Kaatera Movie: ಅಂಬಾರಿ ಹೊತ್ತ ಆನೆ ಅರ್ಜುನನಿಗೆ ಗೌರವ ಸಲ್ಲಿಸಿದ ʼಕಾಟೇರʼ ಚಿತ್ರ; ಭಾವುಕ ಸಾಲಿನಲ್ಲೇನಿದೆ? - Vistara News

ಸಿನಿಮಾ

Kaatera Movie: ಅಂಬಾರಿ ಹೊತ್ತ ಆನೆ ಅರ್ಜುನನಿಗೆ ಗೌರವ ಸಲ್ಲಿಸಿದ ʼಕಾಟೇರʼ ಚಿತ್ರ; ಭಾವುಕ ಸಾಲಿನಲ್ಲೇನಿದೆ?

Kaatera Movie: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ʼಕಾಟೇರʼ ಚಿತ್ರ ತೆರೆಕಂಡಿದೆ. ಸಿನಿಮಾ ತಂಡ ಆನೆ ಅರ್ಜುನನಿಗೆ ಈ ಚಿತ್ರವನ್ನು ಸಮರ್ಪಿಸಿದೆ.

VISTARANEWS.COM


on

kaatera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Darshan) ಅಭಿಮಾನಿಗಳಿಗೆ ವರ್ಷಾಂತ್ಯದಲ್ಲಿ ಹಬ್ಬದ ವಾತಾವರಣ. ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಒಂದಾದ ʼಕಾಟೇರʼ (Kaatera Movie) ಇಂದು (ಡಿಸೆಂಬರ್‌ 29) ತೆರೆಕಂಡಿದೆ. ರಾಜ್ಯಾದ್ಯಂತ ಈ ಸಿನಿಮಾಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ಮೊದಲ ದಿನದ ಶೋ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿದೆ. ಈ ಮಧ್ಯೆ ಸಿನಿಮಾ ತಂಡ ಇತ್ತೀಚೆಗಷ್ಟೇ ಕಾಡಾನೆ ದಾಳಿಯಿಂದ ಮೃತಪಟ್ಟ, 8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಆನೆ ಅರ್ಜುನನಿಗೆ (Elephant Arjuna) ಬೆಳ್ಳಿ ಪರದೆಯ ಮೇಲೆ ಸಲ್ಲಿಸಿದೆ. ಇದರಿಂದ ಹಲವರು ಭಾವುಕರಾಗಿದ್ದಾರೆ.

ದೊಡ್ಡ ಪರದೆಯ ಮೇಲೆ ಬಂದ ಅರ್ಜುನನಿಗೆ ಗೌರವ ಸಲ್ಲಿಸುವ ಸಾಲುಗಳನ್ನು ಕಂಡ ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರತಂಡ ಪರದೆಯ ಮೇಲೆ ದರ್ಶನ್ ಅವರು ಅರ್ಜುನನ ಪಕ್ಕ ನಿಂತಿರುವ ಫೋಟೊ ಹಾಕಿ, ಅದರ ಪಕ್ಕದಲ್ಲಿ, “ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ, ಕಣ್ಮರೆಯಾದ ದೈತ್ಯ ಮತ್ತು ದೈವ ಜೀವ ‘ಅರ್ಜುನ’. ಇದಕ್ಕೆ ನಮ್ಮ ಕಾಟೇರ ಚಿತ್ರ ಅರ್ಪಣೆ” ಎಂದು ಬರೆದುಕೊಂಡಿದೆ. ಆ ಮೂಲಕ ಹಲವರ ಮೆಚ್ಚುಗೆಗೆ ಪಾತ್ರವಾಗಿದ್ದ ಆನೆಗೆ ಗೌರವ ಸಲ್ಲಿಸಿದೆ. ದರ್ಶನ್‌ ಮೂಲತಃ ಪ್ರಾಣಿಪ್ರಿಯರು. ಇದೀಗ ಅವರ ಸಿನಿಮಾವನ್ನು ಅರ್ಜುನನಿಗೆ ಅರ್ಪಿಸಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ತರುಣ್ ಸುಧೀರ್​ ನಿರ್ದೇಶಿಸಿರುವ, ರಾಕ್​ಲೈನ್​ ವೆಂಕಟೇಶ್​ ನಿರ್ಮಾಣದ ‘ಕಾಟೇರ’ ಚಿತ್ರದ ಮೂಲಕ ಮಾಲಾಶ್ರೀ-ರಾಮು ದಂಪತಿ ಪುತ್ರಿ ಆರಾಧನಾ ರಾಮ್​ ಬಣ್ಣದ ಲೋಕಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು, ಟ್ರೈಲರ್‌ ಮೂಲಕ ಗಮನ ಸೆಳೆದಿರುವ ಅವರು ಉತ್ತಮ ನಾಯಕಿಯಾಗಿ ಬೆಳೆಯುವ ಭರವಸೆ ಮೂಡಿಸಿದ್ದಾರೆ. ಹಿರಿಯ ಕಲಾವಿದರಾದ ಶ್ರುತಿ, ಕುಮಾರ್‌ ಗೋವಿಂದ್‌ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ: Kaatera Movie: ಪ್ರಿ ಬುಕ್ಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್‌; ಟಿಕೆಟ್‌ಗಳು ಸೂಪರ್‌ ಸೋಲ್ಡೌಟ್‌!

