Kabza Film: ಆಂಧ್ರ-ತೆಲಂಗಾಣ ವಿತರಣಾ ಹಕ್ಕು ಮಾರಾಟ: ಟಾಲಿವುಡ್‌ ನಟ ನಿತಿನ್ ಸಾಥ್‌ - Vistara News

ಸಿನಿಮಾ

Kabza Film: ಆಂಧ್ರ-ತೆಲಂಗಾಣ ವಿತರಣಾ ಹಕ್ಕು ಮಾರಾಟ: ಟಾಲಿವುಡ್‌ ನಟ ನಿತಿನ್ ಸಾಥ್‌

ನಿತಿನ್ ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಈ ವಿಷಯವನ್ನ ಹೇಳಿಕೊಂಡಿದ್ದಾರೆ. ಇದಕ್ಕೆ ಆರ್.ಚಂದ್ರು ಕೂಡ ಟ್ವಿಟರ್​​ನಲ್ಲಿ ರಿಪ್ಲೈ ಮಾಡಿದ್ದಾರೆ. ನನ್ನ ಕನಸಿನ ಪ್ರೋಜೆಕ್ಟ್ ದೊಡ್ಡಮಟ್ಟದಲ್ಲಿ ತೆಲುಗು ಪ್ರೇಕ್ಷಕರಿಗೂ ಕೊಡ್ತಿರುವುದು ಖುಷಿ ತಂದಿದೆ. ಇದನ್ನು ಸಾಕಾರಗೊಳಿಸಲು ಕೈ ಜೋಡಿಸಿದ ನಟ ನಿತಿನ್ ಅವರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ.

VISTARANEWS.COM


on

Kabza Film Andhra-Telangana distribution rights sold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಪ್ಯಾನ್‌ ಇಂಡಿಯಾ ಸಿನಿಮಾ ಕಬ್ಜ (Kabza Film) ಪುನೀತ್ ರಾಜ್​ಕುಮಾರ್ ಜನ್ಮದಿನ ಮಾರ್ಚ್​-17ರಂದು ಬಿಡುಗಡೆಗೊಳ್ಳುತ್ತಿದೆ. ಇದೀಗ ಟಾಲಿವುಡ್‌ ನಟ-ನಿರ್ಮಾಪಕ ನಿತಿನ್ ಅವರು ಆರ್.ಚಂದ್ರು ಅವರಿಗೆ ಸಾಥ್ ಕೊಟ್ಟಿದ್ದಾರೆ. ತಮ್ಮ ರುಚಿರಾ ಎಂಟರ್ಟೈನ್ಮೆಂಟ್​ ಮೂಲಕ ಚಿತ್ರ ವಿತರಿಸಲಿದ್ದಾರೆ. ಆಂಧ್ರ ಮತ್ತು ತೆಲಂಗಾಣದ ವಿತರಣಾ ಹಕ್ಕು ಮಾರಾಟವಾಗಿದೆ. ತೆಲುಗಿನ ಖ್ಯಾತ ನಟ ನಿತಿನ್ (Nitin) ಈ ಸಿನಿಮಾವನ್ನು ಎರಡೂ ರಾಜ್ಯಗಳಿಗೆ ವಿತರಣೆ ಮಾಡುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. 

ನಿತಿನ್ ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಈ ವಿಷಯವನ್ನ ಹೇಳಿಕೊಂಡಿದ್ದಾರೆ.ಇದಕ್ಕೆ ಆರ್.ಚಂದ್ರು ಕೂಡ ಟ್ವಿಟರ್​​ನಲ್ಲಿ ರಿಪ್ಲೈ ಮಾಡಿದ್ದಾರೆ. ನನ್ನ ಕನಸಿನ ಪ್ರೊಜೆಕ್ಟ್ ದೊಡ್ಡಮಟ್ಟದಲ್ಲಿ ತೆಲುಗು ಪ್ರೇಕ್ಷಕರಿಗೂ ಕೊಡ್ತಿರುವುದು ಖುಷಿ ತಂದಿದೆ. ಇದನ್ನ ಸಾಕಾರಗೊಳಿಸಲು ಕೈ ಜೋಡಿಸಿದ ನಟ ನಿತಿನ್ ಅವರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದಿದ್ದಾರೆ.

ಇದನ್ನೂ ಓದಿ: Kabzaa Film | ʻಕಬ್ಜʼ ಚಿತ್ರದ ಹಿಂದಿ ಅವತರಣಿಕೆ ಹಕ್ಕುಗಳು ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ತೆಕ್ಕೆಗೆ

ಇದನ್ನೂ ಓದಿ: Kannada New Movie: ಮಾಲಾಶ್ರೀ-ಭೂಮಿ ಶೆಟ್ಟಿ ಅಭಿನಯದ ಕಾದಂಬರಿ ಆಧಾರಿತ ‘ಕೆಂಡದ ಸೆರಗು’ ಸಿನಿಮಾ ಟೀಸರ್ ರಿಲೀಸ್

