Kantara Movie | ಕಿರುತೆರೆಗೆ ಬಂತು ಕಾಂತಾರ: ಇಲ್ಲಿದೆ ಪ್ರೋಮೊ! - Vistara News

ಸಿನಿಮಾ

Kantara Movie | ಕಿರುತೆರೆಗೆ ಬಂತು ಕಾಂತಾರ: ಇಲ್ಲಿದೆ ಪ್ರೋಮೊ!

ಕೆಲವೇ ದಿನಗಳಲ್ಲಿ ‘ಕಾಂತಾರ’ (Kantara Movie ) ಟಿವಿಯಲ್ಲಿ ಪ್ರಸಾರವಾಗಲಿದ್ದು, ಈ ಕುರಿತಾಗಿ ಪ್ರೋಮೊ ಪ್ರಸಾರವಾಗಿದೆ. ಅಮೆಜಾನ್ ಹಾಗೂ ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು ಅಲ್ಲಿಯೂ ಒಳ್ಳೆಯ ಪ್ರದರ್ಶನ ಕಂಡಿದೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಿಷಬ್‌ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ʻಕಾಂತಾರʼ ಸಿನಿಮಾ (Kantara Movie) ವಿಶ್ವಾದ್ಯಂತ ಗಮನ ಸೆಳೆದಿದೆ. ಇದೀಗ ಟಿವಿಯಲ್ಲಿ ಪ್ರಸಾರವಾಗಲಿದೆ. ಇನ್ನು ಕೆಲವೇ ದಿನಗಳಲ್ಲಿ ‘ಕಾಂತಾರ’ ಟಿವಿಯಲ್ಲಿ ಪ್ರಸಾರವಾಗಲಿದ್ದು, ಈ ಕುರಿತಾಗಿ ಪ್ರೋಮೊ ಪ್ರಸಾರವಾಗಿದೆ.

ʻಕಾಂತಾರʼ ಸಿನಿಮಾ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರಗೊಳ್ಳಲಿದೆ. ಅತೀ ಶೀಘ್ರದಲ್ಲಿ ನಿಮ್ಮ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ” ಎಂದು ಸುವರ್ಣ ವಾಹಿನಿಯು ತನ್ನ ಇನ್‌ಸ್ಟಾ ಪೇಜ್‌ನಲ್ಲಿ ಶೇರ್‌ ಮಾಡಿಕೊಂಡಿದೆ. ಆದರೆ ಸಿನಿಮಾ ಯಾವ ದಿನ ಪ್ರಸಾರವಾಗಲಿದೆ ಎಂದು ಮಾಹಿತಿ ಹಂಚಿಕೊಂಡಿಲ್ಲ. ಈಗಾಗಲೇ ʻಕಾಂತಾರ’ ಸಿನಿಮಾದ ಟೀಸರ್ ಪ್ರಸಾರವಾಗುತ್ತಿದ್ದು, ಅಭಿಮಾನಿಗಳು ಸಿನಿಮಾ ನೋಡಲು ಕಾಯುತ್ತಿದ್ದಾರೆʻಕಾಂತಾರ’ ಸಿನಿಮಾವು ಚಿತ್ರಮಂದಿರಗಳಲ್ಲಿ ಸುಮಾರು 400 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಅಮೆಜಾನ್ ಹಾಗೂ ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು ಅಲ್ಲಿಯೂ ಒಳ್ಳೆಯ ಪ್ರದರ್ಶನ ಕಂಡಿದೆ.

ಇದನ್ನೂ ಓದಿ | Kantara Movie | ಆಸ್ಕರ್‌ ಕಣದತ್ತ ಕಾಂತಾರ : ಕಾಂತಾರ-2 ಬಗ್ಗೆ ವಿಜಯ್ ಕಿರಗಂದೂರು ಹೇಳಿದ್ದೇನು?

