ಸಿನಿಮಾ
ದಸರಾ ಹಬ್ಬಕ್ಕೆ ಬರಲಿದೆ ರಿಷಭ್ ಶೆಟ್ಟಿಯ ಕಾಂತಾರ, ಕಥೆ ಏನಿರಬಹುದು?
ಕಾಂತಾರ ಯಾವಾಗ ರಿಲೀಸ್ ಆಗಲಿದೆ ಎಂಬ ಕಾತರಕ್ಕೆ ತೆರೆಬಿದ್ದಿದೆ. ದಸರಾದ ಜತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ ಎಂದು ರಿಷಭ್ ಶೆಟ್ರು ಅನೌನ್ಸ್ ಮಾಡಿದ್ದಾರೆ. ಹಾಗಿದ್ದರೆ ಯಾವಾಗ ರಿಲೀಸ್, ಏನಿರಬಹುದು ಸಿನಿಮಾ ಕಥೆ? ಈ ವರದಿ ಓದಿ
ಬೆಂಗಳೂರು: ಧಿಗ್ಗನೆ ಹೊತ್ತಿ ಉರಿಯುವ ಜ್ವಾಲೆಗಳ ನಡುವೆ ಕಂಬಳದ ಕೋಣಗಳ ಭಾರಿ ತುರುಸಿನ ಓಟದ ಪೋಸ್ಟರ್ ಮೂಲಕ ಗಮನ ಸೆಳೆದ ʻಕಾಂತಾರʼ ಸಿನಿಮಾ ಈಗಾಗಲೇ ಸಾಕಷ್ಟು ಕಾತರವನ್ನು ಸೃಷ್ಟಿಸಿದೆ. ವಿಜಯ್ ಕಿರಗಂದೂರು ನಿರ್ಮಾಣ ಮತ್ತು ರಿಷಭ್ ಶೆಟ್ಟಿ ಅಭಿನಯ, ನಿರ್ದೇಶನದಿಂದಾಗಿ ಕುತೂಹಲ ಕೆರಳಿಸಿರುವ ಈ ಚಿತ್ರವನ್ನು ಮುಂದಿನ ದಸರಾ ಹಬ್ಬದೊಂದಿಗೆ ಸವಿಯಬಹುದು!
ಹೌದು, ಇಡೀ ಚಿತ್ರರಂಗ ಅಚ್ಚರಿ, ಬೆರಗಿನೊಂದಿಗೆ ಕಾಯುತ್ತಿರುವ ಕಾಂತಾರ ಸೆಪ್ಟೆಂಬರ್ 30ರಂದು ತೆರೆ ಕಾಣಲಿದೆ.
ʻದಸರಾದ ಜತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ.. ಸೆಪ್ಟೆಂಬರ್ 30ರಂದು ಬಯಲಾಟಕ್ಕೆ ಸಾಕ್ಷಿಯಾಗಿʼ ಎಂಬ ಟ್ಯಾಗ್ಲೈನ್ನೊಂದಿಗೆ ಸಿನಿಮಾ ಬಿಡುಗಡೆ ದಿನಾಂಕವನ್ನು ಸ್ವತಃ ರಿಷಭ್ ಶೆಟ್ಟಿ ಹಂಚಿಕೊಂಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್ ನ ಅಧಿಕೃತ ಟ್ವಿಟರ್ನಲ್ಲಿ ಈ ಮಾಹಿತಿ ನೀಡಲಾಗಿದೆ.
ರಿಷಭ್ ಶೆಟ್ಟಿ ಅವರ ನಿರ್ದೇಶನ ಹಾಗೂ ಅಭಿನಯದ ಕಾಂತಾರ ಚಿತ್ರವು ದಕ್ಷಿಣ ಕನ್ನಡ ಪ್ರಾಂತ್ಯದ ಸಾಂಪ್ರದಾಯಿಕ ಶ್ರೀಮಂತಿಕೆಯನ್ನು ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೈಲರ್ ರೋಮಾಂಚಕವಾಗಿದ್ದು, ಅದನ್ನು ಈಗಾಗಲೇ 21 ಲಕ್ಷ ಮಂದಿ ನೋಡಿದ್ದಾರೆ. ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಇರುವ ಕುತೂಹಲಕ್ಕೆ ಇದು ಸಾಕ್ಷಿಯಾಗಿದೆ. ಟ್ರೇಲರ್ ಚಿತ್ರದ ಮೇಕಿಂಗ್ ಹಾಗೂ ಕಥೆ ಅದ್ಭುತವಾಗಿರಬಹುದು ಎಂಬ ಭರವಸೆ ಮೂಡಿಸಿದೆ.
ಏನಿರಬಹುದು ಕಾಂತಾರದ ಕಥೆ?
