Jyothi Rai: ಹಾಟ್‌ ಫೋಟೊಗಳ ಮೂಲಕ ಪಡ್ಡೆ ಹುಡುಗರ ನಿದ್ದೆ ಕಡೆಸಿದ ‘ಜೋಗುಳ’ ಖ್ಯಾತಿಯ ನಟಿ ಜ್ಯೋತಿ ರೈ! Vistara News
Connect with us

ಕಿರುತೆರೆ

Jyothi Rai: ಹಾಟ್‌ ಫೋಟೊಗಳ ಮೂಲಕ ಪಡ್ಡೆ ಹುಡುಗರ ನಿದ್ದೆ ಕಡೆಸಿದ ‘ಜೋಗುಳ’ ಖ್ಯಾತಿಯ ನಟಿ ಜ್ಯೋತಿ ರೈ!

Jyothi Rai: ಜ್ಯೋತಿ ರೈ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ. ಕಮೆಂಟ್ ಸೆಕ್ಷನ್ ಬಂದ್ ಮಾಡಿದ್ದಾರೆ.

VISTARANEWS.COM


on

Jyothi Rai
Koo
Jyothi Rai
ಕನ್ನಡದಲ್ಲಿ ಜೋಗುಳ Jyothi Rai ಕನ್ಯಾದಾನ ಅನುರಾಗ ಸಂಗಮ ಗೆಜ್ಜೆಪೂಜೆ ಲವಲವಿಕೆ ಗೆಜ್ಜೆಪೂಜೆ ಪ್ರೇರಣಾ ಕಿನ್ನರಿ ಮೂರು ಗಂಟು ಕಸ್ತೂರಿ ನಿವಾಸ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ <a href=httpsvistaranewscomcinema filmtelevisionjyothi rai dating with director suku purvaj suresh kumar408905html title=Jyothi Rai ಮಗನ ʻಆಟಿಸಂʼ ಕಾಯಿಲೆ ವಿರುದ್ಧ ಹೋರಾಡಿದ್ದ ಜ್ಯೋತಿ ರೈ‌ ಈಗ ಯುವ ನಿರ್ದೇಶಕನ ಜತೆ ಅಫೇರ್><strong>ಜ್ಯೋತಿ ರೈ <strong><a>ನಟಿಸಿದ್ದಾರೆ
Jyothi Rai
ನಟಿ ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಸಖತ್ ಬೋಲ್ಡ್ ಆಗಿ ಇರುವ ಫೋಟೊವನ್ನು ಶೇರ್ ಮಾಡುತ್ತ ಇರುತ್ತಾರೆ ಕಮೆಂಟ್ ಸೆಕ್ಷನ್ ಬಂದ್ ಮಾಡಿದ್ದಾರೆ ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್‌ ಸಿರೀಸ್‌ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು ಆ ಸೀರೀಸ್‌ಗೆ ಸಂಬಂಧಿಸಿದ ಪೋಟೊಗಳು ಇವೆ<br>
Jyothi Rai
ಬೋಲ್ಡ್‌ ಫೋಟೊ ಅಲ್ಲದೇ ವೈಯಕ್ತಿಕ ವಿಚಾರಗಳಿಗೂ ಸುದ್ದಿಯಾಗಿದ್ದರು ನಟಿ ಶುಕ್ರ ಮಾತರಾನಿ ಮೌನಮಿದಿ ಎ ಮಾಸ್ಟರ್ ಪೀಸ್ ಚಿತ್ರಗಳನ್ನು ನಿರ್ದೇಶಿಸಿದ ಸುಕುಪುರ್ವಜ್ ಅಲಿಯಾಸ್ ಸುರೇಶ್ ಕುಮಾರ್‌ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು

ಇದನ್ನೂ ಓದಿ: Jyothi Rai: ಮಗನ ʻಆಟಿಸಂʼ ಕಾಯಿಲೆ ವಿರುದ್ಧ ಹೋರಾಡಿದ್ದ ಜ್ಯೋತಿ ರೈ‌ ಈಗ ಯುವ ನಿರ್ದೇಶಕನ ಜತೆ ಅಫೇರ್?

