Kannada New Movie Abhiramachandra U Certificate Kannada New Movie: ಬಿಡುಗಡೆಗೆ ಸಜ್ಜಾದ ಅಭಿರಾಮಚಂದ್ರ; ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್! Vistara News
Connect with us

South Cinema

Kannada New Movie: ಬಿಡುಗಡೆಗೆ ಸಜ್ಜಾದ ಅಭಿರಾಮಚಂದ್ರ; ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್!

Kannada New Movie: ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

VISTARANEWS.COM


on

Abhiramachandra U Certificate
Koo

ಬೆಂಗಳೂರು: ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ (Kannada New Movie) ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೋನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಅಭಿರಾಮಚಂದ್ರ ಸಿನಿಮಾ ಮೂಡಿ ಬರುತ್ತಿದ್ದು, ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಅಭಿರಾಮಚಂದ್ರ’ ಸಿನಿಮಾ ಮೂಡಿ ಬರುತ್ತಿದ್ದು, ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ’ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

ಎ.ಜಿ. ಎಸ್ ಎಂಟರ್ಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

ನಟಿ ನಯನತಾರಾ (Nayanatara) ತಮ್ಮ ಅವಳಿ ಮಕ್ಕಳ ಆರೈಕೆಯಲ್ಲಿದ್ದಾರೆ. ನಟಿ ಮಕ್ಕಳ ಜತೆ ಫೋಟೊಶೂಟ್ ಮಾಡಿಸಿದ್ದಾರೆ.

VISTARANEWS.COM


on

Edited by

Actress Nayanthara
Koo
Actress Nayanthara

ನಟಿ ನಯನತಾರಾ (Actress Nayanthara) ತಮ್ಮ ಅವಳಿ ಮಕ್ಕಳ ಆರೈಕೆಯಲ್ಲಿದ್ದಾರೆ. ನಟಿ ಮಕ್ಕಳ ಜತೆ ಫೋಟೊಶೂಟ್ ಮಾಡಿಸಿದ್ದಾರೆ. ಈ ಕುರಿತ ಫೋಟೊವನ್ನ ನಿರ್ದೇಶಕ ವಿಘ್ನೇಶ್ ಶಿವನ್ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

Actress Nayanthara

ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

Actress Nayanthara

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ಹೇಳಿದ್ದರು.

Actress Nayanthara
ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಹಲವು ಫೋಟೊಗಳನ್ನು ವಿಘ್ನೇಶ್‌ ಶೇರ್‌ ಮಾಡಿಕೊಂಡಿದ್ದಾರೆ ಮಕ್ಕಳ ಜತೆ ನಯನತಾರಾ ಕ್ಯೂಟ್‌ ಆಗಿ ಪೋಸ್‌ ನೀಡಿದ್ದಾರೆ
Actress Nayanthara

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ʻʻಜೀವನದಲ್ಲಿ ಅದೆಷ್ಟೇ ಕಷ್ಟಗಳಿದ್ದರೂ ಮಕ್ಕಳ ಮುಖ ನೋಡಿದಾಗ ಮತ್ತಷ್ಟು ಎನರ್ಜಿ ಬರುತ್ತದೆ. ಖುಷಿಯಾಗುತ್ತದೆʼʼ ಎಂದು ನಿರ್ದೇಶಕ ಬರೆದುಕೊಂಡಿದ್ದಾರೆ.

Continue Reading

South Cinema

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

ಮೆಗಾಸ್ಟಾರ್‌ ಚಿರಂಜೀವಿ (Chiranjeevi) ಅವರು ಭೋಲಾ ಶಂಕರ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾ ಸೆಟ್‌ನ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Edited by

