ಲವ್​ ಬರ್ಡ್ಸ್​ ಸಿನಿಮಾ ನಿರ್ದೇಶಕ-ನಿರ್ಮಾಪಕನ ನಡುವೆ ಕಾನೂನು ಸಮರ; ಕಡ್ಡಿಪುಡಿ ಚಂದ್ರು ಹೇಳಿದ್ದೇನು? - Vistara News

ಸಿನಿಮಾ

ಲವ್​ ಬರ್ಡ್ಸ್​ ಸಿನಿಮಾ ನಿರ್ದೇಶಕ-ನಿರ್ಮಾಪಕನ ನಡುವೆ ಕಾನೂನು ಸಮರ; ಕಡ್ಡಿಪುಡಿ ಚಂದ್ರು ಹೇಳಿದ್ದೇನು?

ಪ್ರಕರಣ ಸಂಬಂಧ ಈಗ ನಿರ್ಮಾಪಕ ಕಡ್ಡಿಪುಡಿ ಚಂದ್ರು ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಹೋರಾಟದ ಮೂಲಕ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

VISTARANEWS.COM


on

Kaddipudi Chandru Give Clarification On Love Birds Director PC Shekar Complaint Over Money
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇತ್ತೀಚೆಗೆ ತೆರೆಕಂಡ ‘ಲವ್​ ಬರ್ಡ್ಸ್​’ ಸಿನಿಮಾದ (Love Birds Kannada Movie) ನಿರ್ದೇಶಕ ಪಿ.ಸಿ.ಶೇಖರ್​ ಮತ್ತು ನಿರ್ಮಾಪಕ ಕಡ್ಡಿಪುಡಿ ಚಂದ್ರು (Kaddipudi Chandru) ನಡುವಿನ ಹಣಕಾಸು ವ್ಯವಹಾರದ ಸಂಘರ್ಷ ಈಗಾಗಲೇ ಸದಾಶಿವ ನಗರದ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸಿನಿಮಾದಲ್ಲಿ 20 ಲಕ್ಷ ರೂಪಾಯಿಗೆ ಕೆಲಸ ಮಾಡಲು ಒಪ್ಪಂದವಾಗಿತ್ತು. ನಂತರ ಎಡಿಟಿಂಗ್​ಗೆ ಜಾಸ್ತಿ ಖರ್ಚಾದ ಕಾರಣ ಹೆಚ್ಚುವರಿ 5 ಲಕ್ಷ ರೂಪಾಯಿ ನೀಡುವುದಾಗಿ ಚಂದ್ರು ಹೇಳಿದ್ದರು. ಆದರೆ ಪೂರ್ತಿ ಹಣ ಕೊಟ್ಟಿಲ್ಲ. ಕೇಳಿದ್ದಕ್ಕೆ ಬೆದರಿಕೆ ಹಾಕಿದ್ದಾರೆ. ನನಗೆ ಸಂಪೂರ್ಣ ಹಣ ಕೊಟ್ಟಿದ್ದಾಗಿ ದಾಖಲೆ ಮಾಡಿ, ನಕಲಿ ಸಹಿ ಹಾಕಿದ್ದಾರೆ ಎಂದು ನಿರ್ದೇಶಕ ಪಿ.ಸಿ.ಶೇಖರ್​ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಪ್ರಕರಣ ಸಂಬಂಧ ಈಗ ನಿರ್ಮಾಪಕ ಕಡ್ಡಿಪುಡಿ ಚಂದ್ರು ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಲವ್ ಬರ್ಡ್ಸ್​ ಸಿನಿಮಾ ವಿಚಾರವಾಗಿ ನಿರ್ದೇಶಕ ಪಿ.ಸಿ.ಶೇಖರ್ ಅವರು ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರಿಗೆ ಎಷ್ಟು ಸಂಭಾವನೆ ಕೊಡುತ್ತೇನೆ ಎಂದು ನಾನು ಹೇಳಿದ್ದೆನೋ, ಅಷ್ಟೂ ನಾನು ಕೊಟ್ಟಿದೇನೆ. ಆದರೂ ಅವರು ಪೊಲೀಸರಿಗೆ ದೂರು ಕೊಟ್ಟಿರುವುದರಿಂದ ನಾನು ಈ ವಿಷಯವನ್ನು ನಮ್ಮ ನಿರ್ಮಾಪಕರ ಸಂಘಕ್ಕೆ ಮತ್ತು ಫಿಲ್ಮ್​ ಚೇಂಬರ್​ಗೆ ಹೇಳಿದ್ದೇನೆ. ಅಲ್ಲಿಯೂ ಚರ್ಚೆ ನಡೆಯುತ್ತಿದೆ. ಅವರೂ ಕೂಡ ಕೂಲಂಕಷವಾಗಿ ಪರಿಶೀಲನೆ ಮಾಡಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿ ಕರೆದು ಮಾತಾಡುತ್ತೇವೆ. ಪಿ.ಸಿ.ಶೇಖರ್​ಗೆ ಮಾತ್ರವಲ್ಲ ಎಲ್ಲ ಕಲಾವಿದರಿಗೂ ಹಣ ಕೊಟ್ಟಿದ್ದೇನೆ. ಆದರೆ ಸಿನಿಮಾದ ಪ್ರಿಂಟ್​ ಮತ್ತು ಪಬ್ಲಿಸಿಟಿ ಹಣವೂ ನನ್ನ ಕೈ ಸೇರಿಲ್ಲ. ನೋಡೋಣ, ಕಾನೂನು ಪ್ರಕಾರವೇ ಬಗೆಹರಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ವಿರುದ್ಧ ಪಿ.ಸಿ.ಶೇಖರ್​ ಪೊಲೀಸರಿಗೆ ದೂರು

