Kantara Movie | ʻಚಾನ್ಸೇ ಇಲ್ಲ, ನೋ ವೇʼ ಎಂದು ರೆಬೆಲ್‌ ಆಗಿ ಟ್ವೀಟ್‌ ಮಾಡಿದ ರಿಷಬ್‌ ಶೆಟ್ಟಿ: ವೈರಲ್‌ ಆಯ್ತು ಪೋಸ್ಟ್‌! - Vistara News

ಸಿನಿಮಾ

Kantara Movie | ʻಚಾನ್ಸೇ ಇಲ್ಲ, ನೋ ವೇʼ ಎಂದು ರೆಬೆಲ್‌ ಆಗಿ ಟ್ವೀಟ್‌ ಮಾಡಿದ ರಿಷಬ್‌ ಶೆಟ್ಟಿ: ವೈರಲ್‌ ಆಯ್ತು ಪೋಸ್ಟ್‌!

ರಿಷಬ್‌ ಶೆಟ್ಟಿ (Kantara Movie ) ಕನ್ನಡ ಚಿತ್ರರಂಗವನ್ನು ತೊರೆಯುತ್ತಿದ್ದಾರೆ ಎಂಬ ಗಾಸಿಪ್‌ಗಳಿಗೆ‌ ಅವರು ರೆಬೆಲ್ ಆಗಿ ಉತ್ತರ ನೀಡಿದ್ದಾರೆ. ಇದೀಗ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂತಾರ ಸಿನಿಮಾ (Kantara Movie) ಸಕ್ಸೆಸ್‌ ಯಾತ್ರೆಯನ್ನು ಮುಂದುವರಿಸುತ್ತಿದೆ. ಈಗಾಗಲೇ ಬಾಲಿವುಡ್‌, ಕಾಲಿವುಡ್‌, ಟಾಲಿವುಡ್‌ನಲ್ಲಿ ಹೆಸರು ಪಡೆದುಕೊಂಡು ಮಾಲಿವುಡ್‌ಗೆ ಎಂಟ್ರಿ ಕೊಡುತ್ತಿದೆ. ಇದೇ ತಿಂಗಳ 20ಕ್ಕೆ ಸಿನಿಮಾ ಕೇರಳದಲ್ಲಿ ರಿಲೀಸ್‌ ಆಗುತ್ತಿದೆ. ‘ರಿಷಬ್‌ ಶೆಟ್ಟಿ ಕೂಡ ಕನ್ನಡ ಚಿತ್ರರಂಗವನ್ನು ತೊರೆಯುತ್ತಿದ್ದಾರೆ’ ಎಂದು ನೆಟ್ಟಿಗರು ಟ್ವೀಟ್‌ ಮೂಲಕ ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ರಿಷಬ್ ಶೆಟ್ಟಿ ಸ್ಪಷ್ಟನೆಯನ್ನು ನೀಡಿದ್ದು, ರೆಬೆಲ್‌ ಆಗಿ ಉತ್ತರ ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ‘ಕಾಂತಾರ’ ತೆಲುಗು ಸಕ್ಸೆಲ್ ಮೀಟ್ ನಡೆದಿದೆ. ನಿರ್ಮಾಪಕ ಅಲ್ಲು ಅರವಿಂದ್ ಜತೆಗೆ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಭಾಗವಹಿಸಿ ತೆಲುಗು ಪ್ರೇಕ್ಷಕರು ನೀಡಿದ ಪ್ರೀತಿಗೆ ಧನ್ಯವಾದ ತಿಳಿಸಿದರು. ನಿರ್ಮಾಪಕ ಅಲ್ಲು ಅರವಿಂದ್ ಅವರ ರಿಷಬ್ ಶೆಟ್ಟಿ ಜತೆ ತಮ್ಮ ಗೀತಾ ಆರ್ಟ್ಸ್ ಬ್ಯಾನರ್‌ನಲ್ಲಿ ಸಿನಿಮಾ ಮಾಡುವ ಬಗ್ಗೆ ಮಾತನಾಡಿದ್ದೇನೆ, ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಘೋಷಿಸಿದ್ದಾರೆ. ‘ಕಾಂತಾರ’ ಸೀಕ್ವೆಲ್ ಬರುತ್ತದೆ ಎಂದು ಕೆಲವರು ಹೇಳುತ್ತಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ರಿಷಬ್ ಶೆಟ್ಟಿ ಮಾತನಾಡಿ ʻʻಸದ್ಯಕ್ಕೆ ಸೀಕ್ವೆಲ್ ಬಗ್ಗೆ ಯಾವುದೇ ಆಲೋಚನೆ ಇಲ್ಲ. ನಾನೊಂದು ಸಣ್ಣ ಬ್ರೇಕ್ ತೆಗೆದುಕೊಳ್ಳುತ್ತೇನೆ. ಮುಂದೆ ನೋಡಬೇಕು ಯಾವ ಸಿನಿಮಾ ಮಾಡುವುದುʼʼ‌ ಎಂದು ಹೇಳಿದ್ದಾರೆ.

