Sudeep birthday | ಕಿಚ್ಚ ಸುದೀಪ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಸಂಭ್ರಮ - Vistara News

ಪ್ರಮುಖ ಸುದ್ದಿ

Sudeep birthday | ಕಿಚ್ಚ ಸುದೀಪ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಸಂಭ್ರಮ

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಗುರುವಾರ ತಡರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಹುಟ್ಟುಹಬ್ಬದ ಸಂಭ್ರಮ (Sudeep birthday) ಆಚರಿಸಿಕೊಂಡರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ ಅವರ ಹುಟ್ಟು ಹಬ್ಬದ ಸಂಭ್ರಮ (Sudeep birthday) ನಗರದ ಪುಟ್ಟೇನಹಳ್ಳಿಯಲ್ಲಿರುವ ಅವರ ಮನೆ ಬಳಿ ನಡೆದಿದೆ.

48ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್ ಅವರ ನೂರಾರು ಅಭಿಮಾನಿಗಳು ಸೇರಿ ಹುಟ್ಟು ಹಬ್ಬ ಆಚರಿಸಿದರು. ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡ ಸುದೀಪ್, ಮನೆಯಿಂದ ಹೊರ ಬಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದರು.

ಕೈ ಮುಗಿದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನೆಚ್ಚಿನ ನಾಯಕ ನಟನನ್ನು ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು. ಅವರ್‌ ಇತ್ತೀಚಿನ ʼವಿಕ್ರಾಂತ್ ರೋಣʼ ಚಿತ್ರದ ʼರಾ ರಾ ರಕ್ಕಮ್ಮʼ ಹಾಡಿಗೆ ಡ್ಯಾನ್ಸ್ ಮಾಡಿದರು. ಸುದೀಪ್‌ ಅವರ ಕುಟುಂಬಸ್ಥರು, ನಟ ನಟಿಯರು ಹಾಗೂ ಸ್ನೇಹಿತರು ಸುದೀಪ್‌ಗೆ ಶುಭಾಶಯ ಕೋರಿದ್ದಾರೆ. ಹುಟ್ಟುಹಬ್ಬ ನಿಮಿತ್ತ ಸುದೀಪ್‌ ಮನೆ ಬಳಿ ಪುಟ್ಟೇನಹಳ್ಳಿ ಪೊಲೀಸರು ಭಾರಿ ಭದ್ರತೆ ಒದಗಿಸಿದ್ದರು.

ಇದನ್ನೂ ಓದಿ | Sudeep birthday | ಮರಳಿನಲ್ಲಿ ಅರಳಿದ ನಟ ಕಿಚ್ಚ ಸುದೀಪ್!‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಕೆ.ಎಲ್​ ರಾಹುಲ್​ಗೆ ಬೈದ ಎಲ್​​ಎಸ್​​ಜಿ ಮಾಲೀಕ ಗೋಯೆಂಕಾ ವರ್ತನೆಗೆ ಮೊಹಮ್ಮದ್​ ಶಮಿ ಆಕ್ರೋಶ

IPL 2024: ಮೇ 8 ರಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್ ಜೈಂಟ್ಸ್ 10 ವಿಕೆಟ್ ಗಳ ಸೋಲನುಭವಿಸಿತು. ಈ ಸೋಲು ನೆಟ್ ರನ್ ರೇಟ್ (ಎನ್ಆರ್ಆರ್) ಕುಸಿತದೊಂದಿಗೆ ಐಪಿಎಲ್ 2024 ಪ್ಲೇಆಫ್ ತಲುಪುವ ಅವರ ಭರವಸೆಯನ್ನು ಭಗ್ನಗೊಳಿಸಿತು. ಈಗ, ಅವರ ಭವಿಷ್ಯವು ಇತರ ಪಂದ್ಯಗಳ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ.

VISTARANEWS.COM


on

IPL 2024
Koo

ನವದೆಹಲಿ: ಐಪಿಎಲ್ ಪಂದ್ಯ (IPL 2024) ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ನಾಯಕ ಕೆಎಲ್ ರಾಹುಲ್ (KL Rahul) ಮತ್ತು ಸಂಜೀವ್ ಗೋಯೆಂಕಾ ನಡುವಿನ ಮಾತುಕತೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನೆಟ್ಟಿಗರು ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿರುವ ನಡುವೆಯೇ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ರಾಹುಲ್​ಗೆ ಬೆಂಬಲ ವ್ಯಕ್ತಪಡಿಸಿರುವ ಅವರು ಗೊಯೆಂಕಾ ವರ್ತನೆಗೆ ಕಿಡಿಕಾರಿದ್ದಾರೆ. ಸಂಜೀವ್ ಗೋಯೆಂಕಾ ಅವರ ಕ್ರಮವನ್ನು ಟೀಕಿಸಿದ ಮೊಹಮ್ಮದ್ ಶಮಿ, ಈ ವಿಷಯವನ್ನು ಸಾರ್ವಜನಿಕವಾಗಿ ಮಾತನಾಡುವ ಬದಲು ಡ್ರೆಸ್ಸಿಂಗ್ ಕೋಣೆಯಲ್ಲಿ ಪರಿಹರಿಸಬಹುದಿತ್ತು ಎಂದು ಹೇಳಿದ್ದಾರೆ.

ಮೇ 8 ರಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್ ಜೈಂಟ್ಸ್ 10 ವಿಕೆಟ್ ಗಳ ಸೋಲನುಭವಿಸಿತು. ಈ ಸೋಲು ನೆಟ್ ರನ್ ರೇಟ್ (NRR) ಕುಸಿತದೊಂದಿಗೆ ಐಪಿಎಲ್ 2024 ಪ್ಲೇಆಫ್ ತಲುಪುವ ರಾಹುಲ್ ಬಳಗದ ಭರವಸೆಯನ್ನು ಭಗ್ನಗೊಳಿಸಿತು. ಈಗ, ಅವರ ಭವಿಷ್ಯವು ಇತರ ಪಂದ್ಯಗಳ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ.

ಹೈದರಾಬಾದ್​ನಲ್ಲಿ ಎದುರಾದ ಸೋಲಿನ ನಂತರ, ಎಲ್ಎಸ್​ಜಿ ಮಾಲೀಕ ಸಂಜೀವ್ ಗೋಯೆಂಕಾ ಅಸಮಾಧಾನಗೊಂಡಿದ್ದರು. ಮೈದಾನದಲ್ಲಿಯೇ ನಾಯಕ ಕೆಎಲ್ ರಾಹುಲ್ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಸಾರ್ವಜನಿಕವಾಗಿ ನಡೆದ ಸಂಭಾಷಣೆಯ ಬಗ್ಗೆ ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಗೋಯೆಂಕಾ ಅವರನ್ನು ಟೀಕಿಸಿದ್ದಾರೆ. ರಾಹುಲ್ ಅವರೊಂದಿಗಿನ ನಡವಳಿಕೆಯನ್ನು ವೃತ್ತಿಪರವಲ್ಲ ಮತ್ತು ಸ್ವೀಕಾರಾರ್ಹವಲ್ಲ ಎಂದು ಕರೆದಿದ್ದಾರೆ.

