Keerthy Suresh wedding Details Keerthy Suresh: ಮದ್ವೆ ಬಗ್ಗೆ ನಾನೇ ಅಪ್‌ಡೇಟ್ ಮಾಡ್ತಿನಿ, ಅಲ್ಲಿವರೆಗೆ ಸುಮ್ನಿರಿ; ಪತ್ರಕರ್ತರ ಬಾಯ್ಮುಚ್ಚಿಸಿದ 'ಮಹಾನಟಿ' - Vistara News

South Cinema

Keerthy Suresh: ಮದ್ವೆ ಬಗ್ಗೆ ನಾನೇ ಅಪ್‌ಡೇಟ್ ಮಾಡ್ತಿನಿ, ಅಲ್ಲಿವರೆಗೆ ಸುಮ್ನಿರಿ; ಪತ್ರಕರ್ತರ ಬಾಯ್ಮುಚ್ಚಿಸಿದ ‘ಮಹಾನಟಿ’

ನಟಿ ಕೀರ್ತಿ ಸುರೇಶ್‌ (Keerthy Suresh) ದುಬೈ ಮೂಲದ ರಿಯಲ್ ಎಸ್ಟೇಟ್ ಬ್ಯುಸಿನೆಸ್‌ಮ್ಯಾನ್ ಜತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವೈರಲ್‌ ಆಗಿತ್ತು.

VISTARANEWS.COM


on

Keerthy Suresh wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು; ನಟಿ ಕೀರ್ತಿ ಸುರೇಶ್‌ (Keerthy Suresh) ದುಬೈ ಮೂಲದ ರಿಯಲ್ ಎಸ್ಟೇಟ್ ಬ್ಯುಸಿನೆಸ್‌ಮ್ಯಾನ್ ಜತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವೈರಲ್‌ ಆಗಿತ್ತು. ಆದರೆ ಈ ಸುದ್ದಿ ಕುರಿತು ಕೀರ್ತಿ ಸುರೇಶ್ ಬೇಸರ ವ್ಯಕ್ತಪಡಿಸಿದ್ದರು. ಮುಂದಿನ ಚಿತ್ರ ʻಮಾಮನ್ನನ್ʼ (Maamannan) ಪ್ರೆಸ್ ಮೀಟ್ ಕಾರ್ಯಕ್ರಮದಲ್ಲಿ ಸಹ ಈ ವಿಷಯ ಪ್ರಸ್ತಾಪವಾಗಿದೆ. ಪತ್ರಕರ್ತರೊಬ್ಬರು ನಟಿಯ ಮದುವೆ ವಿಚಾರವಾಗಿ ಪ್ರಶ್ನೆಯನ್ನು ಕೇಳಿದ್ದಾರೆ. ಇದೀಗ ಕೀರ್ತಿ ಸುರೇಶ್‌ ʻʻನನ್ನ ಮದುವೆಯ ಬಗೆಗಿನ ಮಾಹಿತಿಯನ್ನು ತಾನೇ ಹಂಚಿಕೊಳ್ಳಲಿದ್ದು, ಅಲ್ಲಿಯವರೆಗೂ ಸುಖಾಸುಮ್ಮನೆ ಸುದ್ದಿಗಳನ್ನು ಮಾಡಬಾರದಂತೆʼʼ ಮನವಿ ಮಾಡಿದ್ದಾರೆ.

ಮಲಯಾಳಂನ ಗೀತಾಂಜಲಿ ಚಿತ್ರದ ಮೂಲಕ ನಾಯಕಿಯಾಗಿ ಕೀರ್ತಿ ಸುರೇಶ್ ಸಿನಿ ರಂಗಕ್ಕೆ ಪರಿಚಯವಾದರು. ತೆಲುಗಿನಲ್ಲಿ ನೇನು ಲೋಕಲ್ ಚಿತ್ರದ ಮೂಲಕ ಪದಾರ್ಪಣೆ ಮಾಡಿದರು. ಪ್ರಸ್ತುತ, ಭೋಲಾ ಶಂಕರ್ ಚಿತ್ರದಲ್ಲಿ ಕೀರ್ತಿ ಸುರೇಶ್ ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರಿಯ ಪಾತ್ರದಲ್ಲಿ ನಟಿಸಲಿದ್ದಾರೆ. ‌ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಧ್ಯೆ ನಟಿಯ ಮಸುವೆ ಪ್ರಸ್ತಾಪಗಳು ಬರುತ್ತಿವೆ.

