Kichcha Sudeep Home Theater Photo Goes Viral Kichcha Sudeep: ಸುದೀಪ್‌ ಮನೆಯ ಹೋಮ್ ಥಿಯೇಟರ್ ʻಸಿಂಹದ್ವಾರʼ ಫೋಟೊ ವೈರಲ್‌; ಕಿಚ್ಚ 46 ಸಿನಿಮಾಗೆ ಲಿಂಕ್‌ ಏನು? - Vistara News

South Cinema

Kichcha Sudeep: ಸುದೀಪ್‌ ಮನೆಯ ಹೋಮ್ ಥಿಯೇಟರ್ ʻಸಿಂಹದ್ವಾರʼ ಫೋಟೊ ವೈರಲ್‌; ಕಿಚ್ಚ 46 ಸಿನಿಮಾಗೆ ಲಿಂಕ್‌ ಏನು?

Kichcha Sudeep: ಕಿಚ್ಚ 46 ಸಿನಿಮಾವನ್ನು ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ. ಈ ಬ್ಯಾನರ್​ ಜತೆ ಸುದೀಪ್​ ಅವರು ಸಿನಿಮಾ ಮಾಡಲಿರುವುದು ವಿಶೇಷ.

VISTARANEWS.COM


on

Kichcha Sudeep Home Theater Photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಿಚ್ಚ ಸುದೀಪ್ (Kichcha Sudeep) ಅವರ ಮುಂದಿನ ಚಿತ್ರ, ಕಿಚ್ಚ 46 ಸಿನಿಮಾವನ್ನು ತಮಿಳು ನಿರ್ಮಾಪಕ ಕಲೈಪುಲಿ ಎಸ್‌ ಧಾನು ಇತ್ತೀಚೆಗೆ ಘೋಷಿಸಿದ್ದರು. ಈಗ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಒಪ್ಪಿಕೊಂಡಿದ್ದಾರೆ. ಕಿಚ್ಚ 46 ಸಿನಿಮಾ ದಿನೇದಿನೆ ಹೊಸ ಅಪ್‌ಡೇಟ್‌ ಹಂಚಿಕೊಳ್ಳುತ್ತಲೇ ಇದೆ. ಇದರ ಕೆಲಸ ಸುದೀಪ್​ ಮನೆಯಲ್ಲೇ ನಡೆಯುತ್ತಿದೆ ಎನ್ನಲಾಗಿದೆ. ಈಗ ಸುದೀಪ್ ಹೋಮ್ ಥಿಯೇಟರ್ ಬಾಗಿಲ ಫೋಟೊ ವೈರಲ್‌ ಆಗಿದೆ.

ಕಿಚ್ಚ 46 ಸಿನಿಮಾವನ್ನು ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ. ಈ ಬ್ಯಾನರ್​ ಜತೆ ಸುದೀಪ್​ ಅವರು ಸಿನಿಮಾ ಮಾಡಲಿರುವುದು ವಿಶೇಷ. ಟೀಸರ್ ಶೂಟಿಂಗ್‌ಗಾಗಿ ಸುದೀಪ್ ಸೆಟ್‌ಗೆ ಬಂದಿರುವ ವಿಡಿಯೊ ಚಿತ್ರತಂಡ ಶೇರ್‌ ಮಾಡಿಕೊಂಡಿತ್ತು.

ವೀರಕಪುತ್ರ ಶ್ರೀನಿವಾಸ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ʻʻಸುದೀಪ್ ಹೋಮ್​ ಥಿಯೇಟರ್​ ಬಾಗಿಲ ಫೋಟೊ ಅವರು ಶೇರ್ ಮಾಡಿಕೊಂಡಿದ್ದಾರೆ. ‘ನಿನ್ನೆ ರಾತ್ರಿ ಚಿಕ್ಕೆಜಮಾನರನ್ನು ಭೇಟಿ ಆದೆ. ಮನೆಯಲ್ಲಿ ಕಿಚ್ಚ 16 ಸಿನಿಮಾಗಾಗಿ ಹತ್ತಾರು ಜನ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದನ್ನು ನೋಡಿದೆ. ಆ ದೃಶ್ಯ ಕಂಡ ಮೇಲೆ ಮುಂದಿನವಾರ ಘೋಷಣೆ ಆಗುತ್ತಿರುವ ಆ ಸಿನೆಮಾ ಬಗ್ಗೆ ನಿರೀಕ್ಷೆಗಳು ನೂರ್ಮಡಿಯಾದವು. ಅಂದ ಹಾಗೆ ಇದು ಅವರ ಹೋಮ್ ಥೀಯೇಟರ್​​ನ ಬಾಗಿಲು, ಹೇಗಿದೆ ಸಿಂಹದ್ವಾರ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kichcha Sudeepa: ಜೂನ್ 7ರಂದು ಕಿಚ್ಚ 46 ಸಿನಿಮಾದ ಟೀಸರ್‌ ರಿಲೀಸ್‌? ಹೊಸ ಅಪ್‌ಡೇಟ್‌ ಇಲ್ಲಿದೆ!

