Kannada New Movie: ’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ; `ಜೋಡಿಹಕ್ಕಿ' ಸೀರಿಯಲ್ ತಾಂಡವ್ ರಾಮ್ ನಾಯಕ! - Vistara News

South Cinema

Kannada New Movie: ’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ; `ಜೋಡಿಹಕ್ಕಿ’ ಸೀರಿಯಲ್ ತಾಂಡವ್ ರಾಮ್ ನಾಯಕ!

Kannada New Movie: ಭರತ್ ನಿರ್ದೇಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು . ಇದೀಗ ಅವರು ಮೂರನೇ ಸಿನಿಮಾಗೆ ಅಣಿಯಾಗಿದ್ದಾರೆ.

VISTARANEWS.COM


on

Thandav Ram Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಮುಗಿಲ್ ಪೇಟೆʼ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ ನಾವುಂದ ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ʻಜೋಡಿಹಕ್ಕಿʼ ಸೀರಿಯಲ್ ಖ್ಯಾತಿಯ ತಾಂಡವ್ ರಾಮ್ (Thandav Ram) ಅವರನ್ನು ನಾಯಕನಟರಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿದ್ದಾರೆ.

ʻಅಡಚಣೆಗಾಗಿ ಕ್ಷಮಿಸಿʼ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಭರತ್ ಎಸ್ ನಾವುಂದ ಆ ಬಳಿಕ ಸುಂದರ ಪ್ರೇಮಕಥೆ ಜತೆಗೆ ಪಕ್ಕ ಫ್ಯಾಮಿಲಿ ಎಂಟರ್ಟೈನರ್‌ ಮುಗಿಲ್ ಪೇಟೆ ಚಿತ್ರವನ್ನು ಪ್ರೇಕ್ಷಕ ಎದುರು ನಿಲ್ಲಿಸಿದರು. ಈ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಭರತ್ ನಿರ್ದೇಶನದ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು . ಇದೀಗ ಅವರು ಮೂರನೇ ಸಿನಿಮಾಗೆ ಅಣಿಯಾಗಿದ್ದಾರೆ.

ಇದನ್ನೂ ಓದಿ: Kannada New Movie: ‘ರಕ್ತಾಕ್ಷ’ ಸಿನಿಮಾದ ಜವಾರಿ ಸಾಂಗ್ ರಿಲೀಸ್; ಅರೆಸ್ಟ್ ಮಿ ಬೇಬಿ ಎಂದು ಹೆಜ್ಜೆ ಹಾಕಿದ ರೋಹಿತ್

ಜೋಡಿಹಕ್ಕಿ ಸೀರಿಯಲ್ ಮೂಲಕ ಮನೆ ಮಾತಾಗಿರುವ ತಾಂಡವ್ ರಾಮ್ ಭರತ್ ಜತೆ ಕೈ ಜೋಡಿಸಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಹುತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಸಿನಿಮಾ ಎ ಕ್ಯೂಬ್ ಫಿಲ್ಮಂಸ್ ಸಂಸ್ಥೆಯ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಲಿದೆ. ಸಿನಿಮಾದ ಹೆಸರು ಇನ್ನಷ್ಟೇ ಬಹಿರಂಗವಾಗಬೇಕಿದೆ. ಭರತ್ ಎಸ್ ನಾವುಂದರವರ ಮೂರನೇ ಕನಸು ಇದಾಗಿದೆ. ಪಕ್ಕ ಫ್ಯಾಮಿಲಿ ಕಥಾಹಂದರದ ಸಿನಿಮಾ ಮಾಡಲು ಸಜ್ಜಾಗಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪ್‌ಡೇಟ್‌ಗಳನ್ನು ಹಂಚಿಕೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

