Satyabhama Teaser: ಕಾಜಲ್ ಅಗರ್ವಾಲ್ ಅಭಿನಯದ ʻಸತ್ಯಭಾಮಾʼ ಟೀಸರ್ ಔಟ್‌! - Vistara News

South Cinema

Satyabhama Teaser: ಕಾಜಲ್ ಅಗರ್ವಾಲ್ ಅಭಿನಯದ ʻಸತ್ಯಭಾಮಾʼ ಟೀಸರ್ ಔಟ್‌!

Satyabhama Teaser: ಸತ್ಯಭಾಮಾ ಯುದ್ಧಭೂಮಿಯಲ್ಲಿ ಎಂದು ಶೀರ್ಷಿಕೆ ನೀಡಿ ಟೀಸರ್‌ ಹಂಚಿಕೊಂಡಿದೆ ಚಿತ್ರತಂಡ. ಸತ್ಯಭಾಮಾ ಒಂದು ಕ್ರೈಮ್ ಥ್ರಿಲ್ಲರ್‌ ಸಿನಿಮಾ.

VISTARANEWS.COM


on

Kajal Aggarwal Satyabhama Teaser OUT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಜಲ್ ಅಗರ್ವಾಲ್ (kajal agarwal) ಅವರ ಮುಂಬರುವ ಆ್ಯಕ್ಷನ್ ಚಿತ್ರ ʻಸತ್ಯಭಾಮಾʼ ಟೀಸರ್ (Satyabhama Teaser) ಬಿಡುಗಡೆಯಾಗಿದೆ. ಸತ್ಯಭಾಮಾ ಚಿತ್ರದಲ್ಲಿ ರಾಜಕಾರಣಿಗೆ ಸಂಬಂಧಿಸಿದ ಕೊಲೆ ಪ್ರಕರಣವನ್ನು ತನಿಖೆ ಮಾಡುವ ಪೊಲೀಸ್ ಅಧಿಕಾರಿಯಾಗಿ ಕಾಜಲ್ ಅಗರ್ವಾಲ್ ನಟಿಸಿದ್ದಾರೆ. ಸತ್ಯಭಾಮಾ ಯುದ್ಧಭೂಮಿಯಲ್ಲಿ ಎಂದು ಶೀರ್ಷಿಕೆ ನೀಡಿ ಟೀಸರ್‌ ಹಂಚಿಕೊಂಡಿದೆ ಚಿತ್ರತಂಡ.

ಆ್ಯಕ್ಷನ್‌ ಸೀಕ್ವೆನ್ಸ್, ಛಾಯಾಗ್ರಹಣ ಮತ್ತು ಶ್ರೀ ಚರಣ್ ಪಕಾಲ ಅವರ ಸಂಗೀತ ಸಂಯೋಜನೆ ಇದೆ. ಈ ಚಿತ್ರವನ್ನು ಅಖಿಲ್ ದೇಗಲ ನಿರ್ದೇಶಿಸಿದ್ದಾರೆ ಮತ್ತು ಶಶಿ ಕಿರಣ್ ಟಿಕ್ಕಾ ಅವರ ಚಿತ್ರಕಥೆಯನ್ನು ಒಳಗೊಂಡಿದೆ. ಸತ್ಯಭಾಮಾ ಒಂದು ಕ್ರೈಮ್ ಥ್ರಿಲ್ಲರ್‌ ಸಿನಿಮಾ. ಈ ಚಿತ್ರವನ್ನು ಔರಂ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಬಾಬಿ ಟಿಕ್ಕಾ ಮತ್ತು ಶ್ರೀನಿವಾಸ್ ರಾವ್ ಟಕ್ಕಲಪೆಲ್ಲಿ ನಿರ್ಮಿಸಿದ್ದಾರೆ. ಮಹಿಳಾ ಕೇಂದ್ರಿತ ಚಲನಚಿತ್ರದಂತೆ ಕಾಣುತ್ತದೆ. ನವೀನ್ ಚಂದ್ರ, ಪ್ರಕಾಶ್ ರಾಜ್, ನಾಗಿನೀಡು, ಹರ್ಷವರ್ಧನ್, ರವಿವರ್ಮ ಮತ್ತು ಅಂಕಿತ್ ಕೊಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಿರ್ದೇಶಕ ಶಂಕರ್ ಅವರ ಇಂಡಿಯನ್‌ 2 ನಲ್ಲಿ ಕಾಜಲ್ ಅಗರ್ವಾಲ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮಲ್ ಹಾಸನ್, ಸಿದ್ಧಾರ್ಥ್ ಮತ್ತು ರಾಕುಲ್ ಪ್ರೀತ್ ಸಿಂಗ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ತಮಿಳಿನ ಭಯಾನಕ ಚಲನಚಿತ್ರ ಕರುಂಗಾಪಿಯಂನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Kajal Aggarwal: ಕಾಜಲ್ ಅಗರ್ವಾಲ್‌ ಜನುಮದಿನಕ್ಕೆ ಸತ್ಯಭಾಮಾ, ಭಗವಂತ ಕೇಸರಿ ತಂಡದಿಂದ ಭರ್ಜರಿ ಗಿಫ್ಟ್‌