ʼಕಾಂತಾರʼ ಎಂಬ ಶೀರ್ಷಿಕೆಯೇ ವಿಭಿನ್ನವಾಗಿದ್ದು, ಸಾಮಾನ್ಯವಾಗಿ ಇದರ ಅರ್ಥ ಸೂರ್ಯನ ಬಿಸಿಲೇ ಬೀಳದ ಕಾಡು ಎಂದರ್ಥ. ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗದಲ್ಲಿ ಶ್ರೀದೇವಿ ದುಷ್ಟರನ್ನು ಸದೆಬಡಿಯಲು ಕದಂಬ ಕಾಂತಾರದಲ್ಲಿ ನೆಲೆಸಿರುತ್ತಾಳೆ ಎಂದು ತೋರಿಸಲಾಗುತ್ತದೆ. ಕಂಬಳ ಕ್ಷೇತ್ರದಲ್ಲೀ ಕಾಂತಾವರ ಎಂಬ ಹೆಸರು ಜನಪ್ರಿಯವಾಗಿದೆ. ಇದೆಲ್ಲವನ್ನೂ ಜೋಡಿಸಿಕೊಂಡು ಕಾಂತಾರದ ಕಥೆ ಹೆಣೆದಿರುವ ಸಾಧ್ಯತೆ ಇದೆ.
ಕದಂಬ ಕೌಶಿಕೆ ರೂಪದಲ್ಲಿರುವ ಶ್ರೀದೇವಿ ಕಾಂತಾರದಲ್ಲಿ ನೆಲೆ ನಿಂತು ಆಕಾಶದಿಂದಲೇ ಭೂಮಿಗೆ ಇಳಿಸಲ್ಪಟ್ಟ ಸ್ವರ್ಣದುಯ್ಯಾಲೆಯಲ್ಲಿ ಕುಳಿತಿರುತ್ತಾಳೆ. ಅಲ್ಲಿಗೆ ಚಂಡ ಮುಂಡರು, ಶುಂಭ ನಿಶುಂಭರನ್ನು ಅಲ್ಲಿಗೇ ಬರುವಂತೆ ಮಾಡಿ ತರಿಯುತ್ತಾಳೆ. ಈ ಕಥೆಗೂ ಕಂಬಳಕ್ಕೂ ಏನನ್ನೋ ತಳುಕು ಹಾಕಿ ಕಥೆ ಹೆಣೆದಿರುವ ಬಗ್ಗೆ ಕುತೂಹಲಕಾರಿ ಚರ್ಚೆ ನಡೆಯತ್ತಿದೆ. ಇನ್ನೊಂದು ಕಡೆ ಇದೊಂದು ದೆವ್ವದ ಕಥೆ ಇರಬಹುದು ಎಂಬ ಮಾತೂ ಇದೆ. ಅಂತೂ ಎಲ್ಲರೂ ಮಾತನಾಡಿಕೊಳ್ಳುವಂತೆ ಮಾಡಿದೆ ಕಾಂತಾರ. ಇನ್ನೊಂದು ಊಹೆಯಂತೆ ಇದು ಕಂಬಳದೊಂದಿಗೆ ಬೆಸೆದುಕೊಂಡು ರೂಪಿಸಲಾದ ಕಾಡುಗಳ್ಳರ ಕಥೆಯೂ ಇರಬಹುದು. ಕಾಡಿಗೆ ಬೆಂಕಿ ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಟ ಕೂಟದ ಕಥೆಯೂ ಇರಬಹುದು ಎನ್ನಲಾಗುತ್ತಿದೆ.
ಕರಾವಳಿಯಿಂದಲೇ ಬಂದಿರುವ ರಿಷಭ್ ಶೆಟ್ಟಿ ಅಲ್ಲಿನ ನೇಟಿವಿಟಿಯನ್ನೇ ಬಳಸಿಕೊಂಡು ಕಥೆ ಮಾಡಿದ್ದಾರೆ. ಆದರೆ, ಅದನ್ನು ಇಡೀ ಕನ್ನಡ ಸಿನಿಮಾ ಲೋಕಕ್ಕೆ ಹೊಂದಿಕೊಳ್ಳುವಂತೆ ಡೆವಲಪ್ ಮಾಡಿರುವ ಸಾಧ್ಯತೆ ಇದೆ.
ರಿಷಭ್ ಶೆಟ್ಟಿ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ಪ್ರಧಾನ ಪಾತ್ರದಲ್ಲಿದ್ದಾರೆ. ಪಂಚಮಿ ಗೌಡ ಚಿತ್ರದ ನಾಯಕಿ.
ಇದನ್ನೂ ಓದಿ: 777 Charlie : ವೇಸ್ಟ್ ಬಾಡಿ ಚಾರ್ಲಿ ಸೂಪರ್ ಹೀರೊ ಆಗಿದ್ದು ಹೀಗೆ
South Cinema
Kannada New Movie: ʻಡೇರ್ಡೆವಿಲ್ ಮುಸ್ತಾಫಾʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ
Kannada New Movie: ಈ ವಾರ ಅಮೆರಿಕಾ ಹಾಗೂ ಯುರೋಪ್ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
ಬೆಂಗಳೂರು: ಚಂದನವನದಲ್ಲೀಗ (Kannada New Movie) ಡೇರ್ಡೆವಿಲ್ ಮುಸ್ತಾಫಾ (Daredevil Mustafa) ಸಿನಿಮಾ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ಡೆವಿಲ್ ಮುಸ್ತಾಫಾ ಅಮೋಘವಾಗಿ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ.