Actor  Ravichandran: ನಟ ರವಿಚಂದ್ರನ್ (Ravichandran), ತುಸು ಗರಂ ಆಗಿಯೇ ಮಾತನಾಡಿದ್ದಾರೆ. ಒಳ್ಳೆ ಸಿನಿಮಾ ಮಾಡಿದರೆ ಖಂಡಿತ ಜನ ಬಂದೇ ಬರುತ್ತಾರೆ. ಪ್ರೇಕ್ಷಕರ ತಪ್ಪಿಲ್ಲ ಎಂದಿದ್ದಾರೆ.ಹಾಗೇ ವರ್ಷಕ್ಕೆ ಯಶ್ ಮೂರು ಸಿನಿಮಾ. ದರ್ಶನ್ ಮೂರು ಸಿನಿಮಾ ಮಾಡಲು ಪ್ರಾರಂಭಿಸಿದರೆ ಎರಡು ವರ್ಷಕ್ಕೆ ಅವರನ್ನೆಲ್ಲ ಮನೆಗೆ ಕಳಿಸಿಬಿಡುತ್ತಾರೆ ಅಷ್ಟೆ ಎಂದು ನೇರವಾಗಿಯೇ ಹೇಳಿದ್ದಾರೆ.

VISTARANEWS.COM


on

Actor  Ravichandran Talks About Kannada Movie Industry Problems yash darshan
Koo

ಬೆಂಗಳೂರು: ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಗಳಲ್ಲಿ ಬರುತ್ತಿಲ್ಲ ಎಂಬ ದೂರು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ ಫಿಲ್ಮ್‌ ಚೇಂಬರ್​ನವರು ಸಭೆ ನಡೆಸಿ, ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡುವಂತೆ ಒತ್ತಾಯಿಸಲು ನಿರ್ಣಯಿಸಿರುವ ಸುದ್ದಿ ಹರಿದಾಡಿತು. ಈ ಬಗ್ಗೆ ಮಾತನಾಡಿರುವ ನಟ ರವಿಚಂದ್ರನ್ (Actor  Ravichandran), ತುಸು ಗರಂ ಆಗಿಯೇ ಮಾತನಾಡಿದ್ದಾರೆ. ಒಳ್ಳೆ ಸಿನಿಮಾ ಮಾಡಿದರೆ ಖಂಡಿತ ಜನ ಬಂದೇ ಬರುತ್ತಾರೆ. ಪ್ರೇಕ್ಷಕರ ತಪ್ಪಿಲ್ಲ ಎಂದಿದ್ದಾರೆ.ಹಾಗೇ ವರ್ಷಕ್ಕೆ ಯಶ್ (Yash) ಮೂರು ಸಿನಿಮಾ. ದರ್ಶನ್ ಮೂರು ಸಿನಿಮಾ ಮಾಡಲು ಪ್ರಾರಂಭಿಸಿದರೆ ಎರಡು ವರ್ಷಕ್ಕೆ ಅವರನ್ನೆಲ್ಲ ಮನೆಗೆ ಕಳಿಸಿಬಿಡುತ್ತಾರೆ ಅಷ್ಟೆ ಎಂದು ನೇರವಾಗಿಯೇ ಹೇಳಿದ್ದಾರೆ.

ರವಿಚಂದ್ರನ್‌ ಮಾತನಾಡಿ ʻʻಮಾತು ಎತ್ತರೆ ಸಾಕು ಮಲಯಾಳಂ ಸಿನಿಮಾ ನೋಡ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾನು ಹೇಳೋದು ಏನಂದರೆ ಹೋಗಿ ಮಲಯಾಳಂ ರೈಟರ್ಸ್‌ ಹತ್ತಿರ ಕಥೆ ಬರೆಸಿಕೊಂಡು ಬನ್ನಿ. ನಂತರ ಕನ್ನಡದಲ್ಲಿ ಸಿನಿಮಾ ಮಾಡಿ. ಯಾರು ಬೇಡ ಅಂತಾರೆ. ಕಥೆ ಎಲ್ಲಿ ಸಿಗುತ್ತೋ ಅಲ್ಲಿಂದ ತನ್ನಿ. ಜನ ಒಳ್ಳೆ ಕಥೆ ಸಿನಿಮಾಗೆ ಪ್ರೋತ್ಸಾಹ ಕೊಡುತ್ತಲೇ ಇದ್ದಾರೆ. ನಾನು ನಾಳೆ 10 ಸಿನಿಮಾ ಮಾಡ್ತೀನಿ. ಸಹಿ ಮಾಡೋಕೆ ಹೇಳಿ ನಿರ್ಮಾಪಕರಿಗೆ. ಅವರಿಗೆಲ್ಲಾ ಯಶ್, ದರ್ಶನ್ ಬೇಕಲ್ವಾ? ಅದು ಅವರವರ ಆಯ್ಕೆ. ಕಥೆ ಅವ್ರು ಓಕೆ ಮಾಡ್ಬೇಕಲ್ವಾ? ನಾಳೆ ಬೆಳಗ್ಗೆ ಯಶ್ 3, ದರ್ಶನ್ 3 ಸಿನಿಮಾ ಮಾಡಿಬಿಟ್ರೆ, 2 ವರ್ಷಕ್ಕೆ ಮನೆಗೆ ಕಳ್ಸಿಬಿಡ್ತಿರಾ. ಅವರಿಗೆ ಆದ ಬ್ರ್ಯಾಂಡ್, ತಾಕತ್ತು, ಅದಕ್ಕೆ ತಕ್ಕ ಬಜೆಟ್, ಸ್ಟೇಜ್ ಇರುತ್ತದೆ. ಯಾರಿಗೂ ಸಿನಿಮಾ ಮಾಡುವುದನ್ನು ಬಲವಂತ ಮಾಡಬಾರದು” ಎಂದು ರವಿಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ: ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಹಾಲಿವುಡ್ ಸಿನಿಮಾ ಸ್ಟೈಲಲ್ಲಿ ಕಳ್ಳತನ; ರೋಚಕ Video ಇಲ್ಲಿದೆ!