ಇಂಡಿಯನ್ 2 ಚಿತ್ರದಲ್ಲಿ ಸಿದ್ಧಾರ್ಥ್, ರಾಕುಲ್ ಪ್ರೀತ್ ಸಿಂಗ್, ಬಾಬಿ ಸಿಂಹ ಮತ್ತು ಪ್ರಿಯಾ ಭವಾನಿ ಶಂಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ಇಂಡಿಯನ್ 2 ಲುಕ್‌ಗಾಗಿ ಕಮಲ್ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಕಳೆದ ವರ್ಷ, ಬರಹಗಾರ ಜಯಮೋಹನ್ ಅವರು ಸೆಟ್‌ಗಳಲ್ಲಿ ಕಮಲ್ ಹಾಸನ್ ಇರುವ ಬಗೆಯನ್ನು ಬಣ್ಣಿಸಿದ್ದರು.

ಕಮಲ್‌ ಅವರ ಬದ್ಧತೆ ಮತ್ತು ನಟನೆಯಲ್ಲಿ ಹೇಗೆ ಇರುತ್ತಾರೆ ಎಂಬುದರ ಬಗ್ಗೆ ವಿವರಿಸಿದ್ದರು. ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ನಟಿಸಲಿದ್ದಾರೆ ಎಂಬುದಾಗಿಯೂ ವರದಿಯಾಗಿದೆ. ಚಿತ್ರದಲ್ಲಿ ರಾಕುಲ್ ಪ್ರೀತ್ ಸಿಂಗ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Sanjana Anand: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಸಂಜನಾ ಆನಂದ್!

Sanjana Anand: ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

VISTARANEWS.COM


on

Sanjana Anand Hot Photoshoot
Koo

ʻಕೆಮೆಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಂಜನಾ ಆನಂದ್ (Sanjana Anand) ಸಖತ್‌ ಹಾಟ್ ಆಗಿದ್ದಾರೆ. ಮಾಡರ್ನ್ ಡ್ರೆಸ್‌ನಲ್ಲಿ ಪೋಸ್ ನೀಡುತ್ತಿದ್ದಾರೆ.

ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. 

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

ದುನಿಯಾ ವಿಜಯ್ ನಟನೆಯ `ಸಲಗ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ನಟಿ ಸಂಜನಾ ಆನಂದ್‌ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಕಾಲಿವುಡ್

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Raghu Thatha: ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು.

VISTARANEWS.COM


on

Raghu Thatha Hombale Films Realease date announced
Koo

ಬೆಂಗಳೂರು: ʼಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ಗಮನ ಸೆಳೆದ ಕೀರ್ತಿ ಸುರೇಶ್‌

ಈ ಮುಂಚೆ ಬಿಡುಗಡೆಯಾದ ಒಂದು ನಿಮಿಷದ ಟೀಸರ್‌ನಲ್ಲಿ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡುವ ಯುವತಿಯಾಗಿ ಕೀರ್ತಿ ಸುರೇಶ್‌ ಮಿಂಚಿದ್ದರು. ಉದ್ಯೋಗ ಬಡ್ತಿಗಾಗಿ ಹಿಂದಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಬೇಕು ಎನ್ನುವ ಷರತ್ತನ್ನು ಆಕೆ ವಿರೋಧಿಸುತ್ತಾಳೆ. ಅನೇಕ ಜನರನ್ನು ಸಂಘಟಿಸಿ ಬೀದಿಗಿಳಿದು ಹೋರಾಡುತ್ತಾಳೆ. ಸದ್ಯ ಇದಿಷ್ಟು ವಿಚಾರ ಟೀಸರ್‌ ಮೂಲಕ ಬಹಿರಂಗಗೊಂಡಿತ್ತು. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ದಿಟ್ಟ ಯುವತಿ ಪಾತ್ರದಲ್ಲಿ ಕಂಡು ಬಂದಿರುವ ಕೀರ್ತಿ ಸುರೇಶ್‌ ಪಾತ್ರಕ್ಕೆ ಅಭಿಮಾನಿಗಳು ಮನ ಸೋತಿದ್ದರು.

ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. 

ಪುಷ್ಪ ಸಿನಿಮಾಗೆ ಸೆಡ್ಡು ಹೊಡೆದ ಹೊಂಬಾಳೆ!

ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು.ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

Continue Reading

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading
Advertisement
Lok Sabha Election
ದೇಶ8 mins ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ9 mins ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ5 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ6 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು7 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ7 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ8 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ8 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ8 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ8 hours ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