Rishab Shetty | 400 ಕೋಟಿ ರೂ. ಗಳಿಕೆ ಕಂಡ ಕಾಂತಾರ ಸಿನಿಮಾಗೆ ರಿಷಬ್‌ ಪಡೆದುಕೊಂಡ ಸಂಭಾವನೆ ಎಷ್ಟು? - Vistara News

ಸಿನಿಮಾ

Rishab Shetty | 400 ಕೋಟಿ ರೂ. ಗಳಿಕೆ ಕಂಡ ಕಾಂತಾರ ಸಿನಿಮಾಗೆ ರಿಷಬ್‌ ಪಡೆದುಕೊಂಡ ಸಂಭಾವನೆ ಎಷ್ಟು?

ʻಕಾಂತಾರʼ ಚಿತ್ರದ ಮೂಲಕ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ ನಟ ರಿಷಬ್‌ ಶೆಟ್ಟಿ (Rishab Shetty). ಇದೀಗ ಸಿನಿಮಾದಲ್ಲಿ ನಟಿಸಿರುವ ನಟರ ಸಂಭಾವನೆ ರಿವೀಲ್‌ ಆಗಿದೆ.

VISTARANEWS.COM


on

Rishab Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ (Rishab Shetty) ʻಕಾಂತಾರʼ ಚಿತ್ರದ ಮೂಲಕ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹೆಗ್ಗಳಿಕೆಯ ಜತೆಗೆ ಅವಕಾಶಗಳ ಮಹಾಪೂರವೇ ಹರಿದು ಬರುತ್ತಿದೆ. 400 ಕೋಟಿ ರೂ. ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡ ನಂತರ ಕಾಂತಾರ ಸಿನಿಮಾ ಒಟಿಟಿಯಲ್ಲಿಯೂ ಸ್ಟ್ರೀಮ್ ಆಗುತ್ತಿದೆ. ಈ ವರ್ಷ ಕೆಜಿಎಫ್-2 ಮತ್ತು 777 ಚಾರ್ಲಿ ಜತೆಗೆ ಕಾಂತಾರ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡುವಲ್ಲಿ ಯಶಸ್ವಿಯಾಗಿದೆ. ಇದೀಗ ಸಿನಿಮಾದಲ್ಲಿ ನಟಿಸಿರುವ ನಟರ ಸಂಭಾವನೆ ರಿವೀಲ್‌ ಆಗಿದೆ.

ವರದಿ ಪ್ರಕಾರ 16 ಕೋಟಿ ರೂ. ಬಜೆಟ್‌ನಲ್ಲಿ ʻಕಾಂತಾರʼ ಸಿನಿಮಾ ನಿರ್ಮಾಣ ಮಾಡಿದ್ದು 400 ಕೋಟಿ ರೂ. ಅಧಿಕ ಗಳಿಕೆ ಕಂಡಿದೆ. ಹೀಗಿರುವಾಗ ನಟನೆ ಹಾಗೂ ನಿರ್ದೇಶನ ಮಾಡಿರುವ ರಿಷಬ್‌ ಶೆಟ್ಟಿ ಅವರು ಈ ಸಿನಿಮಾದಲ್ಲಿ ಕೇವಲ 4 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಇನ್ನುಳಿದಂತೆ ಫಾರೆಸ್ಟ್ ಆಫೀಸರ್ ಮುರಳಿ ಪಾತ್ರದಲ್ಲಿ ನಟಿಸಿರುವ ಕಿಶೋರ್, ತಮ್ಮ ಪಾತ್ರಕ್ಕಾಗಿ 1 ಕೋಟಿ ರೂ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Rishab Shetty | ʻಅದ್ಭುತ ವ್ಯಕ್ತಿಗಳ ಜತೆ ಅದ್ಭುತ ಚರ್ಚೆʼ ಅಂದಿದ್ಯಾಕೆ ರಿಷಬ್‌ ಶೆಟ್ಟಿ: ಫೋಟೊ ವೈರಲ್‌!