Jyothi Rai
ಕೊಡಗಿನಲ್ಲಿ ಹುಟ್ಟಿ ಬೆಳೆದ ನಟಿ ಜ್ಯೋತಿ ರೈ ಎಂಎನ್‌ಸಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು ಬಂದೇ ಬರತಾವ ಕಾಲ ಧಾರಾವಾಹಿಯಲ್ಲಿ ನಟಿಸಿದರು ಅಲ್ಲಿಂದ ಮುಂದೆ ಸಾಲು ಸಾಲು ಧಾರಾವಾಹಿಗಳಲ್ಲಿ ನಟಿಸಿದರು ನಿರೂಪಕಿಯಾಗಿಯೂ ಗಮನ ಸೆಳೆದು 20ನೇ ವಯಸ್ಸಿನಲ್ಲಿ ಮದುವೆ ಆಗಿದ್ದರು
Jyothi Rai
ನೆಟ್‌ವರ್ಕಿಂಗ್ ಇಂಜಿನಿಯರ್ ಪದ್ಮನಾಭ ಎಂಬುವವರ ಕೈ ಹಿಡಿದಿದ್ದರು ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ ಜ್ಯೋತಿ ರೈ ಮಗ ಆಟಿಸಂ ಕಾಯಿಲೆಯಿಂದ ಬಳಲುತ್ತಿದ್ದ ಮಗನಿಗೆ ಒಂದು ವರ್ಷ ತುಂಬಿದ ಬಳಿಕ ಆತ ಯಾರೊಂದಿಗೆ ಐ ಕಾಂಟ್ಯಾಕ್ಟ್‌ ಮಾಡಿ ಮಾತನಾಡಿಸುತ್ತಿರಲಿಲ್ಲ ಇಎನ್‌ಟಿ ಡಾಕ್ಟರ್‌ ಬಳಿ ಹೋದಾಗಲೂ ಯಾವುದೇ ಸಹಾಯವಾಗಲಿಲ್ಲ ಬಳಿಕ ಥೆರಫಿ ಶ್ಯಾಡೋ ಟೀಚರ್‌ ಮುಖಾಂತರ ಜ್ಯೋತಿ ರೈ ಪುತ್ರ ಬೆಳವಣಿಗೆಗೆ ಸಹಾಕಾರಿ ಆಗಿದೆ ಎಂದು ನಟಿ ಹಿಂದೊಮ್ಮೆ ಹೇಳಿಕೆ ನೀಡಿದ್ದರು
Jyothi Rai
ಸದ್ಯ ಹಾಟ್‌ ಫೋಟೊ ಹಂಚಿಕೊಂಡು ನಟಿ ಮತ್ತೆ ಸುದ್ದಿಯಾಗಿದ್ದಾರೆ ಅಷ್ಟೇ ಅಲ್ಲದೇ ತೆಲುಗು ನಿರ್ದೇಶಕ ಸುಕು ಪೂರ್ವಜ್ ಜತೆಗಿನ ಪೋಟೋಗಳನ್ನು ಹಂಚಿಕೊಂಡು ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದಾರೆ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿ ಜ್ಯೋತಿಪುರ್ವಜ್ ಹ್ಯಾಷ್‌ಟ್ಯಾಗ್ Jyothipurvajಹಾಕುತ್ತ ಬರುತ್ತಿದ್ದಾರೆ ಜ್ಯೋತಿ ರೈ ಇವೆಲ್ಲ ಗಮನಿಸಿದ ನೆಟ್ಟಿಗರು ಇಬ್ಬರ ಮಧ್ಯೆ ಸಂಬಂಧ ಇರೋದು ಗ್ಯಾರೆಂಟಿ ಎನ್ನುತ್ತಿದ್ದಾರೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Megha Shetty: ಮದುವೆ ಫಿಕ್ಸ್‌ ಆಯ್ತಾ ಬಂಗಾರ? ಮೂಗು ಚುಚ್ಚಿಸಿಕೊಂಡ ಮೇಘಾ ಶೆಟ್ಟಿಗೆ ಫ್ಯಾನ್ಸ್‌ ಪ್ರಶ್ನೆ!

Megha Shetty: ʻಬಂಗಾರʼ ಅಂತಲೇ ಧಾರಾವಾಹಿಯಲ್ಲಿ ಅಪ್ಪ ಸುಬ್ಬವಿನಿಂದ ಕರೆಸಿಕೊಳ್ಳುತ್ತಿದ್ದ ಮೇಘನಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ʻʻಬಂಗಾರಗೆ ಮದುವೆ ಫಿಕ್ಸ್‌ ಆಯ್ತಾ?ʼʼಎಂದು ಅವರ ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Edited by

megha shetty In Pink dress
Koo

ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಆಗಾಗ ರೀಲ್ಸ್‌ ಮಾಡುವುದರ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಅಷ್ಟೇ ಅಲ್ಲದೇ ಇದೀಗ ಹಲವು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ʻಬಂಗಾರʼ ಅಂತಲೇ ಧಾರಾವಾಹಿಯಲ್ಲಿ ಅಪ್ಪ ಸುಬ್ಬವಿನಿಂದ ಕರೆಸಿಕೊಳ್ಳುತ್ತಿದ್ದ ಮೇಘನಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ʻʻಬಂಗಾರಗೆ ಮದುವೆ ಫಿಕ್ಸ್‌ ಆಯ್ತಾ?ʼʼಎಂದು ಅವರ ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ.

ಮೇಘಾ ಶೆಟ್ಟಿ ಮೂಗು ಚುಚ್ಚಿಕೊಳ್ಳುವ ವಿಡಿಯೊ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಮೂಗು ಚುಚ್ಚಿಸಿಕೊಳ್ಳುವುದಕ್ಕೂ ಮುನ್ನ ಸಹಜವಾಗಿಯೇ ಮೇಘಾ ಕೂಡ ಹೆದರಿದ್ದಾರೆ. ಆದರೆ, ಮೂಗು ಚುಚ್ಚುವವರು ಕೊಂಚ ಧೈರ್ಯ ಹೇಳಿದ್ದಾರೆ. ಬಳಿಕ ಕಣ್ಣು ಮುಚ್ಚಿ ಕಣ್ಣು ತೆರೆಯುವುದರೊಳಗೆ ಚುಚ್ಚಿದ್ದಾರೆ. ಈ ವಿಡಿಯೊ ಕಂಡು ಮೇಘನಾ ಫ್ಯಾನ್ಸ್‌ ಮದುವೆಗೆ ತಯಾರಿ ಆದ್ರಾ? ಎಂದು ಕಮೆಂಟ್‌ ಮಾಡಿದ್ದಾರೆ.