ನೀವು ಗೌರವಾನ್ವಿತ ವ್ಯಕ್ತಿ – ಮೊಹಮ್ಮದ್ ಶಮಿ ಟೀಕೆ

ಕ್ರಿಕ್ಬಝ್ ಜೊತೆ ಮಾತನಾಡಿದ ಮೊಹಮ್ಮದ್ ಶಮಿ, ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್​​ಗೆ ಸಾರ್ವಜನಿಕವಾಗಿ ಅಗೌರವ ತೋರಿದ್ದಾರೆ ಎಂದು ಟೀಕಿಸಿದರು. ಅಂತಹ ವಿಷಯಗಳನ್ನು ಕ್ಯಾಮೆರಾಗಳ ಮುಂದೆ ಪರಿಹರಿಸುವ ಬದಲು ಖಾಸಗಿಯಾಗಿ ಇತ್ಯರ್ಥಪಡಿಸಬೇಕು ಎಂದು ಶಮಿ ಹೇಳಿದ್ದಾರೆ.

ಆಟಗಾರರಿಗೆ ಗೌರವವಿದೆ, ಮತ್ತು ನೀವು ಮಾಲೀಕರಾಗಿರುವುದರಿಂದ ನೀವು ಗೌರವಾನ್ವಿತ ವ್ಯಕ್ತಿಯೂ ಹೌದು. ಅನೇಕ ಜನರು ನಿಮ್ಮನ್ನು ನೋಡುತ್ತಿರುತ್ತಾರೆ. ನಿಮ್ಮಿಂದ ಕಲಿಯುತ್ತಿದ್ದಾರೆ. ಕ್ಯಾಮೆರಾಗಳ ಮುಂದೆ ಈ ವಿಷಯಗಳು ಸಂಭವಿಸಿದರೆ ಅ ದು ನಾಚಿಕೆಗೇಡಿನ ವಿಷಯವಾಗುತ್ತದೆ ಎಂದು ಶಮಿ ಹೇಳಿದ್ದಾರೆ.

ನೀವು ನಿಮ್ಮ ಅಭಿಪ್ರಾಯಗಳನ್ನು ಹೇಳಲು ಅನೇಕ ವಿಭಿನ್ನ ಮಾರ್ಗಗಳಿವೆ. ಡ್ರೆಸ್ಸಿಂಗ್ ರೂಮ್ ಅಥವಾ ಹೋಟೆಲ್​ನಲ್ಲಿ ಅದೇ ಕೆಲಸವನ್ನು ಮಾಡಬಹುದಿತ್ತು. ಅದನ್ನು ಮೈದಾನದಲ್ಲಿ ಮಾಡುವ ಅಗತ್ಯವಿರಲಿಲ್ಲ. ಈ ರೀತಿ ಮಾಡುವುದು ಗೌರವ ಸಂಕೇತ ಅಲ್ಲ ” ಎಂದು ಶಮಿ ಹೇಳಿದ್ದಾರೆ.

ಕೆಎಲ್ ರಾಹುಲ್ 33 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಪ್ರವಾಸಿ ತಂಡವು ಪವರ್ ಪ್ಲೇನಲ್ಲಿ ಕೇವಲ ೨೭ ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಆಯುಷ್ ಬಡೋನಿ (55) ಮತ್ತು ನಿಕೋಲಸ್ ಪೂರನ್ (48) ಅವರ ಕೊನೇ ಹಂತದ ಕೊಡುಗೆಯೊಂದಿಗೆ ಲಕ್ನೋ ಮೂಲದ ತಂಡವು 20 ಓವರ್​ಗಳಲ್ಲಿ 165 ರನ್ ಗಳಿಸಿತು.

ಉತ್ತರವಾಗಿ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಕೇವಲ 9.4 ಓವರ್​ಗಳಲ್ಲಿ 166 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತು. ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 38 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಹೀಗಾಗಿ 10 ವಿಕೆಟ್​ಗಳ ವಿಜಯ ಲಭಿಸಿತು.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಕೆಟ್ಟ ಸಂದೇಶ ರವಾನಿಸುತ್ತದೆ – ಮೊಹಮ್ಮದ್ ಶಮಿ

ನಾಯಕನ ಬಗ್ಗೆ ಸಾರ್ವಜನಿಕ ಟೀಕೆ ನ್ಯಾಯಸಮ್ಮತವಲ್ಲ ಎಂದು ಮೊಹಮ್ಮದ್ ಶಮಿ ಹೇಳಿದ್ದಾರೆ. ತಂಡದ ಯೋಜನೆಗಳು ಯಾವಾಗಲೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬ ಆಟಗಾರನು ಗೌರವಕ್ಕೆ ಅರ್ಹನಾಗಿದ್ದಾನೆ ಮತ್ತು ಗೌರವಯುತ ಸಂವಹನದ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ರಾಹುಲ್ ನಾಯಕರೂ ಹೌದು. ಅವರು ಸಾಮಾನ್ಯ ಆಟಗಾರನಲ್ಲ. ಇದು ಒಂದು ತಂಡದ ಆಟ. ಯೋಜನೆ ಯಶಸ್ವಿಯಾಗದಿದ್ದರೆ, ಅದು ದೊಡ್ಡ ವಿಷಯವಲ್ಲ. ಆಟದಲ್ಲಿ ಏನು ಬೇಕಾದರೂ ಸಾಧ್ಯ. ಒಳ್ಳೆಯ ಅಥವಾ ಕೆಟ್ಟ ದಿನಗಳು ಇರಬಹುದು. ಆದರೆ ಪ್ರತಿಯೊಬ್ಬ ಆಟಗಾರನಿಗೆ ಗೌರವವಿದೆ, ಮತ್ತು ಮಾತನಾಡಲು ಒಂದು ಮಾರ್ಗವಿದೆ. ಇದು ತಪ್ಪು ಸಂದೇಶವನ್ನು ರವಾನಿಸುತ್ತದೆ, “ಎಂದು ಶಮಿ ಹೇಳಿದರು.