ಇದೀಗ ಕೀರ್ತಿ ಸುರೇಶ್‌ ʻʻನನ್ನ ಮದುವೆಯ ಬಗೆಗಿನ ಮಾಹಿತಿಯನ್ನು ತಾನೇ ಹಂಚಿಕೊಳ್ಳಲಿದ್ದು, ಅಲ್ಲಿಯವರೆಗೂ ಸುಖಾಸುಮ್ಮನೆ ಸುದ್ದಿಗಳನ್ನು ಮಾಡಬಾರದಂತೆʼʼ ಮನವಿ ಮಾಡಿದ್ದಾರೆ. ಈಗ ತಾನೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ರಘು ತಾತ ಸಿನಿಮಾದ ಚಿತ್ರೀಕರಣ ಕೀರ್ತಿ ಸುರೇಶ್ ಮುಗಿಸಿದ್ದಾರೆ.

ಇದನ್ನೂ ಓದಿ: Keerthy Suresh: ಹೊಂಬಾಳೆ ಫಿಲ್ಮ್ಸ್‌ ಮೊದಲ ತಮಿಳು ಚಿತ್ರದ ಶೂಟಿಂಗ್‌ ಮುಕ್ತಾಯ!

ಈ ವರ್ಷ ನಾನಿ ಜತೆ ದಸರಾ ಚಿತ್ರದಲ್ಲಿ ನಟಿಸಿ ಭರ್ಜರಿ ಯಶಸ್ಸು ಗಳಿಸಿರುವ ಕೀರ್ತಿ ಸುರೇಶ್ ಕೈನಲ್ಲಿ ಸದ್ಯ ಹಲವಾರು ಚಿತ್ರಗಳಿದ್ದು, ಸೈರನ್, ರಿವಾಲ್ವರ್ ರೈತ ಸಿನಿಮಾಗಳಲ್ಲಿಯೂ ಅಭಿನಯಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Samantha Ruth Prabhu: ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

VISTARANEWS.COM


on

Samantha Ruth Prabhu repurposes her wedding gown
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ ಜತೆ ವೆಕೇಶನ್‌ ಮೂಡ್‌ನಲ್ಲಿರುವ ಫೋಟೊ ವೈರಲ್‌ ಆಗಿತ್ತು. ಇದೀಗ ಸಮಂತಾ ಅವರು ತಮ್ಮ ಮದುವೆಯ ಗೌನ್‌ ಹರಿದು ಕಪ್ಪು ಕಾಕ್ಟೈಲ್ ಗೌನ್ ಆಗಿ ( black strapless outfit) ಪರಿವರ್ತಿಸಿ ಧರಿಸಿದ್ದಾರೆ. ಮಾತ್ರವಲ್ಲ ಹೊಸ ಫೋಟೊ ( black cocktail gown ) ಹಂಚಿಕೊಂಡು ‘ಪ್ರೀತಿಯ ಗೌನ್’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದ್ದಾರೆ. ಈ ಹೊಸ ಗೌನ್‌ವನ್ನು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ.

ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಈ ಹೊಸ ಉಡುಪನ್ನು ಧರಿಸಿ ಪೋಸ್‌ ಕೊಟ್ಟಿದ್ದಾರೆ ಸಮಂತಾ. ಇನ್‌ಸ್ಟಾದಲ್ಲಿ ಫೋಟೊಗಳನ್ನು ಹಂಚಿಕೊಂಡು ʻನನ್ನ ಪ್ರೀತಿಯ ಗೌನ್’ ಎಂದು ಸಮಂತಾ ಉಲ್ಲೇಖಿಸಿದ್ದಾರೆ.

