Kannada New Movie | ʻಸದ್ದು ವಿಚಾರಣೆ ನಡೆಯುತ್ತಿದೆʼ ಚಿತ್ರ ನವೆಂಬರ್‌ 25ರಂದು ತೆರೆಗೆ - Vistara News

ಸಿನಿಮಾ

Kannada New Movie | ʻಸದ್ದು ವಿಚಾರಣೆ ನಡೆಯುತ್ತಿದೆʼ ಚಿತ್ರ ನವೆಂಬರ್‌ 25ರಂದು ತೆರೆಗೆ

‘ಸದ್ದು ವಿಚಾರಣೆ ನಡೆಯುತ್ತಿದೆ’ (Kannada New Movie) ಚಿತ್ರ ನವೆಂಬರ್‌ 25ರಂದು ಪ್ರೇಕ್ಷಕರ ಮುಂದೆ ಬರುತ್ತಿದೆ.

VISTARANEWS.COM


on

Kannada New Movie (saddu vicharane nadeyuttide)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೊಸ ಸಿನಿಮಾ ‘ಸದ್ದು ವಿಚಾರಣೆ ನಡೆಯುತ್ತಿದೆ’ (Kannada New Movie) ಇದೇ ನವೆಂಬರ್‌ 25ಕ್ಕೆ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ. ಎಂ. ಎಂ. ಸಿನಿಮಾಸ್ ಬ್ಯಾನರ್‌ನಡಿ ಭಾಸ್ಕರ್ ಆರ್ ನೀನಾಸಂ ಇದನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಈ ಚಿತ್ರ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳಿಂದ ಸಾಕಷ್ಟು ಹೆಸರನ್ನು ಪಡೆದಿದೆ.

ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಹಾಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

ಇದನ್ನೂ ಓದಿ | Kannada New Movie | ಸುನಾಮಿ ಕಿಟ್ಟಿ ಅಭಿನಯದ ‘ಕೋರ’ ಸಿನಿಮಾ ಟೀಸರ್‌ ಔಟ್‌ : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಹೇಳಿದ್ದೇನು?

Kannada New Movie  (saddu vicharane nadeyuttide release date announce)

ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರಾಜ್ ಕಾಂತ ಅವರ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ, ಗಂಗಮ್ ರಾಜ್ ನೃತ್ಯ ನಿರ್ದೇಶನ, ದಕ್ಷಿಣ ಮೂರ್ತಿ ಸಂಭಾಷಣೆ ಚಿತ್ರಕ್ಕಿದೆ. ಪ್ರಮೋದ್‌ ಮರವಂತೆ, ಕಿನ್ನಾಳ್‌ ರಾಜ್‌ ಅವರ ಹಾಡುಗಳು ಚಿತ್ರಕ್ಕಿದೆ. ರಘು ದೀಕ್ಷಿತ್, ರವಿ ಬಸ್ರೂರು, ಪಂಚಮ್ ಜೀವ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.

ಇದನ್ನೂ ಓದಿ | Kannada New Movie | ʻಸದ್ದು ವಿಚಾರಣೆ ನಡೆಯುತ್ತಿದೆʼ ಟ್ರೈಲರ್‌ ರಿಲೀಸ್‌: ನವೆಂಬರ್‌ 25ಕ್ಕೆ ತೆರೆಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಮಾರ್ಚ್ 29 ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಈಗ ಒಟಿಟಿಯಲ್ಲಿ (Crew on OTT) ಬಿಡುಗಡೆಯಾಗಿದೆ. ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರ ಪರಿಪೂರ್ಣ ಮನರಂಜನೆಯನ್ನು ಪ್ರೇಕ್ಷಕರಿಗೆ ಒದಗಿಸಲು ಸಫಲವಾಗಿದೆ.