ಕೆಎಲ್ ರಾಹುಲ್ ನೇತೃತ್ವದ ತಂಡವು ಪ್ರಸ್ತುತ ಆರು ಗೆಲುವು ಮತ್ತು ಆರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪ್ಲೇಆಫ್ ರೇಸ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CKS), ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ ) ತಂಡಗಳಿಂದ ಎಲ್ಎಸ್​​ಜಿ ತಂಡವು ಕಠಿಣ ಸ್ಪರ್ಧೆ ಎದುರಿಸುತ್ತಿದೆ.

Continue Reading

ಕ್ರೀಡೆ

IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

IPL 2024: ಮುಂದಿನ ಎರಡು ಪಂದ್ಯಗಳನ್ನು ಗೆಲ್ಲುವುದರ ಹೊರತಾಗಿ, ಅವರಿಗೆ ಇತರ ಕೆಲವು ಫಲಿತಾಂಶಗಳು ಅನುಕೂಲಕರವಾಗಿರಬೇಕು. 12 ಅಂಕ ಗಳಿಸಿರುವ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಅರ್ಹತೆ ಪಡೆಯಲು ತುದಿಗಾಲಲ್ಲಿ ನಿಂತಿವೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Banglore ) ತಂಡದ ಪ್ಲೇಆಫ್​ ಆಸೆ ಜೀವಂತವಾಗಿದೆ. ಟೂರ್ನಿಯ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ 60 ರನ್​ಗಳ ಭರ್ಜರಿ ಗೆಲುವು ಅಭಿಮಾನಿಗಳ ಭರವಸೆ ಪುನರುಜ್ಜೀವನಗೊಳಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯವು ಎರಡೂ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ, ಆರ್​ಸಿಬಿಗೆ ಗೆದ್ದು ಬೀಗಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟ್​ ಮಾಡಲು ಪಂಜಾಬ್ ಆಹ್ವಾನಿಸಿತು. ಫಾಫ್ ಡು ಪ್ಲೆಸಿಸ್ (9) ಮತ್ತು ವಿಲ್ ಜಾಕ್ಸ್ (12) ಬೇಗನೆ ವಿಕೆಟ್ ಕಳೆದುಕೊಂಡರೂ, ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದರು. ರಜತ್ ಪಾಟಿದಾರ್ (55) ಅರ್ಧಶತಕ ಬಾರಿಸಿ ಪಂಜಾಬ್ ಕಿಂಗ್ಸ್ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ಅವರು ಕೊಹ್ಲಿ ಅವರೊಂದಿಗೆ 76 ರನ್ ಸೇರಿಸಿ ತಂಡವನ್ನು ಆರಂಭಿಕ ಎರಡು ವಿಕೆಟ್ ಕಳೆದುಕೊಂಡಾಗ ಎದುರಿಸಿದ್ದ ತೊಂದರೆಯಿಂದ ಪಾರು ಮಾಡಿದರು. ಅದರ ನಂತರ ಕ್ಯಾಮೆರಾನ್ ಗ್ರೀನ್ ಕೊಹ್ಲಿಯೊಂದಿಗೆ ಸೇರಿಕೊಂಡರು ಮತ್ತು ಇವರಿಬ್ಬರು ಮತ್ತಷ್ಟು ಬೌಲರ್​ಗಳನ್ನು ಚೆಂಡಾಡಿದರು.

ಪಂದ್ಯದಲ್ಲಿ ವಿರಾಟ್ ಕೊಹ್ಲಿ 92 ರನ್ ಗಳಿಸಿದರೆ, ಗ್ರೀನ್ 46 ರನ್ ಗಳಿಸಿದರು ಇದರು 241 ರನ್​ಗಳ ಬೃಹತ್​ ಮೊತ್ತ ಪೇರಿಸಲು ತಂಡಕ್ಕೆ ನೆರವಾಯಿತು. ಬ್ಯಾಟಿಂಗ್ ಆರಂಭಿಸಿದ ಪಂಜಾಬ್​ ಪರ ಪ್ರಭ್​ ಸಿಮ್ರಾನ್​ ಸಿಂಗ್ ಅವರನ್ನು ಬೇಗನೆ ಕಳೆದುಕೊಂಡರೂ ನಂತರದಲ್ಲಿ ಚೇತರಿಸಿಕೊಂಡಿತು. ಜಾನಿ ಬೈರ್ಸ್ಟೋವ್ (27) ಮತ್ತು ರಿಲೀ ರೊಸ್ಸೌ (61) ತಂಡವನ್ನು ಮುನ್ನಡೆಸಿದರು. ಇದಾದ ಬಳಿಕ ಶಶಾಂಕ್ ಸಿಂಗ್ (37) ಪ್ರಮುಖ ಇನ್ನಿಂಗ್ಸ್ ಆಡಿದರೂ ಉಳಿದವರಿಂದ ಬೆಂಬಲ ಸಿಗಲಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 181 ರನ್​ಗಳಿಗೆ ಆಲೌಟ್ ಮಾಡಿ 60 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ, ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ತಮ್ಮ ಅಭಿಯಾನವನ್ನು ಜೀವಂತವಾಗಿರಿಸಿಕೊಂಡರು.

ಐದನೇ ಗೆಲುವು, ಪ್ಲೇಆಫ್​ ಅವಕಾಶ ಹೇಗೆ?

ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಗೆಲುವು ಆರ್​ಸಿಬಿಯ ಒಟ್ಟು 5 ನೇ ಗೆಲುವಾಗಿದೆ. ಈ ಗೆಲುವಿನೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿಯೇ ಉಳಿತು. ಅವರು ತಮ್ಮ ನೆಟ್​ರನ್​ರೇಟ್​ ಅನ್ನು +0.217 ಕ್ಕೆ ಹೆಚ್ಚಿಸಿದ್ದಾರೆ. ಇದು ಮುಂದಿನ ಹಾದಿಯಲ್ಲಿ ಅವರಿಗೆ ಉಪಯುಕ್ತವಾಗಬಹುದು.

ಇದನ್ನೂ ಓದಿ: IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

ಪ್ಲೇ ಆಫ್ ಹಂತಕ್ಕೇರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರ ಮುಂದಿನ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಅವರು ಹಾಗೆ ಮಾಡಲು ಯಶಸ್ವಿಯಾದರೆ ಅವರು 14 ಅಂಕಗಳನ್ನು ಪಡೆಯುತ್ತಾರೆ.

ಮುಂದಿನ ಎರಡು ಪಂದ್ಯಗಳನ್ನು ಗೆಲ್ಲುವುದರ ಹೊರತಾಗಿ, ಅವರಿಗೆ ಇತರ ಕೆಲವು ಫಲಿತಾಂಶಗಳು ಅನುಕೂಲಕರವಾಗಿರಬೇಕು. 12 ಅಂಕ ಗಳಿಸಿರುವ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಅರ್ಹತೆ ಪಡೆಯಲು ತುದಿಗಾಲಲ್ಲಿ ನಿಂತಿವೆ.

