South Cinema
Kichcha Sudeepa: ಟ್ವೀಟ್ ಮಾಡಿ ಬ್ರೇಕಿಂಗ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್!
Kichcha Sudeepa: ಕಿಚ್ಚ ‘ಕೆ46’ (ಕಿಚ್ಚ 46) ಸಿನಿಮಾ ಬರುವುದರ ಬಗ್ಗೆ ಗುಡ್ ನ್ಯೂಸ್ ಹಂಚಿಕೊಂಡಿದ್ದರು. ಈಗ ಇದೇ ಚಿತ್ರದ ಬಗ್ಗೆ ಇನ್ನೊಂದು ಸಿಹಿಸುದ್ದಿ ನೀಡಿದ್ದಾರೆ.
ಬೆಂಗಳೂರು: ಕಿಚ್ಚ ಸುದೀಪ್ (Kichcha Sudeepa) ಅವರ ಮುಂದಿನ ಚಿತ್ರ, ʻಕಿಚ್ಚ 46ʼ ಸಿನಿಮಾವನ್ನು ತಮಿಳು ನಿರ್ಮಾಪಕ ಕಲೈಪುಲಿ ಎಸ್ ಧಾನು ಇತ್ತೀಚೆಗೆ ಘೋಷಿಸಿದ್ದರು. ಇದೀಗ ಕಿಚ್ಚ ಮತ್ತೆ ತಮ್ಮ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ. ಜೂನ್ 25ರಂದು ಕಿಚ್ಚ ಅವರ ಸೋದರಳಿಯ ಸಂಚಿತ್ ಸಂಜೀವ್ ಸಿನಿಮಾದ ಅನೌನ್ಸ್ಮೆಂಟ್ ಟೀಸರ್ ಹಾಗೂ 27ರಂದು ತಮ್ಮ 46ನೇ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಜೂನ್ 23 ರಾತ್ರಿ ತಮ್ಮ ಹೊಸ ಸಿನಿಮಾದ ಅಪ್ಡೇಟ್ ಬಗ್ಗೆ ಟ್ವೀಟ್ ಮಾಡಿ, ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ‘ನನ್ನ ಮುಂದಿನ 46ನೇ ಸಿನಿಮಾದ ಟೀಸರ್ (Teaser) ತಯಾರಾಗಿದೆ. ಆದರೆ ಜೂನ್ 25ರಂದು ಸಂಚಿತ್ ಸಂಜೀವ್ ನಟನೆಯ ಚೊಚ್ಚಲ ಸಿನಿಮಾದ ಅನೌನ್ಸ್ಮೆಂಟ್ ಟೀಸರ್ ರಿಲೀಸ್ ಆಗಲಿದೆ. ನಾವೆಲ್ಲರೂ ಅದಕ್ಕಾಗಿ ಕಾಯುತ್ತಿದ್ದೇವೆ. ನನ್ನ ಮುಂದಿನ ಸಿನಿಮಾದ ಟೀಮ್ ತುಂಬ ಕಠಿಣ ಶ್ರಮ ಹಾಕಿ ಕೆಲಸ ಮಾಡುತ್ತಿದೆ. K46 ಟೀಸರ್ ಜೂನ್ 27ರಂದು ನಿಮ್ಮ ಮುಂದೆ ತರಲು ಎಲ್ಲರೂ ಉತ್ಸುಕರಾಗಿದ್ದಾರೆ’ ಎಂದು ‘ಕಿಚ್ಚ’ ಸುದೀಪ್ ಹೇಳಿದ್ದಾರೆ.
ಕಿಚ್ಚ ಸುದೀಪ್ ಟ್ವೀಟ್
The teaser(a small sleek peek) of #K46 is all set. Waiting for @sanchithsanjeev 's announcement teaser to be out on 25th June.