ಮಾರ್ಚ್​-17 ರಂದು ಕನ್ನಡದ ಕಬ್ಜ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹೈದರಾಬಾದ್​ನಲ್ಲಿ ಫೆಬ್ರವರಿ-4 ರಂದು ದೊಡ್ಡಮಟ್ಟದಲ್ಲಿಯೇ ಲಿರಿಕಲ್ ವಿಡಿಯೋ ರಿಲೀಸ್ ಆಗುತ್ತಿದೆ. ಮುಂಬೈಯಲ್ಲಿ ಮಾರ್ಚ್​-3 ರಂದು ಇವೆಂಟ್​ ಮೂಲಕ ಚಿತ್ರದ ಟ್ರೈಲರ್ ಕೂಡ ರಿಲೀಸ್ ಆಗುತ್ತಿದೆ ಎನ್ನಲಾಗಿದೆ. ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Madhuri Dixit: ದಿಲ್ ತೋ ಪಾಗಲ್ ಹೈʼ ಮತ್ತು ʻದೇವದಾಸ್‌ʼನಲ್ಲಿನ ಅವರ ಅಭಿನಯಕ್ಕೆ ಮನಸೋತದವರೇ ಇಲ್ಲ. ಮಾಧುರಿ ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಮನರಂಜನಾ ಉದ್ಯಮಕ್ಕೆ ಅವರ ಕೊಡುಗೆಗಳು ಅಪಾರ. ಅವರ ನಟನೆ ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದೆ. 

VISTARANEWS.COM


on

Madhuri Dixit birthday extend wishes
Koo

ಬೆಂಗಳೂರು: ಇಂದು ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್ (Madhuri Dixit) ಅವರಿಗೆ 57ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಪತಿ ಡಾ ಶ್ರೀರಾಮ್ ನೆನೆ, ನಟಿ ಕಾಜೋಲ್ ಮತ್ತು ಚಲನಚಿತ್ರ ನಿರ್ಮಾಪಕಿ ಫರಾ ಖಾನ್ ಕುಂದರ್ ಸೇರಿದಂತೆ ಅನೇಕ ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಸೋಷಿಯಲ್‌ ಮೀಡಿಯಾ ಮೂಲಕ ವಿಶ್‌ ಮಾಡಿದ್ದಾರೆ.

ಡಾ ಶ್ರೀರಾಮ್ ನೆನೆ ಅವರು ಪತ್ನಿ ಮಾಧುರಿ ಜತೆ ಇರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ‘ಹ್ಯಾಪಿ ಬರ್ತ್‌ಡೇ ಲವ್’ ಎಂಬ ಕ್ಯಾಪ್ಷನ್‌ ಕೊಟ್ಟಿದ್ದಾರೆ. ʻʻಪದಗಳನ್ನು ವ್ಯಕ್ತಪಡಿಸಲು ಸಾಧ್ಯವಾಗದ ರೀತಿಯಲ್ಲಿ ನೀವು ನಮ್ಮ ಜೀವನವನ್ನು ಬೆಳಗಿಸುತ್ತಿದ್ದೀರಿʼʼಎಂದು ಶ್ರೀರಾಮ್ ನೆನೆ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಮಾಧುರಿಯೊಂದಿಗೆ ವಿಶೇಷ ಬಾಂಧವ್ಯವನ್ನು ಹಂಚಿಕೊಂಡಿರುವ ಕಾಜೋಲ್, ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ʻʻಡ್ಯಾನ್ಸಿಂಗ್ ಕ್ವೀನ್‌ಗೆ ಜನ್ಮದಿನದ ಶುಭಾಶಯಗಳುʼʼಎಂದು ಕಾಜೋಲ್‌ ಟ್ವೀಟ್‌ ಮಾಡಿದ್ದಾರೆ.

ಫರಾ ಖಾನ್ ಕುಂದರ್ ಮಾಧುರಿ ಮತ್ತು ಅವರ ಪತಿಯೊಂದಿಗೆ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದಾರೆ. “ಜನ್ಮದಿನದ ಶುಭಾಶಯಗಳು ಪ್ರಿಯ ಮಾಧುರಿʼʼಎಂದು ಬರೆದುಕೊಂಡಿದ್ದಾರೆ.

ದಿಲ್ ತೋ ಪಾಗಲ್ ಹೈʼ ಮತ್ತು ʻದೇವದಾಸ್‌ʼನಲ್ಲಿನ ಅವರ ಅಭಿನಯಕ್ಕೆ ಮನಸೋತದವರೇ ಇಲ್ಲ. ಮಾಧುರಿ ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಮನರಂಜನಾ ಉದ್ಯಮಕ್ಕೆ ಅವರ ಕೊಡುಗೆಗಳು ಅಪಾರ. ಅವರ ನಟನೆ ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದೆ. 

ಇದನ್ನೂ ಓದಿ: Madhuri Dixit: ಲೈಂಗಿಕ ಕಿರುಕುಳ ದೃಶ್ಯದಲ್ಲಿ ನಟಿಸಲಾರೆ ಎಂದು ಗೋಳೋ ಎಂದು ಅತ್ತಿದ್ದ ಮಾಧುರಿ ದೀಕ್ಷಿತ್!

