South Cinema
Hombale Films: ಇಟಾಲಿಯನ್, ಸ್ಪ್ಯಾನಿಶ್ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ ಕಾಂತಾರ; ಹೊಂಬಾಳೆಯಿಂದ ಸಿಹಿ ಸುದ್ದಿ!
ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಮಾಡಿ ತೆರೆಕಾಣಿಸಲು ಸಿದ್ಧತೆ ನಡೆದಿದೆ ಎಂದು ‘ಹೊಂಬಾಳೆ ಫಿಲ್ಮ್ಸ್’ (Hombale Films) ಹಂಚಿಕೊಂಡಿದೆ. ರಿಲೀಸ್ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಟ್ವೀಟ್ನಲ್ಲಿ ಹಂಚಿಕೊಂಡಿದೆ.
ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ ವಿಶ್ವಾದ್ಯಂತ 400 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ. ಇದರ ಬೆನ್ನಲ್ಲೇ ಜಿನೀವಾದಲ್ಲಿ ಕಾಂತಾರದ ವಿಶೇಷ ಪ್ರದರ್ಶನವೂ ಆಗಿದೆ. ಇದೀಗ ಈ ಚಿತ್ರಕ್ಕೆ ಬೇರೆ ಬೇರೆ ದೇಶಗಳ ಪ್ರೇಕ್ಷಕರಿಂದ ಬೇಡಿಕೆ ಬಂದಿದೆ. ಹಾಗಾಗಿ ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆಗಳಿಗೆ ಡಬ್ ಮಾಡಿ ತೆರೆಕಾಣಿಸಲು ಸಿದ್ಧತೆ ನಡೆದಿದೆ ಎಂದು ‘ಹೊಂಬಾಳೆ ಫಿಲ್ಮ್ಸ್’ (Hombale Films) ಹಂಚಿಕೊಂಡಿದೆ. ರಿಲೀಸ್ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಟ್ವೀಟ್ನಲ್ಲಿ ಹಂಚಿಕೊಂಡಿದೆ.
ಮಾರ್ಚ್ 16ರಂದು ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಅಧಿವೇಶನದಲ್ಲಿ ಕನ್ನಡದಲ್ಲಿಯೇ ಮಾತನಾಡಿದ್ದಾರೆ ರಿಷಬ್. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ರಿಷಬ್ ಮಾತನಾಡಿದ್ದಾರೆ. ಹೀಗೆ ಸದಾ ಒಂದಲ್ಲ ಒಂದು ಸಿಹಿ ಸುದ್ದಿಯನ್ನು ನೀಡುತ್ತ ಬಂದಿರುವ ರಿಷಬ್ ಮತ್ತೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಟ್ವೀಟ್ನಲ್ಲಿ ʻʻಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಭಾರೀ ಬೇಡಿಕೆಗೆ ಧನ್ಯವಾದಗಳು. ನಾವು ಕಾಂತಾರ ಚಲನಚಿತ್ರವನ್ನು ಇಟಾಲಿಯನ್ ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಎಡಿಟ್ ಮಾಡುತ್ತಿದ್ದೇವೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆʼʼ.ಎಂದು ಇಟಾಲಿಯನ್ ಭಾಷೆಯಲ್ಲಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Rishab Shetty: ಕಾಂತಾರ ಚಿತ್ರದ ಬಳಿಕ ಬೊಮ್ಮಾಯಿಗೆ ರಿಷಬ್ ಶೆಟ್ಟಿ ಮನವಿ ಸಲ್ಲಿಸಿದ್ದೇನು?
ಹೊಂಬಾಳೆ ಫಿಲ್ಮ್ಸ್ ಟ್ವೀಟ್
ಪ್ರಿಕ್ವೆಲ್ ಆಗಿ ಬರಲಿದೆ ಕಾಂತಾರ 2
ಕಾಂತಾರ-1 ಸಿಕ್ವೆಲ್ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್ಗೆ ಬರಲಿದೆ ಎಂದು ರಿಷಬ್ ಖಚಿತಪಡಿಸಿದ್ದಾರೆ.
South Cinema
Ponniyin Selvan: ‘ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಚೆನ್ನೈನಲ್ಲಿ (Ponniyin Selvan) ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.