— Kichcha Sudeepa (@KicchaSudeep) June 23, 2023
The team of #K46 has worked very hard and are all excited to bring it to you asap. Date announcement on 27th June.@theVcreations@kp_sreekanth…
ಸಂಚಿತ್ ಸಿನಿಮಾದ ಅನೌನ್ಸ್ಮೆಂಟ್ ಟೀಸರ್
ಸ್ಯಾಂಡಲ್ವುಡ್ಗೆ ಕಿಚ್ಚ ಸುದೀಪ್ (Kichcha Sudeepa) ಅಳಿಯ ಸಂಚಿತ್ ಸಂಜೀವ್ ಕಾಲಿಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್ ಅಕ್ಕ ಸುಜಾತಾ ಪುತ್ರ ಸಂಚಿತ್ ಸಂಜೀವ್ ಚಂದನವನಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿತ್ತು. ಮುಂಚೆಯೇ ಕಿಚ್ಚನ ʼಅಂಬಿ ನಿಂಗೆ ವಯಸ್ಸಾಯ್ತೋʼ, ʼವಿಕ್ರಾಂತ್ ರೋಣʼ ಸಿನಿಮಾಗಳಲ್ಲಿ ಸಂಚಿತ್ ಕೆಲಸ ಮಾಡಿದ್ದರು. ಕಿಚ್ಚ ಅವರ ಅಳಿಯನ ಹೊಸ ಸಿನಿಮಾಗೆ ʻಜಿಮ್ಮಿʼ ಎಂದು ಹೆಸರಿಡಲಾಗಿದೆ. ಜೂನ್ 15ರಂದು ʻಜಿಮ್ಮಿʼ ಸಿನಿಮಾದ ಮುಹೂರ್ತ ನೆರವೇರಿತ್ತು. ಆದರೆ ಚಿತ್ರತಂಡದ ಬಗ್ಗೆ ಹೆಚ್ಚೇನೂ ಮಾಹಿತಿ ನೀಡಿರಲಿಲ್ಲ ಸಂಚಿತ್. ಇದೀಗ ಜೂನ್ 25ರಂದು ನಡೆಯಲಿರುವ ಅನೌನ್ಸ್ಮೆಂಟ್ ಟೀಸರ್ ಲಾಂಚ್ನಲ್ಲಿ ಹೆಚ್ಚಿನ ಮಾಹಿತಿ ಸಿಗುವ ನಿರೀಕ್ಷೆ ಇದೆ. ಸಂಚಿತ್ ಸಂಜೀವ್ ಅವರು ತಮ್ಮ ಮೊದಲ ಸಿನಿಮಾವನ್ನು ತಾವೇ ನಿರ್ದೇಶನ ಮಾಡಲಿದ್ದಾರೆ. ವೀನಸ್ ಎಂಟರ್ಟೇನ್ಮೆಂಟ್ನ ಕೆ ಪಿ ಶ್ರೀಕಾಂತ್, ಲಹರಿ ಫಿಲ್ಮ್ಸ್ನ ಮನೋಹರ್ ನಾಯ್ಡು ಮತ್ತು ಪ್ರಿಯಾ ಸುದೀಪ್ ಹಣ ಹಾಕುತ್ತಿದ್ದಾರೆ.
ಇದನ್ನೂ ಓದಿ: Kichcha Sudeepa: ಕಿಚ್ಚ ಸುದೀಪ್ ಅಳಿಯ ʻಸಂಚಿತ್ ಸಂಜೀವ್ʼ ಹೊಸ ಸಿನಿಮಾದ ಮುಹೂರ್ತ ನಾಳೆ; ನಾಯಕನಿಗಿದೆ ಡಬಲ್ ಜವಾಬ್ದಾರಿ!
ಕಿಚ್ಚ ಸುದೀಪ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ ಸಿಮ್ರತ್ ಕೌರ್
ಇತ್ತೀಚಿನ ಸುದ್ದಿ ಏನೆಂದರೆ ಗದರ್ -2 ನಟಿ ಸಿಮ್ರತ್ ಕೌರ್ ( Simrat Kaur) ಕಿಚ್ಚ 46 ಸಿನಿಮಾದಲ್ಲಿ ಕಿಚ್ಚ ಸುದೀಪ್ ಜತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಿಚ್ಚ 46 ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರವನ್ನು ನಿಭಾಯಿಸಲಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಥ್ರಿಲ್ಲರ್ ಸಿನಿಮಾ ಎಂದು ಸಾಕಷ್ಟು ಊಹಾಪೋಹಗಳಿವೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಸುದ್ದಿ ಚಿತ್ರತಂಡ ಹೇಳಿಕೊಂಡಿಲ್ಲ.
