Avatar: The Way of Water | ಅವತಾರ್‌-2 ಸಿನಿಮಾ ಬಗ್ಗೆ ಕನ್ನಡಿಗರ ಆಕ್ರೋಶ: ಶುರುವಾಯ್ತು ಬಾಯ್ಕಾಟ್‌ ಅಭಿಯಾನ! - Vistara News

ಸಿನಿಮಾ

Avatar: The Way of Water | ಅವತಾರ್‌-2 ಸಿನಿಮಾ ಬಗ್ಗೆ ಕನ್ನಡಿಗರ ಆಕ್ರೋಶ: ಶುರುವಾಯ್ತು ಬಾಯ್ಕಾಟ್‌ ಅಭಿಯಾನ!

ಕನ್ನಡಿಗರು ಅವತಾರ್‌ ಚಾಪ್ಟರ್‌-2 (Avatar: The Way of Water) ಬಗ್ಗೆ ಸೋಷಿಯಲ್‌ ಮೀಡಿಯಾ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

Avatar The Way of Water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 13 ವರ್ಷಗಳ ಬಳಿಕ ಅವತಾ‌ರ್‌- 2 ಸಿನಿಮಾ (Avatar: The Way of Water) ತೆರೆ ಕಾಣುತ್ತಿದೆ. ‘ಅವತಾರ್‌’ ಟೈಟಲ್ ಮೂಲಕವೇ ಇಡೀ ಜಗತ್ತಿನ ಗಮನ ಸೆಳೆದಿತ್ತು ಈ ಸಿನಿಮಾ. ಅದರಲ್ಲೂ ಕೋಟಿ ಕೋಟಿ ಭಾರತೀಯರಿಗೆ ‘ಅವತಾರ್‌’ ಎಂಬ ಹೆಸರು ಸಾಕಷ್ಟು ಹತ್ತಿರವಾಗಿತ್ತು. ಅವತಾರ್‌-2 ಟ್ರೈಲರ್‌ ಬಿಡುಗಡೆಗೊಂಡಿದೆ. ಪ್ರೇಕ್ಷಕರು ಟ್ರೈಲರ್‌ ನೋಡಿ ಥ್ರಿಲ್‌ ಆಗಿದ್ದಾರೆ. ಕನ್ನಡಿಗರು ಮಾತ್ರ ಅವತಾರ್‌ ಚಾಪ್ಟರ್‌-2 ಬಗ್ಗೆ ಸೋಷಿಯಲ್‌ ಮೀಡಿಯಾ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಡಿಸೆಂಬರ್‌ 16ರಂದು ಅವತಾರ್‌-2 ತೆರೆ ಕಾಣಲಿದೆ.

ಅವತಾರ್‌ 2 ಟ್ರೈಲರ್‌ ಬಿಡುಗಡೆಗೊಂಡಿದ್ದು, ಜೇಮ್ಸ್‌ ಕ್ಯಾಮೆರಾನ್‌ ಕಲ್ಪನೆಯನ್ನು ನೋಡುಗರು ಮೆಚ್ಚಿಕೊಂಡಿದ್ದಾರೆ. ಟ್ರೈಲರ್‌ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಬಿಡುಗಡೆಗೊಂಡಿದ್ದು, ಕನ್ನಡದಲ್ಲಿ ಮಾತ್ರ ರಿಲೀಸ್‌ ಆಗಿಲ್ಲ ಎಂದು ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ʻʻಕನ್ನಡಿಗರು ಅಂದರೆ ಅಸಡ್ಡೆ ಯಾಕೆ?ʼʼಎಂದು ಟ್ವೀಟ್‌ ಮೂಲಕ ಅವತಾರ್‌-2 ಸಿನಿಮಾ ಬಗ್ಗೆ ಕಿಡಿ ಕಾರಿದ್ದಾರೆ.

