South Cinema
Kannada New Movie: ‘ಕೆಂಡದ ಸೆರಗು’ ಸಿನಿಮಾದ ಡಬ್ಬಿಂಗ್ ಮುಗಿಸಿದ ಆ್ಯಕ್ಷನ್ ಕ್ವಿನ್ ಮಾಲಾಶ್ರೀ!
Kannada New Movie: ತುಂಬ ವರ್ಷಗಳ ನಂತರ ಕೆಂಡದ ಸೆರಗು ಸಿನಿಮಾಗೆ ಮಾಲಾಶ್ರೀ ಅವರು ಧ್ವನಿ ಕೊಟ್ಟಿದ್ದು ಚಿತ್ರತಂಡಕ್ಕೆ ಮತ್ತೊಂದು ಶಕ್ತಿ ಇದ್ದಂತೆ ಎಂದು ತಿಳಿಸಿದ್ದಾರೆ ನಿರ್ದೇಶಕ ರಾಕಿ ಸೋಮ್ಲಿ ಅವರು.
ಬೆಂಗಳೂರು: ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ (Kannada New Movie) ಬಹುಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ಜೂನ್ 24ರಂದು ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ ತಮ್ಮ ಧ್ವನಿ ಕೊಡುತ್ತಾರೆ. ತುಂಬ ವರ್ಷಗಳ ನಂತರ ಕೆಂಡದ ಸೆರಗು ಸಿನಿಮಾಗೆ ಮಾಲಾಶ್ರೀ ಅವರು ಧ್ವನಿ ಕೊಟ್ಟಿದ್ದು ಚಿತ್ರತಂಡಕ್ಕೆ ಮತ್ತೊಂದು ಶಕ್ತಿ ಇದ್ದಂತೆ ಎಂದು ತಿಳಿಸಿದ್ದಾರೆ ನಿರ್ದೇಶಕ ರಾಕಿ ಸೋಮ್ಲಿ ಅವರು.
ಈ ಹಿಂದೆ ಕೆಂಡದ ಸೆರಗು ಸಿನಿಮಾದ ಪ್ರೆಸ್ ಮಿಟ್ನಲ್ಲಿ ಮಾತಾನಾಡಿದ್ದ ಮಾಲಾಶ್ರೀ ಅವರು,ʻʻ “ಕೆಂಡದ ಸೆರಗು” ದೇಸಿ ಕುಸ್ತಿ ಕಥೆಯ ಜತೆಗೆ ಹೃದಯಕ್ಕೆ ನಾಟುವ ಭಾವನಾತ್ಮಕ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಸಿನಿಮಾ. ನಾನು ತುಂಬ ಖುಷಿಯಿಂದ ಸೆಟ್ ನಲ್ಲಿ ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ತಂಡದ ಪ್ರತಿ ಒಬ್ಬರು ಸಹ ತುಂಬಾನೇ ಶ್ರಮವಹಿಸಿ ಈ ಸಿನಿಮಾದ ಕೆಲಸ ಮಾಡುತ್ತಿದ್ದಾರೆ. ಖಂಡಿತವಾಗಿ ಇದು ಗೆಲ್ಲುವ ಸಿನಿಮಾ, ಈ ವರ್ಷದ ಸಾಲಿನಲ್ಲಿ ನಿಲ್ಲುವ ಸಿನಿಮಾ, ಈ ತಂಡದ ಜತೆಗೆ ನಾನು ಸದ ಇರುತ್ತೇನೆʼʼ ಎಂದು ಹೇಳಿದ್ದಾರೆ.
ಚಿತ್ರಿಕರಣ ಮುಗಿಸಿ ಪೊಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕೆಂಡದ ಸೆರಗು ಇನ್ನೆರಡು ತಿಂಗಳಲ್ಲಿ ಬಿಡುಗಡೆಗೆ ನೀರಿಕ್ಷೆಯಲ್ಲಿದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಫೈಟ್, ಆರು ಹಾಡುಗಳಲ್ಲಿದ್ದು ಈಗಾಗಲೇ ಒಂದು ಹಾಡು ಮತ್ತು ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.