Best wishes Always !
— Kichcha Sudeepa (@KicchaSudeep) June 21, 2023
Kichcha Jr @sanchithsanjeev in #ProductionNo3😍
✨"Character Glimpse" ✨On June 25th @ 6:00 PM 🤩@laharifilms #GManoharan @Kp_sreekanth @iampriya06 @SupriyanviPicS @kaanistudio @shivakumarart @vasukivaibhav pic.twitter.com/u7K6Iu4NiD
ಇದನ್ನೂ ಓದಿ: Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
ಈಗಾಗಲೇ ಕಿಚ್ಚನ ಕೈಯಲ್ಲಿ ಮೂರು ಸಿನಿಮಾಗಳಿವೆ. ವರದಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ ಎನ್ನಲಾಗಿದೆ. ಭಾರಿ ಬಜೆಟ್ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ.
South Cinema
Oscars 2024: ‘ಆಸ್ಕರ್’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!
Oscars 2024: ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿತ್ತು.
ಬೆಂಗಳೂರು: ಟೊವಿನೋ ಥಾಮಸ್ ನಟಿಸಿರುವ 2018 ಮಲಯಾಳಂ ಸಿನಿಮಾ (Malayalam Film 2018) 2024ರ 96ನೇ ಆಸ್ಕರ್ ಅವಾರ್ಡ್ಸ್ಗೆ (Oscars 2024:) ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ. ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ ತೀರ್ಪುಗಾರರು ಸೆ.27ರಂದು ಅನೌನ್ಸ್ ಮಾಡಿದ್ದಾರೆ. ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದವು.
96ನೇ ಆಸ್ಕರ್ ಅವಾರ್ಡ್ ಎಬಿಸಿಯಲ್ಲಿ 2024ರ ಮಾರ್ಚ್ 10ರ ಭಾನುವಾರ ಓವೇಶನ್ ಹಾಲಿವುಡ್ನಲ್ಲಿರುವ ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಿಂದ ವಿಶ್ವಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರಸಾರವಾಗಲಿದೆ ಎಂದು ವರದಿಯಾಗಿದೆ.
ಇದರಲ್ಲಿ “ಬಾಲಗಮ್”, “ದಿ ಕೇರಳ ಸ್ಟೋರಿ”, “ಜ್ವಿಗಾಟೊ” “ರಾಖಿ ಔರ್ ರಾಣಿ ಕಿ ಪ್ರೇಮ್ ಕಹಾನಿ”ಅನಂತ್ ಮಹದೇವನ್ ಅವರ ಸ್ಟೋರಿ ಟೇಲರ್ (ಹಿಂದಿ), ಮ್ಯೂಸಿಕ್ ಸ್ಕೂಲ್ (ಹಿಂದಿ), ಮಿಸಸ್ ಚಟರ್ಜಿ ವರ್ಸಸ್ ನಾರ್ವೆ (ಹಿಂದಿ), 12th ಫೇಲ್ (ಹಿಂದಿ) ವಿದುತಲೈ ಭಾಗ 1 (ತಮಿಳು), ಘೂಮರ್ (ಹಿಂದಿ), ಮತ್ತು ದಸರಾ (ತೆಲುಗು) ಸಿನಿಮಾಗಳು ಆಸ್ಕರ್ನ ಅಧಿಕೃತ ಪ್ರವೇಶ ಪಡೆಯವ ಸ್ಥಾನದಲ್ಲಿದ್ದವು. ಅಂತಿಮವಾಗಿ ಜೂಡ್ ಆಂಥೊನಿ ಜೋಸೆಫ್ ನಿರ್ದೇಶನದ ಈ ಸಿನಿಮಾ ಆಸ್ಕರ್ ಸ್ಪರ್ಧೆಗೆ ಅಧಿಕೃತವಾಗಿ ಆಯ್ಕೆಯಾಗಿದೆ.
ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್ʼ ರೇಸ್ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?