VISTARANEWS.COM


on

By

Crew on OTT
Koo

ಟಬು (Tabu), ಕರೀನಾ ಕಪೂರ್ ಖಾನ್ (Kareena Kapoor Khan) ಮತ್ತು ಕೃತಿ ಸನೋನ್ (Kriti Sanon) ನಟಿಸಿರುವ ‘ಕ್ರ್ಯೂ’ ಚಿತ್ರ ಒಟಿಟಿಯಲ್ಲಿ (Crew on OTT) ಮೇ 24ರಂದು ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಬಳಿಕ ಅತ್ಯುತ್ತಮ ಕಾಮಿಡಿ ಚಲನಚಿತ್ರವಾದ ಕ್ರ್ಯೂ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ರಾಜೇಶ್ ಎ. ಕೃಷ್ಣನ್ ನಿರ್ದೇಶನದ ‘ಕ್ರ್ಯೂ’ ಈಗ ವಿಶ್ವದ 190 ದೇಶಗಳಲ್ಲಿ ಪ್ರದರ್ಶನ ಕಾಣಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರದ ಪ್ರಥಮ ಪ್ರದರ್ಶನದ ಕುರಿತು ಮಾತನಾಡಿದ ನಿರ್ಮಾಪಕರಾದ ರಿಯಾ ಕಪೂರ್ ಮತ್ತು ಏಕ್ತಾ ಆರ್ ಕಪೂರ್ , ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಕ್ರ್ಯೂ ಅನ್ನು ನೆಟ್‌ಫ್ಲಿಕ್ಸ್‌ ಗೆ ತರಲು ನಾವು ರೋಮಾಂಚನಗೊಂಡಿದ್ದೇವೆ. ಈ ಚಿತ್ರವು ಸ್ನೇಹ, ವಂಚನೆ ಮತ್ತು ದೃಢತೆಯನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಪ್ರೇಕ್ಷಕರು ನೆಟ್‌ಫ್ಲಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸಸ್ಪೆನ್ಸ್, ಹಾಸ್ಯ ಮತ್ತು ನಾಟಕದ ಅನುಭವವನ್ನು ಪಡೆಯಲು ಕಾಯುವುದು ಸಾಧ್ಯವಿಲ್ಲ. ಇದು ಪ್ರೇಕ್ಷಕರನ್ನು ಆಸನದ ತುದಿಯಲ್ಲಿ ಕುರಿಸುವಂತೆ ಮಾಡುವ ಕಥೆಯಾಗಿದೆ ಎಂದು ಹೇಳಿದ್ದಾರೆ.

ಬಹುತೇಕ ದಿವಾಳಿಯಾದ ಏರ್‌ಲೈನ್‌ನ ಹಿನ್ನೆಲೆ ಕಥೆಯನ್ನು ಒಳಗೊಂಡಿರುವ ‘ಕ್ರ್ಯೂ’, ತಮ್ಮ ಜೀವನ ನಿರ್ವಹಣೆಗೆ ಪ್ರಯತ್ನಿಸುತ್ತಿರುವ ಮೂವರು ಮಹಿಳೆಯರು ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳುವ ಕಥೆಯ ಸುತ್ತ ಸುತ್ತುತ್ತದೆ.

ಮಾರ್ಚ್ 29ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಬಿಡುಗಡೆಯಾದ ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿದೆ. ಇದರಲ್ಲಿ ದಿಲ್ಜಿತ್ ದೋಸಾಂಜ್, ಕಪಿಲ್ ಶರ್ಮಾ, ಶಾಶ್ವತ ಚಟರ್ಜಿ, ರಾಜೇಶ್ ಶರ್ಮಾ, ಕುಲಭೂಷಣ್ ಖರ್ಬಂದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ಹಾಸ್ಯ ಚಿತ್ರವಾದ ಕ್ರ್ಯೂ ಪರಿಪೂರ್ಣ ಮನರಂಜನೆಯನ್ನು ಒದಗಿಸುವುದರಲ್ಲಿ ಸಂದೇಹವಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಐದು ಕಾರಣಕ್ಕಾಗಿ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಬಹುದು.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