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಉಳಿದ ಒಂದು ಪಂದ್ಯವನ್ನು ಸೋತರೆ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡು ಪಂದ್ಯಗಳನ್ನು ಸೋತರೆ, 4 ತಂಡಗಳು 14 ಅಂಕಗಳೊಂದಿಗೆ ಸಮಬಲ ಸಾಧಿಸುತ್ತವೆ. ಆರ್​ಸಿಬಿ ಇನ್ನುಳಿದ ಗೆಲುವಿನೊಂದಿಗೆ ಸಕಾರಾತ್ಮಕ ನೆಟ್​ರನ್​ರೇಟ್ ಹೊಂದಿದರೆ, ಇತರ ತಂಡಗಳನ್ನು ಹಿಮ್ಮೆಟ್ಟಿಸಿ ಪ್ಲೇಆಫ್​ ಗೆ ಏರಲು ಅವಕಾಶ ಮಾಡಿಕೊಡುತ್ತದೆ.

Continue Reading

ಕ್ರೈಂ

Prajwal Revanna case: ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

Prajwal Revanna case: ಈಗ ರಕ್ಷಣೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆಯನ್ನು ಎಸ್‌ಐಟಿಯಿಂದ ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದರು.

VISTARANEWS.COM


on

Prajwal Revanna case SIT did not contact woman to file false case
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಗುರುವಾರ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಮಾನ ಹೈಜಾಕ್ ಪ್ರಕರಣದ ಉಲ್ಲೇಖ

ಈ ವೇಳೆ ವಿಮಾನ ಹೈಜಾಕ್ ಪ್ರಕರಣವನ್ನು ಉಲ್ಲೆಖಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಈ ಹಿಂದೆ ವಿಮಾನ ಹೈಜಾಕ್ ಮಾಡಿ ಉಗ್ರನ ಬಿಡುಗಡೆಗೆ ಕೋರಿದ್ದರು. ವಿಮಾನ ಹೈಜಾಕ್ ಸಮಯದಲ್ಲಿ ಜಸ್ವಂತ್ ಸಿಂಗ್ ಮಂತ್ರಿ ಆಗಿದ್ದರು. ಆಗ ಉಗ್ರರನ್ನು ಬಿಟ್ಟು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬಿಡಿಸಿದ್ದರು. ಇದಾದ ಬಳಿಕವೇ ಸೆಕ್ಷನ್ 364(a) ಸೇರಿಸಲಾಯಿತು. ಇಲ್ಲಿ ಇಂತಹ ಘಟನೆ ನಡೆದಿಲ್ಲವಾದರೂ ಸೆಕ್ಷನ್ 364(a) ಸೇರಿಸಲಾಗಿದೆ. ನಮ್ಮ ಕಕ್ಷಿದಾರ ರೇವಣ್ಣ ವಿರುದ್ಧ 364(a) ದಾಖಲು ಮಾಡಿದ್ದಾರೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ 21 ವರ್ಷದ ಮಗ ದೂರು ನೀಡಿದ್ದಾನೆ ಎಂದು ವಾದ ಮಂಡಿಸಿದರು.

ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ?

ಮಹಿಳೆಯನ್ನು ಅಪಹರಿಸಿ ವಿದೇಶಕ್ಕೆ ಕರೆದೊಯ್ದರೆ ಈ ಸೆಕ್ಷನ್‌ಗಳು ಅಪ್ಲೇ ಆಗುತ್ತವೆ. ಪ್ರಕರಣದಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಾರಾಂಶ ಉಲ್ಲೇಖಿಸಿದ ನಾಗೇಶ್‌, ದೂರುದಾರ ಮಗನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ. ದೂರುದಾರನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ದೂರಿನಲ್ಲಿ ಇರುವ ಸತೀಶ್ ಬಾಬು ಹೇಳಿಕೆಯನ್ನು ಗಮನಿಸೋಣ. ಅದರಲ್ಲಿ “ನಿನ್ನ ತಾಯಿ ಮೇಲೆ ಪೊಲೀಸ್ ಕೇಸ್ ಆಗುತ್ತದೆ. ರೇವಣ್ಣ ಕರೆದಿದ್ದಾರೆಂದು ಹೇಳಿ ಕರೆದುಕೊಂಡು ಹೋದರು” ಎಂದು ಆರೋಪ ಮಾಡಲಾಗಿದೆ. ಹಾಗಾದರೆ, ಸಿಎಂ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ? ರೇವಣ್ಣ ಸಾಹೇಬರು ಹೇಳಿದ್ದಾರೆ ಎಂದು ಕರೆದೊಯ್ದರೆ ಅದು ಅಪಹರಣವೇ? ಇದರಲ್ಲಿ ಮೋಸವಿದೆಯೇ? ಬಲ ಪ್ರಯೋಗವಿದೆಯೇ? ಹೀಗಾಗಿ ಇಲ್ಲಿ ಅಪಹರಣದ ಯಾವುದೇ ಅಂಶಗಳು ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದರು.

ಪೊಲೀಸರು ಹಲ್ಲಿಲ್ಲದ ಹಾವುಗಳು

ಈ ಪ್ರಕರಣದಲ್ಲಿ ಅಪಹರಣಕ್ಕೊಳಗಾದವರೇ ಆಕ್ಷೇಪಣೆ ಸಲ್ಲಿಸಬೇಕು. ಬೇರೆ ಯಾರೂ ಆಕ್ಷೇಪಣೆ ಸಲ್ಲಿಸಲಾಗುವುದಿಲ್ಲ. 365 ಅಕ್ರಮ ಬಂಧನ‌ ಸೆಕ್ಷನ್ ಕೂಡ ಅನ್ವಯ ಆಗುವುದಿಲ್ಲ. ಇಲ್ಲಿ ಏನು ಡಿಮ್ಯಾಂಡ್ ಇದೆ? ಅಪಹರಣವೂ ಇಲ್ಲ,‌ ಅಕ್ರಮ ಬಂಧನವೂ ಇಲ್ಲ. ನಾಳೆ‌ ಯಾರಿಂದಲಾದರೂ ಹೇಳಿಕೆ ಪಡೆದು ಸಾಕ್ಷ್ಯ ಸೃಷ್ಟಿಸಬಹುದು. ಏಕೆಂದರೆ ಪೊಲೀಸರು ಹಲ್ಲಿಲ್ಲದ ಹಾವುಗಳು. ಪೊಲೀಸರಿಗೆ ಸೆಕ್ಷನ್ 161 ಹೇಳಿಕೆ ಎಂಬ ಅಸ್ತ್ರ ಇದೆ. ಇನ್ನು ಎಚ್.ಡಿ.ರೇವಣ್ಣ ರಾಜಕೀಯ ಪಕ್ಷದಲ್ಲಿದ್ದಾರೆ ಎಂದು ನಾಗೇಶ್‌ ವಾದಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಪ್ರಚೋದನೆಯಿಂದ ಕೂಡಿದ ಕೇಸ್‌ ಇದು