ಇದನ್ನೂ ಓದಿ: Kannada New Movie: ಮಾಲಾಶ್ರೀ-ಭೂಮಿ ಶೆಟ್ಟಿ ಅಭಿನಯದ ಕಾದಂಬರಿ ಆಧಾರಿತ ‘ಕೆಂಡದ ಸೆರಗು’ ಸಿನಿಮಾ ಟೀಸರ್ ರಿಲೀಸ್
ಇನ್ನೂ ಉಳಿದ ತಾರಾಗಣದಲ್ಲಿ ಯಶ್ ಶೆಟ್ಟಿ, ವರ್ಧನ್, ಬಾಲುರಾಜ್ ವಾಡಿ, ಶೋಭಿತ, ಹರೀಶ್ ಅರಸು, ಪ್ರತಿಮಾ, ಮೋಹನ್, ಸಿಂಧನೂರು ಉಮೇಶ್, ಸಿಂಧೂ ಲೋಕನಾಥ್ ಅಭಿನಯಿಸಿದ್ದಾರೆ.
ಈ ಚಿತ್ರಕ್ಕೆ ವಿಪಿನ್ ರಾಜ್ ಅವರ ಛಾಯಾಗ್ರಹಣ, ವೀರೇಶ್ ಕಬ್ಳಿ ಯವರ ಸಂಗೀತ, ಶ್ರೀಕಾಂತ್ ಅವರ ಸಂಕಲನ, ಶ್ರೀಮುತ್ತು ಟಾಕೀಸ್ ಅಡಿಯಲ್ಲಿ , ಕೊಟ್ರೇಶ್ ಗೌಡ ಅವರು ಬಂಡವಾಳ ಹೂಡಿದ್ದು ಗೆಲ್ಲುವ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ.
South Cinema
Vijay Sethupathi: ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!
2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು.
ಬೆಂಗಳೂರು: ವಿಜಯ್ ಸೇತುಪತಿ (Vijay Sethupathi) ಸದ್ಯ ʻಜವಾನ್ʼ ಸಿನಿಮಾದ ಸಕ್ಸಸ್ ಮೂಡ್ನಲ್ಲಿ ಇದ್ದಾರೆ. ಬಹುಭಾಷಾ ನಟ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಅವರು ಬ್ಯುಸಿಯಾಗಿದ್ದಾರೆ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ.
2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು. ಹೀಗಾಗಿ ಒಂದು ಸಿನಿಮಾದಲ್ಲಿ ಮಗಳಂತೆ ನೋಡಿದ ನಟಿಯ ಜತೆ ಮತ್ತೊಂದು ಸಿನಿಮಾದಲ್ಲಿ ರೊಮ್ಯಾನ್ಸ್ ಮಾಡುವುದಿಲ್ಲ ಎಂಬುದಾಗಿ ಸೇತುಪತಿ ಹೇಳಿದ್ದಾರೆ. ತಮ್ಮಿಬ್ಬರನ್ನು ನಾಯಕ-ನಾಯಕಿಯನ್ನಾಗಿಸಿ ತಮಿಳು ಸಿನಿಮಾವೊಂದನ್ನು ಮಾಡುವುದಕ್ಕೆ ಆಫರ್ ಬಂದರೂ ವಿಜಯ್ ನಿರಾಕರಿಸಿದ್ದಾರೆ.
ಈ ಬಗ್ಗೆ ವಿಜಯ್ ಸೇತುಪತಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ʻಒಮ್ಮೆ ಮಗಳೆಂದು ಕಲ್ಪಿಸಿಕೊಂಡ ನಟಿಯ ಜತೆಗೆ ನಾನು ಹೇಗೆ ರೊಮ್ಯಾನ್ಸ್ ಮಾಡಲಿ? ಉಪ್ಪೆನ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಮಾಡುವಾಗ, ನನ್ನನ್ನು ನಿನ್ನ ತಂದೆ ಎಂದು ಕಲ್ಪಿಸಿಕೋ ಎಂದು ಕೃತಿಗೆ ಹೇಳಿದ್ದೆ. ಆ ಸಿನಿಮಾ ಮಾಡುವಾಗ ನನ್ನ ಮಗನಷ್ಟೇ ಕೃತಿಗೂ ವಯಸ್ಸು. ನಾನು ಕೂಡ ಕೃತಿಯನ್ನು ಮಗಳಂತೆ ಭಾವಿಸಿದ್ದೇನೆ. ಹೀಗಿರುವಾಗ ಕೃತಿ ಜತೆಗೆ ರೊಮ್ಯಾನ್ಸ್ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Vijay Sethupathi: ‘ಮಹಾರಾಜʼಫಸ್ಟ್ ಲುಕ್ ಔಟ್; 50ನೇ ಸಿನಿಮಾದಲ್ಲಿ ರಗಡ್ ಲುಕ್ನಲ್ಲಿ ಮಿಂಚಿದ ವಿಜಯ್ ಸೇತುಪತಿ!
