ಸಿನಿಮಾ
Kannada New Movie: ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ
ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದಾರೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜತೆಗೆ ಭರತ್ ಫಿಲಂಸ್ ನಡಿ ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಬೆಂಗಳೂರು: ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ (Kannada New Movie) ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಜನವರಿ 29ರಂದು ನೆರವೇರಿದೆ. ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದಾರೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜತೆಗೆ ಭರತ್ ಫಿಲಂಸ್ ನಡಿ ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ನಿರ್ದೇಶಕ ಭರತ್ ವಿಷ್ಣುಕಾಂತ್ ಮಾತನಾಡಿ ʻʻಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನನ್ನ ಗುರು ಖಲೀಮ್ ಮೆಕಾನಿಕ್ ಹಾಗೂ ನ್ಯಾಶನಲ್ ಚಾಂಪಿಯನ್. ಅವರ ಗ್ಯಾರೇಜ್ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್ ಟಚ್ ಕೊಟ್ಟು ‘ರೇಸರ್’ ಕಥೆ ಹೆಣೆಯಲಾಗಿದೆ. ಸಿನಿಮಾ ಬೈಕ್ ರೇಸರ್ ಬಗ್ಗೆ ಆಗಿರುವುದರಿಂದ ರಿಯಲ್ ಬೈಕ್ ರೇಸರನ್ನೇ ಹಾಕಿಕೊಂಡು ಸಿನಿಮಾ ಮಾಡುತ್ತಿದ್ದೇನೆ. ಬುದ್ದ್ ಇಂಟರ್ ನ್ಯಾಶನಲ್ ಸರ್ಕ್ಯೂಟ್ನಲ್ಲಿ ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲು ಚಿತ್ರೀಕರಣ ಮಾಡುತ್ತಿದ್ದೇವೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭಜರಂಗಿ ಲೋಕಿ, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಬಾಲ ರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆʼʼ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.
ಇದನ್ನೂ ಓದಿ: Kannada New Movie: ಮಾಲಾಶ್ರೀ-ಭೂಮಿ ಶೆಟ್ಟಿ ಅಭಿನಯದ ಕಾದಂಬರಿ ಆಧಾರಿತ ‘ಕೆಂಡದ ಸೆರಗು’ ಸಿನಿಮಾ ಟೀಸರ್ ರಿಲೀಸ್
ನಾಯಕ ನಟ ಸಂದೇಶ್ ಪ್ರಸನ್ನ ಮಾತನಾಡಿ ʻʻನಾನು ಪ್ರೊಫೇಶನಲ್ ಸೂಪರ್ ಬೈಕ್ ರೇಸರ್. ನಿರ್ದೇಶಕರು ಬೈಕ್ ರೇಸರ್ಗಳು ಇಂಟರ್ ನ್ಯಾಶನಲ್ ಚಾಂಪಿಯನ್ ಶಿಪ್ಗೆ ಹೋಗಲು ಯಾವೆಲ್ಲ ರೀತಿ ಕಷ್ಟ ಪಡುತ್ತಾರೆ ಎನ್ನುವುದನ್ನು ಕೇಳಿ ಕಥೆಯಲ್ಲಿ ಇಂಪ್ಲಿಮೆಂಟ್ ಮಾಡಲು ನನ್ನ ಬಳಿ ಬಂದಿದ್ದರು. ನಂತರ ನೀವೇ ಹೀರೊ ಆಗಿ ಮಾಡಿ ಅಂದರು. ಒಬ್ಬ ರೇಸರ್ ಕಥೆ ಚಿತ್ರದಲ್ಲಿದೆ. ಕಥೆ ತುಂಬಾ ಸ್ಪೂರ್ತಿದಾಯಕವಾಗಿದೆ. ಎಲ್ಲರನ್ನು ಹುರಿದುಂಬಿಸುತ್ತದೆʼʼ ಎಂದರು.