ನಾಗ ಚೈತನ್ಯ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ (Christian wedding ceremony) ಮದುವೆಯಾಗುವಾಗ ಸಮಂತಾ ಈ ಬಿಳಿ ಗೌನ್ ಧರಿಸಿದ್ದರು. 2017 ರಲ್ಲಿ ಗೋವಾದಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು. ನಾಲ್ಕು ವರ್ಷಗಳ ನಂತರ, ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್‌ ಪಡೆದುಕೊಂಡರು. ಇದೀಗ ಅದೇ ಬಿಳಿ ಗೌನ್‌ ಅನ್ನು ಹೊಸ ರೂಪದಲ್ಲಿ ಮರು ಬಳಕೆ ಮಾಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಫಾಲೋವರ್ಸ್‌ಗಳನ್ನು ದಾರಿ ತಪ್ಪಿಸಿದ್ರಾ ಸಮಂತಾ? ವೈದ್ಯರಿಂದ ಸಖತ್‌ ಕ್ಲಾಸ್‌!

ಫೋಟೊ ಹಂಚಿಕೊಂಡ ಸಮಂತಾ ʻʻನಾನು ಇಂದು ಧರಿಸಿರುವ ಉಡುಗೆ ನನ್ನ ಪ್ರೀತಿಯ ಗೌನ್ ಆಗಿದೆ. ನನ್ನ ಹಳೆಯ ಬಟ್ಟೆಗಳನ್ನು ಮರುಬಳಕೆ ಮಾಡುವುದು ಮೊದಲಿಂದಲೂ ನನಗಿರುವ ಅಭ್ಯಾಸʼʼಎಂದು ಬರೆದುಕೊಂಡಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ರುತ್ ಪ್ರಭು ‘ಸಿಟಾಡೆಲ್: ಹನಿ ಬನ್ನಿ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶನದ ಈ ಸಿರೀಸ್‌ನಲ್ಲಿ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಇದೀಗ ನಟನೆಗೆ ವಿರಾಮ ನೀಡಿ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ.

Continue Reading

Lok Sabha Election 2024

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

Lok Sabha Election 2024:  ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು . ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ.

VISTARANEWS.COM


on

Lok Sabha Election 2024 Ganesh vote by que prakash raj Cast His Vote
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು.

ಗೋಲ್ಡನ್ ಸ್ಟಾರ್ ಗಣೇಶ್‌ ಮಾತನಾಡಿ ʻʻನನ್ನ ಹಕ್ಕು ಇದು. ಎಷ್ಟೇ ಹೊತ್ತಾದರೂ ನನ್ನ ಹಕ್ಕನ್ನು ಚಲಾಯಿಸಬೇಕು. ಯಾರೆಲ್ಲ ಮನೆಯಲ್ಲಿ ಇದ್ದೀರಾ ಬಂದು ವೋಟ್‌ ಮಾಡಿ. ಯಾರು ನಿಮಗೆ ಇಷ್ಟ, ಯಾರು ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಾರೆ, ಅವರಿಗೆ ವೋಟ್‌ ಹಾಕಿ. ಯಾವುದಾದರೂ ಕೆಲಸ ಆಗಿಲ್ಲ ಎಂದು ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದರ ಬೆಲೆ ಜಾಸ್ತಿ ಇರುತ್ತದೆ. ಹಿರಿಯ ನಾಗರಿಕರೇ ಕ್ಯೂ ನಿಂತು ವೋಟ್‌ ಹಾಕ್ತಾ ಇದ್ದರು. ಯುವಕರು ಮೊದಲು ಬಂದು ವೋಟ್‌ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

ಈ ವೇಳೆ ಪ್ರಕಾಶ್‌ ರಾಜ್‌ ಮಾತನಾಡಿ ʻʻವೋಟ್‌ ಮಾಡುವುದು ಬಹಳ ಮುಖ್ಯ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೋಟ್‌ ಮಾಡಿ ಬದಲಾವಣೆ ತನ್ನಿ ಎಂದು ಮನವಿ ಮಾಡಿದರು.

ಈಗಾಗಲೇ ವೋಟ್‌ ಮಾಡಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಬಂದಿದ್ದಾರೆ.

