Junior NTR wife Lakshmi Pranathi Birthday Junior NTR: ಪತ್ನಿ ಲಕ್ಷ್ಮಿ ಪ್ರಣತಿ ಜನುಮದಿನಕ್ಕೆ ಸ್ಪೆಷಲ್‌ ಫೋಟೊ ಮೂಲಕ ವಿಶ್‌ ಮಾಡಿದ ಜ್ಯೂ. ಎನ್‌ಟಿಆರ್‌ - Vistara News

South Cinema

Junior NTR: ಪತ್ನಿ ಲಕ್ಷ್ಮಿ ಪ್ರಣತಿ ಜನುಮದಿನಕ್ಕೆ ಸ್ಪೆಷಲ್‌ ಫೋಟೊ ಮೂಲಕ ವಿಶ್‌ ಮಾಡಿದ ಜ್ಯೂ. ಎನ್‌ಟಿಆರ್‌

ಮಾರ್ಚ್‌ 26 ಲಕ್ಷ್ಮಿ ಪ್ರಣತಿ (Lakshmi Pranathi) ಅವರ ಜನುಮದಿನ. ಈ ವಿಶೇಷ ದಿನದಂದು ಜ್ಯೂನಿಯರ್‌ ಎನ್‌ಟಿಆರ್‌ (Junior NTR) ಸ್ಪೆಷಲ್‌ ಫೋಟೊ ಶೇರ್‌ ಮಾಡಿ ಪತ್ನಿಗೆ ಶುಭ ಹಾರೈಸಿದ್ದಾರೆ.

VISTARANEWS.COM


on

Junior NTR wife Lakshmi Pranathi Birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ಜ್ಯೂನಿಯರ್‌ ಎನ್‌ಟಿಆರ್‌ (Junior NTR) ಸದ್ಯ ಎನ್‌ಟಿಆರ್‌ 30 ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆಗಾಗ ನಟ ತಮ್ಮ ರಜಾದಿನಗಳು ಮತ್ತು ಇತರ ಹಬ್ಬಗಳ ಸಮಯದಲ್ಲಿ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗಿನ ಚಿತ್ರಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಮಾರ್ಚ್‌ 26 ಲಕ್ಷ್ಮಿ ಪ್ರಣತಿ (Lakshmi Pranathi) ಅವರ ಜನುಮದಿನ. ಈ ವಿಶೇಷ ದಿನದಂದು ಜ್ಯೂನಿಯರ್‌ ಎನ್‌ಟಿಆರ್‌ ಸ್ಪೆಷಲ್‌ ಫೋಟೊ ಶೇರ್‌ ಮಾಡಿ ಪತ್ನಿಗೆ ಶುಭ ಹಾರೈಸಿದ್ದಾರೆ.

ಈ ಪೋಸ್ಟ್ ನೋಡುತ್ತಿದ್ದಂತೆ ನೆಟ್ಟಿಗರು ಕಮೆಂಟ್‌ ಮೂಲಕ ಶುಭ ಹಾರೈಸುತ್ತಿದ್ದಾರೆ. ಒಬ್ಬರು ಕಮೆಂಟ್‌ ಮೂಲಕ, ಹೆಂಡತಿಯ ಮೇಲಿನ ಪ್ರೀತಿಯನ್ನು ಚೆನ್ನಾಗಿ ವ್ಯಕ್ತಪಡಿಸಿದ್ದಾರೆ ಎನ್‌ಟಿಆರ್‌ ಎಂದು ಮಾಡಿದರೆ, ಇನ್ನೊಬ್ಬರು, ʻʻಹುಟ್ಟುಹಬ್ಬದ ಶುಭಾಶಯಗಳು ಅತ್ತಿಗೆ” ಎಂದು ಕಮೆಂಟ್‌ ಮೂಲಕ ಶುಭ ಹಾರೈಸಿದ್ದಾರೆ. ಫೋಟೊ ನೋಡಿ ನೆಟ್ಟಿಗರು ಕ್ರಿಸ್ಮಸ್‌ ಸಮಯದಲ್ಲಿ ಕ್ಲಿಕ್‌ ಮಾಡಿರಬೇಕು ಎಂದು ಕಮೆಂಟ್‌ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಜ್ಯೂ. ಎನ್‌ಟಿಆರ್‌ ಚಿತ್ರಕ್ಕೆ “ಹ್ಯಾಪಿ ಬರ್ತ್‌ಡೇ ಅಮ್ಮಾಳು” ಎಂದು ಕ್ಯಾಪ್ಷನ್‌ ನೀಡಿದ್ದಾರೆ.

NTR 30 ಸಿನಿಮಾ

NTR 30 ಸಿನಿಮಾಗೆ ಅನಿರುದ್ಧ ಸಂಗೀತ ನಿರ್ದೇಶಕರಾಗಿದ್ದು, ರತ್ನವೇಲು ಛಾಯಾಗ್ರಹಣ ಮಾಡಲಿದ್ದಾರೆ. ನಂದಮೂರಿ ಕಲ್ಯಾಣರಾಮ್ ಪ್ರಸ್ತುತಪಡಿಸಿದ್ದು, ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್‌ನಡಿಯಲ್ಲಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿ ಕೃಷ್ಣ ಕೆ ನಿರ್ಮಿಸಿದ್ದಾರೆ. 300 ಕೋಟಿ ಬಜೆಟ್‌ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ: Junior NTR: NTR 30 ಸೆಟ್‌ನಿಂದ ವೈರಲ್‌ ಆಯ್ತು ರಕ್ತದಿಂದ ತುಂಬಿದ ವಾಟರ್‌ ಟ್ಯಾಂಕರ್‌!