Why Vijay Sethupathi refused to act with Kriti Shetty as his pair… 👇 pic.twitter.com/R6Gp9DarBB
— Christopher Kanagaraj (@Chrissuccess) September 23, 2023
50ನೇ ಸಿನಿಮಾದಲ್ಲಿ ರಗಡ್ ಲುಕ್ನಲ್ಲಿ ಮಿಂಚಿದ ವಿಜಯ್ ಸೇತುಪತಿ
ಸದ್ಯ ವಿಜಯ್ ಸೇತುಪತಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್ ಸೇತುಪತಿ ಅವರ ‘ಮಹಾರಾಜ’ ಸಿನಿಮಾದ (Maharaja first Look Out) ಫಸ್ಟ್-ಲುಕ್ ಪೋಸ್ಟರ್ ಅನಾವರಣಗೊಂಡಿದೆ. ವಿಜಯ್ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ.
ಮಹಾರಾಜ’ ಸಿನಿಮಾದ ಫಸ್ಟ್-ಲುಕ್ನಲ್ಲಿ ವಿಜಯ್ ರಗಡ್ ಲುಕ್ನಲ್ಲಿ ಮಿಂಚಿದ್ದಾರೆ. ಚೇರ್ನಲ್ಲಿ ಚಾಕು ಹಿಡಿದು ರಕ್ತಸಿಕ್ತರಾಗಿ ಗಂಭೀರದಿಂದ ಕೂತಿದ್ದಾರೆ ವಿಜಯ್. ಸುತ್ತಲೂ ಪೊಲೀಸ್ ಅಧಿಕಾರಿಗಳು ನಿಂತಿದ್ದಾರೆ. ನಟ ವಿಜಯ್ ಅವರ ಎಡ ಭಾಗದ ಕಿವಿಗೆ ಬ್ಯಾಂಡೆಜ್ ಹಾಕಲಾಗಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ.
South Cinema
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
Silk Smitha: ಸಿಲ್ಕ್ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎಂಬ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹೇಳಿಕೆ ಮತ್ತೆ ವೈರಲ್ ಆಗುತ್ತಿದೆ.
ಬೆಂಗಳೂರು: ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ ಸಿಲ್ಕ್ ಸ್ಮಿತಾ (Silk Smitha) ಮೂಲ ಹೆಸರು ವಿಜಯಲಕ್ಷ್ಮಿ. 1960ರ ಡಿಸೆಂಬರ್ 2ರಂದು ಜನಿಸಿದರು. ಆ ನಂತರದ ದಿನಗಳಲ್ಲಿ ಸಿಲ್ಕ್ ಸ್ಮಿತಾ ಎಂದೇ ಫೇಮಸ್ ಆದರು. ಸೆಪ್ಟೆಂಬರ್ 23 ನಟಿ ಸಿಲ್ಕ್ ಸ್ಮಿತಾ ಅವರ 27ನೇ ಪುಣ್ಯತಿಥಿ. ಇದೀಗ ಕಾಲಿವುಡ್ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹಳೆಯ ಹೇಳಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಲ್ಕ್ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಅವರ ಹೇಳಿಕೆ ಮತ್ತೆ ವೈರಲ್ ಆಗುತ್ತಿದೆ.
