Kantara Movie | ನಟ ಅನುಪಮ್‌ ಖೇರ್‌ ಜತೆ ರಿಷಬ್‌ ಶೆಟ್ಟಿ: ನಿರ್ದೇಶಕ ಮಧುರ್ ಭಂಡಾರ್ಕರ್ ಹೇಳಿದ್ದೇನು? - Vistara News

ಸಿನಿಮಾ

Kantara Movie | ನಟ ಅನುಪಮ್‌ ಖೇರ್‌ ಜತೆ ರಿಷಬ್‌ ಶೆಟ್ಟಿ: ನಿರ್ದೇಶಕ ಮಧುರ್ ಭಂಡಾರ್ಕರ್ ಹೇಳಿದ್ದೇನು?

ರಿಷಬ್‌ ಅವರು ಅನುಪಮ್‌ ಖೇರ್‌ (Kantara Movie ) ಅವರನ್ನು ಭೇಟಿ ಮಾಡಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Kantara Movie) ದೆಹಲಿ ಪ್ರವಾಸದಲ್ಲಿ ಇದ್ದಾರೆ. ಕಾರ್ಯಕ್ರಮವೊಂದರಲ್ಲಿ ʻಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ನಟ ಅನುಪಮ್‌ ಖೇರ್‌ ಜತೆ ರಿಷಬ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಿಷಬ್‌ ಅವರು ಅನುಪಮ್‌ ಖೇರ್‌ ಅವರನ್ನು ಭೇಟಿ ಮಾಡಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ನೆಟ್ಟಿಗರು ʻಇಬ್ಬರೂ ಒಟ್ಟಿಗೆ ಕೆಲಸ ಮಾಡುವ ಸಾಧ್ಯತೆ ಇದೆಯಾ’ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಿಷಬ್‌ ಶೆಟ್ಟಿ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು ʻʻಎಲ್ಲರನ್ನೂ ನಗಿಸುವ ಅದ್ಭುತ ಮನುಷ್ಯ. ನಿಮ್ಮೊಂದಿಗೆ ಕಳೆದ ಸಂಜೆ ಅದ್ಭುತವಾಗಿತ್ತು’ ಎಂದು ಬರೆದುಕೊಂಡಿದ್ದಾರೆ. ಇದನ್ನು ಅನುಪಮ್‌ ಖೇರ್‌ ರಿಟ್ವೀಟ್‌ ಮಾಡಿದ್ದಾರೆ. ಫೋಸ್ಟ್‌ ನೋಡಿ ರಿಷಬ್‌ ಅಭಿಮಾನಿಗಳು ರಿಷಬ್‌ ಅವರ ನಗುವನ್ನು ಹೊಗಳಿದ್ದಾರೆ. ರಿಷಬ್‌ ಅವರ ಬಟ್ಟೆಯ ಬಗ್ಗೆ ಪಾಸಿಟಿವ್‌ ಕಮೆಂಟ್‌ಗಳನ್ನು ನೀಡುತ್ತಿದ್ದಾರೆ. ʻಅಷ್ಟು ದೊಡ್ಡ ಕಾರ್ಯಕ್ರಮದಲ್ಲಿ ರಿಷಬ್‌ ಅವರ ಸರಳತೆ ಇಷ್ಟವಾಯಿತುʼ ಎಂದು ರಿಷಬ್‌ ಅಭಿಮಾನಿಗಳು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Kantara Movie | ಬೆಂಗಳೂರು ನಗರವೊಂದರಲ್ಲಿಯೇ 20 ಸಾವಿರ ಪ್ರದರ್ಶನ: ದಾಖಲೆ ಬರೆದ ʻಕಾಂತಾರʼ!