ವೀರಕಪುತ್ರ ಶ್ರೀನಿವಾಸ್ ಟ್ವೀಟ್‌

ಕಿಚ್ಚ 46 ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರವನ್ನು ನಿಭಾಯಿಸಲಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಥ್ರಿಲ್ಲರ್ ಸಿನಿಮಾ ಎಂದು ಸಾಕಷ್ಟು ಊಹಾಪೋಹಗಳಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಸುದ್ದಿ ಚಿತ್ರತಂಡ ಹೇಳಿಕೊಂಡಿಲ್ಲ. ಸುದೀಪ್‌ ಈ ಚಿತ್ರಕ್ಕಾಗಿ ಎರಡು ತಿಂಗಳು ಮೀಸಲಿಟ್ಟಿದ್ದಾರೆ. ಇತ್ತೀಚಿನ ಸುದ್ದಿ ಏನೆಂದರೆ ಗದರ್ -2 ನಟಿ ಸಿಮ್ರತ್ ಕೌರ್ ( Simrat Kaur) ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಜತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kichcha Sudeepa: ಕಿಚ್ಚ ಸುದೀಪ್ ಜತೆ ತೆರೆ ಹಂಚಿಕೊಳ್ಳಲಿದ್ದಾರಾ ಗದರ್ -2 ನಟಿ?

ಈಗಾಗಲೇ ಕಿಚ್ಚನ ಕೈಯಲ್ಲಿ ಮೂರು ಸಿನಿಮಾಗಳಿವೆ. ವರದಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ ಎನ್ನಲಾಗಿದೆ. ಭಾರಿ ಬಜೆಟ್ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

Actor Rajinikanth: ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Rajinikanth Thailaiver 171 lokesh kanakaraj entry
Koo

ಬೆಂಗಳೂರು: ʻಜೈಲರ್’ ಬಳಿಕ ರಜನಿಕಾಂತ್ (Actor Rajinikanth) ‘ಲಾಲ್ ಸಲಾಂ’ (Lal Salaam) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ನಂತರ ಜ್ಞಾನವೇಲ್ ನಿರ್ದೇಶನದ ಚಿತ್ರಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ. ಈ ಎರಡೂ ಸಿನಿಮಾಗಳು ಮುಗಿದ ಬಳಿಕ ಕಾಲಿವುಡ್ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ತಲೈವಾ ನಟಿಸುವುದು ಫಿಕ್ಸ್‌ ಆಗಿದೆ. ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಈ ಸುದ್ದಿ ನಿಜ ಅಂತಾದರೆ ರಜನಿಕಾಂತ್‌ ಹಾಗೂ ನಾರ್ಜುನ ಅವರು 32 ವರ್ಷಗಳ ಬಳಿಕ ತೆರೆ ಮೇಲೆ ನೋಡಬಹುದು. ನಾಗಾರ್ಜುನಗೆ ಮಲ್ಟಿಸ್ಟಾರರ್ ಸಿನಿಮಾ ಹೊಸದೇನು ಅಲ್ಲ. ಇತ್ತೀಚೆಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಜತೆ ಕಾಣಿಸಿಕೊಂಡಿದ್ದರು. ಈಗ ಧನುಷ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಊಪಿರಿ’ ಸಿನಿಮಾದಲ್ಲೂ ಕಾರ್ತಿ ಜೊತೆ ನಾಗಾರ್ಜುನ ಜತೆ ನಟಿಸಿದ್ದರು. ಹೀಗಾಗಿ ರಜನಿಕಾಂತ್ ಜತೆ ನಟಿಸಬಹುದು ಎಂದು ಹೇಳಲಾಗುತ್ತಿದೆ.