ಮತ್ತೊಬ್ಬರು ʻʻಬಂಗಾರ ಈಗ ಇನ್ನು ಮುದ್ದಾಗಿ ಕಾಣಿಸುತ್ತಿದ್ದೀಯಾʼʼಎಂದು ಕಮೆಂಟ್‌ ಮಾಡಿದ್ದಾರೆ. ಮೇಘಾ ಶೆಟ್ಟಿ ಆಗಾಗ ಫೋಟೊಶೂಟ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಹಳ್ಳಿ ಉಡುಗೆಯಾಗಿರುವ ಲಂಗ ದಾವಣಿ ತೊಟ್ಟು ನಟಿ ಮೇಘಾ ಶೆಟ್ಟಿ ಮಿಂಚಿದ್ದರು. ಮಾದಕ ನೋಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿದ್ದ ಮೇಘಾ ಶೆಟ್ಟಿ ಸಿಂಪಲ್ ಲುಕ್​ನಲ್ಲಿ ಕಂಡಿದ್ದರು. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ.

ಇದನ್ನೂ ಓದಿ: Megha Shetty: ಮುಕ್ತಾಯವಾಗಲಿದೆಯೇ ʻಜೊತೆ ಜೊತೆಯಲಿʼ ಧಾರಾವಾಹಿ; ಮೇಘಾ ಶೆಟ್ಟಿ ಹೇಳಿದ್ದೇನು?

ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೋತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.

Continue Reading

ಕಿರುತೆರೆ

Amrithadhare Serial Kannada: `ಅಮೃತಧಾರೆ’ಸೆಟ್‌ನಲ್ಲಿ ʻನಾನು ನಂದಿನಿʼ ಸ್ಟೆಪ್‌; ಎಲ್ಲೆಲ್ಲೂ  ವಿಕ್ಕಿಪೀಡಿಯಾ ಸಾಂಗ್‌ ಗುಂಗು!

ʻಅಮೃತಧಾರೆʼ ಧಾರಾವಾಹಿ (Amrithadhare Serial Kannada) ಖ್ಯಾತಿಯ ಸಾರಾ ಅಣ್ಣಯ್ಯ ಈ ಹಾಡಿಗೆ ರೀಲ್ಸ್‌ ಮಾಡಿದ್ದಾರೆ. ಸಾರಾ (sara annaiah) ಅವರಿಗೆ ಸಹ ನಟ ಶಶಿಧರ್ ಹೆಗ್ಡೆ ಸಾಥ್ ಕೊಟ್ಟಿದ್ದಾರೆ.

VISTARANEWS.COM


on

Edited by

Sara annaiah nanu nandini reels Viral
Koo

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಇದೀಗ ʻಅಮೃತಧಾರೆʼ ಧಾರಾವಾಹಿ (Amrithadhare Serial Kannada) ಖ್ಯಾತಿಯ ಸಾರಾ ಅಣ್ಣಯ್ಯ ಈ ಹಾಡಿಗೆ ರೀಲ್ಸ್‌ ಮಾಡಿದ್ದಾರೆ. ಸಾರಾ (sara annaiah) ಅವರಿಗೆ ಸಹ ನಟ ಶಶಿಧರ್ ಹೆಗ್ಡೆ ಸಾಥ್ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ವಿಕ್ಕಿ ಪೀಡಿಯಾ ಅವರ ಈ ರೀಲ್ಸ್‌ 15 ಮಿಲಿಯನ್‌ಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

“ನಾನು ನಂದಿನಿ ಬೆಂಗಳೂರಿಗ್ ಬಂದಿನಿ” ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲಕ್ಷ ಲಕ್ಷ ವ್ಯೂಸ್ ಸಾಧಿಸಿ ದಾಖಲೆ ಬರೆದಿದೆ. ಇದೀಗ ಅಮೃತಧಾರೆ ಧಾರಾವಾಹಿಯ ಕಲಾವಿದರು ಈ ಹಾಡಿಗೆ ರೀಲ್ಸ್‌ ಮಾಡಿದ್ದು, ಸಖತ್‌ ಫೇಮಸ್‌ ಆಗಿದೆ. ಬಿಗ್ ಬಾಸ್ ಖ್ಯಾತಿಯ ವೈನ್‌ ಸ್ಟೋರ್ ರಘು, ದಿವ್ಯಾ ಉರುಡುಗ, ನಿರೂಪಕಿ ಅನುಪಮಾ ಗೌಡ, ನಟಿ ಚೈತ್ರಾ ಆಚಾರ್, ಚಂದನಾ ಅನಂತಕೃಷ್ಣ ಸೇರಿದಂತೆ ಹಲವರು ಈ ವಿಡಿಯೊ ನೋಡಿ ಮೆಚ್ಚಿಕೊಂಡಿದ್ದಾರೆ. ಇನ್ನ ಮೀಮ್ಸ್‌ ಪೇಜ್‌ಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದೆ.

ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ಭಾಷಣ ಟ್ರಾನ್ಸ್‌ಲೇಟ್‌ ವಿಡಿಯೊ ಅಣಕ ಮಾಡಿ ಇವರು ಸಾಕಷ್ಟು ಫೇಮಸ್ ಆಗಿದ್ದರು. ಚುನಾವಣಾ ಸಮಯದಲ್ಲಿ ರಾಷ್ಟ್ರಮಟ್ಟದ ನಾಯಕರ ಹಿಂದಿ ಭಾಷೆಯ ಭಾಷಣವನ್ನು ಸಖತ್‌ ಆಗಿ ಕಾಮಿಡಿಯಾಗಿ ಅಣುಕಿಸಿದ್ದರು. ಆದರೀಗ ಹೆಣ್ಣು ಮಕ್ಕಳು ಉದ್ಯೋಗಕ್ಕೆಂದು ನಗರಕ್ಕೆ ಬಂದು, ಪಿಜಿಯಲ್ಲಿ ಯಾವ ರೀತಿ ಸಮಸ್ಯೆಗೆ ಗುರಿಯಾಗುತ್ತಾರೆ, ಅಷ್ಟೇ ಅಲ್ಲದೇ ಕನ್ನಡ ಮೀಡಿಯಂನಲ್ಲಿ ಓದಿದ ಕಾರಣಕ್ಕೆ ಇಂಗ್ಲಿಷ್ ಬಾರದೇ ಏನೆಲ್ಲಾ ಸಮಸ್ಯೆಗೆ ಗುರಿಯಾಗುತ್ತಾರೆ ಎಂಬುದನ್ನು ವಿಡಿಯೊ ಮೂಲಕ ಹಾಡಿದ್ದಾರೆ.

ಇದನ್ನೂ ಓದಿ: Viral Video: ನಾನು ನಂದಿನಿ ಬೆಂಗಳೂರು ಬಂದಿನಿ; ಭಾರಿ ವೀಕ್ಷಣೆ ಕಂಡ ವಿಕ್ಕಿಪೀಡಿಯಾ ಹಾಡು!

ಸಾರಾ ಅಣ್ಣಯ್ಯ ಪೋಸ್ಟ್‌

ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ, ಬಾರ್ಬಿ ಹಾಡಿನ ಟ್ಯೂನ್‌ ಬಳಸಿಕೊಂಡು ಈ ಹಾಡು ಹಾಡಿದ್ದಾರೆ. ‘ನಾನು ನಂದಿನಿ ಬೆಂಗಳೂರು ಬಂದಿನಿ, ಪಿಜಿಲಿ ಇದ್ದೀನಿ, ಐಟಿ ಕೆಲಸ ಮಾಡ್ತೀನಿ, ಊಟ ಸರಿ ಇಲ್ಲ ಅಂದ್ರೂನು ತಿಂತಿನಿ, ಬಂದ ದುಡ್ಡೆಲ್ಲಾ ಮನೆಗೆ ಕಳಿಸ್ತೀನಿ, ಬಾರೆ ನಂದಿನಿ ಗೋಬಿ ತಿನಿಸ್ತೀನಿ ಬೇ ಬೇ ಬೇಡ, ಬಾರೆ ನಂದಿನಿ ಬೆಂಗಳೂರು ತೋರಿಸ್ತೀನಿ, ಓಹ್ ಬೇಡ ಓಹ್ ಬೇಡ, ಬಾರೆ ನಂದಿನಿ ಪೇಡ ತಿನ್ನಿಸ್ತೀನಿ, ಬೆ ಬೆ ಬೇಡ, ಬಾರೆ ನಂದಿನಿ ಪಿಕ್ಚರ್ ತೋರಿಸ್ತೀನಿ, ಬೇಡ ಬೇಡ, ನೋಡಮ್ಮ ಇಂಗ್ಲೀಷ್ ನೀನು ಕಲಿಬೇಕು, ಇಲ್ಲ ಅಂದ್ರೆ ಐಟಿಲಿ ಕಷ್ಟ ಆಗುತ್ತೆ ಸರ್ ನಾನು ಕನ್ನಡ ಮೀಡಿಯಾಂನಲ್ಲಿ ಓದಿದ್ದೆ. ಅದಕ್ಕೆ ನನ್ನ ಇಂಗ್ಲೀಷ್ ಅಷ್ಟಕಷ್ಟೆ, ಐ ಕ್ಯಾನ್ ಟ್ರೈ ಐ ಕ್ಯಾನ್ ಟಾಕ್, ಬಟ್ ವಾಟ್ ಐ ಸ್ಪೀಕ್ ಇಟ್ಸ್ ಬಟ್ಲರ್ ಇಂಗ್ಲೀಷ್’ ಇದು ಈ ಹಾಡಿನ ಲಿರೀಕ್ಸ್‌ ಆಗಿದೆ. ಪೋಷಕರು ಕೂಡ ಮಕ್ಕಳೊಂದಿಗೆ ರೀಲ್ಸ್‌ ಮಾಡಿದ್ದಾರೆ.

Continue Reading

ಕರ್ನಾಟಕ

VISTARA TOP 10 NEWS : ಸನಾತನ ಧರ್ಮ ನಾಶ ಹೇಳಿಕೆಗೆ ಮೋದಿ ಕೌಂಟರ್‌; ಕಣ್ಣೀರ ಕಥೆಗಳ ಹೇಳುತ್ತಿದೆ ಆ ಎನ್‌ಕೌಂಟರ್‌!