ಇದನ್ನೂ ಓದಿ | Avatar 2 | ಗಲ್ಲಾಪೆಟ್ಟಿಗೆ ನಡುಗಿಸಲು ಬರಲಿದ್ದಾನೆ ಹಾಲಿವುಡ್ ಬಾಕ್ಸ್‌ಆಫೀಸ್ ಡಾನ್ ‘ಅವತಾರ್‌’

ಈಗಾಗಲೇ ಕನ್ನಡ ಸಿನಿಮಾಗಳಾದ ಕೆಜಿಎಫ್‌, 777 ಚಾರ್ಲಿ, ಕಾಂತಾರ, ವಿಕ್ರಾಂತ್‌ ರೋಣ, ವಿಶ್ವ ಮಟ್ಟದಲ್ಲಿ ಸದ್ದು ಮಾಡಿದೆ. ಹೀಗಿದ್ದರೂ ಅವತಾರ-2 ಟ್ರೈಲರ್‌ ರಿಲೀಸ್‌ ಮಾಡುವಾಗ ಕನ್ನಡ ನೆನಪಾಗಲಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಕನ್ನಡಿಗರು ಅವತಾರ್‌-2 ಬಗ್ಗೆ ಕಿಡಿಕಾರಿದ್ದು ʻʻಒಂದು ವೇಳೆ ಕನ್ನಡದಲ್ಲಿ ಅವತಾರ್‌-2 ರಿಲೀಸ್‌ ಆಗಿಲ್ಲ ಎಂದರೆ ಸಿನಿಮಾ ನೋಡುವುದಿಲ್ಲ. ಕನ್ನಡದಲ್ಲಿ ಡಬ್‌ ಮಾಡಬೇಕೆಂದು ಮನವಿ ಮಾಡುತ್ತಿದ್ದೇವೆ. ನೋ ಕನ್ನಡ, ನೋ ಬ್ಯುಸಿನೆಸ್‌ ಎಂಬ ಪಾಠವನ್ನು ಕಲಿಸಬೇಕಾದಿತುʼʼಎಂದು ಟ್ವೀಟ್‌ ಮೂಲಕ ಬರೆದುಕೊಂಡಿದ್ದಾರೆ.

Avatar: The Way of Water

ನಮ್ಮ ನೆಲದ ಹೆಸರಿನ ಸಿನಿಮಾ ಹಾಲಿವುಡ್ ಅಂಗಳದಲ್ಲಿ ಅಬ್ಬರಿಸುತ್ತಿದೆ ಎಂಬುದೇ ಖುಷಿಯ ಸಮಾಚಾರ. ಹೀಗಿರುವಾಗ ‘ಅವತಾರ್‌-1’ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಆಗಿನ ಕಾಲಕ್ಕೆ ₹20 ಸಾವಿರ ಕೋಟಿಗೂ ಹೆಚ್ಚು ಹಣ ಬಾಚಿತ್ತು. ಈ ಪೈಕಿ ಅವತಾರ್-3, 2024ರ ಡಿಸೆಂಬರ್ 20ರಂದು ರಿಲೀಸ್‌ ಆದರೆ, 2026ರ ಡಿಸೆಂಬರ್ 18ಕ್ಕೆ ಅವತಾರ್-4 ಹಾಗೂ 2028ರ ಡಿಸೆಂಬರ್ 22ರಂದು ಅವತಾರ್ ಪಾರ್ಟ್ 5 ರಿಲೀಸ್‌ ಆಗಲಿದೆ.

ಇದನ್ನೂ ಓದಿ | Avatar Box Office | ಬಾಕ್ಸ್ ಆಫೀಸ್ ಅಖಾಡದಲ್ಲಿ ಮತ್ತೆ ಗುಡುಗಿದ ಅವತಾರ್‌-1

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

Kannada Cinema In OTT: ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು.

VISTARANEWS.COM


on

Kannada Cinema In OTT bad manners 02 Kannada Movie
Koo

ಬೆಂಗಳೂರು: ಇತ್ತೀಚಿಗೆ ‘ಯುವ’, ‘ಬ್ಲಿಂಕ್’, ‘ಅವತಾರ ಪುರುಷ’-2, ‘ಶಾಖಾಹಾರಿ’, ‘ಜೂನಿ’ ರೀತಿಯ ಸಿನಿಮಾಗಳು ವೀಕ್ಷಕರನ್ನು (Kannada Cinema In OTT) ರಂಜಿಸಿವೆ. ಅದರಲ್ಲೂ ‘ಬ್ಲಿಂಕ್’ ಹಾಗೂ ‘ಶಾಖಾಹಾರಿ’ ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿವೆ. ದುನಿಯಾ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ, ಆಶಿಕಾ ರಂಗನಾಥ್ ನಟನೆಯ ‘O2’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿವೆ.