bhola shankar movie set
Koo

ಹೈದರಾಬಾದ್‌: ವಾಲ್ತೇರು ವೀರಯ್ಯ ಸಿನಿಮಾ ಹಿಟ್‌ ಆದ ಸಂಭ್ರಮದಲ್ಲಿರುವ ಮೆಗಾಸ್ಟಾರ್‌ ಚಿರಂಜೀವಿ (Chiranjeevi) ಸದ್ಯ ಭೋಲಾ ಶಂಕರ್‌ ಸಿನಿಮಾದ ಚಿತ್ರೀಕರಣದಲ್ಲಿ ಬಿಜಿ ಇದ್ದಾರೆ. ಈ ಸಿನಿಮಾದಲ್ಲಿ ನಟಿ ತಮನ್ನಾ ಮತ್ತು ಕೀರ್ತಿ ಸುರೇಶ್‌ ಅವರೊಂದಿಗೆ ನಟಿಸುತ್ತಿರುವ ಚಿರಂಜೀವಿ ಸಿನಿಮಾದ ಸೆಟ್‌ನ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾದ ಹಾಡೊಂದನ್ನು ಚಿತ್ರೀಕರಿಸಲಾಗುತ್ತಿರುವ ಸೆಟ್‌ನ ವಿಡಿಯೊವನ್ನು ಚಿರಂಜೀವಿ ಹಂಚಿಕೊಂಡಿದ್ದಾರೆ. ತೆಲುಗಿನ ಫೇಮಸ್ ಕೊರಿಯೋಗ್ರಾಫರ್ ಶೇಖರ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಹಾಡು ಇದಾಗಿದೆ. ಚಿರಂಜೀವಿ ಹಂಚಿಕೊಂಡಿರುವ ವಿಡಿಯೊದಲ್ಲಿ ಅವರು ನಟಿಯರೊಂದಿಗೆ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಹಾಗೆಯೇ ಆ ವಿಡಿಯೋದಲ್ಲಿ ನಾಯಕಿ ತಮನ್ನಾ, ಕೀರ್ತಿ ಸುರೇಶ್, ವೆನ್ನೆಲ ಕಿಶೋರ್, ಸುಶಾಂತ್, ಗೆಟಪ್ ಶ್ರೀನು, ಹೈಪರ್ ಆದಿ ಮತ್ತು ಬ್ಯಾನರ್ಜಿ ಮುಂತಾದ ನಟ ನಟಿಯರು ಕಾಣಿಸಿಕೊಂಡಿದ್ದಾರೆ.

ಈ ಭೋಲಾ ಶಂಕರ್‌ ಸಿನಿಮಾ ಇದೇ ಆಗಸ್ಟ್‌ 11ರಂದು ತೆರೆ ಕಾಣಲಿದೆ. ಚಿತ್ರತಂಡವು ಹಾಡುಗಳನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಅವುಗಳ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದಲ್ಲಿ ಚಿರಂಜೀವಿ ಕ್ಯಾಬ್ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನ ವೇದಲಂ ಚಿತ್ರದ ತೆಲುಗು ರಿಮೇಕ್ ಆಗಿ ಈ ಚಿತ್ರ ಬರುತ್ತಿದೆ.

ಚಿರಂಜೀವಿ ಅವರು ಈ ಹಿಂದೆ ಗ್ಯಾಂಗ್ ಲೀಡರ್, ಇಂದ್ರ ಮತ್ತಿತರ ಚಿತ್ರಗಳಲ್ಲಿ ಕ್ಯಾಬ್ ಡ್ರೈವರ್ ಆಗಿ ನಟಿಸಿದ್ದರು. ಇದೀಗ ‘ಭೋಲಾ ಶಂಕರ್’ನಲ್ಲಿ ಮತ್ತೊಮ್ಮೆ ಅದೇ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೋಲಾ ಶಂಕರ ಚಿತ್ರವನ್ನು ಅನಿಲ್ ಸುಂಕರ, ಕೆ.ವೈ. ರಾಮರಾವ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

Continue Reading

South Cinema

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

Darbar Movie Review: ಸತತ 23 ವರ್ಷಗಳ‌ ನಂತರ ವಿ.ಮನೋಹರ್‌ ಮತ್ತೆ ನಿರ್ದೇಶನಕ್ಕೆ ʻದರ್ಬಾರ್‌ʼ ಸಿನಿಮಾ ಮೂಲಕ ಕೈ ಹಾಕಿದ್ದಾರೆ. ಒಂದೊಳ್ಳೆಯ ಕಂಟೆಂಟ್ ಸಿನಿಮಾ.