ಅದೇ ರೀತಿ ನಿರ್ದೇಶಕ ಮಧುರ್ ಭಂಡಾರ್ಕರ್ ಅವರನ್ನು ರಿಷಬ್‌ ಭೇಟಿಯಾಗಿದ್ದಾರೆ. ಮಧುರ್ ಭಂಡಾರ್ಕರ್ ಟ್ವೀಟ್‌ನಲ್ಲಿ ರಿಷಬ್‌ ಅವರ ಜತೆ ಇರುವ ಫೋಟೊ ಶೇರ್‌ ಮಾಡಿಕೊಂಡು ʻʻರಿಷಬ್‌ ಶೆಟ್ಟಿ ಅವರು ಅತ್ಯಂತ ಸರಳ, ಡೌನ್ ಟು ಅರ್ಥ್‌ ಮತ್ತು ವಿನಮ್ರ ವ್ಯಕ್ತಿ. ಅವರ ಜತೆ ದೆಹಲಿಯಲ್ಲಿ ಸಂವಾದ. ಡಿವೈನ್ ಬ್ಲಾಕ್ ಬಸ್ಟರ್ ಕಾಂತಾರ ಸಿನಿಮಾದ ನಿರ್ದೇಶನ ಮತ್ತು ಅವರ ನಟನೆ ಅದ್ಭುತವಾಗಿದೆʼʼ ಎಂದು ಬರೆದುಕೊಂಡಿದ್ದಾರೆ. 

ಈಗಾಗಲೇ ಕಾಂತಾರ ಸಿನಿಮಾ ಒಟಿಟಿಯಲ್ಲಿ ಲಗ್ಗೆ ಇಟ್ಟಿದೆ. ಸಿನಿಪ್ರೇಮಿಗಳು ಕಾಂತಾರ ಸಿನಿಮಾವನ್ನು ಕಣ್ತುಂಬಿಸಿಕೊಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಒಟಿಟಿಯಲ್ಲಿ ಸಿನಿಮಾ ಬಂದರೂ ಹಲವು ಚಿತ್ರಮಂದರಿಗಳಲ್ಲಿ ಸಿನಿಮಾ ನೋಡುತ್ತಿದ್ದಾರೆ ಪ್ರೇಕ್ಷಕರು.

ಇದನ್ನೂ ಓದಿ | Kantara Movie | ವರಾಹ ರೂಪಂ ಕೇಸಿನಲ್ಲಿ ಮೊದಲ ಯಶಸ್ಸು: ಹಾಡು ಬಳಸಲು ಅನುಮತಿ, ಆದರೆ ಷರತ್ತುಗಳು ಅನ್ವಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

koti kannada movie : “ಕೋಟಿ ಸಿನಿಮಾದಲ್ಲಿ ‘ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟದ ಹಾಡು. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳ‌ಲ್ಲಿ ಬದುಕುವ ಎಲ್ಲರಿಗೂ ತುಂಬಾ ರಿಲೇಟೆಬಲ್ ಆಗಲಿದೆ ” ಎಂದು ಕೋಟಿಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟಿದ್ದಾರೆ.

VISTARANEWS.COM


on

koti kannada movie
Koo

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ (koti kannada movie) ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.

ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ ಹಾಡಿನ ಬಗ್ಗೆ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ಎಕ್ಸೈಂಟಿಂಗ್ ಮತ್ತು ಚಾಲೆಂಜಿಂಗ್ ಆಗಿತ್ತು. ಸಖತ್ ಮಜಾ ಮಾಡಿದೀನಿ ಈ ಹಾಡನ್ನು ಮಾಡುವ ಪ್ರಕ್ರಿಯೆಯಲ್ಲಿ” ಎಂದು ಹೇಳಿದರು.

“ಕೋಟಿ ಸಿನಿಮಾದಲ್ಲಿ ‘ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟದ ಹಾಡು. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳ‌ಲ್ಲಿ ಬದುಕುವ ಎಲ್ಲರಿಗೂ ತುಂಬಾ ರಿಲೇಟೆಬಲ್ ಆಗಲಿದೆ ” ಎಂದು ಕೋಟಿಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

ತಾರಾಗಣ ಇಂತಿದೆ

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಪ್ರಮುಖ ಸುದ್ದಿ

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

Udho Udho Shri Renuka Yellamma: ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು.

