Site icon Vistara News

Kannada New Film : ಚಿತ್ರೀಕರಣ ಮುಗಿಸಿದ ʼಕ್ರೀಮ್‌ʼ; ಅಗ್ನಿ ಶ್ರೀಧರ್‌ ಬರೆದಿರುವ ಕಥೆಗೆ ಸಂಯುಕ್ತ ಹೆಗಡೆ ನಾಯಕಿ

ಬೆಂಗಳೂರು: ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ ʼಕ್ರೀಮ್‌ʼ ಚಿತ್ರ ಚಿತ್ರೀಕರಣವನ್ನು (Kannada New Film) ಸಂಪೂರ್ಣಗೊಳಿಸಿದೆ. ಪೋಸ್ಟ್‌ ಪ್ರೊಡಕ್ಷನ್‌ಗೆ ಸಿದ್ಧವಾಗಿರುವ ತಂಡ ಇನ್ನು ಕೆಲ ಕಾಲದಲ್ಲಿ ಸಿನಿಮಾವನ್ನು ತೆರೆಗೆ ತರುವ ಹುಮ್ಮಸ್ಸಿನಲ್ಲಿದೆ.

ಇದನ್ನೂ ಓದಿ: Shahrukh Khan: ಟಾಪ್‌ 10 ಶಾರುಖ್‌ ಖಾನ್‌ ಹಿಟ್‌ ಸಿನಿಮಾ, ಗಳಿಕೆ ಎಷ್ಟು?

ನಟಿ ಸಂಯುಕ್ತ ಹೆಗಡೆ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಕ್ಕೆ ದೇವೇಂದ್ರ ಡಿ.ಕೆ ಅವರು ಬಂಡವಾಳ ಹೂಡಿದ್ದಾರೆ. ಅಭಿಷೇಕ್‌ ಬಸಂತ್‌ ಅವರ ನಿರ್ದೇಶನದಲ್ಲಿ ಬೆಂಗಳೂರಿನ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಅಚ್ಯುತ್ ಕುಮಾರ್, ಅರುಣ್ ಸಾಗರ್ ಸೇರಿ ಹಲವರು ಬಣ್ಣ ಹಚ್ಚಿದ್ದಾರೆ.

ಕಳೆದ ವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತ್ತು. ಆದರೆ ಆನಂತರ ಚಿತ್ರತಂಡದಿಂದ ಚಿತ್ರದ ಕುರಿತು ಯಾವುದೇ ವಿಷಯ ಹೊರಬಂದಿರಲಿಲ್ಲ. ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗಡೆ ಅವರಿಗೆ ಭಾರಿ ಪೆಟ್ಟು ಬಿದ್ದ ವಿಷಯ ಮಾತ್ರ ತಿಳಿದಿತ್ತು. ಸಂಯುಕ್ತ ಅವರು ಚೇತರಿಸಿಕೊಂಡ ನಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಈಗ ಚಿತ್ರೀಕರಣ ಮುಕ್ತಾಯವಾಗಿದೆ.

ಇದನ್ನೂ ಓದಿ: Kannada New Movie | ಅಪ್ಪು ಹುಟ್ಟಿದ ಹಬ್ಬದಂದೇ ತೆರೆಗೆ ಬರಲಿದೆ ರಿಯಲ್‌ ಸ್ಟಾರ್‌ ನಟನೆಯ ಕಬ್ಜ

ಈ ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ಕೊಡದ ಹಿನ್ನೆಲೆ ಚಿತ್ರದ ಕಥಾಹಂದರ ಏನಾಗಿರಬಹುದು ಎನ್ನುವ ಕೌತುಕವಿದೆ. ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ‌ ಚಿತ್ರ ಇದಾಗಿದೆ ಎನ್ನುವ ಮಾಹಿತಿ ಇದೆ. ಈ ಸಿನಿಮಾಕ್ಕೆ ಸುನೋಜ್ ವೇಲಾಯುಧನ್ ಛಾಯಾಗ್ರಹಣ, ಕೆಜಿಎಫ್‌ ಖ್ಯಾತಿತ ಶಿವು ಅವರ ಕಲಾ ನಿರ್ದೇಶನ, ಆರ್ಯನ್ ಸಂಕಲನ ಹಾಗೂ ಪ್ರಭು ಅವರ ಸಾಹಸ ನಿರ್ದೇಶನವಿದೆ.

Exit mobile version