Site icon Vistara News

Kichcha Sudeep: ಸುದೀಪ್‌ ಮನೆಯ ಹೋಮ್ ಥಿಯೇಟರ್ ʻಸಿಂಹದ್ವಾರʼ ಫೋಟೊ ವೈರಲ್‌; ಕಿಚ್ಚ 46 ಸಿನಿಮಾಗೆ ಲಿಂಕ್‌ ಏನು?

Kichcha Sudeep Home Theater Photo

ಬೆಂಗಳೂರು: ಕಿಚ್ಚ ಸುದೀಪ್ (Kichcha Sudeep) ಅವರ ಮುಂದಿನ ಚಿತ್ರ, ಕಿಚ್ಚ 46 ಸಿನಿಮಾವನ್ನು ತಮಿಳು ನಿರ್ಮಾಪಕ ಕಲೈಪುಲಿ ಎಸ್‌ ಧಾನು ಇತ್ತೀಚೆಗೆ ಘೋಷಿಸಿದ್ದರು. ಈಗ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಒಪ್ಪಿಕೊಂಡಿದ್ದಾರೆ. ಕಿಚ್ಚ 46 ಸಿನಿಮಾ ದಿನೇದಿನೆ ಹೊಸ ಅಪ್‌ಡೇಟ್‌ ಹಂಚಿಕೊಳ್ಳುತ್ತಲೇ ಇದೆ. ಇದರ ಕೆಲಸ ಸುದೀಪ್​ ಮನೆಯಲ್ಲೇ ನಡೆಯುತ್ತಿದೆ ಎನ್ನಲಾಗಿದೆ. ಈಗ ಸುದೀಪ್ ಹೋಮ್ ಥಿಯೇಟರ್ ಬಾಗಿಲ ಫೋಟೊ ವೈರಲ್‌ ಆಗಿದೆ.

ಕಿಚ್ಚ 46 ಸಿನಿಮಾವನ್ನು ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ. ಈ ಬ್ಯಾನರ್​ ಜತೆ ಸುದೀಪ್​ ಅವರು ಸಿನಿಮಾ ಮಾಡಲಿರುವುದು ವಿಶೇಷ. ಟೀಸರ್ ಶೂಟಿಂಗ್‌ಗಾಗಿ ಸುದೀಪ್ ಸೆಟ್‌ಗೆ ಬಂದಿರುವ ವಿಡಿಯೊ ಚಿತ್ರತಂಡ ಶೇರ್‌ ಮಾಡಿಕೊಂಡಿತ್ತು.

ವೀರಕಪುತ್ರ ಶ್ರೀನಿವಾಸ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ʻʻಸುದೀಪ್ ಹೋಮ್​ ಥಿಯೇಟರ್​ ಬಾಗಿಲ ಫೋಟೊ ಅವರು ಶೇರ್ ಮಾಡಿಕೊಂಡಿದ್ದಾರೆ. ‘ನಿನ್ನೆ ರಾತ್ರಿ ಚಿಕ್ಕೆಜಮಾನರನ್ನು ಭೇಟಿ ಆದೆ. ಮನೆಯಲ್ಲಿ ಕಿಚ್ಚ 16 ಸಿನಿಮಾಗಾಗಿ ಹತ್ತಾರು ಜನ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದನ್ನು ನೋಡಿದೆ. ಆ ದೃಶ್ಯ ಕಂಡ ಮೇಲೆ ಮುಂದಿನವಾರ ಘೋಷಣೆ ಆಗುತ್ತಿರುವ ಆ ಸಿನೆಮಾ ಬಗ್ಗೆ ನಿರೀಕ್ಷೆಗಳು ನೂರ್ಮಡಿಯಾದವು. ಅಂದ ಹಾಗೆ ಇದು ಅವರ ಹೋಮ್ ಥೀಯೇಟರ್​​ನ ಬಾಗಿಲು, ಹೇಗಿದೆ ಸಿಂಹದ್ವಾರ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kichcha Sudeepa: ಜೂನ್ 7ರಂದು ಕಿಚ್ಚ 46 ಸಿನಿಮಾದ ಟೀಸರ್‌ ರಿಲೀಸ್‌? ಹೊಸ ಅಪ್‌ಡೇಟ್‌ ಇಲ್ಲಿದೆ!

ವೀರಕಪುತ್ರ ಶ್ರೀನಿವಾಸ್ ಟ್ವೀಟ್‌

ಕಿಚ್ಚ 46 ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರವನ್ನು ನಿಭಾಯಿಸಲಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಥ್ರಿಲ್ಲರ್ ಸಿನಿಮಾ ಎಂದು ಸಾಕಷ್ಟು ಊಹಾಪೋಹಗಳಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಸುದ್ದಿ ಚಿತ್ರತಂಡ ಹೇಳಿಕೊಂಡಿಲ್ಲ. ಸುದೀಪ್‌ ಈ ಚಿತ್ರಕ್ಕಾಗಿ ಎರಡು ತಿಂಗಳು ಮೀಸಲಿಟ್ಟಿದ್ದಾರೆ. ಇತ್ತೀಚಿನ ಸುದ್ದಿ ಏನೆಂದರೆ ಗದರ್ -2 ನಟಿ ಸಿಮ್ರತ್ ಕೌರ್ ( Simrat Kaur) ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಜತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kichcha Sudeepa: ಕಿಚ್ಚ ಸುದೀಪ್ ಜತೆ ತೆರೆ ಹಂಚಿಕೊಳ್ಳಲಿದ್ದಾರಾ ಗದರ್ -2 ನಟಿ?

ಈಗಾಗಲೇ ಕಿಚ್ಚನ ಕೈಯಲ್ಲಿ ಮೂರು ಸಿನಿಮಾಗಳಿವೆ. ವರದಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ ಎನ್ನಲಾಗಿದೆ. ಭಾರಿ ಬಜೆಟ್ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ.

Exit mobile version