VISTARANEWS.COM


on

Udho Udho Shri Renuka Yellamma
Koo

ಬೆಂಗಳೂರು: ಕನ್ನಡ ಕಿರುತೆರೆ ಕ್ಷೇತ್ರದ ಜನಪ್ರಿಯ ವಾಹನಿ ಸ್ಟಾರ್ ಸುವರ್ಣ ತನ್ನ ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನಿರಂತರವಾಗಿ ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” (Udho Udho Shri Renuka Yellamma) ಧಾರಾವಾಹಿ ಪ್ರೇಕ್ಷಕರ ಮನಗೆದ್ದು ಯಶಸ್ಸಿನಿಂದ ಸಾಗುತ್ತಿದೆ. ಇದೀಗ “ಸಮಯದ ಕುದುರೆಯನ್ನೇರಿ ಉರುಳಿವೆ ಋತುಗಳು” ಆರಂಭಗೊಂಡಿದ್ದು. ಇನ್ಮುಂದೆ ಹೊಸ ಅಧ್ಯಾಯದೊಂದಿಗೆ ಧಾರಾವಾಹಿಯಲ್ಲಿ ಅನೇಕ ರೋಚಕ ತಿರುವುಗಳು ವೀಕ್ಷಕರಿ ಮನ ಸೆಳೆಯಲಿದೆ.

ಅಪ್ಪಟ ಕನ್ನಡ ಮಣ್ಣಿನ ಪೌರಾಣಿಕ ಕಥಾವಸ್ತುವನ್ನಿಟ್ಟುಕೊಂಡು ಶುರುವಾದ ಈ ಧಾರಾವಾಹಿ ಆರಂಭದಿಂದಲೂ ಕಿರುತೆರೆಯಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿತ್ತು. ರೇಣುಕೆ ಹಾಗು ಯಲ್ಲಮ್ಮನ ಪಾತ್ರಕ್ಕೆ ಜೀವ ತುಂಬಿದ ಮಕ್ಕಳು ಅದ್ಭುತವಾಗಿ ನಟಿಸಿ ಕರುನಾಡಿನ ಮನೆಮಾತಾಗಿದ್ದರು. ಆದರೆ ಇದೀಗ ಕಥೆಯಲ್ಲಿ ವರ್ಷಗಳುರುಳಿ ರೇಣುಕಾ-ಯಲ್ಲಮ್ಮ ಬಾಲ್ಯದಿಂದ ತಾರುಣ್ಯದ ಕಡೆಗೆ ಕಾಲಿಡುತ್ತಿದ್ದಾರೆ. ಹೀಗಾಗಿ ಕಥೆಯಲ್ಲಿನ ರೋಚಕತೆ ಹೆಚ್ಚಾಗಿದೆ.

ಬಾಲ್ಯದಿಂದಲೂ ಕಷ್ಟಗಳನ್ನೇ ಎದುರಿಸುತ್ತಾ ಬಂದಿರುವ ರೇಣುಕಾ-ಯಲ್ಲಮ್ಮರ ಬಾಳಿನಲ್ಲಿ 10 ವರ್ಷಗಳ ಬಳಿಕ ಏನೆಲ್ಲಾ ಆಗಲಿದೆ ? ದುಷ್ಟರಿಂದ ಇನ್ನೆಷ್ಟು ಕಷ್ಟಗಳನ್ನು ಎದುರಿಸಬೇಕಾಗಬಹುದು? ಇವರಿಬ್ಬರ ಬಾಳಿನಲ್ಲಿ ಪ್ರೀತಿಯ ಹೂವು ಅರಳಲಿದೆಯೇ ? ರೇಣುಕಾ ಹಾಗು ಜಮದಗ್ನಿಯ ವಿವಾಹವು ಯಾವಾಗ ? ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಸಂಹಾರಕ್ಕಾಗಿ ದೇವಿ ಅಂಶದ ಎರಡು ಶಕ್ತಿಗಳು ಒಂದಾಗಿ ಕಷ್ಟ ಕೋಟಲೆಗಳನ್ನು ಹೇಗೆ ಎದುರಿಸುತ್ತಾರೆ? ಎಂಬುದು ಈ ಧಾರಾವಾಹಿಯ ಮುಂದಿನ ರೋಚಕ ಕಥಾಹಂದರ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಈಗಾಗಲೇ ನೂತನ ಅಧ್ಯಾಯದ ಚಿತ್ರೀಕರಣ ಶುರುವಾಗಿದ್ದು, ರೇಣುಕೆಯಾಗಿ ಮಹತಿ, ಯಲ್ಲಮ್ಮನ ಪಾತ್ರದಲ್ಲಿ ಅನನ್ಯ ಮೈಸೂರ್ ಅಭಿನಯಿಸುತ್ತಿದ್ದಾರೆ. ಅಮೋಘ ವಿನ್ಯಾಸದ ಸೆಟ್‌ ಮತ್ತು ಗ್ರಾಫಿಕ್ಸ್‌ನಿಂದ ಪ್ರಸಾರವಾಗುತ್ತಿರುವ ಧಾರಾವಾಹಿಯ ಪ್ರೋಮೋಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಹೊಸ ಸವಾಲುಗಳನ್ನು ಎದುರಿಸಲು, ಹೊಸ ಉತ್ಸಾಹದೊಂದಿಗೆ ಬರ್ತಿದ್ದಾರೆ ರೇಣುಕಾ-ಯಲ್ಲಮ್ಮ.”ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Continue Reading