ಏಪ್ರಿಲ್ 29ರಂದು ಕಿಡ್ನ್ಯಾಪ್ ಆಗುತ್ತೆ, 4 ದಿನ ಬಿಟ್ಟು ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಏ.29ಕ್ಕೆ ಘಟನೆ ನಡೆದಿದೆ ಎಂದು ಉಲ್ಲೇಖಿಸಿದ್ದು, ಮೇ 2ರಂದು ಕೇಸ್ ದಾಖಲು ಮಾಡಲಾಗಿದೆ. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ‌ಕೇಸ್ ದಾಖಲಾಗಿತ್ತು. ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇತ್ತು. ನಂತರ ಪೊಲೀಸರು 41A ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಮೇ 3ರಂದು ನೋಟಿಸ್ ನೀಡಿ ಮೇ 4ರಂದು ವಿಚಾರಣೆಗೆ ಬರಲು ಹೇಳಿದ್ದಾರೆ. ರೇವಣ್ಣ ವಿರುದ್ಧ ದಾಖಲಾದ ಕೇಸ್ ಪ್ರಚೋದನೆಯಿಂದ ಆಗಿದೆ. ಪ್ರಚೋದನೆಯಿಂದ ಕೇಸ್ ಹಾಕಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರೇವಣ್ಣಗೆ ಜಾಮೀನು ನೀಡಬೇಕೆಂದು ಸಿ.ವಿ.ನಾಗೇಶ್ ಬಲವಾಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?

ತನಿಖೆಗೆ ಸಹಕರಿಸುತ್ತಿಲ್ಲ ಅಂತಾರೆ, ಯಾವ ರೀತಿ ಸಹಕರಿಸಬೇಕು. ಎಚ್.ಡಿ. ರೇವಣ್ಣ ಅವರ ತನಿಖೆ ಬಹುತೇಕ ಮುಗಿದಿದೆ. ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶವನ್ನು ನೀಡಿದೆ. ಕಸ್ಟಡಿಯಲ್ಲಿದ್ದಾಗ ತನಿಖೆ ಮುಗಿದಿದ್ದರೆ ಬೇಲ್ ನೀಡಬಹುದೆಂದು ಹೇಳಿದೆ. ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ಹೇಳಿಕೆ ಪಡೆದಿದ್ದಾರೆ. ಎಸ್‌ಐಟಿ ಏನೆಲ್ಲ ಸಾಕ್ಷಿ ಸಂಗ್ರಹಿಸಿದೆ ಎಂದು ಹೇಳಬೇಕು.

ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಯಾವುದನ್ನು ನಂಬಬೇಕು?

ಕಿಡ್ನ್ಯಾಪ್ ಸಂತ್ರಸ್ತೆಗೆ ಏನಾದರೂ ಗಾಯಗಳಾಗಿವೆಯಾ? ಕಿಡ್ನ್ಯಾಪ್ ಸಂತ್ರಸ್ತೆಗೆ ಯಾವುದೇ ಚಿಕಿತ್ಸೆಯನ್ನು ಕೊಡಿಸಿಲ್ಲ. ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿಲ್ಲ. 164 ಅಡಿಯಲ್ಲಿ ಹೇಳಿಕೆಯೂ ದಾಖಲಿಸಿಲ್ಲ. ಇಷ್ಟು ದಿನವಾದ್ರು ಯಾಕೆ 164 ಸ್ಟೇಟ್ಮೆಂಟ್ ಮಾಡಿಸಿಲ್ಲ. ಎಸ್‌ಐಟಿಯವರು ಕಳೆದ 6 ದಿನಗಳಿಂದ ಏನ್ ಮಾಡುತ್ತಿದ್ದಾರೆ? ಸಂತ್ರಸ್ತೆ ಪತ್ತೆಯಾದ ಸ್ಥಳದ ಕಂದಾಯ ದಾಖಲೆ ಪಡೆಯಬೇಕಂತಾರೆ. ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳುತ್ತಾರೆ, ಇದರರ್ಥವೇನು? ಸಂತ್ರಸ್ತೆ ಕೂಡಿಹಾಕಿದ್ದ ಸ್ಥಳ ಪರಿಶೀಲಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಇವರು ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಸಂತ್ರಸ್ತೆಯನ್ನು ಕರೆದೊಯ್ದ ವಾಹನ ಪತ್ತೆ ಹಚ್ಚಬೇಕು ಎಂದು ಹೇಳುತ್ತಾರೆ. ವಾಹನ ಸೀಜ್ ಮಾಡಬೇಕಿದೆ ಎಂದು ಕೂಡ ಹೇಳಿದ್ದಾರೆ. ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಗಾಡಿ ಸೀಜ್ ಬಗ್ಗೆ ತಿಳಿಸಿದ್ದಾರೆ. ಇವರು ಎಷ್ಟು ವಾಹನಗಳನ್ನು ಸೀಜ್ ಮಾಡಬೇಕು? ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್, ಮೊಬೈಲ್ ಸೀಜ್ ಆಗಿದೆ ಎಂದು ಎಸ್‌ಐಟಿಯವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಒಂದು ಕಡೆ ಸೀಜ್ ಮಾಡಬೇಕು ಎಂದು ಹೇಳಿಕೆ ಕೊಡುತ್ತಾರೆ. ಮತ್ತೊಂದು ಕಡೆ ವಾಹನ ಸೀಜ್ ಮಾಡಿರುವುದಾಗಿ ಅವರು ಹೇಳುತ್ತಾರೆ. ಯಾವುದನ್ನು ನಂಬಬೇಕು ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಈ ವಿಷಯದಲ್ಲಿ ರೇವಣ್ಣ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೂ ಒಂದು ಮಿತಿ ಇರಬೇಕು. ತನಿಖಾಧಿಕಾರಿಗಳು ನಾಲ್ಕು ದಿನಗಳಿಂದ ಏನು ಮಾಡುತ್ತಿದ್ದಾರೆ. ಎಸ್‌ಐಟಿಯವರು ಸ್ಥಳ ಮಹಜರು ಮಾಡಬೇಕು ಎಂದು ಹೇಳುತ್ತಾರೆ. ಆರೋಪಿ ಸತೀಶ್ ಬಾಬಣ್ಣ ಸಂತ್ರಸ್ತೆಯನ್ನು ಕರೆದೊಯ್ದ ಸ್ಥಳ, ಸಂತ್ರಸ್ತೆಯನ್ನ ಕೂಡಿಹಾಕಿದ ಸ್ಥಳ ಮಹಜರು ಮಾಡಬೇಕಂತಾರೆ. ಹಾಗಾದರೆ ಸ್ಥಳೀಯ ಪೊಲೀಸರು ಏನು ಮಾಡುತ್ತಾರೆ? ಸ್ಥಳೀಯ ಪೊಲೀಸರಿಂದ ಒಂದು ಸಲ ಸ್ಥಳ ಮಹಜರು, ಎಸ್‌ಐಟಿ ಒಂದು ಸಲ ಸ್ಥಳ ಮಹಜರು ಮಾಡಬೇಕಾ? ಎಸ್ಐಟಿ ಯಾವ ಕಾರಣಕ್ಕೆ ಪೊಲೀಸ್ ಕಸ್ಟಡಿಗೆ ಕೇಳಿತ್ತು ಎಂದು ರಿಮ್ಯಾಂಡ್ ಅರ್ಜಿಯನ್ನು ವಕೀಲ ಸಿ.ವಿ.ನಾಗೇಶ್ ಓದಿ ಹೇಳಿದರು. ಪೊಲೀಸರು ನೀಡಿದ್ದ ಕಾರಣಗಳನ್ನು ಇದೇ ವೇಳೆ ಪ್ರಶ್ನಿಸಿದರು.