ಸಿನಿಮಾವನ್ನು ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದು, ಹೊಂಬಾಳೆ ಪ್ರೊಡಕ್ಷನ್‌ನವರು ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ರಿಷಬ್ ಜತೆಗೆ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಇನ್ನೂ ಮುಂತಾದವರು ನಟಿಸಿದ್ದಾರೆ. ರಾಣಾ ದಗ್ಗುಬಾಟಿ, ಧನುಷ್, ಪ್ರಭಾಸ್‌, ಪೃಥ್ವಿರಾಜ್‌ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಸಾಕಷ್ಟು ಜನ ಸ್ಟಾರ್‌ಗಳು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ | Kantara Movie | ಕಾಂತಾರವನ್ನು ಕೊಂಡಾಡಿದ ಬಾಲಿವುಡ್‌ ನಟ ಹೃತಿಕ್ ರೋಷನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading

ಕಿರುತೆರೆ

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Puttakkana Makkalu: ಮುರಳಿ-ಸಹನಾ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದೆ. ಸಹನಾಗೆ ವಿಚ್ಛೇದನ ಬೇಕು, ಮುರಳಿಗೆ ತನ್ನ ತಪ್ಪಿನ ಅರಿವಾಗಿದೆ. ಮುರಳಿ ಜತೆ ಬಾಳಲು ರೆಡಿ ಇಲ್ಲ ಸಹನಾ. ಸಹನಾ ಈಗ ಮನೆ ಬಿಟ್ಟು ಹೋಗಿದ್ದಾಳೆ.ತಾಯಿಗೆ ಎಲ್ಲಿ ತಾನು ಭಾರವಾಗುತ್ತೇನೋ ಎಂದು ಸಹನಾ ಮನೆಯಿಂದ ಆಚೆ ನಡೆದಿದ್ದಾಳೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

VISTARANEWS.COM


on

Puttakkana makkalu sahana dead
Koo
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಪುಟ್ಟಕನ ಮಕ್ಕಳುʼ (Puttakkana Makkalu) ಸತತ ಎರಡನೇ ವಾರ ಒಳ್ಳೆಯ ಟಿಆರ್‌ಪಿ ಕಂಡಿದೆ. ಸದ್ಯ ಪುಟ್ಟಕ್ಕನ ಮಗಳು ಸಹನಾ ಮನೆ ಬಿಟ್ಟು ಹೋಗಿದ್ದಾಳೆ.

ಸಹನಾ ಶವ ಪತ್ತೆ ಆಗಿದೆ, ಎಲ್ಲರೂ ಮನೆ ಮಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

ಬಾಳಬೇಕಾದ ಮಗಳು ಶವವಾಗಿ ಮಲಗಿರೋದು ನೋಡಿ ಪುಟ್ಟಕ್ಕ ಅಳುತ್ತಿದ್ದಾಳೆ. ಸಹನಾ ಅಂತ್ಯಸಂಸ್ಕಾರ ಮುಗಿದಿದೆ.

ಮುರಳಿಯಿಂದ ಡಿವೋರ್ಸ್ ಪಡೆದಿರುವ ಸಹನಾ ತವರುಮನೆಗೂ ಕೂಡ ಸ್ವಲ್ಪವೂ ಭಾರವಾಗದೆ, ತನ್ನ ಜೀವನ ತಾನೇ ನಡೆಸಬೇಕು ಅಂತ ಅಂದುಕೊಂಡಿದ್ದಳು. ಹೀಗೆ ಅಂದುಕೊಂಡವಳು ಹೇಗೆ ಶವವಾದಳು. ಆದರೆ ವೀಕ್ಷಕರು ಸಹನಾ ಸತ್ತಿಲ್ಲ ಬದುಕಿದ್ದಾಳೆ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಸಹನಾ ಮುಖ ಪ್ಲಾಸ್ಟಿಕ್‌ ಸರ್ಜರಿ ಆಗರಿಬಹುದೆಂದು ಕಮೆಂಟ್‌ ಮಾಡಿದ್ದಾರೆ!