ಕಳೆದ ಆರೇಳು ತಿಂಗಳಿನಿಂದ ಥಿಯೇಟರ್ನಲ್ಲಿ ಯಾವ ಸಿನಿಮಾಗೂ ಸಿಗದ ಮೆಚ್ಚುಗೆ ಮುಸ್ತಾಫಾನ ಪಾಲಾಗಿದೆ. ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್ಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ಡೇರ್ಡೆವಿಲ್ ಮುಸ್ತಾಫಾ ದರ್ಶನಕ್ಕೆ ಚಿತ್ರತಂಡ ಸಜ್ಜಾಗಿದೆ.
ಈ ವಾರ ಅಮೆರಿಕಾ ಹಾಗೂ ಯುರೋಪ್ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಡೇರ್ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ.
ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ನಡಿ ಪ್ರಸ್ತುತಪಡಿಸಿದ್ದಾರೆ. ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್ ರಾಯ್ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್ ಶ್ಯಾಮ್ ಸಂಗೀತವಿದೆ.
ಇದನ್ನೂ ಓದಿ: Daredevil Mustafa: ಮಜವಾಗಿದೆ `ಡೇರ್ಡೆವಿಲ್ ಮುಸ್ತಫಾʼ ಟ್ರೈಲರ್: ಡಾಕ್ಟರ್ ಬ್ರೋ ಸಾಥ್!
ಶಿಶಿರ್ ಬೈಕಾಡಿ, ಆದಿತ್ಯ ಅಶ್ರೀ, ಅಭಯ್, ಸುಪ್ರೀತ್ ಭಾರದ್ವಾಜ್, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್. ಉಮೇಶ್, ಮಂಡ್ಯ ರಮೇಶ್, ಮೈಸೂರ್ ಆನಂದ್, ಸುಂದರ್ ವೀಣಾ, ನಾಗಭೂಷಣ್, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.
South Cinema
Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್; ವಿಡಿಯೊ ಹಂಚಿಕೊಂಡ ರಾಮ್ಚರಣ್!
Ram Charan: ರಾಮ್ ಚರಣ್ ಅವರು ತಮ್ಮ ಪ್ರೊಡಕ್ಷನ್ ಬ್ಯಾನರ್ ʻವಿ ಮೆಗಾ ಪಿಕ್ಚರ್ಸ್ʼ ತಮ್ಮ ಸ್ನೇಹಿತ ಯುವಿ ಕ್ರಿಯೇಷನ್ಸ್ನ ವಿಕ್ರಮ್ ರೆಡ್ಡಿ ಅವರ ಸಹಯೋಗದೊಂದಿಗೆ ಪ್ರಾರಂಭಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರು: ಗ್ಲೋಬಲ್ ಸ್ಟಾರ್ ರಾಮ್ ಚರಣ್ (Ram Charan), ಹಾಗೂ ಅವರ ಸ್ನೇಹಿತ ವಿಕ್ರಮ್ ಮತ್ತು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಇದೀಗ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮತ್ತು ಅಭಿಷೇಕ್ ಅಗರ್ವಾಲ್ ಅವರ ಆರ್ಟ್ ಬ್ಯಾನರ್ ಸಹಯೋಗದಲ್ಲಿ ಮೊದಲ ಸಿನಿಮಾವನ್ನು ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರ ಜನ್ಮದಿನದ ಸಂದರ್ಭದಲ್ಲಿ ಅನೌನ್ಸ್ ಮಾಡಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ʻದಿ ಇಂಡಿಯಾ ಹೌಸ್ʼ ಶೀರ್ಷಿಕೆಯ ಚಿತ್ರದಲ್ಲಿ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ರಾಮ್ ಚರಣ್ ಪ್ರಸ್ತುತಪಡಿಸಿದ್ದಾರೆ.
