Rishab Shetty: ಕನ್ನಡಿಗ ಕಲಾವಿದರೇ ಮೊದಲ ಆದ್ಯತೆ ಎಂದ ರಿಷಬ್‌; ಹೇಗಿರಲಿದೆ ಕಾಂತಾರ ಚಾಪ್ಟರ್‌ 1? - Vistara News

South Cinema

Rishab Shetty: ಕನ್ನಡಿಗ ಕಲಾವಿದರೇ ಮೊದಲ ಆದ್ಯತೆ ಎಂದ ರಿಷಬ್‌; ಹೇಗಿರಲಿದೆ ಕಾಂತಾರ ಚಾಪ್ಟರ್‌ 1?

Rishab Shetty: ಇಂದೇ ಕಾಂತಾರ ಚಾಪ್ಟರ್‌ -1 ಲುಕ್ ಔಟ್ ಆಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗೊಳಿಸಿದ್ದಾರೆ. ರಿಷಬ್‌ ಸಿನಿಮಾ ಕುರಿತಾಗಿಯೂ ಮಾತನಾಡಿದ್ದಾರೆ.

VISTARANEWS.COM


on

Kantara-2 Movie Kantara rishab
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ಕಾಂತಾರ 2’ (ಕಾಂತಾರದ ಅಧ್ಯಾಯ 1) (Rishab Shetty) ಚಿತ್ರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ಸೋಮವಾರ ನ.27ರಂದು ನೆರವೇರಿದೆ. ಈ ಮೊದಲು ‘ಕಾಂತಾರ’ ಸಿನಿಮಾದ (Kantara Movie) ಮುಹೂರ್ತ ಇಲ್ಲಿಯೇ ನಡೆದಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರು, ಪ್ರಗತಿ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತದಲ್ಲಿ ಭಾಗಿಯಾಗಿತ್ತು. ಇಂದೇ ಕಾಂತಾರ ಚಾಪ್ಟರ್‌ -1 ಲುಕ್ ಔಟ್ ಆಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗೊಳಿಸಿದ್ದಾರೆ. ರಿಷಬ್‌ ಸಿನಿಮಾ ಕುರಿತಾಗಿಯೂ ಮಾತನಾಡಿದ್ದಾರೆ.

ರಿಷಬ್‌ ಮಾತನಾಡಿ ʻʻಕಾಂತಾರದ ಅಧ್ಯಾಯ 1 ಸಿನಿಮಾ ಶುರು ಮಾಡಿದ್ದೇವೆ. ನಿಮ್ಮ ಆಶೀರ್ವಾದದಿಂದ ಸಕ್ಸೆಸ್‌ ಆಗಿದೆ. ಈ ಯಶಸ್ಸನ್ನು ಕನ್ನಡಿಗರಿಗೆ ಅರ್ಪಿಸಲು ಇಷ್ಟಪಡುತ್ತೇನೆ. ಅದೇ ತರಹ ಮುಂದುವರಿದ ಪಯಣ ಇದು. ಕಾಂತಾರದ ಮುನ್ನುಡಿ, ಅಂದರೆ ಹಿಂದೆ ಏನು ನಡೆಯಿತು ಎನ್ನುವುದನ್ನ ಹೇಳಲು ಹೊರಟ್ಟಿದ್ದೇನೆ. ನೀವು ಎಷ್ಟು ಮೊದಲ ಪಾರ್ಟ್‌ಗೆ ಹರಸಿದ್ದೀರೋ ಈ ಸಿನಿಮಾಗೂ ಅಷ್ಟೇ ಹರಸಿʼʼ ಎಂದು ವಿನಂತಿಸಿದರು. ಕಾಂತಾರವನ್ನು ಬೆಂಬಲಿಸಿ ದೊಡ್ಡ ಯಶಸ್ಸನ್ನು ಕೊಟ್ಟಿದ್ದೀರಾ. ಆ ಯಶಸ್ಸನ್ನು ತೆಗೆದುಕೊಂಡು ಅದ್ಭುತವಾದ ಕೆಲಸ ಮಾಡುವಂತಹ ಕೆಲಸ ತಂಡ ಮಾಡುತ್ತಿದೆ. ನಮಗಂತೂ ಆನೆಗುಡ್ಡ ಎಂದರೆ ಲಕ್ಕಿ. ನಾವು ನಂಬಿದಂತಹ ದೇವರು. ಮಾತಿಗಿಂತ ಕೆಲಸ ಮುಖ್ಯ. ಸಿನಿಮಾನೇ ಮಾತನಾಡಿದರೆ ಚೆಂದ. ಈ ಭಾಗದಲ್ಲಿಯೇ ಶೂಟ್‌ ಮಾಡಬೇಕು ಎಂಬುದೇ ಇದೆ. ಕನ್ನಡಿಗರೇ ಪ್ರಥಮ ಆದ್ಯತೆ. ಹೊಸ ಪ್ರತಿಭೆಗಳನ್ನು ಹುಡುಕುತ್ತಾ ಇದ್ದೇವೆ, ಹೊಂಬಾಳೆ ಸಪೋರ್ಟ್‌, ವಿಜಯ್‌ ಅವರ ನಂಬಿಕೆ ಸಕ್ಸೆಸ್‌ಗೆ ಸಾಥ್‌ ಕೊಟ್ಟಿದೆ. ಕಥೆಗೆ ಏನು ಬೇಕೋ ಅವರು ಸಹಾಯ ಮಾಡುತ್ತಿದ್ದಾರೆ. ತಾಂತ್ರಿಕ ವರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಲಾವಿದರಲ್ಲಿ ಸ್ವಲ್ಪ ಜನ ಹೊಸಬರು ಬರುತ್ತಾರೆʼʼ ಎಂದರು.

