Kabhi Khushi Kabhie Gham: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ʻಕಭಿ ಖುಷಿ ಕಭಿ ಗಮ್ʼ ಸಿನಿಮಾದ ಪೂಜಾ - Vistara News

ಬಾಲಿವುಡ್

Kabhi Khushi Kabhie Gham: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ʻಕಭಿ ಖುಷಿ ಕಭಿ ಗಮ್ʼ ಸಿನಿಮಾದ ಪೂಜಾ

Khushi Kabhie Gham: ಸಿನಿಮಾದಲ್ಲಿ ಬಾಲನಟಿಯಾಗಿ ಮಿಂಚಿದ್ದ ಮಾಳವಿಕಾ ರಾಜ್ ( Malvika Raaj) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾದಲ್ಲಿ ಪೂಜಾ ಶರ್ಮಾ ಪಾತ್ರ ನಿಭಾಯಿಸಿದ್ದ ಮಾಳವಿಕಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ.

VISTARANEWS.COM


on

Khushi Kabhie Gham Malvika Raaj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರೀನಾ ಕಪೂರ್ ನಟನೆಯ ಹಿಟ್‌ ಚಿತ್ರ ʻಕಭಿ ಖುಷಿ ಕಭಿ ಗಮ್ʼ (Khushi Kabhie Gham) 22 ವರ್ಷಗಳನ್ನು ಪೂರೈಸಿದರೂ ಸಿನಿಪ್ರಿಯರಿಗೆ ಈ ಸಿನಿಮಾ ಮೇಲಿನ ಕ್ರೇಜ್‌ ಮಾತ್ರ ಕಡಿಮೆಯಾಗಿಲ್ಲ. ಈ ಸಿನಿಮಾದಲ್ಲಿ ಬಾಲನಟಿಯಾಗಿ ಮಿಂಚಿದ್ದ ಮಾಳವಿಕಾ ರಾಜ್ ( Malvika Raaj) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾದಲ್ಲಿ ಪೂಜಾ ಶರ್ಮಾ ಪಾತ್ರ ನಿಭಾಯಿಸಿದ್ದ ಮಾಳವಿಕಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ.

ʻಕಭಿ ಖುಷಿ ಕಭಿ ಗಮ್ʼ ಚಿತ್ರದಲ್ಲಿ ಪೂಜಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಮಾಳವಿಕಾ ಪ್ರಿಯಕರನೊಂದಿಗೆ ಕೆಲವೇ ದಿನಗಳಲ್ಲಿ ಸಪ್ತಪದಿ ತುಳಿಯಲು ತಯಾರಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ದೀರ್ಘಕಾಲದ ಪ್ರಿಯಕರ ಹಾಗೂ ಉದ್ಯಮಿ ಪ್ರಣವ್‌ ಬಗ್ಗಾ( Pranav Bagga)ರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪ್ರಣವ್‌ ಬಗ್ಗಾ ಜತೆಗಿರುವ ಫೋಟೊ ಹಂಚಿಕೊಂಡಿರುವ ನಟಿ “ಸುದೀರ್ಘ ಸಮಯದ ಬಳಿಕ ನಮ್ಮ ಪಾಲಿನ ಈ ಸುಂದರ ಕ್ಷಣ ಬಂದಿದೆ. ಈ ಬಾಂಧವ್ಯದಿಂದ ನಾವು ಮತ್ತುಷ್ಟು ಗಟ್ಟಿಯಾಗಿದ್ದು, ಶೀಘ್ರದಲ್ಲೇ ಹೊಸ ಜಗತ್ತಿಗೆ ಪ್ರವೇಶ ಮಾಡಲಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಮಾಳವಿಕಾ ಬಿಳಿ ಗೌನ್‌ನಲ್ಲಿ ಅದ್ಭುತವಾಗಿ ಕಂಡಿದ್ದಾರೆ. ಪ್ರಣವ್ ಬಿಳಿ ಸೂಟ್‌ನಲ್ಲಿ ಮಿಂಚಿದ್ದಾರೆ. ಒಂದು ಫೋಟೊದಲ್ಲಿ ಪ್ರಣವ್ ಅವರು ಮಾಳವಿಕಾರ ಹಣೆಯನ್ನು ಚುಂಬಿಸಿದ್ದರೆ, ಇನ್ನೊಂದು ಫೋಟೊದಲ್ಲಿ ಪ್ರಪೋಸ್‌ ಮಾಡುತ್ತಿರುವ ಫೋಟೊ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Kangana Ranaut : ಪ್ರಿಯಾಂಕಾ ಭಾರತ ಬಿಟ್ಟು ಹೋಗುವುದಕ್ಕೆ ಕರಣ್‌ ಜೋಹರ್ ಕಾರಣ ಎಂದ ಕಂಗನಾ!