ರಾಮ್ ಚರಣ್ ಅವರು ತಮ್ಮ ಪ್ರೊಡಕ್ಷನ್ ಬ್ಯಾನರ್ ʻವಿ ಮೆಗಾ ಪಿಕ್ಚರ್ಸ್ʼ ತಮ್ಮ ಸ್ನೇಹಿತ ಯುವಿ ಕ್ರಿಯೇಷನ್ಸ್ನ ವಿಕ್ರಮ್ ರೆಡ್ಡಿ ಅವರ ಸಹಯೋಗದೊಂದಿಗೆ ಪ್ರಾರಂಭಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇದೀಗ ಪ್ಯಾನ್ ಇಂಡಿಯಾ ಸಿನಿಮಾವಾದ ʻದಿ ಇಂಡಿಯಾ ಹೌಸ್ʼನಲ್ಲಿ ನಿಖಿಲ್ ಸಿದ್ಧಾರ್ಥ ಶಿವನಾಗಿ ಮತ್ತು ಅನುಪಮ್ ಖೇರ್ ಶ್ಯಾಮ್ಜಿ ಕೃಷ್ಣ ವರ್ಮಾ ಆಗಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ಚರಣ್ ಅವರ ವಿ ಮೆಗಾ ಪಿಕ್ಚರ್ಸ್ ಮತ್ತು ಅಭಿಷೇಕ್ ಅಗರ್ವಾಲ್ ಅವರ ಸೋಷಿಯಲ್ ಮೀಡಿಯಾಗಳ ಅಧಿಕೃತ ಖಾತೆಯಲ್ಲಿ ಪವರ್-ಪ್ಯಾಕ್ಡ್ ವಿಡಿಯೊದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್ ಅವರ ಜನ್ಮದಿನದ ಈ ಸಿನಿಮಾದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.
ಇದನ್ನೂ ಓದಿ: Ram Charan : ಹಾಲಿವುಡ್ ಎಂಟ್ರಿ ಬಗ್ಗೆ ನಟ ರಾಮ್ ಚರಣ್ ಹೇಳಿದ್ದೇನು? ವಿಡಿಯೊ ವೈರಲ್
ರಾಮ್ ಚರಣ್ ಪೋಸ್ಟ್
“ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ 140ನೇ ಜನ್ಮದಿನದ ಸಂದರ್ಭದಲ್ಲಿ ನಾವು ನಮ್ಮ ಪ್ಯಾನ್ ಇಂಡಿಯಾ ಚಲನಚಿತ್ರವನ್ನು ಘೋಷಿಸಲು ಹೆಮ್ಮೆಪಡುತ್ತೇವೆ. `ದಿ ಇಂಡಿಯಾ ಹೌಸ್’ ಸಿನಿಮಾ.
ನಿಖಿಲ್ ಸಿದ್ಧಾರ್ಥ, ಅನುಪಮ್ ಖೇರ್ ಜಿ ಮತ್ತು ನಿರ್ದೇಶಕ ರಾಮ್ ವಂಶಿ ಕೃಷ್ಣ ತಂಡದೊಂದಿಗೆʼʼ ಎಂದು ರಾಮ್ ಚರಣ್ ಟ್ವೀಟ್ ಮಾಡಿದ್ದಾರೆ.
On the occasion of the 140th birth anniversary of our great freedom fighter Veer Savarkar Garu we are proud to announce our pan India film – THE INDIA HOUSE
— Ram Charan (@AlwaysRamCharan) May 28, 2023
headlined by Nikhil Siddhartha, Anupam Kher ji & director Ram Vamsi Krishna!
Jai Hind!@actor_Nikhil @AnupamPKher… pic.twitter.com/YYOTOjmgkV
ಕ್ಯಾಮರೂನ್ ಬ್ರೈಸನ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಅನುಪಮ್ ಖೇರ್ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಚಲನಚಿತ್ರವನ್ನು ಪ್ರಮುಖ ಭಾರತೀಯ ಭಾಷೆಗಳಲ್ಲಿ ಮತ್ತು ವಿದೇಶಿ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಯಾರಕರು ಘೋಷಿಸಿದ್ದಾರೆ. ಉಳಿದ ಪಾತ್ರವರ್ಗ ಮತ್ತು ತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಮುಂಬರುವ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ರಾಮ್ ಚರಣ್ ಜತೆ ಕೈ ಜೋಡಿಸಿದ ʻದಿ ಕಾಶ್ಮೀರ್ ಫೈಲ್ಸ್ʼ ನಿರ್ಮಾಪಕ
ಟಾಲಿವುಡ್ ನಟ ರಾಮ್ಚರಣ್ (Ram Charan) ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ವಿ ಮೆಗಾ ಪಿಕ್ಚರ್ಸ್’ (V Mega Pictures) ನಿರ್ಮಾಣ ಸಂಸ್ಥೆಯ ಜತೆ ಕೈ ಜೋಡಿಸಿದ್ದಾರೆ. ವಿ ಮೆಗಾ ಪಿಕ್ಚರ್ಸ್ ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಚರಣ್ ಸ್ನೇಹಿತ ಯುವಿ ಕ್ರಿಯೇಷನ್ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿರುವ ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿದ್ದಾರೆ. ಚಿತ್ರರಂಗದಲ್ಲಿ ಹೊಸಬರಿಗೆ ಅವಕಾಶ ನೀಡವುದರಿಂದ ರಾಮ್ ಚರಣ್ ಅವರ ಅಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.