ಇದನ್ನೂ ಓದಿ: Rishab Shetty: ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರವತಾರ!

ರಿಷಬ್ ಶೆಟ್ಟಿ ರೌದ್ರಾವತಾರ!

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ. ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಈ ಚಿತ್ರ ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Vinay Gowd: . ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Got three Film Offer
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ವಿನಯ್‌ ಗೌಡ ( Vinay Gowda) ಅವರಿಗೆ ಹಲವು ಆಫರ್‌ಗಳು ಬಂದಿವೆ. ಮೂರು ಸಿನಿಮಾಗಳಿಗೆ ವಿಲನ್ ಆಗಿ ವಿನಯ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ವಿನಯ್‌ ಅವರು ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಶಿವನ ಪಾತ್ರ ಮಾಡಿದ್ದರು. ಇದರಲ್ಲಿ ಸಖತ್‌ ಹೆಸರು ಗಳಿಸಿದ್ದರು.

ಹಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರವನ್ನು ನಿರ್ವಹಿಸಿದ್ದರು ವಿನಯ್‌. ಇದೀಗ ಮಾಧ್ಯಮದವೊಂದರಲ್ಲಿ ತಮಗೆ ಬಂದ ಆಫರ್‌ಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

‘ಕನ್ನಡದಲ್ಲಿ ಎರಡು ದೊಡ್ಡ ಸಿನಿಮಾಗಳು, ತಮಿಳಿನ ಒಂದು ಸಿನಿಮಾ ಕೆಲಸ ನಡೆಯುತ್ತಿದೆ. ತೆಲುಗಿನ ಒಂದು ಚಿತ್ರದ ಜೊತೆ ಮಾತುಕತೆ ನಡೆಯುತ್ತಿದೆ’ ಎಂದಿದ್ದಾರೆ ವಿನಯ್ ಗೌಡ.

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

Continue Reading

ಸಿನಿಮಾ

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

Family Drama Trailer: ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ ಆಕರ್ಷ್ ಈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ.