ಚಿತ್ರದಲ್ಲಿ ಸುಧಾಕರ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ʻಉಳಿದವರು ಕಂಡಂತೆʼ, ʻಕಿರಿಕ್ ಪಾರ್ಟಿʼ ಮತ್ತು ʻಅವನೇ ಶ್ರೀಮನ್ನಾರಾಯಣನಂತಹʼ ಕೆಲವು ಬ್ಲಾಕ್‌ಬಸ್ಟರ್ ಚಲನಚಿತ್ರಗಳಲ್ಲಿ ಪ್ರಮೋದ್ ಭಾಗವಾಗಿದ್ದಾರೆ. ಕಾಂತಾರ ಚಿತ್ರದಲ್ಲಿನ ಪಾತ್ರಕ್ಕಾಗಿ ಅವರು 60 ಲಕ್ಷ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಈ ವರ್ಷದ ಮತ್ತೊಂದು ಭರ್ಜರಿ ಹಿಟ್ ಸಿನಿಮಾ ಕೆಜಿಎಫ್-2 ನಲ್ಲಿಯೂ ಕಾಣಿಸಿಕೊಂಡಿರುವ ಅಚ್ಯುತ್ ಕುಮಾರ್, ಕಾಂತಾರ ಚಿತ್ರದಲ್ಲಿ ರಾಜನ ವಂಶಸ್ಥರಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ತಮ್ಮ ಪಾತ್ರಕ್ಕಾಗಿ 40 ಲಕ್ಷ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ನಟಿ ಸಪ್ತಮಿ ಗೌಡ ಅವರು ಅರಣ್ಯ ಸಿಬ್ಬಂದಿ ಪಾತ್ರದಲ್ಲಿ ಮಿಂಚಿದ್ದರು. ಅವರು 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಕಾಂತಾರ ಸಕ್ಸೆಸ್‌ ಆದ ಬಳಿಕ ಕಾಂತಾರ ಪಾರ್ಟ್-2ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ರಿಷಬ್ ಮತ್ತು ತಂಡ. ಈಗಾಗಲೇ ಪಂಜುರ್ಲಿ ಬಳಿ ಅನುಮತಿ ಕೂಡ ಕೇಳಿರುವ ರಿಷಬ್ ಶೆಟ್ಟಿ ಮುಂದಿನ ವರ್ಷದಿಂದ ಪಾರ್ಟ್-2 ಪ್ರಾರಂಭಿಸುವ ಸಾಧ್ಯತೆ ಇದೆ. 

ಇದನ್ನೂ ಓದಿ | Actor Rishab Shetty | ಕುಟುಂಬ ಸಮೇತ ಕಟೀಲು ದುರ್ಗಾ ಪರಮೇಶ್ವರಿ ದರ್ಶನ ಮಾಡಿದ ರಿಷಬ್‌ ಶೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Rave Party: ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಸೋಮವಾರ ಹಾಜರಾದ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಳೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗಿದ್ದ ನಟಿಯನ್ನು ಬಂಧಿಸಲಾಗಿದೆ. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಈ ವೇಳೆ ಅವರನ್ನು ಸಿಸಿಬಿ ತನಿಖಾಧಿಕಾರಿಗಳು ಬಂಧಿಸಿ ಹೇಳಿಕೆ ಪಡೆಯುತ್ತಿದ್ದಾರೆ.

ಎರಡು ಬಾರಿ ನೋಟಿಸ್ ನೀಡಿದ್ದರೂ ಸಹ ವಿಚಾರಣೆಗೆ ನಟಿ ಬಂದಿರಲಿಲ್ಲ. ಇನ್ನು ವಿಚಾರಣೆ ವೇಳೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ನಟಿಯನ್ನು ಬಂಧಿಸಲಾಗಿದೆ. ಸದ್ಯ ನಟಿಗೆ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗುತ್ತಿದೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವಿನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ವಶಕ್ಕೆ ಪಡೆದಿದ್ದು, ನಾಳೆ ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ತೀರ್ಮಾನಿಸಿದೆ.

ನಟಿ ಹೇಮಾ ಸೇವಿಸಿದ್ದು ಯಾವ ಡ್ರಗ್ಸ್?

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾರೆ? ಇದರ ಜಾಲ ಯಾವುದು? ಎಂಬಿತ್ಯಾದಿ ಅಂಶಗಳನ್ನು ಬಯಲಿಗೆಳೆಯಲು ತಯಾರಿ ನಡೆಸಲಾಗಿದೆ.

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Kannada New Movie: 1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ.

VISTARANEWS.COM


on

Kannada New Movie Mandela nari shrinivas
Koo

ಬೆಂಗಳೂರು: ʻಮಂಡೇಲಾʼ (Kannada New Movie) ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ. ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ ಹಲವು ಹಿಟ್‌ ಸಿನಿಮಾಗಳನ್ನು ನೀಡಿದವರು. ಶ್ರೀಧರ್ ಪೂರ್ವಜಿತ್ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು. ಆ ಚಿತ್ರದ ಹೆಸರು ಮಂಡೇಲಾ.

ಇದೊಂದು ವಿಭಿನ್ನ ಪ್ರಯೋಗದ ಚಿತ್ರ ಎಂದೂ ಹೇಳಬಹುದು. ಸಿನಿಮಾ ಎಂದಮೇಲೆ ಹಲವಾರು ಪಾತ್ರಗಳಿರಬೇಕಲ್ಲವೆ, ಈ ಚಿತ್ರದಲ್ಲೂ ಒಂದಷ್ಟು ಪಾತ್ರಗಳಿವೆ. ಆದರೆ ಪ್ರಮುಖವಾಗಿ ಮೂರು ಪಾತ್ರಗಳ ಮೂಲಕ ನಿರ್ದೇಶಕರು ಕಥೆಯನ್ನು ಹೇಳಹೊರಟಿದ್ದಾರೆ.