South Cinema
Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್, ಪವಿತ್ರಾ ಲೋಕೇಶ್ ಹೇಳಿದ್ದೇನು?
Telugu star Naresh: ಜೋಡಿ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ವೇಳೆ ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ಜೋಡಿ ಅಭಿಪ್ರಾಯ ವ್ತಕ್ತಪಡಿಸಿದೆ.
ಬೆಂಗಳೂರು: ನರೇಶ್ ಹಾಗೂ ಪವಿತ್ರಾ ಲೋಕೇಶ್ (Telugu star Naresh) ಅಭಿನಯದ ‘ಮಳ್ಳಿ ಪೆಳ್ಳಿ’ ಸಿನಿಮಾ ಥಿಯೇಟರ್ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆಂಧ್ರ, ತೆಲಂಗಾಣದಲ್ಲಿ ಬಿಡುಗಡೆಯಾಗಿರುವ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ನರೇಶ್- ಪವಿತ್ರಾ ಲವ್ಸ್ಟೋರಿಯಲ್ಲಿ ನಿರ್ದೇಶಕ ಎಂ. ಎಸ್ ರಾಜು ತೆರೆಗೆ ತಂದಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಮಾಡಿರುವುದಾಗಿ ನರೇಶ್ ಹೇಳಿದ್ದಾರೆ. ಇದೀಗ ಜೋಡಿ ಸಿನಿಮಾ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ವೇಳೆ ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ಜೋಡಿ ಅಭಿಪ್ರಾಯ ವ್ತಕ್ತಪಡಿಸಿದೆ.
ಯೂಟ್ಯೂಬ್ ಚಾನಲ್ಗೆ ನೀಡಿದ ಸಂದರ್ಶನದಲ್ಲಿ ನಿಮಗೆ ಮಕ್ಕಳು ಮಾಡಿಕೊಳ್ಳುವ ಆಲೋಚನೆ ಇದೆಯಾ? ಎನ್ನುವ ಪ್ರಶ್ನೆಗೆ ಪವಿತ್ರಾ ಲೋಕೇಶ್ ಮಾತನಾಡಿ ʻʻಸಾಕಷ್ಟು ಮಕ್ಕಳಿಗೆ ಪ್ರಪಂಚದಲ್ಲಿ ತಂದೆ ತಾಯಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಮಕ್ಕಳನ್ನು ಪಡೆಯುವ, ಸಮಾಜಕ್ಕೆ ನೀಡುವ ಅವಶ್ಯಕತೆ ಏನಿದೆ? ಎಂದಿದ್ದಾರೆ. ನಾವು ಜೋಡಿಯಾಗಿ ಮಾಡೋಕೆ ಸಾಕಷ್ಟು ವಿಷಯಗಳಿವೆʼʼಎಂದರು.
ನರೇಶ್ ಮಾತನಾಡಿ ʻʻರಕ್ತ ಸಂಬಂಧಕ್ಕಿಂತ ಭಾವನಾತ್ಮಕ ಸಂಬಂಧ ಬಹಳ ದೊಡ್ಡದು. ನನಗೆ ಪವಿತ್ರಾ ಮಗು, ನಾನು ಪವಿತ್ರಾಗೆ ಮಗು. ನಮಗೆ ಮಕ್ಕಳಿದ್ದಾರೆ. ಎಲ್ಲರನ್ನು ಚೆನ್ನಾಗಿ ನೋಡಿಕೊಳ್ಳುತ್ತೇವೆ. ಮಗು ಪಡೆಯಲು ನಾವು ದೈಹಿಕವಾಗಿ ಅರ್ಹರಾಗಿದ್ದೇವೆ. ನಾವು ಈಗ ಮಕ್ಕಳನ್ನು ಪಡೆದು ಬೆಳೆಸಿದರೆ, ಅವರಿಗೆ 20 ವರ್ಷ ಆಗುವಷ್ಟರಲ್ಲಿ ನಮಗೆ 60 ವರ್ಷ ವಯಸ್ಸಾಗಿರುತ್ತದೆ. ನನಗೆ ಪವಿತ್ರಾ ದೇವತೆಯಂತೆ, ತಾಯಿಯಂತೆ, ಮಡದಿಯಂತೆ, ಮಗಳಂತೆ, ಸ್ನೇಹಿತೆಯಂತೆ ಕಾಣಿಸುತ್ತಾರೆ. ಆಕೆ ಬಂದ ಮೇಲೆ ನನ್ನ ಜೀವನ ಸಂಪೂರ್ಣವಾಗಿ ಬದಲಾಗಿದೆʼʼ ಎಂದರು.
ಇದನ್ನೂ ಓದಿ: Pavitra Naresh: ನನ್ನ ತಾಯಿಯ ಬಳಿಕ ಇನ್ನೊಬ್ಬ ತಾಯಿಯನ್ನು ಭೇಟಿಯಾದೆ: ನರೇಶ್ ಭಾವುಕ!