Tovino Thomas' 2018 movie is India's official entry for #Oscars2024 pic.twitter.com/e2bFwOrg1d
— Veerni Srinivasa Rao (@veernisrinivas) September 27, 2023
ಜೂಡ್ ಆಂಥೊನಿ ಜೋಸೆಫ್ ನಿರ್ದೇಶನದ ನೈಜ ಘಟನೆ ಆಧಾರಿತ ಮಲಯಾಳಂ `2018′ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಕೇರಳ ಚಲನಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್ ಸಿನಿಮಾ ಆಗಿ ಹೊರಹೊಮ್ಮಿತ್ತು.
ಟೊವಿನೋ ಥಾಮಸ್ ಜತೆ ಆಸಿಫ್ ಅಲಿ, ಅಪರ್ಣಾ ಬಾಲಮುರಳಿ, ವಿನೀತ್ ಶ್ರೀನಿವಾಸನ್, ಕಲೈಯರಸನ್, ಸುದೇಶ್, ಅಜು ವರ್ಗೀಸ್, ತನ್ವಿ ರಾಮ್, ಗೌತಮಿ ನಾಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
2018 ಸಿನಿಮಾ ಕಥೆ ಏನು?
‘2018’ ಸಿನಿಮಾ 2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ಮಾಡಿದ ಸಿನಿಮಾ ಇದಾಗಿದೆ. ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳು ಇವೆ. ಅತೀ ಕಷ್ಟದ ಸಮಯದಲ್ಲೂ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೊ’ ಎಂಬ ಟ್ಯಾಗ್ಲೈನ್ ಗಮನ ಸೆಳೆದಿತ್ತು. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾಗಿದ್ದ ಅತಿ ಭೀಕರ ಪ್ರವಾಹ ಅದಾಗಿತ್ತು.
South Cinema
Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್ಡೇ; ಕ್ಯೂಟ್ ಫೋಟೊಸ್ ಔಟ್!
Actress Nayanthara: ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದು ಒಂದು ವರ್ಷವಾಗಿದೆ.
ಇದನ್ನೂ ಓದಿ: Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್!
ನಯನತಾರಾ ಸದ್ಯ ‘ಜವಾನ್’ ಚಿತ್ರದ ಯಶಸ್ಸಿನಲ್ಲಿದ್ದಾರೆ. ನಟಿಯ ಕೈಯಲ್ಲಿ ಹಲವು ಸಿನಿಮಾಗಳು ಇವೆ.
South Cinema
Nithya Menen: ʻಮೈನಾʼ ನಟಿ ನಿತ್ಯಾ ಮೆನನ್ಗೆ ತಮಿಳು ಹೀರೊನಿಂದ ಕಿರುಕುಳ; ಸ್ಪಷನೆ ಕೊಟ್ಟ ನಟಿ!
Nithya Menen: ಸಿನಿಮಾಗಳಿಗಿಂತ ನಟಿ ವೈಯಕ್ತಿಕ ವಿಚಾರಗಳಿಗೆ ಆಗಾಗ ಮುನ್ನಲ್ಲೆಗೆ ಬರುತ್ತಲೇ ಇರುತ್ತಾರೆ ನಿತ್ಯಾ ಮೆನನ್. ಅವರು ಧನುಷ್ ನಟನೆಯ 50ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು: ‘ಮೈನಾ’ (Mynaa) ನಾಯಕಿ ನಿತ್ಯಾ ಮೆನನ್ (Nithya Menen) ಹಲವು ದಿನಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ. ಸಿನಿಮಾಗಳಿಗಿಂತ ನಟಿ ವೈಯಕ್ತಿಕ ವಿಚಾರಗಳಿಗೆ ಆಗಾಗ ಮುನ್ನಲ್ಲೆಗೆ ಬರುತ್ತಲೇ ಇರುತ್ತಾರೆ. ʻʻತಮಿಳು ಚಲನಚಿತ್ರ ನಟರೊಬ್ಬರು ಚಿತ್ರೀಕರಣದ ವೇಳೆ ನನಗೆ ಕಿರುಕುಳ ನೀಡಿದ್ದಾರೆʼ ಎಂದು ನಟಿ ಹೇಳಿರುವುದಾಗಿ ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಇದೆಲ್ಲ ಸುಳ್ಳು ಸುದ್ದಿ ಎಂದು ನಟಿ ಇದೀಗ ಸ್ಪಷ್ಟನೆ ಕೊಟ್ಟಿದ್ದಾರೆ.
