Site icon Vistara News

Kannada New Movie: ರಂಗಾಯಣ ರಘು ‘ಶಾಖಾಹಾರಿ’ ಸಿನಿಮಾಗೆ ಯೋಗರಾಜ್ ಭಟ್ ಸಾಥ್‌!

Kannada New Movie shakhahari Poster

‘ಕೀಳಂಬಿ ಮೀಡಿಯಾ ಲ್ಯಾಬ್’ ಮೂಲಕ ರಾಜೇಶ್ ಕೀಳಂಬಿ ಹಾಗೂ ರಂಜಿನಿ ಪ್ರಸನ್ನ ಜತೆಗೂಡಿ ಚೊಚ್ಚಲ ಬಾರಿಗೆ ನಿರ್ಮಿಸಿರುವ ‘ಶಾಖಾಹಾರಿ’ ಸಿನಿಮಾದ (Kannada New Movie) ಟೈಟಲ್‌ವನ್ನು ಯೋಗರಾಜ್ ಭಟ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ಮಲೆನಾಡಿನ ತೀರ್ಥಹಳ್ಳಿಯ ಊರೊಂದರಲ್ಲಿ ನಡೆಯುವ ನಿಗೂಢ ಘಟನೆಯ ಸುತ್ತ ಸಾಗುವ ಕಥೆ ಇದಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಹೋಟೆಲ್ ಭಟ್ಟನಾಗಿ ರಂಗಾಯಣ ರಘು, ಎಸ್.ಐ ಆಗಿ ಗೋಪಾಲ್ ಕೃಷ್ಣ ದೇಶಪಾಂಡೆ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹರಿಣಿ, ಪ್ರತಿಮಾ ನಾಯಕ್, ವಿನಯ್ ಯು.ಜೆ., ನಿಧಿ ಹೆಗ್ಡೆ, ಶ್ರೀಹರ್ಷ ಗೋಭಟ್ಟ ಮತ್ತಿತರು ತಾರಾಬಳಗದಲ್ಲಿದ್ದಾರೆ.

ʻಶಾಖಾಹಾರಿ’ ಸಿನಿಮಾದಲ್ಲಿ ರಂಗಾಯಣ ರಘು ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಅಸೋಸಿಯೇಟ್ ಡೈರೆಕ್ಟರ್ ಆಗಿ, ಬರಹಗಾರರಾಗಿ ಅನುಭವವಿರುವ ಯುವ ಪ್ರತಿಭೆ ಸಂದೀಪ್ ಸುಂಕದ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Bahuroopi Rangotsava | ರಂಗಾಯಣದಲ್ಲಿ ಒಂದೇ ಸಿದ್ಧಾಂತವಾದಿಗಳ ಆರ್ಭಟ: ಅಡ್ಡಂಡ ಸಿ.ಕಾರ್ಯಪ್ಪ

ವಿಶ್ವಜಿತ್ ರಾವ್ಛಾ‌ ಅವರ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಮತ್ತು ಆಶಿಕ್ ಕುಸುಗೊಳ್ಳಿರವರ ಗ್ರೇಡಿಂಗ್ ಈ ಚಿತ್ರಕ್ಕಿದೆ. ಸಂಪೂರ್ಣ ಮಲೆನಾಡಿನಲ್ಲೇ ಚಿತ್ರೀಕರಣವಾಗಿರುವ ಈ ಸಿನಿಮಾದಲ್ಲಿ ಅನೇಕ ಮಲೆನಾಡಿಗರು ಕೆಲಸ ಮಾಡಿರೋದು ಮತ್ತೊಂದು ವಿಶೇಷದ ಸಂಗತಿ. ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Exit mobile version