ʻಕಭಿ ಖುಷಿ ಕಭಿ ಗಮ್ʼ ಚಿತ್ರದಲ್ಲೇ ಖ್ಯಾತಿಗಳಿಸಿದ ನಟಿ ಮಾಳವಿಕಾ ಚಿತ್ರರಂಗದ ಕುಟುಂಬದಿಂದ ಬಂದವರು. ಇವರ ತಂದೆ ಬಾವಿ ರಾಜ್‌ ಬಾಲಿವುಡ್‌ ಚಿತ್ರರಂಗದ ಪ್ರಸಿದ್ದ ನಿರ್ಮಾಪಕರಿದ್ದರು. ಹಿರಿಯ ನಟ ಜಗದೀಶ್‌ ರಾಜ್‌ ಅವರ ಮೊಮ್ಮಗಳಾದ ಇವರು, ಹಿರಿಯ ನಟಿ ಅನಿತಾ ರಾಜ್‌ ಅವ ಸೊಸೆ ಕೂಡ ಹೌದು. ನಟಿ ಮಾಳವಿಕಾ. ಸ್ಕ್ವಾಡ್‌, ಕ್ಯಾಪ್ಟನ್‌ ನವಾಬ್‌, ಜೈದೇವ್‌ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಯುವ ನಟಿಯಾಗಿ ಮಿಂಚಿದ್ದರು.

ಇದನ್ನೂ ಓದಿ: DK Shivakumar: ʻಬೊಂಬಾಟ್ ಭೋಜನʼದಲ್ಲಿ ಆತ್ಮೀಯ ಸ್ನೇಹಿತ‌‌ ಸಿಹಿಕಹಿ ಚಂದ್ರು ಅಡುಗೆ ಸವಿದ ಡಿ.ಕೆ ಶಿವಕುಮಾರ್

2001ರಲ್ಲಿ ಬಿಡುಗಡೆಗೊಂಡ ಈ ಚಿತ್ರ ಇಂದಿಗೂ ಸೂಪರ್‌ಹಿಟ್‌ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್‌ ಚಿತ್ರವಾಗಿದೆ. ಕರಣ್‌ ಜೋಹರ್‌ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್‌, ಜಯಾ ಬಚ್ಚನ್‌, ಶಾರುಖ್‌ ಖಾನ್‌, ಕಾಜೋಲ್‌, ಹೃತಿಕ್‌ ರೋಷನ್‌, ಕರೀನಾ ಕಪೂರ್‌ ಸೇರಿದಂತೆ ಮುಂತಾದ ಹಿರಿಯ ನಟರು ನಟಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Shekhar Suman: ಸಂದರ್ಶನದಲ್ಲಿ ನಟ ಶೇಖರ್ ಸುಮನ್ ಮಾತನಾಡಿ ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