ಪ್ರಮುಖ ಸುದ್ದಿ

Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

Superstar Rajnikanth : ಇತ್ತೀಚೆಗೆ ಯುಎಇಯಲ್ಲಿದ್ದಾಗ, ನಟ ಲುಲು ಗ್ರೂಪ್​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಎ.ಯೂಸುಫ್ ಅಲಿ ಮತ್ತು ಅದರ ಇತರ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಸೂಪರ್ ಸ್ಟಾರ್ ಮತ್ತು ಉದ್ಯಮಿ ರೋಲ್ ರಾಯ್ಸ್ ನಲ್ಲಿ ಸವಾರಿ ಮಾಡಿದ್ದರು.

VISTARANEWS.COM


on

superstar rajnikanth
Koo

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಅವರಿಗೆ ಯುಎಇಯ ಪ್ರವಾಸೋದ್ಯಮ ಇಲಾಖೆ ಗೋಲ್ಡನ್ ವೀಸಾ ನೀಡಿದೆ. ಹಿರಿಯ ನಟ ಈ ಸಂಭ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅಬುಧಾಬಿ ಸರ್ಕಾರ ಮತ್ತು ಲುಲು ಗ್ರೂಪ್​​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಎ.ಯೂಸುಫ್ ಅಲಿ (M A Yusuf Ali) ಅವರ ಪ್ರಯತ್ನಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಜನಿಕಾಂತ್ “ಅಬುಧಾಬಿ ಸರ್ಕಾರದಿಂದ ಪ್ರತಿಷ್ಠಿತ ಯುಎಇ ಗೋಲ್ಡನ್ ವೀಸಾ ಸ್ವೀಕರಿಸಲು ಹೆಮ್ಮೆ ಎನಿಸುತ್ತಿದೆ. ಈ ವೀಸಾ ಲಭ್ಯತೆಯನ್ನು ಸುಗಮಗೊಳಿಸಿದ್ದಕ್ಕಾಗಿ ಮತ್ತು ಎಲ್ಲಾ ರೀತಿಯ ಬೆಂಬಲಕ್ಕಾಗಿ ಅಬುಧಾಬಿ ಸರ್ಕಾರಕ್ಕೆ ಮತ್ತು ನನ್ನ ಉತ್ತಮ ಸ್ನೇಹಿತ, ಲುಲು ಗ್ರೂಪ್​ನ ಸಿಎಂಡಿ ಯೂಸುಫ್ ಅಲಿ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಯುಎಇಯಲ್ಲಿದ್ದಾಗ, ನಟ ಲುಲು ಗ್ರೂಪ್​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಎ.ಯೂಸುಫ್ ಅಲಿ ಮತ್ತು ಅದರ ಇತರ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿದ್ದರು. ಸೂಪರ್ ಸ್ಟಾರ್ ಮತ್ತು ಉದ್ಯಮಿ ರೋಲ್ ರಾಯ್ಸ್ ನಲ್ಲಿ ಸವಾರಿ ಮಾಡಿದ್ದರು.