Continue Reading

ಸಿನಿಮಾ

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Cauvery Theatre: ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ಇಂಡಿಯನ್ (1996) 100 ದಿನ, ಕಾಂತಾರ 50-ದಿನಗಳ ಪ್ರದರ್ಶನ ಕಂಡಿದೆ.

VISTARANEWS.COM


on

Cauvery Theatre bengaluru another single screen close
Koo

ಬೆಂಗಳೂರು: ಒಟಿಟಿ , ಮಲ್ಟಿಪ್ಲೆಕ್ ಇತ್ಯಾದಿ ಕಾರಣಗಳಿಂದ ಇತ್ತೀಚೆಗೆ ಚಿತ್ರಮಂದಿರಗಳು ಮುಚ್ಚುತ್ತಿವೆ. ಕಲೆಕ್ಷನ್ ಕೂಡ ಕಡಿಮೆಯಾಗಿದ್ದು, ಹಲವು ಚಿತ್ರಮಂದಿರಗಳು ಮುಚ್ಚುವ ನಿರ್ಧಾರಕ್ಕೆ ಬಂದಿದೆ. 1974ರ ಜನವರಿ 11ರಂದು ಡಾ. ರಾಜ್‌ಕುಮಾರ್ ನಟನೆಯ ‘ಬಂಗಾರದ ಪಂಜರ’ (Bangarada Panjara) ಸಿನಿಮಾ ಪ್ರದರ್ಶನದ ಮೂಲಕ ʻʻಕಾವೇರಿʼʼ ಚಿತ್ರಮಂದಿರ ಶುರುವಾಗಿತ್ತು. 50 ವರ್ಷದ ಇತಿಹಾಸ ಹೊಂದಿದ್ದ, ಬೆಂಗಳೂರಿನ ಅತಿದೊಡ್ಡ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಸ್ಯಾಂಕಿ ರಸ್ತೆಯ ʻಕಾವೇರಿʼ ಚಿತ್ರಮಂದಿರ ಈಗ ಶಾಶ್ವತವಾಗಿ ಮುಚ್ಚಿದೆ.

ಚಿತ್ರಮಂದಿರ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ಮಾಲೀಕರು ಪ್ರದರ್ಶನ ನಿಲ್ಲಿಸಿದ್ದಾರೆ. ಆ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗಲಿದೆ ಎನ್ನಲಾಗಿದೆ. ಮೆಜೆಸ್ಟಿಕ್‌ನ ʻಕಪಾಲಿʼ ಚಿತ್ರಮಂದಿರದ ನಂತರ ಅತಿ ಹೆಚ್ಚು ಸಿಟ್ಟಿಂಗ್‌ ವ್ಯವಸ್ಥೆ ಇದ್ದ ಈ ಚಿತ್ರಮಂದಿರ ಆರಂಭವಾಗಿದ್ದಾಗ 1300ರಷ್ಟು ಸೀಟುಗಳ ವ್ಯವಸ್ಥೆ ಇತ್ತು. ಜತೆಗೆ ಮಿನಿ ಬಾಲ್ಕನಿ ಇದ್ದ ಕೆಲವೇ ಚಿತ್ರಮಂದಿರಗಳಲ್ಲಿ ಇದೂ ಒಂದಾಗಿತ್ತು.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಪರಭಾಷೆಯ ಸಿನಿಮಾಗಳು ಪ್ರದರ್ಶನ