VISTARANEWS.COM


on

Edited by

Darbar Movie Review
Koo

ಯಶಸ್ವಿ ದೇವಾಡಿಗ, ಬೆಂಗಳೂರು

ಸಿನಿಮಾ: ದರ್ಬಾರ್‌
ನಿರ್ದೇಶನ: ವಿ. ಮನೋಹರ್‌
ನಿರ್ಮಾಪಕರು: ಬಿ. ಎನ್‌ ಶಿಲ್ಪಾ
ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ: ಸತೀಶ್
ಛಾಯಾಗ್ರಹಣ: ಎಸ್‌ .ಸಾಮ್ರಾಟ್‌
ಸಂಗೀತ: ವಿ. ಮನೋಹರ್‌
ತಾರಾಗಣ: ಎಂ.ಎನ್.ಲಕ್ಷ್ಮಿದೇವಿ, ಅಶೋಕ್, ಜಾಹ್ನವಿ, ಹುಲಿ ಕಾರ್ತಿಕ್‌, ಸತೀಶ್‌, ಸಂತು ಕಾರ್ತೀಕ್‌, ನವೀನ್‌ ಪಡಿಲ್‌, ಸಾಧು ಕೋಕಿಲ ಇತರರು.

23 ವರ್ಷಗಳ‌ ನಂತರ, ಸಂಗೀತ ನಿರ್ದೇಶಕ ವಿ. ಮನೋಹರ್‌ ಮತ್ತೆ ನಿರ್ದೇಶನಕ್ಕೆ ʻದರ್ಬಾರ್‌ʼ ಸಿನಿಮಾ ಮೂಲಕ ಕೈ ಹಾಕಿದ್ದಾರೆ. ಒಂದೊಳ್ಳೆಯ ಕಂಟೆಂಟ್ ಸಿನಿಮಾ. ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ರಾಜಕೀಯ ವಿಡಂಬನಾತ್ಮಕ ಕಥಾಹಂದರವಿದೆ. ಜೂನ್‌ 9ರಂದು ರಾಜ್ಯಾದಂತ ತೆರೆ ಕಂಡಿದ್ದು, ಹೊಸಬರ ಪ್ರಯತ್ನಕ್ಕೆ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದಾರೆ. ಜನ ದುಡ್ಡು ತೆಗೆದುಕೊಂಡು ಮತ ಹಾಕಿದರೆ ಪರಿಣಾಮ ಏನಾಗಲಿದೆ ಎಂಬುದೇ ಸಿನಿಮಾದ ಒನ್‌ಲೈನ್‌ ಸ್ಟೋರಿ. ಈ ಸಿನಿಮಾ ಮುಖ್ಯವಾಗಿ ಪ್ರಾಮಾಣಿಕ‌ ಅಭ್ಯರ್ಥಿಗೆ ಮತದಾರರು ಮತ ಹಾಕಬೇಕು ಎಂಬ ಸಂದೇಶವನ್ನು ನೀಡುತ್ತದೆ.

ಹಳ್ಳಿಯ ಭಾಷೆಯ ಸೊಗಡು, ಗ್ರಾಮೀಣ ಭಾಗದ ಜನರ ಸ್ಥಿತಿ ಗತಿ, ಅವರ ಮುಗ್ದತೆ ಅಷ್ಟೇ ಅಲ್ಲದೇ ಸಿನಿಮಾದ ಹಿನ್ನೆಲೆ ಧ್ವನಿ ಈ ಎಲ್ಲ ಅಂಶಗಳನ್ನು ಉಳಿಸಿಕೊಳ್ಳುವಲ್ಲಿ ಸಿನಿಮಾ ಯಶಸ್ವಿಯಾಗಿದೆ. ಕಾಮಿಡಿ ಕಿಲಾಡಿಯಿಂದ ಬಂದ ಸಂತು ಹಾಗೂ ಹುಲಿ ಕಾರ್ತಿಕ್‌ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈ ಬಾರಿ ಇಡೀ ಸಿನಿಮಾದಲ್ಲಿ ಹುಲಿ ಕಾರ್ತಿಕ್‌ ಅಭಿನಯ ಅಮೋಘವಾಗಿತ್ತು. ಇದೇ ಮೊದಲ ಬಾರು ಹುಲಿ ಕಾರ್ತಿಕ್‌ ವಿಲನ್‌ ಪಾತ್ರವನ್ನು ಮಾಡಿದ್ದಾರೆ. ಸಿನಿಮಾ ಮುಗಿಯವರೆಗೂ ಅವರ ನಾಗನ ಪಾತ್ರ ಪ್ರೇಕ್ಷಕರು ಮರೆಯುವಂತಿಲ್ಲ.