ಸಂತ್ರಸ್ತೆಯಿಂದ‌ 164 ಹೇಳಿಕೆ‌ ದಾಖಲಿಸಬೇಕಿದೆ ಎಂದು ಎಸ್ಐಟಿ ಹೇಳಿದೆ. ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ಇಷ್ಟು ದಿನ ಏನು ಮಾಡುತ್ತಲಿದೆ? ಎಂದು ನಾಗೇಶ್‌ ಪ್ರಶ್ನೆ ಮಾಡಿದರು.

ಇಡೀ ಪ್ರಕರಣದ ಟೈಂ ಲೈನ್‌ ಹೇಳಿದ ಜಯ್ನಾ ಕೊಠಾರಿ

ಆಗ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ಎಚ್‌.ಡಿ. ರೇವಣ್ಣಗೆ ಜಾಮೀನು ನೀಡಲು ಎಸ್‌ಪಿಪಿಯಿಂದ ಆಕ್ಷೇಪವಿದೆ. ಸಂತ್ರಸ್ತೆ ಪುತ್ರನಿಗೆ ಮೊದಲು ಸಂತ್ರಸ್ತೆ ವಿಡಿಯೊ ಬಗ್ಗೆ ತಿಳಿಯುತ್ತದೆ. ಸಾಕಷ್ಟು ಮಹಿಳೆಯರೊಂದಿಗಿರುವ ಅಶ್ಲೀಲ ವಿಡಿಯೊಗಳೂ ಕಾಣುತ್ತದೆ. ಅದಾದ ಬಳಿಕ ‌ಮಹಿಳಾ ‌ಆಯೋಗಕ್ಕೆ ದೂರು ನೀಡುತ್ತಾರೆ. ಹೊಳೆನರಸೀಪುರ ಠಾಣೆಯಲ್ಲಿ ಒಂದು ‌ಪ್ರಕರಣ ದಾಖಲಾಗುತ್ತದೆ. ಬಳಿಕ ಸರ್ಕಾರದಿಂದ ಎಸ್‌ಐಟಿ ರಚನೆಯಾಗಿದೆ ಎಂದು ಇಡೀ ಪ್ರಕರಣದ ಟೈಂ ಲೈನ್‌ ಅನ್ನು ಹೇಳಿದರು.

ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ

ಸಂತ್ರಸ್ತೆ ಆರೋಪಿ ಮನೆಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದರು. ಏಪ್ರಿಲ್ 28ರ ರಾತ್ರಿ ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಅದಾದ ಬಳಿಕ ಆಕೆ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ಪುತ್ರ ಹಲವರಿಗೆ ಕರೆ ಮಾಡಿ ತಾಯಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಬಳಿಕ‌ ತನ್ನ ತಾಯಿ‌ ‌ತೊಂದರೆಯಲ್ಲಿದ್ದಾಳೆಂದು ದೂರು ನೀಡಿದ್ದಾರೆ. ಅಶ್ಲೀಲ‌ ವಿಡಿಯೋಗಳಲ್ಲಿ ಸಂತ್ರಸ್ತೆ ಗುರುತು ಸಿಗುವಂತೆ ರೆಕಾರ್ಡ್ ಆಗಿದೆ. ಬಳಿಕ ತನಿಖೆ ಕೈಗೊಂಡ ಬಳಿಕ ಎಸ್‌ಐಟಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿ 40 ಕಿ.ಮೀ. ದೂರದಲ್ಲಿ ಕೂಡಿ ಹಾಕಲಾಗಿತ್ತು. ಸಂತ್ರಸ್ತೆಯನ್ನು ಕೂಡಿಹಾಕಿದ್ದ ಸ್ಥಳ ಆರೋಪಿ ಸಂಬಂಧಿಗೆ ಸೇರಿದ್ದಾಗಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು

ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲೂ ರೇವಣ್ಣ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಕಿಡ್ನ್ಯಾಪ್, ಒತ್ತೆಯಾಳಾಗಿಟ್ಟುಕೊಂಡ ಪ್ರಕರಣವಾಗಿದೆ. ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ಹೇಳಿರೋದು ಸತ್ಯ. ಎಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 364(a) ಅನ್ವಯವಾಗುತ್ತದೆ. 364(a) ಅಡಿಯಲ್ಲಿ ದಾಖಲಾಗಿರೋ ಕೆಲ‌ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹೀಗಾಗಿ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ತೀವ್ರತೆಯೂ ಜಾಸ್ತಿ ಇದೆ. ಆರೋಪಿಯ ತಪ್ಪು ಕಂಡುಬಂದಾಗ ಬಹುತೇಕ ಈ ಸೆಕ್ಷನ್‌ಗಳನ್ನೇ ಹಾಕಲಾಗುತ್ತದೆ ಎಂದು ಜಯಾ ಕೊಠಾರಿ ಹೇಳಿದರು.

ರೇವಣ್ಣ ನಾಪತ್ತೆಯಾದರೆ? ಸಂತ್ರಸ್ತೆಯರ ಕಿಡ್ನ್ಯಾಪ್‌ ಮಾಡಿಸಿದರೆ?