ಬೆಂಗಳೂರು: ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯನ್ ಸೆಲ್ವನ್-2 (Ponniyin Selvan) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ಮಾರ್ಚ್ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು. ಟ್ರೈಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯನ್ ಸೆಲ್ವನ್ ಕಾದಂಬರಿ ಆಧಾರಿಸಿ ನಿರ್ದೇಶಕ ಮಣಿರತ್ನಂ ಎರಡು ಭಾಗದಲ್ಲಿ ಚಿತ್ರ ತಯಾರಿಸಿದ್ದರು. ಕಳೆದ ವರ್ಷ ರಿಲೀಸ್ ಆಗಿದ್ದ ಮೊದಲ ಭಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಪೊನ್ನಿಯನ್ ಸೆಲ್ವನ್ 500 ಕೋಟಿ ರೂ. ಬಾಚಿ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಲೈಕಾ ಪ್ರೊಡಕ್ಷನ್ ಜತೆಗೂಡಿ ಮಣಿರತ್ನಂ ನಿರ್ಮಿಸಿ ನಿರ್ದೇಶಿಸಿರುವ ಪೊನ್ನಿಯಯನ್ ಸೆಲ್ವನ್-2 ಸೀಕ್ವೆಲ್ ಟ್ರೈಲರ್ ರಿಲೀಸ್ ಆಗಿದ್ದು, ನಿರೀಕ್ಷೆ ನೂರ್ಮಡಿಗೊಳಿಸಿದೆ.
ಚೋಳ ಸಾಮ್ರಾಜ್ಯದ ಗದ್ದುಗೆಗಾಗಿ ನಡೆಯುವ ಹೋರಾಟ, ಪಾಂಡ್ಯ ರಾಜರ ಕುತಂತ್ರ, ಚೋಳ ಸಾಮ್ರಾಜ್ಯ ನಾಶಪಡಿಸಲು ನಂದಿನಿ ಮಾಡುವ ಶಪಥ, ಕರಿಕಾಲನ್ ವೀರಾವೇಶದ ಹೋರಾಟ, ನಂದಿನಿ ಕರಿಕಾಲನ್ ಮುಖಾಮುಖಿಯಾಗುವ ಸನ್ನಿವೇಶ..ಅದ್ಧೂರಿ ಮೇಕಿಂಗ್, ಬೃಹತ್ ಸೆಟ್ಗಳು ಟ್ರೈಲರ್ನಲ್ಲಿ ಝಗಮಗಿಸಿವೆ. ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಪೊನ್ನಿಯನ್ ಸೆಲ್ವನ್-2 ಮೊದಲ ನೋಟ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಡೆದುಕೊಂಡಿದೆ. ಆಸ್ಕರ್ ವಿಜೇತ ಎ ಆರ್ ರೆಹಮಾನ್ ಸಂಗೀತ ಸಿನಿಮಾಕ್ಕಿದೆ.
ಇದನ್ನೂ ಓದಿ: Kamal Haasan: ನಿರ್ದೇಶಕ ಮಣಿರತ್ನಂ ಬಗ್ಗೆ ಅನೇಕರಿಗೆ ಅಸೂಯೆ! ನಟ ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?
`ಪೊನ್ನಿಯನ್ ಸೆಲ್ವನ್-2’ ಟ್ರೈಲರ್ ಔಟ್
ಟ್ರೈಲರ್ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಮಣಿರತ್ನಂ ತಂಡ ಕಟ್ಟಿಕೊಂಡು ಹೊರರಾಜ್ಯಗಳಲ್ಲಿಯೂ ಪ್ರಮೋಷನ್ ಶುರು ಮಾಡಲು ಸಜ್ಜಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಪೊನ್ನಿಯನ್ ಸೆಲ್ವನ್-2 ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರುತ್ತಿದೆ. ಐಶ್ವರ್ಯಾ ರೈ, ತ್ರಿಷಾ, ಕಾರ್ತಿ, ವಿಕ್ರಂ, ಪ್ರಕಾಶ್ ರೈ, ಶರತ್ ಕುಮಾರ್, ಜಯಂರವಿ, ಐಶ್ವರ್ಯ ಲಕ್ಷ್ಮೀ, ಶೋಭಿತಾ ಧುಲಿಪಾಲ, ಪ್ರಭು ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.
South Cinema
Kajal Aggarwal: ಹೊಸ ಫೋಟೊಶೂಟ್ನಲ್ಲಿ ಮಿಂಚಿದ ಕಾಜಲ್ ಅಗರ್ವಾಲ್
ನಟಿ ಕಾಜಲ್ ಅಗರ್ವಾಲ್ (Kajal Aggarwal) ಹೊಸ ಫೋಟೊಶೂಟ್ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ನಟಿ ಕಾಜಲ್ ಅಗರ್ವಾಲ್ ಹೊಸ ಫೋಟೊಶೂಟ್ನಲ್ಲಿ ಮಿಂಚಿದ್ದಾರೆ. ಸುಂದರವಾದ ಹಸಿರು ಹೂವಿನ ಪ್ರಿಂಟೆಡ್ ಬಟ್ಟೆಗಳಿಂದ ಕಂಗೊಳಿಸಿದ್ದಾರೆ.