ಸಿಲ್ಕ್ ಸ್ಮಿತಾ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ ಮತ್ತು ಅದಕ್ಕಾಗಿಯೇ ಸಿಲ್ಕ್ ಬಾಲ್ಯದಲ್ಲಿ ತಮ್ಮ ಓದನ್ನು ಬಿಡಬೇಕಾಯಿತು. ವರದಿಗಳ ಪ್ರಕಾರ, ಸಿಲ್ಕ್ ಸ್ಮಿತಾ ಅವರು ಕೇವಲ 14 ವರ್ಷದವರಾಗಿದ್ದಾಗ ಮದುವೆಯಾಗಿದ್ದರು ಮತ್ತು ಅವರು ಸಾಕಷ್ಟು ಕೌಟುಂಬಿಕ ಹಿಂಸೆಯನ್ನು ಎದುರಿಸಿದರು. ಸಿಲ್ಕ್ ಸ್ಮಿತಾ ತಮ್ಮ ಗಂಡನ ಮನೆಯಿಂದ ಓಡಿಹೋದ ನಂತರ ಮೇಕಪ್ ಕಲಾವಿದನಾಗಿದ್ದ ತಮ್ಮ ಸ್ನೇಹಿತನ ಮನೆ ಸೇರಿಕೊಂಡಿದ್ದರು. ಮೇಕಪ್ ಕಲಾವಿದರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ನಂತರ ತಮಿಳು ನಿರ್ದೇಶಕ ವಿನು ಚಕ್ರವರ್ತಿ ಅವರು ಸಿಲ್ಕ್ ಸ್ಮಿತಾಗೆ ದೊಡ್ಡ ಬ್ರೇಕ್ ನೀಡಿದರು. 1979ರಲ್ಲಿ ತಮಿಳು ಚಲನಚಿತ್ರ ‘ವಂದಿಚಕ್ಕರಂ’ನಲ್ಲಿನ ಅವರ ಅದ್ಭುತ ಅಭಿನಯಕ್ಕಾಗಿ ಮೊದಲ ಬಾರಿಗೆ ಗಮನ ಸೆಳೆದರು. ಸಿಲ್ಕ್ ಸ್ಮಿತಾ ಅವರು 17 ವರ್ಷಗಳ ಕಾಲ ನಟಿಯಾಗಿ, ನೃತ್ಯಗಾತಿಯಾಗಿ ಮಿಂಚಿದರು. 450ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು. ಸೆಪ್ಟೆಂಬರ್ 23, 1996ರಂದು ತಮ್ಮ 35ನೇ ವಯಸ್ಸಿನಲ್ಲಿ ನಿಗೂಢವಾಗಿ ಮೃತಪಟ್ಟರು. ಪೊಲೀಸರಿಗೆ ಸೂಸೈಡ್ ನೋಟ್ ಸಿಕ್ಕಿದೆ ಎಂದು ಹೇಳಲಾಗಿತ್ತು.
ನಟಿ ಕಾಮಪ್ರಚೋದಕ ದೃಶ್ಯಗಳಲ್ಲಿ ನಟಿಸಿ ಫೇಮಸ್ಸಾದ ಕಾರಣ ಅಭಿಮಾನಿಗಳ ಸಂಖ್ಯೆ ಹೆಚ್ಚಿನ ರೀತಿಯಲ್ಲಿ ಇತ್ತು. ಒಮ್ಮೆಯಾದರೂ ಈ ನಟಿಯನ್ನು ನೇರವಾಗಿ ನೋಡಿ ಕಣ್ತುಂಬಿಸಿಕೊಳ್ಳಬೇಕು ಎಂದುಕೊಂಡವರೇ ಹೆಚ್ಚು. ಇದ್ದಕ್ಕಿದ್ದಂತೆ ನಟಿ ಬಾರದ ಲೋಕಕ್ಕೆ ಹೋಗುತ್ತಾರೆ. ʻʻಶವದೊಂದಿಗೆ ಅತ್ಯಾಚಾರ ಮಾಡಲಾಗಿತ್ತು. ಶವಾಗಾರದಲ್ಲಿ ನಟಿಯ ನೌಕರರು ಕುಡಿದ ಅಮಲಿನಲ್ಲಿ ಇರುತ್ತಾರೆ. ಅಲ್ಲಿನ ಹೆಚ್ಚು ನೌಕರರು ಬೆಳಗ್ಗೆ ಕೆಲಸ ಆರಂಭಿಸಿದಾಗಿನಿಂದ ಕುಡಿದಿರುತ್ತಾರೆ. ಇದೇ ಅಮಲಿನಲ್ಲಿ ಕುಡಿದು ಪ್ರಜ್ಞಾಹೀನರಾಗಿರುವ ನೌಕರರು ಹಲವು ಬಾರಿ ಸಿಲ್ಕ್ ಸ್ಮಿತಾ ಅವರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆʼʼ ಎಂದಿದ್ದಾರೆ ಬೈಲ್ವಾನ್ ರಂಗನಾಥನ್. ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದಾಗ ಶವ ಪರೀಕ್ಷೆ ನಡೆದ ಸ್ಥಳಕ್ಕೆ ಹೋಗಿ ಖುದ್ದು ನೋಡಿದ್ದೆ ಎನ್ನುವ ಅವರ ಮಾತು ಇದೀಗ ಮತ್ತೆ ವೈರಲ್ ಆಗಿದೆ.