1. ಎಲ್ಲರನ್ನೂ ಮೋಡಿ ಮಾಡಲಿದೆ

‘ಕ್ರ್ಯೂ’ ಚಿತ್ರ ವೀಕ್ಷಿಸುತ್ತಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಾಸ್ಯದ ಸಂಪೂರ್ಣ ಮನೋರಂಜನೆಯನ್ನು ಸವಿಯಬಹುದು. ಖಂಡಿತ ಈ ಚಿತ್ರ ಯಾರನ್ನೂ ನಿರಾಶೆಗೊಳಿಸುವುದಿಲ್ಲ. ಆರ್ಥಿಕ ಬಿಕ್ಕಟ್ಟಿನ ನಡುವೆ ತಮ್ಮ ಜೀವನವನ್ನು ಸುಗಮವಾಗಿ ಸಾಗುವಂತೆ ಮಾಡಲು ಪ್ರಯತ್ನಿಸುತ್ತಿರುವ ಮೂವರು ಗಗನಸಖಿಯರ ಮೇಲೆ ಚಲನಚಿತ್ರವು ಕೇಂದ್ರೀಕೃತವಾಗಿದೆ. ‘ಕ್ರ್ಯೂ’ ವಾಸ್ತವವಾಗಿ ಸಿನಿ ಪ್ರಿಯರನನ್ನು ನಗೆಗಡಲಿನಲ್ಲಿ ತೇಲಿಸಿ ಮೋಡಿ ಮಾಡುತ್ತದೆ.

2. ಸಸ್ಪೆನ್ಸ್‌

ಹಾಸ್ಯಮಯ ಚಿತ್ರವಾದರೂ ಸಸ್ಪೆನ್ಸ್‌ಗೆ ಬಂದಾಗ ಚಿತ್ರ ಸೂಪರ್ ಎನ್ನುವಂತೆ ಮಾಡುತ್ತದೆ. ಚಿತ್ರದಲ್ಲಿ ಯಾವುದೇ ಕ್ಷಣವೂ ಬೇಸರ ತರಿಸುವುದಿಲ್ಲ. ಕರೀನಾ ಮತ್ತು ಟಬು ತಮ್ಮ ಅಭಿನಯದಿಂದ ಎಲ್ಲರ ಮನಗೆದ್ದಿದ್ದಾರೆ.

3. ಅಪರೂಪದ ಕಥೆ

ಮೂವರು ನಟಿಯರನ್ನೇ ಮುಖ್ಯ ಭೂಮಿಕೆಯಲ್ಲಿ ಇರಿಸಿರುವ ಈ ಚಿತ್ರ ಬಾಲಿವುಡ್ ಚಲನಚಿತ್ರಗಳಲ್ಲಿ ಅಪರೂಪದ ಚಿತ್ರವಾಗಿದೆ. ಚಲನಚಿತ್ರವು ಸ್ತ್ರೀ ಸ್ನೇಹದ ವಿವಿಧ ಪದರಗಳನ್ನು ಪರಿಶೋಧಿಸುತ್ತದೆ.


4. ಹೃದಯ ಗೆಲ್ಲುವ ಅಭಿನಯ

ಚಿತ್ರದಲ್ಲಿ ಎದ್ದುಕಾಣುವ ಒಂದು ವಿಷಯವೆಂದರೆ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳ ಪ್ರಭಾವಶಾಲಿ ಅಭಿನಯ. ಟಬು, ಕೃತಿ ಸನೋನ್ ಮತ್ತು ಕರೀನಾ ಕಪೂರ್ ಖಾನ್ ಅವರು ತೆರೆಯ ಮೇಲೆ ಅದ್ಭುತವಾದ ಒಡನಾಟವನ್ನು ಹಂಚಿಕೊಂಡಿದ್ದಾರೆ. ಏತನ್ಮಧ್ಯೆ, ಕಪಿಲ್ ಶರ್ಮಾ ಮತ್ತು ದಿಲ್ಜಿತ್ ದೋಸಾಂಜ್ ಅವರು ಸಣ್ಣ ಅವಧಿಗೆ ಬಂದುಹೋದರೂ ಪ್ರೇಕ್ಷಕರ ಹೃದಯ ಗೆಲ್ಲುತ್ತಾರೆ.

5. ಹಾಸ್ಯ ಚಿತ್ರ

ಮಹಿಳೆಯರು ಹಾಸ್ಯ ಚಿತ್ರಗಳನ್ನು ಚೆನ್ನಾಗಿ ಮಾಡಬಲ್ಲರು ಎಂಬುದನ್ನು ಈ ಚಿತ್ರ ಪ್ರತಿಪಾದಿಸುತ್ತದೆ. ಹಾಸ್ಯ ಚಿತ್ರಗಳನ್ನು ಮಹಿಳಾ ನಟಿಯರು ಉತ್ತಮವಾಗಿ ಮಾಡಬಹುದು ಎಂಬುದನ್ನು ‘ಕ್ರ್ಯೂ’ ಸಾಬೀತುಪಡಿಸುತ್ತದೆ.