ಟಿ.ಜೆ.ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲಯಾಳಂ ನಟ ಫಹಾದ್‌ ಫಾಸಿಲ್‌ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಜತೆಯಾಗಿ ನಟಿಸುತ್ತಿರುವ ಫೋಟೊ ಇಂಟರ್‌ನೆಟ್‌ನಲ್ಲಿ ಹರಿದಾಡಿ ವೈರಲ್‌ ಆಗಿತ್ತು. ವಿಶೇಷ ಎಂದರೆ ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ರಾಣಾ ದಗ್ಗುಬಾಟಿ, ಮಲಯಾಳಂ ನಟಿ ಮಂಜು ವಾಯಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ಸಂಯೋಜಿಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?

ಕಥೆ ಏನು?

‘ವೆಟ್ಟೈಯನ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಿರುವನಂತಪುರಂ, ತಿರುನೆಲ್ವೇಲಿ ಮತ್ತು ಮುಂಬೈ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದೆ. ತಮಿಳು ಜತೆಗೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಟೀಸರ್‌ ಬಿಡುಗಡೆ

ಇತ್ತೀಚೆಗೆ ‘ವೆಟ್ಟೈಯನ್’ ಚಿತ್ರದ ಟೀಸರ್‌ ಬಿಡುಗಡೆಯಾಗಿತ್ತು. ಲಾಠಿ ಹಿಡಿದು ರಜನಿಕಾಂತ್‌ ಆಗಮಿಸುವ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಜತೆಗೆ ರಜನಿಕಾಂತ್ ತಮ್ಮದೇ ಶೈಲಿಯಲ್ಲಿ ಕನ್ನಡಕ ಹಾಕಿಕೊಳ್ಳುತ್ತ ಡೈಲಾಗ್‌ ಹೇಳುವ ದೃಶ್ಯ, ಕೈ ಹಿಂಬದಿಯಲ್ಲಿಟ್ಟುಕೊಂಡು ಚಿಟಿಕೆ ಹೊಡೆಯುವ ಸೀನ್‌ ಗಮನ ಸೆಳೆದಿತ್ತು. ‌ʼವೆಟ್ಟೈಯನ್‌ʼ ಎಂದರೆ ಕನ್ನಡದಲ್ಲಿ ಬೇಟೆಗಾರ ಎಂದರ್ಥ. ಈ ಸಿನಿಮಾದಲ್ಲಿ ರಜನಿಕಾಂತ್‌ ಅಪರಾಧಿಗಳ ಬೇಟೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆಗಲೇ ಪ್ರೇಕ್ಷಕರು ಊಹಿಸಿದ್ದರು.

Continue Reading

ಕಾಲಿವುಡ್

Nayanthara-Vignesh Shivan: ಪತಿಯ ಕಂಡು ನಯನತಾರಾ ನಾಚಿ ನೀರಾಗಿದ್ದೇಕೆ!

Nayanthara-Vignesh Shivan: ನಯನತಾರಾ ಇತ್ತೀಚೆಗೆ ಕುಟುಂಬದ ಜತೆಗೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಆಗಾಗ ಅವಳಿ ಮಕ್ಕಳ ಜತೆ ಸಮಯ ಕಳೆಯುತ್ತಿರುವ ಕ್ಷಣಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ಪತಿ ಜತೆ ಕ್ಯೂಟ್‌ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ನಯನತಾರಾ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ನಟಿ ನಯನತಾರಾ (Actress Nayanthara ) ಮತ್ತು ನಿವಿನ್ ಪೌಲ್‌ ಮುಂಬರುವ ಮಲಯಾಳಂ ಚಿತ್ರ ‘ಡಿಯರ್ ಸ್ಟೂಡೆಂಟ್ಸ್’ಗ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

VISTARANEWS.COM


on

Nayanthara-Vignesh Shivan latest pictures
Koo

ನಟಿ ನಯನತಾರಾ ಪತಿ ವಿಘ್ನೇಶ್ ಶಿವನ್ (Nayanthara-Vignesh Shivan) ಅವರೊಂದಿಗೆ ಕೆಲವು ಸುಂದರವಾದ ಪೋಟೊಗಳನ್ನು ಹಂಚಿಕೊಂಡಿದ್ದಾರೆ. ದಂಪತಿ ಟ್ರೆಡಿಷನಲ್‌ ಲುಕ್‌ನಲ್ಲಿ ಕ್ಯೂಟ್‌ ಆಗಿ ಕಂಡಿದ್ದಾರೆ.

ನಯನತಾರಾ ಲ್ಯಾವೆಂಡರ್ ಬಣ್ಣದ ಸೀರೆ ಮತ್ತು ವಿಘ್ನೇಶ್ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿದ್ದರು. ನಯನತಾರಾ ಒಂದು ಫೋಟೊದಲ್ಲಿ ಪತಿ ಕಂಡು ನಾಚಿ ನೀರಾಗಿದ್ದಾರೆ.