VISTARANEWS.COM


on

Family Drama Trailer Out
Koo

ಬೆಂಗಳೂರು: 2024ರ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ. ಈಗ ಎಲ್ಲಿ ನೋಡಿದರೂ ರಾಜಕೀಯದೇ ಸುದ್ದಿ. ಈ ನಡುವೆ ಸಿನಿಮಾ ಕ್ಷೇತ್ರ ಕೊಂಚ ಮಂಕಾಗಿದೆ. ಚುನಾವಣಾ ಬಿಸಿಯ ನಡುವೆಯೂ ‘ಫ್ಯಾಮಿಲಿ ಡ್ರಾಮ‘ (Family Drama Trailer) ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದ್ಯಾವ ಫ್ಯಾಮಿಲಿ ಡ್ರಾಮ ಅಂತೀರಾ? ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ಸಿದ್ದವಾಗುತ್ತಿರುವ ಹೊಸ ಸಿನಿಮಾ. ಸದ್ಯ ಸಿನಿಮಾ ತಂಡ ಟ್ರೈಲರ್ ಮೂಲಕ ಸಿನಿಮಾ ಅಭಿಮಾನಿಗಳ ಮುಂದೆ ಬಂದಿದೆ. ಸಾಕಷ್ಟು ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ ‘ಫ್ಯಾಮಿಲಿ ಡ್ರಾಮ’.

ಕ್ರಿಯೇಟಿವ್ ಆಗಿ ಮೂಡಿ ಬಂದಿರುವ ಈ ಟ್ರೈಲರ್ ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಯುವ ಪ್ರತಿಭೆ ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವಿದು. ಆಕರ್ಷ್‌ಗೆ ಇದು ಮೊದಲ ನಿರ್ದೇಶನದ ಸಿನಿಮಾ. ಹಾಗಂತ ಸಿನಿಮಾರಂಗ ಹೊಸದೇನಲ್ಲ. ʻಕಾಂತಾರʼ ಸ್ಟಾರ್‌ ರಿಷಬ್ ಶೆಟ್ಟಿ ಅವರ ತಂಡದಲ್ಲಿ ಕೆಲಸ ಮಾಡಿ ಅನುಭವ ಪಡೆದುಕೊಂಡಿರುವ ನಿರ್ದೇಶಕ. ಸದ್ಯ ಬಿಡುಗಡೆಗೆ ರೆಡಿಯಾಗಿರುವ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಆಕರ್ಷ್ ಕೆಲಸ ಮಾಡಿದ್ದಾರೆ. ಜತೆಗೆ ಒಂದಿಷ್ಟು ಕಿರು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

ಇನ್ನೂ ಈ ಸಿನಿಮಾದಲ್ಲಿ ʻಆಚಾರ್ ಆ್ಯಂಡ್ ಕೋʼ ಸಿನಿಮಾದ ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ, ʻಡೇರ್ ಡೆವಿಲ್ ಮುಸ್ತಾಫʼ ಸಿನಿಮಾದಲ್ಲಿ ನಟಿಸಿರುವ ಅಭಯ್, ಪೂರ್ಣ ಮೈಸೂರು ಹಾಗೂ ಅನನ್ಯ ಅಮರ್ ಸೇರಿದಂತೆ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ʻಆಚಾರ್ ಆ್ಯಂಡ್ ಕೋʼ ಬಳಿಕ ಸಿಂಧು (Sindhu Sreenivasa Murthy) ಒಪ್ಪಿಕೊಂಡ ಚಿತ್ರ ಇದಾಗಿದೆ. ‘ಫ್ಯಾಮಿಲಿ ಡ್ರಾಮ’ ಡಾರ್ಕ್‌ ಕಾಮಿಡಿ ಸಿನಿಮಾ. ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯೇ ಫ್ಯಾಮಿಲಿ ಡ್ರಾಮ. ಸಾಕಷ್ಟು ಹೊಸತನದೊಂದಿಗೆ, ವಿಭಿನ್ನವಾಗಿ, ಕ್ರಿಯೇಟಿವ್ ಆಗಿ ಸಿನಿಮಾ ಮಾಡಿದ್ದಾರೆ ನಿರ್ದೇಶಕ ಆಕರ್ಷ್ ತಂಡ.

ಚಿತ್ರದ ಟ್ರೈಲರ್ ಎಷ್ಟು ಗಮನ ಸೆಳೆಯುತ್ತಿದೆಯೂ ಹಾಗೆ ಪೋಸ್ಟರ್‌ ಕೂಡ ಅಷ್ಟೇ ಕ್ರಿಯೇಟಿವ್ ಆಗಿ ಮಾಡಿದ್ದಾರೆ. ಫಿಲಿಫೈನ್ಸ್ ಕ್ರಿಯೇಟಿವ್ ಡಿಸೈನರ್ ಬಳಿ ʻಫ್ಯಾಮಿಲಿ ಡ್ರಾಮʼ ಚಿತ್ರದ ಪೋಸ್ಟರ್ ಡಿಸೈನ್ ಮಾಡಿಸಿದ್ದು ವಿಶೇಷವಾಗಿದೆ. ರೆಟ್ರೋ ಶೈಲಿಯಲ್ಲಿ ಡಿಸೈನ್‌ಗಳನ್ನು ನೋಡಬಹುದು.