ಆಂಧ್ರ ಬಾಕ್ಸ್‌ ಆಫೀಸ್‌ ಪೇಜ್‌ನಲ್ಲಿ ಈ ಕುರಿತು ಪೊಸ್ಟ್‌ ಹಂಚಿಕೊಂಡಿತ್ತು. ”ಗೀತಾ ಆರ್ಟ್ಸ್‌ ಮೂಲಕ ಅಲ್ಲು ಅರವಿಂದ್‌ ಅವರು ರಿಷಬ್‌ ಶೆಟ್ಟಿ ಜತೆ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದರು. ರಿಷಬ್‌ ಶೆಟ್ಟಿ ಸೀಕ್ವೆಲ್‌ ಬಗ್ಗೆ ಇನ್ನೂ ಏನೂ ಯೋಚನೆ ಮಾಡಿಲ್ಲ. ಹಾಗೆಯೇ ಸಣ್ಣ ಬ್ರೇಕ್‌ ತೆಗೆದುಕೊಳ್ಳಲಿದ್ದೇನೆ ಎಂಬುದಾಗಿ ಹೇಳಿದ್ದಾರೆʼʼ ಎಂದು ಬರೆದುಕೊಂಡಿದೆ.

ಇದನ್ನೂ ಓದಿ | Kantara Movie | ಕಾಂತಾರ ಕಲೆಕ್ಷನ್​ ನೋಡಿ ದೊಡ್ಡ ಬಜೆಟ್​​​ ಸಿನಿಮಾ ನಿರ್ಮಾಪಕರಿಗೆ ಹಾರ್ಟ್‌ ಅಟ್ಯಾಕ್‌: ಆರ್​ಜಿವಿ ಟ್ವೀಟ್​

ಈ ಟ್ವೀಟ್‌ಗೆ ಹಲವಾರು ಚರ್ಚೆಗಳು ಆಗುತ್ತಿದ್ದು, ಒಬ್ಬರು ಟ್ವೀಟ್‌ಗೆ ಕಮೆಂಟ್‌ ಮಾಡಿ ʻʻರಿಷಬ್‌ ಶೆಟ್ಟಿ ಕನ್ನಡ ಚಿತ್ರರಂಗವನ್ನು ತೊರೆಯುತ್ತಿದ್ದಾರೆʼʼಎಂಬರ್ಥದಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ರಿಷಬ್‌ ಶೆಟ್ಟಿ ನಟ ಅಂಬರೀಶ್‌ ಅವರ ಡೈಲಾಗ್‌ನಲ್ಲಿ ʻಚಾನ್ಸೇ ಇಲ್ಲ, ನೋ ವೇʼ ಎಂದು ಆಗಿ ಉತ್ತರ ನೀಡಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದ ಬಗ್ಗೆ ಅವರಿಗಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಕಾಂತಾರ ಸಿನಿಮಾ ವಿಶ್ವಾದ್ಯಂತ 119 ಕೋಟಿ ಗಳಿಸುವ ಮೂಲಕ 100 ಕೋಟಿ ಕ್ಲಬ್‌ ಸೇರಿದ 6ನೇ ಕನ್ನಡ ಚಿತ್ರ ಆಗಿದೆ. ಕಾಂತಾರ ಟಾಲಿವುಡ್‌ನಲ್ಲಿ ಅಬ್ಬರಿಸುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅಭಿನಯದ ʻಗಾಡ್‌ ಫಾದರ್‌ʼ ಸಿನಿಮಾಗೂ ಕೂಡ ಕಾಂತಾರದ ಬಿಸಿ ತಾಗುತ್ತಿದೆ. 

ಇದನ್ನೂ ಓದಿ |Kantara Movie | ಕಂಗನಾಗೆ ಕೆರಳಿದ ಕುತೂಹಲ; ‘ಕಾಂತಾರ ಯಾವಾಗ ನೋಡ್ತೀನೋ’ ಎಂದ ನಟಿ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿದ್ದು, ಹಲವು ಆರೋಪ ಮಾಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಕುಟುಂಬದ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ‌ ಅವರಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಶ್ರೀದೇವಿ ಭೈರಪ್ಪ (Sridevi Byrappa) ಅವರ ಬಗ್ಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬುವರ ಜತೆ ಅಕ್ರಮ ಸಂಬಂಧ ಇದೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

ಯುವ ಕುಟುಂಬವನ್ನು ಕಂಟ್ರೋಲ್‌ ಮಾಡಲು ಯತ್ನ

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

3 ಕೋಟಿ ರೂ. ಅಕ್ರಮ ವರ್ಗಾವಣೆ

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Continue Reading

ಸ್ಯಾಂಡಲ್ ವುಡ್

Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

Chandan Shetty: ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

VISTARANEWS.COM


on

Chandan Shetty Niveditha gowda roumers on srujan lokesh
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡಿದ್ದರು. ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಾಗಿ ನಮಗೆ ಶೋಭೆ ಅಲ್ಲ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದುʼʼಎಂದರು ಚಂದನ್‌.