ಇದನ್ನೂ ಓದಿ: Kannada New Movie: ಸಿಂಪಲ್ ಸುನಿ-ವಿನಯ್ ರಾಜ್ಕುಮಾರ್ ಕಾಂಬಿನೇಶನ್ ಚಿತ್ರಕ್ಕೆ ಧಾರವಾಡದ ಸ್ವತಿಷ್ಠ ಕೃಷ್ಣನ್ ನಾಯಕಿ
ಕಿರುತೆರೆ
Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ
ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.
ಬೆಂಗಳೂರು: ಅದು 2019ರ ಸೆಪ್ಟೆಂಬರ್ 9. ಕನ್ನಡದ ಕಿರುತೆರೆಗೆ ಹೊಸ ಶೈಲಿಯ ಕಥೆಯೊಂದು (Kannada Serial) ಎಂಟ್ರಿ ಕೊಟ್ಟಿತ್ತು. ಅದುವೇ ʼಜೊತೆ ಜೊತೆಯಲಿʼ. ಈ ಧಾರಾವಾಹಿ ಕಿರುತೆರೆಗೆ ಎಂಟ್ರಿ ಕೊಟ್ಟ ಒಂದೇ ವಾರದಲ್ಲಿ ಕನ್ನಡದ ಎಲ್ಲಾ ಧಾರಾವಾಹಿಗಳ ದಾಖಲೆಗಳನ್ನು ಮುರಿದು ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎನ್ನುವ ಖ್ಯಾತಿ ಪಡೆದುಕೊಂಡಿತು. ಆ ಧಾರಾವಾಹಿಗೆ ಇದೀಗ 900 ಸಂಚಿಕೆಗಳು ಸಂಪೂರ್ಣಗೊಂಡಿವೆ.
ಇದನ್ನೂ ಓದಿ: Jote Joteyali: ಹಸೆಮಣೆ ಏರಲು ಸಜ್ಜಾದ `ಜೊತೆ ಜೊತೆಯಲಿ’ ಧಾರಾವಾಹಿ ನಟಿ ಶಿಲ್ಪಾ ಅಯ್ಯರ್
ಧಾರಾವಾಹಿ 900 ಸಂಚಿಕೆಗಳನ್ನು ಪೂರ್ಣಗೊಳಿಸಿರುವ ಸಂತಸದಲ್ಲಿ ಧಾರಾವಾಹಿಯ ತಂಡವಿದೆ. ಈ 900 ಸಂಚಿಕೆಗಳಲ್ಲಿ ಧಾರಾವಾಹಿ ಹಲವಾರು ತಿರುವುಗಳನ್ನು ಕಂಡಿದೆ. ಅನಿರುದ್ಧ ಅವರನ್ನು ಧಾರಾವಾಹಿ ತಂಡದಿಂದ ಹೊರಹಾಕಿದ ನಂತರ ಅವರ ಸ್ಥಾನಕ್ಕೆ ಹರೀಶ್ ರಾಜ್ ಅವರನ್ನು ಕರೆತರಲಾಗಿದೆ. ಅದಕ್ಕಾಗಿಯೇ ಕೆಲವು ಹೊಸ ಉಪಕಥೆಯನ್ನೂ ಪರಿಚಯಿಸಲಾಗಿದೆ. ಹಾಗೆಯೇ ಜೋಡಿ ಹಕ್ಕಿ ಧಾರಾವಾಹಿ ಖ್ಯಾತಿಯ ಚೈತ್ರ ರಾವ್ ಅವರನ್ನೂ ಸಹ ಆರಾಧನಾ ಹೆಸರಿನಲ್ಲಿ ಧಾರಾವಾಹಿಯಲ್ಲಿ ಪರಿಚಯಿಸಲಾಗಿದೆ.