ವಿಘ್ನೇಶ್ ಅವರು ಕೂಡ ತಮ್ಮ ಇನ್‌ಸ್ಟಾದಲ್ಲಿ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜೋಡಿ ಉದ್ಯಾನವನದಲ್ಲಿ ಸುಂದರ ಸಮಯ ಕಳೆದಿದೆ.

ಇದನ್ನೂ ಓದಿ: Lady Superstar: ಖ್ಯಾತ ನಿರ್ದೇಶಕರ ಚಿತ್ರದಲ್ಲಿ ನಟಿಸ್ತಾರಾ ನಯನತಾರಾ?

ನಿರ್ದೇಶಕ ಶಂಕರ್ ಅವರ ಪುತ್ರಿ ಐಶ್ವರ್ಯಾ ಮತ್ತು ತರುಣ್ ಕಾರ್ತಿಕೇಯನ್ ಅವರ ಮದುವೆಗೆಂದು ನಯನತಾರಾ ದಂಪತಿ ರೆಡಿಯಾಗಿರುವ ಫೋಟೊಗಳಿವು.

ಈ ಅದ್ಧೂರಿ ವಿವಾಹಕ್ಕೆ ರಜನಿಕಾಂತ್, ಕಮಲ್ ಹಾಸನ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

ಸ್ಯಾಂಡಲ್ ವುಡ್

Indushree Raveendra: ಹೆಣ್ಣು ಮಗುವಿಗೆ ಜನ್ಮ ನೀಡಿದ ಇಂದುಶ್ರೀ ರವೀಂದ್ರ; ಕೋಕಿಲಾ ಅಜ್ಜಿ ಫುಲ್‌ ಖುಷ್‌!

Indushree Raveendra: ಕಿರುತೆರೆಯ ಹಲವು ಕಾರ್ಯಕ್ರಮಗಳಲ್ಲಿ ಇಂದುಶ್ರೀ ರವೀಂದ್ರ ತಮ್ಮ ಮಾತನಾಡುವ ಗೊಂಬೆಗಳಿಂದ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದರು ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಇಂದುಶ್ರೀ ಏಪ್ರಿಲ್ 8ರಂದು ಜೆನರಲ್ ಚೆಕಪ್‌ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಆಗ ಎಮರ್ಚೆನ್ಸಿ ಆಪರೇಷನ್ ಮಾಡಿದ್ದಾರೆ. ನಮ್ಮ ಮನೆಯ ʻಪುಟ್ಟಿʼ ಎಂದು ಇಂದುಶ್ರೀ ಈ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

VISTARANEWS.COM


on

Indushree Raveendra: bless with baby girl
Koo

ಭಾರತದ ಮೊದಲ ಮಹಿಳಾ ವೆಂಟ್ರಿಲೋಕ್ವಿಸ್ಟ್ (Indushree Raveendra) ಇಂದುಶ್ರೀ ರವೀಂದ್ರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಇಂದುಶ್ರೀ ಏಪ್ರಿಲ್ 8ರಂದು ಜೆನರಲ್ ಚೆಕಪ್‌ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಆಗ ಎಮರ್ಚೆನ್ಸಿ ಆಪರೇಷನ್ ಮಾಡಿದ್ದಾರೆ.

ನಮ್ಮ ಮನೆಯ ʻಪುಟ್ಟಿʼ ಎಂದು ಇಂದುಶ್ರೀ ಈ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಆಪರೇಷನ್‌ಗೂ ಮುನ್ನ ಕೋಕಿಲಾ ಅಜ್ಜಿ (ಗೊಂಬೆ) ಎಂಟ್ರಿ ಕೊಟ್ಟಿದ್ದರು. ಈ ವಿಡಿಯೊ ಕೂಡ ಶೇರ್‌ ಮಾಡಿಕೊಂಡಿದ್ದಾರೆ ಇಂದುಶ್ರೀ.

ಡಿಂಕು, ವೆಂಕಿ, ಕೋಕಿಲಾ ಅಜ್ಜಿ ಮುಂತಾದ ಮಾತನಾಡುವ ಗೊಂಬೆಗಳಿಂದ ಜನರನ್ನು ನಗೆಗಡಲಲ್ಲಿ ತೇಲಿಸಿ ಸೈ ಎನಿಸಿಕೊಂಡಿದ್ದಾರೆ ಇಂದುಶ್ರೀ ರವೀಂದ್ರ.