ಹೊಸಬರ ಪ್ರಯತ್ನ!

ಸಿನಿಮಾದಲ್ಲಿ ಹೊಸ ಕಲಾವಿದರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಕಾಮಿಡಿ ಕಿಲಾಡಿ ಸಂತು ನಾಯಕನ ಜತೆಗೆ ಸದಾ ಬೆನ್ನೆಲುಬಾಗಿ ಇರುವನು. ಮೊದಲಾರ್ಧದಲ್ಲಿ ನಾಯಕ ಸತೀಶ್‌ ಅವರ ಮೇಲೆ ಕಥೆ ಸಾಗಿದ್ದು, ಬಳಿಕ ಖಳನಾಯಕ ಹುಲಿ ಕಾರ್ತಿಕ್‌ ಮೇಲೆ ಕಥೆ ಸಾಗುತ್ತದೆ. ಸಂತು ಪಾತ್ರ ತುಂಬಾ ನಗಿಸುತ್ತದೆ. ಸಂತು ಅವರ ಒಂದೊಂದು ಪಂಚಿಂಗ್‌ ಲೈನ್‌ಗೆ ಪ್ರೇಕ್ಷಕರು ಬಿದ್ದು ಬಿದ್ದು ನಗುವುದಂತೂ ಗ್ಯಾರಂಟಿ. ಹುಲಿ ಕಾರ್ತಿಕ್‌ ಕಾಮಿಡಿ ಬಿಟ್ಟು ಇದೇ ಮೊದಲ ಬಾರಿ ವಿಲನ್ ರೋಲ್ ಮಾಡಿದ್ದಾರೆ. ನಾಯಕ ಸತೀಶ್ ತಾವೊಬ್ಬರೇ ಸ್ಕ್ರೀನ್ ಮೇಲಿರಬೇಕು ಎಂದು ಯೋಚಿಸದೆ ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ಅದಕ್ಕೆ ಉದಾಹರಣೆಯೇ ಹುಲಿ ಕಾರ್ತಿಕ್‌. ಪ್ರತಿ ಪಾತ್ರಕ್ಕೂ ನುರಿತ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು.

Darbar Movie Review

ಇದನ್ನೂ ಓದಿ: V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

ನಿರ್ದೇಶಕ ವಿ. ಮನೋಹರ್‌ ಓ ಮಲ್ಲಿಗೆ ನಂತರ ನಿರ್ದೇಶನ ಮಾಡಿರುವ ಚಿತ್ರ ದರ್ಬಾರ್. ಸಿನಿಮಾದಲ್ಲಿ ಮೂರು ಹಾಡುಗಳು ಇದ್ದು, ಟೈಟಲ್ ಸಾಂಗ್‌ವನ್ನು ಚಂದನ್ ಶೆಟ್ಟಿ ಹಾಡಿದ್ದಾರೆ, ರಾಜಕೀಯ ಹಾಡನ್ನು ಉಪೇಂದ್ರ ಹಾಡಿದ್ದಾರೆ, ಇನ್ನು ಡ್ಯುಯೆಟ್ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ನಿರ್ದೇಶಕ ವಿ. ಮನೋಹರ್‌ ಕಥೆಯ ಪ್ರಸ್ತುತ ಪಡಿಸಿದ ರೀತಿ ಚೆನ್ನಾಗಿಯೇ ಇದೆ. ಆದರೆ ಸಿನಿಮಾದ ಮೊದಲಾರ್ಧ ಭಾಗ ಸಿನಿಮಾ ಲ್ಯಾಗ್‌ ಆಗಿದ್ದು, ಎರಡನೇ ಭಾಗ ಹಾಗೇ ಪ್ರೇಕ್ಷಕರನ್ನು ಆರಾಮದಾಯಕವಾಗಿ ನೋಡಿಸಿಕೊಂಡು ಹೋಗಿದೆ. ಇನ್ನು ವಿ. ಮನೋಹರ್‌ ಸಂಗೀತ ಬಗ್ಗೆ ಮಾತಿಲ್ಲ. ಸಾಧು ಕೋಕಿಲ್, ನವೀನ್ ಪಡೀಲ್ ಜೋಡಿ ಕ್ಲೈಮ್ಯಾಕ್ಸ್‌ ಹಂತದಲ್ಲಿ ನೋಡುಗರನ್ನು ರಂಜಿಸಿತು.