ʻʻಒಬ್ಬ ಹಿರೋ ಆದವನ್ನು ಕಥೆಯನ್ನು ಓಕೆ ಮಾಡ್ಬೇಕು. ಅವನಿಗೆ ಅವನದ್ದೇ ಆದ ಬ್ರ್ಯಾಂಡ್‌ ಮತ್ತು ಪೊಸಿಷನ್‌ ಇರುತ್ತೆ. ಕೆಜಿಎಫ್‌ ಆದಮೇಲೆ ಯಶ್‌ ಯಾವ ಸಿನಿಮಾ ಮಾಡ್ಬೇಕು? ಅವರಿಂದ ಜನರಿಗೆ ಭಾರಿ ನಿರೀಕ್ಷೆ ಇರತ್ತೆ. ದರ್ಶನ್‌ ಕಾಟೇರ ಆದ ಮೇಲೆ ಏನು ಮಾಡಬೇಕು?ಅವರ ಇಮೇಜ್, ಬ್ರ್ಯಾಂಡ್, ಬಜೆಟ್‌ನಲ್ಲಿ ಯೋಚನೆ ಮಾಡ್ತಾರೆ. ಅವರಿಗೆ ವರ್ಷಕ್ಕೆ 3 ಸಿನಿಮಾ ಮಾಡಿ ಅಂದ್ರೆ ಸಾಧ್ಯವಿಲ್ಲ. ಅವರಿಗೆ ಪಾಕೆಟ್‌ ತುಂಬಿದೆ. ಅವರು ಕಥೆ ಕೇಳ್ತಾರೆ” ಎಂದಿದ್ದಾರೆ.

ʻʻಸಮಸ್ಯೆ ಎಲ್ಲ ಕಡೆ ಇದ್ದಿದ್ದೆ. ಚಿತ್ರರಂಗದಲ್ಲಿ ಯಾವುದೇ ಸಮಸ್ಯೆ ಇಲ್ಲ. ಇಲ್ಲಿ ಸ್ಟ್ರೈಕ್‌ ಮಾಡಿದರೆ ಪ್ರಯೋಜನ ಇಲ್ಲ. ಇದು ಉದ್ಯಮಕ್ಕೆ ಸರಿ ಅಲ್ಲ. ಬ್ಯಾಡ್‌ ಟೈಮ್‌ ಬರತ್ತೆ. ಮೊದಲು ಒಳ್ಳೆಯ ಸಿನಿಮಾ ಹುಡಕಬೇಕು. ಕಾಂಪೀಟ್‌ ಮಾಡಲೇಬೇಕು. ಐದು ಭಾಷೆಗಳ ಸಿನಿಮಾ ಜತೆ ನಾವು ಕಾಂಪೀಟ್‌ ಮಾಡಲೇಬೇಕು. ಯಾವತ್ತಿಗೂ ಗ್ರಾಫ್ ಒಂದೇ. ನೂರರಲ್ಲಿ 5 ಸಿನಿಮಾ ಲಾಭ ಮಾಡುತ್ತೆ. 5 ಅಲ್ಲಿಗಲ್ಲಿಗೆ ಸರಿ ಹೋಗತ್ತೆ. 90 ಸಿನಿಮಾ ಫ್ಲಾಪ್ ಆಗಿರುತ್ತದೆ. ಆ ಕಾಲದಿಂದ ಇದೇ ನಡೆದು ಬರುತ್ತಿರುವುದು ಇದೆʼʼಎಂದರು.