ಇಲ್ಲಿ ಕನ್ನಡವೂ ಸೇರಿದಂತೆ ಹಿಂದಿ ಹಾಗೂ ಪರಭಾಷೆಯ ಸಿನಿಮಾಗಳು ಪ್ರದರ್ಶನ ಕಾಣುತ್ತಿದ್ದವು. ಡಾ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ಚಿತ್ರಮಂದಿರದಲ್ಲಿ ಸಿನಿಮಾದ ಚಿತ್ರೀಕರಣ ಕೂಡ ನಡೆದಿದೆ. ಪುನೀತ್ ರಾಜ್‌ಕುಮಾರ್ ಅಭಿನಯದ ‘ಪರಮಾತ್ಮ’ ಸಿನಿಮಾದ ಆರಂಭಿಕ ಸೀನ್ ಅನ್ನು ಇಲ್ಲಿಯೇ ಶೂಟಿಂಗ್ ಮಾಡಲಾಗಿತ್ತು.

ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನ ನಡೆಯುತ್ತಿದ್ದು, ಉತ್ತರ ಬೆಂಗಳೂರಿಗರಿಗೆ ಇದೊಂದು ಸಾಂಸ್ಕೃತಿಕ ಸ್ಥಳವೇ ಆಗಿತ್ತು. ‘ಬಂಗಾರದ ಪಂಜರ, ‘ಶಂಕರಾಭರಣಂ’, ‘ದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆ’ ಸಿನಿಮಾಗಳು ಇಲ್ಲಿ 25 ವಾರ ಪ್ರದರ್ಶನ ಕಂಡಿದ್ದವು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ʼಇಂಡಿಯನ್ʼ (1996) 100 ದಿನ, ʼಕಾಂತಾರʼ 50 ದಿನಗಳ ಪ್ರದರ್ಶನ ಕಂಡಿದೆ. ಮುಂದೆ ಇಲ್ಲಿ ವಾಣಿಜ್ಯ ಕಟ್ಟಡ ತಲೆ ಎತ್ತುವ ಸಾಧ್ಯತೆ ಇದೆ. ಅದರಲ್ಲಿ ಮಲ್ಟಿ ಪ್ಲೆಕ್ಸ್‌ ಚಿತ್ರ ಮಂದಿರ ನಿರ್ಮಾಣ ಆಗುವ ಸಾಧ್ಯತೆಯೂ ಇದೆ.

Continue Reading

ಕಿರುತೆರೆ

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Shine Shetty: ಶೈನ್‌ ಶೆಟ್ಟಿ ಅವರು ʻಜಸ್ಟ್‌ ಮ್ಯಾರಿಡ್‌ʼ ಮತ್ತು ʻನಿದ್ರಾದೇವಿ ನೆಕ್ಸ್ಟ್‌ ಡೋರ್‌ʼ ಎಂಬ ಎರಡು ಹೊಸ ಚಿತ್ರಗಳಿಗೆ ನಾಯಕರಾಗಿದ್ದಾರೆ. ಶೈನ್‌ ಶೆಟ್ಟಿ ಬಿಗ್‌ ಬಾಸ್‌ ಮೂಲಕ ಸಖತ್‌ ಫೇಮಸ್‌ ಆಗಿದ್ದರು. ದೀಪಿಕಾ ದಾಸ್‌ ಅವರು ಶೈನ್‌ ಶೆಟ್ಟಿ (Shyne Shetty) ಅವರ ಜತೆ ಬಿಗ್‌ ಬಾಸ್‌ ಮನೆಯಲ್ಲಿ ತುಂಬ ಕ್ಲೋಸ್‌ ಆಗಿದ್ದರು. ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದ ನಂತರವೂ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಜನ ಅಂದುಕೊಳ್ಳುತ್ತಿದ್ದರು.

VISTARANEWS.COM


on

Shine Shetty follows diet and fitness
Koo

ಸ್ಯಾಂಡಲ್‌ವುಡ್‌, ನಟ ಬಿಗ್‌ ಬಾಸ್‌ ವಿಜೇತ, ಕನ್ನಡ ಕಿರುತೆರೆ ಜನಪ್ರಿಯ ನಟ ಶೈನ್ ಶೆಟ್ಟಿ (Shine Shetty) ಕೈಯಲ್ಲಿ ಎರಡು ಬಿಗ್ ಪ್ರಾಜೆಕ್ಟ್ ಸಿನಿಮಾಗಳಿವೆ. ಇದೀಗ ಚಿತ್ರಕ್ಕೆಂದು ಫಿಟ್ನೆಸ್‌ ಬಗ್ಗೆ ಗಮನ ಕೊಟ್ಟಿದ್ದಾರೆ.