ಇದನ್ನೂ ಓದಿ: Indushree Raveendra: ಹಾಸ್ಯ ಕಲಾವಿದೆ ಇಂದುಶ್ರೀ ಸೀಮಂತ: ʻಪುಟಾಣಿ ಡಿಂಕು ಬರ್ಲಿʼ ಎಂದು ಹಾರೈಸಿದ ಫ್ಯಾನ್ಸ್‌

ಅಮೆರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಪ್ರದರ್ಶನ ನೀಡಿ ಖ್ಯಾತಿ ಪಡೆದಿರುವ ಇಂದುಶ್ರೀ ರವೀಂದ್ರ 2017ರಲ್ಲಿ ಅಶ್ವತ್ಥ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

Continue Reading

ಸ್ಯಾಂಡಲ್ ವುಡ್

Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

Ramana Avatara: ʻರಾಮನ ಅವತಾರʼ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ.

VISTARANEWS.COM


on

Ramana Avatara Release Date announced
Koo

ಬೆಂಗಳೂರು: ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ʻರಾಮನ ಅವತಾರʼ (Ramana Avatara) ಸಿನಿಮಾವು ಮೇ 10ರಂದು ಬಿಡುಗಡೆಯಾಗಲಿದೆ. ರಿಷಿ, ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ನಟಿಸಿರುವ ಈ ಸಿನಿಮಾಕ್ಕೆ ವಿಕಾಸ್ ಪಂಪಾಪತಿ ಆಕ್ಷನ್‌ ಕಟ್‌ ಹೇಳಿದ್ದಾರೆ.

ರಿಷಿ ರಾಮನ ಅವತಾರದಲ್ಲಿ ಸ್ಯಾಂಡಲ್‌ವುಡ್‌ ಚಿತ್ರಮಂದಿರಗಳಿಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿದ್ದಾರೆ. ʻರಾಮನ ಅವತಾರʼ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.‌‌ ಮೇ‌ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.

ʻರಾಮನ ಅವತಾರʼ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Actor Rishi: ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್!

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ನ ಈ ಚಿತ್ರಕ್ಕೆ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಹಿಡಿದಿದ್ದಾರೆ. ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಕಲನವಿದೆ. ರಾಮನ ಅವತಾರ ಸಿನಿಮಾದ ಶೂಟಿಂಗ್‌ ಅನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

Continue Reading
Advertisement
OM Puri
ಬಾಲಿವುಡ್9 mins ago

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

malasia helicopter crash viral video
ವೈರಲ್ ನ್ಯೂಸ್15 mins ago

Viral video: ಗಾಳಿಯಲ್ಲಿ ಭಯಾನಕವಾಗಿ ಡಿಕ್ಕಿ ಹೊಡೆದುಕೊಂಡ ಹೆಲಿಕಾಪ್ಟರ್‌ಗಳು, 10 ಸಾವು

CSK vs LSG
ಕ್ರೀಡೆ46 mins ago

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

Bengaluru Karaga
ಬೆಂಗಳೂರು1 hour ago

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

Rohit Sharma
ಕ್ರೀಡೆ1 hour ago

Rohit Sharma: ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಬಂದ ರಾಜಸ್ಥಾನ್​ ಕೋಚ್​; ವಿಡಿಯೊ ವೈರಲ್

Amit Shah
ಕರ್ನಾಟಕ2 hours ago

Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

bolero hit 3 death road accident raichur
ರಾಯಚೂರು2 hours ago

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Yashasvi Jaiswal
ಕ್ರೀಡೆ2 hours ago

Yashasvi Jaiswal: ಶತಕ ಬಾರಿಸಿ ಐಪಿಎಲ್​ನಲ್ಲಿ ನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

Union Minister Pralhad Joshi election campaign in shiggavi taluk
ಹುಬ್ಬಳ್ಳಿ2 hours ago

Lok Sabha Election 2024: ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳಿಗೆ ಅಪಾಯ: ಪ್ರಲ್ಹಾದ್‌ ಜೋಶಿ

DCM DK Shivakumar election campaign for Chikkaballapur Lok Sabha constituency Congress candidate Raksha Ramaiah
ಚಿಕ್ಕಬಳ್ಳಾಪುರ2 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆಲ್ಲುವುದು ನಿಶ್ಚಿತ: ಶಿವಕುಮಾರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು18 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ19 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು21 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು23 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