South Cinema
Kamal Haasan: ಕಮಲ್ ಹಾಸನ್ ಜನುಮದಿನಕ್ಕೆ ಮತ್ತೊಂದು ಸೂಪರ್ ಹಿಟ್ ಸಿನಿಮಾ ಮರು ಬಿಡುಗಡೆ!
Kamal Haasan: ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ .’ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.
ಬೆಂಗಳೂರು: ಮಣಿರತ್ನಂ ನಿರ್ದೇಶನದ ಕಮಲ್ ಹಾಸನ್ (Kamal Haasan starrer Nayakan) ಅಭಿನಯದ `ನಾಯಕನ್’ ನವೆಂಬರ್ 3ರಂದು ಚಿತ್ರಮಂದಿರಗಳಲ್ಲಿ ಮರು-ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಜನುಮದಿನದ ಪ್ರಯುಕ್ತ ಈ ಸಿನಿಮಾ ರಿ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಶರಣ್ಯ ಮತ್ತು ಕಾರ್ತಿಕಾ ಕೂಡ ಕಾಣಿಸಿಕೊಂಡಿದ್ದರು. ಜನಗರಾಜ್, ವಿಜಯನ್, ಎಂ.ವಿ. ವಾಸುದೇವ ರಾವ್, ದೆಹಲಿ ಗಣೇಶ್, ನಿಜಲ್ಗಲ್ ರವಿ, ನಾಸರ್ ಮತ್ತು ತಾರಾ ಪೋಷಕ ಪಾತ್ರಗಳಲ್ಲಿದ್ದಾರೆ. ʻನಾಯಕನ್ʼ ಸಿನಿಮಾವು ಹಾಲಿವುಡ್ ಕ್ಲಾಸಿಕ್ ‘ದಿ ಗಾಡ್ಫಾದರ್’ ನಿಂದ ಪ್ರೇರಿತವಾಗಿದ್ದು, ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ. ‘ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.
ಚಲನಚಿತ್ರ ಮಂದಿರಗಳಲ್ಲಿ ಇತ್ತೀಚೆಗೆ ಹೀರೊಗಳ ಹಳೆಯ ಸೂಪರ್ ಹಿಟ್ ಸಿನಿಮಾಗಳನ್ನು ಮರು-ಬಿಡುಗಡೆ ಮಾಡುವುದು ಕಾಮನ್ ಆಗಿದೆ. ಹೊಸ ಚಲನಚಿತ್ರಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗುತ್ತಿರುವ ಕಾರಣ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳಿಗೆ ಕರೆತರಲು ಹಿಂದಿನ ಜನಪ್ರಿಯ ತಾರೆಯರ ಜನ್ಮ ವಾರ್ಷಿಕೋತ್ಸವದಂದು ವಿಶೇಷ ಪ್ರದರ್ಶನಗಳನ್ನು ನಡೆಸುತ್ತಿವೆ.
‘ನಾಯಕನ್’ ಸಿನಿಮಾ ವಿತರಕರು ಇತ್ತೀಚೆಗೆ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾವನ್ನು ತಮಿಳುನಾಡು, ಕರ್ನಾಟಕ ಮತ್ತು ಕೇರಳದಾದ್ಯಂತ ಎಲ್ಲ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಸೂಪರ್ ಹಿಟ್ ಚಿತ್ರ ‘ನಾಯಕನ್’ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 1988ರಲ್ಲಿ ಆಸ್ಕರ್ ಪ್ರಶಸ್ತಿಗಳಿಗಾಗಿ ನಾಮೀನೇಟ್ ಆಗಿತ್ತು.