VISTARA TOP 10 NEWS: ಸನಾತನ ಧರ್ಮ ನಾಶವೇ ಇಂಡಿಯಾ ಬ್ಲಾಕ್‌ ಗುರಿ ಎಂದು ಚಾಟಿ ಬೀಸಿದ್ದಾರೆ ಪ್ರಧಾನಿ ಮೋದಿ, ಕೇರಳದಲ್ಲಿ ನಿಫಾ ಹೆಚ್ಚಾಗಿದ್ದರಿಂದ ಬೀಳುತ್ತಾ ಲಾಕ್‌ಡೌನ್‌ ಎಂಬ ಭಯ.. ಹೀಗೆ ಹಲವು ಪ್ರಮುಖ ಸುದ್ದಿಗಳ ಗುಚ್ಛವೇ
ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Edited by

Vistara Top 10 News 14-09
Koo

1.ಸನಾತನ ಧರ್ಮದ ನಿರ್ನಾಮವೇ ಇಂಡಿಯಾ ಒಕ್ಕೂಟದ ಗುರಿ; ಚಾಟಿ ಬೀಸಿದ ಮೋದಿ
ಸನಾತನ ಧರ್ಮದ ನಿರ್ಮೂಲನೆ ಕುರಿತು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ವಿವಾದಿತ ಹೇಳಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. “ಇಂಡಿಯಾ ಒಕ್ಕೂಟದ ಉದ್ದೇಶವು ಸನಾತನ ಧರ್ಮವನ್ನು (Sanatana Dharma) ನಿರ್ಮೂಲನೆ ಮಾಡುವುದೇ ಆಗಿದೆ. ಹಾಗಾಗಿ, ಇಂತಹ ದುಷ್ಟ ಉದ್ದೇಶದ ವಿರುದ್ಧ ನಾವು ಒಗ್ಗಟ್ಟಾಗಬೇಕು” ಎಂದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

2.‌ 11 ಜಿಲ್ಲೆಗಳು ಸಂಪೂರ್ಣ ಬರ ಪೀಡಿತ, 161 ತಾಲೂಕುಗಳ ಪಟ್ಟಿ ಇಲ್ಲಿದೆ
ರಾಜ್ಯದ 161 ತಾಲೂಕುಗಳನ್ನು ಬರಪೀಡಿತ (Drought Taluk) ತಾಲೂಕುಗಳು ಎಂದು ಘೋಷಿಸಿ ರಾಜ್ಯ ಸರ್ಕಾರ (Karnataka State Government) ಆದೇಶ ಹೊರಡಿಸಿದೆ. ಇದರಲ್ಲಿ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೊಪ್ಪಳ, ಶಿವಮೊಗ್ಗ, ಕಲಬುರಗಿ, ವಿಜಯಪುರ, ಧಾರವಾಡ, ವಿಜಯನಗರ ಜಿಲ್ಲೆಗಳ ಸಂಪೂರ್ಣ ತಾಲೂಕುಗಳು ಬರ‌ ಎಂದು ಘೋಷಿಸಲ್ಪಟ್ಟಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ಕೇರಳದಲ್ಲಿ ನಿಫಾ ವೈರಸ್‌ ಹಾವಳಿ; ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ; ಲಾಕ್‌ಡೌನ್‌ ಜಾರಿ?
ಕೇರಳದಲ್ಲಿ ನಿಫಾ ಸೋಂಕಿನ ಹಾವಳಿ ಜಾಸ್ತಿಯಾಗುತ್ತಿದೆ. ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ನಿಫಾ ಸೋಂಕು (Nipah Virus) ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ನಿಫಾ ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈಗಾಗಲೇ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಜನರಲ್ಲಿ ಆತಂಕ ಜಾಸ್ತಿಯಾಗುತ್ತಿದೆ. ಹಾಗೆಯೇ, ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುತ್ತದೆ ಎಂಬ ಮಾತುಗಳು ಕೂಡ ಕೇಳಿಬಂದಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ: ನಿಫಾ ವೈರಸ್‌ ಬಗ್ಗೆ ನಿಗಾ ಇರಲಿ! ಇದರ ಲಕ್ಷಣವೇನು?