ಇನ್ನೂ ವಿಶೇಷ ಎಂದರೆ ಸಿನಿಮಾದ ಸಂಗೀತ ಕೂಡ ರೆಟ್ರೋ ಶೈಲಿಯಲ್ಲಿ ಇದೆ. ಇವತ್ತಿನ ಕಾಲಘಟ್ಟದ ಕಥೆಯಾದರೂ ಸಂಗೀತ ರೆಟ್ರೋ ಶೈಲಿಯಲ್ಲಿ ಇರುವುದು ಈ ಸಿನಿಮಾದ ವಿಶೇಷವಾಗಿದೆ. ಅಂದಹಾಗೆ ಚಿತ್ರಕ್ಕೆ ಚೇತನ್ ಅಮಯ್ಯ ಸಂಗೀತ ಸಂಯೋಜನೆ ಮಾಡದ್ದಾರೆ.

Continue Reading

ಸ್ಯಾಂಡಲ್ ವುಡ್

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

Dheeren Rajkumar: ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

VISTARANEWS.COM


on

dheeren rajkumar announces a new film change his name
Koo

ಬೆಂಗಳೂರು: ‘ಶಿವ 143’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಧೀರೇನ್ ರಾಮ್‌ಕುಮಾರ್ (Dheeren Ramkumar) ಮೊದಲ ಪ್ರಯತ್ನದಲ್ಲಿ ಸೋತಿದ್ದರು. ಎರಡು ವರ್ಷದ ಹಿಂದೆ ಬಂದಿದ್ದ ‘ಶಿವ 143’ ಸಿನಿಮಾ ಅಷ್ಟಾಗಿ ಸದ್ದು ಮಾಡಲಿಲ್ಲ. ಇದೀಗ ಹೊಸ ಸಿನಿಮಾ ಸಾಹಸಕ್ಕೆ ಧೀರೇನ್ ಮುಂದಾಗಿದ್ದಾರೆ. ಧೀರೇನ್ ರಾಮ್‌ಕುಮಾರ್ ಎನ್ನುವ ತಮ್ಮ ಹೆಸರನ್ನು ʻಧೀರೇನ್ ರಾಜ್‌ಕುಮಾರ್ʼ (Dheeren Rajkumar)ಎಂದು ಬದಲಿಸಿಕೊಂಡಿದ್ದಾರೆ. ಅಂದರೆ ತಂದೆ ಹೆಸರಿನ ಬದಲಿಗೆ ತಾತನ ಹೆಸರಿನೊಟ್ಟಿಗೆ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೊಸ ಸಿನಿಮಾ ಮೂಲಕ ಹೊಸ ಜರ್ನಿ ಎಂದಿದ್ದಾರೆ.

ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ. ಸ್ಟುಡಿಯೋಸ್‌ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನು ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಹೇಳಿಕೊಂಡಿದೆ.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. “ರತ್ನನ್ ಪ್ರಪಂಚ” ಮೂಲಕ ರೋಹಿತ್ ಪದಕಿ, “ಪೌಡರ್” ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, “ಗುರುದೇವ್ ಹೊಯ್ಸಳ” ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದೆ.

ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ. ಪ್ರಸ್ತುತವಾಗಿ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರ ಸೆಟ್ಟೇರಿದ್ದು, “ಪೌಡರ್” ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ವರನಟ ರಾಜಕುಮಾರ್ ಪುತ್ರಿ ಪೂರ್ಣಿಮಾ ಮಗ ಧೀರೇನ್‌ ರಾಮ್‌ಕುಮಾರ್‌ (ಧೀರೇನ್ ರಾಜ್‌ಕುಮಾರ್ʼ).

