Site icon Vistara News

Kannada New Movie: ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ

Kannada New Movie

ಬೆಂಗಳೂರು: ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ (Kannada New Movie) ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಜನವರಿ 29ರಂದು ನೆರವೇರಿದೆ. ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದಾರೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜತೆಗೆ ಭರತ್ ಫಿಲಂಸ್ ನಡಿ ತಾವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ನಿರ್ದೇಶಕ ಭರತ್ ವಿಷ್ಣುಕಾಂತ್ ಮಾತನಾಡಿ ʻʻಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನನ್ನ ಗುರು ಖಲೀಮ್ ಮೆಕಾನಿಕ್ ಹಾಗೂ ನ್ಯಾಶನಲ್ ಚಾಂಪಿಯನ್. ಅವರ ಗ್ಯಾರೇಜ್‌ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್ ಟಚ್ ಕೊಟ್ಟು ‘ರೇಸರ್’ ಕಥೆ ಹೆಣೆಯಲಾಗಿದೆ. ಸಿನಿಮಾ ಬೈಕ್ ರೇಸರ್ ಬಗ್ಗೆ ಆಗಿರುವುದರಿಂದ ರಿಯಲ್ ಬೈಕ್ ರೇಸರನ್ನೇ ಹಾಕಿಕೊಂಡು ಸಿನಿಮಾ ಮಾಡುತ್ತಿದ್ದೇನೆ. ಬುದ್ದ್ ಇಂಟರ್ ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲು ಚಿತ್ರೀಕರಣ ಮಾಡುತ್ತಿದ್ದೇವೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭಜರಂಗಿ ಲೋಕಿ, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಬಾಲ ರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆʼʼ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Kannada New Movie: ಮಾಲಾಶ್ರೀ-ಭೂಮಿ ಶೆಟ್ಟಿ ಅಭಿನಯದ ಕಾದಂಬರಿ ಆಧಾರಿತ ‘ಕೆಂಡದ ಸೆರಗು’ ಸಿನಿಮಾ ಟೀಸರ್ ರಿಲೀಸ್

ನಾಯಕ ನಟ ಸಂದೇಶ್ ಪ್ರಸನ್ನ ಮಾತನಾಡಿ ʻʻನಾನು ಪ್ರೊಫೇಶನಲ್ ಸೂಪರ್ ಬೈಕ್ ರೇಸರ್. ನಿರ್ದೇಶಕರು ಬೈಕ್ ರೇಸರ್‌ಗಳು ಇಂಟರ್ ನ್ಯಾಶನಲ್ ಚಾಂಪಿಯನ್ ಶಿಪ್‌ಗೆ ಹೋಗಲು ಯಾವೆಲ್ಲ ರೀತಿ ಕಷ್ಟ ಪಡುತ್ತಾರೆ ಎನ್ನುವುದನ್ನು ಕೇಳಿ ಕಥೆಯಲ್ಲಿ ಇಂಪ್ಲಿಮೆಂಟ್ ಮಾಡಲು ನನ್ನ ಬಳಿ ಬಂದಿದ್ದರು. ನಂತರ ನೀವೇ ಹೀರೊ ಆಗಿ ಮಾಡಿ ಅಂದರು. ಒಬ್ಬ ರೇಸರ್ ಕಥೆ ಚಿತ್ರದಲ್ಲಿದೆ. ಕಥೆ ತುಂಬಾ ಸ್ಪೂರ್ತಿದಾಯಕವಾಗಿದೆ. ಎಲ್ಲರನ್ನು ಹುರಿದುಂಬಿಸುತ್ತದೆʼʼ ಎಂದರು.

ಇದನ್ನೂ ಓದಿ: Kannada New Movie: ಸಿಂಪಲ್ ಸುನಿ-ವಿನಯ್ ರಾಜ್‌ಕುಮಾರ್‌ ಕಾಂಬಿನೇಶನ್‌ ಚಿತ್ರಕ್ಕೆ ಧಾರವಾಡದ ಸ್ವತಿಷ್ಠ ಕೃಷ್ಣನ್ ನಾಯಕಿ

Exit mobile version