4. ಚೈತ್ರಾ ಕುಂದಾಪುರ ವಂಚನೆ ಕೇಸು: ಸ್ವಾಮೀಜಿ ಅರೆಸ್ಟ್‌ ಆದರೆ ದೊಡ್ಡವರು ಸಿಕ್ಕಿಬೀಳ್ತಾರಾ?
ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‌ನಿಂದ ನಡೆಸಿರುವ ಐದು ಕೋಟಿ ರೂ. ವಂಚನೆ ಪ್ರಕರಣ ಅಂತಿಮವಾಗಿ ರಾಜಕಾರಣದ ಪಡಸಾಲೆಗೂ ಬರುತ್ತದೆಯೇ ಎನ್ನುವ ಪ್ರಶ್ನೆ ಗಂಭೀರವಾಗಿ ಕೇಳಿಬಂದಿದೆ. ಪ್ರಕರಣದಲ್ಲಿ ನೇರವಾಗಿ 1.5 ಕೋಟಿ ರೂ. ಪಡೆದುಕೊಂಡ ಅಭಿನವ ಹಾಲಶ್ರೀ ಸ್ವಾಮೀಜಿ (Abhinava Halasree Swameeji) ಅವರ ಬಂಧನ ಇನ್ನೂ ಆಗಿಲ್ಲ. ಅವರ ಬಂಧನ ಆಗ್ಲಿ ಎಲ್ಲಾ ಸತ್ಯ ಹೊರಬೀಳುತ್ತದೆ ಎಂದು ಚೈತ್ರ ಕುಂದಾಪುರ ಹೇಳಿದ್ದಕ್ಕೂ ಇನ್ನೂ ಸ್ವಾಮೀಜಿ ಬಂಧನ ಆಗದೆ ಇರುವುದಕ್ಕೂ ಏನಾದರೂ ಸಂಬಂಧವಿದೆಯಾ ಎಂಬ ಪ್ರಶ್ನೆ ಗಾಢವಾಗಿ ಕಾಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ 1: ವಂಚನೆ ಕಥೆ ಅತ್ಲಾಗಿರಲಿ, ಕಡುಬಡವ ಗೋವಿಂದ ಪೂಜಾರಿ ಮಹಾಸಾಧಕನಾದ Motivational ಕಥೆ ಕೇಳಿ
ಪೂರಕ ಸುದ್ದಿ 2: ಯಾರ‍್ರೀ ಆ ಚೈತ್ರಾ ಕುಂದಾಪುರ? ; ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಚೇರಿಯಿಂದಲೇ ಫೋನ್‌