ಪತ್ನಿ ಸಮೇತ ಹಕ್ಕು ಚಲಾಯಿಸಲು ರವಿಶಂಕರ್ ಕೂಡ ಆಗಮಿಸಿದ್ದರು. ಹೊಸಕೆರೆ ಹಳ್ಳಿ ಮತದಾನ‌ ಕೇಂದ್ರಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಮತದಾನ ಮಾಡಲು ತಡವಾಗಿ ಬರುತ್ತಿದ್ದಾರೆ. ಪ್ಲಾನ್ ಪ್ರಕಾರ ಇಂದು ಬೆಳಗ್ಗೆ 8:30ಕ್ಕೆ ಯಶ್‌ ಮತಚಲಾಯಿಸಬೇಕಿತ್ತು. ಕಾರಣಾಂತರಗಳಿಂದ 11 ಗಂಟೆ ನಂತರ ವೋಟ್ ಮಾಡಲು ಹೊಸಕೆರೆಹಳ್ಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಹೊಸಕೆರೆ ಹಳ್ಳಿ ಮತಗಟ್ಟೆಯಲ್ಲಿ ಖಾಕಿ ಕಣ್ಗಾವಲು ಇಟ್ಟಿದೆ. ಯಾವುದೇ ರೀತಿಯ ಗೊಂದಲ, ಜನಜಂಗುಳಿ ಆಗದಂತೆ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ನಟ ರವಿಶಂಕರ್ ದಂಪತಿ ವೋಟ್‌ ,ಮಾಡಿದರು. ರವಿಶಂಕರ್ ಮಾತನಾಡಿ ʻಇದು ಖುಷಿಗಿಂತ ಹೆಚ್ಚಾಗಿ ಇದು ನಮ್ಮ ಕರ್ತವ್ಯ. 140 ಕೋಟಿ ಜನರನ್ನ ಕಾಯೋ ನಾಯಕನ ಆಯ್ಕೆ ಮಾಡೋ ದಿನ. ಯಾರಿಗೆ ವೋಟ್ ಮಾಡಬೇಕು, ಯಾಕೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡಿಕೊಂಡು ಬನ್ನಿ. ಮತ ಗಟ್ಟಗೆ ಬಂದು ಕನ್ ಪ್ಯೂಸ್ ಆಗಬೇಡಿʼʼಎಂದರು.

Continue Reading

ಸ್ಯಾಂಡಲ್ ವುಡ್

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Kiran Raj : ‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

VISTARANEWS.COM


on

Kiran Raj Met Jon Abraham
Koo

ಬೆಂಗಳೂರು: ‘777 ಚಾರ್ಲಿ’ ಸಿನಿಮಾ ಮೂಲಕ ಖ್ಯಾತಿ ಗಳಿಸಿದವರು ನಿರ್ದೇಶಕ ಕಿರಣ್ ರಾಜ್. ಇದೀಗ ಕಿರಣ್‌ ರಾಜ್‌ ಅವರ ಮುಂಬರುವ ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಕಾದಿದ್ದಾರೆ. ಏಕಾಏಕಿ ಕಿರಣ್‌ ರಾಜ್‌ ಅವರು ಖ್ಯಾತ ನಟ ಜಾನ್ ಅಬ್ರಾಹಂ (Jon Abraham) ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕಿರಣ್‌ ರಾಜ್‌ “ಎಂತಹ ಅದ್ಭುತ ದಿನ” ಎಂದು ಬರೆದುಕೊಂಡಿದ್ದಾರೆ. ಫೋಟೊ ನೋಡಿ ಸಿನಿರಸಿಕರು ಥ್ರಿಲ್‌ ಆಗಿದ್ದಾರೆ.

‘777 ಚಾರ್ಲಿ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ಬಾಲಿವುಡ್ ನಟ ಜಾನ್ ಅಬ್ರಾಹಂ ಸಿನಿಮಾ ತಂಡದ ಬೆಂಬಲಕ್ಕೆ ನಿಂತಿದ್ದರು. ಜಾನ್ ಅಬ್ರಾಹಂ ಕೂಡ ಶ್ವಾನ ಪ್ರಿಯರು. ಹೀಗಾಗಿ ಹಿಂದಿ ಬೆಲ್ಟ್‌ಗಳಲ್ಲಿ ‘777 ಚಾರ್ಲಿ’ ಬಿಡುಗಡೆಯಾದಾಗ ಜಾನ್ ಅಬ್ರಾಹಂ ಸಿನಿಮಾ ನೋಡುವಂತೆ ಮನವಿ ಮಾಡಿದ್ದರು.