VISTARANEWS.COM


on

Shekhar Suman Says Sex Workers Keep Society
Koo

ಬೆಂಗಳೂರು: ನಟ ಶೇಖರ್ ಸುಮನ್ (Shekhar Suman) ಅವರು ಲೈಂಗಿಕ ಕಾರ್ಯಕರ್ತರು ಮತ್ತು ವೇಶ್ಯೆಯರ ನಡುವಿನ ವ್ಯತ್ಯಾಸದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇವರ ಸಮಾಜದ ಉತ್ಪನ್ನಗಳು ಮತ್ತು ಅವರನ್ನು ಒಟ್ಟಿಗೆ ವರ್ಗೀಕರಿಸಬಾರದು ಎಂದು ಸಂದರ್ಶನದಲ್ಲಿ ಹೇಳಿದರು. ʻʻವೇಶ್ಯೆಯರನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತದೆ. ಅನ್ಯಾಯವಾಗಿ ಲೈಂಗಿಕ ಕಾರ್ಯಕರ್ತೆಯರೆಂದು ಲೇಬಲ್ ಮಾಡಲಾಗುತ್ತದೆʼʼ ಎಂದು ಹೇಳಿದರು.

“ವೇಶ್ಯೆಯರನ್ನು ಈ ರೀತಿ ಲೈಂಗಿಕ ಕಾರ್ಯಕರ್ತೆಯರೆಂದು ತೋರಿಸುವಂತೆ ಮಾಡಿದ್ದು ಸಮಾಜವೇ. ಯಾವುದೇ ಮಹಿಳೆ ಆಯ್ಕೆಯಿಂದ ವೇಶ್ಯೆಯಾಗುವುದಿಲ್ಲ. ಆದರೆ ಸಂದರ್ಭಗಳು ಹೆಚ್ಚಾಗಿ ಮಹಿಳೆಯನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಮಾಡುತ್ತವೆ. ಈ ಎಲ್ಲದರ ಹೊರತಾಗಿಯೂ, ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದೆ. ಪುರುಷರ ಲೈಂಗಿಕ ಹಸಿವನ್ನು ಲೈಂಗಿಕ ಕಾರ್ಯಕರ್ತರಿಂದ ನೀಗಿಸಿಕೊಳ್ಳುತ್ತಿದ್ದಾರೆʼʼಎಂದರು.

ಶೇಖರ್ ಸುಮನ್ ಮಾತನಾಡಿ ʻʻಹೀರಾಮಂಡಿಯಲ್ಲಿ ಜನರು ಕಲೆ ಮತ್ತು ಸಂಗೀತದಂತಹ ವಿವಿಧ ಕೌಶಲ್ಯಗಳನ್ನು ಕಲಿಯಲು ಹೋದ ಸ್ಥಳವಾಗಿತ್ತು. ಮಕ್ಕಳನ್ನು ಅಲ್ಲಿಗೆ ಕಳುಹಿಸಲಾಗುತ್ತಿತ್ತು. ನವಾಬರು ಅವರಿಂದ ಅನೇಕ ವಿಚಾರಗಳನ್ನು ಕಲಿಯುತ್ತಿದ್ದರು. ಹೀರಾಮಂಡಿಯವರ ಕೊಡುಗೆ ಅಪಾರವಾಗಿತ್ತು, ಅದೊಂದು ಸಂಸ್ಥೆಯಾಗಿತ್ತು, ಆದರೆ ನಾವು ಯಾವಾಗಲೂ ವೇಶ್ಯೆಯರನ್ನು ವಿಭಿನ್ನ ಅರ್ಥದಲ್ಲಿ ನೋಡುತ್ತಿದ್ದೇವು. ಹೀರಾಮಂಡಿಯಲ್ಲಿ, ಸ್ವಾತಂತ್ರ್ಯ ಚಳವಳಿಗೆ ವೇಶ್ಯೆಯರ ಕೊಡುಗೆಯನ್ನು ಸಹ ತೋರಿಸಲಾಗಿದೆʼʼಎಂದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಶೇಖರ್ ಸುಮನ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ ಶೇಖರ್‌ ಸುಮನ್‌(Shekhar Suman) ಕೆಲವು ದಿನಗಳ ಹಿಂದೆ ಬಿಜೆಪಿ(BJP). ಸೇರ್ಪಡೆಗೊಂಡಿದ್ದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದ್ದರು.