Continue Reading

ಬೆಂಗಳೂರು

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Soundarya Jagadish : ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ (Self Harming) ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದ್ದು, ಒಂದು ತಿಂಗಳ ನಂತರ ಅವರು ಬರೆದಿಟ್ಟ ಡೆತ್‌ನೋಟ್‌ (Death Note) ಸಿಕ್ಕಿದೆ. ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಂತೆ ಮೂವರು ಬ್ಯುಸಿನೆಸ್ ‌ಪಾರ್ಟ್ನರ್ಸ್ (Business Partners ) ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

Soundarya Jagadish Cheating by soundarya Constructions Business Partners
ಸೌಂದರ್ಯ ಜಗದೀಶ್‌ರೊಂದಿಗೆ ಇರುವ ವೈಟ್ ಶರ್ಟ್ ಧರಿಸುವವರು ಸುರೇಶ್ ಹಾಗೂ ಚೆಕ್ಸ್ ಶರ್ಟ್ ಹೊಂಬಣ್ಣ
Koo

ಬೆಂಗಳೂರು: ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಕಳೆದ ಏಪ್ರಿಲ್‌ 14ರಂದು ಮಹಾಲಕ್ಷ್ಮಿ ಲೇಔಟ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಆತ್ಮಹತ್ಯೆ ಕೇಸ್‌ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಬ್ಯುಸಿನೆಸ್‌ ಪಾರ್ಟ್ನರ್ಸ್ ದೋಖಾ ಬಯಲಾಗಿದೆ.

ಬ್ಯುಸಿನೆಸ್ ಪಾರ್ಟನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೌಂದರ್ಯ ಜಗದೀಶ್‌ ಮೃತಪಟ್ಟ ಒಂದು ತಿಂಗಳ ನಂತರ ಅವರ ರೂಮಿನಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಸೌಂದರ್ಯ ಜಗದೀಶ್‌ ಬರೆದ ಡೆತ್‌ನೋಟ್‌ನಲ್ಲಿ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ನ ಸಹ ಪಾಲುದಾರರಿಂದ ಸುಮಾರು 60 ಕೋಟಿ ರೂ. ಹಣ ನಷ್ಟವಾಗಿದ್ದು, ಮೋಸ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಹೀಗಾಗಿ ಸೌಂದರ್ಯ ಜಗದೀಶ್‌ ಪತ್ನಿ ಶಶಿರೇಖಾ ಡೆತ್‌ನೋಟ್‌ ಪತ್ತೆ ಆಗುತ್ತಿದ್ದಂತೆ ಪಾಲುದಾರರ ವಿರುದ್ಧ ದೂರು ದಾಖಲಿಸಿದ್ದಾರೆ. ಸುರೇಶ್‌ ಹಾಗೂ ಹೊಂಬಣ್ಣ ಸೇರಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳಲು ನೇರವಾಗಿ ಕಾರಣಕರ್ತರಾಗಿದ್ದಾರೆ. ಇವರಿಬ್ಬರು ಜಗದೀಶ್‌ ಅವರೊಂದಿಗೆ ಸೇರಿಕೊಂಡು ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯನ್ನು ನಡೆಸಿಕೊಂಡು ಹೋಗುತ್ತಿದ್ದರು. ಈ ವೇಳೆ ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿ ಕಂಪನಿಯು ಲಾಭದಲ್ಲಿದ್ದರು ನಷ್ಟದಲ್ಲಿದೆ ಎಂದು ಸುಳ್ಳು ಹೇಳಿದ್ದರು. ಮಾತ್ರವಲ್ಲದೇ ಸುಳ್ಳು ಹೇಳಿ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡಮಾನ ಇರಿಸಿದ್ದಾರೆ. ಅದರ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ನಂತರ ಇಲ್ಲ-ಸಲ್ಲದ ಸಬೂಬು ಹೇಳಿ ಖಾಲಿ ಚೆಕ್‌ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್‌ ಅವರ ಸಹಿಯನ್ನು ನಕಲು ಮಾಡಿಕೊಂಡು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದರೆ ಜಗದೀಶ್‌ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಯಾವುದೋ ವಿಷಯಕ್ಕೆ ಜಗದೀಶ್‌ ಅವರನ್ನು ಬ್ಲಾಕ್‌ಮೇಲ್‌ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಕಂಪನಿಯು ನಷ್ಟದಲ್ಲಿದೆ ಎಂದು ಹೇಳಿ ಹಣವನ್ನು ಕೊಡದೆ ಮೋಸ ಮಾಡಿದ್ದಾರೆ ಎಂದು ಶಶಿರೇಖಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಇವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ಶಶಿರೇಖಾ ಆರೋಪಿಸಿದ್ದಾರೆ.