ಪಿಸಿ ಶೇಖರ್​ ದೂರು ಏನು?
ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್ ನಿರ್ದೇಶನದ ಲವ್​ ಬರ್ಡ್ಸ್​ ಸಿನಿಮಾ ನಿರ್ದೇಶನ ಮಾಡಿದ ಪಿ.ಸಿ.ಶೇಖರ್ ಅವರು ‘ಮೊದಲಿಗೆ 20 ಲಕ್ಷ ರೂಪಾಯಿಗೆ ಸಿನಿಮಾ ನಿರ್ದೇಶನ ಮಾಡಲು ಒಪ್ಪಂದವಾಗಿತ್ತು. ಆದರೆ ಕಡ್ಡಿಪುಡಿ ಚಂದ್ರು ಅವರು ಸಿನಿಮಾ ಎಡಿಟಿಂಗ್ ಜವಾಬ್ದಾರಿಯನ್ನೂ ನನಗೆ ಕೊಟ್ಟರು ಮತ್ತು ಅದಕ್ಕಾಗಿ ಹೆಚ್ಚುವರಿ 5 ಲಕ್ಷ ಪಾವತಿಸುವುದಾಗಿ ತಿಳಿಸಿದ್ದರು. ಆದರೆ ಬಳಿಕ ಅವರು ನನಗೆ ಕೊಟ್ಟಿದ್ದು ಆರೂವರೆ ಲಕ್ಷ ರೂಪಾಯಿ ಮಾತ್ರ. ಇನ್ನೂ 18,50000 ರೂಪಾಯಿ ಕೊಡಲಿಲ್ಲ. ನಾನು ಅವರಿಗೆ ಕೇಳಿದರೂ ಒಪ್ಪಲಿಲ್ಲ. ನನಗೆ ಬೆದರಿಕೆ ಹಾಕಿದರು. ನನ್ನ ಕರೆಗಳನ್ನು ಸ್ವೀಕರಿಸುವುದನ್ನೇ ಬಿಟ್ಟರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲ, ತಾವು ನಿರ್ದೇಶಕರಿಗೆ ಸಂಪೂರ್ಣ ಹಣ ಸಂದಾಯ ಮಾಡಿದ್ದಾಗಿ ದಾಖಲೆಯಲ್ಲಿ ಉಲ್ಲೇಖಿಸಿ, ನನ್ನ ಸಹಿಯನ್ನು ನಕಲಿ ಮಾಡಿ ಹಾಕಿ ವಾರ್ತಾ ಇಲಾಖೆಗೆ ಸಲ್ಲಿಸಿದ್ದಾರೆ ಎಂದೂ ಆರೋಪಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

Rishab Shetty: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’. ರಿಷಬ್‌ ಶೆಟ್ಟಿ ನಟಿಸುವ ಜತೆಗೆ ಆ್ಯಕ್ಷನ್‌ ಕಟ್‌ ಹೇಳಲಿರುವ ಈ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಲಿದೆ. ಕುಂದಾಪುರದ ಬಳಿ ಇದಕ್ಕಾಗಿ ಬೃಹತ್‌ ಸೆಟ್‌ ಹಾಕಲಾಗಿದೆ. ಈ ಮಧ್ಯೆ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರನ್ನು ರಿಷಬ್‌ ಶೆಟ್ಟಿ ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ. ಅವರೂ ಈ ಚಿತ್ರದಲ್ಲಿ ನಟಿಸುತ್ತಾರಾ ಎನ್ನುವ ಅನುಮಾನ ಹುಟ್ಟು ಹಾಕಿದೆ.

VISTARANEWS.COM


on

Rishab Shetty
Koo

ಬೆಂಗಳೂರು: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’ (Kantara: Chapter 1). 2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಇನ್ನಿಲ್ಲದಂತೆ ಸದ್ದು ಮಾಡಿದ್ದ ʼಕಾಂತಾರʼ (Kantara) ಚಿತ್ರದ ಪ್ರೀಕ್ವೆಲ್‌ ಇದು. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರʼ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ (Rishab Shetty) ನಾಯಕನಾಗಿ ಮಿಂಚಿದ್ದರು. ಜತೆಗೆ ನಿರ್ದೇಶಕನಾಗಿಯೂ ಗಮನ ಸೆಳೆದಿದ್ದರು. ಹೀಗಾಗಿ ʼಕಾಂತಾರ: ಚಾಪ್ಟರ್ 1’ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಇದೀಗ ಚಿತ್ರತಂಡ ಶೂಟಿಂಗ್‌ಗಾಗಿ ಕುಂದಾಪುರದಲ್ಲಿ ಬೀಡು ಬಿಟ್ಟಿದೆ. ಈ ಮಧ್ಯೆ ರಿಷಬ್‌ ಶೆಟ್ಟಿ ಮಲಯಾಳಂ ಸೂಪರ್‌ ಸ್ಟಾರ್‌, ಬಹುಭಾಷಾ ನಟ, ರಾಷ್ಟ್ರೀಯ ಚಲನಚಿತ್ರ ಪುರಸ್ಕೃತ ಮೋಹನ್‌ಲಾಲ್‌ (Mohanlal) ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಅವರೂ ಕಾಂತಾರ ಪ್ರೀಕ್ವೆಲ್‌ ಭಾಗವಾಗುತ್ತಿದ್ದಿರಾ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಕುಂದಾಪುರದಲ್ಲಿ ಮುಹೂರ್ತ ನಡೆಸಿದ್ದು ಬಿಟ್ಟರೆ ʼಕಾಂತಾರʼ ಚಿತ್ರತಂಡ ಬಳಿಕ ಹೆಚ್ಚಿನ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಯಾರೆಲ್ಲ ಅಭಿನಯಿಸುತ್ತಾರೆ ಎನ್ನುವ ಬಗ್ಗೆಯೂ ಮಾಹಿತಿ ನೀಡಿಲ್ಲ. ವಿವಿಧ ಸಿನಿಮಾ ರಂಗದ ದಿಗ್ಗಜರು ಕಾಣಿಸಿಕೊಳ್ಳಲಿದ್ದಾರೆ ಎಂಬೆಲ್ಲ ಗಾಳಿಸುದ್ದಿ ಹರಿದಾಡುತ್ತಿದ್ದವು. ಹೀಗಾಗಿ ಮೋಹನ್‌ಲಾಲ್‌ ಭೇಟಿ ಮತ್ತಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಮೋಹನ್‌ಲಾಲ್‌ ಅವರನ್ನು ರಿಷಬ್‌ ಭೇಟಿಯಾಗಿದ್ದೇಕೆ?