ಜೊತೆ ಜೊತೆಯಲ್ಲಿ ಧಾರಾವಾಹಿಯು ಮಧ್ಯಮ ವಯಸ್ಸಿನ ಉದ್ಯಮಿ ಆರ್ಯವರ್ಧನ್ ಕಥೆಯಾಗಿದೆ. ಅದರಲ್ಲಿ ಆ ಉದ್ಯಮಿಗೆ ಅನು ಹೆಸರಿನ ಯುವತಿಯೊಂದಿಗೆ ಪ್ರೀತಿ ಹುಟ್ಟಿ ಅವರಿಬ್ಬರು ಮದುವೆಯಾಗುತ್ತಾರೆ. ಇದೀಗ ಅನು ಗರ್ಭಿಣಿಯಾಗಿದ್ದು, ಅದೇ ಸಂಭ್ರಮದಲ್ಲಿ ಆರ್ಯವರ್ಧನ್ ಇದ್ದಾರೆ. ಆದರೆ ಇವರಿಬ್ಬರ ಅನ್ಯೋನ್ಯತೆ ಬಗ್ಗೆ ಆರಾಧನಾ ಅವರಿಗೆ ಅಸಮಾಧಾನ ಇದೆ.
ಇದನ್ನೂ ಓದಿ: Anirudh Jatkar: ʻಜೊತೆ ಜೊತೆಯಲಿʼ ಖ್ಯಾತಿಯ ಅನಿರುದ್ಧ ಮುಂಬರುವ ಧಾರಾವಾಹಿಗೆ ನಾಯಕಿ ಯಾರು?
ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಈ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.
South Cinema
Actor Suriya: ಮುಂಬೈನಲ್ಲಿ 70 ಕೋಟಿ ರೂ. ಮೌಲ್ಯದ ಅಪಾರ್ಟ್ಮೆಂಟ್ ಖರೀದಿಸಿದ ನಟ ಸೂರ್ಯ
ಕಾಲಿವುಡ್ ನಟ ಸೂರ್ಯ (Actor Suriya) ಅವರು ಮುಂಬೈನಲ್ಲಿ ಬಹು ಕೋಟಿ ರೂ. ಮೌಲ್ಯದ ಅಪಾರ್ಟ್ಮೆಂಟ್ ಒಂದನ್ನು ಖರೀದಿಸಿದ್ದಾರೆ. ಅದರ ಬೆಲೆ 70 ಕೋಟಿ ರೂ. ಎನ್ನಲಾಗಿದೆ.
ಮುಂಬೈ: ಕಾಲಿವುಡ್ ನಟ ಸೂರ್ಯ (Actor Suriya) ಬಹುಬೇಡಿಕೆಯ ನಟರಲ್ಲಿ ಒಬ್ಬರು. ಅವರ ಪತ್ನಿ ಜ್ಯೋತಿಕಾ ಅವರೂ ಕೂಡ ಸಿನಿಮಾಗಳಲ್ಲಿ ಮಿಂಚಿದವರೇ. ಇದೀಗ ಈ ದಂಪತಿ ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಕೋಟಿ ರೂ. ಮೌಲ್ಯದ ಅಪಾರ್ಟ್ಮೆಂಟ್ನ್ನು ಖರೀದಿಸಿರುವುದಾಗಿ ವರದಿಯಾಗಿದೆ. ಅವರು ಖರೀದಿಸಿರುವ ಅಪಾರ್ಟ್ಮೆಂಟ್ ಬೆಲೆ ಬರೋಬ್ಬರಿ 70 ಕೋಟಿ ರೂ. ಎಂದು ವರದಿಯಿದೆ.