“ನಾವು ಈ ಹಿಂದೆ ಹಳೆಯ ಹಿಟ್ ಚಿತ್ರಗಳ ಪ್ರದರ್ಶನವನ್ನು ಆಯೋಜಿಸಿದ್ದೇವೆ. ಆದರೆ ಅದು ಸೀಮಿತ ಪ್ರಮಾಣದಲ್ಲಿ ಇತ್ತು. ಆದ್ದರಿಂದ ಕಾರ್ಯಸಾಧ್ಯವಾಗಿರಲಿಲ್ಲ. ಅಮಿತಾಭ್ ಬಚ್ಚನ್ ಅವರ ಸಿನಿಮಾಗಳೂ ಮತ್ತೆ ಮರು ಬಿಡುಗಡೆಯಾದಾಗ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದ್ದರಿಂದ ನಾವು ಸ್ಕ್ರೀನ್ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆವುʼʼ ಎಂದು INOX ಲೀಸರ್ನ ಮುಖ್ಯ ಪ್ರೋಗ್ರಾಮಿಂಗ್ ಅಧಿಕಾರಿ ರಾಜೇಂದ್ರ ಸಿಂಗ್ ಜ್ಯಾಲಾ ಹಿಂದಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.
ಇದನ್ನೂ ಓದಿ: Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
The unimaginable feeling of watching #Nayagan on the big screen 🔥🔥🔥 who else can't wait! #Ulaganayagan @ikamalhaasan pic.twitter.com/TMHCb7qczj
— AGS Cinemas (@agscinemas) September 19, 2023
ಕಮಲ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳು
ಸದ್ಯ ಕಮಲ್ ಅವರ ಕೈಯಲ್ಲಿ ನಾಲ್ಕು ಪ್ರಾಜೆಕ್ಟ್ಗಳಿವೆ. ಅವುಗಳಲ್ಲಿ ಯಾವುದೂ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ನಾಗ್ ಅಶ್ವಿನ್ ಅವರ ಮುಂದಿನ ಚಿತ್ರ ಕಲ್ಕಿಯಲ್ಲಿ (Kalki cinema) ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅಮಿತಾಭ್ ಬಚ್ಚನ್, ಪ್ರಭಾಸ್, ದೀಪಿಕಾ ಪಡುಕೋಣೆ ಇತರ ಪ್ರಮುಖ ತಾರೆಗಳು ಇದ್ದಾರೆ. ಎಸ್ ಶಂಕರ್ ಅವರ 1996ರ ಚಲನಚಿತ್ರದ ಮುಂದುವರಿದ ಭಾಗವಾದ ಇಂಡಿಯನ್-2 ಸಿನಿಮಾದಲ್ಲಿಯೂ ಕಮಲ್ ಇದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಸಹ ನಡೆಯುತ್ತಿದೆ. ಇವುಗಳ ಹೊರತಾಗಿ H. ವಿನೋದ್ ಅವರೊಂದಿಗೆ ಒಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ, ಇದು ತಾತ್ಕಾಲಿಕವಾಗಿ ʻKH233- ರೈಸ್ ಟು ರೂಲ್ʼ ಎಂದು ಹೆಸರಿಸಲಾಗಿದೆ. ಕಮಲ್ ಹಾಸನ್ ಅವರು KH234ಗಾಗಿ 37 ವರ್ಷಗಳ ನಂತರ ಮಣಿರತ್ನಂ ಅವರೊಂದಿಗೆ ಮತ್ತೆ ಒಂದಾಗುತ್ತಿದ್ದಾರೆ. ಇದರಲ್ಲಿ ದುಲ್ಕರ್ ಸಲ್ಮಾನ್, ತ್ರಿಷಾ ಮತ್ತು ಜಯಂ ರವಿ ಕೂಡ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
South Cinema
Parineeti Chopra: ಮದುವೆಯಲ್ಲಿ ಫೋನ್, ಕ್ಯಾಮೆರಾಗಳಿಗೆ ಟೇಪ್, 100 ಭದ್ರತಾ ಸಿಬ್ಬಂದಿ!
Parineeti Chopra: ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.