1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ. ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸುತ್ತಿದ್ದು, ಅವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

ಕನ್ನಡದಲ್ಲಿ ಈಗಾಗಲೇ ʻಬಾ ನಲ್ಲೆ ಮಧುಚಂದ್ರಕೆʼ, ʻಬೆಳದಿಂಗಳ ಬಾಲೆʼಯಂಥ ಚಿತ್ರಗಳು ಬಂದು ಹೋಗಿವೆ. ಆಗಿನಿಂದಲೂ ಹೊಸಥರದ ಕಂಟೆಂಟ್ ಇರುವ ಕಥೆಗಳನ್ನು ನಮ್ಮ ಜನ ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಅದೇರೀತಿ ನಮ್ಮ ಹೊಸ ಈ ಪ್ರಯತ್ನವನ್ನೂ ಪ್ರೇಕ್ಷಕರು ಕೈ ಹಿಡಿಯುತ್ತಾರೆ ಎಂಬ ಭರವಸೆಯನ್ನು ಚಿತ್ರದ ನಾಯಕ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ವ್ಯಕ್ತಪಡಿಸಿದರು.

ಕನ್ನಡ, ತೆಲುಗು, ತಮಿಳು ಸೇರಿ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜುಲೈ 2 ಅಥವಾ 3ನೇ ವಾರ ಈ ಚಿತ್ರ ಸೆಟ್ಟೇರಲಿದೆ. ಮಂಡೇಲಾದ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದೆ.

Continue Reading

ಟಾಲಿವುಡ್

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Ram Charan: ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ.

VISTARANEWS.COM


on

Ram Charan Instagram story of daughter Klin Kaara receiving bujji
Koo

ಬೆಂಗಳೂರು: ಟಾಲಿವುಡ್ ಸೂಪರ್‌ಸ್ಟಾರ್ ರಾಮ್ ಚರಣ್ (Ram Charan) ಮತ್ತು ಪ್ರಭಾಸ್‌ (Prabhas) ನಡುವೆ ಒಳ್ಳೆಯ ಆತ್ಮೀಯತೆ ಇದೆ. ಪ್ರಭಾಸ್ ನಟನೆಯ ‘ಕಲ್ಕಿ 2898 AD’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ‘ಬುಜ್ಜಿ’ ಕಾರ್ ಮೂಲಕ ಸಿನಿಮಾ ಪ್ರಮೋಷನ್ ಆರಂಭಿಸಲಾಗಿದೆ. ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ʻಬುಜ್ಜಿʼ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ರಾಮ್‌ಚರಣ್‌ ಮಗಳು ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ.

ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Jackfruit seeds: ಹಲಸಿನ ಬೀಜ ಎಂದು ಕಡೆಗಣಿಸಬೇಡಿ, ಇದರ ಉಪಯೋಗ ಎಷ್ಟೊಂದು!

ಏನಿದು ಬುಜ್ಜಿ ಕಾರ್‌?

ಬರೋಬ್ಬರಿ 7 ಕೋಟಿ ವೆಚ್ಚದಲ್ಲಿ ಈ ಕಾಲ್ಪನಿಕ ವಾಹನವನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗುತ್ತಿದೆ. ಬುಜ್ಜಿ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ. ಇದನ್ನು ಫೋಟೊ ಉಪಾಸನಾ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಬುಜ್ಜಿ ರಾಕರ್ ಜತೆ ಕ್ಲಿಂಕಾರ ಆಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಉಡುಗೊರೆ ಜೊತೆಗೆ ಒಂದು ಪತ್ರವನ್ನು ಕಳುಹಿಸಲಾಗಿದೆ. ಉಪಾಸನಾ ಸಂತಸ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಸ್ಯಾಂಡಲ್ ವುಡ್

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Rishab Shetty: ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು.

VISTARANEWS.COM


on

Rishab Shetty Shivamma Yarehanchinala Official Trailer out
Koo

ಬೆಂಗಳೂರು:  ರಿಷಬ್ ಶೆಟ್ಟಿ (Rishab Shetty) ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ (Shivamma Movie) ವಿಶ್ವಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ‘ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿತ್ತು. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಜಯಶಂಖರ್ ಆರ್ಯರ್ ನಿರ್ದೇಶನದ ‘ಶಿವಮ್ಮ’ ಸಿನಿಮಾ ಜೂನ್ 14ಕ್ಕೆ ತೆರೆಗೆ ಬರ್ತಿದೆ. ಸದ್ಯ ಟ್ರೈಲರ್ ಬಿಡುಗಡೆ ಆಗಿದೆ. ಯರೆಹಂಚಿನಾಳ ಎನ್ನುವ ಊರಿನಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ.