5.ಆಧಾರ್‌ನಿಂದ ಡಿಎಲ್‌ವರೆಗೆ; ಅ.1ರಿಂದ ಎಲ್ಲದಕ್ಕೂ ಇದೊಂದೇ ಡಾಕ್ಯುಮೆಂಟ್‌ ಸಾಕು
ಜನನ ಹಾಗೂ ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ ಯು (2023) ಅಕ್ಟೋಬರ್‌ 1ರಿಂದ ಜಾರಿಗೆ ಬರಲಿದೆ. ಇದರಿಂದ ಒಂದೇ ದಾಖಲೆ ನೀಡುವ ಮೂಲಕ ಹತ್ತಾರು ದಾಖಲೆಯನ್ನು ಪಡೆಯಬಹುದಾಗಿದೆ. ಅಂದರೆ ಆಧಾರ್‌ನಿಂದ ಡಿಎಲ್‌ವರೆಗೆ ಎಲ್ಲದಕ್ಕೂ ಒಂದೇ ಡಾಕ್ಯುಮೆಂಟ್‌ ಸಾಕು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಅನಂತ್‌ ನಾಗ್‌ ಎನ್‌ಕೌಂಟರ್‌: ಉಗ್ರರ ಗುಂಡಿಗೆ ಎದೆಯೊಡ್ಡಿದವರ ಹಿಂದಿವೆ ಹೃದಯಸ್ಪರ್ಶಿ ಕತೆಗಳು
”ನಾವು ಬೇಗನೆ ಹೊಸ ಮನೆಗೆ ಹೋಗೋಣ,” ಎಂದು ತನ್ನ 2 ವರ್ಷದ ಮಗಳಿಗೆ ಹೇಳಿ ಹೋಗಿದ್ದ ಮೇಜರ್ ಆಶೀಷ್ ಧೋನೌಕ್, ಗುಂಡಿಗೆ ಎದೆಯೊಡ್ಡುವ ಕೆಲವೇ ಗಂಟೆಗಳ ಹಿಂದೆ 6 ವರ್ಷದ ಮಗ ಹಾಗೂ 2 ವರ್ಷದ ಮಗಳೊಂದಿಗೆ ಮಾತನಾಡಿದ್ದ ಕರ್ನಲ್ ಮನಪ್ರೀತ್ ಸಿಂಗ್, ತಿಂಗಳ ಹಿಂದೆಯಷ್ಟೇ ಅಪ್ಪನಾಗಿದ್ದ ಡಿವೈಎಸ್‌ಪಿ ಹುಮಾಯೂನ್ ಭಟ್ ಅವರೀಗ ನೆನಪಷ್ಟೇ.. ದೇಶದ ಗಡಿ ರಕ್ಷಣೆಯಲ್ಲಿ ತಮ್ಮ ಪ್ರಾಣಗಳನ್ನೇ ಅರ್ಪಿಸಿ ಹುತಾತ್ಮರಾಗಿದ್ದಾರೆ. ಒಬೊಬ್ಬರ ಸಾವಿನ ಹಿಂದೆಯೂ ಒಂದೊಂದು ಕಣ್ಣೀರ ಕಥೆ ಇದೆ.. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ದೆಹಲಿಯಲ್ಲಿ ಶಿವಮೊಗ್ಗ ಮೂಲದ ಐಸಿಸ್‌ ಉಗ್ರ ಅರಾಫತ್‌ ಅಲಿ ಸೆರೆ, ತೀವ್ರ ವಿಚಾರಣೆ
ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡು 2020ರಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಮೂಲದ ಅರಾಫತ್‌ ಅಲಿಯನ್ನು ನವ ದೆಹಲಿಯಲ್ಲಿ ಎನ್‌ಐಎ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, ಈತ ಹಲವು ಪ್ರಕರಣಗಳಲ್ಲಿ ಬೇಕಿದ್ದಾನೆ. ವಿಚಾರಣೆ ಮೂಲಕ ಈತನಿಂದ ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್‌; ಸಾವಿಗೆ ಭಾರತ ಖಂಡನೆ
ಅಮೆರಿಕದ ಸಿಯಾಟಲ್‌ನಲ್ಲಿ ಭಾರತದ ಜಾಹ್ನವಿ ಕಂಡುಲಾ (Jaahnavi Kandula) ಎಂಬ 23 ವರ್ಷದ ವಿದ್ಯಾರ್ಥಿನಿಯು ಅಪಘಾತದಲ್ಲಿ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜಾಹ್ನವಿ ಕಂಡುಲಾ ಅವರಿಗೆ ಪೊಲೀಸ್‌ ವಾಹನ ಡಿಕ್ಕಿಯಾಗಿದ್ದು, ಇದಾದ ಬಳಿಕ ಪೊಲೀಸ್‌ ಅಧಿಕಾರಿಯು ದರ್ಪ ತೋರಿದ ವಿಡಿಯೊ ಈಗ ವೈರಲ್‌ ಆಗಿದೆ. ಹಾಗೆಯೇ, ಪೊಲೀಸರ ದರ್ಪವನ್ನು ಭಾರತ ಖಂಡಿಸಿದ್ದು, ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ಕೊಹ್ಲಿ ಭೇಟಿಗಾಗಿ ಶಬರಿಯಂತೆ ಕಾದ ಲಂಕಾ ಯುವತಿ; 19 ವರ್ಷಗಳ ಬಳಿಕ ಕನಸು ನನಸು
ಟೀಮ್ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿಗೆ(Virat Kohli) ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಪ್ರಸ್ತುತ ಏಷ್ಯಾಕಪ್(Asia Cup 2023)​ ಆಡುತ್ತಿರುವ ವಿರಾಟ್​ ಕೊಹ್ಲಿಗೆ ಲಂಕಾದ ಅಭಿಮಾನಿಯೊಬ್ಬಳು ತಾನೇ ಮಾಡಿದ ಕೊಹ್ಲಿಯ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿ ಗಮನಸೆಳೆದಿದ್ದಾಳೆ. ಆಕೆ ಈ ಕ್ಷಣಕ್ಕಾಗಿ 17 ವರ್ಷಗಳಿಂದ ಕಾಯುತ್ತಿದ್ದಳಂತೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಟಿಆರ್‌ಪಿಯಲ್ಲಿ ಏರಿಕೆ ಕಂಡ ಅಮೃತಧಾರೆ, ಗಟ್ಟಿಮೇಳಕ್ಕೆ ನಾಲ್ಕನೇ ಸ್ಥಾನ
ʻಸೀತಾ ರಾಮ’ ಧಾರಾವಾಹಿ ಇದೀಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಯಾವಾಗಲೂ ‘ಗಟ್ಟಿಮೇಳ’ ಎರಡನೇ ಸ್ಥಾನವನ್ನು ಕಾದಿರಿಸಿಕೊಂಡಿತ್ತು. ಆದರೀಗ ನಾಲ್ಕನೇ ಸ್ಥಾನಕ್ಕೆ ಬಂದು ನಿಂತಿದೆ. ಅಮೃತಧಾರೆ ಧಾರಾವಾಹಿ ಟಿಆರ್‌ಪಿ ಏರಿಕೆ ಕಂಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕಿರುತೆರೆ

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Kannada Serials TRP: ಯಾವಾಗಲೂ ಗಟ್ಟಿಮೇಳ ಎರಡನೇ ಸ್ಥಾನವನ್ನು ಕಾದಿರಿಸಿಕೊಂಡಿತ್ತು. ಆದರೀಗ ನಾಲ್ಕನೇ ಸ್ಥಾನಕ್ಕೆ ಬಂದು ನಿಂತಿದೆ. ಅಮೃತಧಾರೆ ಧಾರಾವಾಹಿ ಟಿಆರ್‌ಪಿ ಏರಿಕೆ ಕಂಡಿದೆ.