ಮಾಧುರಿ ದೀಕ್ಷಿತ್‌ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ:

  1. – ಮಾಧುರಿ ದೀಕ್ಷಿತ್‌ ಅವರ ಮೂಲ ಹೆಸರು ಮಾಧುರಿ ಶಂಕರ್ ದೀಕ್ಷಿತ್.
  2. – ಮರಾಠ ಕುಟುಂಬದಲ್ಲಿ ಜನಿಸಿದರು.
  3. – ಮಾಧುರಿ ಅವರ ತಂದೆ ಶಂಕರ್ ದೀಕ್ಷಿತ್ ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದರು.
  4. – ತಾಯಿ ಸ್ನೇಹಲತಾ ದೀಕ್ಷಿತ್ ಗೃಹಿಣಿಯಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ಇಹಲೋಕ ತ್ಯಜಿಸಿದ್ದಾರೆ.
  5. – ಮಾಧುರಿ ದೀಕ್ಷಿತ್‌ ಅವರಿಗೆ ಇಬ್ಬರು ಅಕ್ಕಂದಿರು. ರೂಪಾ ಮತ್ತು ಭಾರತಿ.. ಒಬ್ಬ ಕಿರಿಯ ಸಹೋದರ ಅಜಿತ್ ಇದ್ದಾರೆ.
  6. – ಅವರು ಮುಂಬೈನ ಡಿವೈನ್ ಚೈಲ್ಡ್ ಹೈಸ್ಕೂಲ್‌ನಲ್ಲಿ ವ್ಯಾಸಂಗ ಮಾಡಿದ್ದರು. ಅವರು ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಮೈಕ್ರೊಬಯಾಲಜಿ ಶಿಕ್ಷಣವನ್ನು ಪಡೆದರು.
  7. – ನಟನೆ ವೃತ್ತಿಗೆ ಹೋಗಲು ನಿರ್ಧರಿಸುವ ಮೊದಲು ಮೈಕ್ರೋಬಯಾಲಜಿಸ್ಟ್ ಆಗಲು ಮಾಧುರಿ ಬಯಸಿದ್ದರು.
  8. – ತಮ್ಮ ಮೂರನೇಯ ವಯಸ್ಸಿನಲ್ಲಿ ಶಾಸ್ತ್ರೀಯ ನೃತ್ಯ ಪ್ರಕಾರವಾದ ಕಥಕ್ ಕಲಿಯಲು ಪ್ರಾರಂಭಿಸಿದರು. ಬಳಿಕ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಅವರ ಬಳಿ ತರಬೇತಿ ಪಡೆದರು.
  9. – 1984ರಲ್ಲಿ ʻಅಬೋಧ್ʼ (Abodh) ಸಿನಿಮಾ ಮೂಲಕ ನಟನೆಯನ್ನು ಪ್ರಾರಂಭಿಸಿದರು.
  10. – 1988ರ ʻತೇಜಾಬ್ʼ (Tezaab) ಚಲನಚಿತ್ರದಲ್ಲಿ ಮಾಧುರಿ ದೀಕ್ಷಿತ್ ಅವರ ಪಾತ್ರ ಕಮರ್ಷಿಯಲ್‌ ಆಗಿ ಮತ್ತು ವಿಮರ್ಶಾತ್ಮಕವಾಗಿ ಭಾರಿ ಯಶಸ್ಸನ್ನು ಕಂಡಿತು.
  11. – 1992ರ ʻಬೇಟಾʼ ಚಲನಚಿತ್ರದ `ಧಕ್ ಧಕ್ ಕರ್ನೆ ಲಗಾ’ (Dhak Dhak Karne Laga) ಹಾಡಿನ ಯಶಸ್ಸಿನ ನಂತರ ‘ಧಕ್ ಧಕ್’ ಹುಡುಗಿ ಎಂದು ಅಭಿಮಾನಿಗಳು ಕರೆಯಲಾರಂಭಿಸಿದರು.
  12. – ಮಾಧುರಿ ದೀಕ್ಷಿತ್ ಅತ್ಯುತ್ತಮ ನಟನೆಗಾಗಿ ನಾಲ್ಕು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ.
  13. – ತಮ್ಮ ನಟನೆ, ನೃತ್ಯ ಮತ್ತು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
  14. – ಮಾಧುರಿ ದೀಕ್ಷಿತ್ ಅವರು ಹಮ್ ಆಪ್ಕೆ ಹೈ ಕೌನ್! (Hum Aapke Hain Koun), ದಿಲ್ ತೋ ಪಾಗಲ್ ಹೈ (Dil To Pagal Hai), ಮತ್ತು ದೇವದಾಸ್ (Devdas)ನಂತಹ ಚಲನಚಿತ್ರಗಳಲ್ಲಿ ತಮ್ಮ ವಿಶೇಷ ಡ್ಯಾನ್ಸ್‌ ಮತ್ತು ಅಭಿನಯದಿಂದಾಗಿ ಹೆಸರುವಾಸಿಯಾಗಿದ್ದಾರೆ.
  15. – ರಿಯಾಲಿಟಿ ಡ್ಯಾನ್ಸ್ ಶೋ ʻಜಲಕ್ ದಿಖ್ಲಾ ಜಾʼ(Jhalak Dikhhla Jaa)ದ ಹಲವಾರು ಸೀಸನ್‌ಗಳಲ್ಲಿ ಅವರು ತೀರ್ಪುಗಾರರಾಗಿದ್ದರು.