Audience made #MALLIPELLI their own 😍
— MS Raju (@MSRajuOfficial) May 27, 2023
Enjoy the BOLDEST BLOCKBUSTER in Theaters near you ❤️🔥💥
Book Ur Tickets for this Intense Melodrama Now!
🎟️ https://t.co/PFyBXV2kGK@ItsActorNaresh #PavitraLokesh @MSRajuOfficial @VKMovies_ @adityamusic pic.twitter.com/4WQ12ZAWm0
ಮೇ 26ಕ್ಕೆ ʻಮಳ್ಳಿ ಪೆಳ್ಳಿʼ ಎಂಬ ಟೈಟಲ್ ನಡಿ ತೆಲುಗಿನಲ್ಲಿ ಸಿನಿಮಾ ತೆರೆ ಕಂಡಿದೆ. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧಾ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.
South Cinema
IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!
IIFA 2023 Winners Full List: ಹೃತಿಕ್ ರೋಷನ್ ಅತ್ಯುತ್ತಮ ನಟ ಪ್ರಶಸ್ತಿ, ಆಲಿಯಾ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.ಆಲಿಯಾ ಸಮಾರಂಭದಲ್ಲಿ ಗೈರಾದ ಕಾರಣ ನಿರ್ಮಾಪಕ ಜಯಂತಿಲಾಲ್ ಗಡಾ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬೆಂಗಳೂರು: ಅಬುಧಾಬಿಯಲ್ಲಿ ಮೇ 27ರಂದು ನಡೆದ ಇಂಟರ್ನ್ಯಾಷನಲ್ ಇಂಡಿಯನ್ ಫಿಲ್ಮ್ ಅಕಾಡೆಮಿ ಅವಾರ್ಡ್ಸ್ (IIFA 2023)ರಲ್ಲಿ (IIFA 2023 Winners Full List) ಹೃತಿಕ್ ರೋಷನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಸೈಫ್ ಅಲಿ ಖಾನ್ ನಟಿಸಿದ ವಿಕ್ರಮ್ ವೇದಾದಲ್ಲಿ ಅವರ ಸಾಹಸಮಯ ಅಭಿನಯಕ್ಕಾಗಿ ಟ್ರೋಫಿಯನ್ನು ಪಡೆದರು. ಅಷ್ಟೇ ಅಲ್ಲದೇ ʻಗಂಗೂಬಾಯಿ ಕಥಿಯಾವಾಡಿʼಗಾಗಿ ಆಲಿಯಾ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಆಲಿಯಾ ಸಮಾರಂಭದಲ್ಲಿ ಗೈರಾದ ಕಾರಣ ನಿರ್ಮಾಪಕ ಜಯಂತಿಲಾಲ್ ಗಡಾ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಬಾರಿ ʻಗಂಗೂಬಾಯಿ ಕಥಿಯಾವಾಡಿ ಸಿನಿಮಾಗೆ ಹಲವು ಪ್ರಶಸ್ತಿಗಳು ಸಂದಿವೆ.
ಹಿರಿಯ ನಟ ಅನಿಲ್ ಕಪೂರ್ ಅವರು IIFA 2023ರಲ್ಲಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಪಡೆದರು. ʻಜಗ್ಜಗ್ ಜೀಯೋದಲ್ಲಿʼನ ಅವರ ಪಾತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದರು.
ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಕಮಲ್ ಹಾಸನ್ಗೆ ಪ್ರಶಸ್ತಿ
ಹಿರಿಯ ನಟ ಕಮಲ್ ಹಾಸನ್ ಅವರು ಐಐಎಫ್ಎ 2023ರಲ್ಲಿ (IIFA 2023) ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿಯನ್ನು ನೀಡಿದಾಗ ಭಾರೀ ಕರತಾಡನದ ಪಡೆದರು. ಗಾಯಕ ಮತ್ತು ಸಂಗೀತ ಸಂಯೋಜಕ ಎಆರ್ ರೆಹಮಾನ್ ಅವರು ಕಮಲ್ ಹಾಸನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಮಲ್ ಹಾಸನ್ ಟ್ರೋಫಿ ಸ್ವೀಕರಿಸಿದ ತಕ್ಷಣ, ಸಲ್ಮಾನ್ ಖಾನ್ ಸೇರಿದಂತೆ ಎಲ್ಲರೂ ತಮ್ಮ ಸ್ಥಾನದಿಂದ ಎದ್ದು ನಿಂತು ನಟನನ್ನು ಶ್ಲಾಘಿಸಿದರು.
ವಿಕ್ರಮ್ ವೇದಾ ತಮಿಳು ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ಆರ್ ಮಾಧವನ್ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಹಿಂದಿಯಲ್ಲಿ ಹೃತಿಕ್ ಹಾಗೂ ಸೈಫ್ ನಟಿಸಿದ್ದರು.