ʻʻತೆಲುಗು ಚಿತ್ರರಂಗದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಿಲ್ಲ, ಆದರೆ ತಮಿಳು ಚಿತ್ರರಂಗದಲ್ಲಿ ನಾನು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದೇನೆ. ತಮಿಳು ಚಲನಚಿತ್ರ ನಟರೊಬ್ಬರು ಚಿತ್ರೀಕರಣದ ವೇಳೆ ನನಗೆ ಕಿರುಕುಳ ನೀಡಿದ್ದಾರೆʼʼಎಂದು ನಿತ್ಯಾ ಮೆನನ್ ಹೇಳಿದ್ದರು ಎಂಬ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಲ್ಲಿತ್ತು.
ಇದೀಗ ನಟಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ವದಂತಿಗಳು ಸಂಪೂರ್ಣವಾಗಿ ಸುಳ್ಳು, ನಾನು ಯಾವುದೇ ಸಂದರ್ಶನವನ್ನು ನೀಡಿಲ್ಲ. ಈ ರೀತಿ ಹೇಳಿಕೆ ಎಲ್ಲಿಯೂ ಹೇಳಿಕೊಂಡಿಲ್ಲ. ಕೇವಲ ಕ್ಲಿಕ್ಗಳನ್ನು ಪಡೆಯಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ಪತ್ತೆ ಹೆಚ್ಚಬೇಕಿದೆ. ಯಾರೂ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿಲ್ಲ ʼʼಎಂದು ನಟಿ ಹೇಳಿದ್ದಾರೆ. ಇಂತಹ ವದಂತಿಗಳ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ನಿತ್ಯಾ ಅವರ ಈ ಸ್ಪಷ್ಟೀಕರಣ ಎಲ್ಲಾ ಉಹಾಪೋಹಗಳಿಗೆ ಅಂತ್ಯ ಹಾಡಿವೆ.
ಇದನ್ನೂ ಓದಿ: Nithya Menen: ನಿತ್ಯಾ ಮೆನನ್ ಅಜ್ಜಿ ನಿಧನ; ಭಾವುಕ ಪೋಸ್ಟ್ ಹಂಚಿಕೊಂಡ ನಟಿ!
ಟ್ವಟರ್ನಲ್ಲಿ ನಿತ್ಯಾ ಮೆನನ್ ಸಖತ್ ಟ್ರೆಂಡ್!
The news circulating about Nithya Menen is basesless and doesn't contain any truth to it.
— Manobala Vijayabalan (@ManobalaV) September 26, 2023
||#NithyaMenen|| pic.twitter.com/9U1a1qg0iw
So it's fake…!! #NithyaMenen herself clarified that she never made any statements against her Tamil co-stars… pic.twitter.com/dqIJZjHrdv
— AB George (@AbGeorge_) September 26, 2023
It's very sad that certain sections of journalism have come down to this. I urge you – Be Better than this! 😊#stopfakenews @letscinema pic.twitter.com/zevdEPqTlL
— Nithya Menen (@MenenNithya) September 26, 2023
We are all here for such a short period of time . It always surprises me how much wrong we do to each other 🙂
— Nithya Menen (@MenenNithya) September 26, 2023
I point this out today because only accountability stops bad behaviour
Be better humans @ursBuzzBasket@letscinema and all the others who have followed this bandwagon pic.twitter.com/qMfHM5dDgB
ಈ ಬಗ್ಗೆ ನಟಿ ಬೇಸರ ಕೂಡ ವ್ಯಕ್ತಪಡಿಸಿದ್ದಾರೆ. ʻʻಸುದ್ದಿಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ಪತ್ತೆ ಹೆಚ್ಚಬೇಕಿದೆ’ ಎಂದು ನಿತ್ಯಾ ಮೆನನ್ ಬರೆದುಕೊಂಡಿದ್ದಾರೆ. ‘ಇಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ. ಉತ್ತಮರಾಗಿ’ ಎಂದು ಅವರು ಮನವಿ ಮಾಡಿದ್ದಾರೆ.