ಜ್ಯೂನಿಯರ್‌ ಎನ್‌ಟಿಆರ್‌ ಪೋಸ್ಟ್‌

ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ಜ್ಯೂನಿಯರ್‌ ಎನ್‌ಟಿಆರ್‌

ಜ್ಯೂನಿಯರ್‌ ಎನ್‌ಟಿಆರ್‌ ಕೊನೆಯಾದಾಗಿ ಆರ್‌ಆರ್‌ಆರ್‌ ಸಿನಿಮಾದಲ್ಲಿ ಕಾಣಿಸಿಕೊಂಡರು. ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆಯಿತು. ಇದೀಗ NTR 30ಯಲ್ಲಿ ನಟ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಪ್ರಶಾಂತ್‌ ನೀಲ್‌ ಜತೆ NTR 31 ಸಿನಿಮಾ ಕೂಡ ನಟ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

Uttarakaanda Movie: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Uttarakaanda Movie bande kaaka rangayana Raghu
Koo

ಬೆಂಗಳೂರು: ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ಉತ್ತರಕಾಂಡ” (Uttarakaanda Movie) ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು ನಟಿಸಲಿದ್ದಾರೆ. “ಬಂಡೆ ಕಾಕಾ” ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಚಿತ್ರತಂಡ ಹಲವು ಪೋಸ್ಟರ್‌ಗಳನ್ನು ಹಂಚಿಕೊಂಡಿದೆ. ಇದಕ್ಕೂ ಮುಂಚೆ “ಪಾಟೀಲ” ಎಂಬ ಪಾತ್ರಕ್ಕಾಗಿ ಯೋಗರಾಜ್ ಭಟ್ ನಟಿಸಲಿದ್ದಾರೆ ಎಂದು ಅಪ್‌ಡೇಟ್‌ ಹಂಚಿಕೊಡಿತ್ತು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ.

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಮಾಲಿವುಡ್

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

Manjummel Boys: ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

VISTARANEWS.COM


on

Manjummel Boys ott malayalam to premiere on may
Koo

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿತ್ತು. ಮಂಜುಮ್ಮೇಲ್ ಬಾಯ್ಸ್’ ಸಿನಿಮಾವನ್ನು ಪ್ರೇಕ್ಷಕರು ಮಾತ್ರವೇ ಅಲ್ಲದೆ ಸಿನಿಮಾ ಸೆಲೆಬ್ರಿಟಿಗಳು, ಸ್ಟಾರ್ ನಟರು ಸಹ ನೋಡಿ ಮೆಚ್ಚಿಕೊಂಡಿದ್ದರು. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

ರಜನಿಕಾಂತ್​ಗೆ ಬಹಳ ಇಷ್ಟವಾಗಿತ್ತು ಸಿನಿಮಾ

ಇತ್ತೀಚೆಗಷ್ಟೇ, ಮಂಜುಮ್ಮೆಲ್ ಬಾಯ್ಸ್ ನಿರ್ದೇಶಕ ಚಿದಂಬರಂ ಪೊದುವಾಲ್ (Chidambaram Poduval) ಮತ್ತು ತಂಡ ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth ) ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಮಂಜುಮ್ಮೇಲ್ ಬಾಯ್ಸ್’ ಸೂಪರ್ ಸ್ಟಾರ್ ರಜನಿಕಾಂತ್​ಗೆ ಬಹಳ ಇಷ್ಟವಾಗಿದ್ದು, ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ್ದರು.

ಇದನ್ನೂ ಓದಿ: Manjummel Boys: ʼಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ರಜನಿಕಾಂತ್‌ ಸತ್ಕಾರ!

ಏನಿದು ಕಥೆ?

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Continue Reading

South Cinema

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Mahesh Babu: ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ.

VISTARANEWS.COM


on

Mahesh Babu SS Rajamouli return from Dubai
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ. ಈ ಸಿನಿಮಾದಲ್ಲಿ ಮಹೇಶ್‌ ಬಾಬು ಅವರ ಲುಕ್‌ ಡಿಫ್‌ರೆಂಟ್‌ ಆಗಿರಲಿದೆ ಎಂದು ಈ ಮುಂಚೆ ರಾಜಮೌಳಿ ಅವರು ಹೇಳಿದ್ದರು. ಆ ಲುಕ್​ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗ ಮಹೇಶ್​ ಬಾಬು ಅವರು ಹೊಸ ಗೆಟಪ್​ ಬಹಿರಂಗ ಆಗಿದೆ.

ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಇತ್ತೀಚೆಗೆ ಆರ್‌ಆರ್‌ಆರ್ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ಗೆ ಬಂದಿದ್ದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Yuva Movie: ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

VISTARANEWS.COM


on

Yuva Movie streaming ott yuva rajkumar
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ತೆರೆ ಕಂಡಿತ್ತು. ಆದರೀಗ ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ (Amazon Prime) ಆಗುತ್ತಿದೆ.

ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು.ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

Continue Reading
Advertisement
Modi in Karnataka Here live video of Modi rally in Chikkaballapur
Lok Sabha Election 20242 mins ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20246 mins ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್27 mins ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ30 mins ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ33 mins ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು35 mins ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್50 mins ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Viral news
ವೈರಲ್ ನ್ಯೂಸ್51 mins ago

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Manjummel Boys ott malayalam to premiere on may
ಮಾಲಿವುಡ್56 mins ago

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

China Missile
ವಿದೇಶ60 mins ago

China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20242 mins ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ2 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ3 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ23 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