Site icon Vistara News

Kannada New Movie: ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ!

Kannada New Movie aaram arvind swamy In Post production

ಬೆಂಗಳೂರು: ಫಸ್ಟ್ ಲುಕ್ ಹಾಗೂ ಪ್ರಮೋಷನಲ್ ವಿಡಿಯೊ ಮೂಲಕ ನಿರೀಕ್ಷೆ (Kannada New Movie) ಹೆಚ್ಚಿಸಿರುವ ಆರಾಮ್ ಅರವಿಂದ್ ಸ್ವಾಮಿ ಸಿನಿಮಾ ತಂಡ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿಪೋಸ್ಟ್ ಪ್ರೊಡಕ್ಷನ್‌ನಲ್ಲಿ ಬ್ಯುಸಿಯಾಗಿದೆ. ಅಭಿಷೇಕ್ ಶೆಟ್ಟಿ ಹಾಗೂ ಅನೀಶ್ ತೇಜೇಶ್ವರ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಮಿಲನಾ ನಾಗರಾಜ್ ಹಾಗೂ ಹೃತಿಕಾ ಶ್ರೀನಿವಾಸ್ ನಾಯಕಿಯರಾಗಿ ನಟಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟಿ ಮಿಲನಾ ನಾಗರಾಜ್ ಮಾತನಾಡಿ, ʻʻಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಕಥೆಯನ್ನು ಅಭಿಷೇಕ್ ಬಂದು ಹೇಳಿದರು. ಅನೀಶ್ ಅವರ ಜತೆ ಸಿನಿಮಾ ಮಾಡೋದು ಖುಷಿ ಕೊಟ್ಟಿದೆ. ಇಲ್ಲಿವರೆಗೂ ಮಾಡಿದ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಒಳ್ಳೆಯ ತಂಡದ ಜತೆ ಕೆಲಸ ಮಾಡಿರುವ ಅನುಭವ ನನಗೆ. ನಾನು ಸಿನಿಮಾ ನೋಡಿಲ್ಲ. ಸಿನಿಮಾ ನೋಡಲು ನಾನು ಎಕ್ಸೈಟ್ ಆಗಿದ್ದಾನೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿʼʼ ಎಂದರು.

ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾತನಾಡಿ, ʻʻಗುಳ್ಟು ಪ್ರೊಡ್ಯೂಸರ್ ಹಾಗೂ ಅಕಿರಾ ಸಿನಿಮಾ ಪ್ರೊಡ್ಯೂಸರ್ ಒಂದೊಳ್ಳೆ ಕಥೆ ಇದ್ದರೆ ಹೇಳಿ ಎಂದರು. ಕಥೆ ಹೇಳಿದೆ. ನಾನು ಒಂದು ಮಾಸ್ ಕಥೆ ಮಾಡಿಕೊಂಡು ಬಂದು ಹೇಳಿದೆ. ಔಟ್ ಆಫ್ ದಿ ಬಾಕ್ಸ್ ಕಥೆ ಮಾಡಲು ರೆಡಿ ಇದ್ದರು. ಆಗ ಹೇಳಿದ್ದೇ ಆರಾಮ್ ಅರವಿಂದ್ ಸ್ವಾಮಿ ಕಥೆ. ಎಲ್ಲರೂ ಬಂದು ಆರಾಮ್ ಇದ್ದೀಯಾ? ಎಂದು ಕೇಳ್ತಾರೆ. ಯಾರಿಗೂ ನಮ್ಮ ಕಷ್ಟ ಹೇಳೋದಕ್ಕೆ ಆಗಲ್ಲ. ಹೇಳಿದ್ದರೆ ಸಹಾಯ ಮಾಡ್ತೀಯಾ? ಎಂದು ಕೇಳುತ್ತೇವೆ. ಅವರು ನಕ್ಕು ಸುಮ್ಮನೇ ಆಗುತ್ತಾರೆ. ಈ ಬೇಸ್ ಲೈನ್ ಮೇಲೆ ಶುರುವಾದ ಕಥೆ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ಎರಡು ಸಿನಿಮಾ ಆದಾಗ ಎಲ್ಲರೂ ಒಳ್ಳೆ ಭವಿಷ್ಯವಿದೆ ಎನ್ನುವರು. ಆದರೆ ಆರಾಮ್ ಅರವಿಂದ್ ಸ್ವಾಮಿಯೇ ನನ್ನ ಭವಿಷ್ಯ. ಈ ಸಿನಿಮಾದಿಂದ ನನ್ನ ಭವಿಷ್ಯ ಶುರುವಾಗುತ್ತಿದೆ. ಸಿನಿಮಾಗೆ ಏನೂ ಬೇಕು ಎಲ್ಲವನ್ನೂ ನಿರ್ಮಾಪಕರು ಕೊಟ್ಟಿದ್ದಾರೆ. ಪಾತ್ರ ವರ್ಗದ ಅಭಿನಯವೂ ಚೆನ್ನಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ಆರಾಮ್ ಅರವಿಂದ್ ಸ್ವಾಮಿ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್

ನಟಿ ಹೃತಿಕಾ ಶ್ರೀನಿವಾಸ್ ಮಾತನಾಡಿ, ʻʻಆರಾಮ್ ಅರವಿಂದ್ ಸ್ವಾಮಿ ನನ್ನ ಎರಡನೇ ಸಿನಿಮಾ. ನನ್ನ ಪಾತ್ರ ಬಹಳ ವಿಭಿನ್ನವಾಗಿದೆ. ನನ್ನ ಪಾತ್ರ ಕೇಳಿದಾಗಲೇ ಥ್ರಿಲ್ ಆಗಿದ್ದೆ. ಆರಾಮ್ ಅರವಿಂದ್ ಸ್ವಾಮಿ ಒಂದೊಳ್ಳೆ ಸಿನಿಮಾ. ನಿಮ್ಮ ಬೆಂಬಲ ಚಿತ್ರದ ಮೇಲೆ ಸದಾ ಇರಲಿʼʼ ಎಂದರು.

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.

ಇದನ್ನೂ ಓದಿ: Milana Nagaraj | ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ

‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರಿಗೆ ಆರಾಮ್ ಅರವಿಂದ್ ಸ್ವಾಮಿ ಮೂನರೇ ಸಿನಿಮಾ. ಈ ಚಿತ್ರದ ಮೂಲಕ ಅನೀಶ್ ತೇಜೇಶ್ವರ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮುಂದಿನ ತಿಂಗಳು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲಿರುವ ಚಿತ್ರತಂಡ ಜನವರಿ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲಿದೆ.

Exit mobile version