ನಿತ್ಯಾ ಮೆನನ್ ಅವರು ಧನುಷ್ ನಟನೆಯ 50ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಧನುಷ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಾಣದ ಡಿ50 ಸಿನಿಮಾ ದೊಡ್ಡ ಬಜೆಟ್ ಚಿತ್ರವಾಗಿದೆ.ಹಾಗೇ ಅವರೇ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಎಆರ್ ರೆಹಮಾನ್ ಅವರ ಸಂಗೀತವಿದೆ ಎಂತಲೂ ವರದಿಯಾಗಿದೆ. ಎಸ್ಜೆ ಸೂರ್ಯ, ಸಂದೀಪ್ ಕಿಶನ್ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
South Cinema
Rekha Vedavyas: ನನ್ನನ್ನು ಚೆನ್ನಾಗಿ ನಗಿಸಿ, ಬೇಗ ಚೇತರಿಸಿಕೊಳ್ತೀನಿ ಎಂದ ನಟಿ ರೇಖಾ
Rekha Vedavyas: ನಟಿ ರೇಖಾ ಅವರ ಈಗಿನ ಸ್ಥಿತಿ ಕಂಡು ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ರೇಖಾ ಈಗ ಗುರುತು ಸಿಗದ್ದಷ್ಟು ಬದಲಾಗಿದ್ದಾರೆ. ಅವರು ತಮ್ಮ ಆರೋಗ್ಯದ ಕುರಿತು ಮಾತನಾಡಿದ್ದಾರೆ.
ಬೆಂಗಳೂರು: `ಹುಚ್ಚ’ ‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಲವು ಸಿನಿಮಾಗಳಲ್ಲಿ ರೇಖಾ ವೇದವ್ಯಾಸ್ (Rekha Vedavyas) ನಟಿಸಿ ಸ್ಯಾಂಡಲ್ವುಡ್ನಲ್ಲಿ ಸೈ ಎನಿಸಿಕೊಂಡವರು. ಹಲವು ವರ್ಷಗಳಾದ ಮೇಲೆ ನಟಿ ರಿಯಾಲಿಟಿ ಶೋ ಒಂದರಲ್ಲಿ ಕಾಣಿಸಿಕೊಂಡಿದ್ದರು. ನಟಿಯ ಈಗಿನ ಸ್ಥಿತಿ ಕಂಡು ಅವರ ಫ್ಯಾನ್ಸ್ ಬಹಳ ಆತಂಕ ವ್ಯಕ್ತಪಡಿಸಿದ್ದರು. ಬಹಳ ಸಣ್ಣಗಾಗಿರುವ ರೇಖಾ ಗುರುತು ಸಿಗದ್ದಷ್ಟು ಬದಲಾಗಿದ್ದಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಆರೋಗ್ಯದ ಕುರಿತು ನಟಿ ರಿವೀಲ್ ಮಾಡಿದ್ದಾರೆ.
ಕಳೆದ 9 ವರ್ಷಗಳಿಂದ ರೇಖಾ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ನಟಿ ಇದ್ದಕ್ಕಿಂದ್ದಂತೆ ತೆಲುಗು ಕಿರುತೆರೆ ‘ಶ್ರೀದೇವಿ ಡ್ರಾಮಾ ಕಂಪನಿ’ ಶೋಗೆ ಅತಿಥಿಯಾಗಿ ಬಂದಿದ್ದರು. ನಟಿಯನ್ನು ನೋಡಿದ ಕೆಲವರು ಅಚ್ಚರಿಗೊಂಡಿದ್ದರು. ಬಹಳ ಸಣ್ಣಗಾಗಿರುವ ರೇಖಾ ಗುರುತು ಸಿಗದ್ದಷ್ಟು ಬದಲಾಗಿದ್ದರು ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಆರೋಗ್ಯದ ಕುರಿತು ಮಾತನಾಡಿ ʻʻನಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಇದೆಲ್ಲ ಸಡನ್ ಆಗಿ ಆಯಿತು. ಸಾಕಷ್ಟು ಜನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅದು ಸಣ್ಣ ತಲೆನೋವು ಇರಬಹುದು, ಅಥವಾ ದೊಡ್ಡ ಸಮಸ್ಯೆಯೇ ಆಗಿರಬಹುದು. ಯಾವುದಕ್ಕೂ ಹೆಚ್ಚು ಒತ್ತಡ ತೆಗೆದುಕೊಳ್ಳಬಾರದು. ಒತ್ತಡದಿಂದ ಆರೋಗ್ಯ ಇನ್ನಷ್ಟು ಹದೆಗೆಡುತ್ತದೆ. ಎಲ್ಲಕ್ಕಿಂತ ದೇವರಲ್ಲಿ ಹೆಚ್ಚಿನ ನಂಬಿಕೆ ಇಡಬೇಕು. ಯಾವುದೇ ದೇವರು ಆಗಿರಲಿ. ನಿಮ್ಮ ಮೆಡಿಸಿನ್ ಕೆಲಸ ಮಾಡಿದ್ದಿದ್ದರೂ ನಿಮ್ಮ ನಂಬಿಕೆ ಕೆಲಸ ಮಾಡುತ್ತದೆ. ನನ್ನನ್ನು ಚೆನ್ನಾಗಿ ನಗಿಸಿ, ನಾನು ಬೇಗ ಚೇತರಿಸಿಕೊಳ್ತೀನಿ” ಎಂದು ರೇಖಾ ಹೇಳಿದ್ದಾರೆ.