ಈ ವೇಳೆ ಶೇಖರ್‌ ಸುಮನ್‌ ಮಾತನಾಡಿದ್ದು, ನಿನ್ನೆಯವರೆಗೆ ನಾನು ಇಲ್ಲಿ ಬಂದು ಕೂರುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ. ಜೀವನದಲ್ಲಿ ನಡೆದ ಅನೇಕ ಘಟನೆಗಳಿಂದಾಗಿ ನಾನು ಇಂದು ಇಲ್ಲಿ ಬಂದಿದ್ದೇನೆ. ಬಹಳ ಧನಾತ್ಮಕ ಚಿಂತನೆಯೊಂದಿಗೆ ನಾನು ಇಲ್ಲಿ ಬಂದಿದ್ದೇನೆ. ಇಲ್ಲಿ ಬರಲು ಪ್ರೇರೇಪಿಸಿದ ದೇವರಿಗೆ ನಾನು ಆಭಾರಿ ಎಂದು ಹೇಳಿದ್ದರು.

Continue Reading

ಸಿನಿಮಾ

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Richa Chadha : ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ.

VISTARANEWS.COM


on

Richa Chadha drank alcohol to perform Sanjay Leela Bhansali’s Heeramandi
Koo

ಬೆಂಗಳೂರು: `ಗಾಂಗ್ಸ್‌ ಆಫ್‌ ವಸೇಪುರ್‌’ ಸಿನಿಮಾ ಮೂಲಕ ಮತ್ತಷ್ಟು ಜನಪ್ರೀಯತೆ ಪಡೆದ ರಿಚಾ ಚಡ್ಡಾ (Richa Chadha) ಅವರು ಸ್ವಾರ್‌ ನಿರ್ದೇಶಕರ ಸೆಟ್‌ ಶೂಟ್‌ ವೇಳೆ ಮದ್ಯ ಸೇವಿಸಿ ಸಮಸ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ʻಹೀರಾಮಂಡಿʼ ಸಿನಿಮಾದಲ್ಲಿ (Sanjay Leela Bhansali’s Heeramandi) ನಟಿ ಒಂದು ದೃಶ್ಯದಲ್ಲಿ ಅಭಿನಯಿಸಲು ʻಜಿನ್ʼ ಸೇವಿಸಿದ್ದರಂತೆ. ದೃಶ್ಯ ರಿಯಲ್‌ ಆಗಿ ಬರಬೇಕು ಎಂದು ಮದ್ಯ ಸೇವಿಸಿದ ಪರಿಣಾಮ 30-40 ರೀಟೇಕ್‌ಗಳನ್ನು ಪಡೆದುಕೊಂಡು, ದೃಶ್ಯ ನಿಭಾಯಿಸಲು ಆಗದೇ ಪರದಾಡಿದ್ದರಂತೆ.

ಈ ಬಗ್ಗೆ ನಟಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿ ʻʻಸ್ವಲ್ಪ ಜಿನ್ ಸೇವಿಸಿ ನಟಿಸೋಣ ಎಂದು ಕೊಂಡು ಎಂದಿಗೂ ಕುಡಿಯದ ನಾನು ಜಿನ್ ಸೇವಿಸಿದೆ. ಜಿನ್ ಕುಡಿದ ಕೆಲವೇ ಹೊತ್ತಿನಲ್ಲಿ ದೃಶ್ಯವನ್ನು ನಿಭಾಯಿಸಲು ಕಷ್ಟಕವಾಯ್ತು. ನಟನೆ ಚೆನ್ನಾಗಿ ಆಗುವ ಬದಲಿಗೆ ಇನ್ನೂ ಕೆಟ್ಟದಾಯ್ತ. ಕೇವಲ ಒಂದು ಸೀನ್​ಗೆ ಸುಮಾರು30-40 ರೀಟೇಕ್‌ಗಳನ್ನು ಪಡೆದುಕೊಂಡೆ.  ಸರಿಯಾಗಿ ನಟಿಸಲು ಮಾತ್ರವಲ್ಲ, ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ’ ಎಂದಿದ್ದಾರೆ ರಿಚಾ ಚಡ್ಡಾ.ʼʼ

