ಬೆಂಗಳೂರು : ‘ಜುಗಲ್ ಬಂದಿ’ ಕನ್ನಡ ಸಿನಿಮಾ (Kannada New Film) ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಡಿಂಡಿಮ ಪ್ರೊಡಕ್ಷನ್ ಅಡಿಯಲ್ಲಿ ದಿವಾಕರ್ ಡಿಂಡಿಮ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇದೀಗ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.
‘ಇಂಥವರ ಸಂತಾನ ಭಾಗ್ಯ’ ವಿಡಿಯೊ ಸಾಂಗ್ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಈ ಹಾಡಿನ ಭಾಗವಾಗಿದ್ದಾರೆ. ವೈಕಂ ವಿಜಯಲಕ್ಷ್ಮೀ ದನಿಯಾಗಿರುವ ಈ ಹಾಡಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಸಾಹಿತ್ಯ, ಪ್ರದ್ಯೋತ್ತನ್ ಸಂಗೀತ ನಿರ್ದೇಶನವಿದೆ.
ಇದನ್ನೂ ಓದಿ | Kannada New Film | ʻಕಂಬ್ಳಿಹುಳʼ ಟ್ರೈಲರ್ ರಿಲೀಸ್ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ!
ಮುರ್ನಾಲ್ಕು ಕಥೆಗಳನ್ನು ಸಿನಿಮಾ ಒಳಗೊಂಡಿದ್ದು,‘ಜುಗಲ್ ಬಂದಿ’ ಎಂದು ಶೀರ್ಷಿಕೆ ಇಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನದ ಜತೆಗೆ ಮೊದಲ ಸಿನಿಮಾದ ನಿರ್ಮಾಣ ಜವಾಬ್ದಾರಿಯನ್ನು ದಿವಾಕರ್ ಡಿಂಡಿಮ ಹೊತ್ತಿದ್ದಾರೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಕಾಂತಾರ ಖ್ಯಾತಿಯ ಮಾನಸಿ ಸುಧೀರ್, ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.
ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಚಿತ್ರಕ್ಕಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರೂ ಹಾಡುಗಳಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಸಾಹಿತ್ಯ ರಚಿಸಿದ್ದಾರೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಸಿನಿಮಾ ತೆರೆಗೆ ತರಲಿದ್ದೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಇದನ್ನೂ ಓದಿ | Kannada New Film | ಜೊತೆ ಜೊತೆಯಲಿ ಧಾರಾವಾಹಿ ಟೈಟಲ್ ಟ್ರ್ಯಾಕ್ ರೈಟರ್ ಇದೀಗ ಡೈರೆಕ್ಟರ್: ಸಿನಿಮಾ ಯಾವುದು?