ಮೋಹನ್‌ಲಾಲ್‌ ಏಪ್ರಿಲ್‌ 17ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಿಷಬ್‌ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ರಿಷಬ್‌ ಶೆಟ್ಟಿ ಕುಂದಾಪುರದಲ್ಲಿ ʼಕಾಂತಾರ: ಚಾಪ್ಟರ್‌ 1ʼಗಾಗಿ ಬೃಹತ್‌ ಸೆಟ್‌ ಹಾಕಿದ್ದಾರೆ. ಕೊಲ್ಲೂರು ಸಮೀಪವೇ ಸೆಟ್‌ ಹಾಕಲಾಗಿದೆ. ಹೀಗಾಗಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ.

ವೈರಲ್‌

ಸದ್ಯ ರಿಷಬ್‌ ಶೆಟ್ಟಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಮೋಹನ್‌ಲಾಲ್‌ ಅವರನ್ನು ಭೇಟಿಯಾದ ಫೋಟೊವನ್ನು ಪೋಸ್ಟ್‌ ಮಾಡಿದ್ದು, ವೈರಲ್‌ ಆಗಿದೆ. ʼʼದಿಗ್ಗಜ ಕಲಾವಿದರಾದ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದು ಅಪಾರ ಸಂತಸ ತಂದಿದೆʼʼ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೊ ನೋಡ ಅನೇಕರು, ಇಬ್ಬರನ್ನು ಒಂದೇ ಚಿತ್ರದಲ್ಲಿ ನೋಡಲು ಬಯಸುವುದಾಗಿ ಕಮೆಂಟ್‌ ಮಾಡಿದ್ದಾರೆ. ರಿಷಬ್‌ ಅವರು ಮೋಹನ್‌ಲಾಲ್‌ಗೆ ಆ್ಯಕ್ಷನ್‌ ಕಟ್‌ ಹೇಳಬೇಕು ಎಂದು ಇನ್ನು ಹಲವರು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಇಬ್ಬರು ತೆರೆ ಹಂಚಿಕೊಂಡರೆ ಅದ್ಭುತವೇ ಸೃಷ್ಟಿಯಾಗಲಿದೆ ಎಂದು ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ʼಕಾಂತಾರʼ ಪ್ರೀಕ್ವೆಲ್​ನಲ್ಲಿ ʼಕಂಪ್ಲೀಟ್‌ ಆ್ಯಕ್ಟರ್‌ʼ ಮೋಹನ್‌ಲಾಲ್‌ ನಟಿಸುತ್ತಾರಾ ಅಥವಾ ಇದು ಕೇವಲ ಸೌಜನ್ಯದ ಭೇಟಿಯಾ ಎನ್ನುವುದನ್ನು ತಿಳಿಯಲು ಇನ್ನಷ್ಟು ದಿನ ಕಾಯಲೇ ಬೇಕು.

ಸಪ್ತಮಿ ಗೌಡ ಇರುತ್ತಾರಾ?

ʼಕಾಂತಾರʼ ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಇದೀಗ ಚಾಪ್ಟರ್‌ 1ರಲ್ಲಿ ಅಭಿನಯಿಸಲಿದ್ದಾರಾ ಎನ್ನುವ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ. ʼ‘ಕಾಂತಾರ: ಚಾಪ್ಟರ್ 1’ನಲ್ಲಿ ನಾನು ನಟಿಸುತ್ತಿಲ್ಲ. ಈಗ ಆಗುತ್ತಿರುವುದು ಪ್ರೀಕ್ವೆಲ್‌. ಪಾತ್ರವೇ ಇಲ್ಲ ಎಂದಾಗ ನಟಿಸುವುದು ಹೇಗೆ? ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ʻಕಾಂತಾರʼ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೀಕ್ವೆಲ್‌ ಕೂಡ ಚೆನ್ನಾಗಿ ಮೂಡಿ ಬರಲಿದೆʼʼ ಎಂದು ಅವರು ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

ಇದನ್ನೂ ಓದಿ; Kantara Movie: ʼಕಾಂತಾರ ಚಾಪ್ಟರ್‌ 1ʼ ಶೂಟಿಂಗ್‌ ಆರಂಭಕ್ಕೂ ಮುನ್ನ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಸೇಲ್‌; ಖರೀದಿಸಿದ್ದು ಯಾರು?

ʼಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

Continue Reading

ಸಿನಿಮಾ

Flop Film: ಫ್ಲಾಪ್ ಎಂದು ಕರೆಸಿಕೊಂಡ ಈ ಚಿತ್ರದ 25 ಕೋಟಿ ಟಿಕೆಟ್ ಮಾರಾಟವಾಗಿದ್ದು ಹೇಗೆ; ಇಲ್ಲಿದೆ ರೋಚಕ ಸಿನಿ ಇತಿಹಾಸ

Flop Film ಇಂದು ಅನೇಕ ಚಿತ್ರಗಳು ಬಿಡುಗಡೆಯಾದರೂ ಕೂಡ 1 ಕೋಟಿ ಟಿಕೆಟ್ ಮಾರಾಟವಾಗುವುದೇ ಕಷ್ಟವಾಗಿದೆ. ಅಂತಹದರಲ್ಲಿ ಅತಿ ಹೆಚ್ಚು ವೀಕ್ಷಿಸಿದ ಭಾರತೀಯ ಚಲನಚಿತ್ರವೊಂದು ಈ ದಾಖಲೆಯನ್ನು ಬ್ರೇಕ್ ಮಾಡಿ ಎಂದಿಗೂ ಮುರಿಯಲಾಗದ ದಾಖಲೆಯನ್ನು ಮಾಡಿ ಹೋಗಿದೆ..

VISTARANEWS.COM


on

Flop Film
Koo

ಬೆಂಗಳೂರು: ಕಳೆದ ವರ್ಷ ‘ಜವಾನ್’ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದಾಗ ಕೊನೆಯಲ್ಲಿ ಅದು 4 ಕೋಟಿ ಪ್ರೇಕ್ಷಕರನ್ನು ಗಳಿಸಿತ್ತು ಮತ್ತು ಇದನ್ನು ದೊಡ್ಡ ದಾಖಲೆ ಎಂಬಂತೆ ಎತ್ತಿ ತೋರಿಸಲಾಗಿತ್ತು. ಆದರೆ ಇಂದು ಅನೇಕ ಚಿತ್ರಗಳು ಬಿಡುಗಡೆಯಾದರೂ ಕೂಡ 1 ಕೋಟಿ ಟಿಕೆಟ್ ಮಾರಾಟವಾಗುವುದೇ ಕಷ್ಟ. ಅಂತಹದರಲ್ಲಿ ಅತಿ ಹೆಚ್ಚು ವೀಕ್ಷಿಸಿದ ಮತ್ತು ಟಿಕೆಟ್​ಗಳು ಮಾರಾಟವಾದ ಭಾರತೀಯ ಚಲನಚಿತ್ರವೊಂದು ಸಾರ್ವಕಾಲಿಕ ದಾಖಲೆ ಮಾಡಿದೆ. ಅಚ್ಚರಿ ಏನೆಂದರೆ ಈ ಸಿನಿಮಾ ಆರಂಭದಲ್ಲಿ ಇದು ಸೋತ ((Flop Film) ) ಸಿನಿಮಾ ಎಂಬ ವಿಮರ್ಶೆಯನ್ನು ಪಡೆದುಕೊಂಡಿತ್ತು. ಆದರೆ, ಬಳಿಕ ಆದದ್ದೇ ಬೇರೆ.

ಆ ಚಿತ್ರ ಯಾವುದೆಂದರೆ ರಮೇಶ್ ಸಿಪ್ಪಿ ಅವರ, ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅಭಿನಯದ ಜನಪ್ರಿಯ ‘ಶೋಲೆ’ ಚಿತ್ರ. ಇದನ್ನು ಇತರ ಭಾರತೀಯ ಚಿತ್ರಗಳಿಗಿಂತ ಹೆಚ್ಚು ಜನರು ಥಿಯೇಟರ್ ನಲ್ಲಿ ವೀಕ್ಷಿಸಿದ್ದಾರಂತೆ. ಗಲ್ಲಾ ಪೆಟ್ಟಿಗೆ ಸಂಗ್ರಾಹಕರ ಪ್ರಕಾರ, ಶೋಲೆ ಚಿತ್ರ 1975-80ರ ಆರಂಭದಲ್ಲಿ ಭಾರತದಲ್ಲಿ ಮಾತ್ರ 18 ಕೋಟಿ ಟಿಕೆಟ್ ಗಳನ್ನು ಮಾರಾಟ ಮಾಡಿತು. ಹಾಗೇ ಈ ಚಿತ್ರ 60 ಚಿತ್ರಮಂದಿರಗಳಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಿತ್ತು ಮತ್ತು ಬೆಳ್ಳಿ ಹಬ್ಬವನ್ನು ಆಚರಿಸಿತ್ತು. ಅಲ್ಲದೇ ಈ ಚಿತ್ರ ಬಾಂಬೆಯ ಮಿನರ್ವ ಥಿಯೇಟರ್ ನಲ್ಲಿ ಐದು ವರ್ಷಗಳ ಕಾಲ ಓಡಿದ್ದು, ಅಂದಿನ ದಾಖಲೆ. ಒಟ್ಟಾರೆ ಈ ಚಿತ್ರ ಅಂದಾಜು 2 ಕೋಟಿ ಟಿಕೆಟ್ ಗಳನ್ನು ಮಾರಾಟ ಮಾಡಿದೆ ಎನ್ನಲಾಗಿದೆ. ಹಾಗೇ ಈ ಚಿತ್ರ ಸೋವಿಯತ್ ರಷ್ಯಾದಲ್ಲಿ ಬಿಡುಗಡೆಯಾಗಿ ಅಲ್ಲಿ 48 ಮಿಲಿಯನ್ (4.8 ಕೋಟಿ) ಗಳಿಕೆ ಮಾಡಿದೆ. ಒಟ್ಟಾರೆ ಸುಮಾರು 25 ಕೋಟಿಯಷ್ಟು ಟಿಕೆಟ್​ ಸೇಲಾಗಿದೆ.