ಇದನ್ನೂ ಓದಿ: Actor Suriya: ಸಚಿನ್ ತೆಂಡೂಲ್ಕರ್ ಭೇಟಿ ಮಾಡಿದ ಕಾಲಿವುಡ್ ನಟ ಸೂರ್ಯ: ಫೋಟೊ ವೈರಲ್
ಇಂಡಿಯಾ ಗ್ಲಿಟ್ಜ್ ಈ ಬಗ್ಗೆ ವರದಿ ಮಾಡಿದೆ. ಸೂರ್ಯ ಅವರು ಕೊಂಡುಕೊಂಡಿರುವ ಐಷಾರಾಮಿ ಅಪಾರ್ಟ್ಮೆಂಟ್ ಸುಮಾರು 9000 ಚದರ ಅಡಿ ಜಾಗಕ್ಕೆ ಹಬ್ಬಿದೆ. ಅದರಲ್ಲಿ ಅತ್ಯಂತ ಸುಂದರವಾದ ಉದ್ಯಾನವನ, ಹಲವಾರು ಪಾರ್ಕಿಂಗ್ ಸ್ಥಳಗಳು ಸೇರಿ ಅನೇಕ ಐಷಾರಾಮಿ ಸೌಲಭ್ಯ ಅಪಾರ್ಟ್ಮೆಂಟ್ನಲ್ಲಿ ಇದೆ ಎಂದು ವರದಿಯಿದೆ. ಅವರ ಅಪಾರ್ಟ್ಮೆಂಟ್ ಸನಿಹದಲ್ಲಿಯೇ ಹಲವು ಬಾಲಿವುಡ್ ತಾರೆಗಳ ಮನೆ ಹಾಗೂ ರಾಜಕಾರಣಿಗಳ ಮನೆಗಳು ಇವೆ ಎನ್ನಲಾಗಿದೆ.
ಸೂರ್ಯ ಅವರು ಈಗಾಗಲೇ ಮುಂಬೈನಲ್ಲಿ ಮನೆಯೊಂದನ್ನು ಖರೀದಿಸಿ ಅದರಲ್ಲಿ ಕುಟುಂಬ ಸಮೇತವಾಗಿ ವಾಸವಿದ್ದರೆ. ಇದೀಗ ಖರೀದಿಸಿರುವ ಈ ಅಪಾರ್ಟ್ಮೆಂಟ್ ಅವರ ಕುಟುಂಬದವರಿಗೆ, ಸಹೋದರರಿಗೆ ಗೆಸ್ಟ್ ಹೌಸ್ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಮಕ್ಕಳ ಜನ್ಮದಿನ ಸೇರಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಆಚರಿಸುವುದಕ್ಕೆ ಈ ಮನೆಯನ್ನು ಬಳಸಬಹುದು ಎನ್ನಲಾಗಿದೆ.
ಇದನ್ನೂ ಓದಿ: Vijay Antony | ಶೂಟಿಂಗ್ ವೇಳೆ ಅಪಘಾತ: ಕಾಲಿವುಡ್ ನಟ ವಿಜಯ್ ಆ್ಯಂಟೊನಿ ಗಂಭೀರ
ಸೂರ್ಯ ತಮ್ಮ ಮುಂದಿನ ಸಿನಿಮಾ ʼಸೂರ್ಯ 42ʼಗಾಗಿ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ವೆಂಕಾಟೆರ್, ಅರತಾರ್, ಮಂದಾಂಕರ್, ಮುಕಾತಾರ್, ಪೆರುಮಾನಾಥರ್ ಸೇರಿ ಅನೇಕರ ಜತೆಯಲ್ಲಿ ನಟಿಸಲಿದ್ದಾರೆ. ದಿಶಾ ಪಟಾನಿ ಅವರು ಸೂರ್ಯ ಅವರಿಗೆ ಜತೆಯಾಗಿ ನಟಿಸಲಿದ್ದಾರೆ. ಸಿರುತೈ ಶಿವ ನಿರ್ದೇಶನ ಮತ್ತು ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿರಲಿದ್ದು, ವಿಶ್ವದಾದ್ಯಂತ ಒಟ್ಟು 10 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅದಷ್ಟೇ ಅಲ್ಲದೆ ಸೂರ್ಯ ಅವರು ತಮ್ಮ ಸಿನಿಮಾವಾದ ಸೂರರೈ ಪೊಟ್ರುವಿನ ಹಿಂದಿ ರಿಮೇಕ್ಗೆ ಬಂಡವಾಳ ಹಾಕಲಿದ್ದಾರೆ.