ʼಬ್ಯಾಡ್‌ ಮ್ಯಾನರ್ಸ್‌ʼ

ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರಕ್ಕೆ ದುನಿಯಾ ಸೂರಿ ನಿರ್ದೇಶನವಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಅಭಿಷೇಕ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು ಡಿಂಪಲ್‌ ಕ್ವೀನ್‌ ರಚಿತಾ ರಾಮ್‌. ಕಳೆದ ವರ್ಷ ನವೆಂಬರ್ 24ಕ್ಕೆ ತೆರೆಗಪ್ಪಳಿಸಿದ್ದ ‘ಬ್ಯಾಡ್‌ ಮ್ಯಾನರ್ಸ್’ ಸಿನಿಮಾ ಇದೀಗ ಸನ್‌ನೆಕ್ಸ್ಟ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಬ್ಯಾಡ್ ಮ್ಯಾನರ್ಸ್‌ ಹಾಡಿಗೆ ಧನು ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದರು. ಸಿನಿಮಾಟೋಗ್ರಾಫರ್ ಶೇಖರ್ ಅದನ್ನು ಅಷ್ಟೇ ಅದ್ಭುತವಾಗಿ ಸೆರೆ ಹಿಡಿದಿದ್ದರು.ಯುಗಾದಿ ಹಬ್ಬಕ್ಕೆ ಬ್ಯಾಡ್‌ ಮ್ಯಾನರ್ಸ್ ಟೈಟಲ್‌ ಟ್ರ್ಯಾಕ್‌ ಸಿನಿರಸಿಕರಿಗೆ ಸಖತ್‌ ಕಿಕ್‌ ನೀಡಿತ್ತು.

ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಅದ್ಭುತ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿತ್ತು. ಗೀತೆಯಲ್ಲಿ ಅಭಿಷೇಕ್‌ ಅಂಬರೀಶ್‌ ನಿರ್ವಹಿಸಿರುವ ಪಾತ್ರದ ಚಿತ್ರಣ ಇತ್ತು. ಪ್ರತಿ ಸಾಲಿನಲ್ಲೂ ಅಭಿ ಪಾತ್ರದ ಸಾಫ್ಟ್‌ ಮತ್ತು ಹಾರ್ಡ್‌ ಮ್ಯಾನರಿಸಂನ ಝಲಕ್ ಇತ್ತು. ನಿರ್ದೇಶಕ ದುನಿಯಾ ಸೂರಿ ಅವರ ಕಲ್ಪನೆಯ ಈ ಗೀತೆಯ ಮೇಕಿಂಗ್ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಹವಾ ಕ್ರಿಯೇಟ್‌ ಮಾಡಿತ್ತು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

‘O2’ ಸಿನಿಮಾ

ಆಶಿಕಾ ರಂಗನಾಥ್ ನಟನೆಯ ‘O2’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ನೋಡಿದವರು ಮೆಚ್ಚಿಕೊಂಡಿದ್ದರು. ನೀವು ನೋಡಿ ಎಂದು ಸಲಹೆ ನೀಡಿದ್ದರು. ಪುನೀತ್ ರಾಜ್‌ಕುಮಾರ್ ಕಥೆ ಕೇಳಿ ಒಪ್ಪಿ ತಮ್ಮ ಬ್ಯಾನರ್‌ನಲ್ಲಿ ಆರಂಭಿಸಿದ್ದ ಕೊನೆಯ ಸಿನಿಮಾ ‘O2’. ಆಶಿಕಾ ರಂಗನಾಥ್‌ ಜೊತೆ ಪ್ರವೀಣ್‌ ತೇಜ, ರಾಘವ್‌ ನಾಯಕ್‌, ಸಿರಿ ರವಿಕುಮಾರ್, ಗೋಪಾಲ್‌ ದೇಶಪಾಂಡೆ, ಪ್ರಕಾಶ್‌ ಬೆಳವಾಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.ಇನ್ನು ಆಶಿಕಾ ರಂಗನಾಥ್ ಮುಖ್ಯಭೂಮಿಕೆಯಲ್ಲಿರುವ ಥ್ರಿಲ್ಲರ್ ಸಿನಿಮಾ ‘O2’ ಅಮೇಜಾನ್ ಪ್ರೈಂನಲ್ಲಿ ಸಿಗುತ್ತಿದೆ. ಸೂರಿ ನಿರ್ದೇಶನದ ‘ಬ್ಯಾಡ್‌ ಮ್ಯಾನರ್ಸ್’ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡಿರಲಿಲ್ಲ. ’02’ ಒಂದು ಮೆಡಿಕಲ್‌ ಥ್ರಿಲ್ಲರ್‌ ಸಿನಿಮಾ.