ಇದನ್ನೂ ಓದಿ: Shiva 143 | ಧೀರೇನ್‌ ರಾಮ್‌ಕುಮಾರ್‌ ಚಿತ್ರ ಶಿವ 143 ರಾಜ್ಯಾದ್ಯಂತ ಬಿಡುಗಡೆ : ಅಪ್ಪು ಕಟೌಟ್ ಮುಖ್ಯ ಆಕರ್ಷಣೆ!

ʻʻಶಿವ 143ʼʼ ಸಿನಿಮಾ

ತೆಲುಗಿನ ‘RX100’ ಸಿನಿಮಾ ರೀಮೇಕ್ ಆಗಿದ್ದ ‘ಶಿವ 143’ ಚಿತ್ರಕ್ಕೆ ಅರ್ಜುನ್ ಜನ್ಯಾ ಟ್ಯೂನ್ ಹಾಕಿದ್ದರು. ಅವಿನಾಶ್, ಚರಣ್ ರಾಜ್, ಚಿಕ್ಕಣ್ಣ, ಸಾಧು ಕೋಕಿಲ, ಶೋಭರಾಜ್ ಸೇರಿ ದೊಡ್ಡ ತಾರಾಗಣವೇ ಚಿತ್ರದಲ್ಲಿತ್ತು.
ಈ ಚಿತ್ರ ಜಯಣ್ಣ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಮೂಡಿ ಬಂದಿತ್ತು. ಛಾಯಾಗ್ರಹಣ ಜವಾಬ್ದಾರಿಯನ್ನು ಶಿವ ಹೊತ್ತಿದ್ದರು. ಜಯಣ್ಣ, ಭೋಗೇಂದ್ರ ಮತ್ತು ಡಾ. ಸೂರಿ ಚಿತ್ರ ನಿರ್ಮಾಣ ಮಾಡಿದ್ದರು. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದರು.

ನಾಯಕಿಯಾಗಿ ಮಾನ್ವಿತಾ ಕಾಮತ್‌ ನಟಿಸಿದ್ದರು. ಚರಣ್‌ ರಾಜ್‌ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು

ಧೀರೇನ್ ಸಹೋದರಿ ಧನ್ಯಾ ರಾಮ್‌ಕುಮಾರ್ ಕೂಡ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಧನ್ಯಾ ಬಳಿಕ ‘ಹೈಡ್ ಅಂಡ್ ಸೀಕ್’, ‘ಕಾಲಾಪತ್ಥರ್’, ‘ಎಲ್ಲಾ ನಿನಗಾಗಿ’ ಸಿನಿಮಾಗಳಲ್ಲಿ ನಟಿಸಿದರು.

Continue Reading

South Cinema

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Mahesh Babu: ನಟ ಮಹೇಶ್ ಬಾಬು ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ.

VISTARANEWS.COM


on

Mahesh Babu shares sweet moments with sister Manjula and Prabhas aunt
Koo

ಬೆಂಗಳೂರು: ನಟ ಮಹೇಶ್ ಬಾಬು (Mahesh Babu) ಅವರು ಭಾನುವಾರ ರಾತ್ರಿ (ಏ.28) ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಗಳು ಸಿತಾರಾ ಅವರೊಂದಿಗೆ ತಮ್ಮ ಕುಟುಂಬದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಅಭಿಮಾನಿಗಳೊಂದಿಗೆ ಫೋಟೊಗೆ ನಟ ಪೋಸ್‌ ಕೊಟ್ಟಿದ್ದಾರೆ. ನಟ ಸಹೋದರಿ ಮಂಜುಳಾ ( sister Manjula ) ಮತ್ತು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ದೇವಿ (Prabhas’ aunt Shyamala Devi) ಅವರೊಂದಿಗೆ ಸಿಹಿ ಕ್ಷಣಗಳನ್ನು ಹಂಚಿಕೊಂಡಿರುವ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ನೀಡಿಯಾದಲ್ಲಿ ವೈರಲ್‌ ಆಗಿವೆ.