ಆರೋಪಿಯ ಪುತ್ರ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದಾರೆ. ಆರೋಪಿ ಪುತ್ರನ ಪತ್ತೆಗೆ ಬ್ಲೂಕಾರ್ನರ್ ನೋಟಿಸ್ ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಆರೋಪಿ ಪುತ್ರ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಈವರೆಗೆ ವಾಪಸ್ ಕೂಡ ಬಂದಿಲ್ಲ. ಈ ಆರೋಪಿಯೂ ನಾಪತ್ತೆಯಾದರೆ ಏನು ಮಾಡುವುದು? ಅದಲ್ಲದೆ, ಆರೋಪಿ‌ ರೇವಣ್ಣ ತುಂಬಾನೇ ಪ್ರಭಾವಿಯಾಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ಹಾಳು‌ ಮಾಡುತ್ತಾರೆ. ಜಾಮೀನು‌ ನೀಡಿದರೆ ಸಂತ್ರಸ್ತೆ ಜೀವಕ್ಕೆ ಯಾರು ಗ್ಯಾರಂಟಿ ನೀಡ್ತಾರೆ? ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನ್ಯಾಪ್‌ ಮಾಡಬಹುದು ಎಂದು ಜಯಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ತನ್ನ ತಾಯಿಯನ್ನು ಕಾಪಾಡುವಂತೆ ಸಂತ್ರಸ್ತೆ ಮಗ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ನೀಡಬಾರದು. ಎಚ್.ಡಿ.ರೇವಣ್ಣ ವಿರುದ್ದ ಎರುಡು ಎಫ್ಐಆರ್ ದಾಖಲಾಗಿವೆ. ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯವೆಸಗಿರುವ ಆರೋಪವೂ ಇದೆ. ಲೈಂಗಿಕ‌ ದೌರ್ಜನ್ಯವೆಸಗುವ ಆರೋಪಿಗಳಿಗೆ ಸಂದೇಶ ರವಾನೆಯಾಗಬೇಕು. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು. ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಯಾ ಕೊಠಾರಿ ಮನವಿ ಮಾಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೋಮವಾರ ವರದಿ ಸಲ್ಲಿಸಲು ಸೂಚಿಸಿದ್ದಲ್ಲದೆ, ಮತ್ತೆ ಸಮಯ ವ್ಯರ್ಥ ಮಾಡದಂತೆ ಸೂಚಿಸಿ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ಪ್ರಮುಖ ಸುದ್ದಿ

IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

IPL 2024: ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ 14 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದರು. ವಿರಾಟ್ ಕೊಹ್ಲಿ ನಂತರ ಐಪಿಎಲ್​​ನಲ್ಲಿ ಆರ್ಸಿಬಿ ಪರ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸುತ್ತಿರುವ ದ್ರಾವಿಡ್ ಈ ಹಿಂದೆ ಐಪಿಎಲ್​​ನಲ್ಲಿ ಆರ್ಸಿಬಿ ಪರ 898 ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.

VISTARANEWS.COM


on

IPL 2024
Koo

ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Banglore) ಪರ 900 ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಎಂಬ ಐತಿಹಾಸಿಕ ದಾಖಲೆಯನ್ನು ವಿಕೆಟ್​ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್ (Dinesh Karthik) ​ ಸಾಧಿಸಿದ್ದಾರೆ. ಗುರುವಾರ ನಡೆದ ಪಂಜಾಬ್​ ಕಿಂಗ್ಸ್ (Punjab Kings) ವಿರುದ್ಧದ ಪಂದ್ಯದ ವೇಳೆ ಅವರು ಈ ಸಾಧನೆ ಮಾಡಿದ್ದಾರೆ. ಈ ಹಾದಿಯಲ್ಲಿ ಅವರು ಆರ್​ಸಿಬಿಯ (Royal Challengers Bangalore) ಮಾಜಿ ಬ್ಯಾಟರ್​ ಹಾಗೂ ವಿಕೆಟ್​ಕೀಪರ್​ ರಾಹುಲ್ ದ್ರಾವಿಡ್ ಅವರ ಸಾಧನೆಯನ್ನು ಮೀರಿದ್ದಾರೆ. ಆರ್​ಸಿಬಿ ತಂಡದ ಆಟಗಾರರು ಐಪಿಎಲ್ ಹಾಲಿ ಆವೃತ್ತಿಯಲ್ಲಿ (IPL 2024) ಲವಾರು ಸಾಧನೆ ಮಾಡುತ್ತಿರುವ ನಡುವೆ ದಿನೇಶ್ ಕಾರ್ತಿಕ್​ ಈ ಒಂದು ದಾಖಲೆ ಸೃಷ್ಟಿಸಿದ್ದಾರೆ.

ಮೇ 9, ಗುರುವಾರ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಆರ್​ಸಿಬಿಯ ಐಪಿಎಲ್ 2024 ರ ಮುಖಾಮುಖಿಯಲ್ಲಿ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಕಾರ್ತಿಕ್ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಅಂತೆಯೇ ಈ ಫ್ರಾಂಚೈಸಿಗಾಗಿ ಅವರು ಆಡಿದ 57 ಪಂದ್ಯಗಳಲ್ಲಿ 912 ರನ್ ಗಳಿಸಿದ್ದಾರೆ.

ಈ ಮೂಲಕ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ 14 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದರು. ವಿರಾಟ್ ಕೊಹ್ಲಿ ನಂತರ ಐಪಿಎಲ್​​ನಲ್ಲಿ ಆರ್ಸಿಬಿ ಪರ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸುತ್ತಿರುವ ದ್ರಾವಿಡ್ ಈ ಹಿಂದೆ ಐಪಿಎಲ್​​ನಲ್ಲಿ ಆರ್ಸಿಬಿ ಪರ 898 ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದರು.

ರಾಹುಲ್ ದ್ರಾವಿಡ್ ದಾಖಲೆ ಮುರಿದ ದಿನೇಶ್ ಕಾರ್ತಿಕ್

ಕೊಹ್ಲಿ 2008 ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಬೆಂಗಳೂರು ಮೂಲದ ಫ್ರಾಂಚೈಸಿಯ ಭಾಗವಾಗಿದ್ದಾರೆ, ಮತ್ತು ಅವರು ಪ್ರಸ್ತುತ ಐಪಿಎಲ್ 2024 ರಲ್ಲಿ ಆಡಿದ 249 ಪಂದ್ಯಗಳಲ್ಲಿ 7897 ರನ್​​ಗಳೊಂದಿಗೆ ಆರ್​ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಈ ಋತುವಿನಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿರುವ ಅವರು ಒಟ್ಟಾರೆಯಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನ ಅರ್ಶ್​ದೀಪ್ ಸಿಂಗ್​ ಎಸೆದ 18 ನೇ ಓವರ್​ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಕಾರ್ತಿಕ್ ಈ ಮೈಲಿಗಲ್ಲನ್ನು ಸಾಧಿಸಿದರು.