ಕಿರಣ್‌ ರಾಜ್‌ ಸದ್ಯ ಜಾನ್‌ ಅಬ್ರಾಹಂ ಜತೆ ಫೋಟೊ ಶೇರ್‌ ಮಾಡಿ ʻʻ”ಎಂತಹ ಅದ್ಭುತ ದಿನ. ಹೃದಯದಿಂದ ಹಾಗೂ ಒಳ್ಳೆಯ ಉದ್ದೇಶದಿಂದ ಮಾಡಿದ ಎಲ್ಲಾ ಕೆಲಸಗಳನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸಲಾಗುತ್ತದೆ. 777ಚಾರ್ಲಿ ಬಿಡುಗಡೆಯ ಸಮಯದಲ್ಲಿ ನಾವು ಮೊದಲು ಫೋನ್‌ ಮೂಲಕ ಮಾತನಾಡಿದ್ದೇವು. ಈಗ ಸುಮಾರು ಒಂದೂವರೆ ವರ್ಷಗಳ ನಂತರ, ವೈಯಕ್ತಿಕವಾಗಿ ಭೇಟಿಯಾಗುವ ಅವಕಾಶ ಸಿಕ್ಕಿತು! ಜಾನ್ ಅಬ್ರಾಹಂ ತೋರಿದ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ಈ ದಿನಕ್ಕೆ ಕೃತಜ್ಞʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kiran Raj: ನಟ ಕಿರಣ್ ರಾಜ್‌ ಮತ್ತೊಂದು ಸಾಹಸ; ಅತಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿ Ronny ದಾಖಲೆ!

777 ಚಾರ್ಲಿ ಬಳಿಕ ಕಿರಣ್‌ ರಾಜ್‌ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್‌ ಮಾಡಿರಲಿಲ್ಲ. ಈಗ ದಿಢೀರನೇ ಜಾನ್ ಅಬ್ರಾಹಂ ಅವರನ್ನು ಭೇಟಿ ಮಾಡಿ ಸಂಚಲನ ಸೃಷ್ಟಿಸಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿದ ಖುಷಿಯ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಬ್ರಹಾಂ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಅವರು ಖಡಕ್ ವಿಲನ್ ಆಗಿ ಗಮನ ಸೆಳೆದಿದ್ದರು.

Continue Reading

ರಾಜಕೀಯ

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

Lok Sabha Election 2024: ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ.

VISTARANEWS.COM


on

Lok Sabha Election 2024 sandalwood celebs where do cast their votes
Koo

ಬೆಂಗಳೂರು: ಕರ್ನಾಟಕ ಸೇರಿದಂತೆ (Lok Sabha Election 2024) ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನಲ್ಲೇ ಬಹುತೇಕ ಸೆಲೆಬ್ರೆಟಿಗಳು ವಾಸವಿದ್ದಾರೆ. ಹಾಗಾಗಿ ಸಾಕಷ್ಟು ಜನ ತಮ್ಮ ನಿವಾಸದ ಬಳಿ ಇರುವ ಮತಗಟ್ಟೆಗಳಲ್ಲಿ ಹಕ್ಕು ಚಲಾವಣೆ ಮಾಡಲಿದ್ದಾರೆ. ನಟ ದರ್ಶನ್ ಆರ್‌. ಆರ್‌ ನಗರದ ಮೌಂಟ್ ಕಾರ್ಮೆಲ್ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಲಿದ್ದಾರೆ. ಈಗಾಗಲೇ ನಟ ಗೋಪಾಲ್ ದೇಶಪಾಂಡೆ ಮತದಾನ ಮಾಡಿದ್ದಾರೆ. ಕಲಾ ದಂಪತಿಗಳದ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಬೆಂಗಳೂರು ಉತ್ತರ, ಯಶವಂತಪುರ ಕ್ಷೇತ್ರದಲ್ಲಿ ವೋಟ್‌ ಹಾಕಿದರು. ಚಂದನ್ ಶೆಟ್ಟಿ ನಾಗರಾಬಾವಿಯಲ್ಲಿ ಮತದಾನ ಮಾಡಿದ್ದಾರೆ.

ರಾಘಣ್ಣ ಹಾಗೂ ಪುನೀತ್ ರಾಜ್‌ಕುಮಾರ್ ಕುಟುಂಬ ಸದಸ್ಯರು ಸದಾಶಿವನಗರದ ಪೂರ್ಣ ಪ್ರಜ್ಞಾ ಎಜುಕೇಶನ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ವೋಟ್ ಮಾಡಲಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಮತ ಚಲಾಯಿಸಲು ಕತ್ರಿಗುಪ್ಪೆ BTL ವಿದ್ಯಾವಾಹಿನಿ ಶಾಲೆಯ ಮತಗಟ್ಟೆಗೆ ತೆರಳಲಿದ್ದಾರೆ.