ಕಾಜಲ್ನ ಬ್ರೇಲೆಟ್ ಮತ್ತು ಪ್ಯಾಂಟ್ಗಳು ಸೊಗಸಾದ ಕಪ್ಪು ಮತ್ತು ಬಿಳಿ ಪ್ರಿಂಟೆಡ್ ಒಳಗೊಂಡಿದೆ.
ಈ ಸರಳವಾದ ಉಡುಗೆಗೆ ಸೊಗಸಾದ ಕೇಶವಿನ್ಯಾಸ, ಮೇಕ್ಅಪ್ ಸಿಂಪಲ್ ಆಗಿ ಕಾಣುತ್ತಿದ್ದು, ಅವರ ಅಭಿಮಾನಿಗಳು ಕಮೆಂಟ್ ಮೂಲಕ ಸಂತಸ ಹೊರಹಾಕಿದ್ದಾರೆ.
ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾದಲ್ಲಿ ನಟಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಆರಂಭ ಆಗಿದೆ.
ಕಾಜಲ್ ಅಗರ್ವಾಲ್ ಅವರು ಕೆಲವು ವರ್ಷಗಳ ಹಿಂದೆ ಗೌತಮ್ ಅವರನ್ನು ಮದುವೆ ಆದರು. ದಂಪತಿಗೆ ನೀಲ್ ಹೆಸರಿನ ಮಗು ಇದೆ.
South Cinema
Vijay Sethupathi: ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ ಪೋಸ್ಟರ್ ಔಟ್: ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್?
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್ ಮಾಡಲಾಗಿದೆ ಎಂತಲೂ ವರದಿಯಾಗಿದೆ.
ಸಿದ್ದರಾಮಯ್ಯ ಅವರು ಬಯೋಪಿಕ್ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್ ಆಗಿದೆ.
ಇದನ್ನೂ ಓದಿ: Tamannaah : `ಸಾಕ್ಷಾತ್ಕಾರ’ದ ನಟಿ ಜಮುನಾ ಬಯೋಪಿಕ್ನಲ್ಲಿ ಮಿಲ್ಕಿ ಬ್ಯೂಟಿ?
ಸಿನಿಮಾದಲ್ಲಿ ರಾಜಕೀಯ. ಹಾಗೆಯೇ, ಲವ್ ಸ್ಟೋರಿ ಎಳೆಯೂ ಇರಲಿದೆ. ಸಿದ್ದರಾಮಯ್ಯ ಅವರು ಹೇಳಿದ ಕಥೆಗಳ ಜತೆಗೆ ಸಿನಿಮಾವನ್ನು ಕಮರ್ಷಿಯಲ್ ಆಗಿ ಮಾಡಲಾಗುತ್ತಿದೆ. 50 ಕೋಟಿ ರೂ. ಬಜೆಟ್ನಲ್ಲಿ ಚಿತ್ರ ಮೂಡಿ ಬರಲಿದೆ ಎಂದು ವರದಿಯಾಗಿದೆ. ಹಯಾತ್ ಫೀರ್ ನಿರ್ಮಾಣದ ಈ ಸಿನಿಮಾಗೆ ಸತ್ಯ ರತ್ನಂ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.
South Cinema
Mrunal Thakur: ಆರಂಭದಲ್ಲಿ ನಟನೆಗೆ ನನ್ನ ಕುಟುಂಬ ಬೆಂಬಲಿಸಲಿಲ್ಲ: ಮೃಣಾಲ್ ಠಾಕೂರ್
ಮೃಣಾಲ್ ಠಾಕೂರ್ (Mrunal Thakur) ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿದ್ದಾರೆ. ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ಸೀತಾ ರಾಮಂ ಸಿನಿಮಾ ಖ್ಯಾತಿಯ ಮೃಣಾಲ್ ಠಾಕೂರ್ (Mrunal Thakur) ಮಾರ್ಚ್ 30ರಂದು ನವದೆಹಲಿಯಲ್ಲಿ ರೈಸಿಂಗ್ ಇಂಡಿಯಾ ಶೋದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ, ತಾನು ನಟಿಯಾಗುವ ಆರಂಭದಲ್ಲಿ ಕುಟುಂಬವು ಬೆಂಬಲ ನೀಡಲಿಲ್ಲ ಎಂದು ನಟಿ ಬಹಿರಂಗಪಡಿಸಿದರು.