ಒಟಿಟಿ
Pathaan Film: ಒಟಿಟಿಯಲ್ಲೂ ತೆರೆಕಾಣಲು ಸಜ್ಜಾಗಿದೆ ಪಠಾಣ್; ಅಮೇಜಾನ್ ಪ್ರೈಮ್ನಲ್ಲಿ ಈ ದಿನಾಂಕದಂದು ಬಿಡುಗಡೆ
ಪಠಾಣ್ ದೇಶಭಕ್ತಿ ಸಾರುವ ಸಿನಿಮಾ ಎಂದು ಶಾರುಖ್ಖಾನ್ ಹೇಳಿದ್ದರು. ಇದರಲ್ಲಿ ಶಾರುಖ್ ಖಾನ್ RAW (Research and Analysis Wing)ನ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಭಯೋತ್ಪಾದಕರನ್ನು ಹತ್ತಿಕ್ಕುವ ಕಥೆ ಇದರಲ್ಲಿದ್ದು, ಜಾನ್ ಅಬ್ರಾಹಂ ಅವರು ಭಯೋತ್ಪಾದಕನ ಮುಖಂಡನ ಪಾತ್ರ ವಹಿಸಿದ್ದಾರೆ.
ಬೇಷರಮ್ ರಂಗ್ (ನಾಚಿಕೆ ಇಲ್ಲದ ಬಣ್ಣ) ಎಂಬ ಹಾಡಿನಿಂದಾಗಿ ಹಿಂದು ಸಂಘಟನೆಗಳಿಂದ ತೀವ್ರ ವಿರೋಧಕ್ಕೆ ಒಳಗಾಗಿ, ಆ ವಿವಾದದ ಮಧ್ಯೆಯೇ ವಿಶ್ವದಾದ್ಯಂತ ಬಿಡುಗಡೆಯಾಗಿದ್ದ ಪಠಾಣ್ (Pathaan Film)ಈಗಾಗಲೇ ಬಾಹುಬಲಿ ಸಿನಿಮಾದ ಕಲೆಕ್ಷನ್ನ್ನೂ ಹಿಂದಿಕ್ಕಿ ಮುಂದೆ ಓಡಿದೆ. ಅತ್ಯಂತ ಹೆಚ್ಚಿನ ಗಳಿಕೆ ಕಂಡ ಹಿಂದಿ ಚಿತ್ರವಾಗಿ ಹೊರಹೊಮ್ಮಿದೆ. ಇನ್ನೂ ಕೆಲವು ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣುತ್ತಿರುವ ಮಧ್ಯೆಯೇ, ಒಟಿಟಿಗೂ ಕಾಲಿಡುತ್ತಿದೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಾಹಂ ಅಭಿನಯದ ಈ ಬ್ಲಾಕ್ಬಸ್ಟರ್ ಸಿನಿಮಾ ಮಾರ್ಚ್ 22ರಿಂದ ಅಮೇಜಾನ್ ಪ್ರೈಮ್ನಲ್ಲಿ ಪ್ರದರ್ಶನ ಕಾಣಲಿದೆ. ಅಮೇಜಾನ್ ಪ್ರೈಮ್ನಲ್ಲಿ ನಾಳೆ (ಮಾ.22)ಯಿಂದ ನೀವು ಪಠಾಣ್ ಹಿಂದಿ, ತಮಿಳು ಮತ್ತು ತೆಲುಗು ಸಿನಿಮಾಗಳನ್ನು ನೋಡಬಹುದು.