ಕೊನೆಯಲ್ಲಿ ಇದು ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಹಾಗೂ ಭಾರತದಲ್ಲಿ ಅತ್ಯಂತ ಯಶಸ್ಸು ಗಳಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದು 30ಕೋಟಿ ಗಳಿಸಿತ್ತು. ಆ ಮೂಲಕ ಅದು ಮುಘಲ್-ಎ-ಆಜಮ್ ಮತ್ತು ಮದರ್ ಇಂಡಿಯಾದ ದಾಖಲೆಯನ್ನು ಮುರಿದಿದೆ.

ಆದರೆ ಈ ಚಿತ್ರ ಮೊದಲು ಹಿಟ್ ಆಗಲಿಲ್ಲ, ಸ್ವಾತಂತ್ರ್ಯ ದಿನಾಚರಣೆಯ ಮೊದಲು ಬಿಡುಗಡೆಯಾದ ಈ ಚಿತ್ರ ನಂತರ ಕೆಟ್ಟ ವಿಮರ್ಶೆಗಳು ಮತ್ತು ಟೀಕೆಗಳಿಗೆ ಒಳಗಾಗಿತ್ತು. ಹಾಗಾಗಿ ಮೊದಲ ಎರಡು ವಾರಗಳಲ್ಲಿ ಈ ಚಿತ್ರತಂಡದವರೇ ಅದನ್ನು ಫ್ಲಾಪ್ ಎಂದು ಲೇಬಲ್ ನೀಡಿದ್ದಾರೆ. ಹಾಗಾಗಿ ತಯಾರಕರು ಅದರ ಕ್ಲೈಮ್ಯಾಕ್ಸ್ ಅನ್ನು ಬದಲಾಯಿಸಲು ಹೇಳಿದ್ದರು. ಆದರೆ ಕೊನೆಯಲ್ಲಿ ಹಿಟ್ ಚಿತ್ರವಾಗಿ ಹೊರಮೊಮ್ಮಿತ್ತು., ದಾಖಲೆಯನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: Viral Video: ಅಕ್ಷರ ಕಲಿಸಿದ ಶಿಕ್ಷಕಿಯ ಕಪಾಳಕ್ಕೆ ಹೊಡೆದ ವಿದ್ಯಾರ್ಥಿ; ಎಂಥ ಕಾಲ ಬಂತು ನೋಡಿ!

ಕಳೆದ ವರ್ಷಗಳಲ್ಲಿ ಹಲವಾರು ಭಾರತೀಯ ಚಲನಚಿತ್ರಗಳು ವಿಶ್ವದಾದ್ಯಂತ 1000 ಕೋಟಿ ಗಳಿಕೆಯನ್ನು ಪಡೆದುಕೊಂಡಿವೆ. ಬಾಹುಬಲಿ ಚಿತ್ರ ಜಾಗತಿಕ ಮಟ್ಟದಲ್ಲಿ 15-20 ಕೋಟಿ ಪ್ರೇಕ್ಷಕರನ್ನು ಗಳಿಸಿತ್ತು. ಆರ್ ಆರ್ ಆರ್ ಮತ್ತು ಕೆಜಿಎಫ್ 2 10 ಕೋಟಿ ಗಿಂತ ಕಡಿಮೆ ಪ್ರೇಕ್ಷಕರನ್ನು ಗಳಿಸಿದೆ. ದಂಗಲ್ ಚಿತ್ರ ಕೂಡ 10 ಕೋಟಿ ಪ್ರೇಕ್ಷಕರನ್ನು ಗಳಿಸಿದೆ. ಆದರೂ ಅವುಗಳು ಶೋಲೆಯ ಮಟ್ಟಕ್ಕೆ ಬಂದು ನಿಲ್ಲಲಿಲ್ಲ. ಎನ್ನಲಾಗಿದೆ.

Continue Reading

ಬಾಲಿವುಡ್

Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

Navya Naveli Nanda: ನವ್ಯಾ ಅವರು ಹೆಚ್ಚಾಗಿ ತಾಯಿ ಶ್ವೇತಾ ಬಚ್ಚನ್-ನಂದಾ ಮತ್ತು ಅಜ್ಜಿ ಜಯಾ ಬಚ್ಚನ್ ಅವರಿಂದ ಸಲಹೆ ಪಡೆಯುತ್ತಿರುವಾಗಿ ಹೇಳಿಕೊಂಡರು. ನವ್ಯಾ ನಂದಾ ಅವರು ನ್ಯೂಯಾರ್ಕ್‌ನ ಫೋರ್ಡ್‌ಹ್ಯಾಮ್ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ. ಆರೋಗ್ಯ ಸಮಸ್ಯೆಗಳು ಮತ್ತು ಹೆಚ್ಚಿನದನ್ನು ಚರ್ಚಿಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಆರಾ ಹೆಲ್ತ್‌ನ ಸಹ-ಮಾಲೀಕರಾಗಿದ್ದಾರೆ.