ಮೃಣಾಲ್ ಠಾಕೂರ್ ತಮ್ಮ ಸಿನಿ ಜರ್ನಿ ಕುರಿತು ಮಾತನಾಡಿ ʻʻನಾನು ನನ್ನ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ಆರಂಭದಲ್ಲಿ ನನಗೆ ಅವರ ಬೆಂಬಲವಿರಲಿಲ್ಲ, ಏಕೆಂದರೆ ಅವರು ಮುಂದೆ ಏನಾಗಬಹುದು ಎಂದು ಹೆದರುತ್ತಿದ್ದರು, ಅವರಿಗೆ ಮನರಂಜನಾ ಉದ್ಯಮದ ಬಗ್ಗೆ ಸ್ವಲ್ಪ ಭಯ ಇತ್ತು. ನನಗೆ ಒಳ್ಳೆಯ ಪಾತ್ರಗಳು ಸಿಗುತ್ತವೆಯೋ ಇಲ್ಲವೋ ಎಂಬುದರ ಬಗ್ಗೆ ಕೂಡ. ಮೊದಲಿಗೆ, ನಾನು ದೂರದರ್ಶನದಲ್ಲಿ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ತದನಂತರ ನಾನು ಮರಾಠಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ.
ಮಾತು ಮುಂದುವರಿಸಿ “ನಾನು ಮಹಾರಾಷ್ಟ್ರದವಳಾಗಿರುವುದರಿಂದ ನನ್ನ ಕುಟುಂಬವು, ಸಿಬ್ಬಂದಿ ಮತ್ತು ತಂಡವನ್ನು ಭೇಟಿಯಾದಾಗ, ಸಿನಿಮಾ ಬಗ್ಗೆ ತಿಳಿದಾಗ, ತುಂಬಾ ಹೆಮ್ಮೆಪಟ್ಟರು. ತದನಂತರ ಲವ್ ಸೋನಿಯಾ ಸಿನಿಮಾಗೆ ಎಂಟ್ರಿ ಕೊಟ್ಟೆ. ಚಿತ್ರ ಬಿಡುಗಡೆಗೂ ಮುನ್ನ ‘ಮೃಣಾಲ್, ಮುಂದಿನ ಸ್ಮಿತಾ ಪಾಟೀಲ್ ನೀವೇ ಎಂಬ ಸುದ್ದಿ ಹರಿದಾಡಿತು. ನನಗೆ ಸ್ಮಿತಾ ಪಾಟೀಲ್ ದೇವತೆ. ನಾನು ಅವರನ್ನು ಆರಾಧಿಸುತ್ತೇನೆ, ನಾನು ಅವರ ಎಲ್ಲಾ ಸಿನಿಮಾಗಳ ಅಧ್ಯಯನ ಮಾಡಿದ್ದೇನೆ. ಹಾಗಾಗಿ ಮರಾಠಿ ಹುಡುಗಿಗೆ ಇದು ತುಂಬಾ ದೊಡ್ಡ ಮೆಚ್ಚುಗೆಯಾಗಿದೆ. ಈಗ ನನ್ನ ಮನೆಯವರು ಹೇಳುತ್ತಾರೆ, ‘ಮೃಣಾಲ್, ನಾವು ನಿನ್ನ ಬಗ್ಗೆ ಹೆಮ್ಮೆಪಡುತ್ತೇವೆ. ನೀನು ಯಾವುದೇ ಸಿನಿಮಾದ ಭಾಗವಾಗಲು ಆರಿಸಿಕೊಂಡರೂ, ಪ್ರೇಕ್ಷಕರು ಅದರಿಂದ ಏನನ್ನಾದರೂ ಕಲಿಯುತ್ತಾರೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದಿದ್ದರು. ಒಬ್ಬ ನಟಿಯಾಗಿ ಈ ಸಮಾಜವನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಇದು ನನ್ನ ಸಣ್ಣ ಪ್ರಯತ್ನʼʼಎಂದರು.
ಇದನ್ನೂ ಓದಿ: Actress Mrunal Thakur : ಮದುವೆಗೆ ಸಿದ್ಧವೆಂದ ಅಭಿಮಾನಿಗೆ ಕ್ಯೂಟ್ ಆಗಿ ಉತ್ತರಿಸಿದ ಮೃಣಾಲ್
ಕೆಲಸದ ಮುಂಭಾಗದಲ್ಲಿ, ವರ್ಧನ್ ಕೇತ್ಕರ್ ಅವರ ಮರ್ಡರ್-ಮಿಸ್ಟರಿ ಗುಮ್ರಾದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಎಪ್ರಿಲ್ 7ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಆದಿತ್ಯ ರಾಯ್ ಕಪೂರ್, ರೋನಿತ್ ರಾಯ್, ವೇದಿಕಾ ಪಿಂಟೋ, ದೀಪಕ್ ಕಲ್ರಾ ಮತ್ತು ಮೋಹಿತ್ ಆನಂದ್ ರಾಜಿ ಬಹು ತಾರಾಗಣ ಹೊಂದಿದೆ.
-
ಕರ್ನಾಟಕ16 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್17 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ13 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್14 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ14 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್11 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ15 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ15 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!