ಬೆಂಗಳೂರು: ಸೆಪ್ಟೆಂಬರ್ 24ರಂದು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Parineeti Chopra) ಹಾಗೂ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (Raghav Chadha) ಅವರ ವಿವಾಹ ಉದಯಪುರದಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಈಗಾಗಲೇ ಜೋಡಿ ಉದಯಪುರಕ್ಕೆ (Parineeti Chopra wedding) ತಲುಪಿದೆ. ಸದ್ಯ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ವಿವಾಹದಲ್ಲಿ 100 ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲ, ಮದುವೆಯಲ್ಲೂ ಕಟ್ಟುನಿಟ್ಟಿನ ಭದ್ರತಾ ನಿಯಮಗಳಿವೆ. ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.
ಹೋಟೆಲ್ ಮೂಲಗಳ ಪ್ರಕಾರ, ಮದುವೆಯ ಸಿದ್ಧತೆಗಳ ಜತೆಗೆ ಕಾರ್ಯಕ್ರಮದ ಫೋಟೊಗಳು ಮತ್ತು ವಿಡಿಯೊಗಳು ಲೀಕ್ ಆಗದ್ದಂತೆ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ. ಹೋಟೆಲ್ಗೆ ಪ್ರವೇಶಿಸುವವರ ಮೊಬೈಲ್ ಕ್ಯಾಮೆರಾಗಳಿಗೆ ನೀಲಿ ಬಣ್ಣದ ಟೇಪ್ ಅನ್ನು ಅಂಟಿಸಲಾಗುತ್ತದೆ. ಇದರಿಂದ ಅವರು ಮದುವೆ ಸಮಾರಂಭದಲ್ಲಿ ಯಾವುದೇ ವೀಡಿಯೊ-ಫೋಟೋಗ್ರಾಫ್ ತೆಗೆದುಕೊಳ್ಳುವಂತಿಲ್ಲ. ಈ ನೀಲಿ ಟೇಪ್ನ ವಿಶೇಷತೆ ಏನೆಂದರೆ, ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಅಳವಡಿಸಿದ ನಂತರ ಯಾರಾದರೂ ಅದನ್ನು ತೆಗೆದರೆ, ಟೇಪ್ನಲ್ಲಿ ಬಾಣದ ಚಿಹ್ನೆ ಗೋಚರಿಸುತ್ತದೆ. ಸೆಕ್ಯೂರಿಟಿ ಅವರು ಪರಿಶೀಲಿಸಿದಾಗ ಕ್ಯಾಮೆರಾ ಬಳಸಲು ಟೇಪ್ ತೆಗೆದಿರುವುದು ಗೊತ್ತಾಗಿ ಬಿಡುತ್ತದೆ. ಈ ನಿರ್ಬಂಧವು ವಿಶೇಷವಾಗಿ ಹೋಟೆಲ್ ಸಿಬ್ಬಂದಿಗೆ, ಬಾಣಸಿಗರಿಗೆ ಅನ್ವಯಿಸುತ್ತದೆ. ಕರಣ್ ಜೋಹರ್, ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಡಿಸೈನರ್ ಮನೀಶ್ ಮಲ್ಹೋತ್ರಾ ಅವರಂತಹ ಸೆಲೆಬ್ರಿಟಿಗಳು ಇಂದೇ (ಸೆ. 23) ಉದಯಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Parineeti Chopra; ನಾಳೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಅದ್ಧೂರಿ ಮದುವೆ; ಭರ್ಜರಿ ಸಿದ್ಧತೆ!
ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷ ಮೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆಗೆ 20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.
ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ಚಮ್ಕೀಲಾ ಸಿನಿಮಾಕ್ಕಾಗಿ ಪಂಜಾಬ್ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.
-
ವೈರಲ್ ನ್ಯೂಸ್5 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಕರ್ನಾಟಕ10 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ದೇಶ15 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
South Cinema7 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ಅಂಕಣ18 hours ago
ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
-
ಬಾಲಿವುಡ್11 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!
-
ಕ್ರಿಕೆಟ್11 hours ago
Varanasi Stadium: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ
-
South Cinema11 hours ago
Parineeti Chopra: ಮದುವೆಯಲ್ಲಿ ಫೋನ್, ಕ್ಯಾಮೆರಾಗಳಿಗೆ ಟೇಪ್, 100 ಭದ್ರತಾ ಸಿಬ್ಬಂದಿ!