  16. – ಮಾಧುರಿ ದೀಕ್ಷಿತ್ ಕ್ಲಾಸಿಕಲ್‌ ಸಿಂಗರ್‌ ಆಗಿದ್ದು, ಅವರ ಹಲವಾರು ಚಲನಚಿತ್ರಗಳಲ್ಲಿ ಹಾಡಿದ್ದಾರೆ.
  17. – ನಟಿ ವರ್ಣಚಿತ್ರಕಾರರಾಗಿದ್ದಾರೆ ಮತ್ತು ಹಲವಾರು ಪ್ರದರ್ಶನಗಳಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ.
  18. – ಮಾಧುರಿ ದೀಕ್ಷಿತ್ 1999ರಲ್ಲಿ ಹೃದಯ ರಕ್ತನಾಳದ ಶಸ್ತ್ರಚಿಕಿತ್ಸಕ ಡಾ. ಶ್ರೀರಾಮ್ ನೆನೆ ಅವರನ್ನು ವಿವಾಹವಾದರು.
  19. – ದಂಪತಿಗೆ ಅರಿನ್ ಮತ್ತು ರಿಯಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.
  20. – ಮಾಧುರಿ ದೀಕ್ಷಿತ್ ತಮ್ಮ ಮದುವೆಯ ನಂತರ ನಟನೆಯಿಂದ ದೂರ ಉಳಿದು ತಮ್ಮ ಪತಿಯೊಂದಿಗೆ ಅಮೆರಿಕಾಕ್ಕೆ ತೆರಳಿದರು.
  21. – 2011ರಲ್ಲಿ ಭಾರತಕ್ಕೆ ಮರಳಿದರು. ಮತ್ತೆ ನಟನಾ ವೃತ್ತಿಯನ್ನು ಪುನರಾರಂಭಿಸಿದರು.
  22. – ಅವರು ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಸಾಮಾಜಿಕ ಕಾರಣಗಳಲ್ಲಿ ತೊಡಗಿಸಿಕೊಂಡಿದ್ದಾರೆ.
  23. – ಮಾಧುರಿ ದೀಕ್ಷಿತ್ ಅವರು ಕೋಕಾ-ಕೋಲಾ, ಮ್ಯಾಗಿ ಮತ್ತು ಓಲೆ ಸೇರಿದಂತೆ ಹಲವಾರು ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿದ್ದಾರೆ.
  24. – ಹಲವಾರು ವಿಡಿಯೊ ಆಲ್ಬಂಗಳಲ್ಲಿ ಕಾಣಿಸಿಕೊಂಡಿದ್ದಾರೆ.
  25. – ಮಾಧುರಿಯವರ ಚಿತ್ರ ʻಕೊಯ್ಲಾʼ ಚಿತ್ರೀಕರಣಗೊಂಡ ಅರುಣಾಚಲ ಪ್ರದೇಶದ ಸಂಗೆಸ್ಟಾರ್ ಸರೋವರವು ಅವರ ಹೆಸರಿನಿಂದ ಜನಪ್ರಿಯವಾಗಿದೆ.
  1. – ಅಂಜಾಂ ಚಿತ್ರದಲ್ಲಿ ಸೇಡು ತೀರಿಸಿಕೊಳ್ಳುವ ವಿಧವೆಯ ಪಾತ್ರ ಸೇರಿದಂತೆ ಅನೇಕ ಚಾಲೆಂಜಿಂಗ್‌ ಪಾತ್ರಗಳನ್ನು ಅವರು ನಿಭಾಯಿಸಿದ್ದಾರೆ.
  2. – ಮಾಧುರಿ ದೀಕ್ಷಿತ್ ಅವರು 2008ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಟ್ಟಿದ್ದಾರೆ.
  3. – ಟೈಮ್, ನ್ಯೂಸ್‌ವೀಕ್ ಮತ್ತು ಪೀಪಲ್ ಸೇರಿದಂತೆ ಹಲವಾರು ನಿಯತಕಾಲಿಕೆಗಳ ಮುಖಪುಟಗಳಲ್ಲಿ ಕಾಣಿಸಿಕೊಂಡಿದ್ದಾರೆ.
  4. – ಮಾಧುರಿ ದೀಕ್ಷಿತ್ ತಮ್ಮ ಸ್ಟೈಲ್ ಸೆನ್ಸ್‌ಗೆ ಹೆಸರುವಾಸಿಯಾಗಿದ್ದಾರೆ.
  5. – ಈ ನಟಿ ಕೆಲವು ಸಮಯದ ಹಿಂದೆ ʻದಿ ಫಿಲ್ಮ್ ಸ್ಟಾರ್ʼ ಎಂಬ ಶೀರ್ಷಿಕೆಯ ತಮ್ಮ ಚೊಚ್ಚಲ ಸಂಗೀತ ಆಲ್ಬಂ ಘೋಷಿಸಿದ್ದರು.
  6. – ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್, ಮತ್ತು ಸಂಜಯ್ ದತ್ ಸೇರಿದಂತೆ ಬಾಲಿವುಡ್‌ನ ಕೆಲವು ಪ್ರಸಿದ್ಧ ನಟರೊಂದಿಗೆ ಮಾಧುರಿ ತೆರೆ ಹಂಚಿಕೊಂಡಿದ್ದಾರೆ.