ಯರೆಹಂಚಿನಾಳದ ಸರ್ಕಾರಿ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದ ಶಿವಮ್ಮ ಕುಟುಂಬ ಪೋಷಣೆಗಾಗಿ ಊರೆಲ್ಲಾ ಸಾಲ ಮಾಡುತ್ತಾಳೆ. ಶಿವಮ್ಮ, ಕೊನೆಗೆ ಶಾಲಾ ಶಿಕ್ಷಕರ ಬಳಿಯೂ ಸಾಲ ಮಾಡಿ ಸಮಸ್ಯೆ ಎದುರಿಸುತ್ತಾಳೆ. ಬಳಿಕ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರ ಮಾಡಲು ಹೋಗಿ ಸಮಸ್ಯೆ ಎದುರಿಸುತ್ತಾಳೆ ಎನ್ನುವ ಕಥೆಯನ್ನು ಎಳೆ ಎಳೆಯಾಗಿ ಹೇಳಲಾಗಿದೆ.

ಅನೇಕ ಸಿನಿಮೋತ್ಸವಗಳಲ್ಲಿ ಪ್ರದರ್ಶನ

ಅನೇಕ ಸಿನಿಮೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿದೆ. ಚೀನಾದಲ್ಲಿ ನಡೆದ ‘ಹೈನಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಇರಾನ್​ನಲ್ಲಿ ನಡೆದ ‘ಫಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಸ್ವೀಡನ್​ನ ‘ಗೋಥೆಂಬರ್ಗ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಮ್ಯುನಿಚ್​​ನ ‘ಮುಂಚಿಯನ್ ಸಿನಿಮೋತ್ಸವ, ರಷ್ಯಾದ ‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ’, ಸ್ಪೇನ್​ನ ‘ಇಮ್ಯಾಜಿನ್ ಇಂಡಿಯಾ’, ಕೆನಡಾದ ‘ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ’, ಮೆಲ್ಬೋರ್ನ್​ನ ‘ಇಂಡಿಯನ್ ಪಿಲ್ಮ್ ಫೆಸ್ಟಿವಲ್’, ಸ್ವಿಟ್ಜರ್​​ಲ್ಯಾಂಡ್​ನ ‘ಬ್ಲಾಕ್​ ಮೂವಿ ಫಿಲ್ಮ್​ ಫೆಸ್ಟಿವಲ್’ ಮೊದಲಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು. ಏಷ್ಯಾದ ಅತಿದೊಡ್ಡ ಫಿಲ್ಮ್ಸ್ ಉತ್ಸವದಲ್ಲಿ ಒಟ್ಟು 10 ಚಲನಚಿತ್ರಗಳು ಉನ್ನತ-ಪ್ರೊಫೈಲ್ ನ್ಯೂ ಕರೆಂಟ್ಸ್ ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.

ಸಿನಿಮಾದ ಕಥೆ ಏನು?

ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ 46 ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.

ಚೆನ್ನಮ್ಮ ಅಬ್ಬೆಗೆರೆ, ಶಿವು ಅಬ್ಬೆಗೆರೆ, ಶ್ರುತಿ ಕೊಂಡೇನಹಳ್ಳಿ, ಚೆನ್ನಪ್ಪ ಹನ್ಸಿ, ಶಿವಾನಂದ್ ಸಾದರ್ ಚಿತ್ರದ ತಾರಾಗಣದಲ್ಲಿದ್ದಾರೆ. ವಿಕಾಸ್ ಯುಆರ್ಎಸ್ ಹಾಗೂ ಸೌಮ್ಯಾನಂದ ಸಾಹಿ ಛಾಯಾಗ್ರಹಣ ‘ಶಿವಮ್ಮ’ ಚಿತ್ರಕ್ಕಿದೆ. ಜೂನ್ 14ಕ್ಕೆ ‘ಕೋಟಿ’, ‘ಶೆಫ್ ಚಿದಂಬರ’ ಹಾಗೂ ‘ಲವ್‌ಲಿ’ ಸಿನಿಮಾಗಳ ಜೊತೆಗೆ ‘ಶಿವಮ್ಮ’ ಕಥೆ ತೆರೆಮೇಲೆ ಅನಾವರಣವಾಗಲಿದೆ.

Continue Reading
Advertisement
Anant Ambani Radhika Merchant Pre Wedding
ಫ್ಯಾಷನ್40 seconds ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ6 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್18 mins ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ28 mins ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ31 mins ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ57 mins ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ58 mins ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Saree Fashion
ಫ್ಯಾಷನ್1 hour ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Hornbill bird sighting in Gangavathi
ಕರ್ನಾಟಕ1 hour ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ1 hour ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