ಇದನ್ನೂ ಓದಿ: Rekha Vedavyas: ಗುರುತೇ ಸಿಗದಷ್ಟು ಬದಲಾದ ʻಹುಚ್ಚʼ ಸಿನಿಮಾ ನಾಯಕಿ ರೇಖಾ; ನಟಿಗೆ ಏನಾಯ್ತು?
ರೇಖಾ ಅವರ ಮಾತುಗಳನ್ನು ಕೇಳಿ ಅವರ ಫ್ಯಾನ್ಸ್ ʻʻಬೇಗ ಚೇತರಿಸಿಕೊಳ್ಳಿʼʼ ಎಂದು ಪ್ರಾರ್ಥಿಸುತ್ತಿದ್ದಾರೆ. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದಲ್ಲಿ ಮಿಂಚಿದರು. ಆ ಬಳಿಕ ಮತ್ತೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಈ ಬೆಂಗಳೂರು ಬೆಡಗಿ ನಟಿಸಿದರು. ಮಾಡೆಲಿಂಗ್ ಕ್ಷೇತ್ರದಿಂದ ಚಿತ್ರರಂಗಕ್ಕೆ ಬಂದ ರೇಖಾ ವೇದವ್ಯಾಸ್ ಮತ್ತೆ ಹಿಂತಿರುಗಿ ನೋಡಲಿಲ್ಲ. ಹುಚ್ಚ ಸಿನಿಮಾದಲ್ಲಿ ಸುದೀಪ್ಗೆ ನಾಯಕಿಯಾಗಿ ನಟಿಸಿರುವ ರೇಖಾ, ಇಂದಿಗೂ ಫೇಮಸ್ಸು. 2014ರಲ್ಲಿ ಕೊನೆಯದಾಗಿ ‘ತುಳಸಿ’ ಕನ್ನಡ ಚಿತ್ರದಲ್ಲಿ ರೇಖಾ ಕಾಣಿಸಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ತೂಕ ಹೆಚ್ಚಿಸಿಕೊಂಡು ದಪ್ಪ ಆಗಿದ್ದ ರೇಖಾ ಮತ್ತೆ ತೂಕ ಇಳಿಸಿ ಸಿನಿಮಾಗಳಲ್ಲಿ ನಟಿಸಿದ್ದರು.
ಮೂರು ವರ್ಷಗಳ ಹಿಂದೆಯಷ್ಟೆ ತೆಲುಗು ಸಂದರ್ಶನವೊಂದರಲ್ಲಿ ಭಾಗಿ ಆಗಿ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುವ ಬಗ್ಗೆ ವ್ಯಕ್ತಪಡಿಸಿದ್ದರು. ‘ಪರಿಚಯ’, ‘ಬಾಸ್’, ‘ಬೆಂಕಿ ಬಿರುಗಾಳಿ’, ‘ಲೂಸ್ಗಳು’, ‘ಪರಮಶಿವ’ ಸೇರಿದಂತೆ ರೇಖಾ ನಟಿಸಿದ್ದರು.
-
ದೇಶ15 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ23 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ15 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ16 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್22 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ22 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್19 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್