ನಟ ಫುಲ್ ಬ್ಯುಸಿ

ಸೂಪರ್​ಸ್ಟಾರ್​ ರಜನಿಕಾಂತ್ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ‘ವೆಟ್ಟೈಯಾನ್’ ನ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದರು. ಇದನ್ನು ಟಿ.ಜೆ.ಜ್ಞಾನವೇಲ್ ಬರೆದು ನಿರ್ದೇಶಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್ ಮತ್ತು ದುಶಾರಾ ವಿಜಯನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಈ ತಿಂಗಳ ಆರಂಭದಲ್ಲಿ, ರಜನಿಕಾಂತ್ ಮತ್ತು ಅಮಿತಾಬ್ ಒಟ್ಟಿಗೆ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದ್ದರು. ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ಅಮಿತಾಬ್ ಬಚ್ಚನ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. “ತಲಾ ದಿ ಗ್ರೇಟ್ ರಜನಿ ಅವರೊಂದಿಗೆ ಇರುವುದೇ ನನಗೆ ಗೌರವ, ಅವರು ಬದಲಾಗಲೇ ಇಲ್ಲ.. ಅದೇ ಸರಳ, ವಿನಮ್ರತೆ ಸ್ನೇಹಿತ ಎಂದು ಬರೆದುಕೊಂಡಿದ್ದರು.

ಇದಕ್ಕೂ ಮೊದಲು, ಲೈಕ್ರಾ ಪ್ರೊಡಕ್ಷನ್ ಹೌಸ್ ತಮ್ಮ ಎಕ್ಸ್ ಹ್ಯಾಂಡಲ್​ನಲ್ಲಿ ಫೋಟೋಗಳನ್ನು ಹಂಚಿಕೊಂಡು, “ದಿ ಟೈಟಾನ್ಸ್ ಆಫ್ ಇಂಡಿಯನ್ ಸಿನೆಮಾ! ಸೂಪರ್​ಸ್ಟಾರ್​ ಎಂದು ಬರೆದಕೊಂಡಿತ್ತು. ಆ ಫೋಟೋಗಳಲ್ಲಿ, ಅಮಿತಾಬ್ ಬಚ್ಚನ್ ಮತ್ತು ರಜನಿಕಾಂತ್ ಸ್ಟೈಲಿಶ್ ಕಪ್ಪು ದಿರಸಿನಲ್ಲಿ ಪೋಸ್ ನೀಡಿದ್ದರು. ಅವರಿಬ್ಬರು ಮಾತನಾಡಿದ್ದರು.

Continue Reading

ಸಿನಿಮಾ

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Golden Star Ganesh: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh Krishnam Pranaya Sakhi movie first song release on May 25 in Mysore
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಸದ್ಯದಲ್ಲೇ ಚಿತ್ರ ತೆರೆಗೆ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ‌.

ಇದನ್ನೂ ಓದಿ: Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading
Advertisement
bulldozer justice
ಪ್ರಮುಖ ಸುದ್ದಿ17 mins ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ34 mins ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ36 mins ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Road Accident
ಪ್ರಮುಖ ಸುದ್ದಿ55 mins ago

Road Accident : ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಮಂದಿಗೆ ಗಾಯ

koti kannada movie
ಪ್ರಮುಖ ಸುದ್ದಿ1 hour ago

koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ranebennuru road accident
ಹಾವೇರಿ1 hour ago

Road Accident: ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

Udho Udho Shri Renuka Yellamma
ಪ್ರಮುಖ ಸುದ್ದಿ1 hour ago

Udho Udho Shri Renuka Yellamma : ಬಾಲ್ಯದಿಂದ ತಾರುಣ್ಯದ ಕಡೆಗೆ ರೇಣುಕಾ-ಯಲ್ಲಮ್ಮ, ಕಾದಿವೆ ಹಲವು ರೋಚಕ ಕತೆಗಳು

superstar rajnikanth
ಪ್ರಮುಖ ಸುದ್ದಿ2 hours ago

Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

thunderbolt
ಚಿಕ್ಕೋಡಿ2 hours ago

Thunderbolt: ಮುಂಗಾರಿಗೆ ಮೊದಲೇ ಸಿಡಿಲಿನ ದುಃಸ್ವಪ್ನ, ಇಬ್ಬರು ಬಲಿ, ಇಬ್ಬರು ಗಂಭೀರ

Fruit Juice Side Effects
ಆರೋಗ್ಯ2 hours ago

Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