ಬೇಷರಮ್ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ತುಂಡುಡುಗೆ ಧರಿಸಿ ನೃತ್ಯ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪಠಾಣ್ ಬಿಡುಗಡೆಗೇ ಅವಕಾಶ ಕೊಡುವುದಿಲ್ಲ ಎಂದು ಹಲವು ಹಿಂದು ಸಂಘಟನೆಗಳು ಕಿಡಿಕಾರಿದ್ದವು. ಅದೆಲ್ಲದರ ಮಧ್ಯೆ ಜ.25ರಂದು ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಇದೀಗ 50 ದಿನಗಳನ್ನು ಪೂರೈಸಿದೆ. ಇಲ್ಲಿಯವರೆಗೆ ಪಠಾಣ್ ಕಲೆಕ್ಷನ್ 1 ಸಾವಿರ ಕೋಟಿ ರೂಪಾಯಿ ಮೀರಿದೆ ಎಂದು ಹೇಳಲಾಗಿದೆ. ಯಶ್ ಚೋಪ್ರಾ ಅವರ ಯಶ್ ರಾಜ್ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್ ಪ್ರಕಾರ ಪಠಾಣ್ ಗಳಿಕೆ 1048.30 ಕೋಟಿ ರೂಪಾಯಿ ಆಗಿದ್ದು, ಅದರಲ್ಲಿ ಭಾರತದಲ್ಲಿ ಕಲೆಕ್ಷನ್ 656.20 ಕೋಟಿ ರೂ.ಆಗಿದೆ. ಹಾಗೇ, ವಿದೇಶಗಳಲ್ಲಿ ಗಳಿಕೆ 392.10 ಕೋಟಿ ರೂ.
ಪಠಾಣ್ ದೇಶಭಕ್ತಿ ಸಾರುವ ಸಿನಿಮಾ ಎಂದು ಶಾರುಖ್ಖಾನ್ ಹೇಳಿದ್ದರು. ಇದರಲ್ಲಿ ಶಾರುಖ್ ಖಾನ್ RAW (Research and Analysis Wing)ನ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಭಯೋತ್ಪಾದಕರನ್ನು ಹತ್ತಿಕ್ಕುವ ಕಥೆ ಇದರಲ್ಲಿದ್ದು, ಜಾನ್ ಅಬ್ರಾಹಂ ಅವರು ಭಯೋತ್ಪಾದಕನ ಮುಖಂಡನ ಪಾತ್ರ ವಹಿಸಿದ್ದಾರೆ. ಪಠಾಣ್ ಬಿಡುಗಡೆಯಾಗುತ್ತಿದ್ದಂತೆ ಅತ್ಯಂತ ಯಶಸ್ವಿಯಾಗಿ ಓಡುತ್ತಿದೆ. ಈ ಬಗ್ಗೆ ಇತ್ತೀಚೆಗಷ್ಟೇ ಶಾರುಖ್ ಖಾನ್ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು. ಅದರಲ್ಲು ಶಾರುಖ್ ಖಾನ್ಗಂತೂ ಅದೆಷ್ಟೋ ವರ್ಷಗಳ ನಂತರದ ಯಶಸ್ಸು ಇದು. ಟ್ವೀಟ್ ಮಾಡಿದ್ದ ಅವರು, ಕಠಿಣ ಪರಿಶ್ರಮ, ನಿಷ್ಠೆ ಮತ್ತು ನಂಬಿಕೆಗೆ ಸಿಕ್ಕ ಜಯ ಎಂದಿದ್ದರು.
ಬಾಲಿವುಡ್
Rani Mukerji Birthday: ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರ ನೋಡಲೇಬೇಕಾದ ಸಿನಿಮಾಗಳಿವು
ರಾಣಿ ಮುಖರ್ಜಿ ಜನ್ಮದಿನದ (Rani Mukerji Birthday) ಪ್ರಯುಕ್ತ ಅವರ ಕೆಲವು ಹಿಟ್ ಸಿನಿಮಾಗಳ ವಿವರ ಇಲ್ಲಿದೆ.