ಸಿನಿಮಾ ಮೇಕಿಂಗ್‌ ಜತೆಗೆ ಫೈಟಿಂಗ್‌ ಸೀನ್‌ಗಳು ಮಿಶ್ರವಾಗಿದೆ. ಒಟ್ಟಾರೆ ಸಿನಿಮಾದಲ್ಲಿ ಹುಲಿ ಕಾರ್ತಿಕ್‌, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅನೇಕ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ದರ್ಬಾರ್ ಪ್ರೊಡಕ್ಷನ್ಸ್ ಮೂಲಕ ಬಿ.ಎನ್. ಶಿಲ್ಪ ಅವರು ನಿರ್ಮಾಣ ಮಾಡಿದ್ದಾರೆ. ಮಾಸ್ ಮಾದ, ವಿನೋದ್ ಸಾರಥ್ಯದ 3 ಸಾಹಸ ದೃಶ್ಯಗಳು ಚಿತ್ರದಲ್ಲಿವೆ.

Continue Reading

South Cinema

Corset Fashion: ಬಣ್ಣ ಬಣ್ಣದ ಕಾರ್ಸೆಟ್‌ ಕ್ರಾಪ್‌ ಟಾಪ್‌ ಜಾದೂ…

ಕೇವಲ ಡೆನೀಮ್‌ ಹಾಗೂ ಬ್ಲಾಕ್‌ ಶೇಡ್‌ಗಳಿಗೆ ಸೀಮಿತವಾಗಿದ್ದ ಬಣ್ಣಬಣ್ಣದ ಕಾರ್ಸೆಟ್‌ ಕ್ರಾಪ್‌ ಟಾಪ್‌ಗಳು ಇಂದು ಯುವತಿಯರನ್ನು ಸೆಳೆದಿವೆ. ಅಲ್ಲದೇ, ಇವು ತಾರೆಯರ ನೆಚ್ಚಿನ ಔಟ್‌ಫಿಟ್‌ನಲ್ಲೊಂದಾಗಿವೆ. ಏನಿದು ಕಾರ್ಸೆಟ್‌ ಕ್ರಾಪ್‌ ಟಾಪ್‌ ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Edited by

Corset fashion
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು

ಕಾರ್ಸೆಟ್‌ ಬಣ್ಣ ಬಣ್ಣದ ಕಾರ್ಸೆಟ್‌ ಟಾಪ್‌ಗಳು ಇದೀಗ ಯುವತಿಯರ ವೆಸ್ಟರ್ನ್ ಫ್ಯಾಷನ್‌ ಲಿಸ್ಟ್‌ಗೆ ಸೇರಿವೆ. ಈ ಹಿಂದೆ ಕೇವಲ ಡೆನೀಮ್‌ ಹಾಗೂ ಬ್ಲಾಕ್‌ ಶೇಡ್‌ಗಳಿಗೆ ಸೀಮಿತವಾಗಿದ್ದ ಕಾರ್ಸೆಟ್‌ ಟಾಪ್‌ ಇದೀಗ ಬಣ್ಣ ಬದಲಾಯಿಸಿವೆ. ಯುವತಿಯರ ನೆಚ್ಚಿನ ಟಾಪ್‌ಗಳಲ್ಲೊಂದಾಗಿರುವ ಇವು ಸಿನಿ ತಾರೆಯರ ನೆಚ್ಚಿನ ಔಟ್‌ಫಿಟ್‌ನಲ್ಲೂ ಸೇರಿವೆ.