  7. – ಯಶ್ ಚೋಪ್ರಾ ಮತ್ತು ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಬಾಲಿವುಡ್‌ನ ಕೆಲವು ಪ್ರಸಿದ್ಧ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ.
  8. – ʻದಿಲ್ ತೋ ಪಾಗಲ್ ಹೈʼ ಮತ್ತು ʻದೇವದಾಸ್ʼ ಚಿತ್ರಗಳಲ್ಲಿನ ಮಾಧುರಿಯ ಅಭಿನಯವನ್ನು ಅವರ ವೃತ್ತಿಜೀವನದಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ.
  9. – 2007ರಲ್ಲಿ, ʻಆಜಾ ನಾಚ್ಲೆʼ ಚಿತ್ರದ ಮೂಲಕ ಬಾಲಿವುಡ್‌ಗೆ ಮರಳಿದರು.
  10. – ಮಾಧುರಿ ದೀಕ್ಷಿತ್ ಅವರು ʻಏಕ್ ದೋ ತೀನ್ʼ, ʻಚೋಲಿ ಕೆ ಪೀಚೆʼ, ʻಧಕ್ ಧಕ್ ಕರ್ನೆ ಲಗಾ;, ಮತ್ತುʻಕೇ ಸೆರಾ ಸೆರಾʼ ಮುಂತಾದ ಹಾಡುಗಳಲ್ಲಿ ತಮ್ಮ ನೃತ್ಯಕ್ಕೆ ಹೆಸರುವಾಸಿಯಾಗಿದ್ದಾರೆ.
  11. – ಮಾಧುರಿ ಒಟ್ಟು 14 ಬಾರಿ ಫಿಲ್ಮ್‌ಫೇರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ನಟಿ 80ಕ್ಕೂ ಹೆಚ್ಚು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
  12. – ಜನಪರ ಕಾರ್ಯಗಳು ಸೇರದಂತೆ ಹಲವಾರು ಚಾರಿಟೇಬಲ್‌ ಸಂಸ್ಥೆಗಳೊಂದಿಗೆ ನಂಟು ಹೊಂದಿದ್ದಾರೆ.
  13. – ಅವರು ಭಾರತದಲ್ಲಿ ಹೆಣ್ಣು ಮಕ್ಕಳ ಕಲ್ಯಾಣವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ʻಬೇಟಿ ಬಚಾವೋ ಬೇಟಿ ಪಢಾವೋʼ ಅಭಿಯಾನದ ರಾಯಭಾರಿಯೂ ಹೌದು.
  14. – ʻಡ್ಯಾನ್ಸ್ ವಿತ್ ಮಾಧುರಿʼ ಎಂಬ ತಮ್ಮದೇ ಆದ ನೃತ್ಯ ಸಿರೀಸ್‌ ಹೊಂದಿದ್ದಾರೆ.
  15. – ರಣಬೀರ್ ಕಪೂರ್ ಅವರ ʻಯೇ ಜವಾನಿ ಹೈ ದೀವಾನಿʼಯಲ್ಲಿ ಮಾಧುರಿ ಅತಿಥಿ ಪಾತ್ರವನ್ನು ಹೊಂದಿದ್ದರು.
  16. – ತೇಜಾಬ್, ಬೇಟಾ, ಮತ್ತು ರಾಮ್ ಲಖನ್‌ನಂತಹ ಚಿತ್ರಗಳಲ್ಲಿ ಅನಿಲ್ ಕಪೂರ್ ಜತೆ ತೆರೆ ಹಂಚಿಕೊಂಡಿದ್ದರು. ಈ ಜೋಡಿ 90ರ ದಶಕದಲ್ಲಿ ಅತ್ಯಂತ ಜನಪ್ರಿಯವಾಗಿತ್ತು.
  17. – ದೇವದಾಸ್‌ ಸಿನಿಮಾದಲ್ಲಿ 30 ಕೆಜಿ ತೂಕದ ಡ್ರೆಸ್‌ ಧರಿಸಿದ್ದರು ಮಾಧುರಿ. ಚಿತ್ರೀಕರಣದ ಸಮಯದಲ್ಲಿ ಡಿಸೈನರ್ ನೀತಾ ಲುಲ್ಲಾ ಮಾಧುರಿಗಾಗಿ ಕಾಸ್ಟ್ಯೂಮ್ ಮಾಡಿ ವಿನ್ಯಾಸಗೊಳಿಸಿದರು. ನಟಿ ಈ ಸವಾಲನ್ನು ಸಲೀಸಾಗಿ ನಿಭಾಯಿಸಿದ್ದರು.
  18. – ಮಾಧುರಿ ಅವರು ಮಿಥುನ್ ಚಕ್ರವರ್ತಿ, ಆದಿತ್ಯ ಪಾಂಚೋಲಿ, ಸದಾಶಿವ್ ಅಮ್ರಾಪುರ್ಕರ್, ಶಕ್ತಿ ಕಪೂರ್ ಮತ್ತು ಪರೇಶ್ ರಾವಲ್ ಅವರೊಂದಿಗೆ ಮಹಾ ಪಾಪ (1990) ಎಂಬ ಶೀರ್ಷಿಕೆಯ ಚಲನಚಿತ್ರದಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ತೆರೆಗೆ ಬರಲೇ ಇಲ್ಲ.