ಮುಂಬೈ: ಬಾಲಿವುಡ್ ನಟಿ ರಾಣಿ ಮುಖರ್ಜಿ ಎಲ್ಲರ ಅಚ್ಚುಮೆಚ್ಚಿನ ನಟಿ ಎಂದೇ ಹೇಳಬಹುದು. 1996ರಲ್ಲಿ ರಾಜಾ ಕೀ ಆಯೇಗಿ ಬರಾತ್ ಸಿನಿಮಾ ಮೂಲಕ ಸಿನಿ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ನಟಿ ಅದರ ನಂತರ ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅಂದ ಹಾಗೆ ಇಂದು ರಾಣಿ ಮುಖರ್ಜಿ ಅವರ ಜನ್ಮದಿನ. ಜನ್ಮದಿನ (Rani Mukerji Birthday) ಆಚರಿಸಿಕೊಳ್ಳುತ್ತಿರುವ ನಟಿ ನಟಿಸಿರುವ ಕೆಲವು ಅದ್ಭುತ ಸಿನಿಮಾಗಳ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: Actress Rani Mukerji: ಕೆಲಸದ ಜತೆ ಕುಟುಂಬದ ನಿರ್ವಹಣೆ ಬಲುಕಷ್ಟ ಎಂದ ನಟಿ ರಾಣಿ ಮುಖರ್ಜಿ
ಮಿಸೆಸ್ ಚಟರ್ಜಿ Vs ನಾರ್ವೆ
ರಾಣಿ ಮುಖರ್ಜಿ ನಟನೆಯ ಮಿಸಸ್ ಚಟರ್ಜಿ Vs ನಾರ್ವೆ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ತಾಯಿಯೊಬ್ಬಳು ಅಧಿಕಾರಿಗಳ ವಶವಾದ ತನ್ನ ಮಗುವನ್ನು ಅವರಿಂದ ವಾಪಸು ಪಡೆಯಲು ಹೋರಾಡುವ ಕಥೆಯಿರುವ ಸಿನಿಮಾ ಇದಾಗಿದೆ. ಇದು ಒಂದು ನೈಜ ಘಟನೆ ಆಧಾರಿತ ಚಿತ್ರ. ಈ ಚಿತ್ರವನ್ನು ಅಶಿಮಾ ಚಿಬ್ಬರ್ ನಿರ್ದೇಶಿಸಿದ್ದಾರೆ. ಸಿನಿಮಾ ಮಾರ್ಚ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ಹಿಚ್ಕಿ
ಇದೊಂದು ಹೃದಯಸ್ಪರ್ಶಿ ಸಿನಿಮಾ. ಇದರಲ್ಲಿ ನಟಿ ನೈನಾ ಮಾಥುರ್ ಎಂಬ ಟುರೆಟ್ ಸಿಂಡ್ರೋಮ್ ಹೊಂದಿರುವ ಮಹಿಳೆಯಾಗಿದ್ದು, ಶಿಕ್ಷಕಿಯಾಗುವ ಕನಸು ಕಟ್ಟಿರುತ್ತಾರೆ. ಹಲವಾರು ಪ್ರಯತ್ನಗಳ ನಂತರ ಶಿಕ್ಷಕಿಯಾಗಿ ನೇಮಕವಾಗುವ ನೈನಾ ಅಲ್ಲಿ ಮಕ್ಕಳಿಂದ ಹೀಯಾಳಿಕೆಗೆ ಒಳಗಾಗುವುದು, ನಂತರ ಮಕ್ಕಳ ಪ್ರೀತಿ ಗಳಿಸುವ ವಿಶೇಷ ಕಥಾಹಂದರ ಇದರಲ್ಲಿದೆ. ಈ ಸಿನಿಮಾವನ್ನು ಸಿದ್ಧಾರ್ಥ್ ಪಿ. ಮಲ್ಹೋತ್ರಾ ಅವರು ನಿರ್ದೇಶಿಸಿದ್ದಾರೆ.