ಏನಿದು ಕಾರ್ಸೆಟ್‌ ಕ್ರಾಪ್‌ ಟಾಪ್‌?

ಟಮ್ಮಿ ಭಾಗವನ್ನು ಸ್ಲಿಮ್‌ ಆಗಿ ಕಾಣಿಸಬಲ್ಲ ವಿನ್ಯಾಸ ಈ ಟಾಪ್‌ಗಿದೆ. ಮೂಲತಃ ಪಾಶ್ಚಿಮಾತ್ಯ ರಾಷ್ಟ್ರಗಳ ಫ್ಯಾಷನ್‌ ಆದ ಈ ಟಾಪ್‌, ಹೊಟ್ಟೆ ಭಾಗ ಸ್ಲಿಮ್‌ ಆಗಿ ಕಾಣಿಸುವಂತೆ ಮಾಡಬಲ್ಲ ತಂತ್ರಜ್ಞಾನ ಈ ಡಿಸೈನ್‌ನಲ್ಲಿಅಡಗಿದೆ. ಅಷ್ಟೇಕೆ! ಕರ್ವ್ಸ್ ಹೊಂದಿರುವವರಿಗೆ ಹೇಳಿ ಮಾಡಿಸಿದ ಟಾಪ್‌ ಇದು. ಕಾರ್ಸೆಟ್‌ ಟಾಪ್‌ ಫ್ಯಾಷನ್‌ನಲ್ಲಿಸಾಕಷ್ಟು ಡಿಸೈನ್‌ಗಳನ್ನು ನೋಡಬಹುದು. ಬಾಡಿಕವ್ರ್ಸ್ ಇರುವವರಿಗೆ ಹೇಳಿ ಮಾಡಿಸಿದ ಟಾಪ್‌ ಇದು ಎನ್ನುತ್ತಾರೆ ಸ್ಟೈಲಿಸ್ಟ್‌ ಚಿತ್ರಾ.

ಕಾರ್ಸೆಟ್‌ ಟಾಪ್‌ಗಳು ಯಾವ ಮಟ್ಟಿಗೆ ಫಿಟ್ಟಿಂಗ್‌ ಹೊಂದಿರುತ್ತವೆ ಎಂದರೇ, ಬಾಡಿ ಕರ್ವ್‌ಗೆ ತಕ್ಕಂತೆ ಅದರಲ್ಲೂ ವೇಸ್ಟ್‌ ಲೈನ್‌ ತೀರಾ ನಾಜೂಕಾಗಿ ರೂಪಿಸಲಾಗಿರುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ಇಲ್ಲಿಇಂಚು ಇಂಚಿಗೂ ಫಿಟ್ಟಿಂಗ್‌ ಬಗ್ಗೆ ಗಮನಹರಿಸಲಾಗಿರುತ್ತದೆ. ಹಾಗಾಗಿ ಧರಿಸಿದವರ ಬಾಡಿ ಕವ್ರ್ಸ್ ನೋಡಲು ಫಿಟ್‌ ಆಗಿರುವಂತೆ ಈ ಟಾಪ್‌ಗಳು ಇಲ್ಯೂಷನ್‌ ಕ್ರಿಯೇಟ್‌ ಮಾಡುತ್ತವೆ.

ಇದನ್ನೂ ಓದಿ: Skinny Dresses | ಸ್ಕಿನ್ನಿ ಉಡುಪುಗಳು ದೇಹಕ್ಕೆ ಬಾಧಕವೇ?