  19. ​​- ವಿಜಯ್ ಆನಂದ್ ನಿರ್ದೇಶನದ ʻಜನ ನಾ ದಿಲ್ ಸೆ ದೂರ್ʼ ಚಿತ್ರಕ್ಕೆ ಮಾಧುರಿ ಸಹಿ ಹಾಕಿದ್ದರು, ಇದರಲ್ಲಿ ದೇವ್ ಆನಂದ್ ಮತ್ತು ಇಂದರ್ ಕುಮಾರ್ ಸಹ-ನಟರಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಶೂಟಿಂಗ್ ಪ್ರಾರಂಭವಾಗುವ ಮೊದಲು ಅವರು ಯೋಜನೆಯನ್ನು ತೊರೆಯಲು ನಿರ್ಧರಿಸಿದರು.
  20. – ಮಾಧುರಿ 1984 ಮತ್ತು 1988ರ ನಡುವೆ ಸಿನಿಮಾದಲ್ಲಿ ಸತತ ಒಂಬತ್ತು ಸೋಲುಗಳನ್ನು ಕಂಡರು.
  21. – ಅವರು ತಮ್ಮದೇ ಆದ ಆನ್‌ಲೈನ್ ನೃತ್ಯ ಅಕಾಡೆಮಿಯನ್ನು ಹೊಂದಿದ್ದಾರೆ. ಬಳಕೆದಾರರು ತಮ್ಮ ನೃತ್ಯ ವಿಡಿಯೊಗಳನ್ನು ಅಪ್‌ಲೋಡ್ ಮಾಡಲು, ವಿವಿಧ ನೃತ್ಯ ಶೈಲಿಗಳನ್ನು ಕಲಿಯಲು ಮತ್ತು ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳಲು ಈ ಅಕಾಡೆಮಿ ಸಹಾಯ ಮಾಡುತ್ತದೆ.
  22. – 2014ರಲ್ಲಿ, ಮಕ್ಕಳ ಮತ್ತು ಸಮಾನ ಮಹಿಳಾ ಹಕ್ಕುಗಳ (Child and Equal Women’s Rights) ರಾಯಭಾರಿಯಾಗಿ ನೇಮಕಗೊಂಡರು.
  23. – 1990ರ ದಶಕದಲ್ಲಿ, ಮಾಧುರಿ ಅವರು ಅತಿ ಹೆಚ್ಚು ಗಳಿಕೆ ಕಂಡ ಮಹಿಳಾ ನಟಿ ಎಂಬ ಹೆಗ್ಗಳಿಕೆಯನ್ನು ಪಡೆದರು. ʻಹಮ್ ಆಪ್ಕೆ ಹೈ ಕೌನ್ʼ ಚಿತ್ರದಲ್ಲಿನ ಅವರ ಪಾತ್ರಕ್ಕಾಗಿ 2.7 ಕೋಟಿ ರೂ. ಗಳಿಸಿದ್ದಾರೆ. ಇದು ಸಹನಟ ಸಲ್ಮಾನ್ ಖಾನ್ ಅವರಿಗಿಂತ ಪಡೆದ ಸಂಭಾವನೆಗಿಂತ ಅಧಿಕವಾಗಿತ್ತು!
  24. – ಮಾಧುರಿಯನ್ನು ಅಪಾರವಾಗಿ ಮೆಚ್ಚಿದ ಜೆಮ್‌ಶೆಡ್‌ಪುರದ ಅಭಿಮಾನಿಯೊಬ್ಬರು, ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಸರ್ಕಾರಕ್ಕೆ ವಿನಂತಿ ಮಾಡಿದ್ದರು.
  25. – ಹೆಸರಾಂತ ಕಲಾವಿದ ದಿವಂಗತ ಎಂಎಫ್ ಹುಸೇನ್ ಮಾಧುರಿ ಅವರ ನಟನೆಗೆ ಮನಸೋತುʻ ಹಮ್ ಆಪ್ಕೆ ಹೈ ಕೌನ್ʼ ಸಿನಿಮಾವನ್ನು 67 ಬಾರಿ ವೀಕ್ಷಿಸಿದ್ದರು. ಅವರಿಗೆ ಈ ನಟಿಯೇ ಸ್ಫೂರ್ತಿಯಾಗಿದ್ದರು. ಈ ಮೂಲಕ ಮಾಧುರಿ ಮತ್ತು ಶಾರುಖ್ ಖಾನ್ ಅವರನ್ನು ಒಳಗೊಂಡ ಗಜ ಗಾಮಿನಿ (2000) ಎಂಬ ಚಲನಚಿತ್ರವನ್ನು ಹುಸೇನ್‌ ನಿರ್ಮಿಸಲು ಕಾರಣವಾಯಿತು.
  26. – ಮಾಧುರಿ ʻದಿ ಫೇಮ್ ಗೇಮ್‌ʼ (The Fame Game)ನೊಂದಿಗೆ OTT ಪದಾರ್ಪಣೆ ಮಾಡಿದರು. ಅವರ ಅಭಿನಯಕ್ಕಾಗಿ ಫಿಲ್ಮ್‌ಫೇರ್ OTT ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡರು.
  27. – ಕಥಕ್ ನರ್ತಕಿಯಾಗಿರುವ ಮಾಧುರಿ, ಕಥಕ್ ಮಾಂತ್ರಿಕ ಪಂಡಿತ್ ಬಿರ್ಜು ಮಹಾರಾಜ್ ಅವರಿಂದ ನೃತ್ಯ ಸಂಯೋಜನೆಯನ್ನು ಪಡೆದ ಏಕೈಕ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
  28. – ಮಾಧುರಿ ಕೊನೆಯದಾಗಿ ಅಮೆಜಾನ್ ಪ್ರೈಮ್ OTT ಸಿರೀಸ್‌ ʻಮಜಾ ಮಾʼ (Maja Maa)ದಲ್ಲಿ ಕಾಣಿಸಿಕೊಂಡರು. ಅಲ್ಲಿ ಅವರು ತಾಯಿಯ ಪಾತ್ರವನ್ನು ನಿರ್ವಹಿಸಿದ್ದಾರೆ.
Continue Reading