VISTARANEWS.COM


on

Edited by

Kannada Serials
Koo

ಬೆಂಗಳೂರು: ʻಸೀತಾ ರಾಮ’ ಧಾರಾವಾಹಿ (Kannada Serials TRP) ಇದೀಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಯಾವಾಗಲೂ ‘ಗಟ್ಟಿಮೇಳ’ ಎರಡನೇ ಸ್ಥಾನವನ್ನು ಕಾದಿರಿಸಿಕೊಂಡಿತ್ತು. ಆದರೀಗ ನಾಲ್ಕನೇ ಸ್ಥಾನಕ್ಕೆ ಬಂದು ನಿಂತಿದೆ. ಅಮೃತಧಾರೆ ಧಾರಾವಾಹಿ ಟಿಆರ್‌ಪಿ ಏರಿಕೆ ಕಂಡಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್​ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಸದ್ಯ ಪುಟ್ಟಕ್ಕನ ಮೆಸ್‌ಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಬಂಗಾರಮ್ಮನ ಮಗ ಸ್ವತಃ ತಾಯಿಯ ವಿರುದ್ಧವೆ ದೂರು ಕೊಟ್ಟಿದ್ದು, ಬಂಗಾರಮ್ಮ ಅರೆಸ್ಟ್‌ ಆಗಿದ್ದಾರೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಎರಡಂಕಿ ಟಿಆರ್​ಪಿ ಪಡೆಯುತ್ತಿರುವ ಕನ್ನಡದ ಏಕೈಕ ಧಾರಾವಾಹಿ ಇದು. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರವೂ ಎರಡನೇ ಸ್ಥಾನ ಪಡೆದುಕೊಂಡಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ಅಷ್ಟೇ ಅಲ್ಲದೇ ಸೀತಾ ಮನೆಯ ವಿಚಾರವಾಗಿ ರಾಮ ಬೆಂಬಲಕ್ಕೆ ನಿಂತಿದ್ದಾನೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈಕೆಯ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ಬಾರಿಯೂ ‘ಸೀತಾ ರಾಮ’ ಟಾಪ್‌; ಸುಧಾರಿಸಿದ ‘ಅಮೃತಧಾರೆ’ ಧಾರಾವಾಹಿ!

ಇದನ್ನೂ ಓದಿ: Kannada Serials TRP: ಟಾಪ್‌ 5ರಲ್ಲಿಲ್ಲ ʻಶ್ರೀರಸ್ತು ಶುಭಮಸ್ತುʼ; ಸೀತಾ ರಾಮ ಧಾರಾವಾಹಿಗೆ ಹೆಚ್ಚಾಯ್ತು ಬೇಡಿಕೆ!

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಈಗಾಗಲೇ ಮುಗಿದಿದ್ದು, ಪ್ರೆಕ್ಷಕರಿಗೆ ಕುತೂಹಲ ಮೂಡಿಸಿದೆ. ಕಳೆದ ವಾರ ಐದನೇ ಸ್ಥಾನದಲ್ಲಿತ್ತು. ಈ ಬಾರಿ ‘ಗಟ್ಟಿಮೇಳ’ ಧಾರಾವಾಹಿ ಹಿಂದಿಕ್ಕಿ ಮೂರನೇ ಸ್ಥಾನ ಪಡೆದುಕೊಂಡಿದೆ. ಟಿಆರ್‌ಪಿ ಏರಿಕೆ ಕಂಡಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.

ಗಟ್ಟಿಮೇಳ

‘ಸೀತಾ ರಾಮ’ ಬರುವುದಕ್ಕೂ ಮೊದಲು ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿಗಳ ನಗರ ಹಾಗೂ ಗ್ರಾಮೀಣ ಭಾಗದ ಟಿಆರ್​ಪಿ ಒಂದೇ ಇದ್ದರೂ ನಗರದ ಟಿಆರ್​ಪಿ ಆಧಾರಾದಲ್ಲಿ ‘ಗಟ್ಟಿಮೇಳ’ಕ್ಕೆ ಮೂರನೇ ಸ್ಥಾನ ನೀಡಬಹುದಿತ್ತು. ಆದರೆ ಈ ವಾರ ಅಮೃತಧಾರೆ ಧಾರಾವಾಹಿ ಬೀಟ್‌ ಮಾಡಿದೆ. ಟಿಆರ್‌ಪಿಯಲ್ಲಿ ಭಾರಿ ಕುಸಿತ ಕಂಡಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಸತ್ಯ

‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವ ಧಾರಾವಾಹಿ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ‘ಸತ್ಯ’ ಧಾರಾವಾಹಿ ಕೂಡ ಭರ್ಜರಿ ಟಿಆರ್​ಪಿ ಪಡೆದು ಮುಂದೆ ಸಾಗುತ್ತಿದೆ. ಅತ್ತೆ ಕೂಡ ಸತ್ಯಳನ್ನು ಪ್ರೀತಿಸಲು ಶುರು ಮಾಡಿದಂತಿದೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

Continue Reading
Advertisement
Ruturaj Gaikwad
ಕ್ರಿಕೆಟ್29 mins ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ43 mins ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

Dakshin Bharat Utsav
ಕರ್ನಾಟಕ45 mins ago

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

savings
ದೇಶ52 mins ago

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Mohammed Shami
ಕ್ರಿಕೆಟ್1 hour ago

Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

Vijayanagara DC Diwakar MS Visit and inspection of hospital in Hagaribommanahalli
ವಿಜಯನಗರ1 hour ago

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Neegilu Kavya Abhiyan programme at gubbi
ತುಮಕೂರು1 hour ago

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

T20 wordl cup venue
ಕ್ರಿಕೆಟ್1 hour ago

T20 World Cup : 2024 ಟಿ20 ವಿಶ್ವ ಕಪ್​ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ

sugar factory representatives and sugarcane growers meeting at DC office Karwar
ಉತ್ತರ ಕನ್ನಡ1 hour ago

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Vishwa Hindu Mahasabha Ganapati Utsav Committee Honorary President Sanjiva Achar spoke at the pressmeet
ಶಿವಮೊಗ್ಗ2 hours ago

Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ6 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