Continue Reading

ಸ್ಯಾಂಡಲ್ ವುಡ್

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Actor Kiran Raj: ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

VISTARANEWS.COM


on

Actor Kiran Raj Ronny Movie Reels with Fans Song
Koo

ಬೆಂಗಳೂರು: ʻಕನ್ನಡತಿ ಧಾರಾವಾಹಿʼ (Kannadathi serial) ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್‌ರಾಜ್‌ (Actor Kiran Raj) ನಾಯಕನಾಗಿ ನಟಿಸುತ್ತಿರುವ ʻರಾನಿʼ (Ronny Movie) ಸಿನಿಮಾ ಒಂದೊಲೊಂದು ಸುದ್ದಿ ಮಾಡುತ್ತಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ.

“ನೀನೆಂದರೆ ನೀನೆಂದರೆ ನನಗೊಂತರ ಅರಿಯದ ಅಮಲು” ಎನ್ನುವ ಸಾಲಿನಿಂದ ಶುರುವಾಗುವ ಹಾಡಿಗೆ ಸಾವಿರಾರು ಜನ ಇನ್‌ಸ್ಟಾ ರೀಲ್ಸ್ ಮಾಡುವ ಮುಖಾಂತರ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಾಡು ಹಿಟ್ ಮಾಡಿದ ಅಭಿಮಾನಿಗಳೊಂದಿಗೆ ಕಿರಣ್ ರಾಜ್ ಇದೆ ಭಾನುವಾರ ರೀಲ್ಸ್ ಮಾಡುತ್ತಿದ್ದಾರೆ.ಪೊಸ್ಟರ್,ಟೀಸರ್,ಹಾಡುಗಳಿಂದ ಭಾರಿ ನಿರೀಕ್ಷೆ ಹುಟ್ಟಿಸಿರುವ “ರಾನಿ” ಚಿತ್ರ ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಈ ಹಿಂದೆ ಹಿಂದಿ ಟೀಸರ್‌ ಬಿಡುಗಡೆಯಾಗಿದ್ದು (Hindi teaser Release) ಭರ್ಜರಿ ರೆಸ್ಪಾನ್ಸ್‌ (Good Response) ಪಡೆದುಕೊಂಡಿತ್ತು. ಗುರುತೇಜ್‌ ಶೆಟ್ಟಿ (Director Gurutej Shetty) ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್‌ ನಡೆಯುತ್ತಿದೆ. ರಾನಿ ಚಿತ್ರ ಭೂಗತ ಜಗತ್ತಿನ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಟೀಸರ್‌ ಹೇಗಿತ್ತು?

 ʻನಾನು ಮನುಷ್ಯನಾಗಬಯಸುತ್ತೇನೆ, ಡಾನ್‌ ಅಲ್ಲʼ ಎಂದು ಕಿರಣ್‌ರಾಜ್‌ ಅಬ್ಬರಿಸುವ ದೃಶ್ಯವೊಂದು ಇದರಲ್ಲಿತ್ತು. ಇದರೊಂದಿಗೆ ಇದು ಆಕಸ್ಮಿಕವಾಗಿ ಭೂಗತ ಜಗತ್ತು ಪ್ರವೇಶಿಸಿದ ಅಮಾಯಕ ಯುವಕನೊಬ್ಬನ ಕಥೆಯಂತೆ ಕಾಣಿಸುತ್ತಿತ್ತು. ಜತೆಗೆ ಸಖತ್‌ ರೊಮ್ಯಾನ್ಸ್‌ ಕೂಡಾ ಕಾಣಿಸಿತ್ತು. ಟೀಸರ್‌ನಲ್ಲಿ ಕಿರಣ್‌ರಾಜ್‌ ಅವರ ಆಕ್ಷನ್‌, ರವಿಶಂಕರ್‌ ಅವರ ಅಬ್ಬರ ಕಣ್ಮನ ತಣಿಸುವಂತಿತ್ತು. ಕಿರಣ್‌ ಅಂತೂ ಕಿಲ್ಲರ್‌ ಲುಕ್‌ನಿಂದ ಕೊಲ್ಲುತ್ತಾರೆ. ಮಣಿಕಾಂತ್‌ ಕದ್ರಿ ಅವರ ಹಿನ್ನೆಲೆ ಸಂಗೀತವೂ ಟೀಸರ್‌ಗೆ ಹೊಸ ರೂಪ ನೀಡಿತ್ತು.