ಬ್ಯುಸಿನೆಸ್‌ ಪಾರ್ಟ್ನಸ್‌ಗಳಿಂದ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಪತಿ ಸೌಂದರ್ಯ ಜಗದೀಶ್‌ ಸಾವಿಗೆ ಸುರೇಶ್‌, ಹೊಂಬಣ್ಣ ಹಾಗೂ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯ ಮ್ಯಾನೇಜರ್‌ ಸುದೀಂದ್ರ ಕಾರಣ ಎಂದು ಪತ್ನಿ ಶಶಿರೇಖಾ ದೂರು ನೀಡಿದ್ದಾರೆ. ಸದ್ಯ ಈ ಡೆತ್‌ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

Indian 2: ಬಹುಭಾಷಾ ನಟ ಕಮಲ್ ಹಾಸನ್ ನಾಯಕರಾಗಿ ನಟಿಸಿರುವ, ಆರ್. ಶಂಕರ್ ನಿರ್ದೇಶನದ ಬಹು ನಿರೀಕ್ಷಿತ “ಇಂಡಿಯನ್ 2” ಚಿತ್ರ ಜು.12ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಈ ಚಿತ್ರವು ಪ್ರತಿಷ್ಠಿತ ರೋಮಿಯೋ ಪಿಕ್ಚರ್ಸ್‌ (ROMEO PICTURES) ಮೂಲಕ ಬಿಡುಗಡೆಯಾಗಲಿದೆ.

VISTARANEWS.COM


on

kamal haasan starrer Indian 2 movie released worldwide on July 12
Koo

ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್ ನಾಯಕರಾಗಿ ನಟಿಸಿರುವ, ಆರ್. ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ʼಇಂಡಿಯನ್ 2ʼ (Indian 2) ಚಿತ್ರ ಜು.12ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಕರ್ನಾಟಕದಲ್ಲಿ ಈ ಚಿತ್ರವು ಪ್ರತಿಷ್ಠಿತ ROMEO PICTURES ನ ಮೂಲಕ ಬಿಡುಗಡೆಯಾಗಲಿದೆ. ಹೆಸರಾಂತ ROMEO PICTURES ಅವರು “ಇಂಡಿಯನ್ 2” ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಕಮಲ್ ಹಾಸನ್ ಅಭಿನಯದ “ಇಂಡಿಯನ್ 2” ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ROMEO PICTURES ನ ರಾಹುಲ್ ತಿಳಿಸಿದ್ದಾರೆ. ಪ್ರಖ್ಯಾತ ವಿತರಣಾ ಸಂಸ್ಥೆಯಾದ ROMEO PICTURES ಅಜಿತ್ ಕುಮಾರ್ ಅವರ “ನೆರ್ಕೊಂಡ ಪಾರವೈ”, “ಥುನಿವು”, ಉದಯನಿಧಿ ಸ್ಟಾಲಿನ್ ಅವರ “ನೆಂಜುಕು ನೀಧಿ” ಮುಂತಾದ ಜನಪ್ರಿಯ ಚಿತ್ರಗಳನ್ನು ವಿತರಣೆ ಮಾಡಿದೆ.

ಇದನ್ನೂ ಓದಿ: Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಈ ಚಿತ್ರವನ್ನು ನಿರ್ಮಿಸಿದೆ. ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಕನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು “ಇಂಡಿಯನ್ 2” ಚಿತ್ರದ ತಾರಾಬಳಗದಲ್ಲಿದ್ದಾರೆ.