ಇನ್ನು ನಿವೇದಿತಾ ಕೂಡ ʻʻಆ ರೀತಿಯ ಪೋಸ್ಟ್​ಗಳನ್ನು ನೋಡಿದಾಗ ನನಗೆ ನೋವಾಯಿತು. ನಾವೆಲ್ಲ ಫ್ಯಾಮಿಲಿ ಫ್ರೆಂಡ್ಸ್​. ಪ್ರತಿ ವರ್ಷ ಅವರು ನನ್ನ ಜನ್ಮದಿನಕ್ಕೆ ವಿಶ್​ ಮಾಡುತ್ತಾರೆ. ನಾನು ಕೂಡ ಅವರಿಗೆ ವಿಶ್​ ಮಾಡುತ್ತೇನೆ. ಈ ವರ್ಷವೇ ಈ ರೀತಿ ವದಂತಿ ಹಬ್ಬಿದ್ದು ಯಾಕೆ ಅಂತ ಗೊತ್ತಿಲ್ಲ. ಇದರಿಂದ ಅವರ ಫ್ಯಾಮಿಲಿಯವರಿಗೆ ತುಂಬ ನೋವಾಗುತ್ತದೆ. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಇದನ್ನೂ ಓದಿ: Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading

ಸಿನಿಮಾ

Chandan Shetty: ನಮ್ಮ ಖುಷಿ ಮೇಲೆ ಪ್ರಶಾಂತ್‌ ಸಂಬರಗಿ ಕಣ್ಣು; ಟಾಂಗ್‌ ಕೊಟ್ಟ ಚಂದನ್‌ ಶೆಟ್ಟಿ

Chandan Shetty: ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

VISTARANEWS.COM


on

Chandan Shetty reaction about prashant sambaragi statement on divorce
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದಾದ ಬಳಿಕ ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

“ಮಾಧ್ಯಮಗಳಲ್ಲಿ ಮೂರನೇ ವ್ಯಕ್ತಿ ನಮ್ಮ ಸಂಬಂಧದ ಬಗ್ಗೆ ಕೊಟ್ಟಿರುವ ಹೇಳಿಕೆ ನಿಜವಲ್ಲ. ಇದು ನಮ್ಮ ವೈಯಕ್ತಿಕ ಜೀವನ. ನಾವಿಬ್ರು ಖುಷಿಯಾಗಿರಬೇಕು ಎಂದೇ ದೂರ ಆಗಿರುವುದು. ಆದರೆ ಆ ವ್ಯಕ್ತಿ ನಮ್ಮ ಖುಷಿ ನೋಡುವುದಕ್ಕೆ ಆಗ್ತಿಲ್ಲ ಅನ್ನಿಸುತ್ತದೆ. ನಮ್ಮ ಜೋಡಿ ನೋಡಿ ಎಲ್ಲರೂ ಖುಷಿ ಪಡ್ತಾ ಇದ್ದರು. ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಳು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಪ್ರಶಾಂತ್‌ ಸಂಬರಗಿ ಹೇಳಿದ್ದೇನು?

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದಿದ್ದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದಿದ್ದರು.

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದರು.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದಿದ್ದರು ಪ್ರಶಾಂತ್‌ ಸಂಬರಗಿ.

Continue Reading

ಸಿನಿಮಾ

Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Yuva Rajkumar: Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಇದರ ಮಧ್ಯೆಯೇ, ಶ್ರೀದೇವಿ ಭೈರಪ್ಪ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಅವರ ಕುಟುಂಬದ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವ ಪ್ರಕರಣ ಭಾರಿ ಸುದ್ದಿಯಾಗಿದೆ. ಇದರ ಬೆನ್ನಲ್ಲೇ, ಡಿವೋರ್ಸ್‌ ನೋಟಿಸ್‌ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ವಿಚ್ಛೇದನದ ಕುರಿತು ನೋಟಿಸ್‌ ಸಿಕ್ಕಿಲ್ಲ. ನೋಟಿಸ್‌ ಸಿಕ್ಕ ಬಳಿಕ ಉತ್ತರಿಸುವೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ್ದಾರೆ.