ಪುಂಡಾನೆಯ ಜತೆ ಕಾದಾಡಿ ಮಡಿದಿದ್ದ ಅರ್ಜುನ

ಕೆಲವು ದಿನಗಳ ಹಿಂದೆ ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ನಡೆದ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜತೆ ಕಾದಾಡಿ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟಿತ್ತು. ಕಾಡಾನೆ ಸೆರೆ ಕಾರ್ಯಾಚರಣೆಗೆ 64 ವರ್ಷದ ಅರ್ಜುನನನ್ನು ಬಳಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅರ್ಜುನನಿಗೆ ವಯಸ್ಸಾದ ಕಾರಣಕ್ಕೆ ಅರ್ಜುನನಿಗೆ ಅಂಬಾರಿ ಹೋರುವುದನ್ನೇ ನಿಲ್ಲಿಸಲಾಗಿದೆ. ಆದರೂ 64 ವರ್ಷದ ಅರ್ಜುನನ್ನು ಕಾಡಿನ ಪುಂಡಾನೆ ಸೆರೆ ಕಾರ್ಯಾಚರಣೆಗೆ ಬಳಿಸರುವುದು ಕಾನೂನು ಬಾಹಿರ ಎಂದು ಅರಣ್ಯಾಧಿಕಾರಿಗಳ ವಿರುದ್ಧ ವನ್ಯಜೀವಿ ತಜ್ಞರು ಅಸಮಾಧಾನ ಹೊರಹಾಕಿದ್ದರು. ಬಳಿಕ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಇದೀಗ ಸರ್ಕಾರ ಹಾಸನ ಮತ್ತು ಮೈಸೂರಿನಲ್ಲಿ ಅರ್ಜುನನಿಗೆ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Kannada New Movie: ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ ಸುಧಾರಾಣಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ.

VISTARANEWS.COM


on

Kannada New Movie niveditha Shivarajkumar frefly cinema sudharani join
Koo

ಬೆಂಗಳೂರು: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ (Kannada New Movie) ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ ಸುಧಾರಾಣಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ.

ತಮ್ಮ ಪಾತ್ರದ ಬಗ್ಗೆ ಮಾತಾಡಿರುವ ಸುಧಾರಾಣಿ, ‘ಅಪ್ಪಾಜಿಯವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಹಾಗಾಗಿ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ಬಂದು ನಿಂತು ಹೋಗು ಅಂದ್ರೆ ನಾನು ತಯಾರಿದ್ದೇನೆ. ಏಕೆಂದರೆ ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದಂತ ಮಗು, ಇವತ್ತು ಅವಳು ಒಂದು ನಿರ್ಮಾಣ ಸಂಸ್ಥೆ ಶುರು ಮಾಡುತ್ತಿದ್ದಾಳೆ. ಅವಳು ನಿರ್ಮಾಪಕಿಯಾಗಿದ್ದಾಳೆ. ನನಗೆ ತುಂಬಾ ಖುಷಿ ಇದೆ. ಕಥೆಯಿಂದ ಹಿಡಿದು ಪ್ರೊಡಕ್ಷನ್ ವರೆಗೂ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ನಮ್ಮ ಕನ್ನಡದ ಕಲಾಭಿಮಾನಿಗಳು ಈ ಚಿತ್ರಕ್ಕೆ ಬೆಂಬಲ ನೀಡಬೇಕು. ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ನನ್ನ ಇಷ್ಟು ಚಿಕ್ಕ ಪಾತ್ರ ಕೇಳಬೇಕು ಅಂತಾ ಆದ್ರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿದ್ದ ಹುಮ್ಮಸ್ಸು. ಆಸಕ್ತಿ ನನಗೆ ಇಷ್ಟ ಆಯಿತು. ನಿರ್ದೇಶಕರಾಗಿ ನಟನೆಯೂ ಮಾಡುತ್ತಿರುವುದರಿಂದ ಎಲ್ಲರಿಗೂ ಅವರ ಮೊದಲ ಸಿನಿಮಾ ದೊಡ್ಡ ಬಜೆಟ್, ಮಲ್ಟಿಸ್ಟಾರ್ಸ್, ಆಕ್ಷನ್ ಸಿನಿಮಾ ಆಗಿರಬೇಕು ಅಂತಾ ಬಹುತೇಕರು ಯೋಚನೆ ಮಾಡುತ್ತಾರೆ. ಆದರೆ ಈ ವಿಚಾರದಲ್ಲಿ ಅವರು ವಿಭಿನ್ನ. ಸಂಬಂಧಗಳ ಬಗ್ಗೆ ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತುಕೊಂಡು, ನೋಡಿ ಇಷ್ಟವಾಗುವಂತ ಚಿತ್ರವನ್ನು ಮಾಡಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.

ಶಿವರಾಜಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ.

‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆಯುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಒಂದು ಹಾಡಿನ ಶೂಟಿಂಗ್ ಬಾಕಿ ಉಳಿಸಿಕೊಂಡಿದೆ.

Continue Reading

ಕರ್ನಾಟಕ

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Actor Darshan: ಶನಿವಾರ ಬೆಳಗ್ಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Actor Darshan

6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Continue Reading

Latest

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Sonakshi Sinha: ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಜೊತೆ ಹೊಸ ಬದುಕಿಗೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ ಈಗ ಪ್ರೆಗ್ನೆಂಟ್ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊ ತೆಗೆಯಲು ಪ್ರಯತ್ನಿಸಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sonakshi Sinha
Koo

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇತ್ತೀಚೆಗಷ್ಟೇ ತಮ್ಮ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ, ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಆಕೆ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ವ್ಯಕ್ತವಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Sonakshi Sinha

ಯಾಕೆಂದರೆ ಈ ಹಿಂದೆ ಮದುವೆಯಾದ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದು, ಈ ಬಗ್ಗೆ ಅನೇಕರು ಗಾಸಿಪ್ ಮಾಡಿದ್ದರು. ಹಾಗಾಗಿ ಸೋನಾಕ್ಷಿ ಅವರು ಕೂಡ ಇವರಂತೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ನೆಟ್ಟಿಜನ್ ಮನಸ್ಸಿನಲ್ಲಿ ಮೂಡಿದೆ ಎನ್ನಲಾಗಿದೆ. ಹಾಗಾಗಿ ನೆಟ್ಟಿಜನ್ ಸೋನಾಕ್ಷಿಯವರನ್ನು ಗರ್ಭಿಣಿ ಅವತಾರದಲ್ಲಿ ನೋಡಲು ಬಯಸುವುದಾಗಿ ತಿಳಿಸಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ.

Sonakshi Sinha

ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು.

ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಸ್ಯಾಂಡಲ್ ವುಡ್

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Dhanya Ramkumar: ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

VISTARANEWS.COM


on

Dhanya Ramkumar heroine in choukidaar cinema
Koo

ಬೆಂಗಳೂರು: ʻರಥಾವರʼ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್. ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್‌ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯರಾಮ್ ಕುಮಾರ್‌ಗೆ (Dhanya Ramkumar) ಪೃಥ್ವಿ ಅಂಬಾರ್‌ ಜೋಡಿಯಾಗಿ ನಟಿಸುತ್ತಿದ್ದಾರೆ.

ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ʻಚೌಕಿದಾರ್ʼ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೊಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ʻನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯ ಇತ್ತೀಚೆಗಷ್ಟೇ ʻಜಡ್ಜಮೆಂಟ್ʼ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ತರ್ ರಿಲೀಸ್ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.

ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿತ್ತು. ಚೌಕಿದಾರ್ ಸಿನಿಮಾಗೆ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದದರು. ಆದ್ರೆ ಡೈಲಾಗ್ ಕಿಂಗ್ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಕೊಟ್ಟಿಲ್ಲ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ ಮೂರನೇ ತಾರೀಖಿನಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

Continue Reading
Advertisement
US Presidential Election
ವಿದೇಶ7 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ10 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ10 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ21 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Actor Darshan
ಕರ್ನಾಟಕ40 mins ago

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Amarnath Yatra
ದೇಶ48 mins ago

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

BBMP Scam
ಬೆಂಗಳೂರು1 hour ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ1 hour ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ2 hours ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ2 hours ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