Continue Reading

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading

ಕಿರುತೆರೆ

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Neha Gowda: 2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda is pregnant the actress shared the good news
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ನೇಹಾ ಗೌಡ – ಚಂದನ್ ಗೌಡ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನೇಹಾ ಗೌಡ – ಚಂದನ್ ಗೌಡ ದಂಪತಿ ಪೋಷಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ ನಿವಾಸಕ್ಕೆ ಜೆ.ಪಿ.ನಡ್ಡಾ, ರಾಧಾ ಮೋಹನ್ ದಾಸ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ʻʻನಮ್ಮ ಕುಟುಂಬಕ್ಕೆ ಹೊಸ ಜೀವನವನ್ನು ಸ್ವಾಗತಿಸಲು ತಯಾರಾಗಿದ್ದೇವೆ. ನಮ್ಮ ಹೃದಯವು ಸಂತೋಷ ಮತ್ತು ನಿರೀಕ್ಷೆಯಿಂದ ತುಂಬಿ ತುಳುಕುತ್ತಿದೆ. ನಿಮ್ಮಲ್ಲಿ ಹಲವರು ಊಹಿಸಿದ್ದೀರಿ. ಹೌದು, ನೀವು ಹೇಳಿದ್ದು ಸರಿ! ನಮ್ಮ ಕುಟುಂಬ ಎರಡರಿಂದ ಮೂರಕ್ಕೆ ಬೆಳೆಯುತ್ತಿದೆ. ನಿದ್ದೆಯಿಲ್ಲದ ರಾತ್ರಿಗಳು, ಅಂತ್ಯವಿಲ್ಲದ ನಗು ಮತ್ತು ಮಿತಿಯಿಲ್ಲದ ಪ್ರೀತಿಯಿಂದ ತುಂಬಿರುವ ಈ ಹೊಸ ಅಧ್ಯಾಯಕ್ಕಾಗಿ ಕಾಯುತ್ತಿದ್ದೇವೆʼʼಎಂದು ಬರೆದುಕೊಂಡಿದ್ದಾರೆ ನೇಹಾ ದಂಪತಿ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ಲಕ್ಷ್ಮಿ ಬಾರಮ್ಮ ಸೀರಿಯಲ್​ನಲ್ಲಿ ಗೊಂಬೆ ಪಾತ್ರದಲ್ಲಿ ನೇಹಾ ಅವರನ್ನು ಜನ ತುಂಬಾ ಇಷ್ಟಪಟ್ಟಿದ್ದರು. ‘ಸ್ವಾತಿ ಚುನುಕುಲು’ ಧಾರಾವಾಹಿ. ಅಷ್ಟೇ ಅಲ್ಲದೆ ‘ದೀಪವೂ ನಿನ್ನದೇ, ಗಾಳಿಯೂ ನಿನ್ನದೇ, ಕಲ್ಯಾಣ ಪರಿಸು’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು.

Continue Reading

ಸ್ಯಾಂಡಲ್ ವುಡ್

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

Dolly Dhananjay: ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

VISTARANEWS.COM


on

Dolly Dhananjay kotee distribution rights held by KRG Studios
Koo

ಬೆಂಗಳೂರು: ಡಾಲಿಯ ʻಕೋಟಿʼ (Dolly Dhananjay) ಸಿನಿಮಾ ಹವಾ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ʻಕೋಟಿʼ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆಯ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳೋದು ಸಲೀಸಿನ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ಸಂಗತಿ. ಯಾಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನಡಾಗಿಸಿಕೊಳ್ಳುತ್ತೆ. ಇದೀಗ ಕೋಟಿ ವಿತರಣಾ ಹಕ್ಕು ಕೆಆರ್ ಜಿ ಪಾಲಾಗಿರೋದೇ, ಈ ಚಿತ್ರದೆಡೆಗಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಕೋಟಿ ಸಿನಿಮಾವನ್ನು ಇಡೀ ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, “ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧವು ‘ಕೋಟಿ’ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ನಾನು ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

Continue Reading
Advertisement
Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್4 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ7 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ23 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ31 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ31 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ33 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ40 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ47 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್51 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ1 hour ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