VISTARANEWS.COM


on

Aaradhya Bachchan is wiser more intelligent than I
Koo

ಬೆಂಗಳೂರು: ಪೋಡ್‌ಕಾಸ್ಟ್‌ ʻವಾಟ್ ದಿ ಹೆಲ್ ನವ್ಯಾʼದಲ್ಲಿ ಜಯಾ ಬಚ್ಚನ್‌ ಅವರು ಮೊಮ್ಮಗಳು ನವ್ಯಾ ನವೇಲಿ ನಂದಾ (Navya Naveli Nanda) ಜತೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಆದರೀಗ ಶ್ವೇತಾ ಬಚ್ಚನ್ ಮಗಳು ನವ್ಯಾ ಅವರು ಮೊದಲ ಬಾರಿಗೆ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಮಗಳ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ತನ್ನ ಸೋದರಸಂಬಂಧಿ ಆರಾಧ್ಯ(Aaradhya Bachchan) ತುಂಬ ಬುದ್ಧಿವಂತೆ ಎಂದು ಹೇಳಿಕೊಂಡಿದ್ದಾರೆ.

ಆರಾಧ್ಯಗೆ ಏನು ಸಲಹೆ ನೀಡುತ್ತೀರಿ ಎಂದು ನವ್ಯಾಗೆ ಪ್ರಶ್ನೆ ಎದುರಾದಾಗ ಹೀಗೆ ಹೇಳಿದರು ನವ್ಯಾ. “ಆರಾಧ್ಯ ನನಗಿಂತ ಹೆಚ್ಚು ಬುದ್ಧಿವಂತಳು. ಇಂದಿನ ಮಕ್ಕಳು ಬಹಳ ಮುಂದಿದ್ದಾರೆ. ಅವಳ ವಯಸ್ಸಿನಲ್ಲಿ ನಾನು ಅಷ್ಟು ಬುದ್ಧಿವಂತನಾಗಿರಲಿಲ್ಲ. ಜಗತ್ತನ್ನು ಹಲವು ವಿಧಗಳಲ್ಲಿ ಬದಲಾಯಿಸಲು ಬಯಸುವ ಯುವತಿಯರ ಪೀಳಿಗೆಯನ್ನು ನಾವು ಈಗ ಹೊಂದಿದ್ದೇವೆ. ಅದು ನಾನು ಅವಳಲ್ಲಿಯೂ ನೋಡುತ್ತಿರುವ ಖುಷಿಯ ಸಂಗತಿ. ಅವಳಿಗೆ ನಾನು ಸಲಹೆ ಅಥವಾ ಸ್ಫೂರ್ತಿ ನೀಡುವುದಕ್ಕಿಂತ ಹೆಚ್ಚಾಗಿ, ಅವಳಿಂದ ನಾನು ಬಹಳಷ್ಟು ತಿಳಿದುಕೊಳ್ಳುತ್ತಿರುವೆ ಎಂದು ನಾನು ಭಾವಿಸುತ್ತೇನೆʼʼಎಂದರು.

ನವ್ಯಾ ಅವರು ಹೆಚ್ಚಾಗಿ ತಾಯಿ ಶ್ವೇತಾ ಬಚ್ಚನ್-ನಂದಾ ಮತ್ತು ಅಜ್ಜಿ ಜಯಾ ಬಚ್ಚನ್ ಅವರಿಂದ ಸಲಹೆ ಪಡೆಯುತ್ತಿರುವಾಗಿ ಹೇಳಿಕೊಂಡರು. ನವ್ಯಾ ನಂದಾ ಅವರು ನ್ಯೂಯಾರ್ಕ್‌ನ ಫೋರ್ಡ್‌ಹ್ಯಾಮ್ ವಿಶ್ವವಿದ್ಯಾಲಯದ ಪದವೀಧರರಾಗಿದ್ದಾರೆ. ಆರೋಗ್ಯ ಸಮಸ್ಯೆಗಳು ಮತ್ತು ಹೆಚ್ಚಿನದನ್ನು ಚರ್ಚಿಸುವ ಆನ್‌ಲೈನ್ ಪ್ಲಾಟ್‌ಫಾರ್ಮ್ ಆರಾ ಹೆಲ್ತ್‌ನ ಸಹ-ಮಾಲೀಕರಾಗಿದ್ದಾರೆ.

ಇದನ್ನೂ ಓದಿ: Aaradhya Bachchan: ಅಬ್ಬಾ.. ಅಂತೂ ಐಶ್ವರ್ಯಾ ರೈ ಪುತ್ರಿ ಹಣೆ ನೋಡಿದ್ವಲ್ಲ! ನಿಟ್ಟುಸಿರು ಬಿಟ್ಟ ನೆಟ್ಟಿಗರು!

ಬಾಲಿವುಡ್‌ ಹಿರಿಯ ನಟಿ ಜಯಾ ಬಚ್ಚನ್ (Actress Jaya Bachchan) ಅವರು ಮೊಮ್ಮಗಳ ʻನವ್ಯಾ ನವೇಲಿ ನಂದಾʼ ಪಾಡ್‌ಕಾಸ್ಟ್‌ನ ಸಂಚಿಕೆಯಲ್ಲಿ ನಟಿ ಜಯಾ ಬಚ್ಚನ್ ಈ ಮುಂಚೆಯೂ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು. ಔಟ್‌ ಡೋರ್‌ ಶೂಟಿಂಗ್‌ ವೇಳೆ ಪೊದೆಗಳ ಹಿಂದೆ ಅಡಗಿ ಕುಳಿತು ಸ್ಯಾನಿಟರಿ ಪ್ಯಾಡ್‌ಗಳನ್ನು ಬದಲಾಯಿಸಬೇಕಿತ್ತು ಎಂಬ ವಿಚಾರವನ್ನು ಹಂಚಿಕೊಂಡಿದ್ದರು.