“ವಿಷಯ ಏನೆಂದು ಚಿತ್ರರಂಗ ಹಾಗೂ ಮಾಧ್ಯಮದಲ್ಲಿ ಅನೇಕರಿಗೆ ತಿಳಿದಿದೆ. ನಾನು ಈಗಾಗಲೇ ಲೀಗಲ್‌ ನೋಟಿಸ್‌ಗೆ ಉತ್ತರ ನೀಡಿದ್ದೇನೆ. ವಿಚ್ಛೇದನ ಅರ್ಜಿಯು ಇನ್ನೂ ನನಗೆ ತಲುಪಿಲ್ಲ. ಸಿಕ್ಕಾಗ ನ್ಯಾಯಾಲಯಕ್ಕೆ ಉತ್ತರಿಸುತ್ತೇನೆ. ಸದ್ಯಕ್ಕೆ ನಾನು ಬೇರೇನೂ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ನೀವೆಲ್ಲರೂ ಇದನ್ನು ಅರ್ಥ ಮಾಡಿಕೊಂಡು ನನ್ನ ಹಾಗೂ ನನ್ನ ಕುಟುಂಬದ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸಿದ್ದೇನೆ” ಎಂಬುದಾಗಿ ಶ್ರೀದೇವಿ ಬೈರಪ್ಪ ಅವರು ಡಿವೋರ್ಸ್‌ ನೋಟಿಸ್‌ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ, ಅವರು ಅಮೆರಿಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀದೇವಿ ತಂದೆ ಭೈರಪ್ಪ ಹೇಳಿದ್ದಿಷ್ಟು

ಮೈಸೂರಿನಲ್ಲಿ ಬಿ. ಭೈರಪ್ಪ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದರು. “ಯುವ ರಾಜ್‌ಕುಮಾರ್‌ ಹಾಗೂ ಶ್ರೀದೇವಿ ಪ್ರೀತಿಸಿ ಮದುವೆಯಾಗಿದ್ದರು. ನನ್ನ ಮಗಳನ್ನು ಅವರೇ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಕಳುಹಿಸಿದ್ದರು. ವಿದ್ಯಾಭ್ಯಾಸ ಮುಗಿಸಿ ಬಂದ ಬಳಿಕ ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ. ವಿಚ್ಛೇದನದ ಬಗ್ಗೆ ನಮಗೆ ಮೊದಲೇ ಗೊತ್ತಿತ್ತು” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಮಾವ ಬಿ.ಭೈರಪ್ಪ ತಿಳಿಸಿದ್ದಾರೆ.

“ಯುವ ರಾಜ್‌ಕುಮಾರ್‌ ಮೈಸೂರಿಗೆ ಬಂದಿದ್ದ. ಆದರೆ, ಇದರ ಬಗ್ಗೆ ಆತ ಯಾವುದೇ ಮಾತನಾಡಿರಲಿಲ್ಲ. ಶ್ರೀದೇವಿ, ವಿಚ್ಛೇದನದ ಕುರಿತು ಮಾತನಾಡಿರಲಿಲ್ಲ. ಈಗ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾನೆ. ನಾವು ಕೂಡ ಕಾನೂನಿನ ಮೂಲಕ ಉತ್ತರ ನೀಡುತ್ತೇವೆ” ಎಂದು ಭೈರಪ್ಪ ಹೇಳಿದ್ದಾರೆ.

ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ. ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯವು ಜುಲೈ 4ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ: Yuva Rajkumar: ಯುವ-ಶ್ರೀದೇವಿ ಡಿವೋರ್ಸ್‌ ಬಗ್ಗೆ ಮೊದಲೇ ಗೊತ್ತಿತ್ತು; ಶ್ರೀದೇವಿ ತಂದೆ ಭೈರಪ್ಪ ಹೇಳಿಕೆ

Continue Reading
Advertisement
Stabbing Case
ಕರ್ನಾಟಕ6 mins ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ21 mins ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ1 hour ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ1 hour ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು2 hours ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

World Environment Day celebration in Banavasi
ಉತ್ತರ ಕನ್ನಡ2 hours ago

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Vinay Kulkarni
ಕರ್ನಾಟಕ3 hours ago

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

Modi 3.0 Cabinet
ಪ್ರಮುಖ ಸುದ್ದಿ3 hours ago

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Students Fashion
ಫ್ಯಾಷನ್3 hours ago

Students Fashion: ಕಾಲೇಜು ಹುಡುಗಿಯರ ಫ್ಯಾಷನ್‌ ಲಿಸ್ಟ್‌ಗೆ ಸೇರಿದ ಮಾರ್ಬಲ್‌ ಪ್ರಿಂಟೆಡ್‌ ಕ್ರಾಪ್‌ ಟಾಪ್ಸ್!

Suresh Gopi
ದೇಶ3 hours ago

Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