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ರಿಚಾ ಚಡ್ಡ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ಮಸಾನ್’, ಫಕ್ರೆ, ಸರಬ್​ಜಿತ್ ಇನ್ನೂ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿರುವ ‘ಶಕೀಲ’ ಸಿನಿಮಾನಲ್ಲಿಯೂ ರಿಚಾ ಚಡ್ಡ ನಟಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದರು. ಈಗಾಗಲೇ ನೆಟ್‌ಫ್ಲಿಕ್ಸ್‌ನಲ್ಲಿ ಸಿರೀಸ್‌ ಸ್ಟ್ರೀಮಿಂಗ್‌ ಆಗುತ್ತಿದೆ.

ಇದನ್ನೂ ಓದಿ: ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

Mr. & Mrs. Mahi: ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Mr. & Mrs. Mahi'
Koo

ಬೆಂಗಳೂರು: ಕ್ರಿಕೆಟ್​ ಭಾರತದಲ್ಲಿ ಒಂದು ಧರ್ಮ. ಎಲ್ಲರೂ ಒಂದಾಗುವ ಅಪರೂಪದ ಕ್ರೀಡೆ. ಅಂತೆಯೇ ಕ್ರಿಕೆಟ್​ ಮತ್ತು ಸಿನಿಮಾ ಕ್ಷೇತ್ರಕ್ಕೆ ಬಿಡಿಸಲಾಗದ ನಟು. ಹೀಗಾಗಿ ಬಾಲಿವುಡ್​ ಸೇರಿದಂತೆ ನಾನಾ ಭಾಷೆಗಳ ಸಿನಿ ಇಂಡಸ್ಟ್ರಿಯಲ್ಲಿ ಕ್ರಿಕೆಟ್​ ಆಧಾರವಾಗಿಟ್ಟುಕೊಂಡು ಹಲವಾರು ಸಿನಿಮಾಗಳನ್ನು ತೆಗೆಯಲಾಗಿದೆ. ಅವುಗಳಲ್ಲಿ ಬಹುತೇಕ ಸಿನಿಮಾಗಳು ಸಕ್ಸೆಸ್​ ಆಗಿವೆ. ಅಂತೆಯೇ ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಅಂಡ್ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

ಈ ಯೋಜನೆಯ ಸುತ್ತ ತಿಂಗಳುಗಳ ಊಹಾಪೋಹಗಳಿವೆ. ಏತನ್ಮಧ್ಯೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಅಭಿಮಾನಿಗಳು ಅಂತಿಮವಾಗಿ ದೊಡ್ಡ ಪರದೆಯ ಮೇಲೆ ಜಾಹ್ನವಿ ಕಪೂರ್ ಅಭಿನಯ ನೋಡಲು ಕಾತರರಾಗಿದ್ದಾರೆ. ಅವರೆಲ್ಲರೂ ಅದಕ್ಕಾಗಿ ಕಾಯುತ್ತಿದ್ದಾರೆ.

ಇತ್ತೀಚೆಗೆ, ಜಾಹ್ನವಿ ಕಪೂರ್ ತಮ್ಮ ಮುಂಬರುವ ಚಿತ್ರದ ಪ್ರಚಾರದ ಕಾರಣಕ್ಕಾಗಿ ಈ ತಿಂಗಳ ಆರಂಭದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್​​ ಪಂದ್ಯವನ್ನು ವೀಕ್ಷಿಸಿದ್ದರು.

