Site icon Vistara News

Kichcha Sudeepa: ನನ್ನ‌ ಮತ್ತು ಸುದೀಪ್‌ ಮಧ್ಯೆ ತಂದಿಡಬೇಡಿ ಎಂದು ಮಧ್ಯಸ್ಥಿಕೆಗೆ ಮುಂದಾದ ರವಿಚಂದ್ರನ್‌!

Ravichandran

ಬೆಂಗಳೂರು: ನಿರ್ಮಾಪಕ ಎಮ್‌ ಎನ್‌​ ಕುಮಾರ್ (MN Kumar) ಹಾಗೂ ಕಿಚ್ಚ ಸುದೀಪ್ ಮಧ್ಯೆ ಮನಸ್ತಾಪ ತಾರಕಕ್ಕೆ ಏರುತ್ತಲೇ ಇದೆ. ಸುದೀಪ್ ಚಿತ್ರಗಳನ್ನು ಕುಮಾರ್ ನಿರ್ಮಾಣ ಮಾಡಿದ್ದರು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆದರೆ, ಈಗ ಈ ಗೆಳೆತನ ಹಾಳಾಗಿದೆ. ಕುಮಾರ್ ಫಿಲ್ಮ್ ಚೇಂಬರ್ ಮೊರೆ ಹೋದರೆ, ಸುದೀಪ್ (Kichcha Sudeepa) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ-ಸುದೀಪ್ ಮಧ್ಯೆ ತಂದಿಡಬೇಡಿ ಎಂದು ರವಿಚಂದ್ರನ್ ಕೋರಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಮುಂದೆ ರವಿಚಂದ್ರನ್‌ ಮಾತನಾಡಿ ʻʻಕುಮಾರ್ ನನಗೆ ಎಲ್ಲವನ್ನೂ ಹೇಳಿದ್ದಾರೆ. ಪರಿಸ್ಥಿತಿ ತಣ್ಣಗಾಗಬೇಕು. ಸುದೀಪ್ ಹತ್ತಿರ ನಾನು ಮಾತನಾಡಬೇಕು. ಅವರಿಬ್ಬರ ಕಥೆಗಳನ್ನು ಕೇಳುತ್ತೇನೆ. ನನ್ನ ನಿರ್ಧಾರಕ್ಕೆ ಇಬ್ಬರೂ ಬದ್ಧರಾಗಬೇಕು. ಸುದೀಪ್ ಆದಷ್ಟು ಬೇಗ ಸಿಗುತ್ತಾರೆ. ಚಿತ್ರರಂಗದಲ್ಲಿ ನಾವು ಸರಿಯಾಗಬೇಕು. ಒಕ್ಕೂಟದಲ್ಲಿ ಒಗ್ಗಟ್ಟಿರಬೇಕು. ಬಗೆಹರಿಸಲು ನಾನು ಪ್ರಯತ್ನಿಸುತ್ತೇನೆ. ಸುದೀಪ್ ನನಗೆ ʼಮಾಣಿಕ್ಯʼ ಚಿತ್ರದಿಂದ ತುಂಬಾ ಕ್ಲೋಸ್ ಆದರು. ಕುಮಾರ್ ಮುಂಚೆಯಿಂದ ಗೊತ್ತು. ದಾಖಲೆಗಳನ್ನ ನಾನು ಮೊದಲು ನೋಡುತ್ತೇನೆ. ಆಮೇಲೆ ಸುದೀಪ್ ಹತ್ತಿರ ಮಾತನಾಡುತ್ತೇನೆʼʼ ಎಂದರು.

ಇದನ್ನೂ ಓದಿ: Kichcha Sudeepa: ಕಿಚ್ಚನ ಅಕ್ಕನ ಮಗ ಸಂಚಿತ್ ಸಂಜೀವ್ ಸಿನಿಮಾದ ಕ್ಯಾರೆಕ್ಟರ್ ಗ್ಲಿಂಪ್ಸ್ ಔಟ್‌!


ಕುಮಾರ್ ಅವರು ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸುತ್ತಿದ್ದರು. ರವಿಚಂದ್ರನ್ ಭೇಟಿ ಬಳಿಕ ಈ ಧರಣಿ ಹಿಂಪಡೆದಿದ್ದಾರೆ. ‘ನಾನು ಬಹಿರಂಗವಾಗಿ ದಾಖಲೆಗಳನ್ನು ಕೊಡುವುದಿಲ್ಲ. ಹಿರಿಯರ ಮಾತಿಗೆ ಬೆಲೆ ಕೊಡಬೇಕು. ಹೀಗಾಗಿ ಧರಣಿ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.

Exit mobile version