Continue Reading

ಸಿನಿಮಾ

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Meghana Gaonkar: ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌, ಟೀಸರ್‌ ಮತ್ತು ಟ್ರೇಲರ್‌ಗಳಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ಮೇಘನಾ ಗಾಂವ್ಕರ್‌ ಒಂದಷ್ಟು ಮಾತನಾಡಿದ್ದಾರೆ.

VISTARANEWS.COM


on

meghana Goankar
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟಿ ಮೇಘನಾ ಗಾಂವ್ಕರ್‌ (Meghana Gaonkar), ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌, ಟೀಸರ್‌ ಮತ್ತು ಟ್ರೇಲರ್‌ಗಳಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ಮೇಘನಾ ಗಾಂವ್ಕರ್‌ ಒಂದಷ್ಟು ಮಾತನಾಡಿದ್ದಾರೆ.

1) ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಎಂಟ್ರಿಯಾಗಿದ್ದು ಹೇಗೆ?

ನಿಜಾ ಹೇಳಬೇಕೆಂದರೆ, ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಕೊನೆಯದಾಗಿ ಸೇರ್ಪಡೆಯಾಗಿದ್ದೇ ನಾನು. ಇನ್ನೇನು ನಾನು ಮಾಡಬೇಕಾದ ಪಾತ್ರದ ಶೂಟಿಂಗ್‌ ಮಾಡೋದಕ್ಕೆ ನಾಲ್ಕೈದು ದಿನಗಳಷ್ಟೇ ಇದೆ ಎನ್ನುವಾಗ ಈ ಸಿನಿಮಾದ ಆಫರ್‌ ಬಂತು. ಆ ನಂತರ ಒಂದೇ ದಿನದಲ್ಲಿ ಆ ಆಫರ್‌ನ ನಾನೂ ಒಪ್ಪಿಕೊಂಡೆ. ಹೀಗೆ ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಎಂಟ್ರಿಯಾದೆ.

2) ʼದ ಜಡ್ಜ್‌ಮೆಂಟ್‌ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಇಲ್ಲಿಯವರೆಗೆ ನಾನು ಮಾಡಿರುವ ಪಾತ್ರಗಳದ್ದು, ಒಂದು ತೂಕವಾದರೆ, ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಪಾತ್ರದ್ದು ಇನ್ನೊಂದು ತೂಕ. ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿದೆ. ಸಿನಿಮಾದ ಕಥೆ, ಪಾತ್ರ, ಕಲಾವಿದರು ಮತ್ತು ತಂತ್ರಜ್ಞರ ತಂಡ ಎಲ್ಲವೂ ಇಷ್ಟವಾಯಿತು. ಹೀಗಾಗಿ ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡೆ.

3) ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ಈ ಸಿನಿಮಾದಲ್ಲಿ ನಾನು ಪ್ರೊಫೆಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರವಿಚಂದ್ರನ್‌ ಸರ್‌ ಅವರಿಗೆ ಜೋಡಿಯಾಗಿ ಅಭಿನಯಿಸಿದ್ದೇನೆ. ಇಂದಿನ ಜನರೇಶನ್‌ನ ಮಹಿಳೆಯರು ಹೇಗೆ ಸ್ವತಂತ್ರವಾಗಿ ಬದುಕಲು ಬಯಸುತ್ತಾರೋ, ಅಂಥದ್ದೇ ಒಂದು ಪಾತ್ರ ಇದಾಗಿದೆ. ನನ್ನ ಪಾತ್ರ ಮತ್ತು ಸಿನಿಮಾದಲ್ಲಿ ನಾನಿರುವ ಸನ್ನಿವೇಶಗಳು ಹೆಚ್ಚಾಗಿ ಮನೆಯಲ್ಲೇ ನಡೆಯುತ್ತದೆ. ತುಂಬ ಎಮೋಶನ್‌ ಕ್ಯಾರಿ ಮಾಡುವಂಥ ಪಾತ್ರ ಇದಾಗಿದೆ.

4) ಮೊದಲ ಬಾರಿಗೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸಿದ್ದು ಹೇಗಿತ್ತು?