ಫಿಟ್‌ ಆಗಿರುವ ಹಾಗೂ ವರ್ಕೌಟ್‌ ಮಾಡಿರುವ ಫೋಟೊಗಳನ್ನು ಶೈನ್‌ ಶೆಟ್ಟಿ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ಸುಮಾರು 11 ದಿನಗಳ ಕಾಲ ಕಠಿಣ ವರ್ಕೌಟ್ ಮತ್ತು ಡಯಟ್ ಫಾಲೋ ಮಾಡಿ ಸಿಕ್ಸ್‌ ಪ್ಯಾಕ್ ಮಾಡಿರುವ ಶೈನ್‌ ಇದೀಗ ರಗಡ್‌ ಆಗಿ ಕಾಣುತ್ತಿದ್ದಾರೆ.

ಶೈನ್‌ ಶೆಟ್ಟಿ ಅವರು ʻಜಸ್ಟ್‌ ಮ್ಯಾರಿಡ್‌ʼ ಮತ್ತು ʻನಿದ್ರಾದೇವಿ ನೆಕ್ಸ್ಟ್‌ ಡೋರ್‌ʼ ಎಂಬ ಎರಡು ಹೊಸ ಚಿತ್ರಗಳಿಗೆ ನಾಯಕರಾಗಿದ್ದಾರೆ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಶೈನ್‌ ಶೆಟ್ಟಿ ಬಿಗ್‌ ಬಾಸ್‌ ಮೂಲಕ ಸಖತ್‌ ಫೇಮಸ್‌ ಆಗಿದ್ದರು. ದೀಪಿಕಾ ದಾಸ್‌ ಅವರು ಶೈನ್‌ ಶೆಟ್ಟಿ (Shyne Shetty) ಅವರ ಜತೆ ಬಿಗ್‌ ಬಾಸ್‌ ಮನೆಯಲ್ಲಿ ತುಂಬ ಕ್ಲೋಸ್‌ ಆಗಿದ್ದರು. ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದ ನಂತರವೂ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಜನ ಅಂದುಕೊಳ್ಳುತ್ತಿದ್ದರು. ಬಿಗ್‌ ಬಾಸ್‌ ಸಂದರ್ಭದಲ್ಲಿ ಈ ಜೋಡಿಗೆ ಜನರೇ ‘ಶಿನಿಕಾ’ ಎಂದು ಹೆಸರಿಟ್ಟು, ತುಂಬಾ ಮುದ್ದಾದ ಜೋಡಿ ಎಂದು ಹೇಳುತ್ತಿದ್ದರು.

Continue Reading
Advertisement
karnataka weather forecast
ಮಳೆ11 mins ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ16 mins ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್20 mins ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ24 mins ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

IPL 2024
ಪ್ರಮುಖ ಸುದ್ದಿ25 mins ago

IPL 2024 : ಧೋನಿ ಡಕ್​ಔಟ್ ಆಗುವಾಗ ಜೋರಾಗಿ ನಕ್ಕ ಪ್ರೀತಿ ಜಿಂಟಾ; ಇಲ್ಲಿದೆ ವಿಡಿಯೊ

couple came to Gangavathi from Dubai to vote
ಕರ್ನಾಟಕ28 mins ago

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election-2024
ದೇಶ32 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು49 mins ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Jasprit Bumrah
ಪ್ರಮುಖ ಸುದ್ದಿ50 mins ago

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ23 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

ಟ್ರೆಂಡಿಂಗ್‌