ಈ ಚಿತ್ರದಲ್ಲಿ ಕಿರಣ್‌ ರಾಜ್‌ ಜತೆಗೆ ರವಿಶಂಕರ್‌, ಮೈಕೋ ನಾಗರಾಜ್‌, ನಾಗತಿಹಳ್ಳಿ ಚಂದ್ರಶೇಖರ್‌, ಬಿ ಸುರೇಶ್‌, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್‌ ಹೆಗ್ಡೆ, ಪ್ರಥ್ವೀರಾಜ್‌, ಯಶ್‌ ಶೆಟ್ಟಿ, ಉಮೇಶ್‌, ಸುಜಯ್‌ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್‌ ಮಲಾನಿ, ಅನಿಲ್‌, ಧರ್ಮೇಂದ್ರ ಅರಸ್‌, ಮನಮೋಹನ ರೈ ಮೊದಲಾದವರು ಇದ್ದಾರೆ. ಪ್ರಮೋದ್‌ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್‌ ಕದ್ರಿ ಟ್ಯೂನ್‌ ಹಾಕಿದ್ದಾರೆ.

ಇದೊಂದು ಪಕ್ಕಾ ಆಕ್ಷನ್‌ ಚಿತ್ರವಾಗಿದೆ. ಆದರೆ, ಅತ್ಯಂತ ಸೂಕ್ಷ್ಮ ಅಂಶಗಳನ್ನು ಬೆಸೆದುಕೊಂಡು ಕಟ್ಟಿದ ದೃಶ್ಯ ಕಾವ್ಯ ಎಂಬುದು ಟೀಸರ್‌ನಿಂದ ಸ್ಪಷ್ಟವಾಗುತ್ತದೆ. ರಾನಿ ಸಿನಿಮಾದಲ್ಲಿ ಆರು ಆಕ್ಷನ್‌ ಸೀನ್‌ಗಳಿವೆ ಎಂದು ಚಿತ್ರತಂಡ ಹೇಳಿದೆ.


ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವುದು ಸದ್ಯದ ಲೆಕ್ಕಾಚಾರ. ಹಿಂದಿ ಟೀಸರ್‌ ಔಟ್‌ ಆಗಿರುವುದರಿಂದ ಹಿಂದಿಗೆ ಡಬ್‌ ಆಗಿ ಬಿಡುಗಡೆಯಾದರೂ ಅಚ್ಚರಿ ಇಲ್ಲ.

Continue Reading

ಸ್ಯಾಂಡಲ್ ವುಡ್

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Samarjit Lankesh: ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕ ಪಾಟೀಲ್ ಹುಕ್ ಸ್ಟೆಪ್ ಹಾಕಿದರು. ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

VISTARANEWS.COM


on

Samarjit Lankesh Love you Samantha Song Teaser
Koo

ಬೆಂಗಳೂರು: ಸಾಂಸ್ಕೃತಿಕ ನಗರಿ (Samarjit Lankesh) ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಕಾರಣ ಈ ಕಾಲೇಜಿನ ಕ್ಲಾಸ್ ರೂಂನಲ್ಲಿ ʻಗೌರಿ’ ಚಿತ್ರತಂಡ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ (Love you Samantha Song Teaser) ಮಾಡಿದೆ. ಕರ್ನಾಟಕದ ಹೆಮ್ಮೆಯ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ʻಲವ್ ಯೂ ಸಮಂತ’ ಸಾಂಗ್‌ ಟೀಸರನ್ನು ಬಿಡುಗಡೆಗೊಳಿಸಿದರು.

ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತ ʻಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ʻಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜತೆ ʻಟೈಂ ಬರುತ್ತೆ.. ಟೈಂ ಬರುತ್ತೆ..’ ಹಾಡಿಗೆ ಶ್ರೇಯಾಂಕಾ ಪಾಟೀಲ್ ಹುಕ್ ಸ್ಟೆಪ್ ಹಾಕಿದರು.

ಶ್ರೇಯಾಂಕಾ ಮತ್ತು ಸಮರ್ಜಿತ್ ಡ್ಯಾನ್ಸ್‌ಗೆ ವಿದ್ಯಾರ್ಥಿಗಳು ಫಿದಾ ಆಗಿದ್ದಾರೆ. ಒಮ್ಮೆಲೆ ನೂರಾರು ವಿದ್ಯಾರ್ಥಿಗಳು ಶ್ರೇಯಾಂಕಾ ಪಾಟೀಲ್ ಹಾಗೂ ಸಮರ್ಜಿತ್ ಲಂಕೇಶರನ್ನು ಮುತ್ತಿಕೊಂಡು ಅಭಿನಂದನೆಗಳ ಮಹಾಪೂರ ಹರಿಸಿದರು. ಈ ವೇಳೆ ವಿದ್ಯಾರ್ಥಿಗಳಿಗೆ ʻಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿಗಿದೆ.
ʻಲವ್ ಯೂ ಸಮಂತಾ’ಗೆ ಸಾಹಿತ್ಯ ಕವಿರಾಜ್ ಅವರದ್ದಾದರೆ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನವಿದೆ.
ಕಾರ್ಯಕ್ರಮದಲ್ಲಿ ಬಿಗ್‍ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ʻಮಿಸ್ ಟೀನ್ ಯುನಿವರ್ಸ್ʼ ಸ್ವೀಜಲ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು ಈ ಹಿಂದೆ ಉತ್ತರ ನೀಡಿದ್ದರು.

ʻʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಎಜೆ ಶೆಟ್ಟಿ ಛಾಯಾಗ್ರಹಣ ಮಾಡುತ್ತಿದ್ದು, ಬಿ ಎ ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಕೆ ಕಲ್ಯಾಣ್, ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆಯುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sreenath Bhasi Movie: ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶೀಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

VISTARANEWS.COM


on

Sreenath Bhasi Movie Shashidhar direction new Movie
Koo

ಬೆಂಗಳೂರು: ʻಮಂಜುಮ್ಮೆಲ್ ಬಾಯ್ಸ್ʼ ಮಾಲಿವುಡ್ ಇಂಡಸ್ಟ್ರೀಗೆ ಈ ವರ್ಷ ಸಿಕ್ಕಂತಹ ಸೂಪರ್ ಡೂಪರ್ ಹಿಟ್ ಸಿನಿಮಾ. ವಿಶ್ವಾದ್ಯಂತ ಪ್ರೇಕ್ಷಕರು ಸಿನಿಮಾವನ್ನ ನೋಡಿ ಇಷ್ಟಪಡುತ್ತಿದ್ದಾರೆ. ಪಾತ್ರಧಾರಿಗಳ ಬಗ್ಗೆ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಇಂಚಿಂಚೂ ಮಾತನಾಡುತ್ತಿದ್ದಾರೆ. ಇದೇ ವೇಳೆ ʻಡಾಟರ್ ಆಫ್ ಪಾರ್ವತಮ್ಮʼ, ವೀರಂ, ʻಶುಗರ್ ಲೆಸ್ʼ ಚಿತ್ರಗಳನ್ನ ನಿರ್ಮಾಣ ಮಾಡಿದ್ದ ಶಶಿಧರ ಅವರು ಶುಗರ್ ಲೆಸ್ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದೀಗ ಮಲಯಾಳಂನಲ್ಲಿ ತಮ್ಮ ಮೊದಲ‌ ಚಿತ್ರವನ್ನ ನಿರ್ದೇಶನ‌ ಮಾಡಲು‌ ಹೊರಟಿದ್ದಾರೆ. ಈ ಮೂಲಕ ಇದು ಶಶಿಧರ ಅವರ ಸಿನಿಜರ್ನಿಯ (Sreenath Bhasi Movie) ಎರಡನೇ ಡೈರೆಕ್ಷನ್‌ನ ಸಿನಿಮಾವಾಗಲಿದೆ.