ಮೊದಲ ಬಾರಿಗೆ ರವಿಚಂದ್ರನ್‌ ಅವರಂಥ ಲೆಜೆಂಡರಿ ಸ್ಟಾರ್‌ ಜೊತೆ ಅಭಿನಯಿಸುವ ಅವಕಾಶ ಸಿಕ್ಕಿರುವುದಕ್ಕೆ ತುಂಬ ಖುಷಿಯಿದೆ. ನಾನು ಈ ಸಿನಿಮಾ ಒಪ್ಪಿಕೊಳ್ಳಲು ಇದೂ ಕೂಡ ಒಂದು ಕಾರಣ. ಕೆಲ ವರ್ಷಗಳ ಹಿಂದೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸುವ ಅವಕಾಶ ಬಂದಿದ್ದರೂ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಅದು ನೆರವೇರಿದೆ. ರವಿಚಂದ್ರನ್‌ ಅವರೊಂದಿಗೆ ಕೆಲಸ ಮಾಡಿದ್ದು, ನಿಜಕ್ಕೂ ಖುಷಿಕೊಟ್ಟಿದೆ.

ಇದನ್ನೂ ಓದಿ: Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

5) ನಿಮ್ಮ ಪ್ರಕಾರ ʼದ ಜಡ್ಜ್‌ಮೆಂಟ್‌ʼ ಅಂದ್ರೇನು?

ಇದೊಂದು ಕಂಪ್ಲೀಟ್‌ ಕೋರ್ಟ್‌ ರೂಂ ಡ್ರಾಮಾ ಇರುವ ಲೀಗಲ್‌-ಥ್ರಿಲ್ಲರ್‌ ಸಿನಿಮಾ. ನನ್ನ ಪ್ರಕಾರ ಕನ್ನಡದಲ್ಲಿ ಇಂಥ ಸಿನಿಮಾಗಳು ಬಂದಿದ್ದು ತುಂಬ ವಿರಳ. ಅಂಥ ವಿರಳ ಸಿನಿಮಾಗಳ ಸಾಲಿಗೆ ಸೇರುವ ಸಿನಿಮಾ ʼದ ಜಡ್ಜ್‌ಮೆಂಟ್‌ʼ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಹೆಚ್ಚೇನೂ ಹೇಳಲಾರೆ.

6) ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಯಾವುದೇ ಸಿನಿಮಾದ ಪಾತ್ರವಾದರೂ, ಅದಕ್ಕೆ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಈ ಸಿನಿಮಾದಲ್ಲಿ ನನ್ನ ಪಾತ್ರ ತುಂಬ ಗಂಭೀರವಾಗಿದೆ. ಮನಸ್ಸಿನ ಭಾವನೆಗಳನ್ನು ಮಾತಿಗಿಂತ ಹೆಚ್ಚಾಗಿ ಭಾವನೆಗಳ ಮೂಲಕವೇ ತೋರಿಸಬೇಕಾಗಿತ್ತು. ಕಡಿಮೆ ಡೈಲಾಗ್ಸ್‌ನಲ್ಲಿ ಹೆಚ್ಚು ಅಭಿನಯಕ್ಕೆ ಸ್ಕೋಪ್‌ ಇರುವಂಥ ಪಾತ್ರ ಇದಾಗಿತ್ತು. ನಿರ್ದೇಶಕ ಗುರುರಾಜ್‌ ಕುಲಕರ್ಣಿ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದನ್ನು ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು.

7) ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಿರ್ದೇಶಕ ಗುರುರಾಜ್‌ ಮೂಲತಃ ಸಾಫ್ಟ್‌ವೇರ್‌ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್‌ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್‌ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.

8) ʼದ ಜಡ್ಜ್‌ಮೆಂಟ್‌ʼ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್‌ಗೆ ಖಂಡಿತವಾಗಿಯೂ ʼದ ಜಡ್ಜ್‌ಮೆಂಟ್‌ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

Continue Reading
Advertisement
Prajwal Revanna Case
ಕರ್ನಾಟಕ11 seconds ago

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಕೇಂದ್ರ ಸರ್ಕಾರ ನೋಟಿಸ್;‌ ಶೀಘ್ರವೇ ಬಂಧನ?

Crew on OTT
ಸಿನಿಮಾ4 mins ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು4 mins ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್4 mins ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ24 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ34 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ40 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ49 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ50 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ51 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