Site icon Vistara News

Rishab Shetty: ಕನ್ನಡಿಗ ಕಲಾವಿದರೇ ಮೊದಲ ಆದ್ಯತೆ ಎಂದ ರಿಷಬ್‌; ಹೇಗಿರಲಿದೆ ಕಾಂತಾರ ಚಾಪ್ಟರ್‌ 1?

Kantara-2 Movie Kantara rishab

ಬೆಂಗಳೂರು: `ಕಾಂತಾರ 2’ (ಕಾಂತಾರದ ಅಧ್ಯಾಯ 1) (Rishab Shetty) ಚಿತ್ರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ಸೋಮವಾರ ನ.27ರಂದು ನೆರವೇರಿದೆ. ಈ ಮೊದಲು ‘ಕಾಂತಾರ’ ಸಿನಿಮಾದ (Kantara Movie) ಮುಹೂರ್ತ ಇಲ್ಲಿಯೇ ನಡೆದಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರು, ಪ್ರಗತಿ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಮುಹೂರ್ತದಲ್ಲಿ ಭಾಗಿಯಾಗಿತ್ತು. ಇಂದೇ ಕಾಂತಾರ ಚಾಪ್ಟರ್‌ -1 ಲುಕ್ ಔಟ್ ಆಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗೊಳಿಸಿದ್ದಾರೆ. ರಿಷಬ್‌ ಸಿನಿಮಾ ಕುರಿತಾಗಿಯೂ ಮಾತನಾಡಿದ್ದಾರೆ.

ರಿಷಬ್‌ ಮಾತನಾಡಿ ʻʻಕಾಂತಾರದ ಅಧ್ಯಾಯ 1 ಸಿನಿಮಾ ಶುರು ಮಾಡಿದ್ದೇವೆ. ನಿಮ್ಮ ಆಶೀರ್ವಾದದಿಂದ ಸಕ್ಸೆಸ್‌ ಆಗಿದೆ. ಈ ಯಶಸ್ಸನ್ನು ಕನ್ನಡಿಗರಿಗೆ ಅರ್ಪಿಸಲು ಇಷ್ಟಪಡುತ್ತೇನೆ. ಅದೇ ತರಹ ಮುಂದುವರಿದ ಪಯಣ ಇದು. ಕಾಂತಾರದ ಮುನ್ನುಡಿ, ಅಂದರೆ ಹಿಂದೆ ಏನು ನಡೆಯಿತು ಎನ್ನುವುದನ್ನ ಹೇಳಲು ಹೊರಟ್ಟಿದ್ದೇನೆ. ನೀವು ಎಷ್ಟು ಮೊದಲ ಪಾರ್ಟ್‌ಗೆ ಹರಸಿದ್ದೀರೋ ಈ ಸಿನಿಮಾಗೂ ಅಷ್ಟೇ ಹರಸಿʼʼ ಎಂದು ವಿನಂತಿಸಿದರು. ಕಾಂತಾರವನ್ನು ಬೆಂಬಲಿಸಿ ದೊಡ್ಡ ಯಶಸ್ಸನ್ನು ಕೊಟ್ಟಿದ್ದೀರಾ. ಆ ಯಶಸ್ಸನ್ನು ತೆಗೆದುಕೊಂಡು ಅದ್ಭುತವಾದ ಕೆಲಸ ಮಾಡುವಂತಹ ಕೆಲಸ ತಂಡ ಮಾಡುತ್ತಿದೆ. ನಮಗಂತೂ ಆನೆಗುಡ್ಡ ಎಂದರೆ ಲಕ್ಕಿ. ನಾವು ನಂಬಿದಂತಹ ದೇವರು. ಮಾತಿಗಿಂತ ಕೆಲಸ ಮುಖ್ಯ. ಸಿನಿಮಾನೇ ಮಾತನಾಡಿದರೆ ಚೆಂದ. ಈ ಭಾಗದಲ್ಲಿಯೇ ಶೂಟ್‌ ಮಾಡಬೇಕು ಎಂಬುದೇ ಇದೆ. ಕನ್ನಡಿಗರೇ ಪ್ರಥಮ ಆದ್ಯತೆ. ಹೊಸ ಪ್ರತಿಭೆಗಳನ್ನು ಹುಡುಕುತ್ತಾ ಇದ್ದೇವೆ, ಹೊಂಬಾಳೆ ಸಪೋರ್ಟ್‌, ವಿಜಯ್‌ ಅವರ ನಂಬಿಕೆ ಸಕ್ಸೆಸ್‌ಗೆ ಸಾಥ್‌ ಕೊಟ್ಟಿದೆ. ಕಥೆಗೆ ಏನು ಬೇಕೋ ಅವರು ಸಹಾಯ ಮಾಡುತ್ತಿದ್ದಾರೆ. ತಾಂತ್ರಿಕ ವರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಲಾವಿದರಲ್ಲಿ ಸ್ವಲ್ಪ ಜನ ಹೊಸಬರು ಬರುತ್ತಾರೆʼʼ ಎಂದರು.

ಇದನ್ನೂ ಓದಿ: Rishab Shetty: ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರವತಾರ!

ರಿಷಬ್ ಶೆಟ್ಟಿ ರೌದ್ರಾವತಾರ!

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ. ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಈ ಚಿತ್ರ ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದೆ.

Exit mobile version