ಸಿಬಿಲ್ ಸ್ಕೋರ್‌ನಲ್ಲಿ ಶ್ರೀನಾಥ್ ಭಾಸಿ

ಶ್ರೀನಾಥ್ ಭಾಸಿ (Sreenath Bhasi) ಅವರು ವೈರಸ್, ಹೋಮ್, ಕುಂಬಳಂಗಿ ನೈಟ್ಸ್ ಅಂತಹ ಅದ್ಭುತ ಸಿನಿಮಾಗಳಲ್ಲಿ‌ ನಟಿಸಿ ಸೈ ಎನಿಸಿಕೊಂಡವರು. ಮಾಲಿವುಡ್ ಸ್ಟಾರ್ ನಟ, ನಮ್ಮ‌ ಕನ್ನಡದ ಪ್ರೊಡ್ಯೂಸರ್ ಹಾಗೂ ಡೈರೆಕ್ಟರ್ ಶಶಿಧರ ಕೆ ಎಮ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಮಲಯಾಳಂ ಸಿನಿಮಾ ʻಸಿಬಿಲ್ ಸ್ಕೋರ್ʼದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲ್ಲಿದ್ದಾರೆ.

ಇದನ್ನೂ ಓದಿ: Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

ಈ‌ ಸಿನಿಮಾವನ್ನು ಕನ್ನಡದ ನಿರ್ದೇಶಕರೇ ನಿರ್ದೇಶನ ಮಾಡುತ್ತಿದ್ದು, ಹಾಗೇ ಮಲಯಾಳಂ ಸಿನಿಮಾ ಆಗಿರುವುದರಿಂದ ಈ ಸಿನಿಮಾದಲ್ಲಿ ಟೆಕ್ನಿಶಿಯನ್ಸ್ ಆರ್ಟಿರ್ಸ್ಟ್ ಕನ್ನಡ ಹಾಗೂ ಮಲಯಾಳಂನವರಾಗಿರುತ್ತಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸೋಹನ್ ಸೀನುಲಾಲ್, ದೀಪಕ್ ಪ್ರಿನ್ಸ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ದಿ ಎಮೋಷನ್ಸ್ ಫ್ಯಾಕ್ಟರಿ ಗ್ರೂಪ್(EFG) ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ವಿವೇಕ್ ಶ್ರೀಕಂಠಯ್ಯ ಬಂಡವಾಳ ಹೂಡುತ್ತಿದ್ದಾರೆ. ಕೋ ಪ್ರೊಡ್ಯೂಸರ್ ಆಗಿ ವಿಕ್ರಮ್, ಲೈನ್ ಪ್ರೊಡ್ಯೂಸರ್ ಆಗಿ ದೀಪು ಕರುಣಾಕರಣ್ ಎಕ್ಸೆಕ್ಯೂಟೀವ್ ಪ್ರೊಡ್ಯೂಸರ್ ಆಗಿ ಶಾಜಿ ಫ್ರಾನ್ಸಿಸ್ ಕೈ ಜೋಡಿಸಿದ್ದಾರೆ. ಸಿನಿಮಾದ ಛಾಯಾಗ್ರಹಣ ಪ್ರದೀಪ್ ನಾಯರ್, ಡೈಲಾಗ್ಸ್ ಅರ್ಜುನ್ ಟಿ ಸತ್ಯನ್, ಸೋಬಿನ್ ಕೆ ಸೋಮನ್ ಸಂಕಲನವಿದೆ. ಇನ್ನೂ ಕ್ರಿಯೇಟಿವ್ ಹೆಡ್ ಆಗಿ ಶರತ್ ವಿನಾಯಕ್ ಸಿನಿಮಾಗೆ ಜತೆಯಾಗಿದ್ದಾರೆ.

Continue Reading
Advertisement
Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್4 mins ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ8 mins ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ32 mins ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ37 mins ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ42 mins ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Mother Sentiment
ಅಂಕಣ1 hour ago

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

subramanian swamy
ದೇಶ1 hour ago

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Mint Leaf Water
ಆರೋಗ್ಯ2 hours ago

Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

Karnataka weather Forecast
ಮಳೆ3 hours ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ3 hours ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