ಕಾರ್ಸೆಟ್‌ ಕ್ರಾಪ್‌ ಟಾಪ್‌ ಆಯ್ಕೆ

ಕೊಂಚ ಉದ್ದಗಿರುವವರಿಗೆ ಯಾವ ಬಗೆಯ ಕಾರ್ಸೆಟ್‌ ಟಾಪ್‌ ಆದರೂ ಸರಿಯೇ ಸೂಟ್‌ ಆಗುತ್ತದೆ. ಪ್ಲಂಪಿಯಾಗಿರುವವರು ಟ್ರಯಲ್‌ ನೋಡಿಯೇ ಆಯ್ಕೆ ಮಾಡಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ ಸೂರಜ್‌. ಅವರ ಪ್ರಕಾರ, ಕಾರ್ಸೆಟ್‌ ಟಾಪ್‌ಗಳು ಮಾಡರ್ನ್ ಲುಕ್‌ ಕಲ್ಪಿಸುತ್ತವೆ. ಹಾಗಾಗಿ ತಾರೆಯರ ನೆಚ್ಚಿನ ಕ್ರಾಪ್‌ ಟಾಪ್‌ಗಳಲ್ಲಿ ಇವು ಸೇರಿವೆ ಎನ್ನುತ್ತಾರೆ. ಆಯಾ ಬಾಡಿ ಹೈಟ್‌ಗೆ ತಕ್ಕಂತೆ ಮ್ಯಾಚ್‌ ಆಗುವ ವಿನ್ಯಾಸದ ಕ್ರಾಪ್‌ ಕಾರ್ಸೆಟ್‌ ಟಾಪ್‌ಗಳನ್ನು ಧರಿಸುವುದು ಅಗತ್ಯ. ಇಲ್ಲವಾದಲ್ಲಿ ನೋಡಲು ಚೆನ್ನಾಗಿ ಕಾಣದು ಎನ್ನುತ್ತಾರೆ ಅವರು.

ಇದನ್ನೂ ಓದಿ: Skinny Dresses | ಸ್ಕಿನ್ನಿ ಉಡುಪುಗಳು ದೇಹಕ್ಕೆ ಬಾಧಕವೇ?

ಪರ್ಫೆಕ್ಟ್‌ ಕಾರ್ಸೆಟ್‌ ಕ್ರಾಪ್‌ ಟಾಪ್‌

  • ಫಿಟ್ಟಿಂಗ್‌ ಸರಿಯಾಗಿರುವುದು ಅಗತ್ಯ.
  • ಬೆನ್ನು ನೋವಿರುವವರು ಫಿಟ್ಟಿಂಗ್‌ ಕಾರ್ಸೆಟ್‌ ಆವಾಯ್ಡ್‌ ಮಾಡಿ.
  • ಈ ಟಾಪ್‌ ಲೂಸಾಗಿರಕೂಡದು.
  • ಪಾಸ್ಟಲ್‌ ಶೇಡ್‌ನವು ಹೆಚ್ಚು ಪ್ರಚಲಿತದಲ್ಲಿವೆ.
  • ಜೀನ್ಸ್‌ ಪ್ಯಾಂಟ್‌-ಸ್ಕರ್ಟ್-ಲೆಹೆಂಗಾಗೂ ಮಿಕ್ಸ್‌ ಮ್ಯಾಚ್‌ ಮಾಡಬಹುದು.
  • ಬಾರ್ಡಟ್, ಕೋಲ್ಡ್‌ ಶೋಲ್ಡರ್‌ನವು ಚಾಲ್ತಿಯಲ್ಲಿವೆ.
  • ಹೈ ಹೀಲ್ಸ್‌ ಪರ್ಫೆಕ್ಟ್‌ ಲುಕ್‌ ನೀಡುತ್ತದೆ.

(ಲೇಖಕಿ : ಫ್ಯಾಷನ್‌ ಪತ್ರಕರ್ತೆ)

Continue Reading
Advertisement
Liquor Consumption of poor man
ಕರ್ನಾಟಕ9 mins ago

Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?

Anganawadi worker
ಕರ್ನಾಟಕ9 mins ago

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Apsara Murder In Hyderabad
ಕ್ರೈಂ12 mins ago

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Siddaramaiah as a conductor imaginary photo
ಕರ್ನಾಟಕ21 mins ago

Congress Guarantee: ಪಾರ್ಟ್‌ ಟೈಂ ಬಸ್ ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

Actress Nayanthara
South Cinema32 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ34 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್38 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema41 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema44 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ57 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!