ಜಯಾ ಬಚ್ಚನ್ ಮಾತನಾಡಿ ʻʻನಮ್ಮ ಕಾಲದಲ್ಲಿ ಹೊರಾಂಗಣ ಚಿತ್ರೀಕರಣದ ಸಂದರ್ಭದಲ್ಲಿ ನಮಗಾಗಿ ವ್ಯಾನ್‌ಗಳಿರಲಿಲ್ಲ(ಕ್ಯಾರವಾನ್‌). ಸರಿಯಾದ ಶೌಚಾಲಯದ ವ್ಯವಸ್ಥೆಗಳು ಇರುತ್ತಿರಲಿಲ್ಲ. ಮುಟ್ಟಾದ ಸಂದರ್ಭದಲ್ಲಿ ನಾವು ಪೊದೆಗಳನ್ನು ಹುಡುಕುತ್ತಿದ್ದೆವು. ಪ್ಯಾಡ್‌ಗಳನ್ನು ಬದಲಿಸಲು ನಮಗೆ ಸರಿಯಾದ ಸ್ಥಳ ಇರುತ್ತಿರಲಿಲ್ಲ. ಪ್ಯಾಡ್‌ಗಳನ್ನು ಎಸೆಯಲು ಪ್ಲಾಸ್ಟಿಕ್ ಚೀಲಗಳನ್ನು ತೆಗೆದುಕೊಂಡು ಹೋಗುತ್ತಿದ್ದೆವು. ನಂತರ ಮನೆಗೆ ಬಂದು ಎಸೆಯಬೇಕಿತ್ತು. ಆಗ ಮುಜುಗರದ ಸನ್ನಿವೇಶಗಳನ್ನು ನಾವು ಎದುರಿಸುತ್ತಿದ್ದೆವುʼʼ ಎಂದಿದ್ದರು.

Continue Reading

ಕ್ರೈಂ

Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Raj Kundra: ಸಿಂಗಾಪುರ (Singapore) ಮೂಲದ ಸಂಸ್ಥೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ನಡೆಸಿದ ₹6,600 ಕೋಟಿ ಬಿಟ್‌ಕಾಯಿನ್ (Bitcoin) ಆಧಾರಿತ ಪೋಂಜಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯಲ್ಲಿ ರಾಜ್‌ ಕುಂದ್ರಾ ಅವರ ಕೈವಾಡವನ್ನು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

VISTARANEWS.COM


on

Raj Kundra Shilpa Shetty
Koo

ಮುಂಬಯಿ: ನಟಿ ಶಿಲ್ಪಾ ಶೆಟ್ಟಿ (Actress Shilpa Shetty) ಅವರ ಪತಿ, ಉದ್ಯಮಿ ರಾಜ್ ಕುಂದ್ರಾ (Raj Kundra) ಅವರ ₹97.79 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಸಿಂಗಾಪುರ (Singapore) ಮೂಲದ ಸಂಸ್ಥೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ನಡೆಸಿದ ₹6,600 ಕೋಟಿ ಬಿಟ್‌ಕಾಯಿನ್ (Bitcoin) ಆಧಾರಿತ ಪೋಂಜಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯಲ್ಲಿ ರಾಜ್‌ ಕುಂದ್ರಾ ಅವರ ಕೈವಾಡವನ್ನು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಕುಂದ್ರಾ ಈ ಪ್ರಕರಣದ ಆದಾಯದ ಫಲಾನುಭವಿ ಎಂದು ಶಂಕಿಸಲಾಗಿದೆ.