ಸಿನಿಮಾ

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

Cannes 2024: 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.ಮಲಯಾಳಂ ಚಲನಚಿತ್ರ ʻಆಲ್ ವಿ ಇಮ್ಯಾಜಿನ್ ಆಸ್ ಲೈಟ್ʼ (All We Imagine As Light) ಪ್ರದರ್ಶನಗೊಳ್ಳಲಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ಈ ಚಿತ್ರ ಮೇ 23 ರಂದು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.ಕನ್ನಡ ಕಿರುಚಿತ್ರ ʻಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋʼ ( Sunflowers Were The First Ones To Know) ಲಾ ಸಿನೆಫ್ ವಿಭಾಗದ ಅಡಿಯಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶಿಸುತ್ತಿದೆ.

VISTARANEWS.COM


on

Cannes 2024 seven Indian Films To Be Screened
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಮಲಯಾಳಂ ಚಲನಚಿತ್ರ ʻಆಲ್ ವಿ ಇಮ್ಯಾಜಿನ್ ಆಸ್ ಲೈಟ್ʼ (All We Imagine As Light) ಪ್ರದರ್ಶನಗೊಳ್ಳಲಿದೆ. ಪಾಯಲ್ ಕಪಾಡಿಯಾ ನಿರ್ದೇಶನದ ಈ ಚಿತ್ರ ಮೇ 23ರಂದು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ. ಆಸ್ಪತ್ರೆಯಲ್ಲಿ ನರ್ಸ್‌ಗಳಾಗಿ ಸೇವೆ ಸಲ್ಲಿಸುವ ಇಬ್ಬರು ರೂಮ್‌ಮೇಟ್‌ಗಳ ಕಥೆ ಇದರಲ್ಲಿದೆ.

ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನಗೊಳ್ಳಲಿರುವ ಮತ್ತೊಂದು ಚಿತ್ರ ʻಸಂತೋಷ್ʼ (Santosh). ಈ ಚಿತ್ರವನ್ನು ಸಂಧ್ಯಾ ಸೂರಿ ನಿರ್ದೇಶಿಸಿದ್ದಾರೆ. ಮತ್ತು 2024 ರ ಕ್ಯಾನೆಸ್ ಚಲನಚಿತ್ರೋತ್ಸವದ ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ಪ್ರದರ್ಶಿಸಲಾಗುವುದು. ಈ ಸಿನಿಮಾದಲ್ಲಿ ಸಹನಾ ಗೋಸ್ವಾಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವಿಧವೆಯಾಗಿರುವ ಮಹಿಳೆ ತನ್ನ ಪತಿಯ ಕಾನ್‌ಸ್ಟೆಬಲ್ ಕೆಲಸವನ್ನು ಪಡೆದಾಗ ಏನೆಲ್ಲ ಸವಾಲು ಎದುರಿಸುತ್ತಾಳೆ ಎಂಬ ಕಥೆಯಿದೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಕನ್ನಡ ಕಿರುಚಿತ್ರ ʻಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋʼ ( Sunflowers Were The First Ones To Know) ಲಾ ಸಿನೆಫ್ ವಿಭಾಗದ ಅಡಿಯಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶಿಸುತ್ತಿದೆ. ಈ ಚಿತ್ರವನ್ನು ಎಫ್‌ಟಿಐಐ ವಿದ್ಯಾರ್ಥಿ ಚಿದಾನಂದ್ ನಾಯಕ್ ನಿರ್ದೇಶಿಸಿದ್ದಾರೆ.

1976ರಲ್ಲಿ ಬಿಡುಗಡೆಯಾದ ಸ್ಮಿತಾ ಪಾಟೀಲ್ ಮತ್ತು ನಾಸಿರುದ್ದೀನ್ ಶಾ ಅವರ ಚಲನಚಿತ್ರ ʻಮಂಥನ್ʼ (In Retreat) ಕೂಡ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಗಿರೀಶ್ ಕಾರ್ನಾಡ್ ಮತ್ತು ಕುಲಭೂಷಣ್ ಕರಬಂದ ಕೂಡ ನಟಿಸಿದ್ದಾರೆ. ನಟಿ ರಾಧಿಕಾ ಆಪ್ಟೆ ಅಭಿನಯದ ʻಸಿಸ್ಟರ್ ಮಿಡ್‌ನೈಟ್ʼ ಕೂಡ ಈ ವರ್ಷ ಫಿಲ್ಮ್ ಫೆಸ್ಟಿವಲ್‌ನಲ್ಲಿ ಡೈರೆಕ್ಟರ್ಸ್ ಫೋರ್ಟ್‌ನೈಟ್ ವಿಭಾಗದಲ್ಲಿ ಆಯ್ಕೆಯಾಗಿದೆ.

ಸೈಯದ್ ಮೈಸಮ್ ಅಲಿ ಷಾ ನಿರ್ದೇಶನದ ʻಇನ್ ರಿಟ್ರೀಟ್ʼ (In Retreat) ಸಿನಿಮಾ ಸ್ವತಂತ್ರ ಸಿನಿಮಾ ವಿಭಾಗದಲ್ಲಿ ಪ್ರದರ್ಶನ ಕಾಣುತ್ತಿದೆ.

ಕಾನ್‌ಸ್ಟಾಂಟಿನ್ ಬೊಜಾನೋವ್ (Konstantin Bojanov) ನಿರ್ದೇಶನದ `ದಿ ಶೇಮ್‌ಲೆಸ್’ (The Shameless) ಚಿತ್ರ ಕೂಡ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾವನ್ನು ನೇಪಾಳ ಹಾಗೂ ಭಾರತದಲ್ಲಿ ಚಿತ್ರೀಕರಣ ಮಾಡಲಾಗಿದೆ. ರಾಣಿ ಎಂಬ ಭಾರತೀಯ ಲೈಂಗಿಕ ಕಾರ್ಯಕರ್ತೆ, ತೀರ್ಥಯಾತ್ರೆಗೆ ಹೋಗಿರುತ್ತಾಳೆ. ಆ ಬಳಿಕ ಬೆಂಗಳೂರಿನಲ್ಲಿ ಆಕೆ ಕೊಲೆಯಾಗುತ್ತಾಳೆ.

2024ರ ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್ ಕಾರ್ಪೆಟ್‌ನಲ್ಲಿ ಭಾರತದ ತಾರೆಯರು ಹೆಜ್ಜೆ ಹಾಕುತ್ತಾರೆ. ಐಶ್ವರ್ಯಾ ರೈ ಬಚ್ಚನ್, ಅದಿತಿ ರಾವ್ ಹೈದರಿ, ಶೋಭಿತಾ ಧೂಲಿಪಾಲ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಲಿದ್ದಾರೆ.

Continue Reading

ಕಿರುತೆರೆ

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

Anchor Anushree: ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು. ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Anchor Anushree talking with fans on instagram live
Koo

ಕಿರುತೆರೆ ಜನಪ್ರಿಯ ನಿರೂಪಕಿ, ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ (Anchor anushree) ಅವರು ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು.

ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

ʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ… ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾʼʼ ಎಂದು ನೋವು ತೋಡಿಕೊಂಡರು. ʻʻಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿʼʼ ಎಂದಿದ್ದಾರೆ.

Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading
Advertisement
Mobile Phone Recharges:
ದೇಶ7 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ19 mins ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ22 mins ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್35 mins ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ43 mins ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ48 mins ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ2 hours ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ2 hours ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

M‌ine Lift Collapse
ದೇಶ2 hours ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ2 hours ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ10 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202422 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