ಧರ್ಮಶಾಲಾದಲ್ಲಿ ನಡೆದ ಪಿಬಿಕೆಎಸ್ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ 38ರ ಹರೆಯದ ಆರ್​ಸಿಬಿ ಸ್ಟಾರ್ ಆಟಗಾರ ಏಳು ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಎರಡು ಸಿಕ್ಸರ್​ಗಳೊಂದಿಗೆ 18 ರನ್ ಗಳಿಸುವ ಮೂಲಕ ತಮ್ಮ ಬ್ಯಾಟಿಂಗ್ ಪರಾಕ್ರಮ ಪ್ರದರ್ಶಿಸಿದರು. ಈ ಮೂಲಕ ಕಳೆದ 17 ವರ್ಷಗಳಲ್ಲಿ ಐಪಿಎಲ್​ನಲ್ಲಿ ಆರ್​ಸಿಬಿ ಪರ 1000 ರನ್ ಗಡಿ ದಾಟಿದ ಆರು ಬ್ಯಾಟರ್​ಗಳ ಎಲೈಟ್ ಗುಂಪಿಗೆ ಕಾರ್ತಿಕ್ ಸೇರ್ಪಡೆಯಾಗಿದ್ದಾರೆ.

ವಿದೇಶಿ ದಿಗ್ಗಜರ ಪಟ್ಟಿಗೆ ದಿನೇಶ್ ಕಾರ್ತಿಕ್ ಸೇರ್ಪಡೆ

ಈ ಎಲೈಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್, ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮತ್ತು ಪ್ರಸ್ತುತ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಜಾಕ್ ಕಾಲಿಸ್ ಮತ್ತು ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್​ ಸೇರಿದಂತೆ ಐದು ವಿದೇಶಿ ತಾರೆಗಳು ಸೇರಿದ್ದಾರೆ.

ಎಬಿ ಡಿವಿಲಿಯರ್ಸ್ ಆರ್ಸಿಬಿ ಪರ 156 ಐಪಿಎಲ್ ಪಂದ್ಯಗಳಲ್ಲಿ 4491 ರನ್ ಗಳಿಸಿದ್ದರೆ, ಕ್ರಿಸ್ ಗೇಲ್ 85 ಪಂದ್ಯಗಳಲ್ಲಿ 3163 ರನ್ ಗಳಿಸಿದ್ದಾರೆ. ಐಪಿಎಲ್​​ನಲ್ಲಿ ಆರ್​ಸಿಬಿ ಪರ ಫಾಫ್ ಡು ಪ್ಲೆಸಿಸ್ 42 ಪಂದ್ಯಗಳಲ್ಲಿ 1559 ರನ್ ಗಳಿಸಿದ್ದರೆ, ಗ್ಲೆನ್ ಮ್ಯಾಕ್ಸ್ವೆಲ್ 50 ಪಂದ್ಯಗಳಲ್ಲಿ 1250 ರನ್ ಗಳಿಸಿದ್ದಾರೆ. ಜಾಕ್ ಕಾಲಿಸ್ ಆರ್​ಸಿಬಿ ಪರ 42 ಐಪಿಎಲ್ ಪಂದ್ಯಗಳಲ್ಲಿ 1132 ರನ್ ಗಳಿಸಿದ್ದಾರೆ.

ಆರ್​ಸಿಬಿ ಗುರುವಾರ ಧರ್ಮಶಾಲಾದಲ್ಲಿ ಪಿಬಿಕೆಎಸ್ ಅನ್ನು 60 ರನ್​ಗಳಿಂದ ಸೋಲಿಸಿ ಐಪಿಎಲ್ 2024 ಪಾಯಿಂಟ್ಸ್ ಟೇಬಲ್​​ನಲ್ಲಿ 7 ನೇ ಸ್ಥಾನಕ್ಕೆ ಏರಿದೆ.. ಆರ್​ಸಿಬಿ ತನ್ನ ಅಭಿಯಾನದ ಕಳಪೆ ಆರಂಭದ ನಂತರ ಫಾರ್ಮ್​ಗೆ ಮರಳಿದೆ. ಸತತ ನಾಲ್ಕು ಪಂದ್ಯಗಳನ್ನು ಗೆದ್ದಿದೆ.

ಆರ್​​ಸಿಬಿ ಪ್ಲೇಆಫ್​ ಹಂತಕ್ಕೆ ಏರಬೇಕಾದರೆ ಮೊದಲಾಗಿ ಮೇ 12 ರಂದು ಡೆಲ್ಲಿ ಕ್ಯಾಪಿಟಲ್ಸ್ (Delhi Capitlas) ಮತ್ತು ಮೇ 18 ರಂದು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಗೆಲ್ಲಬೇಕಾಗಿದೆ. ಜತೆಗೆ ಇತರ ತಂಡಗಳ ಫಲಿತಾಂಶಗಳು ಕೂಡ ಪೂರಕವಾಗಿರಬೇಕಾಗುತ್ತದೆ.

Continue Reading
Advertisement
IPL 2024
ಕ್ರೀಡೆ46 seconds ago

IPL 2024: ಕೆ.ಎಲ್​ ರಾಹುಲ್​ಗೆ ಬೈದ ಎಲ್​​ಎಸ್​​ಜಿ ಮಾಲೀಕ ಗೋಯೆಂಕಾ ವರ್ತನೆಗೆ ಮೊಹಮ್ಮದ್​ ಶಮಿ ಆಕ್ರೋಶ

Self Harming Murder case In kodagu
ಕೊಡಗು8 mins ago

Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

IPL 2024
ಕ್ರೀಡೆ19 mins ago

IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

Prajwal Revanna case SIT did not contact woman to file false case
ಕ್ರೈಂ23 mins ago

Prajwal Revanna case: ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

Murder case
ಕ್ರೈಂ29 mins ago

Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

IPL 2024
ಪ್ರಮುಖ ಸುದ್ದಿ44 mins ago

IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

Madara Channaiah Gurupeeta
ಕರ್ನಾಟಕ47 mins ago

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Viral News
ವೈರಲ್ ನ್ಯೂಸ್54 mins ago

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Laila Khan
ಸಿನಿಮಾ1 hour ago

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Kantilal Bhuria
ದೇಶ1 hour ago

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ3 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ4 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ6 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ12 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ20 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ21 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