ಲಗತ್ತಿಸಲಾದ ಆಸ್ತಿಗಳಲ್ಲಿ ಪ್ರಸ್ತುತ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಜುಹುದಲ್ಲಿರುವ ವಸತಿ ಫ್ಲಾಟ್, ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ರಾಜ್ ಕುಂದ್ರಾ ಅವರ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳು ಸೇರಿವೆ. ವೇರಿಯಬಲ್ ಟೆಕ್ ಹೆಚ್ಚಿನ ಆದಾಯದ ಭರವಸೆ ನೀಡುವ ಮೂಲಕ ದೇಶಾದ್ಯಂತ ಮೋಸಗಾರಿಕೆಯ ಹೂಡಿಕೆದಾರ ಮೂಲಕ 80,000 ಬಿಟ್‌ಕಾಯಿನ್‌ಗಳನ್ನು ಸಂಗ್ರಹಿಸಿದೆ. ಮತ್ತು ವಿದೇಶದಲ್ಲಿ ಆಸ್ತಿಗಳನ್ನು ಖರೀದಿಸಲು ಒಂಬತ್ತು ಸಂಸ್ಥೆಗಳ ಮೂಲಕ ₹6,606 ಕೋಟಿ ಮೌಲ್ಯದ ಹಣವನ್ನು ಭಾರತದಿಂದ ವರ್ಗಾಯಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಅಮೇಜ್ ಮೈನಿಂಗ್ ಮತ್ತು ಬ್ಲಾಕ್‌ಚೈನ್ ರಿಸರ್ಚ್ ಲಿಮಿಟೆಡ್ ಹಾಂಗ್‌ಕಾಂಗ್, ಗ್ರೀನ್‌ ಓಶನ್‌ ಓವರ್‌ಸೀಸ್‌ ಹಾಂಗ್‌ಕಾಂಗ್, ಬ್ಲೂ ವೇವ್ ಟ್ರೇಡಿಂಗ್ ಹಾಂಗ್‌ಕಾಂಗ್, AB ಮಾರ್ಕೆಟಿಂಗ್ ಕನ್ಸಲ್ಟೆನ್ಸಿ FZE ದುಬೈ, ಕ್ರಿಪ್ಟೋ ಕ್ಯಾಪಿಟಲ್ ಎಸ್ಟೋನಿಯಾ, ABC ಮೆಗಾ ಅಲೈಯನ್ಸ್ DMCC/ABC ಮೆಗಾಕಾರ್ಪ್ ದುಬೈ, ಎಬಿ ಹೋಲ್ಡಿಂಗ್ಸ್ ದುಬೈ, ಎಬಿ ಫೆಸಿಲಿಟೀಸ್ ದುಬೈ ಮತ್ತು ಪರ್ಪಲ್ ರೈನ್ ಟ್ರೇಡಿಂಗ್ ಕಂಪನಿ ದುಬೈಗಳು EDಯ ತನಿಖೆಯ ಅಡಿಯಲ್ಲಿರುವ ಸಂಸ್ಥೆಗಳಾಗಿವೆ.

ವೇರಿಯೇಬಲ್ ಟೆಕ್ ಮತ್ತು ಹಲವಾರು ಇತರ ಏಜೆಂಟ್‌ಗಳ ವಿರುದ್ಧ ಮಹಾರಾಷ್ಟ್ರ ಮತ್ತು ದೆಹಲಿ ಪೊಲೀಸರು ದಾಖಲಿಸಿದ ಬಹು ಪ್ರಕರಣಗಳ ಆಧಾರದ ಮೇಲೆ 2018ರಲ್ಲಿ ಇಡಿ ಸಂಸ್ಥೆಯು ಪೋಂಜಿ ಸ್ಕೀಮ್‌ ಕುರಿತ ತನಿಖೆಯನ್ನು ಪ್ರಾರಂಭಿಸಿತು. ಜನವರಿಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿ ನಿಖಿಲ್ ಮಹಾಜನ್ ಅವರನ್ನು ಏಜೆನ್ಸಿ ಬಂಧಿಸಿತ್ತು. ಹೂಡಿಕೆದಾರರನ್ನು ಆಕರ್ಷಿಸಲು ದುಬೈನಲ್ಲಿ ಸೆಮಿನಾರ್‌ಗಳನ್ನು ನಡೆಸುವ ಮೂಲಕ ಮಹಾಜನ್ ಆರೋಪಿಗಳಿಗೆ ಸಹಾಯ ಮಾಡಿದ್ದಾರೆ ಮತ್ತು 40 ಬಿಟ್‌ಕಾಯಿನ್‌ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಸ್ತುತ ದರಗಳ ಪ್ರಕಾರ, ಒಂದು ಬಿಟ್‌ಕಾಯಿನ್‌ಗೆ ಸುಮಾರು ₹51 ಲಕ್ಷ ದರವಿದೆ. Bitcoin ಕಾನೂನುಬದ್ಧ ಕರೆನ್ಸಿ ಅಲ್ಲ.

ಅಶ್ಲೀಲ ವೀಡಿಯೊಗಳನ್ನು ವಿತರಿಸಿದ ಆರೋಪದ ಮೇಲೂ ಬಂಧಿತರಾಗಿ ಜೈಲಿಗೆ ಹೋಗಿದ್ದ ರಾಜ್‌ ಕುಂದ್ರಾ ಅವರಿಗೆ 2022ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಇದರ ತನಿಖೆಯೂ ನಡೆಯುತ್ತಿದೆ.

ಇದನ್ನೂ ಓದಿ: Shilpa Shetty: ಜೈಲಿಗೆ ಹೋಗಿ ಬಂದ ಬಳಿಕವೂ ಪತಿ ರಾಜ್‌ ಕುಂದ್ರಾರನ್ನು ಹಾಡಿ ಹೊಗಳಿದ ಶಿಲ್ಪಾ ಶೆಟ್ಟಿ!

Continue Reading
Advertisement
murder case gadag
ಕ್ರೈಂ5 mins ago

Murder Case: ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

voting
ಪ್ರಮುಖ ಸುದ್ದಿ32 mins ago

Lok Sabha Election 2024: ಮೊದಲ ಹಂತದ ಮತದಾನ ಆರಂಭ; 102 ಲೋಕಸಭಾ ಕ್ಷೇತ್ರಗಳ ಭವಿಷ್ಯ ಇಂದು ನಿರ್ಣಯ

kalpana chawla rajamarga column
ಅಂಕಣ50 mins ago

ರಾಜಮಾರ್ಗ ಅಂಕಣ: ಭಾರತದ ಹೆಣ್ಣು ಮಕ್ಕಳಿಗೆ ಆಕಾಶದ ಎತ್ತರವೂ ಕಡಿಮೆ ಎಂದು ಸಾಬೀತು ಪಡಿಸಿದ ಕಲ್ಪನಾ ಚಾವ್ಲಾ!

Karnataka Weather Forecast
ಮಳೆ1 hour ago

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ8 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ8 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ9 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ9 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