ಇದನ್ನೂ ಓದಿ: Aahana Kumra: ಐಫಾ ಕಾರ್ಯಕ್ರಮದಲ್ಲಿ ನಟಿ ಅಹಾನಾ ಕುಮ್ರಾಳ ಡ್ರೆಸ್ ಜಾರುವುದರಲ್ಲಿತ್ತು, ಆಗ? ವಿಡಿಯೊ ವೈರಲ್
CRYING 😭😭😭😭😭 FINALLY #HrithikRoshan𓃵 #IIFA2023 #IIFA https://t.co/DhJrpvwtZK
— ✨️ (@ADushtKanya) May 27, 2023
ಬ್ರಹ್ಮಾಸ್ತ್ರ ಮತ್ತು ಗಂಗೂಬಾಯಿ ಕಾಠಿಯಾವಾಡಿಗೆ ದೊಡ್ಡ ಗೆಲುವು
ಬಾಲಿವುಡ್ ಫ್ಯಾಂಟಸಿ ಚಿತ್ರ ಬ್ರಹ್ಮಾಸ್ತ್ರ: ಭಾಗ ಒಂದು – ಶಿವ, ಮತ್ತು ಜೀವನಚರಿತ್ರೆ ಗಂಗೂಬಾಯಿ ಕಾಠಿಯಾವಾಡಿ ಈ ವರ್ಷದ IIFAನಲ್ಲಿ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಶ್ರೇಯಾ ಘೋಷಾಲ್ ಮತ್ತು ಅರಿಜಿತ್ ಸಿಂಗ್ ಅತ್ಯುತ್ತಮ ಹಿನ್ನೆಲೆ ಗಾಯಕಿ, ಗಾಯಕಿ ವಿಭಾಗ, ಹಾಗೆಯೇ ಮೌನಿ ರಾಯ್ ಅತ್ಯುತ್ತಮ ಪೋಷಕ ನಟಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ಮಗ, ಬಾಬಿಲ್ ಖಾನ್, ʻಕಾಲಾʼ ಚಿತ್ರಕ್ಕಾಗಿ ಬೆಸ್ಟ್ ಡೆಬ್ಯೂಟ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಧೋಕಾ ಅರೌಂಡ್ ದಿ ಕಾರ್ನರ್ಗಾಗಿ ಖುಶಾಲಿ ಕುಮಾರ್ ಬೆಸ್ ಡೆಬ್ಯೂಟ್ ಫಿಮೇಲ್ ಅವಾರ್ಡ್ ಪಡೆದುಕೊಂಡರು.
ಗಂಗೂಬಾಯಿ ಕಾಠಿಯಾವಾ ಡಿಸಿನಿಮಾದ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಂಡಿತು. ಛಾಯಾಗ್ರಹಣ, ಚಿತ್ರಕಥೆ ಮತ್ತು ಸಂಭಾಷಣೆಗಾಗಿ ಟ್ರೋಫಿಗಳನ್ನು ಗೆದ್ದುಕೊಂಡಿತು. ಈ ಚಿತ್ರದಲ್ಲಿ ಆಲಿಯಾ ಭಟ್ ನಾಯಕಿಯಾಗಿ ನಟಿಸಿದ್ದರು.
ಇದನ್ನೂ ಓದಿ: Pavan Wadeyar: ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನಿಮಾ ನಿರ್ಮಾಪಕ ಪವನ್ ಒಡೆಯರ್ಗೆ ದುಬೈನಲ್ಲಿ ಸನ್ಮಾನ
Here are the highlights of the glitz, glamour, and golden moments of your favourite celebrities lifting the IIFA trophy for their exceptional achievements in Bollywood.
— IIFA (@IIFA) May 27, 2023
Read more: https://t.co/Aj81Wnua0L pic.twitter.com/YHkyZfx3cc
ಪ್ರಶಸ್ತಿಗಳ ವಿವರ ಇಲ್ಲಿದೆ!
