುತ್ತಿದೆ. ಹೀಗಾಗಿ ನಾವು ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

ಏನಿದು ಪ್ರಕರಣ?

ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿತ್ತು. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿತ್ತು. ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿದ್ದರು. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಇತ್ತು.

ನಂತರ ಮಹಮ್ಮದ್ ಎನ್ನುವ ವ್ಯಕ್ತಿ ಈ ಘಟನೆಯನ್ನು ವಿವರಿಸಿದ್ದರು. ವಿಡಿಯೋದಲ್ಲಿ ಮಾತನಾಡಿದ ವ್ಯಕ್ತಿ ʻʻತನ್ನ ತಾಯಿ, ತಂಗಿ ಹಾಗೂ ಸೊಸೆ ರಿಜ್ವಿ ಕಾಲೆಜು ಬಳಿಯಲ್ಲಿ ಹೋಗುತ್ತಿರುವಾಗ ರವೀನಾ ಅವರ ಡ್ರೈವರ್ ತನ್ನ ತಾಯಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದಿದ್ದರು. ʻʻಚಾಲಕ ನನ್ನ ಸೊಸೆ ಮತ್ತು ನನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ರವೀನಾ ಕೂಡ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು. ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

ಬಳಿಕ ರವೀನಾ ಟಂಡನ್ ಕುಡಿದಿರಲಿಲ್ಲ, ಸುಳ್ಳು ದೂರು ದಾಖಲಾಗಿದೆ ಎಂದು ಸಿಸಿಟಿವಿ ದೃಶ್ಯಗಳ ಮೂಲಕ ತಿಳಿದು ಬಂದಿತ್ತು. ದೂರುದಾರರು ಸುಳ್ಳು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜ್ತಿಲಕ್ ರೋಷನ್ ಈ ಬಗ್ಗೆ ಮಾತನಾಡಿ ʻʻದೂರುದಾರರು ಸುಳ್ಳು ದೂರು ನೀಡಿದ್ದಾರೆ. ನಾವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಆದರೆ ಕಾರು ಡಿಕ್ಕಿ ಹೊಡೆದಿರಲಿಲ್ಲ. ನಟಿ ರವೀನಾ ಟಂಡನ್ ಚಾಲಕನ ಪರ ಇದ್ದಾಗ ಸಾರ್ವಜನಿ ಕರು ನಟಿಯ ಮೇಲೆ ಮಾತಿಗಿಳಿದಿದ್ದಾರೆ. ಬಳಿಕ ರವೀನಾ ಟಂಡನ್ ಮತ್ತು ಕುಟುಂಬ ಇಬ್ಬರೂ ಖಾರ್ ಪೋಲೀಸ್ ಠಾಣೆಗೆ ಹೋಗಿ ಲಿಖಿತ ದೂರುಗಳನ್ನು ನೀಡಿದ್ದರು. ಇನ್ನು ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲʼʼಎಂದಿದ್ದರು.

Continue Reading

ಸಿನಿಮಾ

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಕೇರಳ ವಿಶ್ವವಿದ್ಯಾಲಯ ಈ ಜನಪ್ರಿಯ ಕಾರ್ಯಕ್ರಮಕ್ಕೆ ಇದೀಗ ಅನುಮತಿ ನಿರಾಕರಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಮಧ್ಯೆ ಸಂಘರ್ಷ ಶುರುವಾಗಿದೆ. ಸನ್ನಿ ಲಿಯೋನ್‌ ಕಾರ್ಯಕ್ರಮ ಬೇಕೇಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ!

VISTARANEWS.COM


on

By

Sunny Leone
Koo

ತಿರುವಂತನಂತಪುರ: ಇತ್ತೀಚೆಗೆ ನಡೆದ ಕಾಲ್ತುಳಿತದ ಹಿನ್ನೆಲೆಯಲ್ಲಿ ಕೇರಳ (kerala) ಸರ್ಕಾರವು ಹೊರಗಿನ ಡಿಜೆ ಪಾರ್ಟಿಗಳು (DJ party) ಮತ್ತು ಕಾಲೇಜು ಕ್ಯಾಂಪಸ್‌ಗಳಲ್ಲಿ ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು (music event) ನಿಷೇಧಿಸಿತ್ತು. ಆದರೂ ಬಾಲಿವುಡ್ ನಟಿ (bollywood actress) ಸನ್ನಿ ಲಿಯೋನ್ (Sunny Leone) ಅವರ ನೃತ್ಯ (dance) ಕಾರ್ಯಕ್ರಮಕ್ಕೆ ಕೇರಳ ವಿಶ್ವವಿದ್ಯಾಲಯ (kerala university) ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯ ಅನುಮತಿ ನಿರಾಕರಿಸಿದೆ.