ಇದನ್ನೂ ಓದಿ: Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

ಗಣೇಶ್, ದಿಗಂತ್, ಪ್ರೇಮ್ ದಂಪತಿ ಆರ್‌ ಆರ್ ನಗರ, ಕುಂದಾಪುರದ ಕೆರಾಡಿ ಶಾಲೆಯಲ್ಲಿ ರಿಷಬ್ ಶೆಟ್ಟಿ, ಉಡುಪಿಯಲ್ಲಿ ರಕ್ಷಿತ್ ಶೆಟ್ಟಿ, ಅರಸೀಕೆರೆಯಲ್ಲಿ ಧನಂಜಯ್ ಮತ ಚಲಾಯಿಸಲಿದ್ದಾರೆ.
ಮಾಳವಿಕಾ ಅವಿನಾಶ್,ವಸಿಷ್ಠ ಸಿಂಹ, ಹರಿಪ್ರಿಯಾ, ಅಮೂಲ್ಯ, ಅವಿನಾಶ್‌ ಆರ್‌ ಆರ್‌​ನಗರದಲ್ಲಿ,
ಸೃಜನ್ ಲೋಕೇಶ್, ಪೂಜಾ ಗಾಂಧಿ, ದುನಿಯಾ ವಿಜಯ್ ಕತ್ರಿಗುಪ್ಪೆ.

ಅನಂತ್ ನಾಗ್: ಮಲ್ಲೇಶ್ವರಂ, ​ಧ್ರುವ ಸರ್ಜಾ: ತ್ಯಾಗರಾಜನಗರ (ಕೆಆರ್​.ರೋಡ್​, ಶಾಸ್ತ್ರಿ ನಗರ) ಶ್ರೀಮುರುಳಿ: ವಸಂತ ನಗರ ಪ್ರಶಾಂತ್​ನೀಲ್​: ವಸಂತ ನಗರ, ಮಾಲಾಶ್ರೀ: ಶಿವಾಜಿನಗರ ರಾಜ್ ಬಿ.ಶೆಟ್ಟಿ: ಉಡುಪಿ ನಿಖಿಲ್ ಕುಮಾರಸ್ವಾಮಿ: ಕೇತಮಾರನಹಳ್ಳಿ (ಬಿಡದಿ) ಆಶಿಕಾ ರಂಗನಾಥ್: ತುಮಕೂರು ಚಿಕ್ಕಣ್ಣ: ಮೈಸೂರು ವಿನೋದ್ ರಾಜ್: ಸೋಲದೇವನ ಹಳ್ಳಿ ದೊಡ್ಡಣ್ಣ: ಬಿದರುಕಲ್ಲು ಮತ ಚಲಾಯಿಸಲಿದ್ದಾರೆ.

Continue Reading
Advertisement
lok sabha election 2024
Lok Sabha Election 20242 mins ago

Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ವಿದೇಶ9 mins ago

Indian origin man: ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ; ಪೊಲೀಸರ ಗುಂಡೇಟಿಗೆ ವ್ಯಕ್ತಿ ಬಲಿ

VVPAT Verification
EXPLAINER15 mins ago

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

Lok Sabha Election 2024 Youth Congress protest
Lok Sabha Election 202430 mins ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Samantha Ruth Prabhu repurposes her wedding gown
ಟಾಲಿವುಡ್44 mins ago

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Supreme Court
ದೇಶ50 mins ago

VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

voting lok sabha election 2024
ಪ್ರಮುಖ ಸುದ್ದಿ1 hour ago

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

Lok Sabha Election 2024 Ganesh vote by que prakash raj Cast His Vote
Lok Sabha Election 20242 hours ago

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

IPL 2024
ಐಪಿಎಲ್ 20242 hours ago

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

ರಾಜಕೀಯ2 hours ago

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 Youth Congress protest
Lok Sabha Election 202430 mins ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ7 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ19 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ19 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ23 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

ಟ್ರೆಂಡಿಂಗ್‌