- ಅತ್ಯುತ್ತಮ ಚಿತ್ರ: ದೃಶ್ಯಂ 2
- ಅತ್ಯುತ್ತಮ ನಿರ್ದೇಶಕ: ಆರ್ ಮಾಧವನ್ ರಾಕೆಟ್ರಿ: ದಿ ನಂಬಿ ಎಫೆಕ್ಟ್
- ಅತ್ಯುತ್ತಮ ನಟಿ : ಗಂಗೂಬಾಯಿ ಕಾಠಿಯಾವಾಡಿಗಾಗಿ ಆಲಿಯಾ ಭಟ್
- ಅತ್ಯುತ್ತಮ ನಟ : ವಿಕ್ರಮ್ ವೇದಕ್ಕಾಗಿ ಹೃತಿಕ್ ರೋಷನ್
- ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ: ಬ್ರಹ್ಮಾಸ್ತ್ರ ಸಿನಿಮಾದ ಮೌನಿ ರಾಯ್: ಭಾಗ ಒಂದು – ಶಿವ
- ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟ : ಜಗ್ ಜಗ್ ಜೀಯೋಗಾಗಿ ಅನಿಲ್ ಕಪೂರ್
- ಫ್ಯಾಷನ್ ವಿಭಾಗ : ಮನೀಶ್ ಮಲ್ಹೋತ್ರಾ
- ಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆ: ಕಮಲ್ ಹಾಸನ್
- ಅತ್ಯುತ್ತಮ ಅಡಾಪ್ಟೆಡ್ ಸ್ಟೋರಿ : ಆಮಿಲ್ ಕೀಯಾನ್ ಖಾನ್ ಮತ್ತು ಅಭಿಷೇಕ್ ಪಾಠಕ್ ದೃಶ್ಯಂ 2
- ಅತ್ಯುತ್ತಮ ಮೂಲ ಕಥೆ: ಡಾರ್ಲಿಂಗ್ಸ್ಗಾಗಿ ಪರ್ವೀಜ್ ಶೇಖ್ ಮತ್ತು ಜಸ್ಮೀತ್ ರೀನ್
- ಪ್ರಾದೇಶಿಕ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆ: ರಿತೇಶ್ ದೇಶಮುಖ್ ನಿರ್ದೇಶನದ ಮರಾಠಿ ಚಲನಚಿತ್ರ ವೇದ್
- ಬೆಸ್ಟ್ ಡೆಬ್ಯೂಟ್ ಅವಾರ್ಡ್ (ಪುರುಷರ ವಿಭಾಗ): ಗಂಗೂಬಾಯಿ ಕಾಠಿಯಾವಾಡಿಗಾಗಿ ಶಾಂತನು ಮಹೇಶ್ವರಿ ಮತ್ತು ಕ್ಲಾಗಾಗಿ ಬಾಬಿಲ್ ಖಾನ್
- ಬೆಸ್ಟ್ ಡೆಬ್ಯೂಟ್ ಅವಾರ್ಡ್ (ಮಹಿಳೆಯ ವಿಭಾಗ): ಧೋಕಾ ಅರೌಂಡ್ ದಿ ಕಾರ್ನರ್ಗಾಗಿ ಖುಶಾಲಿ ಕುಮಾರ್
- ಅತ್ಯುತ್ತಮ ಹಿನ್ನೆಲೆ ಗಾಯಕಿ : ಬ್ರಹ್ಮಾಸ್ತ್ರ, ಶ್ರೇಯಾ ಘೋಷಾಲ್
- ಅತ್ಯುತ್ತಮ ಹಿನ್ನೆಲೆ ಗಾಯಕ: ಬ್ರಹ್ಮಾಸ್ತ್ರದ ಕೇಸರಿಯಾ ಹಾಡಿಗೆ ಅರಿಜಿತ್ ಸಿಂಗ್
- ಅತ್ಯುತ್ತಮ ಸಂಗೀತ ನಿರ್ದೇಶನ: ಬ್ರಹ್ಮಾಸ್ತ್ರಕ್ಕಾಗಿ ಪ್ರೀತಮ್
- ಅತ್ಯುತ್ತಮ ಗೀತರಚನೆಕಾರ: ಅಮಿತಾಭ್ ಭಟ್ಟಾಚಾರ್ಯ ಬ್ರಹ್ಮಾಸ್ತ್ರದ ಕೇಸರಿಯಾ
- ಅತ್ಯುತ್ತಮ ಛಾಯಾಗ್ರಹಣ: ಗಂಗೂಬಾಯಿ ಕಾಠಿಯಾವಾಡಿ
- ಅತ್ಯುತ್ತಮ ಚಿತ್ರಕಥೆ: ಗಂಗೂಬಾಯಿ ಕಾಠಿಯಾವಾಡಿ
- ಅತ್ಯುತ್ತಮ ಸಂಭಾಷಣೆ: ಗಂಗೂಬಾಯಿ ಕಾಠಿಯಾವಾಡಿ
- ಶೀರ್ಷಿಕೆ ಗೀತೆಗಾಗಿ ಅತ್ಯುತ್ತಮ ನೃತ್ಯ ಸಂಯೋಜನೆ: ಭೂಲ್ ಭುಲೈಯಾ 2
- ಅತ್ಯುತ್ತಮ ಧ್ವನಿ ವಿನ್ಯಾಸ: ಭೂಲ್ ಭುಲೈಯಾ 2
- ಅತ್ಯುತ್ತಮ ಸಂಕಲನ: ದೃಶ್ಯಂ 2
- ಅತ್ಯುತ್ತಮ ಹಿನ್ನೆಲೆ ಸಂಗೀತ: ವಿಕ್ರಮ್ ವೇದಾ
- ಸೌಂಡ್ ಮಿಕ್ಸಿಂಗ್: ಮೋನಿಕಾ ಓ ಮೈ ಡಾರ್ಲಿಂಗ್
-
ಕರ್ನಾಟಕ23 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ22 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ18 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ6 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?