ಅಭಿಮಾನಿಗಳು ಹಂಚಿಕೊಂಡ ವಿಡಿಯೊವೊಂದರಲ್ಲಿ, ಮಹೇಶ್ ಅವರು ತಮ್ಮ ಸಹೋದರಿ ಮಂಜುಳಾ ಅವರೊಂದಿಗೆ ಖುಷಿಯ ಸಂದರ್ಭವನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಬಹುದು. ಸಹೋದರಿ ಮಂಜುಳಾ ಅವರು ಮಹೇಶ್‌ ಅವರ ಹೊಸ ಹೇರ್‌ಸೈಲ್‌ಗೆ ಫಿದಾ ಆದರು. ಮಹೇಶ್‌ ಅವರ ಉದ್ದನೆಯ ಕೂದಲನ್ನು ಮುಟ್ಟಿ, ತಮಾಷೆ ಮಾಡಿ ನಗುತ್ತಿರುವುದು ಕಂಡಿದೆ. ಮಹೇಶ್‌ ಕೂಡ ಸಹೋದರಿ ತಮಾಷೆಗೆ ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ “ನಾವೆಲ್ಲರೂ ಇಂತಹ ಕ್ಷಣಗಳನ್ನು ಪ್ರೀತಿಸುತ್ತೇವೆ” ಎಂದು ಅಭಿಮಾನಿಗಳು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಇದನ್ನೂ ಓದಿ: Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

ಪಾಪರಾಜಿಗಳು ಕ್ಲಿಕ್ ಮಾಡಿದ ಮತ್ತೊಂದು ವಿಡಿಯೊದಲ್ಲಿ ಮಹೇಶ್ ಅವರು ಪ್ರಭಾಸ್ ಅವರ ಚಿಕ್ಕಮ್ಮ ಶ್ಯಾಮಲಾ ಅವರೊಂದಿಗೆ ಮಾತನಾಡುವುದನ್ನು ಕಾಣಬಹುದು. ನಮ್ರತಾ ಮತ್ತು ಸಿತಾರಾ ಅವರನ್ನು ತಬ್ಬಿಕೊಂಡು ಖುಷಿಯಲ್ಲಿ ಮಾತನಾಡಿದ್ದಾರೆ ಪ್ರಭಾಸ್ ಚಿಕ್ಕಮ್ಮ. ಪ್ರಭಾಸ್ ಅವರ ಅಭಿಮಾನಿಗಳು ವಿಡಿಯೊವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಪೋಕಿರಿ ಸಿನಿಮಾಗೆ 18 ವರ್ಷ

ಭಾನುವಾರದಂದು (ಏ.28) ಮಹೇಶ್‌ ಅಭಿಮಾನಿಗಳಿಗೆ ಡಬಲ್ ಟ್ರೀಟ್ ಆಗಿತ್ತು. ಏಕೆಂದರೆ ಏಪ್ರಿಲ್ 28ರಂದು ಪುರಿ ಜಗನ್ನಾಥ್ ಅವರ ಮಹೇಶ್ ಮತ್ತು ಇಲಿಯಾನಾ ಡಿಕ್ರೂಜ್ ಅಭಿನಯದ ʻಪೋಕಿರಿʼ ಬಿಡುಗಡೆಯಾಗಿ 18 ವರ್ಷಗಳು ಕಳೆದಿತ್ತು. ಈ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ತೆಲುಗಿನಲ್ಲಿ ಅತಿ ಹೆಚ್ಚು ಗಳಿಕೆಯಾದ ಸಿನಿಮಾ ಆಗಿತ್ತು. ʻಪೋಕಿರಿʼ ಸಿನಿಮಾ ಹಿಟ್‌ ಆದ ಬಳಿಕ ತಮಿಳು, ಹಿಂದಿ, ಕನ್ನಡದಲ್ಲಿ ರಿಮೇಕ್‌ ಮಾಡಲಾಯ್ತು. 2009ರಲ್ಲಿ ಎಸ್‌ಎಸ್ ರಾಜಮೌಳಿಯವರ ʻಮಗಧೀರʼ ಸಿನಿಮಾ ಈ ಕಲೆಕ್ಷನ್‌ನನ್ನು ಸೋಲಿಸಿತ್ತು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading
Advertisement
Vinay Gowda Got three Film Offer
ಸ್ಯಾಂಡಲ್ ವುಡ್15 mins ago

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Hassan Pen Drive Case
ಕರ್ನಾಟಕ17 mins ago

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

Sex Scandals
Latest27 mins ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ27 mins ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ42 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ43 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ55 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ56 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ1 hour ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ1 hour ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20244 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