ಕೇರಳ ರಾಜಧಾನಿ ತಿರುವನಂತಪುರಂನ ಕಾರ್ಯವಟ್ಟಂನ ಯೂನಿವರ್ಸಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ನೃತ್ಯ ಪ್ರದರ್ಶನ ಜುಲೈ 5ರಂದು ಆಯೋಜಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಕೇರಳ ವಿಶ್ವವಿದ್ಯಾಲಯ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದೆ.

ಕೇರಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಮೋಹನನ್ ಕುನ್ನುಮ್ಮಾಲ್ ಅವರು ಈ ಕಾರ್ಯಕ್ರಮವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮದ ಪಟ್ಟಿಯಲ್ಲಿ ವಿಶ್ವವಿದ್ಯಾನಿಲಯವು ಮಿಸ್ ಲಿಯೋನ್ ಅವರ ಪ್ರದರ್ಶನವನ್ನು ಸೇರಿಸದಂತೆ ನೋಡಿಕೊಳ್ಳಲು ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದ್ದಾರೆ. ಕ್ಯಾಂಪಸ್ ಒಳಗೆ ಅಥವಾ ಹೊರಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಒಕ್ಕೂಟಕ್ಕೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ನಡೆಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯುವಲ್ಲಿ ಕಾಲೇಜು ಒಕ್ಕೂಟವೂ ವಿಫಲವಾಗಿದೆ ಎನ್ನಲಾಗಿದೆ.

ಯಾಕೆ ನಿಷೇಧ?

ಕೊಚ್ಚಿನ್‌ನ ವಿಶ್ವವಿದ್ಯಾನಿಲಯದಲ್ಲಿ ನೂಕುನುಗ್ಗಲು ಸಂಭವಿಸಿ ಹಲವು ವಿದ್ಯಾರ್ಥಿಗಳ ಸಾವು ಸಂಭವಿಸಿದ ನಂತರ ರಾಜ್ಯ ಸರ್ಕಾರವು ಕಾಲೇಜು ಕ್ಯಾಂಪಸ್‌ಗಳಲ್ಲಿ ಹೊರಗಿನ ಡಿಜೆ ಪಾರ್ಟಿಗಳು, ರಾತ್ರಿ ಸಂಗೀತ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಕಳೆದ ವರ್ಷ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ (CUSAT) ಕಾಲ್ತುಳಿತದಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದರು. ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ನಡೆದ ನಿಖಿತಾ ಗಾಂಧಿ ನೇತೃತ್ವದ ಸಂಗೀತ ಕಛೇರಿಯಲ್ಲಿ ಈ ದುರಂತ ಸಂಭವಿಸಿತ್ತು. ಪಾಸ್‌ಗಳನ್ನು ಹೊಂದಿರದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ ಮಳೆ ಪ್ರಾರಂಭವಾದಾಗ ಪರಿಸ್ಥಿತಿಯು ಬದಲಾಗಿತ್ತು. ಹೊರಗೆ ಕಾಯುತ್ತಿದ್ದ ಜನರು ಆಶ್ರಯಕ್ಕಾಗಿ ಸಭಾಂಗಣಕ್ಕೆ ನುಗ್ಗಿದರು. ಇದು ಕಾಲ್ತುಳಿತಕ್ಕೆ ಕಾರಣವಾಗಿ ದುರಂತ ನಡೆದಿತ್ತು.


ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಸನ್ನಿ ಲಿಯೋನ್

43 ವರ್ಷದ ಸನ್ನಿ ಲಿಯೋನ್ ಬಾಲಿವುಡ್ ಚಿತ್ರಗಳಾದ ಜಿಸ್ಮ್ 2, ಜಾಕ್‌ಪಾಟ್, ಶೂಟೌಟ್ ಅಟ್ ವಡಾಲಾ ಮತ್ತು ರಾಗಿಣಿ ಎಂಎಂಎಸ್ 2ನಲ್ಲಿ ನಟಿಸಿದ್ದಾರೆ. ಅವರು ಇತ್ತೀಚೆಗೆ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಏಪ್ರಿಲ್‌ನಲ್ಲಿ ಈ ಚಲನಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಇದರ ಮುಹೂರ್ತ ಸಮಾರಂಭದ ದೃಶ್ಯವನ್ನು ಹಂಚಿಕೊಂಡಿದ್ದ ಅವರು, ಈ ಅದ್ಭುತ ಮಲಯಾಳಂ ಚಿತ್ರದ ಭಾಗವಾಗಲು ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಅವರು ತಮ್ಮ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದರು.

Continue Reading
Advertisement
Kalki 2898 AD Movie Bhairava Anthem Released
ಕರ್ನಾಟಕ28 mins ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು31 mins ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ32 mins ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ36 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ40 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ1 hour ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ1 hour ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest1 hour ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ2 hours ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest2 hours ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು9 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು10 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