ಎಲ್ಲವೂ ಗುಟ್ಟು

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading

ಸಿನಿಮಾ

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Laila Khan: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಪ್ರಕಟಿಸಿದೆ. 2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ.

VISTARANEWS.COM


on

Laila Khan
Koo

ಮುಂಬೈ: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ (Laila Khan) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ (Parvez Tak) ದೋಷಿ ಎಂದು ಪ್ರಕಟಿಸಿದೆ. ಘಟನೆ ನಡೆದು ಸುಮಾರು 13 ವರ್ಷಗಳ ಬಳಿಕ ಈ ತೀರ್ಪು ಹೊರಬಿದ್ದಿದೆ.

2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಅಚ್ಚರಿ ಎಂದರೆ ಪರ್ವೀನ್ ತಾಕ್ ಲೈಲಾ ಖಾನ್‌ ತಾಯಿ ಸೆಲೀನಾ ಅವರ ಮೂರನೇ ಪತಿ.

ಸೆಲೀನಾ ಹೆಸರಿನಲ್ಲಿರುವ ಭೂಮಿಗೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಮೊದಲು ಪರ್ವೀನ್ ತಾಕ್ ಪತ್ನಿ ಸೆಲೀನಾ ಅವರನ್ನು ಕೊಲೆ ಮಾಡಿದ್ದ. ಬಳಿಕ ಮನೆಯಲ್ಲಿದ್ದ ಲೈಲಾ ಖಾನ್‌ ಹಾಗೂ ಆಕೆಯ ನಾಲ್ವರು ಒಡಹುಟ್ಟಿದವರ ಹತ್ಯೆ ಮಾಡಿ ಪರಾರಿಯಾಗಿದ್ದ. 2012ರಲ್ಲಿ ಆತನನ್ನು ಬಂಧಿಸಲಾಗಿತ್ತು. ಮೇ 14ರಂದು ಕೋರ್ಟ್‌ ಶಿಕ್ಷೆ ಪ್ರಕಟಿಸಲಿದೆ.

ಘಟನೆಯ ವಿವರ

2011ರಲ್ಲಿ ಲೈಲಾ ಖಾನ್‌, ಆಕೆಯ ತಾಯಿ ಸೆಲೀನಾ ಮತ್ತು ಲೈಲಾ ಖಾನ್‌ ಒಡಹುಟ್ಟಿದವರಾದ ಆಮಿನಾ, ಅವಳಿಗಳಾದ ಝಾರ ಮತ್ತು ಇಮ್ರಾನ್‌, ಕಸಿನ್‌ ರೇಷ್ಮಾ ನಾಪತ್ತೆಯಾಗಿದ್ದಾರೆಂದು ಲೈಲಾ ಖಾನ್‌ ತಂದೆ ನಾದಿರ್‌ ಪಟೇಲ್‌ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ತನಿಖೆ ಆರಂಭವಾಗಿತ್ತು. ತನಿಖೆ ಭಾಗವಾಗಿ ನಾಸಿಕ್ ಬಳಿಯ ಇಗ್ತಪುರಿಯಲ್ಲಿರುವ ಕುಟುಂಬದ ತೋಟದ ಮನೆ ಪರಿಶೀಲಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಆ ಬಂಗಲೆ ಬೆಂಕಿಯಲ್ಲಿ ಭಾಗಶಃ ಹಾನಿಯಾಗಿತ್ತು. ಅಲ್ಲದೆ ಲೈಲಾ ಖಾನ್‌ ಅವರ ಮೊಬೈಲ್‌ ನಾಪತ್ತೆಯಾಗುವ ವೇಳೆ ನಾಸಿಕ್‌ನಲ್ಲೇ ಇತ್ತು ಎನ್ನುವುದು ಕಂಡು ಬಂದಿತ್ತು. ಇದೇ ವೇಳೆ ಲೈಲಾ ಖಾನ್‌ಗೆ ಸೇರಿದ ವಾಹನ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾಗಿತ್ತು. ಪರ್ವೀನ್ ತಾಕ್ ಮೂಲತಃ ಕಾಶ್ಮೀರದವನು. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಸಂಶಯ ಬಲವಾಗಿತ್ತು. ಬಳಿಕ ಆತನನ್ನು ಬಂಧಿಸಲಾಯಿತು. ಈ ವೇಳೆ ಆತ ಆಸ್ತಿ ವಿಚಾರದಲ್ಲಿ ಕೊಲೆ ಮಾಡಿರುವ ಸಂಗತಿ ಹೊರ ಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸೆಲೀನಾ ಅವರ ಇಬ್ಬರು ಮಾಜಿ ಪತಿಯರು ಸೇರಿದಂತೆ ಸುಮಾರು 40 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿತ್ತು.