ಮರ್ದಾನಿ:
ರಾಣಿ ಮುಖರ್ಜಿ ಪೊಲೀಸ್ ಪಾತ್ರದಲ್ಲಿ ನಟಿಸಿರುವ ಸಿನಿಮಾ ಮರ್ದಾನಿ. ಅಪಹರಣಕ್ಕೊಳಗಾದ ಹುಡುಗಿಯ ಪ್ರಕರಣವನ್ನು ಬಗೆಹರಿಸಲು ಹೊರಡುವ ನಟಿಗೆ ಮಾನವ ಕಳ್ಳಸಾಗಣೆ ದಂಧೆಯನ್ನು ತನಿಖೆ ಮಾಡುವಂತಾಗುತ್ತದೆ. ಈ ಚಿತ್ರವನ್ನು ಪ್ರದೀಪ್ ಸರ್ಕಾರ್ ನಿರ್ದೇಶಿಸಿದ್ದಾರೆ. ಇದರಲ್ಲಿ ಜಿಶು ಸೆಂಗುಪ್ತ, ವಿಶಾಲ್ ಜೇತ್ವಾ ಮತ್ತು ತಾಹಿರ್ ರಾಜ್ ಭಾಸಿನ್ ಕೂಡ ನಟಿಸಿದ್ದಾರೆ. ಈ ಚಿತ್ರವು ಹಿಟ್ ಆಗಿದ್ದು 2019ರಲ್ಲಿ ಅದರ ಮುಂದುವರಿದ ಭಾಗವನ್ನು ಬಿಡುಗಡೆ ಮಾಡಲಾಯಿತು.
ನೋ ಒನ್ ಕಿಲ್ಲಡ್ ಜೆಸ್ಸಿಕಾ
ಜೆಸ್ಸಿಕಾ ಲಾಲ್ ಕೊಲೆ ಪ್ರಕರಣವನ್ನು ಆಧರಿಸಿದ ಕಥೆ ಇದಾಗಿದೆ. ಇದರಲ್ಲಿ ಕಥೆ ಜೆಸ್ಸಿಕಾಳ ಸಹೋದರಿ ಸಬ್ರಿನಾ ಸುತ್ತ ಸುತ್ತುತ್ತದೆ. ರಾಣಿ ಮುಖರ್ಜಿ ಮೀರಾ ಗೈಟಿ ಎಂಬ ವರದಿಗಾರ್ತಿಯಾಗಿ, ಸಬ್ರಿನಾ ಲಾಲ್ಗೆ ನ್ಯಾಯ ಕೊಡಿಸುವುದಕ್ಕಾಗಿ ಹೋರಾಡುತ್ತಾರೆ. ಈ ಸಿನಿಮಾವನ್ನು ರಾಜ್ಕುಮಾರ್ ಗುಪ್ತಾ ಅವರು ನಿರ್ದೇಶಿಸಿದ್ದಾರೆ ಮತ್ತು ವಿದ್ಯಾ ಬಾಲನ್ ನಾಯಕಿಯಾಗಿ ನಟಿಸಿದ್ದಾರೆ.
ಬ್ಲ್ಯಾಕ್
ಈ ಸಿನಿಮಾದಲ್ಲಿ ರಾಣಿ ಮುಖರ್ಜಿ ದೃಷ್ಟಿ, ಮಾತು ಮತ್ತು ಶ್ರವಣ ದೋಷ ಹೊಂದಿರುವ ಹುಡುಗಿ ಪಾತ್ರದಲ್ಲಿ ನಟಿಸಿದ್ದಾರೆ. ಬ್ಲಾಕ್ ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ ಮತ್ತು ನಿರ್ಮಿಸಿದ್ದಾರೆ. ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಹೆಚ್ಚು ಮೆಚ್ಚುಗೆ ಗಳಿಸಿತು ಮತ್ತು ಹಲವಾರು ಪ್ರಶಂಸೆಗಳನ್ನು ಗಳಿಸಿತು. ಸಿನಿಮಾದಲ್ಲಿ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ ನಟಿಸಿದ್ದಾರೆ.
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ23 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ9 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ7 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ9 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