Site icon Vistara News

Kannada New Movie | ಡಿಸೆಂಬರ್‌ನಲ್ಲಿ ತೆರೆಗೆ ಬರಲಿದೆ ‘ವಾಸಂತಿ ನಲಿದಾಗ’

Kannada New Movie

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ವಾಸಂತಿ ನಲಿದಾಗ’ (Kannada New Movie) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟೈಟಲ್‌ ಮೂಲಕವೇ ಸಖತ್‌ ಸುದ್ದಿಯಲ್ಲಿರುವ ಚಿತ್ರ ಈ ಹಿಂದೆ ‘ಕೇಳ್ರಪ್ಪೋ ಕೇಳಿ’ ವೀಡಿಯೋ ಸಾಂಗ್‌ ಬಿಡುಗಡೆ ಮಾಡಿ ಸೌಂಡ್‌ ಮಾಡಿತ್ತು. ಇದೀಗ ನಾಗೇಂದ್ರ ಪ್ರಸಾದ್‌ ಬರೆದ ‘ಕಾಲೇಜ್‌ಗೆ ಕಾಲು ಇಟ್ಟರೆ ಕನಸುಗಳು ಜೋರು’ ಎಂಬ ಮತ್ತೊಂದು ಹಾಡು ಬಿಡುಗಡೆಗೊಂಡಿದೆ. ಈ ಚಿತ್ರ ಅಕ್ಟೋಬರ್‌ 14ರಂದೇ ಬಿಡುಗಡೆಯಾಗಬೇಕಿತ್ತು. ಇದೀಗ ಸಿನಿಮಾ ತಂಡ ಬಿಡುಗಡೆ ದಿನಾಂಕ ಮುಂದೂಡಿದೆ.

ʻಪುಟಾಣಿ ಸಫಾರಿʼ, ʻವರ್ಣಮಯʼ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ರವೀಂದ್ರ ವೆಂಶಿ ಚಿತ್ರದ ಕುರಿತು ಮಾತನಾಡಿ ʻʻಅಕ್ಟೋಬರ್ 14ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಪ್ರಚಾರ ಮಾಡಿ ಮುಗಿಸಿದ್ದೆವು. ಆದ್ರೆ ಚಿತ್ರಮಂದಿರದ ಸಮಸ್ಯೆಯಿಂದ ಅಕ್ಟೋಬರ್ 14ರಂದು ಬಿಡುಗಡೆ ಮಾಡಲಾಗಲಿಲ್ಲ. ಇದು ಸ್ಟಾರ್‌ ಸಿನಿಮಾ ಅಲ್ಲ ಹೊಸಬರ ಸಿನಿಮಾ. ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್‌ ಮಾಡಿಕೊಂಡಿದ್ದೇವೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್‌ ಮಾಡಲಿದ್ದೇವೆʼʼ ಎಂದು ತಿಳಿಸಿದರು.

ಇದನ್ನೂ ಓದಿ | Kannada New Movie | ಡ್ಯಾನ್ಸ್ ಮಾಸ್ಟರ್ ಭೂಷಣ್ ಈಗ ಸ್ಯಾಂಡಲ್ ವುಡ್ ಹೀರೋ: ಸಿನಿಮಾ 23ಕ್ಕೆ ತೆರೆಗೆ

ಈ ಚಿತ್ರದಲ್ಲಿ ರೋಹಿತ್‌ ಶ್ರೀಧರ್‌, ಭಾವನ ಶ್ರೀನಿವಾಸ್‌, ಜೀವಿತ ವಸಿಷ್ಠ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಕೆ.ಎನ್ ಶ್ರೀಧರ್‌ ಜೇನುಗೂಡು ಬ್ಯಾನರ್‌ ಅಡಿ ಚಿತ್ರ ನಿರ್ಮಾಣ ಮಾಡಿದ್ದಾರೆ.

ಶ್ರೀ ಗುರು ಸಂಗೀತ ನಿರ್ದೇಶನ, ಸಿ.ರವಿಚಂದ್ರನ್‌ ಸಂಕಲನ, ಪ್ರಮೋದ್‌ ಭಾರತೀಯ ಛಾಯಾಗ್ರಹಣ ಚಿತ್ರಕ್ಕಿದೆ. ಸಿನಿಮಾದ ಹಾಡುಗಳಿಗೆ ಯೋಗರಾಜ್‌ ಭಟ್‌, ನಾಗೇಂದ್ರ ಪ್ರಸಾದ್‌, ಗೌಸ್ ಪೀರ್ ಸಾಹಿತ್ಯವಿದೆ. ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಒಳಗೊಂಡ ಅನುಭವಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Kannada New Movie | ನಟ ಶರಣ್‌ ಹಾಡಿರುವ ʻಧರಣಿ ಮಂಡಲ ಮಧ್ಯದೊಳಗೆʼ ಚಿತ್ರದ ಸಾಂಗ್ ರಿಲೀಸ್‌!

Exit mobile version