ಲೈಲಾ ಖಾನ್‌ ಮೊದಲ ಬಾರಿಗೆ 2002ರಲ್ಲಿ ತೆರೆಕಂಡ ಜಗ್ಗೇಶ್‌ ಅಭಿನಯದ ʼಮೇಕಪ್‌ʼ ಕನ್ನಡ ಸಿನಿಮಾದಲ್ಲಿ ಲೈಲಾ ಪಟೇಲ್‌ ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಿರಲಿಲ್ಲ. ಬಳಿಕ ಲೈಲಾ 2008ರಲ್ಲಿ ರಾಜೇಶ್‌ ಖನ್ನಾ ನಟನೆಯ ʼವಫಾ: ಎ ಡೆಡ್ಲಿ ಲವ್‌ ಸ್ಟೋರಿʼ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿದ್ದರು. ಇದು ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಆದರೆ ಲೈಲಾಗೆ ಒಂದಷ್ಟು ಜನಪ್ರಿಯತೆ ತಂಡುಕೊಟ್ಟಿತ್ತು. ಲೈಲಾ ಬಾಂಗ್ಲಾ ದೇಶ ಮೂಲದ ಮುನೀರ್‌ ಖಾನ್‌ ಎನ್ನುವವನನ್ನು ವರಿಸಿದ್ದರು.

ಇದನ್ನೂ ಓದಿ: Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Continue Reading
Advertisement
Kannada New Movie Moorane Krishnappa trailer Out
ಸ್ಯಾಂಡಲ್ ವುಡ್3 mins ago

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Vimala Raman confirms her relationship with this villan actor
ಸ್ಯಾಂಡಲ್ ವುಡ್10 mins ago

Vimala Raman: ಖಳನಟನ ಜತೆ ಪ್ರೀತಿಲಿ ಬಿದ್ದ ʻಆಪ್ತರಕ್ಷಕʼ ನಟಿ

Money Guide
ಮನಿ-ಗೈಡ್18 mins ago

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Lok Sabha Election
ದೇಶ26 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ನಾಳೆ ಮತದಾನ; ಕಣದಲ್ಲಿರುವ ಪ್ರಮುಖರು ಯಾರು?

Neha Murder Case
ಕರ್ನಾಟಕ31 mins ago

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Prajwal Revanna Case Will Not Be Handed Over To CBI Says Cm Siddaramaiah
Lok Sabha Election 202453 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Drowned in water
ಚಿಕ್ಕಬಳ್ಳಾಪುರ55 mins ago

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

PoK
ಪ್ರಮುಖ ಸುದ್ದಿ58 mins ago

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

Pig Kidney
ವಿದೇಶ1 hour ago

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Arvind Kejriwal
ದೇಶ3 hours ago

Arvind Kejriwal: ಚೀನಾದಿಂದ ಭಾರತದ ನೆಲ ವಾಪಸ್‌ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ12 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಟ್ರೆಂಡಿಂಗ್‌